Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ - Vistara News

ಕ್ರಿಕೆಟ್

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

Kannadiga quota: ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

VISTARANEWS.COM


on

Kannadiga quota
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ(Kannadiga quota) ಶೇ.50 ಹಾಗೂ ಆಡಳಿತಾತ್ಮಕವಲ್ಲದ(Karnataka Jobs Reservation) ಹುದ್ದೆಗಳಲ್ಲಿ ಶೇ.75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಆರ್​ಸಿಬಿ(RCB Reservation) ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಹೌದು, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಇವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್​ ಕೂರಿಸಿಯೇ ಬಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ RCB: ಆರ್​ಸಿಬಿ ಕಪ್​ ಗೆಲ್ಲದಿರಲು ನೈಜ ಕಾರಣ ತಿಳಿಸಿದ ತಂಡದ ಮಾಜಿ ಆಟಗಾರ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳಾದ ಮೋಹನ್ ದಾಸ್ ಪೈ,ಕಿರಣ್ ಮಜುಂದಾರ್ ಅವರು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಸೂದೆಯಲ್ಲೇನಿದೆ?

ಈ ಮಸೂದೆಯಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ. 50ರಷ್ಟು ಮತ್ತು ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75ರಷ್ಟು ಸ್ಥಳೀಯರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುತ್ತದೆ. ಸಾಕಷ್ಟು ಅರ್ಹ ಅಭ್ಯರ್ಥಿಗಳು ಇಲ್ಲದೇ ಇದ್ದರೆ ಸರ್ಕಾರದ ಸಹಯೋಗದೊಂದಿಗೆ ಉದ್ಯಮವು ಮೂರು ವರ್ಷಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ತರಬೇತಿ ನೀಡಿ ಅವರನ್ನು ತೊಡಗಿಸಿಕೊಳ್ಳಬೇಕು. ಪ್ರಸ್ತಾವಿತ ಕಾನೂನಿನ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಉದ್ಯಮಕ್ಕೆ ಮೂರು ವರ್ಷಗಳ ಕಾಲಾವಕಾಶ ನೀಡಲು ಸರ್ಕಾರ ಯೋಜನೆ ರೂಪಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Sri Lanka Tour: ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

VISTARANEWS.COM


on

Sri Lanka Tour
Koo

ನವದೆಹಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ(Sri Lanka Tour) ಗುರುವಾರ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಏಕದಿನ ತಂಡದಿಂದ ಸಂಜು ಸ್ಯಾಮ್ಸನ್​(Sanju Samson) ಮತ್ತು ಅಭಿಷೇಕ್​ ಶರ್ಮ(Abhishek Sharma) ಅವರನ್ನು ಸರಣಿಗೆ ಆಯ್ಕೆ ಮಾಡದ್ದಕ್ಕೆ ಸಂಸದ ಶಶಿ ತರೂರ್(Member of Parliament Shashi Tharoor) ಆಯ್ಕೆ ಸಮಿತಿ ಮತ್ತು ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸ್ಯಾಮ್ಸನ್ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಅಭಿಷೇಕ್ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ತಮ್ಮ ನಿರ್ಭೀತ ಬ್ಯಾಟಿಂಗ್‌ನಿಂದ ಎಲ್ಲರನ್ನೂ ಆಕರ್ಷಿಸಿದ್ದರು. ಆದರೂ ಕೂಡ ಈ ಪ್ರತಿಭಾನ್ವಿತ ಆಟಗಾರರನ್ನು ಕೈಬಿಟ್ಟಿರುವುದು ನಿಜ್ಜಕ್ಕೂ ಬೇಸರದ ಸಂಗತಿ ಎಂದು ತರೂರ್(Shashi Tharoor)​ ಹೇಳಿದ್ದಾರೆ.

“ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದ ಆಯ್ಕೆ ಕುತೂಹಲಕಾರಿಯಾಗಿದೆ. ತಮ್ಮ ಕೊನೆಯ ಏಕದಿನದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್​ ಅವರನ್ನು ಏಕದಿನಕ್ಕೆ ಆಯ್ಕೆ ಮಾಡಲಾಗಿಲ್ಲ. ಜಿಂಬಾಬ್ವೆ ಟಿ20 ಸರಣಿಯಲ್ಲಿ ವೇಗದ ಶತಕ ಬಾರಿಸಿದ್ದ ಅಭಿಷೇಕ್​ ಶರ್ಮ ಕೂಡ ಆಯ್ಕೆಯಾಗಿಲ್ಲ. ಅಪರೂಪಕ್ಕೊಮ್ಮೆ ಆಯ್ಕೆಯಾದರು, ತಂಡಕ್ಕೆ ಶುಭವಾಗಲಿ,” ಎಂದು ತರೂರ್ ತಂಡದ ಆಟಗಾರರ ಪಟ್ಟಿಯನ್ನು ಹಂಚಿಕೊಂಡು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೂ ಮೊದಲು ಭಾರತ ತಂಡ ಕೆಲವೇ ಏಕದಿನ ಪಂದ್ಯಗಳನ್ನು ಮಾತ್ರ ಆಡುತ್ತಿದೆ. ಹೆಚ್ಚಾಗಿ ಟಿ20 ಸರಣಿ ಮಾತ್ರ ಆಡಲಿದೆ. ಕಡಿಮೆ ಏಕದಿನ ಪಂದ್ಯ ಇರುವ ಕಾರಣ ಅನುಭವಿ ಆಟಗಾರರು ಈ ಪ್ರವಾಸದಲ್ಲಿ ಪಾಲ್ಗೊಳ್ಳಬೇಕು ಎಂದು ನೂತನ ಕೋಚ್​ ಗೌತಮ್ ಗಂಭೀರ್‌ ಖಡಕ್​ ಎಚ್ಚರಿಕೆ ನೀಡಿದ ಕಾರಣ ವಿಶ್ರಾಂತಿಯಲ್ಲಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಮತ್ತು ರವೀಂದ್ರ ಜಡೇಜಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ತಂಡಕ್ಕೆ ಮರಳಿದ್ದಾರೆ.

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

Continue Reading

ಕ್ರೀಡೆ

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Hardik Pandya: ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

VISTARANEWS.COM


on

Hardik Pandya
Koo

ಮುಂಬಯಿ: ಟೀಮ್​ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic)​ ಅವರಿಗೆ ವಿಚ್ಛೇದನ ನೀಡುವ ಮೂಲಕ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದಾರೆ. ಪತ್ನಿಗೆ ವಿಚ್ಛೇದನ ನೀಡಿರುವ ವಿಚಾರವನ್ನು ಪಾಂಡ್ಯ ಗುರುವಾರ ಅಧಿಕೃತ ಪ್ರಕಟನೆಯೊಂದಿಗೆ ತಿಳಿಸಿದ್ದರು. ಇದೀಗ ಪಾಂಡ್ಯ ತನ್ನ ಆಸ್ತಿಯಲ್ಲಿ ಪತ್ನಿಗೆ ಜೀವನಾಂಶವಾಗಿ ಶೇ. 70 ಪ್ರತಿಶತವನ್ನು ಬಿಟ್ಟುಕೊಡಬೇಕು ಎನ್ನುವ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ತಾಯಿಯ ಹೆಸರಿನಲ್ಲಿ ಆಸ್ತಿ ಮಾಡಿದ ಪಾಂಡ್ಯ


