IPL 2024 Points Table: ಮುಂಬೈ ವಿರುದ್ಧ ಹೈದರಾಬಾದ್‌ ಗೆದ್ದ ಬಳಿಕ ಅಂಕಪಟ್ಟಿ ಹೇಗಿದೆ? - Vistara News

ಐಪಿಎಲ್ 2024

IPL 2024 Points Table: ಮುಂಬೈ ವಿರುದ್ಧ ಹೈದರಾಬಾದ್‌ ಗೆದ್ದ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 Points Table: ಮುಂಬೈ ಇಂಡಿಯನ್ಸ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಅಂಕಪಟ್ಟಿಯಲ್ಲಿ ಮೇಲೇರಿದೆ. ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಅಂಕಪಟ್ಟಿ ಹೀಗಿದೆ.

VISTARANEWS.COM


on

SRH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ರನ್‌ಗಳ ಸುರಿಮಳೆಯೇ ಸುರಿದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡವು 31 ರನ್‌ಗಳ ರೋಚಕ ಗೆಲುವು ಸಾಧಿಸುವ ಮೂಲಕ 2024ರ ಐಪಿಎಲ್‌ ಟೂರ್ನಿಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಸತತ ಎರಡನೇ ಸೋಲು ಕಂಡ ಮುಂಬೈ ಇಂಡಿಯನ್ಸ್‌ ತಂಡವು 9ನೇ ಸ್ಥಾನಕ್ಕೆ ಕುಸಿದಿದೆ. ಮುಂಬೈ ಹಾಗೂ ಹೈದರಾಬಾದ್‌ ಪಂದ್ಯದ ಬಳಿಕ ಅಂಕಪಟ್ಟಿ (IPL 2024 Points Table) ಹೇಗಿದೆ? ಯಾರು ಯಾವ ಸ್ಥಾನದಲ್ಲಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ತಂಡಪಂದ್ಯಗೆಲುವುಸೋಲುಅಂಕ
​ ಚೆನ್ನೈ ಸೂಪರ್​ ಕಿಂಗ್ಸ್​2204 (+1.979)
ರಾಜಸ್ಥಾನ್​ ರಾಯಲ್ಸ್1102 (+1.000)
ಸನ್​ರೈಸರ್ಸ್​ ಹೈದರಾಬಾದ್​2112 (+0.675)
ಕೋಲ್ಕೊತಾ ನೈಟ್‌ ರೈಡರ್ಸ್1102(+200)
ಪಂಜಾಬ್‌ ಕಿಂಗ್ಸ್2112‌ (+0.025)
ಆರ್‌ಸಿಬಿ2112 (-0.180)
ಗುಜರಾತ್‌ ಟೈಟಾನ್ಸ್2112 (-1.425)
ಡೆಲ್ಲಿ ಕ್ಯಾಪಿಟಲ್ಸ್1010 (-0.925)
ಮುಂಬೈ ಇಂಡಿಯನ್ಸ್2020 (-1000)
ಲಕ್ನೋ ಸೂಪರ್​ ಜೈಂಟ್ಸ್​1010 (-1.000)

ಹೈದರಾಬಾದ್‌ನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆತಿಥೇಯ ಸನ್​ರೈಸರ್ಸ್ ಹೈದರಾಬಾದ್​ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 277 ರನ್​ ಬಾರಿಸಿತು. ಈ ದೊಡ್ಡ ಮೊತ್ತವನ್ನು ಅಷ್ಟೇ ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಮುಂಬೈ ಅಂತಿಮವಾಗಿ 5 ವಿಕೆಟ್​ಗೆ 246 ರನ್​ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ಒಟ್ಟಾರೆಯಾಗಿ ಈ ಪಂದ್ಯದಲ್ಲಿ 523 ರನ್​ ದಾಖಲಾಯಿತು. ಇದು ಐಪಿಎಲ್​ನಲ್ಲಿ 2 ತಂಡಗಳು ಸೇರಿ ಬಾರಿಸಿದ ಗರಿಷ್ಠ ಮೊತ್ತದ ದಾಖಲೆ. ಈ ಹಿಂದೆ 2010ರಲ್ಲಿ ಚೆನ್ನೈ ಮತ್ತು ಕೆಕೆಆರ್​ ನಡುವಣ ಪಂದ್ಯದಲ್ಲಿ 469 ರನ್​ ಹರಿದು ಬಂದಿತ್ತು.

ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಮುಂಬೈಗೆ ಆರಂಭಿಕರಾದ ಇಶಾನ್​ ಕಿಶನ್​ ಮತ್ತು ಮುಂಬೈ ಪರ 200ನೇ ಪಂದ್ಯದಲ್ಲಿ ಆಡಲಿಳಿದ ಮಾಜಿ ನಾಯಕ ರೋಹಿತ್​ ಶರ್ಮ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಉತ್ತಮ ಅಡಿಪಾಯ ನಿರ್ಮಿಸಿದರು. ಇವರಿಬ್ಬರ ಬ್ಯಾಟಿಂಗ್​ ಆರ್ಭಟದಿಂದ ತಂಡ ಕೇವಲ ಮೂರು ಓವರ್​ಗೆ ವಿಕೆಟ್​ ನಷ್ಟವಿಲ್ಲದೆ 50 ರನ್​ ಕಲೆಹಾಕಿತು.

ಆದರೆ, ಉಭಯ ಆಟಗಾರರ ಈ ಬ್ಯಾಟಿಂಗ್​ ಜೋಶ್​ ಹೆಚ್ಚು ಹೊತ್ತು ಸಾಗಲಿಲ್ಲ. ಅಬ್ದುಲ್​ ಸಮದ್​ ಅವರಿಂದ ಒಂದು ಜೀವದಾನ ಪಡೆದರೂ ಕೂಡ ರೋಹಿತ್​ ಈ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಎಡವಿದರು. 26 ರನ್​ ಗಳಿಸಿ ನಾಯಕ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದರು. ಇಶಾನ್​ ಕಿಶನ್​ 13 ಎಸೆತಗಳಿಂದ 34 (4 ಸಿಕ್ಸರ್​, 3 ಬೌಂಡರಿ) ರನ್​ ಬಾರಿಸಿದರು. ಬಳಿಕ ಬಂದ ನಮನ್ ಧೀರ್ ಮತ್ತು ತಿಲಕ್​ ವರ್ಮ ಕೂಡ ಬಿರುಸಿನ ಆಟವಾಡಿ ತಂಡದ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಪಟ್ಟರು. ಮುಂಬೈ 10 ಓವರ್​ಗೆ 140 ರನ್​ ಗಡಿ ದಾಡಿದ ವೇಳೆ ಈ ಬೃಹತ್​ ಮೊತ್ತವನ್ನು ಕೂಡ ಚೇಸಿಂಗ್​ ಮಾಡಿ ಗೆಲ್ಲುವ ಸೂಚನೆ ನೀಡಿತು. ಆದರೆ ಉಭಯ ಆಟಗಾರರ ವಿಕೆಟ್​ ಪತನದ ಬಳಿಕ ಹೈದರಾಬಾದ್​ ಬೌಲರ್​ಗಳು ಲಯಬದ್ಧ ಬೌಲಿಂಗ್​ ನಡೆಸಿ ಪಂದ್ಯವನ್ನು ಹಿಡಿತಕ್ಕೆ ತಂದರು.

ಮೊದಲು ಬ್ಯಾಟಿಂಗ್​ಗೆ ಇಳಿದ ಹೈದರಾಬಾದ್​ ಪರ ಅಗರ್ವಾಲ್(11)​ ಹೊರತುಪಡಿಸಿ ಉಳಿದ ಎಲ್ಲ ಬ್ಯಾಟರ್​ಗಳು ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗಮನಸೆಳೆದರು. ಅದರಲ್ಲೂ 2ನೇ ವಿಕೆಟ್​ಗೆ ಜತೆಯಾದ ಅಭಿಷೇಕ್​ ಶರ್ಮಾ ಮತ್ತು ಆರಂಭಕಾರ ಟ್ರಾವಿಸ್​ ಹೆಡ್​ ಪೈಪೋಟಿಗೆ ಬಿದ್ದವರಂತೆ ಬ್ಯಾಟಿಂಗ್​ ನಡೆಸಿ ಮುಂಬೈ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟಕ್ಕೆ ಮುಂಬೈ ​7 ಓವರ್​ ಆಗುವ ಮುನ್ನವೇ 100ರ ಗಡಿ ದಾಟಿತು.

