World Cup 2023: ಸೂಪರ್‌ಸ್ಟಾರ್‌ ರಜನಿಕಾಂತ್‌ಗೆ ವಿಶ್ವ ಕಪ್​ ಗೋಲ್ಡನ್​ ಟಿಕೆಟ್​ - Vistara News

South Cinema

World Cup 2023: ಸೂಪರ್‌ಸ್ಟಾರ್‌ ರಜನಿಕಾಂತ್‌ಗೆ ವಿಶ್ವ ಕಪ್​ ಗೋಲ್ಡನ್​ ಟಿಕೆಟ್​

ICC World Cup 2023: ಬಿಸಿಸಿಐ ಕಾರ್ಯದರ್ಶಿ ಜಯ್​​ ಶಾ ಅವರು ಚೆನ್ನೈನಲ್ಲಿರುವ ರಜನಿ ಮನೆಗೆ ತೆರಳಿ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ರಜನಿಕಾಂತ್ ಅವರು ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 169 ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡರು.

VISTARANEWS.COM


on

ICC World Cup Rajnikanth Presented With Golden Ticket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇದೇ ಮೊದಲ ಬಾರಿಗೆ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ವಿಶ್ವಕಪ್​(ICC World Cup 2023) ನಡೆಯುತ್ತಿದೆ. ಈ ಮಹತ್ವದ ಟೂರ್ನಿ ಅಕ್ಟೋಬರ್​ 5ರಿಂದ ಆರಂಭವಾಗಿ ನವೆಂಬರ್​ 19ರ ತನಕ ನಡೆಯಲಿದೆ. ಈ ಟೂರ್ನಿಗೆ ವಿಶೇಷ ಅತಿಥಿಯಾಗಿ ರಜನಿಕಾಂತ್‌ ಅವರಿಗೆ ಬಿಸಿಸಿಐ ಗೋಲ್ಡನ್​ ಟಿಕೆಟ್​ ನೀಡಿ ಆಹ್ವಾನಿಸಿದೆ. ಬಿಸಿಸಿಐ ಕಾರ್ಯದರ್ಶಿ ಜಯ್​​ ಶಾ ಅವರು ಚೆನ್ನೈನಲ್ಲಿರುವ ರಜನಿ ಮನೆಗೆ ತೆರಳಿ ಈ ಗೋಲ್ಡನ್ ಟಿಕೆಟ್ ನೀಡಿದ್ದಾರೆ. ರಜನಿಕಾಂತ್ ಅವರು ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 169 ಚಿತ್ರಗಳಲ್ಲಿ ನಟಿಸಿದ್ದಾರೆ.

ಈಗಾಗಲೇ ಬಾಲಿವುಡ್ ಬಿಗ್ ಬಿ ಅಮಿತಾಭ್‌ ಬಚ್ಚನ್, ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ಜಯ್ ಶಾ ಈ ಗೋಲ್ಡನ್ ಟಿಕೆಟ್‌ಗಳನ್ನು ನೀಡಿದ್ದಾರೆ. ಈ ಗೋಲ್ಡನ್ ಟಿಕೆಟ್ ಪಡೆದ ಸೆಲೆಬ್ರಿಟಿಗಳು ವಿಐಪಿ ಲಾಂಜ್‌ನಲ್ಲಿ ಸಂಪೂರ್ಣ ಉಚಿತವಾಗಿ ಕುಳಿತು ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಬಹುದು. ರಜನಿಕಾಂತ್‌ಗೆ ಗೋಲ್ಡನ್ ಟಿಕೆಟ್ ನೀಡಿದ ನಂತರ, ಬಿಸಿಸಿಐ ಮತ್ತು ಜಯ್ ಶಾ ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಟ್ವಿಟರ್‌ನಲ್ಲಿ ʻʻಬಿಸಿಸಿಐ ಗೌರವ ಕಾರ್ಯದರ್ಶಿ ಜಯ್​​ ಶಾ  ಅವರು ರಜನಿಕಾಂತ್‌ ಅವರಿಗೆ ಗೋಲ್ಡನ್ ಟಿಕೆಟ್ ನೀಡಿದರು. ನಟ ಭಾಷೆ ಮತ್ತು ಸಂಸ್ಕೃತಿಯನ್ನು ಮೀರಿ ಲಕ್ಷಾಂತರ ಜನರ ಹೃದಯದಲ್ಲಿ ಛಾಪು ಮೂಡಿಸಿದ್ದಾರೆ. ODI ವಿಶ್ವಕಪ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ICC World Cup 2023: ಭಾರತ ಬಿಟ್ಟು ವಿಶ್ವಕಪ್​ ಗೆಲ್ಲುವ ತಂಡ ಹೆಸರಿಸಿದ ಗಂಭೀರ್​

