KL Rahul: ಆರ್‌ಸಿಬಿ ಸೇರದಂತೆ ಕೆ.ಎಲ್​ ರಾಹುಲ್‌ಗೆ 25 ಕೋಟಿ ಆಫರ್ ಮಾಡಿದ ಫ್ರಾಂಚೈಸಿ! - Vistara News

ಕ್ರಿಕೆಟ್

KL Rahul: ಆರ್‌ಸಿಬಿ ಸೇರದಂತೆ ಕೆ.ಎಲ್​ ರಾಹುಲ್‌ಗೆ 25 ಕೋಟಿ ಆಫರ್ ಮಾಡಿದ ಫ್ರಾಂಚೈಸಿ!

KL Rahul: ಅಜ್ನ್ಯೂಸ್ ಎಂಬ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ ರಾಹುಲ್​ ಈ ಬಾರಿಯ ಮೆಗಾ ಹರಾಜಿನಲ್ಲಿ(IPL 2025) ಆರ್‌ಸಿಬಿಯಿಂದ ದೂರ ಉಳಿಯಲು ಸ್ವತಃ ಆರ್​ಸಿಬಿ ಫ್ರಾಂಚೈಸಿಯೇ 25 ಕೋಟಿ ಆಫರ್ ಮಾಡಿದೆ ಎಂದು ತಿಳಿಸಿದೆ.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟೀಮ್​ ಇಂಡಿಯಾದ ಬ್ಯಾಟರ್​, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಮತ್ತೆ ತವರು ತಂಡವಾದ ಆರ್​ಸಿಬಿ(RCB) ತಂಡಕ್ಕೆ ಸೇರುವ ಪ್ರಯತ್ನ ನಡೆಸುತ್ತಿದ್ದರೆ, ಅತ್ತ ಫ್ರಾಂಚೈಸಿಯೇ ಆರ್‌ಸಿಬಿಯಿಂದ ದೂರ ಉಳಿಯಲು ರಾಹುಲ್‌ಗೆ 25 ಕೋಟಿ ಆಫರ್ ಮಾಡಿದೆ ಎಂದು ವರದಿಯಾಗಿದೆ.

ಹೌದು, ಅಜ್ನ್ಯೂಸ್ ಎಂಬ ಸುದ್ದಿ ಸಂಸ್ಥೆ ವರದಿ ಮಾಡಿರುವ ಪ್ರಕಾರ ರಾಹುಲ್​ ಈ ಬಾರಿಯ ಮೆಗಾ ಹರಾಜಿನಲ್ಲಿ(IPL 2025) ಆರ್‌ಸಿಬಿಯಿಂದ ದೂರ ಉಳಿಯಲು ಸ್ವತಃ ಆರ್​ಸಿಬಿ ಫ್ರಾಂಚೈಸಿಯೇ 25 ಕೋಟಿ ಆಫರ್ ಮಾಡಿದೆ ಎಂದು ತಿಳಿಸಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮುಫದ್ದಲ್ ವೋಹ್ರಾ ಎನ್ನುವ ನೆಟ್ಟಿಗ ಈ ವಿಚಾರವನ್ನು ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈ ಸುದ್ದಿ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಆರ್​ಸಿಬಿ ಸೇರದಂತೆ ರಾಹುಲ್​ಗೆ ಫ್ರಾಂಚೈಸಿಯೇ ಇಷ್ಟು ದೊಡ್ಡ ಮೊತ್ತವನ್ನು ನೀಡಲು ಮುಂದಾಗಿರುವುದೆ ಏಕೆ ಎನ್ನುವ ಅನುಮಾನ ಹುಟ್ಟಿಕೊಂಡಿದೆ.

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಹೀಗಾಗಿ ರಾಹುಲ್​ 18ನೇ ಆವೃತ್ತಿಯಲ್ಲಿ ಆರ್​ಸಿಬಿ ಸೇರಲಿದ್ದಾರೆ ಎನ್ನಲಾಗಿತ್ತು. ಅಭಿಮಾನಿಗಳು ಕೂಡ ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ಆರ್​ಸಿಬಿಗೆ ಸ್ವಾಗತ ಎನ್ನುವ ಪೋಸ್ಟರ್​ ಕೂಡ ಹಂಚಿಕೊಂಡಿದ್ದರು. ಆದರೆ ಈಗ ಫ್ರಾಂಚೈಸಿಯೇ ಅವರನ್ನು ತಂಡ ಸೇರದಂತೆ ಹಣ ನೀಡಲು ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ IPL 2025: ಫ್ರಾಂಚೈಸಿಗಳ ಒತ್ತಾಯಕ್ಕೆ ಮಣಿದು ಇಷ್ಟು ಆಟಗಾರರ ರಿಟೇನ್​ಗೆ ಅವಕಾಶ ನೀಡಲಿದೆ ಬಿಸಿಸಿಐ

