Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್ - Vistara News

ಕ್ರಿಕೆಟ್

Darius Visser: ಒಂದೇ ಓವರ್​ನಲ್ಲಿ 39 ರನ್​ ಚಚ್ಚಿ ಯುವರಾಜ್​ ಸಿಂಗ್​ ದಾಖಲೆ ಮುರಿದ ಡೇರಿಯಸ್ ವಿಸ್ಸರ್

Darius Visser: ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 39 ರನ್​ ಗಳಿಸುವ ಮೂಲಕ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ ಸಿಕ್ಸರ್​ಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಟಗಾರನ ಈ ಸಾಧನೆಗೆ ಹಲವು ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Darius Visser
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಸಮೋವಾದ (Samoa) 28 ವರ್ಷದ ಡೇರಿಯಸ್ ವಿಸ್ಸರ್ (Darius Visser) ಟಿ20 ಕ್ರಿಕೆಟ್​ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ಓವರ್​ನಲ್ಲಿ 39 ರನ್​ ಸಿಡಿಸುವ ಮೂಲಕ ಯುವರಾಜ್​ ಸಿಂಗ್(Yuvraj Singh),​ ಕೈರನ್​ ಪೊಲಾರ್ಡ್​, ದೀಪೇಂದ್ರ ಸಿಂಗ್ ಐರಿ ಮತ್ತು ನಿಕೋಲಸ್ ಪೂರನ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಮಂಗಳವಾರ ನಡೆದ 2026ರ ಟಿ20 ವಿಶ್ವಕಪ್(ICC Men’s T20 World Cup) ಪ್ರಾದೇಶಿಕ ಅರ್ಹತಾ (2026 World Cup regional qualifier) ಸುತ್ತಿನ ವನುವಾಟು (Vanuatu) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ವಿಸ್ಸರ್‌ ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಯುವರಾಜ್​ ಸಿಂಗ್​ ಅವರು 2007ರಲ್ಲಿ ನಡೆದಿದ್ದ ಚೊಚ್ಚಲ ಟಿ20 ವಿಶ್ವಕಪ್​ ಟೂರ್ನಿಯ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಅವರ ಓವರ್​ನಲ್ಲಿ 6 ಎಸೆತಗಳಿಗೆ 6 ಸಿಕ್ಸರ್​ ಬಾರಿಸಿ 36 ರನ್​ ಕಲೆ ಹಾಕಿದ್ದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 6 ಎಸೆತಗಳಿಗೆ 6 ಸಿಕ್ಸರ್​ ಸಿಡಿಸಿದ್ದ ಮೊದಲ ನಿದರ್ಶನ ಇದಾಗಿತ್ತು. ಇದಾದ ಬಳಿಕ ಹಲವು ಆಟಗಾರು ಈ ಸಾಧನೆ ಮಾಡಿದ್ದರು.

ಇದೀಗ ಡೇರಿಯಸ್ ವಿಸ್ಸರ್ ಒಂದೇ ಓವರ್​ನಲ್ಲಿ 39 ರನ್​ ಗಳಿಸುವ ಮೂಲಕ ದಿಗ್ಗಜ ಆಟಗಾರರ ದಾಖಲೆಯನ್ನು ಮುರಿದಿದ್ದಾರೆ. ಸದ್ಯ ಸಿಕ್ಸರ್​ಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಟಗಾರನ ಈ ಸಾಧನೆಗೆ ಹಲವು ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

ಅಪಿಯಾದ ಗಾರ್ಡನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಸಮೋವ ತಂಡ ಕೇವಲ 10 ರನ್​ಗಳಿಸುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಕ್ರೀಸಿಗಿಳಿದ ಡೇರಿಯಸ್ ವಿಸ್ಸರ್ ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ ಕೇವಲ 62 ಎಸೆತಗಳಲ್ಲಿ 132 ರನ್​ ಚಚ್ಚಿದರು. ಅವರ ಈ ಸ್ಫೋಟಕ ಬ್ಯಾಟಿಂಗ್ ಇನಿಂಗ್ಸ್​ ವೇಳೆ ಬರೋಬ್ಬರಿ 14 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.​

