BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ - Vistara News

ಕ್ರಿಕೆಟ್

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

BCCI: ಮೂಲಗಳ ಪ್ರಕಾರ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್​ ಖಾನ್​(Zaheer Khan) ಅವರನ್ನು ನೇಮಕ ಮಾಡಲಿದೆ ಎನ್ನಲಾಗಿದೆ. ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಪ್ರಧಾನ ಕೋಚ್​ ಆಗಿ ಮಾಜಿ ಆಟಗಾರ ಗೌತಮ್ ಗಂಭೀರ್​(Gautam Gambhir) ಈಗಾಗಲೇ ನೇಮಕಗೊಂಡಿದ್ದಾರೆ. ಇನ್ನುಳಿದ ಬ್ಯಾಟಿಂಗ್​, ಫೀಲ್ಡಿಂಗ್, ಬೌಲಿಂಗ್​​ ಮತ್ತು ಸಹಾಯಕ ಕೋಚ್​ಗಳ ಆಯ್ಕೆಯಾಗಬೇಕಿದೆ. ಈ ಹುದ್ದೆಗಾಗಿ ಸ್ವತಃ ಗಂಭೀರ್ ಸೂಚಿಸಿರುವ ಐವರ ಹೆಸರನ್ನು ಬಿಸಿಸಿಐ(BCCI) ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಕೇವಲ ಒಂದು ಹೆಸರನ್ನು ಮಾತ್ರ ಅನುಮೋದಿಸಿದೆ ಎನ್ನಲಾಗಿದೆ.

ಗಂಭೀರ್ ಅವರು ಬೌಲಿಂಗ್​ ಕೋಚ್​ ಹುದ್ದೆಗೆ ಕನ್ನಡಿಗ ಆರ್​. ವಿನಯ್​ ಕುಮಾರ್​, ​ಲಕ್ಷ್ಮೀಪತಿ ಬಾಲಾಜಿ(Lakshmipathy Balaji) ಮೋರ್ನೆ ಮೊರ್ಕಲ್ ಹೆಸರು ಸೂಚಿಸಿದ್ದರು. ಬ್ಯಾಟಿಂಗ್​ ಕೋಚ್​ ಆಗಿ ಅಭಿಷೇಕ್ ನಾಯರ್, ಫೀಲ್ಡಿಂಗ್​ ಕೋಚ್​ ಆಗಿ ಜಾಂಟಿ ರೋಡ್ಸ್ ಹೆಸರನ್ನು ಸೂಚಿಸಿದ್ದರು. ಆದರೆ ಮಂಡಳಿಯು ಈ ಎಲ್ಲ ಆಟಗಾರರ ಪೈಕಿ ಒಬ್ಬರ ಆಯ್ಕೆಗೆ ಮಾತ್ರ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಐಪಿಎಲ್​ನಲ್ಲಿ ಕೆಕೆಆರ್​ ಪರ ಗೌತಮ್ ಗಂಭೀರ್ ಜತೆ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ನಾಯರ್ ಅವರನ್ನು ಟೀಮ್​ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿಕೊಳ್ಳಲು ಬಿಸಿಸಿಐ ಸಹಮತ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾದ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್​ ಆಗಿ ಈ ಹಿಂದೆ ಇದ್ದ ಟಿ.ದಿಲಿಪ್ ಅವರನ್ನೇ ಮತ್ತೆ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ. ಈ ಹಿಂದೆ ರವಿಶಾಸ್ತ್ರಿ ಹಾಗೂ ರಾಹುಲ್ ದ್ರಾವಿಡ್​ಗೆ ತಮ್ಮ ಕೋಚಿಂಚ್ ಸಿಬ್ಬಂದಿ ಆಯ್ಕೆ ಮಾಡಲು ಮುಕ್ತ ಅವಕಾಶ ನೀಡಲಾಗಿತ್ತು. ಆದರೆ ಗಂಭೀರ್​ಗೆ ಈ ಸ್ವತಂತ್ರ ನೀಡಲಾಗಿಲ್ಲ ಎನ್ನಲಾಗಿದೆ. ಇದಕ್ಕೆ ನಿರ್ದಿಷ್ಟ ಕಾರಣ ಏನೆಂಬಹುವುದು ತಿಳಿದಿಲ್ಲ.

ಇದನ್ನೂ ಓದಿ SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

ಮೂಲಗಳ ಪ್ರಕಾರ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್​ ಖಾನ್​(Zaheer Khan) ಅವರನ್ನು ನೇಮಕ ಮಾಡಲಿದೆ ಎನ್ನಲಾಗಿದೆ. ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ.