ತಿಲಕ್​ ವರ್ಮಾ(64) ಮತ್ತು ನಮನ್ ಧೀರ್(30) ರನ್​ ಗಳಿಸಿದರು. ಬಳಿಕ ಬಂದ ನಾಯಕ ಹಾರ್ದಿಕ್​ ಪಾಂಡ್ಯ(24) ಹಾಗೂ ಟಿಮ್​ ಡೇವಿಡ್(42*)​ ರನ್​ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಹೈದರಾಬಾದ್​ ಪರ ನಾಯಕ ಕಮಿನ್ಸ್​ ಹಾಗೂ ಉನಾದ್ಕತ್​ ತಲಾ 2 ವಿಕೆಟ್​ ಪಡೆದರು.

ಬೌಲರ್​ಗಳನ್ನು ಚಿಂದಿ ಮಾಡಿದ ಹೆಡ್​-ಅಭಿಷೇಕ್

ವಿಶ್ವಕಪ್​ ಹೀರೊ ಟ್ರಾವಿಸ್​ ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರು. ಈ ಜೋಡಿ ದ್ವಿತೀಯ ವಿಕೆಟ್​ಗೆ 68 ರನ್​ ಒಟ್ಟುಗೂಡಿಸಿತು. ಹೆಡ್​ 24 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 62 ರನ್​ ಬಾರಿಸಿದರು. ಅಭಿಷೇಕ್​ ಶರ್ಮಾ 23 ಎಸೆತ ಎದುರಿಸಿ 7 ಸೊಗಸಾದ ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಸಿ 63 ರನ್​ ಕಲೆಹಾಕಿದರು. ಈ ಮೊತ್ತ ಬಾರಿಸಲು ಅವರು ಎದುರಿಸಿದ್ದು ಕೇವಲ 23 ಎಸೆತ. ಉಭಯ ಆಟಗಾರರ ಈ ಬ್ಯಾಟಿಂಗ್​ ಆರ್ಭಟದ ಮುಂದೆ ಮುಂಬೈ ತಂಡದ ಬೌಲಿಂಗ್​ ಸಂಪೂರ್ಣ ಹಳಿ ತಪ್ಪಿತು. ಹೆಡ್​ ಮತ್ತು ಅಭಿಷೇಕ್​ ಹೈದರಾಬಾದ್​ ಪರ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನ ಪಡೆದರು.

ಇದನ್ನೂ ಓದಿ: MI vs SRH: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್​’; ಮುಂಬೈಗೆ ಸತತ 2ನೇ ಸೋಲು

ಸಿಡಿದ ಕ್ಲಾಸೆನ್

ಕಳೆದ ಕೆಕೆಆರ್​ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್​ ಪ್ರದರ್ಶನ ತೋರಿದ್ದ ಹೆನ್ರಿಚ್​ ಕ್ಲಾಸೆನ್​ ಈ ಪಂದ್ಯದಲ್ಲಿಯೂ ಸಿಡಿದು ನಿಂತರು. ಕ್ರೀಸ್​ಗಿಳಿದ ಮೊದಲ ಎಸೆತದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟ ಅವರು ಮೈದಾನದ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ತವರಿನ ಅಭಿಮಾನಿಗಳಿಗೆ ಬರಪೂರ ರಂಜನೆ ನೀಡಿದರು. ಇವರಿಗೆ ಏಡನ್​ ಮಾರ್ಕ್ರಮ್​ ಕೂಡ ಉತ್ತಮ ಸಾಥ್​ ನೀಡಿದರು. ತಾನೇನು ಕಮ್ಮಿ ಇಲ್ಲ ಎನ್ನುವಂತೆ ಕ್ಲಾಸೆನ್ ಕೂಡ 22 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಮುಂಬೈ ಪರ ಜಸ್​​ಪ್ರೀತ್​ ಬುಮ್ರಾ ಅವರನ್ನು ಬಿಟ್ಟು ಉಳಿದೆಲ್ಲ ಬೌಲರ್​ಗಳು ದುಬಾರಿಯಾದರು. ನಾಯಕ ಪಾಂಡ್ಯ ಒಂದು ವಿಕೆಟ್​ ಕಿತ್ತರೂ ಕೂಡ 46 ರನ್​ ಬಿಟ್ಟುಕೊಟ್ಟರು.‌

