Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ - Vistara News

ಕ್ರಿಕೆಟ್

Dinesh Karthik : ಆರ್​​ಸಿಬಿ ಬ್ಯಾಟಿಂಗ್ ಕೋಚ್​, ಮಾರ್ಗದರ್ಶಕರಾಗಿ ದಿನೇಶ್​ ಕಾರ್ತಿಕ್ ನೇಮಕ

Dinesh Karthik : ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 🙌 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

VISTARANEWS.COM


on

Dinesh Karthik
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ (Dinesh Karthik) ಅವರನ್ನು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನಲ್ಲಿ (IPL 2025) ಬ್ಯಾಟಿಂಗ್ ಕೋಚ್ ಮತ್ತು ತಂಡದ ಮಾರ್ಗದರ್ಶಕರಾಗಿ ನೇಮಕ ಮಾಡಿದೆ. ಐಪಿಎಲ್ ಫ್ರಾಂಚೈಸಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನ ತನ್ನ ಅಧಿಕೃತ ಹ್ಯಾಂಡಲ್ ಮೂಲಕ ಈ ಘೋಷಣೆಯನ್ನು ಪ್ರಕಟಿಸಿದೆ.

ನಮ್ಮ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ಹೊಸ ಅವತಾರದಲ್ಲಿ ಆರ್​​​ಸಿಬಿಗೆ ಸ್ವಾಗತಿಸುತ್ತೇವೆ. ಆರ್​ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಡಿಕೆ ಕಾರ್ಯನಿರ್ವಹಿಸಲಿದ್ದಾರೆ. ನೀವು ಕಾರ್ತಿಕ್ ಅವರನ್ನು ಕ್ರಿಕೆಟ್​ನಿಂದ ಹೊರತೆಗೆಯಬಹುದು ಆದರೆ ಕ್ರಿಕೆಟ್ ಅನ್ನು ಅವರಿಂದ ಹೊರತೆಗೆಯಲು ಸಾಧ್ಯವಿಲ್ಲ! 12 ಮ್ಯಾನ್​ ಆರ್ಮಿ. ಅವರಿಗಾಗಿ ಪ್ರೀತಿಯನ್ನು ಸ್ಪುರಿಸಿ ಎಂದು ಬರೆದುಕೊಂಡಿದೆ.

ದಿನೇಶ್ ಕಾರ್ತಿಕ್ ಬ್ಯಾಟಿಂಗ್ ವೈಭವ

ಕೆಳ ಮಧ್ಯಮ ಕ್ರಮಾಂಕದ ಬ್ಯಾಟರ್​ ಆಗಿರುವ ಕಾರ್ತಿಕ್, ಮೈದಾನದ ಎಲ್ಲೆಡೆ ಚೆಂಡು ಕಳುಹಿಸಿ ಸ್ಕೋರ್ ಮಾಡುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ನಂತರ, ಕೀಪರ್- ಬ್ಯಾಟರ್​ ಐಪಿಎಲ್ 2022 ಕ್ಕೆ ಮುಂಚಿತವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು. ಐಪಿಎಲ್ ವೃತ್ತಿಜೀವನದಲ್ಲಿ ಆರು ತಂಡಗಳನ್ನು ಪ್ರತಿನಿಧಿಸಿರುವ ಕಾರ್ತಿಕ್, ಆರ್ಸಿಬಿ ಪರ 53 ಇನಿಂಗ್ಸ್​ಗಳಲ್ಲಿ 162.96 ಸ್ಟ್ರೈಕ್​ ರೇಟ್​​ನಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 937 ರನ್ ಗಳಿಸಿದ್ದಾರೆ.

ಅವರು ಇತ್ತೀಚೆಗೆ ಐಪಿಎಲ್ 2024 ರಲ್ಲಿ ಅದ್ಭುತ ಯಶಸ್ಸನ್ನು ಅನುಭವಿಸಿದ್ದಾರೆ. 36.22 ಸರಾಸರಿ ಮತ್ತು 187.36 ಸ್ಟ್ರೈಕ್ ರೇಟ್​​ನಲ್ಲಿ 326 ರನ್ ಗಳಿಸಿದ್ದಾರೆ. ಆದಾಗ್ಯೂ, ನಾವು ಮೆಗಾ ಹರಾಜು ಬರುತ್ತಿರುವುದನ್ನು ಪರಿಗಣಿಸಿ, ಕಾರ್ತಿಕ್ ಐಪಿಎಲ್​​ನಿಂದ ಹೊರಕ್ಕೆ ನಡೆದರು.