ಕೋಚ್​ ಹುದ್ದೆಗೆ ಗಂಭೀರ್​ ಅವರನ್ನು ಆಯ್ಕೆ ಮಾಡುವ ಮುನ್ನ ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿವೆ.​

ಹೌದು ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಬಿಸಿಸಿಐ ಗಂಭೀರ್​ ಅವರನ್ನು ಕೋಚ್​ ಆಗಿ ನೇಮಕ ಮಾಡುವಾಗ ಕೊಹ್ಲಿಯನ್ನು ಒಂದು ಮಾತು ಕೂಡ ಕೇಳದೇ ಇರುವುದು ಕೊಹ್ಲಿ ಮತ್ತು ಟೀಮ್​ ಇಂಡಿಯಾ ಅಭಿಮಾನಿಗಳಿಗೆ ಅಸಮಾಧಾನ ಉಂಟುಮಾಡಿದೆ. ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

Hardik Pandya: ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಇದೀಗ ಬಿಸಿಸಿಐ(BCCI) ಪಾಂಡ್ಯಗೆ ನಾಯಕತ್ವ ನೀಡಲು ಹಿಂದೇಟು ಹಾಕಿದ್ದು, ಸೂರ್ಯಕುಮಾರ್​ ಯಾದವ್​ಗೆ(Suryakumar Yadav) ನಾಯಕತ್ವ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Hardik Pandya
Koo

ಮುಂಬಯಿ: ಫಿಟ್ನೆಸ್‌ ಸಮಸ್ಯೆ ಎದುರಿಸುತ್ತಿರು ಕಾರಣ ಹಾರ್ದಿಕ್​ ಪಾಂಡ್ಯಗೆ(Hardik Pandya) ಟಿ20 ತಂಡದ ನಾಯಕತ್ವ ನೀಡಲು ಬಿಸಿಸಿಐ ಹಿಂದೇಟು ಹಾಕಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಾರ್ದಿಕ್​ ಪಾಂಡ್ಯ(Hardik Pandya Fitness) ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತಮ್ಮ 2 ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಫಿಟ್​ನೆಸ್​ ಬಗ್ಗೆ ಪ್ರಶ್ನೆ ಮಾಡುವವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಹಾರ್ದಿಕ್​ ಪಾಂಡ್ಯ ಪೋಸ್ಟ್ ಮಾಡಿರುವ ಫೋಟೊಗಳ ಪೈಕಿ ಮೊದಲನೆಯದ್ದು 2023ರ ಏಕದಿನ ವಿಶ್ವಕಪ್ ನಂತರ ಗಾಯಗೊಂಡಾಗ ಹಾಗು ಎರಡನೇ ಫೋಟೋ ಪ್ರಸ್ತುತ ಸಮಯದ್ದಾಗಿದೆ. ಮೊದಲ ಫೋಟೊದಲ್ಲಿ ದಪ್ಪವಾಗಿ ಕಾಣುವ ಪಾಂಡ್ಯ 2ನೇ ಫೋಟೊದಲ್ಲಿ ಸಿಕ್ಸ್​ ಪ್ಯಾಕ್​ ಮೂಲಕ ಕಾಣಿಸಿಕೊಂಡಿದ್ದಾರೆ. ಈ ಫೋಟೊಗೆ ಪಾಂಡ್ಯ, “ಕಠಿಣ ಪರಿಶ್ರಮ ವ್ಯರ್ಥವಾಗುವುದಿಲ್ಲ. ನಾವೆಲ್ಲರೂ ನಮ್ಮ ಕೈಲಾದಷ್ಟು ಪ್ರಯತ್ನಿಸೋಣ ಮತ್ತು ನಮ್ಮ ಫಿಟ್‌ನೆಸ್‌ನಲ್ಲಿ ಕೆಲಸ ಮಾಡೋಣ’ ಎಂದು ಬರೆದುಕೊಂಡಿದ್ದಾರೆ.

ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಇದೀಗ ಬಿಸಿಸಿಐ(BCCI) ಪಾಂಡ್ಯಗೆ ನಾಯಕತ್ವ ನೀಡಲು ಹಿಂದೇಟು ಹಾಕಿದ್ದು, ಸೂರ್ಯಕುಮಾರ್​ ಯಾದವ್​ಗೆ(Suryakumar Yadav) ನಾಯಕತ್ವ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

ಸೂರ್ಯಕುಮಾರ್‌ ಯಾದವ್‌ ಹೆಗಲಿಗೆ ನಾಯಕತ್ವ ನೀಡಲು ಬಿಸಿಸಿಐ ಅಧಿಕಾರಿಗಳು ಒಮ್ಮತದ ಒಪ್ಪಿಗೆ ನೀಡಿದ್ದು, ನೂತನ ಕೋಚ್​ ಗೌತಮ್​ ಗಂಭೀರ್​ ಕೂಡ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾರ್ದಿಕ್‌ರನ್ನು ನಾಯಕನನ್ನಾಗಿ ನೇಮಿಸಲು ಗಂಭೀರ್‌ಗೂ ಮನಸಿಲ್ಲ ಎಂದು ಹೇಳಲಾಗುತ್ತಿದೆ.