ಹಾರ್ದಿಕ್​ ಪಾಂಡ್ಯ ತಮ್ಮ ಎಲ್ಲ ಆಸ್ತಿಯನ್ನು ತಾಯಿಯ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್​ ಮಾಡಿದ್ದರು. ಹಿಂದೊಮ್ಮೆ ಸಂದರ್ಶನದಲ್ಲಿ ಮುಕ್ತವಾಗಿ ಮಾತನಾಡಿದ್ದ ಪಾಂಡ್ಯ “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ Hardik Pandya: ಫಿಟ್ನೆಸ್‌ ಬಗ್ಗೆ ಪ್ರಶ್ನೆ ಮಾಡಿದವರಿಗೆ ಸಿಕ್ಸ್​ ಪ್ಯಾಕ್​ ಮೂಲಕ ತಿರುಗೇಟು ಕೊಟ್ಟ ಹಾರ್ದಿಕ್​ ಪಾಂಡ್ಯ

ಸದ್ಯ ಪಾಂಡ್ಯ ಅವರು ಪತ್ನಿಗೆ ಜೀವನಾಂಶ ನೀಡುವ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳು ಸುಳ್ಳಾಗಿದೆ. ನತಾಶ ಇದುವರೆಗೆ ಹಾರ್ದಿಕ್‌ ಅವರಿಂದ ಜೀವನಾಂಶವಾಗಿ ಯಾವುದೇ ರೀತಿಯ ಪಾಲು ಕೇಳಿಲ್ಲ. ಹೀಗಾಗಿ ಪಾಂಡ್ಯ ಮತ್ತು ನತಾಶ ಜೀವನಾಂಶದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ.

“ನಾಲ್ಕು ವರ್ಷಗಳ ಕಾಲ ಒಂದಾಗಿ ಜೀವನ ನಡೆಸಿದ್ದ ನತಾಶಾ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸಿದ್ದೇವೆ. ಇದು ನಮ್ಮಿಬ್ಬರ ಹಿತಾಸಕ್ತಿಗಾಗಿ ಎಂದು ನಾವು ನಂಬುತ್ತೇವೆ. ಇದು ಕಠಿಣ ನಿರ್ಧಾರವಾಗಿದೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಹೊಂದಿದ್ದೇವೆ. ಮಗ ನಮ್ಮಿಬ್ಬರ ಜೀವನದ ಕೇಂದ್ರದಲ್ಲಿ ಮುಂದುವರಿಯುತ್ತಾನೆ” ಎಂದು ಬರೆದುಕೊಂಡು ಪಾಂಡ್ಯ ವಿಚ್ಛೇದನವನ್ನು ಖಚಿತಪಡಿಸಿದ್ದರು.

ಮಗ ಯಾರ ಬಳಿ ಇರುತ್ತಾನೆ?


ದಂಪತಿ ಬೇರೆಯಾದ ಬಳಿಕ ಮಗ ಯಾರ ಬಳಿಯಿರುತ್ತಾನೆ ಎಂಬ ಪ್ರಶ್ನೆಗಳಿಗೂ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಕೆಯಲ್ಲಿ ಉತ್ತರಿಸಿದ್ದಾರೆ. “ನಾನು ಮತ್ತು ನತಾಶಾ ಇಬ್ಬರೂ ಪುತ್ರ ಅಗಸ್ತ್ಯನನ್ನು ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರೀಡೆ

Womens Asia Cup 2024: ಇಂದು ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ

Womens Asia Cup 2024: ಪುರುಷರ ಕ್ರಿಕೆಟ್​ನಂತೆಯೇ ಮಹಿಳಾ ಕ್ರಿಕೆಟ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ(India Women vs Pakistan Women) ವಿರುದ್ಧ ಉತ್ತಮ ದಾಖಲೆ ಹೊಂದಿದೆ. ಇದುವರೆಗೆ 14 ಟಿ20 ಪಂದ್ಯಗಳಲ್ಲಿ 11ರಲ್ಲಿ ಗೆಲುವು ಸಾಧಿಸಿದೆ.

