INDvsBAN | ವಿರಾಟ್ ಕೊಹ್ಲಿ ಅದ್ಭುತ ಕ್ಯಾಚ್‌ಗೆ ಶಹಬ್ಬಾಸ್‌ ಎಂದ ಅಭಿಮಾನಿಗಳು - Vistara News

ಕ್ರಿಕೆಟ್

INDvsBAN | ವಿರಾಟ್ ಕೊಹ್ಲಿ ಅದ್ಭುತ ಕ್ಯಾಚ್‌ಗೆ ಶಹಬ್ಬಾಸ್‌ ಎಂದ ಅಭಿಮಾನಿಗಳು

ಬಾಂಗ್ಲಾದೇಶ ವಿರುದ್ಧ ಸರಣಿಯ ಮೊದಲ ಪಂದ್ಯದಲ್ಲಿ (INDvsBAN) ವಿರಾಟ್‌ ಕೊಹ್ಲಿ ಸ್ಮರಣೀಯ ಕ್ಯಾಚ್‌ ಹಿಡಿದಿದ್ದಾರೆ.

VISTARANEWS.COM


on

INDvsBAN
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೀರ್‌ಪುರ : ಬಾಂಗ್ಲಾದೇಶ ವಿರುದ್ಧದ ಏಕ ದಿನ ಸರಣಿಯ (INDvsBAN) ಮೊದಲ ಪಂದ್ಯದಲ್ಲಿ ಭಾರತ ತಂಡ ೧ ವಿಕೆಟ್‌ ವೀರೋಚಿತ ಸೋಲಿಗೆ ಒಳಗಾಗಿದೆ. ಫೀಲ್ಡಿಂಗ್‌ ವೈಫಲ್ಯದ ಕಾರಣಕ್ಕೆ ಗೆಲುವಿನ ಅವಕಾಶವನ್ನು ಭಾರತ ತಂಡ ಕಳೆದುಕೊಂಡಿತ್ತು. ಇವೆಲ್ಲದರ ನಡುವೆ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಹಿಡಿದ ಅದ್ಭುತ ಕ್ಯಾಚೊಂದು ಕ್ರಿಕೆಟ್‌ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಭಾರತ ನೀಡಿದ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಬಾಂಗ್ಲಾದೇಶ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಅಂತೆಯೇ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌ ೨೯ ಎಸೆತಗಳಿಗೆ ೩೭ ರನ್‌ ಬಾರಿಸಿ ಸುಭದ್ರ ಸ್ಥಿತಿಯಲ್ಲಿ ಇದ್ದರು. ಈ ವೇಳೆ ಶಕಿಬ್ ಅಲ್ ಹಸನ್‌ ವಾಷಿಂಗ್ಟನ್‌ ಸುಂದರ್ ಎಸೆತಕ್ಕೆ ಕವರ್‌ ಕಡೆ ಜೋರಾಗಿ ಹೊಡೆದಿದ್ದಾರೆ. ಈ ವೇಳೆ ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ಬಲಗಡೆಗೆ ಜೋರಾಗಿ ಜಿಗಿದು ಕ್ಯಾಚ್‌ ಹಿಡಿದಿರು. ಈ ಕ್ಯಾಚ್‌ ಮೂಲಕ ಚೇತರಿಸಿಕೊಂಡ ಭಾರತ ತಂಡ ಬಾಂಗ್ಲಾದೇಶದ ವಿಕೆಟ್‌ಗಳನ್ನು ಉರುಳಿಸಿತು. ಆದರೆ, ಕೊನೇ ವಿಕೆಟ್‌ ಉರುಳಿಸಲು ಸಾಧ್ಯವಾಗದೇ ಸೋಲೊಪ್ಪಿಕೊಂಡಿತು.