ಸೂರ್ಯಕುಮಾರ್‌ ಯಾದವ್​ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಮುಂದಿನ ಟಿ20 ತಂಡದ ನಾಯಕ ಯಾರೆಂಬುದು ಖಚಿತಗೊಳ್ಳಲಿದೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮ ಅಲಭ್ಯರಾಗಲಿರುವ ಕಾರಣ, ಕೆ.ಎಲ್​ ರಾಹುಲ್ ಅವರನ್ನು ಹಂಗಾಮಿ ನಾಯಕರನ್ನಾಗಿ ನೇಮಿಸಲು ಬಿಸಿಸಿಐ ನಿರ್ಧರಿಸಿದೆ. 027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ರಾಹುಲ್​ಗೆ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ. ಗಂಭೀರ್ ಅವರು ಮೆಂಟರ್ ಆಗಿದ್ದ ಲಕ್ನೋ ತಂಡದಲ್ಲಿ ರಾಹುಲ್​ ಅವರು ನಾಯಕರಾಗಿದ್ದರು ಎನ್ನುವುದು ಗಮನಾರ್ಹ.

Continue Reading

ಕ್ರಿಕೆಟ್

SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

SL vs IND: 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

VISTARANEWS.COM


on

SL vs IND
Koo

ಮುಂಬಯಿ: ಶ್ರೀಲಂಕಾ ಪ್ರವಾಸಕ್ಕೆ (Sri Lanka series) ಇಂದು ಭಾರತ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. (Team India) ಲಂಕಾ ವಿರುದ್ಧ ಟೀಮ್​ ಇಂಡಿಯಾ ಟಿ20 ಮತ್ತು ಏಕದಿನ(SL vs IND) ಸರಣಿ ಆಡಲಿದೆ. ಈ ತಿಂಗಳ ಅಂತ್ಯಕ್ಕೆ ಸರಣಿ ಆರಂಭಗೊಳ್ಳಲಿದೆ. ಹಿರಿಯ ಆಟಗಾರರಾದ ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ, ರೋಹಿತ್​ ಶರ್ಮ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಕನ್ನಡಿಗ ರಾಹುಲ್​ ಏಕದಿನಕ್ಕೆ, ಟಿ20ಗೆ ಸೂರ್ಯಕುಮಾರ್​ ನಾಯಕನಾಗಿ ಆಯ್ಕೆಯಾಗಬಹುದು.

ಕೋಚ್ ಗೌತಮ್ ಗಂಭೀರ್ ಅವರ ಉಸ್ತುವಾರಿಯಲ್ಲಿ ಭಾರತ ತಂಡ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇರಲಿದೆ. ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಅವರು ಟಿ20 ಮಾದರಿಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಯುವ ಆಟಗಾರರು ಅವಕಾಶ ಪಡೆಯಲಿದ್ದಾರೆ.

ಇದನ್ನೂ ಓದಿ IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ಮೊಹಮ್ಮದ್ ಶಮಿ ಆಯ್ಕೆ ಸಾಧ್ಯತೆ

ವರದಿಯ ಪ್ರಕಾರ ಹಾರ್ದಿಕ್​ ಪಾಂಡ್ಯ ಈ ಸರಣಿಯಿಂದ ವಿಶ್ರಾಂತಿ ಬಯಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಹಂಗಾಮಿ ನಾಯಕನನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಉಪನಾಯಕರನ್ನಾಗಿ ಪಂತ್​ ಆಯ್ಕೆ ಮಾಡುವ ಸಾಧ್ಯತೆಯಿದೆ. ಭಾರತದ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ಕೂಡ ಲಂಕಾ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ. ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ರಿಯಾನ್ ಪರಾಗ್, ಸಾಯಿ ಸುದರ್ಶನ್ ಮತ್ತು ಜಿತೇಶ್ ಶರ್ಮಾಗೂ ಅವಕಾಶ ಸಿಗುವುದು ಕಷ್ಟ ಸಾಧ್ಯ.

ಶ್ರೇಯಸ್​ಗೆ ಏಕದಿನ ತಂಡದಲ್ಲಿ ಅವಕಾಶ?

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.  ರಣಜಿ ಆಡಲು ನಿರಾಕರಿಸಿ ಅಶಿಸ್ತು ತೋರಿದ ಕಾರಣದಿಂದ ಬಿಸಿಸಿಐ(BCCI) ವಾರ್ಷಿಕ ಗುತ್ತಿಗೆಯಿಂದ ಹೊರಬಿದ್ದಿರುವ ಶ್ರೇಯಸ್ ಅಯ್ಯರ್(Shreyas Iyer) ಅವರು ಶ್ರೀಲಂಕಾ(IND vs SL) ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ.