ಎದುರಾಳಿ ತಂಡದ ನಲಿನ್ ನಿಪಿಕೊ ಎಸೆದ 15ನೇ ಓವರ್​ನಲ್ಲಿ ಸಿಡಿದು ನಿಂತ ವಿಸ್ಸರ್ 39 ರನ್​ ಕಲೆ ಹಾಕುವ ಮೂಲಕ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಓವರ್​ನ ಮೊದಲ ಮೂರು ಎಸೆತಗಳನ್ನು ಸಿಕ್ಸರ್​ಗಟ್ಟಿದ ವಿಸ್ಸರ್, 4ನೇ ಎಸೆತವನ್ನು ಕೂಡ ಸಿಕ್ಸರ್​ಗಟ್ಟಿದ್ದರು. ಆ ಎಸೆತ ನೋಬಾಲ್​ ಆಗಿದ್ದರಿಂದ ಅದರ ಲಾಭ ಪಡೆದ ವಿಸ್ಸೆರ್​ ಮರು ಎಸೆತದಲ್ಲಿ ಮತ್ತೊಂದು ಸಿಕ್ಸರ್​ ಬಾರಿಸಿದರು. 5ನೇ ಎಸೆತದಲ್ಲಿ ಯಾವುದೇ ರನ್ ಬಾರದಿದ್ದರೂ ಅಂತಿಮ ಎಸೆತದಲ್ಲಿ ಮತ್ತೆ ಸಿಕ್ಸರ್​ ಬಾರಿಸಿದರು. ಈ ಎಸೆತ ಕೂಡ ನೋ ಬಾಲ್ ಆಗಿದ್ದರಿಂದ ಮುಂದಿನ ಎಸೆತದಲ್ಲಿ ಮತ್ತೊಂದು ಸಿಕ್ಸರ್​ ದಾಖಲಾಯಿತು. ಇದು ಕೂಡ ನೋ ಬಾಲ್​ ಆದ ಕಾರಣ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸುದರೊಂದಿಗೆ ಒಟ್ಟು 39 ರನ್​ ಕಲೆಹಾಕಿದ್ದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ದಾಖಲೆ ಡೇರಿಯಸ್ ವಿಸ್ಸರ್ ಪಾಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ?

Mohammed Shami: “ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

VISTARANEWS.COM


on

Mohammed Shami
Koo

ಮುಂಬಯಿ: ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಶಮಿ(Mohammed Shami) ಅವರು ಮುಂಬರುವ ರಣಜಿ ಟ್ರೋಫಿ(ranji trophy) ಕ್ರಿಕೆಟ್ ಟೂರ್ನಿಯಲ್ಲಿ ಬಂಗಾಳ ತಂಡದ ಪರ ಆಡಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನಡೆದಿದ್ದ ಏಕದಿನ ಕ್ರಿಕೆಟ್​ ಟೂರ್ನಿ ಬಳಿಕ ಹಿಮ್ಮಡಿಯ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಶಮಿ ಯಾವುದೇ ಕ್ರಿಕೆಟ್​ ಟೂರ್ನಿ ಆಡಿಲ್ಲ.

ಸದ್ಯ ಬೆಂಗಳೂರಿನ ಎನ್​ಸಿಯಲ್ಲಿ ಪುನಶ್ಚೇತನ ಮತ್ತು ಫಿಟ್‌ನೆಸ್‌ ಆರೈಕೆಯಲ್ಲಿರುವ ಶಮಿ ಅಕ್ಟೋಬರ್‌ ತಿಂಗಳಲ್ಲಿ ಶುರುವಾಗಲಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಆಡುವ ಸಾಧ್ಯತೆ ಇದೆ. ಉತ್ತರ ಪ್ರದೇಶ (ಅ.11ರಿಂದ) ಮತ್ತು ಬಿಹಾರ (ಅ. 18ರಿಂದ)ವಿರುದ್ಧದ ಪಂದ್ಯಗಳಲ್ಲಿ ಅವರು ಆಡುಬಹುದು. ಈ ಮೂಲಕ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಶಮಿ ಕಮ್​ಬ್ಯಾಕ್​ ಬಗ್ಗೆ ಜಯ್​ ಶಾ ಹೇಳಿದ್ದೇನು?


ಈ ವರ್ಷದ ಕೊನೆಯಲ್ಲಿ ನಡೆಯುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ವೇಗಿ ಮೊಹಮ್ಮದ್ ಶಮಿ ಭಾಗವಹಿಸುವ ಕುರಿತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ(jay shah) ಹೇಳಿದ್ದಾರೆ.