ಇದನ್ನೂ ಓದಿ: Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

ಕಾರ್ತಿಕ್ ಮೂರು ಸ್ವರೂಪಗಳಲ್ಲಿ 180 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ ಅವರು ಏಕೈಕ ಟೆಸ್ಟ್ ಶತಕ ಮತ್ತು 17 ಅರ್ಧಶತಕಗಳೊಂದಿಗೆ 3463 ರನ್ ಗಳಿಸಿದ್ದಾರೆ. ಕಾರ್ತಿಕ್ 172 ಔಟ್​ಗಳನ್ನು ಸಹ ಮಾಡಿದ್ದಾರೆ. ಅವುಗಳಲ್ಲಿ ಹೆಚ್ಚಿನವು ಸ್ಪಂಪ್​​ಗಳ ಹಿಂದೆ ಹಾಗೂ ಕೆಲವು ಔಟ್​ಫೀಲ್ಡ್​ ಕ್ಯಾಚ್​ಗಳು. 2022ರ ಟಿ20 ವಿಶ್ವಕಪ್​​ನಲ್ಲಿ ಬಾಂಗ್ಲಾದೇಶ ವಿರುದ್ಧ ಕೊನೆಯ ಬಾರಿ ಆಡಿದ್ದರು.

20007 ವಿಶ್ವ ಕಪ್ ವಿಜೇತ

2007 ರ ಟಿ 20 ವಿಶ್ವಕಪ್ ವಿಜೇತ ತಾರೆ ಕಾರ್ತಿಕ್​ ಐಪಿಎಲ್​ನಲ್ಲಿ ಭರ್ಜರಿ ಅನುಭವ ಹೊಂದಿದ್ದಾರೆ. 257 ಪಂದ್ಯಗಳನ್ನು ಆಡಿದ ಅವರು 26.32 ಸರಾಸರಿಯಲ್ಲಿ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ತಮ್ಮ ಐಪಿಎಲ್ ಪ್ರಯಾಣವನ್ನು ಡೆಲ್ಲಿ ಡೇರ್ ಡೆವಿಲ್ಸ್ (ಈಗ ಕ್ಯಾಪಿಟಲ್ಸ್) ನೊಂದಿಗೆ ಪ್ರಾರಂಭಿಸಿದ್ದರು. ಆರ್ ಸಿಬಿ ಹೊರತುಪಡಿಸಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಅನ್ನು ಪ್ರತಿನಿಧಿಸಿದರು.

ಬ್ಯಾಟಿಂಗ್ ಕೋಚ್ ಮತ್ತು ಬ್ಯಾಟಿಂಗ್ ಮೆಂಟರ್ ಆಗಿ ನೇಮಕಗೊಂಡ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್, ವೃತ್ತಿಪರ ಮಟ್ಟದಲ್ಲಿ ಕೋಚಿಂಗ್ ನನಗೆ ನಂಬಲಾಗದಷ್ಟು ರೋಮಾಂಚನಕಾರಿಯಾಗಿದೆ. ಇದು ನನ್ನ ಜೀವನದ ಹೊಸ ಅಧ್ಯಾಯ. ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ. ಒಬ್ಬ ಆಟಗಾರನಾಗಿ ನನ್ನ ಅನುಭವಗಳನ್ನು ತಂಡದ ಅಭಿವೃದ್ಧಿಗೆ ಕೊಡುಯಾಗಿ ನೀಡುತ್ತೇನೆ. ಹೆಚ್ಚುವರಿ ಮೌಲ್ಯವನ್ನು ತರುತ್ತೇನೆ ಎಮದು ಹೇಳಿದ್ದಾರೆ.

ಕ್ರಿಕೆಟ್ ಯಶಸ್ಸು ಕೇವಲ ತಾಂತ್ರಿಕ ಪ್ರಾವೀಣ್ಯತೆಯ ಮೇಲೆ ಮಾತ್ರವಲ್ಲ, ಬುದ್ಧಿವಂತಿಕೆ ಮತ್ತು ಸಂಯಮದ ಮೇಲೂ ಅವಲಂಬಿತವಾಗಿದೆ ಎಂದು ನಾನು ನಂಬುತ್ತೇನೆ. ನಮ್ಮ ಬ್ಯಾಟಿಂಗ್ ಗುಂಪಿಗೆ ತರಬೇತಿ ನೀಡಲು ಮತ್ತು ಮಾರ್ಗದರ್ಶನ ನೀಡಲು ನಾನು ಉತ್ಸುಕನಾಗಿದ್ದೇನೆ. ಆಟಗಾರರ ವಿಧಾನವನ್ನು ಪರಿಷ್ಕರಿಸಲು ಮಾತ್ರವಲ್ಲದೆ ಒತ್ತಡದಲ್ಲಿ ಉತ್ತಮ ಸಾಧನೆ ಮಾಡಲು ಅಗತ್ಯ ಅರಿವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತೇನೆ. ನಾನು ಆರ್ಸಿಬಿಯೊಂದಿಗೆ ನನ್ನ ಒಡನಾಟವನ್ನು ಮುಂದುವರಿಸುವುದು ಖುಷಿಯ ವಿಚಾರ ಎಂದು ಅವರು ಹೇಳಿದರು.