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ. ಗಂಭೀರ್‌ಗೆ ಶ್ರೀಲಂಕಾ ವಿರುದ್ಧದ ಸರಣಿ ಮೊದಲ ಅಗ್ನಿ ಪರೀಕ್ಷೆಯಾಗಿದೆ. ಲಂಕಾ, ಸನತ್ ಜಯಸೂರ್ಯ ಅವರ ಮಾರ್ಗದರ್ಶನದಲ್ಲಿ ಆಡಲಿದೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Virat Kohli : ವಿರಾಟ್​ ಕೊಹ್ಲಿಯನ್ನು ಅವಮಾನಿಸಿದ ಅಮಿತ್​ ಮಿಶ್ರಾ ಬೆಂಡೆತ್ತಿದ ಯಶ್​ ದಯಾಳ್​

Virat Kohli :ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತಿದೊಡ್ಡ ಸೂಪಸ್ಟಾರ್​ಗಳಲ್ಲಿ ಒಬ್ಬರು. ಅದು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥವಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಗಿರಲಿ ಅವರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ. ಕಳೆದ ದಶಕದಿಂದ ತಮ್ಮ ಸ್ಥಾನಮಾನವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

VISTARANEWS.COM


on

Virat kohli
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡೈ ವೇಗದ ಬೌಲರ್​ ಯಶ್ ದಯಾಳ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಭಾರತದ ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿಯ (Virat Kohli) ಪರವಾಗಿ ಪೋಸ್ಟ್​ ಒಂದನ್ನು ಪ್ರಕಟಿಸಿದ್ದಾರೆ. ಕೊಹ್ಲಿ ಜತೆಗಿರುವ ಫೋಟೊ ಹಾಕಿರುವ ವರು ಇತ್ತೀಚೆಗೆ ಕೊಹ್ಲಿ ಕುರಿತಾಗಿ ಅನಗತ್ಯ ಮಾತನಾಡಿದ ಅಮಿತ್​ ಮಿಶ್ರಾಗೆ ಟಾಂಗ್ ಕೊಟ್ಟಿದ್ದಾರೆ. ಹೇಗೆಂದರೆ ಕೊಹ್ಲಿಯ ಪಕ್ಕದಲ್ಲಿ ನಿಲ್ಲುವುದು ಕೆಲವರಿಗೆ ಅಗೌರವ ಎಂದೂ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತಿದೊಡ್ಡ ಸೂಪಸ್ಟಾರ್​ಗಳಲ್ಲಿ ಒಬ್ಬರು. ಅದು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥವಾ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆಗಿರಲಿ ಅವರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ. ಕಳೆದ ದಶಕದಿಂದ ತಮ್ಮ ಸ್ಥಾನಮಾನವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಪಾರ ಅಭಿಮಾನಿ ಬಳಗದ ಹಿಂದಿನ ಪ್ರಮುಖ ಕಾರಣಗಳಲ್ಲಿ ವಿರಾಟ್ ಕೊಹ್ಲಿ ಕೂಡ ಒಬ್ಬರು. ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಫ್ರಾಂಚೈಸಿಯ ಭಾಗವಾಗಿದ್ದಾರೆ. ಬ್ಯಾಟ್ ಮತ್ತು ಮೈದಾನದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ತಮ್ಮ ಎಲ್ಲ ಕೊಡುಗೆಗಳನ್ನು ಕೊಟ್ಟಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು ಅವರ ಎಲ್ಲಾ ರನ್​​​ಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಬಂದಿವೆ. ಆರಂಭಿಕ ಬ್ಯಾಟರ್​ ಲೀಗ್​​ನಲ್ಲಿ 252 ಪಂದ್ಯಗಳಿಂದ ಸುಮಾರು 131 ಸ್ಟ್ರೈಕ್ ರೇಟ್ನಲ್ಲಿ 8004 ರನ್ ಗಳಿಸಿದ್ದಾರೆ. ಅವರು 38 ಅರ್ಧಶತಕಗಳು ಮತ್ತು 8 ಶತಕಗಳನ್ನು ಬಾರಿಸಿದ್ದಾರೆ. ಇದು ಲೀಗ್ನಲ್ಲಿ ಯಾವುದೇ ಬ್ಯಾಟರ್​ ಗಳಿಸಿದ ಗರಿಷ್ಠ ಮೊತ್ತ.

ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಪಂದ್ಯಾವಳಿಯಲ್ಲಿ ಆಡಿದ 15 ಪಂದ್ಯಗಳಿಂದ 741 ರನ್ ಗಳಿಸುವ ಮೂಲಕ ಅವರು ಆರೆಂಜ್ ಕ್ಯಾಪ್ ಹೋಲ್ಡರ್ ಆಗಿ ಪಂದ್ಯಾವಳಿ ಕೊನೆಗೊಳಿಸಿದರು. ಲೀಗ್​ನಲ್ಲಿ ಒಂದು ಶತಕವನ್ನು ಗಳಿಸಿದರು. ಈ ಋತುವಿನಲ್ಲಿ, ಅವರು ಐಪಿಎಲ್​ನ ಒಟ್ಟು 8000 ರನ್​ಗಳನ್ನು ಪೂರ್ಣಗೊಳಿಸಿದರು. ಈ ಸಾಧನೆಯನ್ನು ಮಾಡಿದ ಮೊದಲ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಮತ್ತೊಂದೆಡೆ, ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ ಯಶ್ ದಯಾಳ್ ಪಂದ್ಯಾವಳಿಯಲ್ಲಿ ಬೌಲಿಂಗ್ ಲೈನ್ಅಪ್​ನ ಮುಖ್ಯ ಆಧಾರವಾಗಿದ್ದರು. ವೇಗದ ಬೌಲರ್ ಪಂದ್ಯಾವಳಿಯುದ್ದಕ್ಕೂ ಅದ್ಭುತವಾಗಿ ಬೌಲಿಂಗ್ ಮಾಡಿದರು ಮತ್ತು ತಂಡದ ಪ್ರಮುಖ ವಿಕೆಟ್ ಟೇಕರ್ ಆಗಿ ಕೊನೆಗೊಂಡರು.

ಇದನ್ನೂ ಓದಿ: Jay Shah : ಜಯ್​ ಶಾ ಮುಂದಿನ ಐಸಿಸಿ ಅಧ್ಯಕ್ಷ; ಕೊಲೊಂಬೊ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಯಶ್ ದಯಾಳ್ ಬುಧವಾರ (ಜುಲೈ 17) ವಿರಾಟ್ ಕೊಹ್ಲಿ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಐಪಿಎಲ್ 2024 ರಲ್ಲಿ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಕೆಫೆಯಲ್ಲಿ ಊಟಕ್ಕೆ ಹೋದಾಗ ತೆಗೆದ ಚಿತ್ರವಿದು. “ನಿಮ್ಮ ಪಕ್ಕಕ್ಕೆ ನಿಲ್ಲುವುದು ಒಂದು ಗೌರವ” ಎಂಬ ಶೀರ್ಷಿಕೆಯೊಂದಿಗೆ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕೊಹ್ಲಿ ಖ್ಯಾತಿ ಮತ್ತು ಶಕ್ತಿಯೊಂದಿಗೆ ಬದಲಾಗಿದ್ದಾರೆ ಎಂದು ಹೇಳಿಕೊಂಡ ಅಮಿತ್ ಮಿಶ್ರಾ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ವೇಗದ ಬೌಲರ್ ಈ ಪೋಸ್ಟ್ ಮಾಡಿದ್ದಾರೆ ಎಂದು ಹಲವರು ಭಾವಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ


ವಿರಾಟ್ ಕೊಹ್ಲಿ ಕೊನೆಯ ಬಾರಿಗೆ 2024 ರ ಟಿ 20 ವಿಶ್ವಕಪ್​​ನಲ್ಲಿ ಮಾದರಿಯಲ್ಲಿ ಕಾಣಿಸಿಕೊಂಡಿದ್ದರು. ಆರಂಭಿಕ ಬ್ಯಾಟರ್​ ಇಡೀ ಪಂದ್ಯಾವಳಿಯಲ್ಲಿ ವಿಫಲವಾದ ಕಾರಣ ಅವರು ಬಯಸಿದ ರೀತಿಯ ಪಂದ್ಯಾವಳಿಯನ್ನು ಹೊಂದಿರಲಿಲ್ಲ ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​​ನಲ್ಲಿ ಪಂದ್ಯ ವಿಜೇತ ಇನ್ನಿಂಗ್ಸ್ ಆಡಿದರು, ಅಂತಿಮವಾಗಿ 76 ರನ್​ ಬಾರಿಸಿದ್ದರು.

ಆದರೆ ಭಾರತ ಗೆದ್ದ ನಂತರ, ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತಿ ಘೋಷಿಸಿದರು. ಬ್ಯಾಟರ್​ ತಮ್ಮ ವೃತ್ತಿಜೀವನದಲ್ಲಿ 48.69 ಸರಾಸರಿ ಮತ್ತು 137.04 ಸ್ಟ್ರೈಕ್ ರೇಟ್​ನೊಂದಿಗೆ 4188 ರನ್ ಗಳಿಸಿದರು. ಅವರು 125 ಪಂದ್ಯಗಳನ್ನು ಆಡಿದರು ಮತ್ತು ಸ್ವರೂಪದಲ್ಲಿ ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದರು.