“ಶಮಿ ಅವರು ತಮ್ಮ ಶಸ್ತ್ರಚಿಕಿತ್ಸೆಯ ನಂತರ ಮೊದಲ ಬಾರಿಗೆ ಕಳೆದ ತಿಂಗಳು ಬೌಲಿಂಗ್ ಪುನರಾರಂಭಿಸಿದ್ದಾರೆ. ಆಸ್ಟ್ರೇಲಿಯಾ ಸರಣಿಯಲ್ಲಿ ಶಮಿ ಆಡುತ್ತಾರೋ ಇಲ್ಲವೋ ಎಂಬುದು ಅವರ ಫಿಟ್‌ನೆಸ್‌ಗೆ ಸಂಬಂಧಿಸಿದ್ದು ಮತ್ತು ಎನ್‌ಸಿಎ ವರದಿಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಶಾ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಶಮಿ ಆಸ್ಟ್ರೇಲಿಯಾದಲ್ಲಿ ಉತ್ತಮ ಟೆಸ್ಟ್ ದಾಖಲೆಯನ್ನು ಹೊಂದಿದ್ದಾರೆ, ಎಂಟು ಪಂದ್ಯಗಳಲ್ಲಿ 32.16 ಸರಾಸರಿಯಲ್ಲಿ 6/56 ರ ಅತ್ಯುತ್ತಮ ಅಂಕಿ ಅಂಶಗಳೊಂದಿಗೆ 31 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಎರಡು ಬಾರಿ ಐದು ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ. ಮುಂದಿನ ವರ್ಷ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯುವ ಕಾರಣ ಶಮಿ ಅವರ ಪಾತ್ರ ನಿರ್ಣಾಯಕ ಹೀಗಾಗಿ ಬಿಸಿಸಿಐ ಶಮಿಯನ್ನು ಆತುರದಿಂದ ಆಡಿಸಲು ಮುಂದಾಗುವುದು ಅನುಮಾನ. ಸಂಪೂರ್ಣ ಚೇತರಿಕೆಯ ಬಳಿಕವೇ ಅವರಿಗೆ ಆಡುವ ಅವಕಾಶ ಕಲ್ಪಿಸಬಹುದು.

34 ವರ್ಷದ ಶಮಿ ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರಿಕೆಟ್

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Manish Pandey: 2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ಶತಕ ಬಾರಿಸುವು ಮೂಲಕ ಈ ಸಾಧನೆ ಮಾಡಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು.

VISTARANEWS.COM


on

Manish Pandey
Koo

ಬೆಂಗಳೂರು: ಕೆ.ಎಲ್​ ರಾಹುಲ್(kl rahul)​ ಅವರು ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ(IPL 2025) ತಮ್ಮ ತವರು ತಂಡವಾದ ಆರ್​ಸಿಬಿ(RCB) ಪರ ಆಡಬೇಕು ಎಂಬ ಬಯಕ್ಕೆಯನ್ನು ಈಗಾಗಲೇ ವ್ಯಕ್ಯಪಡಿಸಿದ್ದರು. ಇದೀಗ ಈ ಸಾಲಿಗೆ ಮತೋರ್ವ ಕನ್ನಡಿಗ ಆಟಗಾರ ಮನೀಷ್​ ಪಾಂಡೆ(Manish Pandey) ಸೇರ್ಪಡೆಗೊಂಡಿದ್ದಾರೆ. ಆರ್​ಸಿಬಿ ಪರ ಮತ್ತೆ ಆಡುವ ಆಸೆ ಇದೆ ಎಂದಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಮಹಾರಾಜ ಕ್ರಿಕೆಟ್​ ಟೂರ್ನಿಯಲ್ಲಿ ಆಡುತ್ತಿರುವ ಮನೀಷ್​ ಪಾಂಡೆ, ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಈ ವಿಚಾರವನ್ನು ತೆರೆದಿಟ್ಟಿದ್ದಾರೆ. ತವರಾದ ಆರ್​ಸಿಬಿ ಪರ ಮತ್ತೊಮ್ಮೆ ಆಡುವ ಅವಕಾಶಕ್ಕಾಗಿ ಕಾಯುತ್ತಿರುವೆ. ಕೊಹ್ಲಿಯ ಜತೆಗೆ ಬ್ಯಾಟಿಂಗ್​ ನಡೆಸುವ ಆಸೆ ಇದೆ. ನಾನು ಮಾತ್ರವಲ್ಲ, ಕರ್ನಾಟಕದ ಎಲ್ಲಾ ಕ್ರಿಕೆಟಿಗರು ಒಮ್ಮೆಯಾದರೂ ಆರ್​ಸಿಬಿ ಪರ ಆಡುವ ಕನಸು ಕಾಣುತಿದ್ದಾರೆ ಎನ್ನುವ ಮೂಲಕ ಆರ್​ಸಿಬಿ ಪರ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇದುವರೆಗೆ 7 ಐಪಿಎಲ್ ತಂಡಗಳ ಪರ ಆಡಿರುವ ಪಾಂಡೆ ಈ ಬಾರಿಯ ಆಟಗಾರರ ಹಾರಜಿಗೆ ಮುನ್ನ ಕೆಕೆಆರ್ ತಂಡದಿಂದ ರಿಲೀಸ್ ಆಗುವುದು ಬಹುತೇಕ ಖಚಿತ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ಶತಕ ಬಾರಿಸುವು ಮೂಲಕ ಈ ಸಾಧನೆ ಮಾಡಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

ಮತ್ತೆ ಆರ್​ಸಿಬಿಗೆ ರಾಹುಲ್​?