ಕಳೆದ ಆವೃತ್ತಿಯಲ್ಲಿ ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ರಾಹುಲ್​ ಬೇಸರಗೊಂಡಿದ್ದರು. ಈ ವೇಳೆಯೇ ರಾಹುಲ್ ಮುಂದಿನ ಆವೃತ್ತಿಯಲ್ಲಿ ಲಕ್ನೋ ತೊರೆಯುವುದು ಬಹುತೇಕ ಖಚಿತ ಎನ್ನಲಾಗಿತ್ತು. ಒಟ್ಟಾರೆ ಟೀಮ್​ ಇಂಡಿಯಾ ಪರ ಕೂಡ ಫಾರ್ಮ್​ ಕಳೆದುಕೊಂಡಿರುವ ರಾಹುಲ್​ ಈ ಬಾರಿ ಯಾವ ತಂಡದ ಪಾಲಾಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಇನ್ನೊಂದು ಮೂಲಗಳ ಪ್ರಕಾರ ರಿಂಕು ಸಿಂಗ್​ ಅಥವಾ, ಹಾರ್ದಿಕ್​ ಪಾಂಡ್ಯ ಅವರನ್ನು ಖರೀದಿಸಲು ಆರ್​ಸಿಬಿ ಯೋಚಿಸಿದೆ ಎನ್ನಲಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಮ್ಯಾಚ್​ ಫಿನಿಶಿಂಗ್​ ಮಾಡುವ ಆಟಗಾರ ಇಲ್ಲದ್ದು ತಂಡಕ್ಕೆ ಇದುವರೆಗೂ ಹಿನ್ನಡೆಯಾಗಿತ್ತು. ಇದೇ ಕಾರಣಕ್ಕೆ ಪಾಂಡ್ಯ ಅಥವಾ ರಿಂಕು ಅವರನ್ನು ಖರೀದಿಸಲು ಮುಂದಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಐಪಿಎಲ್​ನ ನೆಚ್ಚಿನ ಎದುರಾಳಿ ತಂಡವನ್ನು ಹೆಸರಿಸಿದ ವಿರಾಟ್​ ಕೊಹ್ಲಿ

Virat Kohli: ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

VISTARANEWS.COM


on

Virat Kohli
Koo

ಮುಂಬಯಿ: ಐಪಿಎಲ್​ ಟೂರ್ನಿಯ(IPL) ಇದುವರೆಗಿನ 17 ಆವೃತ್ತಿಗಳಲ್ಲಿಯೂ ಆರ್​ಸಿಬಿ(RCB) ಒಂದೇ ತಂಡದ ಪರ ಆಡುತ್ತಿರುವ ವಿರಾಟ್​ ಕೊಹ್ಲಿ(Virat Kohli) ತಮ್ಮ ನೆಚ್ಚಿನ ಎದುರಾಳಿ ತಂಡ ಯಾವುದು ಎಂದು ಹೇಳಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿ 16 ವರ್ಷ ತುಂಬಿದ ಹಿನ್ನಲೆಯಲ್ಲಿ ನಡೆಸಿದ್ದ ಸಂದರ್ಶನದಲ್ಲಿ ಕೊಹ್ಲಿ ಈ ವಿಚಾರವನ್ನು ಬಹಿರಂಗಪಡಿಸಿದರು.

ಆಗಸ್ಟ್​ 18 ರಂದು ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅಡಿ ಇರಿಸಿ 16 ವರ್ಷ ತುಂಬಿತ್ತು. ಇದೇ ಹಿನ್ನಲೆಯಲ್ಲಿ ಆರ್​ಸಿಬಿ ಕೊಹ್ಲಿಯೊಂದಿಗೆ ವಿಶೇಷ ಸಂದರ್ಶನ ನಡೆಸಿತ್ತು. ಈ ಸಂದರ್ಶನದಲ್ಲಿ ಕೊಹ್ಲಿಗೆ ನಿಮ್ಮ ನೆಚ್ಚಿನ ಐಪಿಎಲ್​ ಎದುರಾಳಿ ತಂಡ ಯಾವುದೆಂದು ಪ್ರಶ್ನೆ ಕೇಳಲಾಯಿತು. ಎಲ್ಲರು ಕೊಹ್ಲಿ ಚೆನ್ನೈ ಅಥವಾ ಮುಂಬೈ ಇಂಡಿಯನ್ಸ್​ ಆಯ್ಕೆ ಮಾಡುತ್ತಾರೆ ಎಂದು ನಿರೀಕ್ಷೆ ಮಾಡಿದ್ದರು. ಆದರೆ ಈ ನಿರೀಕ್ಷೆ ಹುಸಿಯಾಗಿದೆ. ಕೊಹ್ಲಿಯ ನೆಚ್ಚಿನ ಎದುರಾಳಿ ತಂಡ ಮೂರು ಬಾರಿಯ ಚಾಂಪಿಯನ್​ ಕೆಕೆಆರ್​.

ಹೌದು, ಕೊಹ್ಲಿ ಕೆಕೆಆರ್​ ತಂಡವನ್ನು ತನ್ನ ನೆಚ್ಚಿನ ಎದುರಾಳಿ ತಂಡವಾಗಿ ಆಯ್ಕೆ ಮಾಡಿಕೊಳ್ಳಲು ಕೂಡ ಒಂದು ಕಾರಣವಿದೆ. ಏಕೆಂದರೆ ಕೊಹ್ಲಿ ತಮ್ಮ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದು ಕೆಕೆಆರ್​ ವಿರುದ್ಧ. ಇದೇ ಕಾರಣದಿಂದ ಕೊಹ್ಲಿಗೆ ಕೆಕೆಆರ್​ ನೆಚ್ಚಿನ ಎದುರಾಳಿ ತಂಡವಾಗಿದೆ.