ಈ ವರ್ಷದ ಆಗಸ್ಟ್​​ನಲ್ಲಿ ನಡೆಯುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುವ ನಿರೀಕ್ಷೆಯಿದೆ . ಅವರು ಈಗ ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Jay Shah : ಜಯ್​ ಶಾ ಮುಂದಿನ ಐಸಿಸಿ ಅಧ್ಯಕ್ಷ; ಕೊಲೊಂಬೊ ಸಭೆಯಲ್ಲಿ ತೀರ್ಮಾನ ಸಾಧ್ಯತೆ

Jay Shah : ಮಾಧ್ಯಮ ವರದಿಗಳ ಪ್ರಕಾರ, ಜಯ್ ಶಾ ಐಸಿಸಿ ಮುಖ್ಯಸ್ಥರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. . ಪ್ರಸ್ತುತ, ನ್ಯೂಜಿಲೆಂಡ್ನ ಗ್ರೆಗ್ ಬಾರ್ಕ್ಲೇ ಕ್ರಿಕೆಟ್​​ನ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಮುಂಬರುವ ಸಭೆಯಲ್ಲಿ ಐಸಿಸಿ ಸದಸ್ಯರು ನೇಮಕಾತಿಯ ಸಂಭಾವ್ಯ ಸಮಯದ ಬಗ್ಗೆ ಚರ್ಚಿಸಲಿದ್ದಾರೆ.

VISTARANEWS.COM


on

Jay Shah
Koo

ಬೆಂಗಳೂರು: ಕೊಲಂಬೊದಲ್ಲಿ ಶುಕ್ರವಾರ (ಜುಲೈ 19) ಐಸಿಸಿಯ ವಾರ್ಷಿಕ ಸಮ್ಮೇಳನ ನಡೆಯಲಿದೆ. ಅದಕ್ಕಾಗಿ ಕ್ರಿಕೆಟ್ ಜಗತ್ತು ಕಾಯುತ್ತಿದೆ. ಯಾಕೆಂದರೆ ಅಲ್ಲಿ ಕ್ರಿಕೆಟ್​ ಕ್ಷೇತ್ರದ ಬಗ್ಗೆ ದೊಡ್ಡ ತೀರ್ಮಾನಗಳು ಪ್ರಕಟಗೊಳ್ಳಲಿವೆ. ಅದೇ ರೀತಿ ಸಭೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಮುಂದಿನ ಐಸಿಸಿ ಅಧ್ಯಕ್ಷರಾಗುವ ವಿಷಯಗಳು ಸ್ಪಷ್ಟವಾಗಬಹುದು.

ಮಾಧ್ಯಮ ವರದಿಗಳ ಪ್ರಕಾರ, ಜಯ್ ಶಾ ಐಸಿಸಿ ಮುಖ್ಯಸ್ಥರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. . ಪ್ರಸ್ತುತ, ನ್ಯೂಜಿಲೆಂಡ್ನ ಗ್ರೆಗ್ ಬಾರ್ಕ್ಲೇ ಕ್ರಿಕೆಟ್​​ನ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಮುಂಬರುವ ಸಭೆಯಲ್ಲಿ ಐಸಿಸಿ ಸದಸ್ಯರು ನೇಮಕಾತಿಯ ಸಂಭಾವ್ಯ ಸಮಯದ ಬಗ್ಗೆ ಚರ್ಚಿಸಲಿದ್ದಾರೆ.

ಬಿಸಿಸಿಐ ಕಾರ್ಯದರ್ಶಿಯಾಗಿ ಜಯ್ ಶಾ ಅವರಿಗೆ ಇನ್ನೂ ಒಂದು ವರ್ಷ ಉಳಿದಿದೆ. ಕಡ್ಡಾಯ ಕೂಲಿಂಗ್-ಆಫ್ ಅವಧಿ ಪ್ರಾರಂಭವಾಗುವ ಮೊದಲು ಅವರ ಅಧಿಕಾರಾವಧಿ 2025 ರಲ್ಲಿ ಕೊನೆಗೊಳ್ಳುತ್ತದೆ. ಮತ್ತೊಂದೆಡೆ, ಬಾರ್ಕ್ಲೇ ಅವರ ಎರಡು ವರ್ಷಗಳ ಅವಧಿ ಈ ವರ್ಷ ಕೊನೆಗೊಳ್ಳಲಿದೆ. ಅವರು 2020 ರಲ್ಲಿ ಮೊದಲ ಬಾರಿಗೆ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2022 ರಲ್ಲಿ ಮರು ಆಯ್ಕೆಯಾದರು.