ಚೊಚ್ಚಲ ಐಪಿಎಲ್​ ಪಂದ್ಯವನ್ನಾಡಿದ ದಕ್ಷಿಣ ಆಫ್ರಿಕಾದ 17 ವರ್ಷದ ಕ್ವೆನಾ ಮಫಕಾ ಅವರಂತೂ ಸರಿಯಾಗಿ ರನ್​ ಹೊಡೆಸಿಕೊಂಡರು. 4 ಓವರ್​ ಎಸೆದು 66 ರನ್​ ಬಿಟ್ಟುಕೊಟ್ಟರು. ಸ್ಪಿನ್ನರ್​ ಪಿಯೂಷ್ ಚಾವ್ಲಾ ಕೇವಲ 2 ಓವರ್​ಗೆ 34 ರನ್​ ಚಚ್ಚಿಸಿಕೊಂಡರು. ಕ್ಲಾಸೆನ್​ 34 ಎಸೆತದಿಂದ ಅಜೇಯ 80 ರನ್​ ಬಾರಿಸಿದರು. ಸಿಡಿದ್ದು 7 ಸಿಕ್ಸರ್​ ಮತ್ತು 4 ಬೌಂಡರಿ. ಮಾರ್ಕ್ರಮ್ ಕೂಡ 42 ರನ್​ ಬಾರಿಸಿ ಅಜೇಯರಾಗಿ ಉಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

IPL 2024 : ಐಪಿಎಲ್ ಬೆಟ್ಟಿಂಗ್ (IPL Betting) ದಂಧೆಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಐಪಿಎಲ್‌ ಮ್ಯಾಚ್‌ಗೆ ಬೆಟ್ಟಿಂಗ್‌ ಕಟ್ಟಲು ವಿಪರೀತ ಸಾಲ ಮಾಡಿಕೊಂಡಿದ್ದ. ಆದರೆ ಮಾಡಿಕೊಂಡ ಸಾಲವನ್ನು ತೀರಿಸಲು ಆಗದೆ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾನೆ.

VISTARANEWS.COM


on

By

IPL 2024 Man commits suicide after taking loan for IPL betting
Koo

ರಾಯಚೂರು: ಐಪಿಎಲ್‌ (IPL 2024) ಬೆಟ್ಟಿಂಗ್‌ನಲ್ಲಿ (IPL Betting) ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ರಾಯಚೂರಿನ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ.

ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು. ಮುದಿಬಸವ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್‌ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್‌ವೊಂದರ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಐಪಿಎಲ್​ (IPL 2024) ಪಂದ್ಯದಲ್ಲಿ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du pelssis) ಹಿಡಿದ ಕ್ಯಾಚ್​ ಈ ಋತುವಿನ ಅದ್ಭುತ ಕ್ಯಾಚ್​ ಎನಿಸಿಕೊಂಡಿದೆ. ಪಂದ್ಯದ ಆರಂಭದಲ್ಲಿ ಅದ್ಭುತ ಅರ್ಧಶತಕ ಗಳಿಸಿದ ನಂತರ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಪೆವಿಲಿಯನ್​ಗೆ ಕಳುಹಿಸಲು ಅದ್ಭುತ ಕ್ಯಾಚ್​ ಹಿಡಿದರು. 15ನೇ ಓವರ್​ನ ಕೊನೆಯ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ಆಫ್ ಸ್ಟಂಪ್ನಲ್ಲಿ ಲೊ ಫುಲ್ ಟಾಸ್ ಎಸೆದರು. ಚೆಂಡು ಫಾಫ್ ಡು ಪ್ಲೆಸಿಸ್ ಅವರ ತಲೆಯ ಮೇಲಿಂದ ಹಾರಿ ಹೋಗುತ್ತಿತ್ತು. ಆದಾಗ್ಯೂ, ಆರ್​ಸಿಬಿ ನಾಯಕನಿಗೆ ಬೇರೆ ಆಲೋಚನೆಗಳು ಇರಲಿಲ್ಲ. ವಿಶ್ವದ ಅತ್ಯುತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾದ ಅವರು ಸಮಯೋಚಿತವಾಗಿ ಜಿಗಿದು ಒಂದು ಕೈಯಿಂದ ಚೆಂಡನ್ನು ಹಿಡಿದರು.