ಅಚ್ಚರಿಯೆಂದರೆ ಅದಕ್ಕಿಂತ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡದ ಪರ ವಿರಾಟ್‌ ಕೊಹ್ಲಿಯೂ ಅದೇ ಮಾದರಿಯಲ್ಲಿ ಔಟಾದರು. ಅವರನ್ನು ಬಾಂಗ್ಲಾದೇಶದ ನಾಯಕ ಲಿಟನ್‌ ದಾಸ್‌ ಅದ್ಭುತವಾದ ಕ್ಯಾಚ್‌ ಹಿಡಿಯುವ ಮೂಲಕ ಔಟ್‌ ಮಾಡಿದ್ದರು. ಹೀಗಾಗಿ ಕೊಹ್ಲಿ ಕೇವಲ ೯ ರನ್‌ಗಳಿಗೆ ಔಟಾಗಿ ನಿರಾಸೆಯಿಂದ ಪೆವಿಲಿಯನ್‌ಗೆ ಮರಳುವಂತಾಯಿತು.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡದ ಸಂಪೂರ್ಣವಾಗಿ ಬ್ಯಾಟಿಂಗ್ ವೈಫಲ್ಯ ಎದುರಿಸಿತು. ಘಟಾನುಘಟಿ ಬ್ಯಾಟರ್‌ಗಳು ಕಡಿಮೆ ಮೊತ್ತಕ್ಕೆ ಪೆವಿಲಿಯನ್ ಸೇರುವ ಮೂಲಕ ಭಾರತ ತಂಡಕ್ಕೆ ಹಿನ್ನಡೆ ಉಂಟಾಯಿತು. ಇವೆಲ್ಲದರ ನಡುವೆಯೂ ಕೆ. ಎಲ್‌ ರಾಹುಲ್‌ ೭೦ ಎಸೆತಗಳಲ್ಲಿ ೭೩ ರನ್‌ ಬಾರಿಸುವುದರೊಂದಿಗೆ ತಂಡಕ್ಕೆ ಚೈತನ್ಯ ಒದಗಿಸಿದರು. ಆದಾಗ್ಯೂ ಭಾರತ ೧೮೬ ರನ್‌ಗಳಿಗೆ ಸರ್ವಪತನಗೊಳ್ಳಬೇಕಾಯಿತು.

ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಆರಂಭದಲ್ಲಿ ಉತ್ತಮ ರೀತಿಯಲ್ಲಿ ಬ್ಯಾಟ್‌ ಮಾಡುವ ಮೂಲಕ ಸುಲಭ ಗೆಲುವಿನ ಸೂಚನೆ ಕೊಟ್ಟಿತು. ಆದರೆ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಸೇನ್ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಕಡಿವಾಣ ಹಾಕಿದರು. ಹೀಗಾಗಿ ೧೩೬ ರನ್‌ಗಳಿಗೆ ೯ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಈ ವೇಳೆ ಭಾರತ ತಂಡ ಗೆಲ್ಲುವುದು ನಿಶ್ಚಿತ ಎಂಬ ಪರಿಸ್ಥಿತಿ ಸೃಷ್ಟಿಯಾಯಿತು. ಆದರೆ ೯ನೇ ವಿಕೆಟ್‌ಗೆ ಬಾಂಗ್ಲಾದೇಶ ೫೧ ರನ್ ಬಾರಿಸುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು. ಕ್ಯಾಚ್‌ ಹಿಡಿಯುವ ಅವಕಾಶಗಳನ್ನು ಕೈಚೆಲ್ಲುವ ಜತೆಗೆ ಕಳಪೆ ಫೀಲ್ಡಿಂಗ್ ಮಾಡಿದ ಭಾರತ ಸೋಲು ತಂದುಕೊಂಡಿತು.

ಇದನ್ನೂ ಓದಿ | INDvsBAN | ಅರ್ಧ ಶತಕ ಬಾರಿಸಿ ಮಿಂಚಿದರೂ, ಕ್ಯಾಚ್‌ ಬಿಟ್ಟು ಟ್ರೋಲ್‌ ಆದ ಕೆ. ಎಲ್‌ ರಾಹುಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Hardik Pandya : ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ.

