IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ - Vistara News

ಕ್ರಿಕೆಟ್

IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

IPL 2024 : ಗುರ್ಬಾಜ್ ತನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಮತ್ತು ಪ್ರತಿದಿನ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಬಹಿರಂಗಪಡಿಸಿದರು. 22 ವರ್ಷದ ವಿಕೆಟ್ ಕೀಪರ್ ಇದು ನಿಜವಾಗಿಯೂ ಕಠಿಣ ಪರಿಸ್ಥಿತಿ ಎಂದು ಹೇಳಿದ್ದಾರೆ. ಆದರೆ ಕೆಕೆಆರ್ ಬಗ್ಗೆ ತಮ್ಮ ಬದ್ಧತೆ ಮತ್ತು ಜವಾಬ್ದಾರಿಯನ್ನು ಪುನರುಚ್ಚರಿಸಿದರು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಫ್ಘಾನಿಸ್ತಾನದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ರಹಮಾನುಲ್ಲಾ ಗುರ್ಬಾಜ್ (Rahmanullah Gurbaz) ಅವರು ಐಪಿಎಲ್ 2024 (IPL 2024) ಪ್ಲೇಆಫ್​ ಪಂದ್ಯದಲ್ಲಿ ಆಡಿದ್ದಾರೆ ಆದರೆ ಅವರು ಅನಾರೋಗ್ಯ ಪೀಡಿತ ತಮ್ಮ ತಾಯಿಯನ್ನು ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಿ ಬಂದು ಆಡಿರುವುದಾಗಿ ಹೇಳಿದ್ದಾರೆ. ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಕೆಕೆಆರ್ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿತ್ತು. ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಗುರ್ಬಾಜ್ ಅವರ ಮೊದಲ ಪಂದ್ಯವಾಗಿತ್ತು. ಯಾಕೆಂದರೆ ಓಪನಿಂಗ್ ಸ್ಪಾಟ್​ ಇಂಗ್ಲೆಂಡ್​​ನ ಫಿಲ್ ಸಾಲ್ಟ್ ತುಂಬಿದ್ದ ಕಾರಣ ಅವರಿಗೆ ಇದುವರೆಗೆ ಅವಕಾಶ ಸಿಕ್ಕಿರಲಿಲ್ಲ. ಸಾಲ್ಟ್ ರಾಷ್ಟ್ರೀಯ ಕರ್ತವ್ಯಕ್ಕೆ ಮರಳಿದ್ದು ಗುರ್ಬಾಜ್​ಗೆ ಅವಕಾಶ ಸಿಕ್ಕಿದೆ.

ಆಕ್ರಮಣಕಾರಿ ಬಲಗೈ ಬ್ಯಾಟರ್​​ 14 ಎಸೆತಗಳಲ್ಲಿ, ಎರಡು ಬೌಂಡರಿಗಳು ಮತ್ತು ಅಷ್ಟೇ ಸಿಕ್ಸರ್​ಗಳೊಂದಿಗೆ 23 ರನ್ ಗಳಿಸಿದ್ದಾರೆ. ಆ ಮೂಲಕ ಕೆಕೆಆರ್​ಗೆ 6.2 ಓವರ್​ಗಳು ಬಾಕಿ ಇರುವಾಗ 160 ರನ್​ಗಳ ಗುರಿಯನ್ನು ಬೆನ್ನಟ್ಟಲು ಸಹಾಯ ಮಾಡಿದ್ದರು. ಅಹಮದಾಬಾದ್ನಲ್ಲಿ ನಡೆದ ಕ್ವಾಲಿಫೈಯರ್ 1 ರಲ್ಲಿ ಎಸ್​ಆರ್​ಎಚ್ ತಂಡವನ್ನು ಎಂಟು ವಿಕೆಟ್​​ಗಳಿಂದ ಸೋಲಿಸಿ ಮೇ 26 ರಂದು ಚೆನ್ನೈನಲ್ಲಿ ನಡೆಯಲಿರುವ ಐಪಿಎಲ್ 2024 ಫೈನಲ್​ಗೆ ಕೆಕೆಆರ್​ ಪ್ರವೇಶಿಸಿದೆ.