ಆರ್​ಸಿಬಿ ದೊಡ್ಡ ಪ್ರಮಾಣದ ಅಭಿಮಾನಿ ಬಳಗ ಹೊಂದಿದೆ. ಆದರೆ ಇನ್ನೂ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿಲ್ಲ. ಫ್ರಾಂಚೈಸಿ ನಾಯಕ ಮತ್ತು ತರಬೇತುದಾರರ ಹಲವಾರು ಸಂಯೋಜನೆಗಳನ್ನು ಪ್ರಯತ್ನಿಸಿದೆ ಮತ್ತು ಪರೀಕ್ಷಿಸಿದೆ. ಆದರೆ ಏನೂ ಕೆಲಸ ಮಾಡಿಲ್ಲ. ಆದರೆ 2008ರಲ್ಲಿ ಡೆಕ್ಕನ್ ಚಾರ್ಜರ್ಸ್ ವಿರುದ್ಧ 2011ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹಾಗೂ 2016ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಫೈನಲ್​​ನಲ್ಲಿ ಆರ್​ಸಿಬಿ ಸೋತಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat- Anushka: ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೊರಿಸಿದ ಕೊಹ್ಲಿ; ವಿಡಿಯೊ ವೈರಲ್​ 

Virat- Anushka: ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat- Anushka
Koo

ಬಾರ್ಬಡೋಸ್​: ದ್ವೀಪ ರಾಷ್ಟ್ರ ಬಾರ್ಬಡೋಸ್‌ನಲ್ಲಿ ಅಬ್ಬರಿಸುತ್ತಿರುವ ಅಪಾಯಕಾರಿ ಬೆರಿಲ್ ಚಂಡಮಾರುತದ(Hurricane Beryl) ಪ್ರಭಾವದಿಂದ ಬಾರ್ಬಡೋಸ್​ನಲ್ಲಿಯೇ ತಂಗಿರುವ ಟಿ20 ವಿಶ್ವ ಚಾಂಪಿಯನ್​ ಟೀಮ್​ ಇಂಡಿಯಾ ಆಟಗಾರರು ಗುರುವಾರ ಭಾರತಕ್ಕೆ ವಿಮಾನ ಏರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿದೆ.​

ಸದ್ಯ ಟೀಮ್​ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್​ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್‌ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್​​ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20 ವಿಶ್ವಕಪ್​ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್​ ಆಗಿತ್ತು.

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.

Continue Reading

ಕ್ರೀಡೆ

India T20I schedule: 2026ರ ಟಿ20 ವಿಶ್ವಕಪ್​ಗೂ ಮುನ್ನ ಭಾರತ ಆಡಲಿದೆ 34 ಟಿ20 ಪಂದ್ಯ

India T20I schedule: ಮುಂದಿನ ಟಿ20 ವಿಶ್ವಕಪ್​ಗೂ ಮುನ್ನ ಮುಂದಿನ 2 ವರ್ಷಗಳ ಭಾರತದ ಟಿ20 ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. 2026ರಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

VISTARANEWS.COM


on

India T20I schedule
Koo

ಮುಂಬಯಿ: 2026ರಲ್ಲಿ ನಡೆಯುವ ಟಿ20 ವಿಶ್ವಕಪ್(t20 world cup 2026)​ ಟೂರ್ನಿಗೂ ಮುನ್ನ ಹಾಲಿ ಚಾಂಪಿಯನ್​ ಭಾರತ ತಂಡ(Team India) ಬರೋಬ್ಬರಿ 34 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು(team india upcoming t20 series) ಆಡಲಿದೆ. ಇದರಲ್ಲಿ ಒಟ್ಟು 8 ಸರಣಿಗಳು(India T20I schedule) ಸೇರಿವೆ. ತಲಾ ನಾಲ್ಕು ಸರಣಿಗಳು ವಿದೇಶದಲ್ಲಿ ಮತ್ತು ತವರಿನಲ್ಲಿ ಆಡಲಿದೆ.