VISTARANEWS.COM


on

Hardik Pandya
Koo

ನವದೆಹಲಿ: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಈಗ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಸುದ್ದಿಯಾಗಿರುವುದು ಕ್ರಿಕೆಟ್​ ಕಾರಣಕ್ಕೆ ಅಲ್ಲ. ಬದಲಾಗಿ ಅವರ ವೈವಾಹಿಕ ಜೀವನದ ಕಾರಣಕ್ಕೆ. ಅವರ ಪತ್ನಿ ನತಾಶಾ ಸ್ಟಾಂಕೊವಿಕ್ ಅವರನ್ನು ತೊರೆದು ಹೋಗಿದ್ದಾರೆ ಎಂಬುದಾಗಿ ಸುದ್ದಿಯಾಗಿದೆ. ಹೀಗಾಗಿ ಅವರ ಪರ್ಸನಲ್ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಅವರು ಆರಂಭದಲ್ಲಿಯೂ ಒಂದು ಬಾರಿ ಲವ್​ ಬ್ರೇಕ್ ಅಪ್​ ಮಾಡಿಕೊಂಡಿದ್ದರು ಎಂಬ ಸುದ್ದಿಯೊಂದು ಇದೀಗ ಮತ್ತೆ ತಲೆ ಎತ್ತಿದೆ. ಅವರು ರಾಷ್ಟ್ರೀಯ ತಂಡಕ್ಕೆ ಪ್ರವೇಶಿಸಿದ ಕೆಲವು ವರ್ಷಗಳ ನಂತರ, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸಣ್ಣ ಅವಧಿಯಲ್ಲಿ ಡೇಟಿಂಗ್ ಮಾಡುತ್ತಿದ್ದರು. ಆದಾಗ್ಯೂ, ಪಾಂಡ್ಯ ಅವರ ವಿವಾದಾತ್ಮಕ ಟಿವಿ ಶೋನಲ್ಲಿ (ಕಾಫಿ ವಿತ್ ಕರಣ್​​) ಕಾಣಿಸಿಕೊಂಡ ನಂತರ ಅವರ ಕುತೂಹಲಕಾರಿ ಪ್ರೇಮಕಥೆ ಅಂತ್ಯಗೊಂಡಿತ್ತು.

ಹಾರ್ದಿಕ್ ಪಾಂಡ್ಯ ಕೆಲವು ವರ್ಷಗಳ ಹಿಂದೆ ತಮ್ಮ ವೃತ್ತಿಪರ ಕ್ರಿಕೆಟ್ ಪ್ರಯಾಣ ಪ್ರಾರಂಭಿಸಿದ ಬಳಿಕ ಕೆಟ್ಟ ಕಾರಣಗಳಿಗೋಸ್ಕರವೇ ಆಗಾಗ ಸುದ್ದಿಯಾಗುತ್ತಾರೆ. ಜನರು ಅವರ ವೈಯಕ್ತಿಕ ಜೀವನದ ಬಗ್ಗೆ ತೀವ್ರ ಆಸಕ್ತಿ ಹೊಂದಿದ್ದಾರೆ. ನತಾಶಾ ಅವರನ್ನು ಮದುವೆಯಾಗುವ ಮೊದಲು ಮಗುವಾಗಿದ್ದೆಲ್ಲ ಘಟನೆಗಳು ನಡೆದಿದೆ. ಹಾರ್ದಿಕ್ ಪಾಂಡ್ಯ ಅವರು ಸ್ಟಾಂಕೋವಿಕ್ ಅವರನ್ನು ಮದುವೆಯಾಗುವ ಮೊದಲು, ಬಾಲಿವುಡ್ ನಟಿ ಎಲಿ ಅವ್ರಾಮ್ ಅವರೊಂದಿಗೆ ಸ್ವಲ್ಪ ಸಮಯದವರೆಗೆ ಡೇಟಿಂಗ್ ಮಾಡಿದ್ದರು.