ಏಪ್ರಿಲ್ 18, 2008 ರಂದು ಆರ್‌ಸಿಬಿ ಮತ್ತು ಕೆಕೆಆರ್ ಮುಖಾಮುಖಿಯಾಗಿತ್ತು. ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆರ್​ಸಿಬಿ ಈ ಪಂದ್ಯದಲ್ಲಿ ಕೇವಲ 82 ರನ್‌ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಎದುರಾಳಿ ಕೆಕೆಆರ್​ 222 ರನ್ ಗಳಿಸಿತ್ತು.

ಒಂದೇ ಫ್ರಾಂಚೈಸಿ ಪರ ಆಡಿದ ಏಕೈಕ ಆಟಗಾರ ಎನಿಸಿಕೊಂಡಿರುವ ಕೊಹ್ಲಿ ನಾಯಕನಾಗಿ ಮತ್ತು ಆಟಗಾರನಾಗಿ ಒಟ್ಟು ಮೂರು ಸಲ ಐಪಿಎಲ್​ ಫೈನಲ್​ ಆಡಿದ್ದಾರೆ. ಆದರೆ ಒಮ್ಮೆಯೂ ಟ್ರೋಫಿ ಗೆದ್ದಿಲ್ಲ. ಮುಂದಿನ ಸಲವಾದರೂ ಕಪ್​ ಗೆಲ್ಲಲಿದೆಯಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ Virat Kohli : ಕೊಹ್ಲಿ ಕಿಂಗ್ ಅಲ್ಲ; ಭಾರತದ ಸೂಪರ್​​ ಸ್ಟಾರ್​ ಬ್ಯಾಟರ್​​ ಬಗ್ಗೆ ಕಳಪೆ ಕಾಮೆಂಟ್ ಮಾಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಮತ್ತೆ ನಾಯಕನಾಗಲಿದ್ದಾರಾ ಕೊಹ್ಲಿ?


ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. 

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Continue Reading

ಕ್ರೀಡೆ

ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

VISTARANEWS.COM


on

ICC Chairman Election
Koo

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಈ ಸುದ್ದಿ ಕೆಲವೇ ದಿನಗಳಲ್ಲಿ ನಿಜವಾಗುವ ಸಾಧ್ಯತೆ ಕಂಡು ಬಂದಿದೆ. ಹೌದು, ಐಸಿಸಿ ಹಾಲಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ(Greg Barclay) ಮೂರನೇ ಅವಧಿಗೆ ಮುಂದುವರಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ(ICC Chairman Election) ಜಯ್ ಶಾ ಸ್ಪರ್ಧಿಸುವುದು ಖಚಿತ ಎನ್ನಲಾಗಿದೆ. ಐಸಿಸಿ ಚುನಾವಣೆ ಇದೇ ನವೆಂಬರ್​ನಲ್ಲಿ ನಡೆಯಲಿದೆ.

‘ನವೆಂಬರ್ ಅಂತ್ಯದಲ್ಲಿ ಅಧಿಕಾರಾವಧಿ ಮುಗಿದಾಗ ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ. ಮೂರನೇ ಅವಧಿಗೆ ನಿಲ್ಲುವುದಿಲ್ಲ’ ಎಂದು ಗ್ರೆಗ್ ಬಾರ್ಕ್ಲೇ ಅವರು ಈಗಾಗಲೇ ಮಂಡಳಿಗೆ ದೃಢಪಡಿಸಿದ್ದಾರೆ. ಬಾರ್ಕ್ಲೇ ಅವರು 2020 ರಲ್ಲಿ ಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ನೇಮಕವಾಗಿದ್ದರು. ಇದಾದ ಬಳಿಕ 2022 ರಲ್ಲಿ ಅವರನ್ನು ಮರು ಆಯ್ಕೆ ಮಾಡಲಾಗಿತ್ತು. ನ್ಯೂಜಿಲ್ಯಾಂಡ್ ಮೂಲದ ವಕೀಲ ಗ್ರೆಗ್ ಬಾರ್ಕ್ಲೇ ಕಳೆದ ನಾಲ್ಕು ವರ್ಷಗಳಿಂದ ಐಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ಹೇಗಿದ್ದವನು ಹೇಗಾಗಿ ಹೋದ ಕ್ರಿಕೆಟರ್ ವಿನೋದ್ ಕಾಂಬ್ಳಿ?

ರಾಜಮಾರ್ಗ ಅಂಕಣ: ಒಬ್ಬ ಅತ್ಯಂತ ಪ್ರತಿಭಾವಂತ ಕ್ರಿಕೆಟರ್ ಹೇಗೆಲ್ಲ ತನ್ನ ಬದುಕನ್ನು ಮತ್ತು ಕೆರಿಯರನ್ನು ಕೆಡಿಸಿಕೊಂಡ? ಹೇಗೆ ನೈತಿಕ ಅಧಃಪತನ ಹೊಂದಿದ? ಎಂಬುದಕ್ಕೆ ಒಂದು ಸಮರ್ಪಕ ನಿದರ್ಶನ ಕೊಡಬೇಕು ಅಂತಾದರೆ ನೀವು ವಿನೋದ್ ಕಾಂಬ್ಳಿ ಹೆಸರು ಹೇಳಬಹುದು!

VISTARANEWS.COM


on

vinod-kambli-1 ರಾಜಮಾರ್ಗ ಅಂಕಣ
Koo

ಒಬ್ಬ ಚಾಂಪಿಯನ್ ಕ್ರಿಕೆಟರ್ ಈ ರೀತಿ ನೈತಿಕ ಅಧಃಪತನ ಹೊಂದಲು ಕಾರಣವೇನು?

