Site icon Vistara News

BCCI: ಕೋಚಿಂಗ್​ ಹುದ್ದೆಗೆ ಗಂಭೀರ್ ಸೂಚಿಸಿದ್ದ ಐವರ ಹೆಸರನ್ನು ತಿರಸ್ಕರಿಸಿದ ಬಿಸಿಸಿಐ

BCCI: Gautam Gambhir's 5 Coaching Staff Suggestions Rejected By BCCI, Only 1 Gets Nod

ಮುಂಬಯಿ: ಟೀಮ್​ ಇಂಡಿಯಾದ ಪ್ರಧಾನ ಕೋಚ್​ ಆಗಿ ಮಾಜಿ ಆಟಗಾರ ಗೌತಮ್ ಗಂಭೀರ್​(Gautam Gambhir) ಈಗಾಗಲೇ ನೇಮಕಗೊಂಡಿದ್ದಾರೆ. ಇನ್ನುಳಿದ ಬ್ಯಾಟಿಂಗ್​, ಫೀಲ್ಡಿಂಗ್, ಬೌಲಿಂಗ್​​ ಮತ್ತು ಸಹಾಯಕ ಕೋಚ್​ಗಳ ಆಯ್ಕೆಯಾಗಬೇಕಿದೆ. ಈ ಹುದ್ದೆಗಾಗಿ ಸ್ವತಃ ಗಂಭೀರ್ ಸೂಚಿಸಿರುವ ಐವರ ಹೆಸರನ್ನು ಬಿಸಿಸಿಐ(BCCI) ತಿರಸ್ಕರಿಸಿದೆ ಎಂದು ತಿಳಿದುಬಂದಿದೆ. ಕೇವಲ ಒಂದು ಹೆಸರನ್ನು ಮಾತ್ರ ಅನುಮೋದಿಸಿದೆ ಎನ್ನಲಾಗಿದೆ.

ಗಂಭೀರ್ ಅವರು ಬೌಲಿಂಗ್​ ಕೋಚ್​ ಹುದ್ದೆಗೆ ಕನ್ನಡಿಗ ಆರ್​. ವಿನಯ್​ ಕುಮಾರ್​, ​ಲಕ್ಷ್ಮೀಪತಿ ಬಾಲಾಜಿ(Lakshmipathy Balaji) ಮೋರ್ನೆ ಮೊರ್ಕಲ್ ಹೆಸರು ಸೂಚಿಸಿದ್ದರು. ಬ್ಯಾಟಿಂಗ್​ ಕೋಚ್​ ಆಗಿ ಅಭಿಷೇಕ್ ನಾಯರ್, ಫೀಲ್ಡಿಂಗ್​ ಕೋಚ್​ ಆಗಿ ಜಾಂಟಿ ರೋಡ್ಸ್ ಹೆಸರನ್ನು ಸೂಚಿಸಿದ್ದರು. ಆದರೆ ಮಂಡಳಿಯು ಈ ಎಲ್ಲ ಆಟಗಾರರ ಪೈಕಿ ಒಬ್ಬರ ಆಯ್ಕೆಗೆ ಮಾತ್ರ ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಐಪಿಎಲ್​ನಲ್ಲಿ ಕೆಕೆಆರ್​ ಪರ ಗೌತಮ್ ಗಂಭೀರ್ ಜತೆ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ನಾಯರ್ ಅವರನ್ನು ಟೀಮ್​ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ನೇಮಿಸಿಕೊಳ್ಳಲು ಬಿಸಿಸಿಐ ಸಹಮತ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಟೀಮ್ ಇಂಡಿಯಾದ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್​ ಆಗಿ ಈ ಹಿಂದೆ ಇದ್ದ ಟಿ.ದಿಲಿಪ್ ಅವರನ್ನೇ ಮತ್ತೆ ಮುಂದುವರಿಸಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ. ಈ ಹಿಂದೆ ರವಿಶಾಸ್ತ್ರಿ ಹಾಗೂ ರಾಹುಲ್ ದ್ರಾವಿಡ್​ಗೆ ತಮ್ಮ ಕೋಚಿಂಚ್ ಸಿಬ್ಬಂದಿ ಆಯ್ಕೆ ಮಾಡಲು ಮುಕ್ತ ಅವಕಾಶ ನೀಡಲಾಗಿತ್ತು. ಆದರೆ ಗಂಭೀರ್​ಗೆ ಈ ಸ್ವತಂತ್ರ ನೀಡಲಾಗಿಲ್ಲ ಎನ್ನಲಾಗಿದೆ. ಇದಕ್ಕೆ ನಿರ್ದಿಷ್ಟ ಕಾರಣ ಏನೆಂಬಹುವುದು ತಿಳಿದಿಲ್ಲ.

ಇದನ್ನೂ ಓದಿ SL vs IND: ಇಂದು ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ಯಾರಿಗೆ ಒಲಿಯಲಿದೆ ನಾಯಕತ್ವ?

ಮೂಲಗಳ ಪ್ರಕಾರ ಬಿಸಿಸಿಐ ಬೌಲಿಂಗ್ ಕೋಚ್ ಆಗಿ ಜಹೀರ್​ ಖಾನ್​(Zaheer Khan) ಅವರನ್ನು ನೇಮಕ ಮಾಡಲಿದೆ ಎನ್ನಲಾಗಿದೆ. ಭಾರತ ಕ್ರಿಕೆಟ್ ತಂಡವು ಕಂಡ ಅತ್ಯಂತ ಯಶಸ್ವಿ ಎಡಗೈ ವೇಗದ ಬೌಲರ್ ಎನಿಸಿಕೊಂಡಿರುವ ಜಹೀರ್ ಖಾನ್, ಭಾರತ ಪರ 309 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 610 ವಿಕೆಟ್ ಕಬಳಿಸಿದ್ದಾರೆ.

ಕೋಚ್​ ಹುದ್ದೆಗೆ ಗಂಭೀರ್​ ಅವರನ್ನು ಆಯ್ಕೆ ಮಾಡುವ ಮುನ್ನ ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿವೆ.​

ಹೌದು ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಬಿಸಿಸಿಐ ಗಂಭೀರ್​ ಅವರನ್ನು ಕೋಚ್​ ಆಗಿ ನೇಮಕ ಮಾಡುವಾಗ ಕೊಹ್ಲಿಯನ್ನು ಒಂದು ಮಾತು ಕೂಡ ಕೇಳದೇ ಇರುವುದು ಕೊಹ್ಲಿ ಮತ್ತು ಟೀಮ್​ ಇಂಡಿಯಾ ಅಭಿಮಾನಿಗಳಿಗೆ ಅಸಮಾಧಾನ ಉಂಟುಮಾಡಿದೆ. ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಅನೇಕರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Exit mobile version