ಹಲವಾರು ಊಹಾಪೋಹಗಳು, ಸುದ್ದಿಗಳ ನಂತರ ಇಬ್ಬರೂ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಪ್ರಾರಂಭಿಸಿದ್ದರು. ಹಾರ್ದಿಕ್ ಅವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಅವರ ಮದುವೆಯ ವೇಳೆ ಎಲಿ ಕಾಣಿಸಿಕೊಂಡಿದ್ದರು. ಅಲ್ಲೆಲ್ಲ ಓಡಾಡಿದ್ದರು.ಅವರ ಬೇಟಿಯ ಉದ್ದಕ್ಕೂ, ಹಾರ್ದಿಕ್ ಅಥವಾ ಎಲಿ ಇಬ್ಬರ ನಡುವೆ ಪ್ರಣಯ ಸಂಬಂಧವಿದೆ ಎಂಬ ವದಂತಿಗಳನ್ನು ದೃಢಪಡಿಸಲಿಲ್ಲ ಅಥವಾ ನಿರಾಕರಿಸಿರಲಿಲ್ಲ.

ಎಲಿ ಅವ್ರಾಮ್ ಜತೆ ಬ್ರೇಕ್​ಅಪ್​​

ಟಿವಿ ಶೋ ‘ಕಾಫಿ ವಿತ್ ಕರಣ್’ ನಲ್ಲಿ ಹಾರ್ದಿಕ್ ಅವರ ವಿವಾದಾತ್ಮಕ ಹೇಳಿಕೆಯೂ ಅವರಿಬ್ಬರ ಬ್ರೇಕ್​ಅಪ್​ಗೆ ಕಾರಣ ಎನ್ನಲಾಗಿದೆ. ಅಲ್ಲಿ ಕ್ರಿಕೆಟಿಗ ಮಹಿಳೆಯರ ಬಗ್ಗೆ ಕೆಲವು ಆಕ್ಷೇಪಾರ್ಹ ಕಾಮೆಂಟ್​ಗಳನ್ನು ಮಾಡಿದ್ದರು. ಈ ಕಾರಣಕ್ಕೆ ಬಿಸಿಸಿಐನಿಂದ ದಂಡನೆಯನ್ನೂ ಎದುರಿಸಿದ್ದರು.

ಇದನ್ನೂ ಓದಿ: Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

ವಿವಾದ ಭುಗಿಲೆದ್ದ ನಂತರ ಎಲಿ ಅವ್ರಾಮ್ ತನ್ನ ಆಘಾತ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದರು. ಹಾರ್ದಿಕ್ ಅವರನ್ನು ವೈಯಕ್ತಿಕವಾಗಿ ಬಲ್ಲೆ ಮತ್ತು ಇತರ ಹೆಣ್ಣಿನ ಬಗ್ಗೆ ಇಷ್ಟು ಅಸಹ್ಯಕರ ರೀತಿಯಲ್ಲಿ ಮಾತನಾಡಿದ ಅವರ ಲಜ್ಜೆಯಿಲ್ಲ. ಅವರಿಗೆ ಟೀಕೆ ಮಾಡಲಾಗುತ್ತಿರುವುದು ಸರಿಯಾದ ಕ್ರಮ ಎಂದಿದ್ದರು.

ಎಲಿ ಜತೆ ಬ್ರೇಕಪ್ ಆದ ನಂತರ ಹಾರ್ದಿಕ್ ಪಾಂಡ್ಯ ಮತ್ತೊಬ್ಬ ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ಮತ್ತೆ ಪ್ರೀತಿಯನ್ನು ಕಂಡುಕೊಂಡರು. ಇವರಿಬ್ಬರು 2020 ರಲ್ಲಿ ವಿವಾಹವಾದರು ಮತ್ತು ಕೆಲವು ತಿಂಗಳ ನಂತರ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದ್ದರು.