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ಭಾರತದ ಮಾಜಿ ಕ್ರಿಕೆಟರ್, ಬಲಿಷ್ಠ ಎಡಗೈ ದಾಂಡಿಗ ವಿನೋದ್ ಕಾಂಬ್ಳಿಗೆ (Vinod Kambli) ಸಂಬಂಧಪಟ್ಟ ಇತ್ತೀಚಿನ ಒಂದು ವಿಡಿಯೋ ನೋಡಿ ಕರುಳು ಕಿತ್ತು ಬಂತು! ಒಂದು ಬೈಕಿಗೆ ಸ್ಟ್ಯಾಂಡ್ ಹಾಕಲೂ ಆಗದೆ ದೇಹದ ಬ್ಯಾಲೆನ್ಸ್ ತಪ್ಪಿದಾಗ ಆತನನ್ನು ಕೆಲವು ದಾರಿಹೋಕರು ಎತ್ತಿಹಿಡಿದು ನಡೆಸಿಕೊಂಡು ಹೋಗುವ ವಿಡಿಯೋ ನಿಜವಾಗಿಯೂ ನೋವು ಕೊಟ್ಟಿತು.

ಅದೇ ವಿನೋದ್ ಕಾಂಬ್ಳಿ ಕಳೆದ ವರ್ಷ ಟಿವಿ ಕ್ಯಾಮೆರಾದ ಮುಂದೆ ಬಂದು ನನಗೆ ತೀವ್ರ ಆರ್ಥಿಕ ಸಮಸ್ಯೆ ಇದೆ, ಬದುಕು ಸಂಭಾಳಿಸುವುದೆ ಕಷ್ಟ ಆಗ್ತಾ ಇದೆ ಎಂದು ಗಳಗಳನೆ ಅತ್ತಿದ್ದರು! ತೀರಾ ಹತಾಶೆ ತೋಡಿಕೊಂಡಿದ್ದರು!

ನನ್ನ ಮನಸ್ಸು ಆಗ 38 ವರ್ಷಗಳ ಹಿಂದಕ್ಕೆ ಓಡಿತು.

ಗೆಳೆಯರಿಬ್ಬರ ದಾಖಲೆಯ ಇನ್ನಿಂಗ್ಸ್!

ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಅವರು ಮುಂಬೈಯ ಒಂದೇ ಶಾಲೆಯಲ್ಲಿ ಓದುತ್ತಿದ್ದರು. ಕಾಂಬ್ಳಿಯು ಸಚಿನಗಿಂತ ಎರಡು ವರ್ಷ ದೊಡ್ಡವನು.

1988ರ ಒಂದು ದಿನ ಇಬ್ಬರೂ ಸೇರಿ ತಮ್ಮ ಶಾರದಾಶ್ರಮ ಶಾಲೆಯ ಪರವಾಗಿ ಒಂದು ಪಂದ್ಯದಲ್ಲಿ 664 ರನ್ನುಗಳ ಜೊತೆಯಾಟ ಮಾಡಿ ಇಡೀ ಭಾರತದ ಗಮನ ಸೆಳೆದಿದ್ದರು. ಅಂದು ಇಬ್ಬರದೂ ತ್ರಿಶತಕವು ದಾಖಲು ಆಗಿತ್ತು! ಆಗ ಸಚಿನಗೆ 14 ವರ್ಷ. ಕಾಂಬ್ಳಿಗೆ 16 ವರ್ಷ!

ನಂತರ ಇಬ್ಬರೂ ತಮ್ಮ ಶಾಲೆಯನ್ನು ಬಿಟ್ಟು ಖ್ಯಾತ ಕ್ರಿಕೆಟ್ ಕೋಚ್ ರಮಾಕಾಂತ್ ಆಚರೇಕರ್ ಅವರ ಕೋಚಿಂಗ್ ಕ್ಯಾಂಪ್ ಸೇರಿದರು. ಮಹಾಗುರುಗಳಾದ ಆಚರೇಕರ್ ಸರ್ ತಮ್ಮ ಇಬ್ಬರು ಶಿಷ್ಯರ ಬಗ್ಗೆ ಹೇಳಿದ ಮಾತು ತುಂಬಾ ಮುಖ್ಯ ಆದದ್ದು.

“ಸಚಿನ್ ತುಂಬಾ ಬದ್ಧತೆಯ ಹುಡುಗ. ಹೇಳಿದ ಸಮಯಕ್ಕೆ ಮೊದಲೇ ಕ್ಯಾಂಪಿಗೆ ಬರುತ್ತಿದ್ದ. ನಾನು ಹೇಳಿದ್ದನ್ನು ಚಾಚೂ ತಪ್ಪದೇ ಗಮನಿಸುತ್ತಿದ್ದ. ಹೇಳಿದ್ದನ್ನು ಪೂರ್ತಿಯಾಗಿ ಕಲಿತು ಬರುತ್ತಿದ್ದ. ಅವನ ಶ್ರದ್ಧೆ ಮತ್ತು ನನ್ನ ಬಗ್ಗೆ ಇದ್ದ ಗೌರವಗಳು ಎರಡೂ ಅದ್ಭುತ ಆಗಿತ್ತು”