ಕಳೆದ ಶನಿವಾರ ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್​ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಫೈನಲ್​ ನಡೆದು ಒಂದು ವಾರ ಆಗುವ ಮುನ್ನವೇ ಮುಂದಿನ ಟಿ20 ವಿಶ್ವಕಪ್​ಗೂ ಮುನ್ನ ಮುಂದಿನ 2 ವರ್ಷಗಳ ಭಾರತದ ಟಿ20 ಸರಣಿಯ ವೇಳಾಪಟ್ಟಿ ಕೂಡ ಪ್ರಕಟಗೊಂಡಿದೆ. 2026ರಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿದೆ.

ಜುಲೈ 6ರಿಂದ ಆರಂಭಗೊಳ್ಳಲಿರುವ ಜಿಂಬಾಬ್ವೆ ವಿರುದ್ಧದ ಸರಣಿಯ ಮೂಲಕ ಭಾರತದ ನೂತನ ಟಿ20 ಋತು ಪ್ರಾರಂಭಗೊಳ್ಳಲಿದೆ. ಇದು 5 ಪಂದ್ಯಗಳ ಸರಣಿಯಾಗಿದ್ದು, ಈ ತಂಡ ಯುವ ಆಟಗಾರರನ್ನೇ ನೆಚ್ಚಿಕೊಂಡಿದೆ. ರೋಹಿತ್​, ಜಡೇಜಾ ಮತ್ತು ವಿರಾಟ್​ ಕೊಹ್ಲಿ ಟಿ20ಗೆ ವಿದಾಯ ಹೇಳಿರುವ ಕಾರಣ ಈ ಸ್ಥಾನಕ್ಕೆ ಯುವ ಆಟಗಾರರನ್ನು ಸಿದ್ಧಪಡಿಸುವ ಜವಾಬ್ದಾರಿ ನೂತನ ಕೋಚ್​ ಆಗಲಿರುವವರ ಹೆಗಲೇರಲಿದೆ.

ಇದನ್ನೂ ಓದಿ Team India stuck in Barbados: ಟೀಮ್​ ಇಂಡಿಯಾ ತವರಿಗೆ ವಾಪಸಾಗುವುದು ಮತ್ತಷ್ಟು ವಿಳಂಬ

2025ರಲ್ಲಿ ಭಾರತ 4 ಸರಣಿಗಳನ್ನು ಆಡಲಿದೆ. ಪ್ರವಾಸಿ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಸರಣಿ, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯದಲ್ಲಿ ಕ್ರಮವಾಗಿ 3 ಮತ್ತು 5 ಪಂದ್ಯಗಳ ಸರಣಿ, ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ತವರಲ್ಲಿ 5 ಪಂದ್ಯಗಳ ಸರಣಿಯನ್ನಾಡಲಿದೆ. 2026ರಲ್ಲಿ ಕಿವೀಸ್​ ವಿರುದ್ಧ ತವರಿನಲ್ಲಿ 5 ಪಂದ್ಯಗಳ ಸರಣಿ ಆಡಲಿದೆ. ಈ ಸರಣಿ ಬಳಿಕ ಟಿ20 ವಿಶ್ವಕಪ್​ ಟೂರ್ನಿಯನ್ನು ಆಡಲಿದೆ.

2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯ ಮಾಹಿತಿ ಇಂತಿದೆ.