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಮತ್ತೆ ರಾಹುಲ್​ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Continue Reading

ಕ್ರೀಡೆ

Yuvraj Singh : ಶೀಘ್ರದಲ್ಲೇ ತೆರೆಗೆ ಬರಲಿದೆ ಯುವರಾಜ್ ಸಿಂಗ್‌ ಬಯೋಪಿಕ್‌

Yuvraj Singh : ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

VISTARANEWS.COM


on

Yuvraj Singh
Koo

ನವದೆಹಲಿ: ಯುವರಾಜ್ ಸಿಂಗ್ (Yuvraj Singh) ಅವರ ಎಲ್ಲಾ ಅಭಿಮಾನಿಗಳಿಗೆ ಒಂದು ಖುಷಿಯ ಸುದ್ದಿ ಇದೆ. ಕ್ಯಾನ್ಸರ್‌ ವಿರುದ್ಧ ಹೋರಾಡಿ ಜಯಿಸಿದ ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಯುವರಾಜ್ ಸಿಂಗ್ ಅವರ ಬಯೋಪಿಕ್ ನಿರ್ಮಾಣವಾಗುತ್ತಿದೆ. ಅನಾರೋಗ್ಯದಿಂದ ಹಿಡಿದು ವಿಶ್ವಕಪ್ ಎತ್ತುವವರೆಗೆ, ಯುವರಾಜ್ ಅವರ ಪ್ರಯಾಣವು ಸ್ಫೂರ್ತಿದಾಯಕವಾಗಿದ್ದು ಅದು ಈ ಸಿನಿಮಾ ಕತೆಯಾಗಲಿದೆ. ವೆರೈಟಿ ವರದಿಯ ಪ್ರಕಾರ, ಟಿ-ಸೀರೀಸ್‌‌‌ನ ಭೂಷಣ್ ಕುಮಾರ್ ಮತ್ತು 200 ನಾಟ್ ಔಟ್ ಸಿನೆಮಾದ ರವಿ ಭಾಗ್‌ಚಂದ್ಕಾ ಈ ಬಯೋಪಿಕ್‌‌ಗೆ ಜೀವ ತುಂಬಲಿದ್ದಾರೆ. ಸಿನಿಮಾ ತಂಡ ಪಾತ್ರವರ್ಗವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಯುವರಾಜ್ ಸಿಂಗ್ ಅವರ ಜೀವನವು ಗೆಲುವು ಮತ್ತು ಉತ್ಸಾಹದ ಕತೆಯಾಗಿದೆ. ಭರವಸೆಯ ಕ್ರಿಕೆಟಿಗನಿಂದ ಹಿಡಿದು ಕ್ರಿಕೆಟ್ ನಾಯಕನಾಗಿ ನಂತರ ನಿಜ ಜೀವನದಲ್ಲಿ ನಾಯಕನಾಗಿ ಸಾಗಿದ ಅವರ ಪ್ರಯಾಣವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಹೇಳಬೇಕಾದ ಮತ್ತು ಕೇಳಬೇಕಾದ ಕಥೆಯನ್ನು ದೊಡ್ಡ ಪರದೆಗೆ ತರಲು ಮತ್ತು ಅವರ ಅಸಾಧಾರಣ ಸಾಧನೆಗಳನ್ನು ತೋರಿಸಲು ನಮಗೆ ಖುಷಿಯಿದೆ ಎಂದು ಸಿನಿಮಾ ತಂಡ ಹೇಳಿದೆ.