“ಆದರೆ ಈ ವಿನೋದ್ ಕಾಂಬ್ಳಿ ಶಿಸ್ತಿಲ್ಲದ ಹುಡುಗ. ಆಗಲೇ ಶೋಕಿ ಮಾಡುವುದನ್ನು ಕಲಿತಿದ್ದ. ನನ್ನ ತರಗತಿಗೆ ತಡವಾಗಿ ಬರುತ್ತಿದ್ದ. ಕ್ಲಾಸು ಮುಗಿಯುವ ಮೊದಲೇ ಬೈಕನ್ನು ಏರಿ ವೇಗವಾಗಿ ಓಡುತ್ತಿದ್ದ. ಸಿಗರೇಟ್, ಕುಡಿತ ಎಲ್ಲ ಚಟಗಳನ್ನು ಕಲಿತಿದ್ದ. ಹುಡುಗಿಯರನ್ನು ಇಂಪ್ರೆಸ್ ಮಾಡಲು ಪ್ರಯತ್ನ ಪಡುತ್ತಿದ್ದ”

ಸಚಿನ್ ತೆಂಡೂಲ್ಕರಗಿಂತ ಹೆಚ್ಚು ಬಲಿಷ್ಠ ಆಟಗಾರ

“ಪ್ರತಿಭೆಯಲ್ಲಿ ಆತನು ಸಚಿನಗಿಂತ ಒಂದು ತೂಕ ಹೆಚ್ಚೇ ಇದ್ದನು. ಬಲಿಷ್ಠ ಎಡಗೈ ಆಟಗಾರ. ಹೆಚ್ಚು ಆಕ್ರಮಣಕಾರಿ ಆಟಗಾರ. ಆದರೆ ಬದ್ಧತೆ ಮತ್ತು ನಿರಂತರತೆ ಇಲ್ಲ. ಬಹಳ ಮುಖ್ಯವಾಗಿ ಫೋಕಸ್ ಇರಲಿಲ್ಲ. ನನ್ನ ಮಾತು ಕೇಳುತ್ತಲೇ ಇರಲಿಲ್ಲ. ಪರಿಣಾಮವಾಗಿ ಆತ ತನ್ನ ಕ್ರಿಕೆಟ್ ಭವಿಷ್ಯವನ್ನು ಹಾಳು ಮಾಡಿಕೊಂಡ!”

ಮುಂದೆ ಗುರುಗಳು ಹೇಳಿದ ಭವಿಷ್ಯದ ಮಾತು ಅಷ್ಟೂ ನಿಜ ಆಯಿತು.

ಕಾಂಬ್ಳಿ ಆರಂಭದ ಜೋರು ಅಬ್ಬರ!

ಸಚಿನ್ ಮತ್ತು ಕಾಂಬ್ಳಿ ಹೆಚ್ಚು ಕಡಿಮೆ ಒಂದೇ ವರ್ಷದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದರು. ಕಾಂಬ್ಳಿ ಆರಂಭದಲ್ಲಿ ಭಾರೀ ಅಬ್ಬರಿಸಿದ. ಸತತವಾಗಿ ನಾಲ್ಕು ಶತಕ ಸಿಡಿಸಿದ! ಅದರಲ್ಲಿ ಎರಡು ಡಬ್ಬಲ್ ಸೆಂಚುರಿಗಳು! ಕೇವಲ 14 ಇನ್ನಿಂಗ್ಸಗಳಲ್ಲಿ ಸಾವಿರ ರನ್ ಗಳ ಗಡಿಯನ್ನು ದಾಟಿದ! ಏಕದಿನ ಪಂದ್ಯದಲ್ಲಿ ಕೂಡ ದಾಖಲೆ ಮಾಡಿದ.

ಆತನ ಆರಂಭಿಕ ಅಬ್ಬರ ನೋಡಿದಾಗ ಭಾರತೀಯ ಕ್ರಿಕೆಟ್ ತಂಡಕ್ಕೆ ಒಬ್ಬ ಚಾಂಪಿಯನ್ ಆಟಗಾರ ಸಿಕ್ಕಿದ ಎಂದು ಲೀಡ್ ಪತ್ರಿಕೆಗಳು ಬರೆದವು!

ಹಿಸ್ ಆಟಿಟ್ಯೂಡ್ ವಾಸ್ ರಾಂಗ್!

ಆದರೆ ಆತ ಬಹುಬೇಗನೆ ತನ್ನ ಫೋಕಸನ್ನು ಕಳೆದುಕೊಂಡ. ಚಟಗಳು ಮುಂದುವರೆದವು. ಶೋಕಿಯು ಮಿತಿಮೀರಿತು. ಕುಡಿತ, ಜೂಜು, ಸಿಗರೇಟ್ ಎಲ್ಲವೂ ಆತನನ್ನು ಖಾಲಿ ಮಾಡಿದವು. ಪರಿಣಾಮವಾಗಿ ಆತನ ಚಾಪಿಯನ್ ಆಟ ತನ್ನ ಆಕರ್ಷಣೆ ಕಳೆದುಕೊಂಡಿತು! ಕೇವಲ 23ನೆಯ ವಯಸ್ಸಿನಲ್ಲಿ ಟೆಸ್ಟ್ ತಂಡದಿಂದ ಹೊರಬಿದ್ದ! ಆಗ ಆತನ ಬ್ಯಾಟಿಂಗ್ ಸರಾಸರಿ ಭಾರತದಲ್ಲಿಯೇ ಅತಿ ಹೆಚ್ಚು (54)ಇತ್ತು! ಒಂದೆರಡು ವರ್ಷಗಳಲ್ಲಿ ಏಕದಿನದ ಅವಕಾಶಗಳು ಬರಿದಾದವು.