ತಾಯಿಯನ್ನು ತೊರೆದು ಐಪಿಎಲ್ ಆಡಿದ ಗುರ್ಬಾಜ್

ಕೆಕೆಆರ್ ಮತ್ತು ಎಸ್ಆರ್​ಎಚ್​​ ಕ್ವಾಲಿಫೈಯರ್ 1 ರ ನಂತರ ಮಾತನಾಡಿದ , ಗುರ್ಬಾಜ್. ಪಂದ್ಯಾವಳಿಯ ಮಧ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯೊಂದಿಗೆ ಇರಲು ಮನೆಗೆ ಮರಳಿದ್ದೆ ಎಂಬುದಾಗಿ ಹೇಳಿದರು. ಸುಮಾರು ಹತ್ತು ದಿನಗಳ ಹಿಂದೆ, ಫಿಲ್ ಸಾಲ್ಟ್ ರಾಷ್ಟ್ರೀಯ ಕರ್ತವ್ಯಗಳಿಗೆ ತೆರಳಿದ ನಂತರ ಕೆಕೆಆರ್ ತಂಡದ ಮ್ಯಾನೇಜ್ಮೆಂಟ್ ಅವರನ್ನು ಸಂಪರ್ಕಿಸಿತ್ತು. ಐಪಿಎಲ್ 2024 ಪ್ಲೇಆಫ್​ಗೆ ಅವರ ಅಗತ್ಯವಿದೆ ಎಂದು ಹೇಳಿತ್ತು. ಭಾವನಾತ್ಮಕ ಗೊಂದಲ ಮತ್ತು ಕಠಿಣ ನಿರ್ಧಾರದ ಹೊರತಾಗಿಯೂ ಅಫ್ಘಾನಿಸ್ತಾನ ಕ್ರಿಕೆಟಿಗ ನಿರ್ಣಾಯಕ ಐಪಿಎಲ್ 2024 ಪ್ಲೇಆಫ್​ಗಳಲ್ಲಿ ಕೆಕೆಆರ್ ತಂಡವನ್ನು ಬೆಂಬಲಿಸಲು ಭಾರತಕ್ಕೆ ಮರಳಲು ನಿರ್ಧರಿಸಿದರು.

ಗುರ್ಬಾಜ್ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಬದ್ಧತೆಗಳನ್ನು ಸಮತೋಲನಗೊಳಿಸುವ ಸವಾಲನ್ನು ಒಪ್ಪಿಕೊಂಡಿದ್ದಾರೆ. ಆದರೆ ಅವರು ತಮ್ಮ ತಾಯಿಯ ಆಶೀರ್ವಾದವನ್ನು ಪಡೆದಿದ್ದಾರೆ.

ಇದನ್ನೂ ಓದಿ: IPL 2024 : ಕೊಹ್ಲಿಯನ್ನು ಹೊಗಳಿ ಆರ್​​ಸಿಬಿಗೆ ವಿದಾಯ ಹೇಳಿದ ವಿಜಯ್​ ಮಲ್ಯ

ಗುರ್ಬಾಜ್ ತನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಮತ್ತು ಪ್ರತಿದಿನ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಬಹಿರಂಗಪಡಿಸಿದರು. 22 ವರ್ಷದ ವಿಕೆಟ್ ಕೀಪರ್ ಇದು ನಿಜವಾಗಿಯೂ ಕಠಿಣ ಪರಿಸ್ಥಿತಿ ಎಂದು ಹೇಳಿದ್ದಾರೆ. ಆದರೆ ಕೆಕೆಆರ್ ಬಗ್ಗೆ ತಮ್ಮ ಬದ್ಧತೆ ಮತ್ತು ಜವಾಬ್ದಾರಿಯನ್ನು ಪುನರುಚ್ಚರಿಸಿದರು.

ನನ್ನ ತಾಯಿ ಇನ್ನೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ: ಗುರ್ಬಾಜ್

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಹಮಾನುಲ್ಲಾ ಗುರ್ಬಾಜ್, “ನನ್ನ ತಾಯಿ ಇನ್ನೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನಾನು ಅಲ್ಲಿಗೆ ಹೋಗಿದ್ದೆ (ಅಫ್ಘಾನಿಸ್ತಾನದಲ್ಲಿರುವ ಮನೆಗೆ). ಫಿಲ್ ಸಾಲ್ಟ್ ನಿರ್ಗಮಿಸಿದ ನಂತರ ನನಗೆ ಕೆಕೆಆರ್​ನಿಂದ ಕರೆ ಬಂತು. ಹೀಗಾಗಿ ಬಂದೆ ಎಂದು ಹೇಳಿದ್ದಾರೆ.