ರವಿ ಭಾಗ್ಚಂದ್ಕಾ ಯುವರಾಜ್ ಸಿಂಗ್ ಅವರನ್ನು “ಎಲ್ಲಾ ಅರ್ಥದಲ್ಲೂ ನಿಜವಾದ ದಂತಕಥೆ” ಎಂದು ಕರೆದಿದ್ದಾರೆ. ಯುವರಾಜ್ ಹಲವು ವರ್ಷಗಳಿಂದ ನನ್ನ ಆತ್ಮೀಯ ಸ್ನೇಹಿತ. ಅವರ ನಂಬಲಾಗದ ಕ್ರಿಕೆಟ್ ಪ್ರಯಾಣವನ್ನು ಸಿನಿಮೀಯ ಅನುಭವವಾಗಿ ಪರಿವರ್ತಿಸಲು ಮುಂದಾಗಿದ್ದು, ನಮ್ಮ ಬಗ್ಗೆ ನಂಬಿಕೆ ಹೊಂದಿರುವುದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ. . ಯುವಿ ಕೇವಲ ವಿಶ್ವ ಚಾಂಪಿಯನ್ ಮಾತ್ರವಲ್ಲ, ಪ್ರತಿಯೊಂದು ಅರ್ಥದಲ್ಲೂ ನಿಜವಾದ ದಂತಕಥೆ ಎಂದು ಅವರು ಹೇಳಿದ್ದಾರೆ.

ಯುವರಾಜ್ ಸಿಂಗ್ ಅವರು ಈ ಚಿತ್ರವು ತಮ್ಮದೇ ಆದ ಸವಾಲುಗಳನ್ನು ಹೊಂದಿದೆ. ಅದಾಗ್ಯೂ ಇತರರಿಗೆ ಸ್ಫೂರ್ತಿ ನೀಡಲು ಬಯಸುತ್ತೇವೆ ಎಂದು ಅವರು ಒತ್ತಿ ಹೇಳಿದರು. “ನನ್ನ ಕಥೆಯನ್ನು ಭೂಷಣ್ ಜಿ ಮತ್ತು ರವಿ ಅವರು ವಿಶ್ವದಾದ್ಯಂತ ನನ್ನ ಲಕ್ಷಾಂತರ ಅಭಿಮಾನಿಗಳಿಗೆ ತಲುಪಿಸಲಿದ್ದಾರೆ. ಎಲ್ಲಾ ಏರಿಳಿತಗಳ ನಡುವೆಯೂ ಕ್ರಿಕೆಟ್ ನನ್ನ ದೊಡ್ಡ ಪ್ರೀತಿ ಮತ್ತು ಶಕ್ತಿಯ ಮೂಲವಾಗಿದೆ. ಈ ಚಿತ್ರವು ಇತರರಿಗೆ ತಮ್ಮದೇ ಆದ ಸವಾಲುಗಳನ್ನು ಜಯಿಸಲು ಮತ್ತು ಅವರ ಕನಸುಗಳನ್ನು ಅಚಲ ಉತ್ಸಾಹದಿಂದ ಮುಂದುವರಿಸಲು ಸ್ಫೂರ್ತಿಯಾಗಲಿ ಎಂದು ನಾನು ಭಾವಿಸುತ್ತೇನೆ, “ಎಂದು ಯುವರಾಜ್‌ ಸಿಂಗ್‌ ಹೇಳಿದರು.

ಇದನ್ನೂ ಓದಿ: Bheema Box Office Collection : ಎರಡನೇ ವಾರಾಂತ್ಯದಲ್ಲೂ ಮುನ್ನುಗ್ಗಿದ್ದ ಭೀಮ; 20 ಕೋಟಿ ರೂ. ಕಲೆಕ್ಷನ್‌

ಯುವರಾಜ್ ಸಿಂಗ್ ತಮ್ಮ 13ನೇ ವಯಸ್ಸಿನಲ್ಲಿ ಪಂಜಾಬ್‌‌ನ ಅಂಡರ್-16 ಕ್ರಿಕೆಟ್ ತಂಡದ ಪರ ಆಡುವ ಮೂಲಕ ಪಾದಾರ್ಪಣೆ ಮಾಡಿದ್ದರು. 2007 ರ ಟಿ 20 ವಿಶ್ವಕಪ್ ನಲ್ಲಿ, ಯುವರಾಜ್ ಇಂಗ್ಲೆಂಡ್ ನ ಸ್ಟುವರ್ಟ್ ಬ್ರಾಡ್ ವಿರುದ್ಧ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಗಳನ್ನು ಹೊಡೆಯುವ ಮೂಲಕ ಇತಿಹಾಸ ಬರೆದಿದ್ದರು. ಯುವರಾಜ್ 2019 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.