ಆತ ಭಾರೀ ಜಗಳಗಂಟ. ಸಹ ಆಟಗಾರರ ಜೊತೆ, ಆಯ್ಕೆ ಸಮಿತಿಯವರ ಜೊತೆಗೆ, ಕೋಚ್ ಜೊತೆ, ಹೀಗೆ ಎಲ್ಲರ ಜೊತೆಗೆ ಕಾಲುಕೆರೆದು ಜಗಳಕ್ಕೆ ನಿಂತ! ಅವನ ಮೇಲೆ ಎಲ್ಲರಿಗೂ ಇದ್ದ ಸಿಂಪತಿ ಖಾಲಿ ಆಯ್ತು! ಪರಿಣಾಮವಾಗಿ ತಂಡದಿಂದ ಮತ್ತೆ ಮತ್ತೆ ಹೊರಬಿದ್ದ!

Vinod Kambli
Vinod Kambli

ಅದೇ ಹೊತ್ತಿಗೆ ಸಚಿನ್ ಹೇಗೆ ತನ್ನ ಕ್ರಿಕೆಟ್ ಕೆರಿಯರ್ ಗ್ರಾಫ್ ಏರಿಸಿದ, ಯಾವ ರೀತಿ ದಾಖಲೆಗಳ ಮೇಲೆ ದಾಖಲೆ ಬರೆದ, ಹೇಗೆ ಗಾಡ್ ಆಫ್ ಕ್ರಿಕೆಟ್ ಆದ? ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ! ಆದರೆ ಅವನಿಗಿಂತ ಹೆಚ್ಚು ಪ್ರತಿಭೆ ಮತ್ತು ತಾಕತ್ತು ಹೊಂದಿದ್ದ ವಿನೋದ್ ಕಾಂಬ್ಳಿ ಹೇಗೆ ದಾರಿ ತಪ್ಪಿದ ಅನ್ನುವುದನ್ನು ಕೂಡ ಎಂದು ನಾವು ನೋಡಿದ್ದೇವೆ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತೀಯ ಸೋದರತೆಯ ಮಹಾ ಪರ್ವ – ರಕ್ಷಾ ಬಂಧನ

ಖಾಸಗಿ ಜೀವನದಲ್ಲಿ ನೂರಾರು ಎಡವಟ್ಟುಗಳು

ತನ್ನ ಖಾಸಗಿ ಜೀವನದಲ್ಲಿಯೂ ಕಾಂಬ್ಳಿ ಒಂದರ ಮೇಲೊಂದು ಎಡವಟ್ಟುಗಳನ್ನೇ ಮಾಡಿಕೊಂಡನು! ಹೋಟೆಲ್ ರಿಸೆಪ್ಶನಿಷ್ಟ ಒಬ್ಬಳನ್ನು ಹಾರಿಸಿಕೊಂಡು ಹೋಗಿ ಮದುವೆ ಆದ. ತಾನೂ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಹೊಂದಿದ. ನಂತರ ಆಕೆಗೆ ಡೈವೋರ್ಸ್ ಕೊಟ್ಟು ಎರಡನೇ ಮದುವೆ ಆದ. ಕುಡಿತ, ಜೂಜು, ಸಿಗರೇಟ್ ಎಲ್ಲವೂ ನಿರಂತರವಾಗಿ ಮುಂದುವರೆದವು. ಚಟಕ್ಕೆ ಬಿದ್ದು ದೊಡ್ಡ ದೊಡ್ಡ ಬ್ಯಾಂಕ್ ಸಾಲ ಮಾಡಿದ. ಬ್ಯಾಂಕಿನವರು ಹುಡುಕಿಕೊಂಡು ಬಂದಾಗ ಅಡಗಿ ಕೂತ!

ಒಂದು ಸಣ್ಣ ರಾಜಕೀಯ ಪಕ್ಷವನ್ನು ಸೇರಿ ಮುಂಬೈಯ ವಿಧಾನಸಭಾ ಚುನಾವಣೆಗೆ ನಿಂತ. ತುಂಬಾನೆ ಖರ್ಚು ಮಾಡಿದ. ಆದರೆ ಚುನಾವಣೆಯಲ್ಲಿ ಹೀನಾಯವಾಗಿ ಸೋತುಹೋದ! ಒಮ್ಮೆ ಹಾರ್ಟ್ ಅಟ್ಯಾಕ್ ಆಗಿ ಆಂಜಿಯೋಪ್ಲಾಸ್ಟಿ ಕೂಡ ಆಯ್ತು. ಇನ್ನೊಮ್ಮೆ ಕಾರು ಡ್ರೈವ್ ಮಾಡಿಕೊಂಡು ಹೋಗಿ ತೀವ್ರ ಆಕ್ಸಿಡೆಂಟ್ ಮಾಡಿಕೊಂಡ!

ವೈದ್ಯರು ಇನ್ನು ಕುಡಿಯಲೇ ಬಾರದು. ಕುಡಿದರೆ ಆಸ್ಪತ್ರೆಗೆ ಅಡ್ಮಿಟ್ ಮಾಡುವುದಿಲ್ಲ ಎಂದು ಬೈದು ಕಳಿಸಿದರು! ಆತ ಕುಡಿಯುವುದು ನನ್ನ ಜನ್ಮಸಿದ್ಧ ಹಕ್ಕು ಎಂದು ಅಬ್ಬರಿಸಿ ಹೊರಬಂದ!