ನನ್ನ ತಾಯಿ ಇನ್ನೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ನಾನು ಪ್ರತಿದಿನ ಅವರೊಂದಿಗೆ ಮಾತನಾಡುತ್ತೇನೆ. ಆದರೆ ನನ್ನ ಕೆಕೆಆರ್ ಕೂಡ ನನ್ನ ಕುಟುಂಬ ಎಂದು ನನಗೆ ತಿಳಿದಿದೆ, ಅವರಿಗೆ ಇಲ್ಲಿ ನನ್ನ ಅಗತ್ಯವಿತ್ತು. ಆದ್ದರಿಂದ, ನಾನು ಅಫ್ಘಾನಿಸ್ತಾನದಿಂದ ಹಿಂತಿರುಗಿದೆ. ಇದು ಕಠಿಣ ಆದರೆ ನಾನು ನಿರ್ವಹಿಸಬೇಕಾಗಿದೆ ಎಂದು ಹೇಳಿದ್ದಾರೆ

ಒಬ್ಬ ಕ್ರಿಕೆಟಿಗನಾಗಿ, ಏನು ಮಾಡಬೇಕೆಂದು ನಿಮಗೆ ತಿಳಿದಿದೆ. ಲೀಗ್ ಕ್ರಿಕೆಟ್​ ಲೀಗ್​ನಲ್ಲಿ ನಾಲ್ಕು ವಿದೇಶಿ ಆಟಗಾರರು ಮಾತ್ರ ಪ್ಲೇಯಿಂಗ್​ ಇಲೆವೆನ್​ನಲ್ಲಿ ಆಡಬಹುದು. ನಿಮಗೆ ಅವಕಾಶವಿದ್ದರೆ ನೀವು ಪ್ರಯತ್ನಿಸಬೇಕು ಮತ್ತು ಉತ್ತಮವಾಗಿ ಮಾಡಬೇಕು. ನಿಮಗೆ ಅವಕಾಶವಿಲ್ಲದಿದ್ದರೆ, ನೀವು ಚೆನ್ನಾಗಿ ತಯಾರಿ ನಡೆಸಬೇಕು ಮತ್ತು ಸಿದ್ಧರಾಗಿರಬೇಕು. ನಿಮಗೆ ಅವಕಾಶ ಸಿಕ್ಕಾಗಲೆಲ್ಲಾ, ನೀವು ಸಿದ್ಧರಾಗಿರಬೇಕು ಎಂದು ಗುರ್ಬಾಜ್​ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Manish Pandey: 2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು

VISTARANEWS.COM


on

Manish Pandey
Koo

ಬೆಂಗಳೂರು: ಟೀಮ್​ ಇಂಡಿಯಾದ, ಕರ್ನಾಟಕ ಮೂಲದ ಕ್ರಿಕೆಟಿಗ ಮನೀಷ್​ ಪಾಂಡೆ(Manish Pandey) ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಚರ್ಚೆಗೆ ಕಾರಣವಾಗಿರುವುದು ದಂಪತಿಗಳ ಇನ್​ಸ್ಟಾಗ್ರಾಮ್​ ಖಾತೆಯ ಪೋಸ್ಟ್​.

2019ರಲ್ಲಿ ಕ್ರಿಕೆಟಿಗ ಮನೀಶ್ ಪಾಂಡೆ ಚಿತ್ರನಟಿ ಆಶ್ರಿತಾ ಶೆಟ್ಟಿ(Ashrita Shetty) ಅವರ ಕೈ ಹಿಡಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಆಶ್ರಿತಾ ಶೆಟ್ಟಿ ಅವರು ಅರ್ಜುನ್ ಕಾಪಿಕಾಡ್ ಅಭಿನಯದ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದ್ದರು. ಇದೀಗ ಈ ಜೋಡಿ ಸದ್ಯದಲ್ಲೇ ದೂರವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಹೌದು, ಮನೀಶ್ ಪಾಂಡೆ ಮತ್ತು ಆಶ್ರಿತಾ ಶೆಟ್ಟಿ ತಮ್ಮ ತಮ್ಮ ಇನ್ ಸ್ಟಾಗ್ರಾಂ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದ ಮದುವೆ(Manish Pandey-Ashrita Shetty Wedding Pics) ಮತ್ತು ಅವರಿಬ್ಬರ ಫೋಟೋಗಳನ್ನು ಇಬ್ಬರೂ ಡಿಲೀಟ್ ಮಾಡಿದ್ದಾರೆ. ಹೀಗಾಗಿ ಇವರ ದಾಂಪತ್ಯದಲ್ಲಿ ಏರುಪೇರಾಗಿದ್ದು, ಇಬ್ಬರೂ ಪರಸ್ಪರ ಬೇರೆಯಾಗುತ್ತಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಮನೀಶ್ ಪಾಂಡೆ ಅವರು ಐಪಿಎಲ್ 2024ರ ಟೂರ್ನಿಯಲ್ಲಿ ತಾವು ಪ್ರತಿನಿಧಿಸಿದ್ದ ಕೆಕೆಆರ್ ತಂಡದ ಮತ್ತು ಟ್ರೋಫಿ ಜೊತೆಗಿರುವ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಅವರ ಫೋಟೋಗಳ ಲಿಸ್ಟ್ ನಲ್ಲಿ ಪತ್ನಿ ಆಶ್ರಿತಾ ಜತೆಗಿರುವ ಫೋಟೋ ಮಾಯವಾಗಿದೆ. ಇದು ಅಭಿಮಾನಿಗಳ ಶಂಕೆಗೆ ಕಾರಣವಾಗಿದ್ದು ಇಬ್ಬರೂ ಪರಸ್ಪರ ಬೇರೆ ಬೇರೆಯಾಗುತ್ತಿದ್ದಾರೆಯೇ ಎಂಬ ಮಾತುಗಳು ಕೇಳಿ ಬಂದಿವೆ. ಆದರೆ ಈ ಬಗ್ಗೆ ಈ ಜೋಡಿ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