ಶಾರುಖ್‌ ಖಾನ್ ಪ್ರಚಾರ ರಾಯಭಾರಿ

ಬಾಲಿವುಡ್​ನ(Bollywood) ಸ್ಟಾರ್​ ಹಾಗೂ ಹಿರಿಯ ನಟ ಶಾರುಖ್‌ ಖಾನ್(Shah Rukh Khan) ಅವರು ಏಕದಿನ ವಿಶ್ವಕಪ್ ಟೂರ್ನಿಯ ಪ್ರಚಾರ ಅಂಬಾಸಿಡರ್‌ ಆದ್ದಾರೆ. ಈಗಾಗಲೇ ಅವರ ಧ್ವನಿಯಲ್ಲಿ ಎಲ್ಲ 10 ಜೆರ್ಸಿ, ತಂಡಗಳ ಸೋಲು ಗೆಲುವು ಸಂಭ್ರಮದ ಕ್ಷಣ ಮತ್ತು ಅಭಿಮಾನಿಗಳ ಸಂಭ್ರಮಾಚರಣೆ, ಕುತೂಹಲ, ಕಪಿಲ್​ದೇವ್​ ಅವರು ಮೊದಲ ಬಾರಿ ವಿಶ್ವಕಪ್ ಎತ್ತಿ ಹಿಡಿದ ದೃಶ್ಯ, 2011ರ ವಿಶ್ವಕಪ್​ನಲ್ಲಿ ಸಚಿನ್​ ಬ್ಯಾಟಿಂಗ್ ನೋಟ​, ಸಚಿನ್​ ಅವರ ಅಭಿಮಾನಿ ಭಾರತದ ಧ್ವಜವನ್ನು ಬೀಸುತ್ತಾ ಸಚಿನ್​ಗೆ ಚಿಯರ್​ ಅಪ್ ಮಾಡುತ್ತಿರುವುದು, ವಿರಾಟ್​ ಕೊಹ್ಲಿಯ ಫಿಲ್ಡಿಂಗ್​ ಹೀಗೆ ಹಲವು ದೃಶ್ಯಗಳನ್ನು ಈ ವಿಡಿಯೊದಲ್ಲಿ ತೋರಿಸಲಾಗಿದೆ.

ಒಟ್ಟು 48 ಪಂದ್ಯಗಳು

ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್​ 8 ರಂದು ಆಡಲಿದೆ. ಅಕ್ಟೋಬರ್ 14 ರಂದು ಭಾರತ ತನ್ನ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದೆ ಈ ಪಂದ್ಯ ಕಣ್ತುಬಿಂಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading

ಸ್ಯಾಂಡಲ್ ವುಡ್

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Kiccha Sudeep: ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಇದೀಗ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ.27) ಬೆಳಗ್ಗೆ ಭೇಟಿ ನೀಡಿದ್ದಾರೆ.