VISTARANEWS.COM


on

Womens Asia Cup 2024
Koo

ಡಂಬುಲ: ಇಂದು ನಡೆಯುವ ಮಹಿಳಾ ಏಷ್ಯಾ ಕಪ್​ ಟಿ20 ಕ್ರಿಕೆಟ್(Womens Asia Cup 2024)​ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ(India Women) ಮತ್ತು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ(Pakistan Women) ಸೆಣಸಾಟ ನಡೆಯಲಿದೆ. ಈ ಪಂದ್ಯ ರಾತ್ರಿ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಯುಎಇ- ನೇಪಾಲ ಎದುರಾಗಲಿವೆ.

ಇದೇ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನ ಸಿದ್ಧತೆಗೆ ಈ ಪಂದ್ಯಾವಳಿ ಎಲ್ಲ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಒಟ್ಟು 8 ತಂಡಗಳು ಈ ಬಾರಿ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುತ್ತಿವೆ. ಏಷ್ಯಾ ಕಪ್‌ ಟಿ20(Womens Asia Cup T20) ಮಾದರಿಯಲ್ಲಿ ಆಡಿದ 20 ಪಂದ್ಯಗಳಲ್ಲಿ ಭಾರತ 17ರಲ್ಲಿ ಜಯಭೇರಿ ಮೊಳಗಿಸಿದೆ. 2022ರಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್‌ ಆಗಿತ್ತು. ಸದ್ಯ ಹಾಲಿ ಚಾಂಪಿಯನ್​ ಆಗಿರುವ ಭಾರತ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸಿಕೊಂಡಿದೆ.

ಪುರುಷರ ಕ್ರಿಕೆಟ್​ನಂತೆಯೇ ಮಹಿಳಾ ಕ್ರಿಕೆಟ್​ನಲ್ಲಿಯೂ ಭಾರತ ತಂಡ ಪಾಕಿಸ್ತಾನ(India Women vs Pakistan Women) ವಿರುದ್ಧ ಉತ್ತಮ ದಾಖಲೆ ಹೊಂದಿದೆ. ಇದುವರೆಗೆ 14 ಟಿ20 ಪಂದ್ಯಗಳಲ್ಲಿ 11ರಲ್ಲಿ ಗೆಲುವು ಸಾಧಿಸಿದೆ. ಏಷ್ಯಾ ಕಪ್‌ನಲ್ಲಿ ಒಟ್ಟು 6 ಸಲ ಮುಖಾಮುಖೀಯಾಗಿದ್ದು, ಭಾರತ ಐದನ್ನು ಗೆದ್ದಿದೆ. ಭಾರತ ಇತ್ತೀಚೆಗೆ ತವರಿನ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿತ್ತು. ಹೀಗಾಗಿ ಇದೇ ಪ್ರದರ್ಶನ ಏಷ್ಯಾಕಪ್​ನಲ್ಲಿಯೂ ಮೂಡಿಬರಬಹುದೆಂದು ನಿರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ INDW vs PAKW: ನಾಳೆಯಿಂದ ಮಹಿಳಾ ಏಷ್ಯಾ ಕಪ್​; ಭಾರತಕ್ಕೆ ಪಾಕ್​ ಎದುರಾಳಿ