Continue Reading

ಕ್ರೀಡೆ

David Johnson: ಮೃತ ಡೇವಿಡ್ ಜಾನ್ಸನ್ ಯಾರು? ಇವರ ಕ್ರಿಕೆಟ್​ ಸಾಧನೆ ಏನು?

David Johnson: 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು

VISTARANEWS.COM


on

David Johnson
Koo

ಬೆಂಗಳೂರು: ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕ ಮೂಲದ, ಟೀಮ್​ ಇಂಡಿಯಾ ಮಾಜಿ ಆಟಗಾರ ಡೇವಿಡ್ ಜಾನ್ಸನ್(David Johnson) ಭಾರತ ಪರ ಕೇವಲ 2 ಟೆಸ್ಟ್​ ಪಂದ್ಯವನ್ನಾಡಿದ್ದರೂ ಕೂಡ ಅವರು ನಿರ್ಮಿಸಿದ ದಾಖಲೆಯೊಂದನ್ನು ಈಗಲೂ ಟೀಮ್​ ಇಂಡಿಯಾ ಬೌಲರ್​ಗಳಿಂದ ಮುರಿಯಲು ಸಾಧ್ಯವಾಗಿಲ್ಲ. ಈ ದಾಖಲೆ ಯಾವುದು?, ಅವರ ಕ್ರಿಕೆಟ್​ ಸಾಧನೆ ಏನು? ಎಂಬ ಮಾಹಿತಿ ಇಂತಿದೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, ಆರಂಭಿಕ ದಿನಗಳಲ್ಲಿ ಟೆನ್ನಿಸ್​ ಬಾಲ್​ ಕ್ರಿಕೆಟ್​ನಲ್ಲಿ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ವೇಗದ ಬೌಲಿಂಗ್​ ನಡೆಸಿ ವಿಕೆಟ್​ ಕೀಳುತ್ತಿದ್ದರು. ಪಂದ್ಯವೊಂದರಲ್ಲಿ ಅವರು 8 ವಿಕೆಟ್​ ಕಿತ್ತು ಮಿಂಚಿದ್ದರು. ಇದೇ ವೇಳೆ ಈ ಪಂದ್ಯವನ್ನು ನೋಡುತ್ತಿದ್ದ ಅವರ ಗೆಳೆಯನೊಬ್ಬ ಜಾನ್ಸನ್ ಅವರನ್ನು ಸ್ವಸ್ತಿಕ್​ ಕ್ರಿಕೆಟ್​ ಕ್ಲಬ್​ಗೆ ಸೇರಿಸಿದ್ದರು. ಆಗ ಜಾನ್ಸನ್​ಗೆ ಕೇವಲ 17 ವರ್ಷವಾಗಿತ್ತು. ಈ ಕ್ರಿಕೆಟ್​ ಕ್ಲಬ್​ನಲ್ಲಿ ಸ್ಟಿಚ್​ ಬೌಲಿಂಗ್​ ಅಭ್ಯಾಸ ನಡೆಸಿ ಹಂತ ಹಂತವಾಗಿ ಬೆಳೆದ ಅವರು ಬಳಿಕ ಕರ್ನಾಟಕ ಪರ ಅಂಡರ್​-19 ಪಂದ್ಯವನ್ನಾಡಿ ಕೇವಲ ಎರಡು ಪಂದ್ಯಗಳಿಂದ 13 ವಿಕೆಟ್​ ಕಿತ್ತು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದರು.


