Site icon Vistara News

Manish Pandey: ಮತ್ತೆ ಆರ್​ಸಿಬಿ ಸೇರುವ ಬಯಕೆ ವ್ಯಕ್ತಪಡಿಸಿದ ಮನೀಷ್​ ಪಾಂಡೆ

Manish Pandey

Manish Pandey: Manish Pandey ditches KKR as he eyes RCB move to team up with Virat Kohli

ಬೆಂಗಳೂರು: ಕೆ.ಎಲ್​ ರಾಹುಲ್(kl rahul)​ ಅವರು ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ(IPL 2025) ತಮ್ಮ ತವರು ತಂಡವಾದ ಆರ್​ಸಿಬಿ(RCB) ಪರ ಆಡಬೇಕು ಎಂಬ ಬಯಕ್ಕೆಯನ್ನು ಈಗಾಗಲೇ ವ್ಯಕ್ಯಪಡಿಸಿದ್ದರು. ಇದೀಗ ಈ ಸಾಲಿಗೆ ಮತೋರ್ವ ಕನ್ನಡಿಗ ಆಟಗಾರ ಮನೀಷ್​ ಪಾಂಡೆ(Manish Pandey) ಸೇರ್ಪಡೆಗೊಂಡಿದ್ದಾರೆ. ಆರ್​ಸಿಬಿ ಪರ ಮತ್ತೆ ಆಡುವ ಆಸೆ ಇದೆ ಎಂದಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಮಹಾರಾಜ ಕ್ರಿಕೆಟ್​ ಟೂರ್ನಿಯಲ್ಲಿ ಆಡುತ್ತಿರುವ ಮನೀಷ್​ ಪಾಂಡೆ, ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಈ ವಿಚಾರವನ್ನು ತೆರೆದಿಟ್ಟಿದ್ದಾರೆ. ತವರಾದ ಆರ್​ಸಿಬಿ ಪರ ಮತ್ತೊಮ್ಮೆ ಆಡುವ ಅವಕಾಶಕ್ಕಾಗಿ ಕಾಯುತ್ತಿರುವೆ. ಕೊಹ್ಲಿಯ ಜತೆಗೆ ಬ್ಯಾಟಿಂಗ್​ ನಡೆಸುವ ಆಸೆ ಇದೆ. ನಾನು ಮಾತ್ರವಲ್ಲ, ಕರ್ನಾಟಕದ ಎಲ್ಲಾ ಕ್ರಿಕೆಟಿಗರು ಒಮ್ಮೆಯಾದರೂ ಆರ್​ಸಿಬಿ ಪರ ಆಡುವ ಕನಸು ಕಾಣುತಿದ್ದಾರೆ ಎನ್ನುವ ಮೂಲಕ ಆರ್​ಸಿಬಿ ಪರ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇದುವರೆಗೆ 7 ಐಪಿಎಲ್ ತಂಡಗಳ ಪರ ಆಡಿರುವ ಪಾಂಡೆ ಈ ಬಾರಿಯ ಆಟಗಾರರ ಹಾರಜಿಗೆ ಮುನ್ನ ಕೆಕೆಆರ್ ತಂಡದಿಂದ ರಿಲೀಸ್ ಆಗುವುದು ಬಹುತೇಕ ಖಚಿತ.

2009ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮನೀಷ್‌ ಪಾಂಡೆ, ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ಶತಕ ಬಾರಿಸುವು ಮೂಲಕ ಈ ಸಾಧನೆ ಮಾಡಿದ ಮೊದಲ ಆನ್‌ಕ್ಯಾಪ್ಡ್ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಇದುವರೆಗೂ 171 ಐಪಿಎಲ್​ ಪಂದ್ಯಗಳನ್ನಾಡಿದ ಅವರು ಒಂದು ಶತಕ ಹಾಗೂ 22 ಅರ್ಧಶತಕ ಬಾರಿಸಿದ್ದಾರೆ. ಒಟ್ಟು 3850 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 114 ರನ್‌ ಗರಿಷ್ಠ ಮೊತ್ತವಾಗಿದೆ. ಈ ಬಾರಿ ಕೆಕೆಆರ್​ ಪರ ಕೇವಲ 1 ಪಂದ್ಯ ಆಡಿ 42 ರನ್​ ಬಾರಿಸಿದ್ದರು.

ಇದನ್ನೂ ಓದಿ Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

2015ರಲ್ಲಿ ಜಿಂಬಾಬ್ವೆ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯನ್ನಾಡುವ ಮೂಲಕ ಟೀಮ್​ ಇಂಡಿಯಾಕ್ಕೆ ಪದಾರ್ಪಣೆ ಮಾಡಿದ ಮನೀಷ್‌, ಇದುವರೆಗೂ 29 ಏಕದಿನ ಮತ್ತು 39 ಟಿ20 ಕ್ರಿಕೆಟ್​ ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 566 ರನ್​ ಮತ್ತು ಟಿ20ಯಲ್ಲಿ 709 ರನ್​ ಬಾರಿಸಿದ್ದಾರೆ. ಏಕದಿನದಲ್ಲಿ ಒಂದು ಶತಕ ಮತ್ತು 2 ಅರ್ಧಶತಕ ಒಳಗೊಂಡಿದೆ. 2021ರಲ್ಲಿ ಶ್ರೀಲಂಕಾ ವಿರುದ್ಧ ಕೊಪನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಾರ್ಮ್​ ಕಳೆದುಕೊಂಡು ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡುವಲ್ಲಿ ವಿಫಲರಾಗಿದ್ದರು. ಬ್ಯಾಟಿಂಗ್​ ಜತೆಗೆ ಚುರುಕಿನ ಫೀಲ್ಡಿಂಗ್​ಗೆ ಇವರು ಹೆಸರುವಾಸಿ.

ಮತ್ತೆ ಆರ್​ಸಿಬಿಗೆ ರಾಹುಲ್​?

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಮತ್ತೆ ರಾಹುಲ್​ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Exit mobile version