ಬಾಂಗ್ಲಾ ಸರಣಿಯ ವೇಳಾಪಟ್ಟಿ

ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ

ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ

ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ


ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು

ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ

ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ


ಜನವರಿ-22 ಮೊದಲ ಟಿ20. ತಾಣ:ಚೆನ್ನೈ

ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ

ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​

ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ

ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ

ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

Continue Reading

ಪ್ರಮುಖ ಸುದ್ದಿ

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

David Miller : ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

VISTARANEWS.COM


on

David Miller :
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ ಆಘಾತಕಾರಿ ಸೋಲಿನ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಡೇವಿಡ್ ಮಿಲ್ಲರ್ ಟಿ 20ಯಿಂದ ನಿವೃತ್ತರಾಗುವ ವದಂತಿಗಳು ಬಂದಿದ್ದವು. ಅದಕ್ಕವರು ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಭರವಸೆ ಭಗ್ನಗೊಂಡಿತ್ತು. ದಕ್ಷಿಣ ಆಫ್ರಿಕಾ ಫೈನಲ್​​ನಲ್ಲಿ ಭಾರತದ ವಿರುದ್ಧ 7 ರನ್​ಗಳ ಸೋಲು ಅನುಭವಿಸಿತ್ತು. ಪಂದ್ಯದ ಅಂತಿಮ ಕ್ಷಣಗಳಲ್ಲಿ ದಕ್ಷಿಣ ಆಫ್ರಿಕಾ ಕೈಚೆಲ್ಲಿತ್ತು. ಅದರಲ್ಲೂ ಡೇವಿಡ್ ಮಿಲ್ಲರ್​​ ಕೊನೇ ಓವರ್​​ನ ಮೊದಲ ಎಸೆತಕ್ಕೆ ಔಟಾಗಿದ್ದರು. ಇದು ಅವರಿಗೆ ಬೇಸರ ಮೂಡಿಸಿತ್ತು.

15ನೇ ಓವರ್​ನಲ್ಲಿ ಅಕ್ಷರ್ ಪಟೇಲ್ ಓವರ್​ಗೆ ಎರಡು ಸಿಕ್ಸರ್ ಹಾಗೂ ನಾಲ್ಕು ಬೌಂಡರಿ ಬಾರಿಸುವ ಮೂಲಕ ಹೆನ್ರಿಚ್​ ಕ್ಲಾಸೆನ್​ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವಿನ ಅವಕಾಶ ತಂದುಕೊಟ್ಟಿದ್ದರು. 16ನೇ ಓವರ್ ಮುಗಿದಾಗ ದಕ್ಷಿಣ ಆಫ್ರಿಕಾಕ್ಕೆ ಅಂತಿಮ ನಾಲ್ಕು ಓವರ್​ಗಳಲ್ಲಿ ಕೇವಲ 26 ರನ್​ಗಳನ್ನು ಬಾರಿಸಬೇಕಿತ್ತು.

ಇದನ್ನೂ ಓದಿ: IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

ಕ್ಲಾಸೆನ್ 17 ನೇ ಓವರ್​ನ ಮೊದಲ ಎಸೆತದಲ್ಲೇ ಔಟಾದರು. ಈ ವೇಳೆ ತಂಡವನ್ನು ಗುರಿ ಮುಟ್ಟಿಸುವ ಕೆಲಸ ಡೇವಿಡ್ ಮಿಲ್ಲರ್ ಅವರ ಹೆಗಲ ಮೇಲಿತ್ತು. ಅಂತಿಮವಾಗಿ ಅಂತಿಮ ಓವರ್​ನಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ಎದುರಿಸಿದ ಅನುಭವಿ ಬ್ಯಾಟರ್​​ 16 ರನ್​​ಗಳಿಗೆ ಔಟಾದರು. 20ನೇ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಪಾಂಡ್ಯ ಅವರ ಲೋ ಫುಲ್ ಟಾಸ್ ಅನ್ನು ನೇರವಾಗಿ ಹೊಡೆದರು. ಸೂರ್ಯಕುಮಾರ್ ಯಾದವ್ ರೋಚಕ ಕ್ಯಾಚ್ ಅನ್ನು ಹಿಡಿದು ಮಿಲ್ಲರ್ ಅವರನ್ನು ಹಿಂದಕ್ಕೆ ಕಳುಹಿಸಿದರು. ಭಾರತವು ಪಂದ್ಯವನ್ನು 7 ರನ್​ಗಳಿಂದ ಗೆದ್ದಿತು. ಒಂದು ಹಂತದಲ್ಲಿ ಗೆಲುವು ದಕ್ಷಿಣ ಆಫ್ರಿಕಾಗೆ ಎಂದು ತೋರುತ್ತಿತ್ತು. ಅಂತಿಮವಾಗಿ ಭಾರತದ ಪರವಾಯಿತು.

ನಿವೃತ್ತಿ ವದಂತಿಗಳ ಬಗ್ಗೆ ಡೇವಿಡ್ ಮಿಲ್ಲರ್ ಹೇಳಿಕೆಯೇನು?