ಈ ಪಂದ್ಯದ ಆರಂಭದಲ್ಲಿ, ಫಾಫ್ ಡು ಪ್ಲೆಸಿಸ್ ಆರ್​ಸಿಬಿಯನ್ನು ಮುನ್ನಡೆಸಿದರು. ಅವರ ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದರು. ಅವರು 54 ರನ್ ಗಳಿಸಿ ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ಉತ್ತಮ ಆರಂಭವನ್ನು ನೀಡಿದರು. ವಿರಾಟ್ ಕೊಹ್ಲಿ (47), ರಜತ್ ಪಾಟಿದಾರ್ (41) ಮತ್ತು ಕ್ಯಾಮರೂನ್ ಗ್ರೀನ್ (38*) ಕೂಡ ನಿರ್ಣಾಯಕ ಶತಕಗಳ ನೆರವಿನಿಂದ ಆರ್ಸಿಬಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024)ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮೈದಾನದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉಭಯ ತಂಡಗಳ ನಡುವಿನ 69ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (Virat kohli) ತಮ್ಮ ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಂತೆಯೇ ಸಿಎಸ್​ಕೆ ಬ್ಯಾಟರ್​ಗಳು ಔಟಾಗುತ್ತಿದ್ದಂತೆ ಅವರ ಅಬ್ಬರವೂ ಜೋರಾಗಿತ್ತು.

ಡ್ಯಾರಿಲ್ ಮಿಚೆಲ್ ಕ್ಯಾಚ್ ಪಡೆದ ನಂತರ ವಿರಾಟ್ ಕೊಹ್ಲಿ ಆಕ್ರಮಣಕಾರಿ ಸಂಭ್ರಮವನ್ನು ಆಚರಿಸಿದರು. ಮೂರನೇ ಯಶ್ ದಯಾಳ್ ಎಸೆತದ ತಮ್ಮ ಓವರ್​ನ ಎರಡನೇ ಎಸೆತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್ಮನ್ ದೊಡ್ಡ ಹೊಡೆತ ಹೊಡೆದರು. ಚೆಂಡು ಗಾಳಿಯಲ್ಲಿ ಹಾರಿತು. ಅಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ವೇಗವಾಗಿ ಓಡಿ ಸುರಕ್ಷಿತ ಕ್ಯಾಚ್ ಪಡೆದರು. ಬಳಿಕ ಜೋರಾಗಿ ಕಿರುಚಿದರು. ಆದರೆ, ಅನೇಕರ ಗಮನ ಸೆಳೆದದ್ದು ಕೊಹ್ಲಿಯ ಸಂಭ್ರಮಾಚರಣೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್​ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದ್ದು ಕೂಡ ಕ್ಯಾಮೆರಾ ಕಣ್ಣಿಗೆ ಬಿತ್ತು. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಐಪಿಎಲ್ 2024

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

IPL 2024: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಇದೀಗ ಪ್ಲೇ ಆಫ್‌ ಪಂದ್ಯಗಳ ಲೆಕ್ಕಾಚಾರ ಆರಂಭವಾಗಿದೆ. ಹಾಗಾದರೆ ಯಾರು ಯಾರನ್ನು ಎದುರಿಸುತ್ತಾರೆ? ಪಂದ್ಯ ಯಾವಾಗ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

IPL 2024
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಹಾಗಾದರೆ ಪ್ಲೇ ಆಫ್‌ ಯಾವಾಗ ಎಲ್ಲಿ ನಡೆಯಲಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ಲೇ ಆಫ್‌ ವೇಳಾಪಟ್ಟಿ

ದಿನಾಂಕ ಪ್ಲೇ ಆಫ್‌ತಂಡಸಮಯ (ರಾತ್ರಿ)ಸ್ಥಳ
ಮೇ 21ಕ್ವಾಲಿಫೈರ್‌ 1ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್​7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 22ಎಲಿಮಿನೇಟರ್‌ ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 24ಕ್ವಾಲಿಫೈರ್‌ 2ಎಲಿಮಿನೇಟರ್‌ನ ವಿಜೇತರು ಮತ್ತು ಕ್ವಾಲಿಫೈರ್‌ 1ರ ಸೋತ ತಂಡ7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ
ಮೇ 26ಫೈನಲ್‌ಕ್ವಾಲಿಫೈರ್‌ 1ರ ವಿಜೇತರು ಮತ್ತು ಕ್ವಾಲಿಫೈರ್‌ 2ರ ವಿಜೇತರು7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ

ಕ್ವಾಲಿಫೈರ್‌ ಪಂದ್ಯಗಳು

ಕ್ವಾಲಿಫೈರ್‌ 1ರಲ್ಲಿ ಅಗ್ರ ಎರಡು ತಂಡಗಳ ನಡುವೆ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 21ರ ರಾತ್ರಿ 7.30ಕ್ಕೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಮೇ 22ರ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್‌ ಪಂದ್ಯದಲ್ಲಿ ಮೂರನೇ ಮತ್ತು ನಾಲ್ಕನೇ ತಂಡದ ನಡುವೆ ಜಿದ್ದಾಜಿದ್ದು ನಡೆಯಲಿದೆ. ಇದರಲ್ಲಿ ಗೆದ್ದವರು ಮೇ 24ರಂದು ಚೆನ್ನೈ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಕ್ವಾಲಿಫೈರ್‌ 2ರ ಪಂದ್ಯದಲ್ಲಿ ಕ್ವಾಲಿಫೈರ್‌ 1ರ ಸೋತ ತಂಡದೊಂದಿಗೆ ಸೆಣಸಾಡಲಿದ್ದಾರೆ. ಈ ಪಂದ್ಯ ರಾತ್ರಿ 7.30ಕ್ಕೆ ನಡೆಯಲಿದೆ. ಇದರಲ್ಲಿ ಗೆದ್ದವರು ಫೈನಲ್‌ನಲ್ಲಿ ಕ್ವಾಲಿಫೈರ್‌ 1ರ ವಿಜೇತರೊಂದಿಗೆ ಕಪ್‌ಗಾಗಿ ಹೋರಾಡಲಿದ್ದಾರೆ. ಫೈನಲ್‌ ಪಂದ್ಯ ಚೆನ್ನೈಯ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ಮೇ 26ರ ರಾತ್ರಿ 7.30ಕ್ಕೆ ಆಯೋಜಿಸಲಾಗಿದೆ.

ಲೀಗ್‌ ಹಂತದಲ್ಲಿ ಇನ್ನೂ ಕೆಲವು ಪಂದ್ಯ ಬಾಕಿ ಇರುವುದರಿಂದ ಅಂಕಪಟ್ಟಿ ಬದಲಾಗುವ ಸಾಧ್ಯತೆ ಇದೆ. ಅಗ್ರ ಮೂರು ಸ್ಥಾನಗಳಲ್ಲಿ ಇರುವ ಕೆಕೆಆರ್‌, ಆರ್‌ಆರ್‌ ಮತ್ತು ಎಸ್‌ಆರ್‌ಎಚ್‌ ತಂಡಗಳಿಗೆ ಇನ್ನು ತಲಾ 1 ಪಂದ್ಯಗಳಿವೆ. ಎಸ್‌ಆರ್‌ಎಚ್‌-ಪಂಜಾಬ್‌, ರಾಜಸ್ಥಾನ-ಕೋಲ್ಕತ್ತಾ ಪರಸ್ಪರ ಸೆಣಸಾಡಲಿರುವುದರಿಂದ ಪ್ಲೇ ಆಫ್‌ಗೆ ಅರ್ಹತೆ ಪಡೆದ ತಂಡಗಳ ಸ್ಥಾನಗಳಲ್ಲಿ ಏರುಪೇರಾಗಲಿದೆ. ಅದಾಗ್ಯೂ ಸೋತರೂ ಕೋಲ್ಕತ್ತಾ ಅಗ್ರ ಸ್ಥಾನದಲ್ಲೇ ಮುಂದುವರಿಯಲಿದ್ದು, ಆರ್‌ಸಿಬಿಗೆ ನಾಲ್ಕನೇ ಸ್ಥಾನ ಫಿಕ್ಸ್‌. ಎರಡು ಮತ್ತು ಮೂರನೇ ಸ್ಥಾನಗಳ ಸ್ಪಷ್ಟ ಚಿತ್ರಣ ಪಂದ್ಯದ ಬಳಿಕವಷ್ಟೇ ದೊರೆಯಲಿದೆ.

ಇದನ್ನೂ ಓದಿ: IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

ಸಿಎಸ್‌ಕೆ ಸೋಲಿಸಿ ಪ್ಲೇ ಆಫ್‌ಗೆ ಏರಿದ ಬೆಂಗಳೂರು

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading

ಐಪಿಎಲ್ 2024

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024: ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

VISTARANEWS.COM


on

IPL 2024
Koo

ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳು ಗೆಲುವಿನ ನಿಟ್ಟುಸಿರು ಬಿಟ್ಟಿದ್ದಾರೆ. ಶನಿವಾರ ನಡೆದ ಐಪಿಎಲ್‌ 2024 (IPL 2024)ರ ಹೈವೋಲ್ಟೇಜ್‌ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK)​ ತಂಡವನ್ನು ಮಣಿಸಿ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸಿದೆ. ಅಭಿಮಾನಿಗಳು ಈ ಪಂದ್ಯವನ್ನು ಅಕ್ಷರಶಃ ಫೈನಲ್‌ ಎಂದೇ ಪರಿಗಣಿಸಿದ್ದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊನೆಗೂ ಹಾಲಿ ಚಾಂಪಿಯನ್‌ ಚೆನ್ನೈಯನ್ನು 27 ರನ್‌ಗಳ ಅಂತರದಿಂದ ಸೋಲಿಸುವುದರೊಂದಿಗೆ ಆರ್‌ಸಿಬಿ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಕಂಡು ಬಂತು.

ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿಯದ್ದೇ ಹವಾ

ಇನ್ನು ಸೋಷಿಯಲ್‌ ಮೀಡಿಯಾದಲ್ಲಂತೂ ಆರ್‌ಸಿಬಿ ಹವಾ ಕಂಡು ಬಂದಿದೆ. ಸತತ ಸೋಲಿನ ಬಳಿಕ ಗ್ರೇಟ್‌ ಕಂಬ್ಯಾಕ್‌ ಎಂದೆಲ್ಲ ಫ್ಯಾನ್ಸ್‌ ಹೊಗಳುತ್ತಿದ್ದಾರೆ. ಮೊದಲ 8 ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆಲುವು ಒಲಿದಿತ್ತು. ಆದರೆ ಬಳಿಕದ 6 ಪಂದ್ಯಗಳ ಪೈಕಿ 6ರಲ್ಲಿಯೂ ಗೆಲುವು ಸಾಧಿಸಿದ್ದೇವೆ. ಇದು ನಿಜವಾದ ಹೊಸ ಅಧ್ಯಾಯ ಎಂದು ಅಭಿಮಾನಿಗಳು ಹೇಳಿಕೊಂಡಿದ್ದಾರೆ. ನಿಜವಾಗಿಯೂ ಒಂದು ಥ್ರಿಲ್ಲರ್‌ ಸಿನಿಮಾ ನೋಡಿದ ಅನುಭವವಾಯಿತು ಎಂದು ಪಂದ್ಯ ಮುಗಿದ ಬಳಿಕ ರೋಮಾಂಚಿತರಾದ ಆರ್‌ಸಿಬಿಯ ಕಟ್ಟಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 6 ಸತತ ಗೆಲುವಿನ ಮೂಲಕ ಪ್ಲೇ ಆಫ್‌ ಪ್ರವೇಶಿಸುವುದು ಸುಲಭದ ಮಾತಲ್ಲ. ಅತ್ಯುತ್ತಮ ಪ್ರದರ್ಶನ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಮತ್ತೆ ಸದ್ದು ಮಾಡುತ್ತಿದೆ ಈ ಸಲ ಕಪ್‌ ನಮ್ದೆ

ಬ್ಯಾಕ್‌ ಟು ಬ್ಯಾಕ್‌ ಗೆಲುವಿನ ಮೂಲಕ ರಾಯಲ್‌ ಆಗಿಯೇ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಈ ಸಲ ಜಪ್‌ ನಮ್ದೆ ಘೋಷ ವಾಕ್ಯ ಮತ್ತೆ ಮೊಳಗತೊಡಗಿದೆ. ಈ ಹಿಂದೆ ಆರ್‌ಸಿಬಿ ಮಹಿಳಾ ತಂಡ ಕಪ್‌ ಜಯಿಸಿತ್ತು. ಇದೀಗ ಪುರುಷರ ತಂಡದ ಸರದಿ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಇದನ್ನೂ ಓದಿ: RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಹೊರ ಬಿದ್ದ ಚೆನ್ನೈ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading

ಕರ್ನಾಟಕ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ವಿಡಿಯೊ ಮಾಡಿ ಹರಿಬಿಟ್ಟಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಆರ್‌ಸಿಬಿ ಮತ್ತು ಸಿಎಸ್‌ಕೆ (RCB vs CSK) ನಡುವಿನ ಐಪಿಎಲ್‌ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನುಗ್ಗುತ್ತೇನೆ ಎಂದು ಹೇಳಿದ್ದ ಯುವಕನನ್ನು ಕಬ್ಬನ್ ಪಾರ್ಕ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ವಿಡಿಯೊ ಮಾಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ನಿತಿನ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುವುದಾಗಿ ಯುವಕ ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮೇ 18ರಂದು ನಡೆಯುವ ಮ್ಯಾಚ್ ವೇಳೆ ಸ್ಟೇಡಿಯಂಗೆ ನುಗ್ಗುತ್ತೇನೆ ಎಂದು ಯುವಕ ವಿಡಿಯೊದಲ್ಲಿ ಹೇಳಿದ್ದ. ಈ ವಿಡಿಯೊವನ್ನು ಕಬ್ಬನ್‌ ಪಾರ್ಕ್‌ ಪೊಲೀಸರು ಗಮನಿಸಿ ನಿತಿನ್‌ನನ್ನು ವಶಕ್ಕೆ ಪಡೆದಿದ್ದಾರೆ.