VISTARANEWS.COM


on

Kiccha Sudeep visit chamundeshwari temple
Koo

ಮೈಸೂರು: ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ (Kiccha Sudeep) ಇಂದು (ಮೇ 27) ಬೆಳಗ್ಗೆ ಭೇಟಿ ನೀಡಿದ್ದಾರೆ. ನಾಡ ಅದಿದೇವತೆ ದರ್ಶನ ಪಡೆದಿದ್ದಾರೆ ಕಿಚ್ಚ ಸುದೀಪ್. ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ (Kiccha Sudeep visit chamundeshwari temple) ಫ್ಯಾನ್ಸ್‌ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಮ್ಯಾಕ್ಸ್‌ ಟ್ರೈಲರ್‌ ರಿಲೀಸ್‌ ಮಾಡಲಿದ್ದಾರೆ ಎನ್ನಲಾಗಿದೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರೆಸ್ಟ್ ಆಯೋಜಿಸಿದ್ದ, ಯಕ್ಷ ಧ್ರುವ ಪಟ್ಲ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾತಾಡುತ್ತಿದ್ದ ಕಿಚ್ಚ ಸುದೀಪ್ ತಮಗಿರುವ ತುಳುನಾಡಿನ ಕನೆಕ್ಷನ್ ಬಗ್ಗೆ ಮಾತಾಡಿದ್ದರು. ಅವರ ತಾಯಿ ತುಳುನಾಡಿನವರಾಗಿದ್ದು, ಅವರು ತುಂಬಾ ಚೆನ್ನಾಗಿ ತುಳು ಮಾತಾಡುತ್ತಾರೆ. ಆದರೆ, ತಮಗೆ ಮಾತ್ರ ಎರಡೇ ಎರಡು ತುಳು ಪದಗಳನ್ನು ಹೇಳಿಕೊಟ್ಟಿದ್ದಾರಷ್ಟೇ ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಕಿಚ್ಚ ಸುದೀಪ್‌ ಎಕ್ಸ್‌ನಲ್ಲಿ ʻʻಮಹಾಬಲಿಪುರಂನಲ್ಲಿ ʻಮ್ಯಾಕ್ಸ್‌ʼಗಾಗಿ ಒಂದು ಸುತ್ತು. ಸುದೀರ್ಘ 10 ತಿಂಗಳ ಪ್ರಯಾಣ. ನಾನು‌ ಪ್ರತಿ ಘಳಿಗೆಯನ್ನು ಆನಂದಿಸಿದೆ. ಸೆಟ್‌ನಲ್ಲಿ ಅದ್ಭುತ ತಂಡ ಮತ್ತು ಸುಂದರ ತಾರೆಯನ್ನು ಒಳಗೊಂಡಿತ್ತು. ಧನ್ಯವಾದಗಳು ಧನು ಸರ್. ನನ್ನನ್ನು ಚೆನ್ನಾಗಿ ಹೋಸ್ಟ್ ಮಾಡಿದ್ದಕ್ಕಾಗಿ ಧನ್ಯವಾದಗಳು, ವಿಜಯ್ ಮತ್ತು ಇಡೀ ತಂಡಕ್ಕೆ ಧನ್ಯವಾದʼʼಎಂದು ಬರೆದುಕೊಂಡಿದ್ದರು.

ಇದಕ್ಕೂ ಕೆಲವು ದಿನಗಳ ಹಿಂದೆ ಟ್ರೈಲರ್ ರಫ್ ಕಟ್ ಆಗಿರುವ ಬಗ್ಗೆ ಸುದೀಪ್ ಮಾಹಿತಿ ಹಂಚಿಕೊಂಡಿದ್ದರು. ಸುದೀಪ್‌ ಎಕ್ಸ್‌ನಲ್ಲಿ ʻʻಮ್ಯಾಕ್ಸ್ (Max) ಕ್ಲೈಮ್ಯಾಕ್ಸ್‌ನ ಪ್ರಮುಖ ಭಾಗ ಪೂರ್ಣಗೊಳಿಸಲಾಗಿದೆ. ಇಲ್ಲಿಯವರೆಗೆ ಚಿತ್ರೀಕರಿಸಿದ ಅಷ್ಟೂ ಶಾಟ್‌ಗಳನ್ನು ನೋಡಿದೆ. ಚಿತ್ರದ ಪ್ರತಿ ಬಿಟ್ ನೋಡಿ, ತಂಡದ ಎಫರ್ಟ್‌ ಕಂಡು ಸಂತೋಷವಾಗಿದೆ. ಸ್ವಲ್ಪ ಭಾಗ ಚಿತ್ರೀಕರಣ ಬಾಕಿ ಇದೆ. ಟ್ರೈಲರ್ ವೇಳೆ ರಫ್ ಕಟ್ ಸಹ ನೋಡಿದೆ ಮತ್ತು ಅದು ನನ್ನನ್ನು ರೋಮಾಂಚನಗೊಳಿಸಿತುʼʼ ಎಂದು ಬರೆದುಕೊಂಡಿದ್ದರು.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷಿಯನ್‌ಗಳೂ ಇದ್ದಾರೆ. ಹಾಗೆಯೇ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್‌ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸಿನಿಮಾ

Ragini Dwivedi: ರಾಗಿಣಿ ದ್ವಿವೇದಿ ಅಭಿನಯದ ʻಬಿಂಗೊʼ ಚಿತ್ರದ ಡಬ್ಬಿಂಗ್‌ ಮುಕ್ತಾಯ

Ragini Dwivedi: ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

VISTARANEWS.COM


on

Ragini Dwivedi Bingo Movie Dubbing complete
Koo

ಬೆಂಗಳೂರು: “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಬಿಂಗೊ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ನಾಯಕ – ನಾಯಕಿಯಾಗಿ ನಟಿಸಿರುವ ಸಿನಿಮಾ ಇದು. “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಸಿನಿಮಾಕ್ಕಿದೆ.