ಜಯ್ ಶಾ ಅವರ ಅಧಿಕಾರಾವಧಿ ಮುಂದಿನ ವರ್ಷ ಕೊನೆಗೊಳ್ಳಲಿದ್ದು, ಬಾರ್ಕ್ಲೇ ಅವರ ಅಧಿಕಾರಾವಧಿ ಈ ವರ್ಷ ಕೊನೆಗೊಳ್ಳಲಿದ್ದು, ನೇಮಕಾತಿಯ ಸಮಯದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಬಾರ್ಕ್ಲೇ ಅವರ ಪ್ರಸ್ತುತ ಅಧಿಕಾರಾವಧಿಯನ್ನು ಮೂರು ವರ್ಷಗಳವರೆಗೆ ವಿಸ್ತರಿಸಬಹುದು ಎಂದು ವರದಿಗಳು ತಿಳಿಸಿವೆ.

ಜಯ್ ಶಾ ಅವರು 2025ರಲ್ಲಿ ಬಿಸಿಸಿಐ ಆಡಳಿತಗಾರರಾಗಿ ಕೂಲಿಂಗ್ ಆಫ್ ಅವಧಿಗೆ ಹೋಗಬೇಕಾಗುತ್ತದೆ. ಬಿಸಿಸಿಐ ಅಧ್ಯಕ್ಷರಾಗಿ ಮರಳುವ ಮೊದಲು ಶಾ 3 ವರ್ಷಗಳ ಕಾಲ ಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಬಹುದು ಎಂದು ಪಿಟಿಐ ವರದಿ ಮಾಡಿದೆ.

“ಬಿಸಿಸಿಐ ಸಂವಿಧಾನದ ಪ್ರಕಾರ 2025 ರಲ್ಲಿ ಭಾರತೀಯ ಮಂಡಳಿಯಲ್ಲಿ ಕೂಲಿಂಗ್ ಆಫ್ ಅವಧಿ ಪ್ರಾರಂಭವಾಗುವ ಮೊದಲು ಅವರು ಬಿಸಿಸಿಐ ಕಾರ್ಯದರ್ಶಿಯಾಗಿ ಇನ್ನೂ ಒಂದು ವರ್ಷ ಉಳಿದಿದೆ. ಆದಾಗ್ಯೂ, ಅವರು 2025 ರಲ್ಲಿ ಅಧಿಕಾರ ವಹಿಸಿಕೊಳ್ಳಬೇಕಾದರೆ, ಬಾರ್ಕ್ಲೇ ಡಿಸೆಂಬರ್ 2024 ರಿಂದ ಡಿಸೆಂಬರ್ 2026 ರವರೆಗೆ ಎರಡು ವರ್ಷಗಳ ಮೂರನೇ ಅವಧಿಯನ್ನು ಪೂರ್ಣಗೊಳಿಸಿರುವುದಿಲ್ಲ” ಎಂದು ಐಸಿಸಿ ಮೂಲಗಳು ಪಿಟಿಐಗೆ ತಿಳಿಸಿವೆ.

ಐಸಿಸಿಯ ಅಧ್ಯಕ್ಷ ಸ್ಥಾನದ ಅವಧಿಯು ತಲಾ ಎರಡು ವರ್ಷಗಳ ಮೂರು ಅವಧಿಗಳಿಂದ ಮೂರು ವರ್ಷಗಳ ಎರಡು ಅವಧಿಗಳಿಗೆ ಬದಲಾದರೆ, ಒಟ್ಟು ಅವಧಿ ಆರು ವರ್ಷಗಳವರೆಗೆ ಉಳಿಯಬಹುದು” ಎಂದು ಮೂಲಗಳು ತಿಳಿಸಿವೆ.

ಐಸಿಸಿ ಸಭೆಯ ಇತರ ಕಾರ್ಯಸೂಚಿಗಳು


ಐಸಿಸಿ ಮುಖ್ಯಸ್ಥರಾಗಿ ಜಯ್ ಶಾ ಅವರ ನೇಮಕದ ಚರ್ಚೆಯ ಹೊರತಾಗಿ, ಮಂಡಳಿಯ ಸದಸ್ಯರು ಇತರ ಹಲವಾರು ಕಾರ್ಯಸೂಚಿಗಳ ಬಗ್ಗೆಯೂ ಚರ್ಚಿಸಲಿದ್ದಾರೆ. ಟಿ 20 ವಿಶ್ವಕಪ್ ಸಮಯದಲ್ಲಿ ಐಸಿಸಿಗೆ ಉಂಟಾದ ನಷ್ಟವು ಚರ್ಚೆಯ ಪ್ರಮುಖ ವಿಷಯಗಳಲ್ಲಿ ಒಂದಾಗಿದೆ. ವರದಿಗಳ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಟಿ 20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಿದ್ದಕ್ಕಾಗಿ ಐಸಿಸಿಗೆ 20 ಮಿಲಿಯನ್ ಡಾಲರ್ ನಷ್ಟವಾಗಿದೆ.

