Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್ - Vistara News

ಕ್ರಿಕೆಟ್

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Kamran Akmal: ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ” ಎಂದು ಎಂದು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Kamran Akmal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಟೀಮ್​ ಇಂಡಿಯಾದ ಯುವ ವೇಗಿ ಅರ್ಶ್​ದೀಪ್​ ಸಿಂಗ್​ ವಿರುದ್ಧ ನೇರ ಪ್ರಸಾರದಲ್ಲೇ ಜನಾಂಗೀಯ ನಿಂದನೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್​ಗೆ(Kamran Akmal) ಭಾರತ ತಂಡದ ಮಾಜಿ ಸ್ಪಿನ್ನರ್​ ಹರ್ಭಜನ್​ ಸಿಂಗ್​(Harbhajan Singh) ಜಾಡಿಸಿದ್ದಾರೆ.

ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಕ್ಮಲ್​ ಅವರ ಹೇಳಿಕೆಗೆ ಹರ್ಭಜನ್​ ಸಿಂಗ್(Harbhajan Singh slams Kamran Akmal)​ ಅವರು ಟ್ವೀಟ್​ ಮಾಡಿ ತಿರುಗೇಟು ನೀಡಿದ್ದರು. ‘ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಕ್ಷಮೆ ಕೇಳಿದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.


ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತು.

ಸೂಪರ್​-8ಗೆ ಪ್ರವೇಶಿಸಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಷ್ಟೇ ಅಲ್ಲದೆ ಯುಎಸ್‌ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕು. ಅಮೆರಿಕ ಮುಂದಿನ 2 ಪಂದ್ಯಗಳಲ್ಲಿ ಸೋಲು ಕಂಡು, ಪಾಕ್​ 2 ಪಂದ್ಯ ಗೆದ್ದರೆ ಉಭಯ ತಂಡಗಳಿಗೆ ತಲಾ 4 ಅಂಕ ಆಗಲಿದೆ. ಹೀಗಾಗಿ ಪಾಕ್​ಗೆ ಕೇವಲ ಗೆಲುವು ಮಾತ್ರ ಸಾಲದು ಜತೆಗೆ ರನ್​ರೇಟ್​ ಕೂಡ ಬೇಕಾಗಿದೆ. ಅಮೆರಿಕ ಮತ್ತು ಭಾರತ ಮುಂದಿನ ಪಂದ್ಯದಲ್ಲಿ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Team India: ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಐಸಿಸಿ ಟಿ20 ವಿಶ್ವಕಪ್(T20 World Cup 2024)​ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇಂದು(ಗುರುವಾರ) ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಬಳಿಕ ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ಇದನ್ನೂ ಓದಿ Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Continue Reading

ಕ್ರೀಡೆ

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Team India: ಟಿ-20 ವಿಶ್ವಕಪ್​ನೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

VISTARANEWS.COM


on

Team India
Koo

ನವದೆಹಲಿ: ಟಿ-20 ವಿಶ್ವಕಪ್​ನೊಂದಿಗೆ ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು.

ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

ಬಾರ್ಬಡಾಸ್​ನಲ್ಲೇ ಸಿಲುಕಿದ್ದ ಆಟಗಾರರು

ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಇಂದು ಬೆಳಿಗ್ಗೆ ಭಾರತಕ್ಕೆ ಆಗಮಿಸಿತ್ತು. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ ಆಟಗಾರರು ದೆಹಲಿಗೆ ಆಗಮಿಸಿದ್ದರು. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ವಿಜಯಯಾತ್ರೆಗೆ ಸಕಲ ಸಿದ್ಧತೆ