ಇದನ್ನೂ ಓದಿ: Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!

ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ. ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಏಕ್ತಾ ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ನಂದ್ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

Sahara Movie Trailer: ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ʻಸಹಾರಾʼದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Sahara Movie Trailer Out Sarika Rao
Koo

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ ಟ್ರೈಲರ್‌ (Sahara Movie Trailer) ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಟ್ರೈಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆರ್‌ಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಬಿಡುಗಡೆ ಬಳಿಕ ಕ್ರಿಕೆಟರ್ ಕೃಷ್ಣಪ್ಪ ಗೌತಮ್ ಮಾತನಾಡಿ, ʻʻಕ್ರಿಕೆಟ್ ಕಥೆಯನ್ನು ಒಳಗೊಂಡಿರುವ ಚಿತ್ರ ಇದು. ಟ್ರೈಲರ್‌ ತುಂಬ ನೈಜವಾಗಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿʼʼ ಎಂದರು. ನಟಿ ಸಾರಿಕಾ ರಾವ್ ಮಾತನಾಡಿ, ʻʻಇದು ಸ್ಫೂರ್ತಿದಾಯಕ ಕಥೆ. ನಾನು ಜವಾಬ್ದಾರಿಯಿಂದ ನನ್ನ ಪಾತ್ರ ನಿರ್ವಹಿಸಿದ್ದೇನೆ ಎಂದುಕೊಳ್ಳುತ್ತೇನೆ. ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಕರಾದ ಮಜೇಶ್ ಅವರು ಕನ್ನಡ ಇಂಡಸ್ಟ್ರೀಗೆ ಕೊಡುತ್ತಿದ್ದಾರೆ. ಕಾಣದ ಕೈಗಳು ಅಂದರೆ ಸುದೀಪ್ ಸರ್, ಸಿಂಪಲ್ ಸುನಿ ಸರ್, ಅಶ್ವಿನಿ ಮೇಡಂ ಅವರೆಲ್ಲಾ ಹೊಸಬರಿಗೆ ಸಾಥ್ ಕೊಟ್ಟಿದ್ದಾರೆʼʼ ಎಂದು ಸಂತಸ ಹಂಚಿಕೊಂಡರು.

ಕನ್ನಡದಲ್ಲಿ ಮೊದಲ ಮಹಿಳಾ ಕ್ರಿಕೆಟ್ ಪ್ರಧಾನ ಸಿನಿಮಾವಾಗಿರುವ ʻಸಹಾರಾʼದಲ್ಲಿ ಮಂಡ್ಯ ಹುಡುಗಿ ಕ್ರಿಕೆಟರ್ ಆದ ಕಥೆಯನ್ನು ಕಟ್ಟಿಕೊಡಲಾಗಿದೆ. ಮಂಡ್ಯ ಹುಡುಗಿಯ ಪಾತ್ರದಲ್ಲಿ ಸಾರಿಕಾ ರಾವ್ ಅಭಿನಯಿಸಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: Dhruva Sarja: ಬಾಲಿವುಡ್‌ ಸಿನಿಮಾಗೆ ಎಂಟ್ರಿ ಕೊಡ್ತಾರಾ ಧ್ರುವ ಸರ್ಜಾ? ಬಿಗ್‌ ಬಜೆಟ್‌ ಚಿತ್ರದಲ್ಲಿ ಸಹೋದರನ ಪಾತ್ರ?

ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಮಹಿಳಾ ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಪಿ.ಆರ್.ಸಂಸ್ಥೆ ಸಪೋರ್ಟ್ ಮಾಡಿದೆ. ಆಡಿಯೋ ಹಕ್ಕನ್ನು ಕೂಡ ಪಡೆದುಕೊಂಡಿದೆ. ಕೆಆರ್.ಜಿ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.

ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ. ಇದರೊಟ್ಟಿಗೆ ಚಿತ್ರಕ್ಕೆ ಆಂಥೋನಿ ರುತ್ ವಿನ್ಸೆಂಟ್ ಕ್ಯಾಮರಾವರ್ಕ್ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಕೊಟ್ಟಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ಕೊರಿಯೋಗ್ರಫಿ ಚಿತ್ರದಲ್ಲಿದೆ.

Continue Reading
Advertisement
Vijayapura news
ಪ್ರಮುಖ ಸುದ್ದಿ1 hour ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ2 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ3 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ3 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ3 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ3 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ3 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ3 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ3 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