Continue Reading

ಪ್ರಮುಖ ಸುದ್ದಿ

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Shikhar Dhawan

VISTARANEWS.COM


on

Shikhar Dhawan
Koo

ಬೆಂಗಳೂರು: ಎಡಗೈ ಬ್ಯಾಟರ್​ ಶಿಖರ್ ಧವನ್ (Shikhar Dhawan) ಭಾರತ ಕ್ರಿಕೆಟ್​ ತಂಡ ನೋಡಿದ ಅತ್ಯುತ್ತಮ ಆರಂಭಿಕ ಬ್ಯಾಟರ್​ಗಳಲ್ಲಿ ಒಬ್ಬರು. ಆದರೆ ಅವರ ವೈಯಕ್ತಿಕ ಜೀವನವು ಸ್ವಲ್ಪ ಮಟ್ಟಿಗೆ ಕ್ಲಿಷ್ಟಕರವಾಗಿದೆ. ಅವರ ಜೀವನ ಕತೆಯು ಪ್ರಕ್ಷುಬ್ಧತೆಯಿಂದ ತುಂಬಿಕೊಂಡಿದೆ. ಕಳೆದ ವರ್ಷ ಪರಸ್ಪರ ಒಪ್ಪಿಗೆಯೊಂದಿಗೆ ಪತ್ನಿ ಆಯೆಷಾ ಮುಖರ್ಜಿ ಅವರಿಂದ ಬೇರ್ಪಟ್ಟ ಬಳಿಕ ನಾನಾ ಘಟನೆಗಳು ಸಂಭವಿಸಿವೆ. 2023 ರ ಅಕ್ಟೋಬರ್​ನಲ್ಲಿ 11 ವರ್ಷಗಳ ವೈವಾಹಿಕ ಜೀವನವನ್ನು ಕೊನೆಗೊಳಿಸಲು ಪತ್ನಿ ಮತ್ತು ಅವರ ನಡುವಿನ ಹೊಂದಾಣಿಕೆ ಕೊರತೆಯೇ ಕಾರಣ. ಇದೇ ಹಿನ್ನೆಲೆಯಲ್ಲಿ ದೆಹಲಿಯ ಕೌಟುಂಬಿಕ ನ್ಯಾಯಾಲಯವು ವಿಚ್ಛೇದನಕ್ಕೆ ಒಪ್ಪಿತ್ತು. ಆಗಸ್ಟ್ 8, 2020 ರಿಂದ ಧವನ್ ಮತ್ತು ಆಯೆಷಾ ಗಂಡ ಮತ್ತು ಹೆಂಡತಿಯಾಗಿ ಜತೆಗಿಲ್ಲ.

ಧವನ್ ತನ್ನ ಮಗ ಜೊರಾವರ್ ನಿಂದ ದೂರವಾಗಿರುವ ಬಗ್ಗೆ ಬೇಸರ ಹೊಂದಿದ್ದಾರೆ. ಪುತ್ರ ಆಸ್ಟ್ರೇಲಿಯಾದ ಪ್ರಜೆಯಾಗಿದ್ದು, ತನ್ನ ತಾಯಿಯೊಂದಿಗೆ ಮೆಲ್ಬೋರ್ನ್​ನಲ್ಲಿ ಇದ್ದಾನೆ. ಸಮಸ್ಯೆ ಹೊರತಾಗಿಯೂ ಧವನ್​ ಪುತ್ರನಿಗಾಗಿ ಹಂಬಲಿಸುತ್ತಿರುತ್ತಾರೆ. ಆತನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಆಗಾಗ ಹೇಳುತ್ತಿರುತ್ತಾರೆ. ಏತನ್ಮಧ್ಯೆ ಶಿಖರ್ ಧವನ್​ ಭಾರತ ಮಹಿಳಾ ತಂಡದ ಲೆಜೆಂಡ್​​ ಮಿಥಾಲಿ ರಾಜ್ ಅವರನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಮಿಥಾಲಿ ಜೊತೆ ಧವನ್ ಹೆಸರು ಲಿಂಕ್?