ಭಾರತ ಸಮರ್ಥ ತಂಡ


ಹರ್ಮನ್​ಪ್ರೀತ್​ ಸಾರಥ್ಯದ ಭಾರತ ತಂಡ ಬ್ಯಾಟಿಂಗ್,​ ಬೌಲಿಂಗ್‌ ಮತ್ತು ಫೀಲ್ಡಿಂಗ್​ ಹೀಗೆ ಎಲ್ಲ ವಿಭಾಗದಲ್ಲಿಯೂ ಸಮರ್ಥವಾಗಿದೆ. ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ, ಶಫಾಲಿ ವರ್ಮ, ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ ರೋಡ್ರಿಗಸ್​, ದೀಪ್ತಿ ಶರ್ಮ ಮತ್ತು ರಿಚಾ ಘೋಷ್​ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಬೌಲಿಂಗ್​ನಲ್ಲಿ ಪೇಸ್‌ ಹಾಗೂ ಸ್ಪಿನ್‌ ವಿಭಾಗಗಳೆರಡೂ ಬಲಿಷ್ಠ. ಪೂಜಾ ವಸ್ತ್ರಾಕರ್‌, ರಾಧಾ ಯಾದವ್‌, ಆಲ್‌ರೌಂಡರ್‌ ದೀಪ್ತಿ ಶರ್ಮ ಭಾರತದ ಬೌಲಿಂಗ್‌ ಅಸ್ತ್ರವಾಗಿದ್ದಾರೆ. ಕನ್ನಡಿತಿ ಶ್ರೇಯಾಂಕಾ ಪಾಟೀಲ್‌ ಕೂಡ ತಂಡದಲ್ಲಿದ್ದು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಪಾಕಿಸ್ತಾನ ತಂಡ ಕೂಡ ಯುವ ಮತ್ತು ಅನುಭವಿ ಆಟಗಾರ್ತಿಯರ ಸಮಿಶ್ರಣದೊಂದಿಗೆ ಬಲಿಷ್ಠವಾಗಿ ಗೋಚರಿಸಿದೆ. ನಾಯಕಿ  ನಿದಾ ದರ್‌, ಇರಮ್‌ ಜಾವೇದ್‌, ಒಮೈಮಾ ಸೊಹೈಲ್‌, ಸಯ್ಯದ್‌ ಅರೂಬ್‌ ಶಾ ತಂಡದ ಪ್ರಮುಖ ಆಟಗಾರ್ತಿಯರಾಗಿದ್ದಾರೆ.

ಉಭಯ ತಂಡಗಳು


ಭಾರತ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಪಾಕಿಸ್ತಾನ: ನಿದಾ ದಾರ್ (ನಾಯಕಿ), ಇರಾಮ್ ಜಾವೇದ್, ಸಾದಿಯಾ ಇಕ್ಬಾಲ್, ಅಲಿಯಾ ರಿಯಾಜ್, ಡಯಾನಾ ಬೇಗ್, ಫಾತಿಮಾ ಸನಾ, ಗುಲ್ ಫಿರೋಜಾ, ಮುನೀಬಾ ಅಲಿ, ಸಿದ್ರಾ ಅಮೀನ್, ನಜಿಹಾ ಅಲ್ವಿ, ಸೈಯದಾ ಅರೂಬ್ ಶಾ, ನಶ್ರಾ ಸುಂಧು, ತಸ್ಮಿಯಾ ರುಬಾಬ್, ಒಮೈಮಾ ಸೊಹೈಲ್, ತುಬಾ ಹಸನ್

Continue Reading

ಪ್ರಮುಖ ಸುದ್ದಿ

Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

Natasa Stankovic: ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನೃತ್ಯಗಾರ್ತಿ ನತಾಶಾ ಸ್ಟಾಂಕೋವಿಕ್ ಅವರು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರನ್ನು ಮೇ 31, 2020 ರಂದು ವಿವಾಹವಾಗಿದ್ದರು. ಫೆಬ್ರವರಿ 2023 ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಆಚರಣೆಗಳ ಪ್ರಕಾರ ದಂಪತಿಗಳು ತಮ್ಮ ದಾಂಪತ್ಯದ ಪ್ರತಿಜ್ಞೆ ಸ್ವೀಕರಿಸಿದ್ದರು.