ಇದನ್ನೂ ಓದಿ: Natasa Stankovic : ಹಾರ್ದಿಕ್​ ಪಾಂಡ್ಯಗೆ ಕೈಕೊಟ್ಟು ಸರ್ಬಿಯಾದಲ್ಲಿ ಜಾಲಿ ಟ್ರಿಪ್ ಹೊರಟ ನತಾಶಾ

ಐಸಿಸಿಯ ಹೊಸ ಲೆಕ್ಕಪರಿಶೋಧಕರ ನೇಮಕಾತಿಯು ಐಸಿಸಿ ಸದಸ್ಯತ್ವ, ಅಸೋಸಿಯೇಟ್ ಸದಸ್ಯರ ಸಭೆಯ ವರದಿಗಳು ಮತ್ತು ಐಸಿಸಿ ಅಭಿವೃದ್ಧಿ ಪ್ರಶಸ್ತಿಗಳ ಪ್ರಸ್ತುತಿಯ ಚರ್ಚೆಗಳೊಂದಿಗೆ ಕಾರ್ಯಸೂಚಿಯಲ್ಲಿದೆ ಎಂದು ಪಿಟಿಐ ವರದಿ ಮಾಡಿದೆ. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆಯೂ ಐಸಿಸಿ ಚರ್ಚಿಸಬಹುದು.

Continue Reading
Advertisement
Pralhad Joshi
ದೇಶ3 mins ago

Pralhad Joshi: ಉಚಿತ ಅಕ್ಕಿ ವಿತರಣೆಯ ಪಿಎಂ ಗರೀಬ್ ಕಲ್ಯಾಣ್‌ ಅನ್ನ ಯೋಜನೆ 2029ರ ವರೆಗೆ ವಿಸ್ತರಣೆ: ಪ್ರಲ್ಹಾದ ಜೋಶಿ

Kannada New Movie life of mradula song out
ಸ್ಯಾಂಡಲ್ ವುಡ್15 mins ago

Kannada New Movie: ಹೊಸಬರ ತಂಡ ಸಿದ್ದಪಡಿಸಿರುವ ಹೊಸತನದ ಸಿನಿಮಾ; ಲೈಫ್ ಆಫ್ ಮೃದುಲ ಹಾಡು ಬಿಡುಗಡೆ!

road Accident
ರಾಯಚೂರು20 mins ago

Road Accident : ಪಾದಚಾರಿ ಬಲಿ ಪಡೆದು ಎಸ್ಕೇಪ್‌ ಆದ ಬಸ್‌ ಚಾಲಕ; ಬಾಲಕಿಗೆ ಗುದ್ದಿ ಪ್ರಾಣ ಕಸಿದ ಲಾರಿ

Paris Olympics 2024
ಕ್ರೀಡೆ21 mins ago

Paris Olympics 2024: ಈ ಬಾರಿ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ 117 ಕ್ರೀಡಾಳುಗಳು; ಅಥ್ಲೆಟಿಕ್ಸ್​ ದೊಡ್ಡ ತಂಡ

Urvashi Rautela bathroom video leak on social media
ಸಿನಿಮಾ38 mins ago

Urvashi Rautela: ನಟಿ ಊರ್ವಶಿ ರೌಟೇಲಾ ಬಟ್ಟೆ ಬಿಚ್ಚಿ, ಸ್ನಾನ ಮಾಡುವ ವಿಡಿಯೊ ಲೀಕ್‌!

United Nations
ವಿದೇಶ46 mins ago

United Nations: ಗಾಜಾದಲ್ಲಿ ಸಂಪೂರ್ಣ ಕದನ ವಿರಾಮ ಘೋಷಿಸಿ; ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ ಭಾರತ

Karnataka Jobs Reservation
ಪ್ರಮುಖ ಸುದ್ದಿ55 mins ago

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Maoists Attack
ದೇಶ1 hour ago

Maoists Attack: ಛತ್ತೀಸ್‌ಗಢದಲ್ಲಿ ಮತ್ತೆ ಮಾವೋವಾದಿಗಳ ಅಟ್ಟಹಾಸ; ಇಬ್ಬರು ಪೊಲೀಸರು ಹುತಾತ್ಮ

Viral Video
ಪ್ರಮುಖ ಸುದ್ದಿ1 hour ago

Viral Video: ಇನ್‌ಸ್ಟಾಗ್ರಾಂನಲ್ಲಿಯೇ ಗಂಡನಿಗೆ ಡಿವೋರ್ಸ್‌‌ ನೀಡಿದ ದುಬೈ ರಾಜಕುಮಾರಿ! ಏನು ಬರೆದಿದ್ದಾಳೆ ನೋಡಿ!

Hardik Pandya
ಕ್ರೀಡೆ1 hour ago

Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ5 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