ಎರಡು ಹಿಂದೀ, ಒಂದು ಕನ್ನಡ ಸಿನೆಮಾದಲ್ಲಿ ಸಣ್ಣ ಸಣ್ಣ ಪಾತ್ರ ಮಾಡಿದ. ಅಲ್ಲೂ ಹೆಸರು ಕೆಡಿಸಿಕೊಂಡ. ಇತ್ತೀಚೆಗೆ ಕ್ಯಾಮೆರಾದ ಮುಂದೆ ಬಂದು ನನಗೆ ಹೊಟ್ಟೆಪಾಡು ಕಷ್ಟ ಆಗ್ತಾ ಇದೆ ಎಂದು ಕಣ್ಣೀರು ಹಾಕಿದ್ದಾನೆ!
ಅದಕ್ಕಿಂತ ಶೋಚನೀಯ ಎಂದರೆ ಇತ್ತೀಚಿನ ವಿಡಿಯೋ.

ವಿನೋದ್ ಕಾಂಬ್ಳಿ – ದ ಲೋಸ್ಟ್ ಹೀರೋ!

ಪತ್ರಕರ್ತ ಕುಣಾಲ್ ಪುರಂದರೆ ಅವರು ಬರೆದಿರುವ ಆತನ ಬದುಕಿನ ಕತೆಯ ಪುಸ್ತಕದ ಹೆಸರು ಅವನ ದುರಂತ ಬದುಕಿಗೆ ಅನ್ವರ್ಥ ಆಗಿದೆ. ಅದು THE LOST HERO!

ಒಬ್ಬ ಅತ್ಯಂತ ಪ್ರತಿಭಾವಂತ ಕ್ರಿಕೆಟರ್ ಹೇಗೆಲ್ಲ ತನ್ನ ಬದುಕನ್ನು ಮತ್ತು ಕೆರಿಯರನ್ನು ಕೆಡಿಸಿಕೊಂಡ? ಹೇಗೆ ನೈತಿಕ ಅಧಃಪತನ ಹೊಂದಿದ? ಎಂಬುದಕ್ಕೆ ಒಂದು ಸಮರ್ಪಕ ನಿದರ್ಶನ ಕೊಡಬೇಕು ಅಂತಾದರೆ ನೀವು ವಿನೋದ್ ಕಾಂಬ್ಳಿ ಹೆಸರು ಹೇಳಬಹುದು!

ಇದನ್ನೂ ಓದಿ: ENG VS NZ: ವಿನೋದ್​ ಕಾಂಬ್ಳಿ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದ ಹ್ಯಾರಿ ಬ್ರೂಕ್

Continue Reading

ಕ್ರಿಕೆಟ್

T20 World Cup: ಟಿ20 ವಿಶ್ವಕಪ್​ನ 3 ಪಿಚ್​ಗಳಿಗೆ ಕಳಪೆ ರೇಟಿಂಗ್​ ಕೊಟ್ಟ ಐಸಿಸಿ

T20 World Cup: ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿನ ಪಿಚ್​ ಬಗ್ಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ, ಕೋಚ್​ ಆಗಿದ್ದ ರಾಹುಲ್​ ದ್ರಾವಿಡ್​ ಅವರು ಅಂದೇ ಅಸಾಮಾಧಾನ ವ್ಯಕ್ತಪಡಿಸಿದ್ದರು.

VISTARANEWS.COM


on

T20 World Cup
Koo

ದುಬೈ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup) ಮುಕ್ತಾಯ ಕಂಡು 2 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಿಚ್ ರೇಟಿಂಗ್‌ಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ 52 ಪೂರ್ಣಗೊಂಡ ಪಂದ್ಯಗಳನ್ನು ಒಳಗೊಂಡಿರುವ ವರದಿಯಲ್ಲಿ ಮೂರು ಪಂದ್ಯಗಳ ಪಿಚ್​ಗಳನ್ನು ಅತೃಪ್ತಿಕರ ಎಂದು ಪರಿಗಣಿಸಿದೆ.

ಎಂಟು ಗುಂಪು-ಹಂತದ ಪಂದ್ಯಗಳನ್ನು ಆಯೋಜಿಸಿದ್ದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಪಿಚ್​ ಅನ್ನು ಅತ್ಯಂತ ಕೆಟ್ಟ ಪಿಚ್​ ಎಂದು ಪರಿಗಣಿಸಲಾಗಿದೆ. ಇಲ್ಲಿ ನಡೆದಿದ್ದ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ, ಭಾರತ ಮತ್ತು ಐರ್ಲೆಂಡ್ ಪಂದ್ಯಗಳ ಪಿಚ್‌ಗಳನ್ನು ‘ಅತೃಪ್ತಿಕರವಾಗಿಲ್ಲ’ ಎಂದು ಐಸಿಸಿ ರೇಟಿಂಗ್​ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ 77 ರನ್‌ಗಳಿಗೆ ಆಲೌಟ್ ಆಗಿದ್ದರೆ, ಭಾರತದ ವಿರುದ್ಧ ಐರ್ಲೆಂಡ್ ಕೇವಲ 96 ರನ್ ಗಳಿಸಿತು. ಈ ಸ್ಟೇಡಿಯಂನ ಪಿಚ್​ನಲ್ಲಿ ಗರಿಷ್ಠ ರನ್​ ದಾಖಲಾದದ್ದು 137 ರನ್​. ಕೆನಡಾ ಮತ್ತು ಐರ್ಲೆಂಡ್ ವಿರುದ್ಧ ಈ ಮೊತ್ತ ದಾಖಲಾಗಿತ್ತು. ವೆಸ್ಟ್​ ಇಂಡೀಸ್​ನ ಟ್ರಿನಿಡಾಡ್ ಪಿಚ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಸೆಮಿಫೈನಲ್​ ಪಂದ್ಯವನ್ನು ಕೂಡ ಅತೃಪ್ತಿಕರ ಎಂದು ಪರಿಗಣಿಸಿದೆ.

ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿನ ಪಿಚ್​ ಬಗ್ಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ, ಕೋಚ್​ ಆಗಿದ್ದ ರಾಹುಲ್​ ದ್ರಾವಿಡ್​ ಅವರು ಅಂದೇ ಅಸಾಮಾಧಾನ ವ್ಯಕ್ತಪಡಿಸಿದ್ದರು. ಇದು ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ ಎಂದು ಹೇಳಿದ್ದರು. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾಗಿದ್ದ ಡ್ರಾಪ್-ಇನ್ ಪಿಚ್‌ಗಳನ್ನು ಅಳವಡಿಸಲಾಗಿತ್ತು. ಒಟ್ಟಾರೆಯಾಗಿ, ಐಸಿಸಿ 31 ಪಿಚ್‌ಗಳನ್ನು ‘ತೃಪ್ತಿದಾಯಕ’ ಮತ್ತು 18 ಪಿಚ್​ಗಳನ್ನು ‘ತುಂಬಾ ಒಳ್ಳೆಯದು’ ಎಂಬ ರೇಟಿಂಗ್​ ನೀಡಿದೆ.

ಇದನ್ನೂ ಓದಿ ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ ಅವರು ಬೌಂಡರಿ ಲೈನ್​ನಲ್ಲಿ ಹಿಡಿದ ಡೇವಿಡ್ ಮಿಲ್ಲರ್​ ಅವರ ಕ್ಯಾಚ್​ ಭಾರೀ ಚರ್ಚೆಗೆ ಕಾರಣವಾಗಿತ್ತು.​ ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತ್ತು. ಆದರೆ, ಈ ಕ್ಯಾಚ್​ ಹಿಡಿಯುವ ವೇಳೆ ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ನ ಕೆಳ ಭಾಗದ ಪಟ್ಟಿಗೆ ತಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಐಸಿಸಿ ಹಲವು ಆಯಾಮಗಳ ವಿಡಿಯೊ ಹಂಚಿಕೊಳ್ಳುವ ಮೂಲಕ ಸೂರ್ಯ ಹಿಡಿದ ಕ್ಯಾಚ್​ನಲ್ಲಿ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿತ್ತು.

Continue Reading
Advertisement
Champai Soren
ದೇಶ8 seconds ago

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

fraud Case chikkaballapura
ಕ್ರೈಂ18 mins ago

Fraud Case: ʼಗಟ್ಟಿಮೇಳ ನಿಲ್ಸಿʼ ಗಂಡನನ್ನು ತರಾಟೆಗೆ ತೆಗೆದುಕೊಂಡ ಮೊದಲ ಹೆಂಡತಿ, ಮದುವೆ ಮನೆಯಲ್ಲಿ ಗಲಾಟೆ

Narendra Modi
ದೇಶ19 mins ago

PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Viral Video
Latest24 mins ago

Viral Video: ರೀಲ್ ಶೋಕಿಗಾಗಿ ನಡುರಸ್ತೆಯಲ್ಲಿ ಮಳೆಯಲ್ಲಿ ಮೈಚಳಿ ಬಿಟ್ಟು ಕುಣಿದ ಮಹಿಳೆ!

Manu Bhaker
ಕ್ರೀಡೆ26 mins ago

Manu Bhaker: ನಟ ವಿಜಯ್​ ಗೊತ್ತು, ಸಿಎಂ ಸ್ಟಾಲಿನ್‌ ಗೊತ್ತಿಲ್ಲ ಎಂದು ನಕ್ಕ ಮನು ಭಾಕರ್; ವಿಡಿಯೊ ವೈರಲ್​​

Health Tips
ಆರೋಗ್ಯ28 mins ago

Health Tips: ಮೊಸರು ಉಪ್ಪಿನೊಂದಿಗೋ, ಸಕ್ಕರೆಯೊಂದಿಗೋ? ಯಾವ ಆಯ್ಕೆ ಉತ್ತಮ?

MBA Course
ವಿದೇಶ36 mins ago

MBA Course: ವಿದೇಶಗಳಲ್ಲಿ ಬಜೆಟ್ ಫ್ರೆಂಡ್ಲಿ ಎಂಬಿಎ ಕೋರ್ಸ್‌‌ಗೆ ಯಾವ ದೇಶ ಬೆಸ್ಟ್?

Karkala News
ಕರ್ನಾಟಕ52 mins ago

Karkala News: ಬಸ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿ ಸಾವು

Viral Video
Latest58 mins ago

Viral Video: ಬುರ್ಖಾ ಧರಿಸಿ ಬೈಕ್ ಸ್ಟಂಟ್ ಮಾಡಿದ ಯುವಕರು ಪೊಲೀಸರ ಅತಿಥಿಗಳಾದರು!

Murder Case
Latest1 hour ago

Murder Case: 42 ಮಹಿಳೆಯರನ್ನು ಬರ್ಬರವಾಗಿ ಕೊಂದ ಸರಣಿ ಕಿಲ್ಲರ್‌ ಜೈಲಿನಿಂದ ಎಸ್ಕೇಪ್!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