ದಕ್ಷಿಣ ಆಫ್ರಿಕಾ ಸೋಲಿನ ಬಳಿಕ ಡೇವಿಡ್ ಮಿಲ್ಲರ್ ಟಿ20 ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳು ಹರಿದಾಡಿದವು. 35 ವರ್ಷದ ಆಟಗಾರ ಕ್ರಿಕೆಟ್​​ನ ಕಿರು ಸ್ವರೂಪದಿಂದ ನಿವೃತ್ತರಾಗಿದ್ದಾರೆ ಎಂದು ವದಂತಿಗಳು ತಿಳಿಸಿವೆ. ಆದಾಗ್ಯೂ, ಡೇವಿಡ್ ಮಿಲ್ಲರ್ ಮಂಗಳವಾರ (ಜುಲೈ 2) ಆ ವದಂತಿಗಳನ್ನು ತಳ್ಳಿಹಾಕಿದರು ಮತ್ತು ತಮ್ಮ ರಾಷ್ಟ್ರೀಯ ತಂಡಕ್ಕಾಗಿ ಟಿ 20 ಪಂದ್ಯಗಳನ್ನು ಆಡಲು ಲಭ್ಯವಿರುವುದಾಗಿ ಹೇಳಿದರು.

ಕೆಲವು ವರದಿಗಳ ಹಿನ್ನೆಲೆಯಲ್ಲಿ ಹೇಳುತ್ತಿದ್ದೇನೆ. ನಾನು ಟಿ 20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿಲ್ಲ. ನಾನು ದಕ್ಷಿಣ ಆಫ್ರಿಕಾ ಪರ ಆಡಲು ಲಭ್ಯವಿದ್ದೇನೆ. ಅತ್ಯುತ್ತಮ ಫಲಿತಾಂಶ ಇನ್ನೂ ಬರಬೇಕಿದೆ ಎಂದು ಡೇವಿಡ್ ಮಿಲ್ಲರ್ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

IPL 2025: ಎರಡಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶವಿರಲಿಲ್ಲ. ಕಳೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳನ್ನು ಸೇರಿಸಿದ್ದರಿಂದ ಬಿಸಿಸಿಐ ಉಳಿಸಿಕೊಳ್ಳುವ ಆಟಗಾರರ ಸಂಖ್ಯೆಯನ್ನು ಕಡಿಮೆ ಮಾಡಿತ್ತು.

VISTARANEWS.COM


on

IPL 2025
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಫ್ರಾಂಚೈಸಿಗಳು ಮುಂದಿನ ಮೂರು ಋತುಗಳಿಗೆ ತಂಡದಲ್ಲಿ ಆಟಗಾರರನ್ನು ಉಳಿಸಿಕೊಳ್ಳುವ ಸಂಖ್ಯೆ ಹೆಚ್ಚಿಸುವಂತೆ ಬಿಸಿಸಿಐಗೆ ವಿನಂತಿಸಿವೆ ಎಂದು ವರದಿಯಾಗಿದೆ. ಮುಂಬರುವ ಐಪಿಎಲ್​ಗೆ ಮೆಗಾ ಹರಾಜು ನಡೆಯುತ್ತೆ. ಫ್ರಾಂಚೈಸಿಗಳು ಹೆಚ್ಚಿನ ಆಟಗಾರರನ್ನು ಬಿಡುಗಡೆ ಮಾಡಬೇಕಾಗುತ್ತದೆ. 2022ರ ಮೆಗಾ ಹರಾಜಿನಲ್ಲಿ ಎಂಟು ಫ್ರಾಂಚೈಸಿಗಳಿಗೆ ಗರಿಷ್ಠ ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಕ್ಯಾಪ್ಡ್ ಅಥವಾ ಅನ್​ಕ್ಯಾಪ್ಡ್​​ ಸೇರಿದಂತೆ ಗರಿಷ್ಠ ಮೂವರು ಭಾರತೀಯ ಆಟಗಾರರನ್ನು ಉಳಿಸಿಕೊಳ್ಳಲು ತಂಡಗಳಿಗೆ ಅವಕಾಶ ನೀಡಲಾಗಿತ್ತು.

ಎರಡಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶವಿರಲಿಲ್ಲ. ಕಳೆದ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಎಂಬ ಎರಡು ಹೊಸ ತಂಡಗಳನ್ನು ಸೇರಿಸಿದ್ದರಿಂದ ಬಿಸಿಸಿಐ ಉಳಿಸಿಕೊಳ್ಳುವ ಆಟಗಾರರ ಸಂಖ್ಯೆಯನ್ನು ಕಡಿಮೆ ಮಾಡಿತ್ತು. ಹಿಂದಿನ ಮೆಗಾ ಹರಾಜಿನಲ್ಲಿ, ಆಟಗಾರರ ಉಳಿಸಿಕೊಳ್ಳುವಿಕೆ ಹರಾಜಿನ ಸಮಯದಲ್ಲಿ ರೈಟ್ ಟು ಮ್ಯಾಚ್ (ಆರ್​ಟಿಎಂ) ಕಾರ್ಡ್​​ಗಳ ಬಳಕೆಯ ಮೂಲಕ ಐದು ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ ನೀಡಲಾಗಿತ್ತು.