VISTARANEWS.COM


on

Natasa Stankovic
Koo

ಬೆಂಗಳೂರು: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಅವರ ಜತೆಗಿನ ದಾಂಪತ್ಯದಿಂದ ಬೇರ್ಪಡುವುದಾಗಿ ನಟಿ ಹಾಗೂ ಮಾಡೆಲ್​ ನತಾಶಾ ಸ್ಟಾಂಕೋವಿಕ್ (Natasa Stankovic) ಹೇಳಿದ್ದಾರೆ. ಗುರುವಾರ ಸಂಜೆ, ರೂಪದರ್ಶಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇನ್ನು ನಾವಿಬ್ಬರೂ ಒಟ್ಟಿಗೆ ಇಲ್ಲ ಎಂದು ದೃಢಪಡಿಸಿದ್ದಾರೆ. ಇದು ನಮಗಿಬ್ಬರಿಗೂ ” ನಿರ್ಧಾರ” ಎಂದು ಅವರು ಹೇಳಿಕೊಂಡಿದ್ದಾರೆ. ತಮ್ಮ 3 ವರ್ಷದ ಮಗ ಅಗಸ್ತ್ಯನಿಗೆ ಸಹ-ಪೋಷಕರಾಗಿ ಮುಂದುವರಿಯುತ್ತೇವೆ ಎಂದು ಹಂಚಿಕೊಂಡಿದ್ದಾರೆ.

“4 ವರ್ಷಗಳ ಕಾಲ ಜತೆಯಾಗಿ ಇದ್ದ ಹಾರ್ದಿಕ್ (Hardik Pandya) ಮತ್ತು ನಾನು ಪರಸ್ಪರ ಬೇರ್ಪಡಲು ನಿರ್ಧರಿಸಿದ್ದೇವೆ. ನಾವು ಜತೆಯಾಗಿ ಇರಲು ನಮ್ಮ ಅತ್ಯುತ್ತಮ ಪ್ರಯತ್ನ ಮಾಡಿದ್ದೇವೆ ಮತ್ತು ನಮ್ಮ ಎಲ್ಲವನ್ನೂ ಅರ್ಪಿಸಿದ್ದೇವೆ. ಇದು ನಮ್ಮಿಬ್ಬರಿಗೂ ಒಳ್ಳೆಯದನ್ನು ಮಾಡಿದೆ ಎಂದು ನಾವು ನಂಬುತ್ತೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ” ಎಂದು ನತಾಶಾ (Natasa Stankovic) ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾವು ಅಗಸ್ತ್ಯನನ್ನು ಪಡೆದಿದ್ದೇವೆ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ ಮತ್ತು ಅವನ ಸಂತೋಷಕ್ಕಾಗಿ ನಾವು ನಮ್ಮಿಂದ ಸಾಧ್ಯವಾದ ಎಲ್ಲವನ್ನೂ ನೀಡುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು

ಮಾಜಿ ಬಿಗ್ ಬಾಸ್ ಸ್ಪರ್ಧಿ ಮತ್ತು ನೃತ್ಯಗಾರ್ತಿ ನತಾಶಾ ಸ್ಟಾಂಕೋವಿಕ್ ಅವರು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಅವರನ್ನು ಮೇ 31, 2020 ರಂದು ವಿವಾಹವಾಗಿದ್ದರು. ಫೆಬ್ರವರಿ 2023 ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಆಚರಣೆಗಳ ಪ್ರಕಾರ ದಂಪತಿಗಳು ತಮ್ಮ ದಾಂಪತ್ಯದ ಪ್ರತಿಜ್ಞೆ ಸ್ವೀಕರಿಸಿದ್ದರು.