ಕೆಲವು ದಿನಗಳ ಹಿಂದೆ ಧವನ್ ಬಾಲಿವುಡ್ ನಟಿ ಹುಮಾ ಖುರೇಷಿ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದರು. ಆದರೆ ಅವರಲ್ಲಿ ಇಬ್ಬರೂ ಮಸಾಲಾ ಸುದ್ದಿಗೆ ಪ್ರತಿಕ್ರಿಯಿಸಿರಲಿಲ್ಲ. ಅದು ಹಾಗೆಯೇ ಅಂತ್ಯಗೊಂಡಿತು. ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರೊಂದಿಗೆ ಭಾರತೀಯ ಕ್ರಿಕೆಟಿಗನ ಹೆಸರು ತಳುಕು ಹಾಕಿಕೊಂಡಿದೆ.

ಮಿಥಾಲಿ ಇನ್ನೂ ಅವಿವಾಹಿತರಾಗಿದ್ದು, ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ವೀಕ್ಷಕವಿವರಣೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಕೂಡ ಆಗಿದ್ದಾರೆ. ಏತನ್ಮಧ್ಯೆ, ಧವನ್ ಇತ್ತೀಚೆಗೆ ಟಾಕ್ ಶೋವೊಂದರಲ್ಲಿ ಮಾತನಾಡುವಾಗ ಮಿಥಾಲಿ ಅವರೊಂದಿಗೆ ಡೇಟಿಂಗ್ ವದಂತಿಗಳ ಬಗ್ಗೆ ಮೌನ ಮುರಿದಿದ್ದಾರೆ.

ಇದನ್ನೂ ಓದಿ: Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಾಯಕ ಜಿಯೋ ಸಿನೆಮಾದ ‘ಧವನ್ ಕರೆಂಗೆ’ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ್ದರು. ಈ ವೇಳೆ ಅವರು ಮಿಥಾಲಿ ಅವರನ್ನು ಮದುವೆಯಾಗುವ ವದಂತಿ ಬಗ್ಗೆ ಮಾತನಾಡಿದ್ದಾರೆ. ಇದೊಂದು ಅತ್ಯಂತ ಶಾಕಿಂಗ್ ಘಟನೆ ಎಂದಿದ್ದಾರೆ. ನಿಮಗಾದ ಶಾಕಿಂಗ್​ ನ್ಯೂಸ್​ ಯಾವುದು ಎಂದು ಕೇಳಿದ್ದಕ್ಕೆ, , “ನಾನು ಮಿಥಾಲಿ ರಾಜ್ ಅವರನ್ನು ಮದುವೆಯಾಗುತ್ತಿದ್ದೇನೆ ಎಂಬ ವಿಷಯ ಎಂದ ಹೇಳಿದ್ದಾರೆ.

ರಿಷಭ್ ಪಂತ್​ಗೆ ಶ್ಲಾಘನೆ

15 ತಿಂಗಳ ಸವಾಲಿನ ಅವಧಿಯ ನಂತರ ಕ್ರಿಕೆಟ್​ಗೆ ಮರಳಿದ್ದ ಭಾರತದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಧವನ್ ಶ್ಲಾಘಿಸಿದರು. ಡಿಸೆಂಬರ್ 2022 ರಲ್ಲಿ, ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪಂತ್ ಗಾಯಗೊಂಡಿದ್ದರು. ಈ ಘಟನೆಯ ನಂತರ, ಪಂತ್ ಹಲವಾರು ಶಸ್ತ್ರಚಿಕಿತ್ಸೆಗಳಿಗೆ ಒಳಗಾದ ನಂತರ ಎನ್​​ಸಿಎನಲ್ಲಿ ಪುನಶ್ಚೇತನ ಮಾಡಿದ್ದಾರೆ. ಅವರ ಆತ್ಮಸ್ಥೈರ್ಯವನ್ನು ಧವನ್ ಹೊಗಳಿದ್ದಾರೆ.