ಬಿಸಿಸಿಐ ಆಟಗಾರರ ಹರಾಜು ಪ್ರಕ್ರಿಯೆ ಆರಂಭ

ಮುಂಬರುವ ಐಪಿಎಲ್ 2025 ಮೆಗಾ ಹರಾಜಿಗೆ, ಬಿಸಿಸಿಐ ಉಳಿಸಿಕೊಳ್ಳುವ ನಿಯಮವನ್ನು ಇನ್ನೂ ಪ್ರಕಟಿಸಿಲ್ಲ. ಆದಾಗ್ಯೂ, ಮಂಡಳಿಯು ಈಗಾಗಲೇ ಉಳಿಸಿಕೊಳ್ಳುವ ಆಟಗಾರರ ನೀತಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಕ್ರಿಕ್​ಬಜ್​ ವರದಿ ಮಾಡಿದೆ. ಈ ತಿಂಗಳ ಕೊನೆಯಲ್ಲಿ ಫ್ರಾಂಚೈಸಿ ಮಾಲೀಕರ ಸಭೆಯಲ್ಲಿ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಬಿಸಿಸಿಐ ಹಂಗಾಮಿ ಸಿಇಒ ಮತ್ತು ಐಪಿಎಲ್ ಉಸ್ತುವಾರಿ ಹೇಮಂಗ್ ಅಮಿನ್ ಈಗಾಗಲೇ ಫ್ರಾಂಚೈಸಿಗಳ ಸಿಇಒಗಳೊಂದಿಗೆ ಸಮಾಲೋಚನೆ ನಡೆಸಿ ಉಳಿಸಿಕೊಳ್ಳುವ ನೀತಿಯ ಬಗ್ಗೆ ಅವರ ಅಭಿಪ್ರಾಯಗಳನ್ನು ಪಡೆದಿದ್ದಾರೆ.

ಹೆಚ್ಚಿನ ಫ್ರಾಂಚೈಸಿಗಳು ಐದರಿಂದ ಏಳು ಆಟಗಾರರನ್ನು ಉಳಿಸಿಕೊಳ್ಳಲು ವಿನಂತಿ ಮಾಡಿದ್ದರೆ. ಫ್ರಾಂಚೈಸಿಗಳಲ್ಲಿ ಒಂದು ಎಂಟು ಆಟಗಾರರನ್ನು ಉಳಿಸಿಕೊಳ್ಳಲು ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಅದೇ ಸಮಯದಲ್ಲಿ, ಕೆಲವು ಫ್ರಾಂಚೈಸಿಗಳು ಉಳಿಸಿಕೊಳ್ಳುವ ನಿಯಮ ಇರಬಾರದು ಎಂದು ಹೇಳಿದೆ ಎನ್ನಲಾಗಿದೆ. ಮತ್ತೊಂದು ಫ್ರಾಂಚೈಸಿ ಆರ್​ಟಿಎಂ ಮಾತ್ರ ಹೊಂದಲು ವಿನಂತಿಸಿದೆ ಮತ್ತು ಯಾವುದೇ ಅವಕಾಶವಿಲ್ಲ.

ಇದನ್ನೂ ಓದಿ: Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

ಈ ವರ್ಷದ ಮೇ ತಿಂಗಳಲ್ಲಿ, ಹಿರಿಯ ವೀಕ್ಷಕವಿವರಣೆಗಾರ ಹರ್ಷ ಭೋಗ್ಲೆ ಅವರು ಕೆಕೆಆರ್ ಸಿಇಒ ವೆಂಕಿ ಮೈಸೂರು ಅವರು ಎಂಟು ಆರ್ಟಿಎಂ ಕಾರ್ಡ್ಗಳನ್ನು ಉಳಿಸಿಕೊಳ್ಳಲು ಬಯಸಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಅಂತಹ ಕ್ರಮವು ಆಟಗಾರರಿಗೆ ಹರಾಜಿನಲ್ಲಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ ಮತ್ತು ಫ್ರಾಂಚೈಸಿಗಳು ಸಹ ಅವರನ್ನು ಮರಳಿ ಖರೀದಿಸಲು ಸಾಧ್ಯವಾಗುತ್ತದೆ.