Continue Reading

ಕ್ರೀಡೆ

Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Virat Kohli : ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಬಾಸಿತ್ ಅಲಿ ಅವರು ಕೊಹ್ಲಿಯ ಕ್ರಿಕೆಟ್​ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಸಯೀದ್ ಅನ್ವರ್, ಜಾವೇದ್ ಮಿಯಾಂದಾದ್ ಮತ್ತು ಇಂಜಮಾಮ್-ಉಲ್-ಹಕ್ ಅವರಂತಹ ದಂತಕಥೆಗಳಿಗೆ ಹೋಲಿಸುವ ಮೂಲಕ ಕೊಹ್ಲಿಯ ಸಾಧನೆ ಏನೂ ಅಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ಭಾರತದ ಬ್ಯಾಟಿಂಗ್ ಸೂಪಸ್ಟಾರ್ ಹಾಗೂ ಆಧುನಿಕ ಯುಗದ ಕ್ರಿಕೆಟ್​ನ ಮಹಾನ್ ಪ್ರತಿಭಾವಂತ ವಿರಾಟ್ ಕೊಹ್ಲಿ (Virat Kohli) ಆಗಸ್ಟ್ 18 ರಂದು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 16 ವರ್ಷಗಳ ಮೈಲಿಗಲ್ಲು ದಾಟಿದ್ದಾರೆ. ಇದು ಅವರ ಅಗಾಧ ಪ್ರತಿಭೆ ಹಾಗೂ ಶ್ರಮಕ್ಕೆ ಸಾಕ್ಷಿಯಾಗಿದೆ. ಕ್ರಿಕೆಟ್ ಆಟದಲ್ಲಿ ಅವರ ಪ್ರಾಬಲ್ಯದ ಬಗ್ಗೆ ಮೆಚ್ಚದವರೇ ಇಲ್ಲ. ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದಾಗಿನಿಂದ ಕೊಹ್ಲಿ ತಮ್ಮ ಅಭಿಮಾನಿಗಳು ಮತ್ತು ಕ್ರಿಕೆಟ್ ವಿಶ್ಲೇಷಕರನ್ನು ಮೋಡಿ ಮಾಡುತ್ತಿದ್ದಾರೆ. ಆದರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ ಕೊಹ್ಲಿ ಬಗ್ಗೆ ಕಳಪೆ ಕಾಮೆಂಟ್ ಮಾಡಿದ್ದಾರೆ. ಅವರನ್ನು ಕಿಂಗ್ ಎಂದು ಕರೆಯಬಾರದು ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮತ್ತು ತರಬೇತುದಾರ ಬಾಸಿತ್ ಅಲಿ ಅವರು ಕೊಹ್ಲಿಯ ಕ್ರಿಕೆಟ್​ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಸಯೀದ್ ಅನ್ವರ್, ಜಾವೇದ್ ಮಿಯಾಂದಾದ್ ಮತ್ತು ಇಂಜಮಾಮ್-ಉಲ್-ಹಕ್ ಅವರಂತಹ ದಂತಕಥೆಗಳಿಗೆ ಹೋಲಿಸುವ ಮೂಲಕ ಕೊಹ್ಲಿಯ ಸಾಧನೆ ಏನೂ ಅಲ್ಲ ಎಂದು ಹೇಳಿದ್ದಾರೆ.

ಬಾಸಿತ್ ಅಲಿ ತಮ್ಮ ಯೂಟ್ಯೂಬ್ ಚಾನೆಲ್​​ನಲ್ಲಿ ಮಾತನಾಡುತ್ತಾ, ಕೊಹ್ಲಿಯದ್ದು ದೊಡ್ಡ ಸಾಧನೆ. ಅವರು ಇನ್ನೂ 3 ವರ್ಷಗಳ ಕಾಲ ಆಡಲಿದ್ದಾರೆ. ಒಟ್ಟು 19 ವರ್ಷಗಳ ಕಾಲ ಆಡಲಿದ್ದಾರೆ. ಅವರು ತುಂಬಾ ಫಿಟ್ ಆಗಿದ್ದಾರೆ. ವಿರಾಟ್ ಕೊಹ್ಲಿಯ ಬದ್ಧತೆ ಉತ್ತಮವಾಗಿದೆ. ಸಚಿನ್, ಅನ್ವರ್, ಜಾವೇದ್, ಇಂಜಮಾಮ್, ಗವಾಸ್ಕರ್, ಮೊಹಮ್ಮದ್ ಯೂಸುಫ್ ಮತ್ತು ಯೂನಿಸ್ ಖಾನ್ ಅವರು ಬದ್ಧತೆಯಿಂದಲೇ ಆಡಿದ್ದಾರೆ ಎಂದು ಹೇಳಿದರು.