ಈ ಹಿಂದೆ ಮಾರ್ಚ್‌ 25ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದ ವೇಳೆ ಅಭಿಮಾನಿಯೊಬ್ಬ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಪ್ರಸಂಗ ನಡೆದಿತ್ತು. ಈ ಘಟನೆಯಿಂದ ಪ್ರೇರಣೆಗೊಂಡ ಬೆಂಗಳೂರಿನ ಯುವಕ ನಿತಿನ್‌, ತಾನು ಕೂಡ ಮೈದಾನಕ್ಕೆ ನುಗ್ಗುವುದಾಗಿ ವಿಡಿಯೊದಲ್ಲಿ ಹೇಳಿದ್ದ. ಇದರಿಂದ ಪಂದ್ಯದ ವೇಳೆ ಸಮಸ್ಯೆಯಾಗಬಹುದು ಎಂದು ಕ್ರೀಡಾಂಗಣದ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ | RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

ಯುವಕನ ವಿಡಿಯೊ ವೈರಲ್‌ ಆದ ಬಳಿಕ ನಿಗಾ ವಹಿಸಿದ್ದ ಪೊಲೀಸರು, ಯುವಕ ಟಿಕೆಟ್‌ ಪಡೆದು ಪಂದ್ಯ ವೀಕ್ಷಿಸಲು ಶನಿವಾರ ಆಗಮಿಸಿದ್ದಾಗ ವಶಕ್ಕೆ ಪಡೆದಿದ್ದಾರೆ.

ವಿರಾಟ್‌ ಕೊಹ್ಲಿಯ ಕಾಲಿಗೆ ಬಿದ್ದಿದ್ದ ಅಭಿಯಾನಿ

ಮಾರ್ಚ್‌ನಲ್ಲಿ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂಗೆ ನುಗ್ಗಿ ವಿರಾಟ್‌ ಕೊಹ್ಲಿಯ(Virat Kohli) ಕಾಲಿಗೆ ಬಿದ್ದ ಅಭಿಯಾನಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ ಆರಂಭಿಸಲು ಸಿದ್ಧತೆ ನಡೆಸುತ್ತಿತ್ತು. ಆಗ ಕೊಹ್ಲಿ ಕ್ರೀಸ್‌ನಲ್ಲಿದ್ದರು. ಅ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿ ಪಿಚ್‌ ಕಡೆ ಬಂದು ಕೊಹ್ಲಿ ಕಾಲಿಗೆ ಬಿದ್ದು, ಆಲಿಂಗನ ಮಾಡಿದ್ದ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದು ಮೈದಾನದಿಂದ ಹೊರಹಾಕಿದ್ದರು. ಇದರ ಫೋಟೋ, ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ | RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

ರಾಯಚೂರು ಮೂಲದ ವಿರಾಟ್​ ಕೊಹ್ಲಿಯ ಅಪ್ಪಟ ಅಭಿಮಾನಿ ಕುರುಮಪ್ಪ‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಅತ ಪೊಲೀಸ್​ ವಿಚಾರಣೆ ವೇಳೆ ತನ್ನ ಮೂಲ ಹೆಸರನ್ನು ಮರೆ ಮಾಚಿ ರಂಜಿತ್ ಎಂದು ಹೇಳಿದ್ದ. ದಾಖಲೆಗಳನ್ನು ಪರಿಶೀಲಿಸುವ ವೇಳೆ ಆತ ರಂಜಿತ್​ ಅಲ್ಲ ಕುರುಮಪ್ಪ‌ ಎಂಬ ವಿಚಾರ ಬೆಳಕಿಗೆ ಬಂದಿತ್ತು. ನಂತರ ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಲಾಗಿತ್ತು.

Continue Reading
Advertisement
Dina Bhavishya
ಭವಿಷ್ಯ21 mins ago

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Pralhad Joshi
ಕರ್ನಾಟಕ5 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ5 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ5 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ6 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ6 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ6 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ7 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ7 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ8 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ14 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ16 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