ಫ್ರಾಂಚೈಸಿಗಳೊಂದಿಗೆ ಮಾತನಾಡಿದ ನಂತರ, ಬಿಸಿಸಿಐ ಈಗ ಪ್ರಕ್ರಿಯೆಯನ್ನು ಅಂತಿಮಗೊಳಿಸುತ್ತಿದೆ ಮತ್ತು ಮಾಲೀಕರ ಸಭೆಯಲ್ಲಿ ತನ್ನ ಅಂತಿಮ ನಿರ್ಧಾರವನ್ನು ಬಹಿರಂಗಪಡಿಸಲಿದೆ. ಏತನ್ಮಧ್ಯೆ, ಭಾರತದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಹಲವಾರು ಪ್ರಮುಖ ಆಟಗಾರರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಬಿಸಿಸಿಐ ಸದ್ಯಕ್ಕೆ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

Continue Reading
Advertisement
Actor Darshan his brother-in-law homeless
ಕ್ರೈಂ7 seconds ago

Actor Darshan: ಒಂದೇ ಸೆಲ್‌ನಲ್ಲಿದ್ದರೂ ಶಿಷ್ಯನ ಮಾತನಾಡಿಸದ ದರ್ಶನ್‌, ʼಸಾಕು ನಿಮ್ಮ ಸಹವಾಸʼ ಎಂದ ಡಿ ಬಾಸ್

Virat- Anushka
ಕ್ರೀಡೆ13 mins ago

Virat- Anushka: ಬೆರಿಲ್ ಚಂಡಮಾರುತದ ದೃಶ್ಯವನ್ನು ವಿಡಿಯೊ ಕಾಲ್​ ಮೂಲಕ ಪತ್ನಿ ಅನುಷ್ಕಾಗೆ ತೊರಿಸಿದ ಕೊಹ್ಲಿ; ವಿಡಿಯೊ ವೈರಲ್​ 

Parliament Sessions
ದೇಶ28 mins ago

Parliament Sessions: ತಮ್ಮ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸಂಸದರಿಗೆ‌ ಕುಡಿಯಲು ನೀರು ಕೊಟ್ಟ ಪ್ರಧಾನಿ ಮೋದಿ- ವಿಡಿಯೋ ಇದೆ

Nanna Devaru Serial Mayuri And NarasimhaRaju Grand Son Acting
ಕಿರುತೆರೆ35 mins ago

Nanna Devaru Serial: ಕಿರುತೆರೆಗೆ ಕಮ್‌ಬ್ಯಾಕ್‌ ಮಾಡಿದ ಮಯೂರಿ;  ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೊ!

Safe Drive Tips
ಆಟೋಮೊಬೈಲ್38 mins ago

Safe Drive Tips: ಮಳೆಯಲ್ಲಿ ಬೈಕ್ ಓಡಿಸುವಾಗ ಈ ಸಂಗತಿಗಳು ಗಮನದಲ್ಲಿರಲಿ

India T20I schedule
ಕ್ರೀಡೆ46 mins ago

India T20I schedule: 2026ರ ಟಿ20 ವಿಶ್ವಕಪ್​ಗೂ ಮುನ್ನ ಭಾರತ ಆಡಲಿದೆ 34 ಟಿ20 ಪಂದ್ಯ

high beam lights
ಕರ್ನಾಟಕ49 mins ago

High Beam Lights‌: ರಾತ್ರಿ ಹೈ ಬೀಮ್‌ ಲೈಟ್‌ ಹಾಕಿಕೊಂಡು ವಾಹನ ಚಲಾಯಿಸುತ್ತೀರಾ? ಕೇಸು ಬೀಳುತ್ತೆ ಎಚ್ಚರ!

Cheetah Safari
ಪರಿಸರ1 hour ago

Cheetah Safari: ಬನ್ನೇರುಘಟ್ಟದಲ್ಲಿ ʻಚಿರತೆ ಸಫಾರಿʼ ಶುರು; ಚಿರತೆಗಳನ್ನು ಕಾಡೊಳಗೇ ನೋಡಿ ಆನಂದಿಸಿ!

Viral News
Latest1 hour ago

Viral News: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

Hathras Stampede
ಪ್ರಮುಖ ಸುದ್ದಿ1 hour ago

Hathras Stampede: ಹತ್ರಾಸ್‌ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 116ಕ್ಕೆ ಏರಿಕೆ; ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