ವಿಶ್ವಕಪ್‌ ಗೆದ್ದ ಭಾರತ ತಂಡದ ಆಟಗಾರರಿಗೆ ಮುಂಬೈನಲ್ಲಿ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತದೆ. ಇದಕ್ಕೂ ಮೊದಲು ಅಂದರೆ, ಸಂಜೆ 4 ಗಂಟೆಗೆ ಮರೀನ್‌ನಿಂದ ವಾಂಖೆಡೆ ಸ್ಟೇಡಿಯಂವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಬರಲಿದ್ದಾರೆ. ವಿಕ್ಟರಿ ಪರೇಡ್‌ನಲ್ಲಿ ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಲ್ಲರೂ ಬನ್ನಿ ಎಂಬುದಾಗಿ ರೋಹಿತ್‌ ಶರ್ಮಾ ಅವರು ಈಗಾಗಲೇ ಆಹ್ವಾನ ನೀಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ: T20 World Cup 2024: ʼವಿಶ್ವʼ ಗೆದ್ದ ನಾಯಕ ರೋಹಿತ್‌, ಕೋಚ್‌ ದ್ರಾವಿಡ್‌, ಕೊಹ್ಲಿಗೆ ಕರೆ ಮಾಡಿ ಅಭಿನಂದಿಸಿದ ಮೋದಿ

Continue Reading

ಪ್ರಮುಖ ಸುದ್ದಿ

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade: ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ.

VISTARANEWS.COM


on

Team India victory parade
Koo

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

https://twitter.com/BCCI/status/1808768308579348742

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Continue Reading

ಕ್ರೀಡೆ

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಬಾರ್ಬಡೋಸ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ಬಾರ್ಬಡೋಸ್​ನಲ್ಲಿ ತಾವು ತಂಗಿದ್ದ ಹೋಟೆಲ್​ನಲ್ಲಿ ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ(Kohli’s Breakfast Trouble) ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ಟಿ20 ವಿಶ್ವಕಪ್​ ಗೆಲುವಿನ ಬಳಿಕ ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿದ ಬೆರಿಲ್ ಚಂಡಮಾರುತದಿಂದಾಗಿ ಟೀಮ್​ ಇಂಡಿಯಾ ಆಟಗಾರರು 2 ದಿನಗಳ ಕಾಲ ಬಾರ್ಬಡೋಸ್​ನ ಹೋಟೆಲ್​ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ಕೊಹ್ಲಿ ಕಟ್ಲೆಟ್‌ ಅನ್ನು ಓವನ್​ನಲ್ಲಿ ಬಿಸಿ ಮಾಡಲು ಯತ್ನಿಸಿದ್ದಾರೆ. ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಹೋಟೆಲ್​ನಲ್ಲಿ ತಿಂಡಿ ತಿನ್ನುತ್ತಿದ್ದವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸಹೋದರನಿಂದ ಭರ್ಜರಿ ಸ್ವಾಗತ


ಟಿ20 ವಿಶ್ವಕಪ್​ ಗೆದ್ದ ಭಾರತ ತಂಡ ಆಟಗಾರರು ಇಂದು(ಗುರುವಾರ) ನವದೆಹಲಿಗೆ ಆಗಮಿಸಿದರು. ಈ ವೇಳೆ ಕೊಹ್ಲಿಯ ಸಹೋದರ ವಿಕಾಸ್​ ಕೊಹ್ಲಿ ಮತ್ತು ಅವರ ಮಕ್ಕಳು ವಿಮಾನ ನಿಲ್ದಾಣದಲ್ಲಿ ಕೊಹ್ಲಿಯನ್ನು ಸ್ವಾಗತಿಸಿದ್ದಾರೆ. ಕೊಹ್ಲಿ ಗೆದ್ದ ಪದಕವನ್ನು ಕೊರಳಿಗೆ ಹಾಕಿ ಸಂಭ್ರಮಿಸಿದರು. ಈ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿತ್ತು. ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದರು. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Continue Reading
Advertisement
Om Birla
ದೇಶ2 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ3 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ11 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ11 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest13 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್20 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Kalki 2898 AD
ಸಿನಿಮಾ23 mins ago

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

Costliest City
ದೇಶ27 mins ago

Costliest City: ಮುಂಬಯಿ ಈಗ ಭಾರತದ ಅತ್ಯಂತ ದುಬಾರಿ ನಗರ; ಬೆಂಗಳೂರಿಗೆ ಎಷ್ಟನೇ ಸ್ಥಾನ?

Actor Darshan
ಕರ್ನಾಟಕ33 mins ago

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Team India
ಕ್ರೀಡೆ33 mins ago

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ11 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ2 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