10 ವಿಕೆಟ್​ ಸರದಾರ


90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡುತ್ತಿದ್ದ ಜಾನ್ಸನ್, 1995-96ರಲ್ಲಿ ಕೇರಳದ ವಿರುದ್ಧದ ಪಂದ್ಯದಲ್ಲಿ ಹತ್ತು ವಿಕೆಟ್​ ಕಿತ್ತ ಸಾಧನೆ ಮಾಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 63ಕ್ಕೆ 6 ವಿಕೆಟ್​ ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 89ಕ್ಕೆ 4 ಕೆಡವಿದ್ದರು. ಇದಾದ ಬಳಿಕ ಬಂಗಾಳದ ವಿರುದ್ಧ 49 ಕ್ಕೆ 4 ಮತ್ತು ಬರೋಡಾ ವಿರುದ್ಧ 91 ಕ್ಕೆ 5 ವಿಕೆಟ್​ ಕಬಳಿಸಿದ್ದರು. ಅವರ ಈ ಬೌಲಿಂಗ್​ ಪ್ರದರ್ಶನ ಕಂಡು ಆಸ್ಟ್ರೇಲಿಯಾ ವಿರುದ್ಧದ ತವರಿನ ಸರಣಿಗೆ ಟೀಮ್​ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿ David Johnson: ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು; ಖಿನ್ನತೆಯಿಂದ ಆತ್ಮಹತ್ಯೆ?

ಗಂಟೆಗೆ 157.8 ಕಿ. ಮೀಟರ್ ವೇಗದಲ್ಲಿ ಬೌಲಿಂಗ್​…


1996ರಲ್ಲಿ ದೆಹಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಜಾವಗಲ್​ ಶ್ರೀನಾಥ್​ ಅವರು ಗಾಯಗೊಂಡ ಕಾರಣ ಅವರ ಸ್ಥಾನದಲ್ಲಿ ಜಾನ್ಸನ್ ಆಡುವ ಅವಕಾಶ ಪಡೆದರು. ಅದು ಅವರ ಚೊಚ್ಚಲ ಪಂದ್ಯವಾಗಿತ್ತು. ಮೊದಲ ಇನಿಂಗ್ಸ್​ನಲ್ಲಿ ಅವರಿಗೆ ವಿಕೆಟ್​ ಕೀಳಲು ಸಾಧ್ಯವಾಗಲಿಲ್ಲ. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೆಂಡೆಸೆದು ​ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಉರುಳಿಸಿದರು. ಇದೇ ವೇಳೆ ಭಾರತ ಪರ ಅತಿ ವೇಗದಲ್ಲಿ ಬೌಲಿಂಗ್​ ನಡೆಸಿದ ದಾಖಲೆಯನ್ನು ನಿರ್ಮಿಸಿದರು. ಸದ್ಯ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇದು ದಾಖಲೆಯಾಗಿಯೇ ಉಳಿದಿದೆ. ದೇಶೀಯ ಕ್ರಿಕೆಟ್​ನಲ್ಲಿ ಅತಿ ವೇಗದ ಬೌಲಿಂಗ್​ ನಡೆಸಿದ ದಾಖಲೆ ಮಯಾಂಕ್​ ಯಾದವ್ ಹೆಸರಿನಲ್ಲಿದೆ. ಇದೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಲಕ್ನೋ ತಂಡದ ಮಯಾಂಕ್​ ಯಾದವ್​ 156.7 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್​ ನಡೆಸಿದ್ದರು.


ಅವಕಾಶವೇ ನೀಡಲಿಲ್ಲ…


ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 39 ಪಂದ್ಯಗಳಿಂದ 437 ರನ್​, 125 ವಿಕೆಟ್​, ಲಿಸ್ಟ್​ 2 ಕ್ರಿಕೆಟ್​ನಲ್ಲಿ 33 ಪಂದ್ಯಗಳನ್ನಾಡಿ 118 ರನ್, 41 ವಿಕೆಟ್​​ ಕಲೆಹಾಕಿದ್ದಾರೆ. ಭಾರತ ಪರ 2 ಟೆಸ್ಟ್​ ಪಂದ್ಯಗಳನ್ನಾಡಿ 8 ರನ್​ ಸಹಿತ 3 ವಿಕೆಟ್​ ಕಿತ್ತಿದ್ದಾರೆ. ವಿಪರ್ಯಾಸವೆಂದರೆ ಉತ್ತಮ ಬೌಲಿಂಗ್​ ಸಾಧನೆ ತೋರಿದ್ದರೂ ಕೂಡ ಅವರನ್ನು ಕೇವಲ 2 ಪಂದ್ಯಗಳಿಗೆ ಸೀಮಿತರನ್ನಾಗಿ ಮಾಡಿ ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಕೊನೆಯ ಪಂದ್ಯವಾಡಿದ ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್​ ಕಿತ್ತಿದ್ದರು.


ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಹಲವು ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Continue Reading

ಕ್ರೀಡೆ

David Johnson: ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ಸಾವು; ಖಿನ್ನತೆಯಿಂದ ಆತ್ಮಹತ್ಯೆ?

David Johnson: ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್(David Jude Johnson) ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು.

VISTARANEWS.COM


on

David Johnson
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಕೆಳಗೆ ಬಿದ್ದ ಕಾರಣ ಅವರು ಮೃತಪಟ್ಟಿದ್ದಾರೆ. ಆದರೆ ಅವರ ಕುಟುಂಬದವರು, ಆಕಸ್ಮಿಕವಾಗಿ ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಡೇವಿಡ್‌ ಜಾನ್ಸನ್‌ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್(David Jude Johnson) ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್​ರೌಂಡರ್​ ಆಗಿದ್ದ ಅವರು ಟೆಸ್ಟ್​ನಲ್ಲಿ 8 ರನ್​ ಮತ್ತು 3 ವಿಕೆಟ್​ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ.

ಇದನ್ನೂ ಓದಿ Team India Coach: ಇಂದು ಟೀಮ್​ ಇಂಡಿಯಾದ ನೂತನ ಕೋಚ್‌ ಹೆಸರು ಘೋಷಣೆ!


ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 39 ಪಂದ್ಯಗಳಿಂದ 437 ರನ್​, ಲಿಸ್ಟ್​ 2 ಕ್ರಿಕೆಟ್​ನಲ್ಲಿ 33 ಪಂದ್ಯಗಳನ್ನಾಡಿ 118 ರನ್​ ಬಾರಿಸಿದ್ದಾರೆ.

1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡಿದ್ದರು. ಆಸೀಸ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಕಿತ್ತಿದ್ದರು.

ಡೇವಿಡ್ ಜಾನ್ಸನ್ ನಿಧನಕ್ಕೆ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಹಲವು ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ.

Continue Reading

ಕ್ರೀಡೆ

Rahul Dravid: ಸೂಪರ್​-8 ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ತಾಳ್ಮೆ ಕಳೆದುಕೊಂಡ ಕೋಚ್​ ದ್ರಾವಿಡ್; ಕಾರಣವೇನು?

Rahul Dravid: ನಾನು ಯಾವುದೇ ವಿಷಯವನ್ನಾದರೂ ಬೇಗನೆ ಮರೆತುಬಿಡುತ್ತೇನೆ. ನಡೆದು ಹೋಗಿರುವ ಘಟನೆ ಬಗ್ಗೆ ಮತ್ತೆ ಮತ್ತೆ ಚಿಂತಿಸಿ ಪ್ರಯೋಜನವಿಲ್ಲ. ಇಂತಹ ಘಟನೆಯಿಂದ ನಾನು ಬೇಗನೇ ಹೊರಬರುತ್ತೇನೆ ಎಂದು ದ್ರಾವಿಡ್​ ಅವರು ಪತ್ರಕರ್ತರೊಬ್ಬರ ಪ್ರಶ್ನೆಗೆ ತುಸು ಕೋಪದಿಂದಲೇ ಉತ್ತರಿಸಿದ್ದಾರೆ.

VISTARANEWS.COM


on

Rahul Dravid
Koo

ಬಾರ್ಬಡೋಸ್​: ಅಫಘಾನಿಸ್ತಾನ(IND vs AFG) ವಿರುದ್ಧ ಇಂದು ನಡೆಯುವ ಸೂಪರ್​-8 ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್​ ಇಂಡಿಯಾದ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ತಾಳ್ಮೆ ಕಳೆದುಕೊಂಡ ಘಟನೆ ನಡೆಯಿತು. ಪತ್ರಕರ್ತರೊಬ್ಬರ ಪ್ರಶ್ನೆಗೆ ತುಸು ಕೋಪದಿಂದಲೇ ಉತ್ತರಿಸಿದ್ದಾರೆ.