ಕೊಹ್ಲಿಯ ಅವಿರತ ಕಠಿಣ ಪರಿಶ್ರಮವು ಅವರ ಯಶಸ್ಸಿಗೆ ನಿರ್ಣಾಯಕ ಎಂದು ಪಾಕಿಸ್ತಾನದ ಮಾಜಿ ಆಯ್ಕೆದಾರ ಉಲ್ಲೇಖಿಸಿದ್ದಾರೆ. ಇಂದಿನ ಮಕ್ಕಳು ಬಾಬರ್ ಅಜಮ್ ಕೊಹ್ಲಿಯ ರೀತಿ ಕವರ್​ ಡ್ರೈವ್​ ಹೊಡೆಯುತ್ತಾರೆ ಎಂದು ಹೇಳುತ್ತಾರೆ. ವಿರಾಟ್ ಕೊಹ್ಲಿ ಆ ರೀತಿ ಮಾಡಲು ಕೊಹ್ಲಿಯ ಸಾಕಷ್ಟು ಅಭ್ಯಾಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎಂಎಸ್ ಧೋನಿ ಬೆಂಬಲದಿಂದ ಕೊಹ್ಲಿ ಕಿಂಗ್​ ಆದರು

ಕೊಹ್ಲಿ ಅಂಡರ್ 19ನಲ್ಲಿ ಕಾಣಿಸಿಕೊಂಡಾಗಿನಿಂದ ಕಳೆದ 16 ವರ್ಷಗಳಿಂದ ಕ್ರಿಕೆಟ್ ಜಗತ್ತನ್ನು ಆಳಿದ್ದಾರೆ. ಆಟಕ್ಕೆ ಇಳಿದ ತಕ್ಷಣದ ಪ್ರಭಾವ ಬೀರಿದ್ದಾರೆ. ಇನ್ನೂ ಕ್ರಿಕೆಟ್​ ಆಟವನ್ನು ಆಡುತ್ತಿದ್ದಾರೆ. ಕೊಹ್ಲಿಗೆ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅವರಂತಹ ಹಿರಿಯ ಆಟಗಾರರ ಬೆಂಬಲವಿದೆ. ಅವರಿಗೆ ಸಾಕಷ್ಟು ಸಹಾಯ ಮಾಡಿತು ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಕೊಹ್ಲಿ ಕ್ರಿಕೆಟ್​​ನ “ಕಿಂಗ್” ಅಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Ishan Kishan : ಮ್ಯಾನ್​ ಆಫ್​ ದಿ ಮ್ಯಾಚ್​ ಪ್ರಶಸ್ತಿ ಪಡೆದು ಮೂಲಕ ಬಿಸಿಸಿಐಗೆ ಪ್ರತ್ಯುತ್ತರ ಕೊಟ್ಟ ಇಶಾನ್ ಕಿಶನ್​

ವಿರಾಟ್ ಕೊಹ್ಲಿಯ ಅತ್ಯುನ್ನತ ಕೌಶಲ್ಯ ಮತ್ತು ಪ್ರಭಾವವನ್ನು ಬಸಿತ್ ಒಪ್ಪಿಕೊಂಡಿದ್ದಾರೆ. ಆದರೆ “ಕಿಂಗ್” ಎಂಬ ಬಿರುದು ಸ್ವತಃ ಭಾರತೀಯ ಬ್ಯಾಟಿಂಗ್ ಮಾಂತ್ರಿಕನಿಗೆ ಸರಿಹೊಂದುವುದಿಲ್ಲ ಎಂದು ಅವರು ಹೇಳಿದ್ದಾರೆ. ಕ್ರಿಕೆಟ್ ಬಗ್ಗೆ ಕೊಹ್ಲಿಯ ಉತ್ಸಾಹಕ್ಕೆ ಸಾಟಿಯಿಲ್ಲ. ಆದರೆ ಕ್ರಿಕೆಟ್​​ ನಿಜವಾದ ರಾಜ ಎಂದು ಅವರು ಒತ್ತಿಹೇಳಿದರು. ಶ್ರೇಷ್ಠ ಡಾನ್ ಬ್ರಾಡ್ಮನ್ ಅಥವಾ ಸಚಿನ್ ತೆಂಡೂಲ್ಕರ್ ಅವರನ್ನೂ ಕಿಂಗ್​ ಎಂದು ಕರೆದಿಲ್ಲ. ಹೀಗಾಗಿ ಕೊಹ್ಲಿಯನ್ನು ಕಿಂಗ್ ಎಂದು ಕರೆಯಲಾಗಿಲ್ಲ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಕಿಂಗ್ ಅಲ್ಲ ಎಂದು ನಾನು ಭಾವಿಸುತ್ತೇನೆ: ಬಾಸಿತ್ ಅಲಿ