Continue Reading

ಪ್ರಮುಖ ಸುದ್ದಿ

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Natasa Stankovic: ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

VISTARANEWS.COM


on

Natasa Stankovic
Koo

ಬೆಂಗಳೂರು: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಸ್ಟಾಂಕೋವಿಕ್ (Natasa Stankovic) ಈಗ ಸುದ್ದಿಯಲ್ಲಿದ್ದಾರೆ. ಅವರು ಮತ್ತು ಹಾರ್ದಿಕ್ ಈಗಾಗಲೇ ಪರಸ್ಪರ ಒಪ್ಪಂದದಿಂದ ಬೇರ್ಪಟ್ಟಿದ್ದಾರೆ ಎಂದು ಸಾಕಷ್ಟು ವದಂತಿಗಳಾಗಿವೆ. ಈ ಗಾಸಿಪ್​ ಸುದ್ದಿಯ ಬೆಂಕಿಗೆ ಹೆಚ್ಚಿನ ತುಪ್ಪ ಸುರಿಯುವಂತೆ ಅವರು ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

ಅದೇನೇ ಇದ್ದರೂ, ಅಲೆಕ್ಸಾಂಡರ್ ಮತ್ತು ನತಾಶ ಮತ್ತು ದಿಶಾ ಇಬ್ಬರಿಗೂ ಉತ್ತಮ ಸ್ನೇಹಿತ ಎಂದು ವರದಿಯಾಗಿದೆ. ಅವರು ತಮ್ಮ ತೋಳುಗಳ ಮೇಲೆ ದಿಶಾ ಅವರ ಮುಖದ ಹಚ್ಚೆ ಹೊಂದಿರುವುದರಿಂದ, ಅವರು ಬಾಲಿವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರಬೇಕು ಎಂದು ಎಲ್ಲರೂ ಭಾವಿಸಿದ್ದಾರೆ.

ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Continue Reading

ಪ್ರಮುಖ ಸುದ್ದಿ

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

IPL 2024 : ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (ಎಸ್ಆರ್ಹೆಚ್) ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್​ಗಳಿಂದ ಜಯಗಳಿಸುವ ಮೂಲಕ ಐಪಿಎಲ್​ 2024ರ ಫೈನಲ್​ಗೇರಿದೆ. ಈ ಸೋಲಿನಿಂದ ರಾಜಸ್ಥಾನ್​ ತಂಡದ ಕಪ್ ಗೆಲ್ಲುವ ಆಸೆ ಕೊನೆಗೊಂಡಿದೆ. ಸೋಲಿನೊಂದಿಗೆ ಆ ತಂಡದ ಆಟಗಾರರು ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ. ಅವರೆಲ್ಲರೂ ಒಂದೊಂದು ರೀತಿಯಲ್ಲಿ ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ. ಏತನ್ಮಧ್ಯೆ, ಮೈದಾನದಲ್ಲಿ ಹತಾಶೆಗೆ ಒಳಗಾಗಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ಮನ್ ಶಿಮ್ರಾನ್ ಹೆಟ್ಮಾಯರ್​​ಗೆ (Shimron Hetmyer) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದಂಡ ವಿಧಿಸಿದೆ.

ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Gautam Gambhir : ಗಂಭೀರ್​ ಟೀಮ್​ ಇಂಡಿಯಾ ಕೋಚ್ ಆಗದಂತೆ ತಡೆಯುತ್ತಿದ್ದಾರೆಯೇ ಶಾರುಖ್?

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೇ 24 ರಂದು ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಕ್ವಾಲಿಫೈಯರ್ 2ರ ಸಂದರ್ಭದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್​ನ ಶಿಮ್ರಾನ್ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ದಂಡ ವಿಧಿಸಿದ್ದಾರೆ. ಬಿಸಿಸಿಐ ನಿಖರವಾದ ಕಾರಣವನ್ನು ನಿರ್ದಿಷ್ಟಪಡಿಸದಿದ್ದರೂ ಔಟಾದ ನಂತರ ಹೆಟ್ಮೆಯರ್ ಅವರ ಪ್ರತಿಕ್ರಿಯೆ ಬಹುಶಃ ಕಾರಣವಾಗಿರಬಹುದು ಎಂದು ವರದಿ ಮಾಡಲಾಗಿದೆ.