ಸಾದಾ ಶಾಂತ ಸ್ವಭಾವದಿಂದ ವರ್ತಿಸುವ ದ್ರಾವಿಡ್​ ಅವರಿಗೆ ಪತ್ರಕರ್ತರೊಬ್ಬರು ಅಫಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ನಡೆಸಿದ ತಂಡದ ಸಿದ್ಧತೆಯ ಪ್ರಶ್ನೆಯನ್ನು ಕೇಳುವ ಬದಲು 27 ವರ್ಷಗಳ ಹಿಂದಿನ ಪಂದ್ಯವೊಂದರ ಬಗ್ಗೆ ಪ್ರಶ್ನೆ ಮಾಡಿ ದ್ರಾವಿಡ್​ ಅವರನ್ನು ವ್ಯಂಗವಾಡಿದರು. ನೀವು ಆಟಗಾರರಾಗಿ ಇಲ್ಲಿ ಆಡಿದ್ದೀರಿ. 97 ನಿಮ್ಮ ಟೆಸ್ಟ್‌ನ ಅತ್ಯುತ್ತಮ ನೆನಪುಗಳು ಅಲ್ಲವೇ? ಎಂದು ಕೇಳಿದ್ದಾರೆ. ಇದಕ್ಕೆ ಖಾರವಾಗಿಯೇ ಉತ್ತರಿಸಿದ ದ್ರಾವಿಡ್​, ಧನ್ಯವಾದಗಳು ಗೆಳೆಯ! ನಾನು ಇಲ್ಲಿ ಇದು ಮಾತ್ರವದಲ್ಲದೆ ಇತರ ಉತ್ತಮ ನೆನಪುಗಳನ್ನೂ ಕೂಡ ಹೊಂದಿದ್ದೇನೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದರು.

ಪತ್ರಕರ್ತ ದ್ರಾವಿಡ್​ ಬಳಿ ಈ ಪ್ರಶ್ನೆಯನ್ನು ಕೇಳಲು ಕೂಡ ಒಂದು ಕಾರಣವಿದೆ. ಅದೇನೆಂದರೆ, 1997ರಲ್ಲಿ ಟೆಸ್ಟ್​ ಸರಣಿಯನ್ನಾಡಲು ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಮಾಡಿದ್ದ ವೇಳೆ ದ್ರಾವಿಡ್​ ಕೂಡ ತಂಡದ ಭಾಗವಾಗಿದ್ದರು. ಬಾರ್ಬಡೋಸ್​ನಲ್ಲಿ ನಡೆದಿದ್ದ ಟೆಸ್ಟ್​ನಲ್ಲಿ ದ್ರಾವಿಡ್ 78 ರನ್​ ಮತ್ತು 2 ರನ್​ ಬಾರಿಸಿದ್ದರು. ಈ ಪಂದ್ಯವನ್ನು ಭಾರತ 38 ರನ್​ ಅಂತರದಿಂದ ಸೋಲು ಕಂಡಿತ್ತು. ಇದೀಗ ಭಾರತ ಸೂಪರ್​ 8 ಪಂದ್ಯವನ್ನು ಇದೇ ಮೈದಾನದಲ್ಲಿ ಆಡುತ್ತಿದೆ, ದ್ರಾವಿಡ್​ ತಂಡದ ಕೋಚ್​ ಆಗಿದ್ದಾರೆ, ಇದೇ ಕಾರಣಕ್ಕೆ ಈ ಪ್ರಶ್ನೆಯನ್ನು ಅವರಿಗೆ ಕೇಳಲಾಯಿತು. ಆದರೆ ಪತ್ರಕರ್ತ ಕೇಳಿದ ಪ್ರಶ್ನೆಯ ಧಾಟಿ ಮಾತ್ರ ಸರಿಯಿರಲಿಲ್ಲ. ಇದರಿಂದ ದ್ರಾವಿಡ್​ ಕೋಪಗೊಂಡರು.

ಇದನ್ನೂ ಓದಿ IND vs AFG: ಇಂದು ಭಾರತ-ಆಫ್ಘಾನ್​ ಸೂಪರ್​-8 ಪಂದ್ಯ; ಹವಾಮಾನ ವರದಿ ಹೇಗಿದೆ?

ಕೋಪದಲ್ಲೇ ಉತ್ತರಿಸಿದ ದ್ರಾವಿಡ್​, ಧನ್ಯವಾದಗಳು ಗೆಳೆಯ!.., ನಾನು ಯಾವುದೇ ವಿಷಯವನ್ನಾದರೂ ಬೇಗನೆ ಮರೆತುಬಿಡುತ್ತೇನೆ. ನಡೆದು ಹೋಗಿರುವ ಘಟನೆ ಬಗ್ಗೆ ಮತ್ತೆ ಮತ್ತೆ ಚಿಂತಿಸಿ ಪ್ರಯೋಜನವಿಲ್ಲ. ಇಂತಹ ಘಟನೆಯಿಂದ ನಾನು ಬೇಗನೇ ಹೊರಬರುತ್ತೇನೆ. ಅದು ನನ್ನ ವೈಶಿಷ್ಟ್ಯ. 1997ರಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನಾನು ಈಗ ಚಿಂತೆ ಮಾಡುವುದಿಲ್ಲ” ಎಂದು ಹೇಳುವ ಮೂಲಕ ಕೊಂಕು ಪ್ರಶ್ನೆ ಮಾಡಿದ ಪತ್ರಕರ್ತನಿಗೆ ಸರಿಯಾಗಿತೇ ತಿರುಗೇಟು ನೀಡಿದ್ದಾರೆ.