ಇದನ್ನೂ ಓದಿ: Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಈ ವರ್ಷದ ಮೇ ತಿಂಗಳಲ್ಲಿ ರೂಪದರ್ಶಿ ತನ್ನ ಇನ್ಸ್ಟಾಗ್ರಾಮ್ ಹ್ಯಾಂಡಲ್ನಿಂದ ‘ಪಾಂಡ್ಯ’ ಹೆಸರನ್ನು ತೆಗೆದುಹಾಕಿದ್ದನ್ನು ನೆಟ್ಟಿಗರು ಗಮನಿಸಿದ್ದರು. ಅವರ ಪ್ರತ್ಯೇಕತೆಯ ಬಗ್ಗೆ ಊಹಾಪೋಹಗಳು ಪ್ರಾರಂಭವಾಗಿದ್ದವು. ನಂತರ, “ನತಾಸಾ ಮತ್ತು ಹಾರ್ದಿಕ್ ಬೇರ್ಪಟ್ಟಿದ್ದಾರೆಯೇ?” ಎಂಬ ರೆಡ್ಡಿಟ್ ಪೋಸ್ಟ್ ವೈರಲ್ ಆಗಿತ್ತು. ಇಬ್ಬರೂ ಪರಸ್ಪರ ಜತೆಯಾಗಿ ಚಿತ್ರಗಳನ್ನು ಪೋಸ್ಟ್ ಮಾಡುತ್ತಿಲ್ಲ ಎಂದು ಹೇಳಲಾಗಿತ್ತು. ಐಪಿಎಲ್ 2024 ಪಂದ್ಯಗಳಿಂದ ನತಾಶಾ ಮೈದಾನದ ಕಡೆಗೆ ಸುಳಿದಿರಲಿಲ್ಲ.

ಏತನ್ಮಧ್ಯೆ, ನತಾಶಾ ತನ್ನ ಊರಾದ ಸೆರ್ಬಿಯಾಕ್ಕೆ ಸ್ಥಳಾಂತರಗೊಂಡಿದ್ದರು. ಬುಧವಾರ, ಅವರು ತಮ್ಮ ಅಗಸ್ತ್ಯಮ ಜತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರು ಪಾಪರಾಜಿಗಳನ್ನು ನಿರ್ಲಕ್ಷಿಸಿದ್ದರು ಮತ್ತು ಕ್ಯಾಮೆರಾಗಳಿಗೆ ಪೋಸ್ ನೀಡುವುದನ್ನು ತಪ್ಪಿಸಿಕೊಂಡಿದ್ದರು.

Continue Reading
Advertisement
UT Khader karnataka assembly live
ಪ್ರಮುಖ ಸುದ್ದಿ3 mins ago

Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Sri Lanka Tour
ಕ್ರೀಡೆ17 mins ago

Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

Gold Rate Today
ಚಿನ್ನದ ದರ20 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

Tharun Sudhir gives Darshan a wedding invitation card and visits Jail
ಟಾಲಿವುಡ್27 mins ago

Tharun Sudhir: ದರ್ಶನ್‌ಗೆ ಮದುವೆ ಇನ್ವಿಟೇಶನ್‌ ಕಾರ್ಡ್‌ ಕೊಟ್ಟು, ಆಶೀರ್ವಾದ ಪಡೆಯಲು ಜೈಲಿಗೆ ಭೇಟಿ ಕೊಡಲಿದ್ದಾರಂತೆ ತರುಣ್ ಸುಧೀರ್

Train services
ಬೆಂಗಳೂರು33 mins ago

Train services: ವಿವಿಧ ಕಾಮಗಾರಿ ಹಿನ್ನೆಲೆ ಈ ಮಾರ್ಗದ ರೈಲುಗಳು ಸಂಚಾರ ಭಾಗಶಃ ರದ್ದು

road accident mbbs student death
ಬೆಂಗಳೂರು44 mins ago

Road Accident: ನಿರ್ಲಕ್ಷ್ಯದಿಂದ ಓಡಿಸಿ ಎಂಬಿಬಿಎಸ್‌ ವಿದ್ಯಾರ್ಥಿಯ ಜೀವ ತೆಗೆದ ಟ್ಯಾಂಕರ್ ಚಾಲಕ

Narendra Modi
ರಾಜಕೀಯ1 hour ago

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Hardik Pandya
ಕ್ರೀಡೆ1 hour ago

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Doda Attack
ಪ್ರಮುಖ ಸುದ್ದಿ1 hour ago

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Urvashi Rautela Conversation With Manager 'Leaked',
ಬಾಲಿವುಡ್2 hours ago

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ20 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