ನಿರ್ಣಾಯಕ ಪರಿಸ್ಥಿತಿಯಲ್ಲಿ ಹೆಟ್ಮೆಯರ್ ಔಟಾಗಿದ್ದರು. ಕ್ರೀಸ್​ನಲ್ಲಿ ಅವರಿದ್ದಿದ್ದರೆ ಪಂದ್ಯ ಆರ್​ಆರ್​ ಪರವಾಗಿರುತ್ತಿತ್ತು.

ಟಾಸ್ ಗೆದ್ದ ಆರ್​ಆರ್​​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇಬ್ಬನಿ ಅಂಶವನ್ನು ಲಾಭ ಮಾಡಿಕೊಳ್ಳುವ ಭರವಸೆಯಲ್ಲಿದ್ದರು. ಆದರೆ, ರಾಹುಲ್ ತ್ರಿಪಾಠಿ (15 ಎಸೆತಗಳಲ್ಲಿ 37 ರನ್) ಮತ್ತು ಹೆನ್ರಿಕ್ ಕ್ಲಾಸೆನ್ (34 ಎಸೆತಗಳಲ್ಲಿ 50 ರನ್) ಅವರ ನಿರ್ಣಾಯಕ ಕೊಡುಗೆಗಳೊಂದಿಗೆ ಎಸ್ಆರ್ಹೆಚ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಪ್ರತಿಕ್ರಿಯೆಯಾಗಿ, ಎಸ್ಆರ್​ಎಚ್​ ಸ್ಪಿನ್ ದಾಳಿಯ ವಿರುದ್ಧ ಆರ್​ಆರ್​ ಹೆಣಗಾಡಿತು. ಇಬ್ಬನಿಯ ಕೊರತೆಯು ಎಸ್ಆರ್​ಎಚ್​​ ಪರವಾಗಿ ಕೆಲಸ ಮಾಡಿತು. 35 ಎಸೆತಗಳಲ್ಲಿ 56 ರನ್ ಗಳಿಸಿದ ಜುರೆಲ್ ಅವರ ದಿಟ್ಟ ಪ್ರಯತ್ನದ ಹೊರತಾಗಿಯೂ, ಆರ್​ಆರ್​ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

Continue Reading
Advertisement
childrens summer camp closing ceremony at yallapur
ಉತ್ತರ ಕನ್ನಡ29 mins ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ32 mins ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Siddaramaiah
ಕರ್ನಾಟಕ40 mins ago

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Shikhar Dhawan
ಪ್ರಮುಖ ಸುದ್ದಿ59 mins ago

Shikhar Dhawan : ಶಿಖರ್ ಧವನ್ ಮಿಥಾಲಿ ರಾಜ್ ಮದುವೆ? ಬಗ್ಗೆ ಮೌನ ಮುರಿದ ಭಾರತದ ಸ್ಟಾರ್

Union Minister Pralhad Joshi statement about Prajwal revanna case
ಕರ್ನಾಟಕ1 hour ago

Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

opposition of the girl friend family to the marriage Suicide of a offended lover
ಕ್ರೈಂ1 hour ago

Self Harming: ಮದುವೆಗೆ ಪ್ರೇಯಸಿ ಕುಟುಂಬಸ್ಥರ ವಿರೋಧ; ನೊಂದ ಪ್ರಿಯಕರ ಆತ್ಮಹತ್ಯೆ

International Suryamitra Annual Award Ceremony on 27th May
ಕರ್ನಾಟಕ1 hour ago

Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

Engineers suspended
ಕರ್ನಾಟಕ1 hour ago

Engineers Suspended: ಸರ್ಕಾರಿ ಐಬಿಯಲ್ಲಿ ಕುಡಿದು ಮಜಾ ಮಾಡಿದ್ದ ಐವರು ಜಿಪಂ ಎಂಜಿನಿಯರ್‌ಗಳ ಅಮಾನತು

Lok Sabha Election
ದೇಶ2 hours ago

Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

Lockup Death
ಕರ್ನಾಟಕ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; 10 ಮಂದಿ ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