ಅಫಘಾನಿಸ್ತಾನ ವಿರುದ್ಧ ಇಂದು(ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಸೂಪರ್​-8 ಪಂದ್ಯದಲ್ಲಿ(IND vs AFG Super 8 match) ಭಾರತ(IND vs AFG) ತನ್ನ ಆಡುವ ಬಳಗದಲ್ಲಿ ಇಂದು ಬದಲಾವಣೆ ಮಾಡುವ ನಿರೀಕ್ಷೆ ಇದೆ. ವಿಂಡೀಸ್​ ಸ್ಪಿನ್​ ಸ್ನೇಹಿ ಮತ್ತು ನಿಧಾನ ಗತಿಯ ಪಿಚ್​ ಆಗಿರುವ ಕಾರಣ ಭಾರತ ಹೆಚ್ಚುವರಿ ಸ್ಪಿನ್ನರ್​ ಆಯ್ಕೆ ಮಾಡಿಕೊಳ್ಳಬಹುದು. ಶಿವಂ ದುಬೆ ಅವರನ್ನು ಕೈಬಿಟ್ಟು ಈ ಸ್ಥಾನದಲ್ಲಿ ಕುಲ್​ದೀಪ್​ ಯಾದವ್​ ಅಥವಾ ಯಜುವೇಂದ್ರ ಚಹಲ್​ ಅವರನ್ನು ಆಡಿಸಬಹುದು. ಉಳಿದಂತೆ ಯಾವುದೇ ಬದಲಾವಣೆ ಸಂಭವಿಸುವುದು ಅನುಮಾನ. ರೋಹಿತ್​ ಮತ್ತು ಕೊಹ್ಲಿಯೇ ಭಾರತದ ಇನಿಂಗ್ಸ್​ ಆರಂಭಿಸಬಹುದು.

Continue Reading
Advertisement
IIT Bombay
Latest10 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ17 mins ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Genitals Removed Case
Latest21 mins ago

Genitals Removed Case: ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ! ಬಲವಂತದಿಂದ ಲಿಂಗ ಪರಿವರ್ತನೆ

UGC-NET
ದೇಶ22 mins ago

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

Niveditha Gowda new reels after divorce
ಸಿನಿಮಾ30 mins ago

Niveditha Gowda: ಡಿವೋರ್ಸ್‌ ಬಳಿಕ ಹೊಸ ರೀಲ್ಸ್‌ ಹಂಚಿಕೊಂಡ ನಿವೇದಿತಾ: ಲೈಕ್ಸ್‌ ಸುರಿಮಳೆ!

Darshan Arrested
ಕರ್ನಾಟಕ31 mins ago

Darshan Arrested: ರೇಣುಕಾಸ್ವಾಮಿ ಕೊಲೆ ಕೇಸ್;‌ ಪವಿತ್ರಾ ಗೌಡಗೆ ಜೈಲು, ದರ್ಶನ್‌ ಪೊಲೀಸ್‌ ಕಸ್ಟಡಿಗೆ

Road Construction
ಕರ್ನಾಟಕ59 mins ago

Road Construction: ವಿಶ್ವಬ್ಯಾಂಕ್‌ನಿಂದ ಸಾಲ ತಂದು ಗ್ರಾಮೀಣ ರಸ್ತೆಗಳ ಅಭಿವೃದ್ಧಿ; ಸಿದ್ದರಾಮಯ್ಯ ಸರ್ಕಾರ ನಿರ್ಧಾರ

building collapses in Gonikoppa
ಕೊಡಗು1 hour ago

Building Collapse : ಗೋಣಿಕೊಪ್ಪದಲ್ಲಿ ಏಕಾಏಕಿ ಕುಸಿದು ಬಿದ್ದ ಹೋಟೆಲ್‌ ಕಟ್ಟಡ; ಊಟಕ್ಕೆ ಬಂದವರು ನರಳಾಟ

Duniya Vijay In kotee movie special Role
ಸ್ಯಾಂಡಲ್ ವುಡ್1 hour ago

Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

David Johnson
ಕ್ರೀಡೆ1 hour ago

David Johnson: ಮೃತ ಡೇವಿಡ್ ಜಾನ್ಸನ್ ಯಾರು? ಇವರ ಕ್ರಿಕೆಟ್​ ಸಾಧನೆ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