ನೀವು ಕಿಂಗ್ ಎಂದು ಕರೆದರೆ ನಾನು ಅಲ್ಲ ಎಂದು ಹೇಳುತ್ತೇನೆ. ಯಾಕೆಂದರೆ ಕ್ರಿಕೆಟ್ ಗಿಂತ ದೊಡ್ಡವರು ಯಾರೂ ಇಲ್ಲ. ಕ್ರಿಕೆಟ್ ದೊಡ್ಡ ವಿಷಯ. ವಿರಾಟ್​ ಕೊಹ್ಲಿಯೇ ಈ ಹೇಳಿಕೆಯನ್ನು ಇಷ್ಟಪಡುವುದಿಲ್ಲ. ತಮ್ಮ ರನ್ ಮತ್ತು ಬ್ಯಾಟಿಂಗ್ ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ ಎಂದು ಬಸಿತ್ ಅಲಿ ಹೇಳಿದ್ದಾರೆ.

ಡಾನ್ ಬ್ರಾಡ್ಮನ್, ಗವಾಸ್ಕರ್ ಮತ್ತು ಸಚಿನ್ ಅವರನ್ನೂ ಕಿಂಗ್​ ಎಂದು ಕರೆಯಲಾಗಿಲ್ಲ. ಆದ್ದರಿಂದ, ವಿರಾಟ್ ಕೊಹ್ಲಿ ಕಿಂಗ್ ಅಲ್ಲ ಎಂದು ನಾನು ಭಾವಿಸುತ್ತೇನೆ. ಅವರೊಬ್ಬ ಶ್ರೇಷ್ಠ ಬ್ಯಾಟರ್​. ಅದನ್ನೇ ಹೇಳುತ್ತೇನೆ. ತವರಿನಲ್ಲಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಭಾರತ 2-0 ಅಂತರದಲ್ಲಿ ಏಕದಿನ ಸರಣಿ ಸೋಲನುಭವಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

Continue Reading
Advertisement
Celina Jaitley
ಸಿನಿಮಾ20 mins ago

Celina Jaitley: ಮರ್ಮಾಂಗ ತೋರಿಸಿದ ದುಷ್ಟ; ಟೀಕೆಗೆ ಒಳಗಾದದ್ದು ನಾನು: ಕರಾಳ ನೆನಪು ಬಿಚ್ಚಿಟ್ಟ ನಟಿ

Viral Video
Latest25 mins ago

Viral Video: ನೆರೆಹೊರೆಯವರೊಂದಿಗೆ ಜಗಳವಾಡುತ್ತಲೇ ಹೃದಯಾಘಾತದಿಂದ ಸತ್ತ ಮಹಿಳೆ!

Kannada New Movie
ಬೆಂಗಳೂರು30 mins ago

Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

Viral Video
Latest32 mins ago

Viral Video: ಈಜಲು ಹೋಗಿದ್ದವನ ಶರ್ಟ್‍ನೊಳಗೆ ನುಸುಳಿದ ಬೃಹತ್‌ ಹಾವು! ಮುಂದೇನಾಯ್ತು ನೋಡಿ

Vinesh Phogat
ದೇಶ45 mins ago

Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

DK Shivakumar
ಕರ್ನಾಟಕ1 hour ago

DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ

Viral News
ದೇಶ1 hour ago

Viral News: ದರೋಡೆ, ಪಿಕ್‌ಪಾಕೆಟಿಂಗ್‌, ಕಳ್ಳತನವೇ ಸಬ್ಜೆಕ್ಟ್‌.. ಕ್ರಿಮಿನಲ್‌ಗಳಿಗಾಗಿಯೇ ಇಲ್ಲಿವೆ ಶಾಲೆಗಳು; ಫೀಸ್‌ ಕೇಳಿದ್ರೆ ಶಾಕ್‌ ಆಗೋದು ಗ್ಯಾರಂಟಿ

Supreme Court
ಪ್ರಮುಖ ಸುದ್ದಿ1 hour ago

Supreme Court: ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!‌

Mohammed Shami
ಕ್ರೀಡೆ1 hour ago

Mohammed Shami: ರಣಜಿ ಟೂರ್ನಿಗೆ ಮೊಹಮ್ಮದ್ ಶಮಿ ಲಭ್ಯ?

assault case
ಬೆಂಗಳೂರು2 hours ago

Assault Case : ಬೆಂಗಳೂರಿನಲ್ಲಿ ಯುವಕನಿಗೆ ಪ್ರಜ್ಞೆ ತಪ್ಪಿಸಿ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