Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ - ಸಲಾಂ ಜಾಮಿ ಭಾಯ್! - Vistara News

ಕ್ರಿಕೆಟ್

Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

Rahul Dravid : ದ್ರಾವಿಡ್ ಅವರ ವಿಚಿತ್ರ ವರ್ತನೆ ಗೆಳೆಯರಿಗೂ ಅಚ್ಚರಿಯನ್ನುಂಟು ಮಾಡಿತ್ತಂತೆ. ಆದ್ರೆ ಇದಕ್ಕೆ ಕಾರಣ ಕೇಳಿದಾಗ ಯಾರಿಗೂ ಕೂಡ ನಗುಬರಬಹುದು. ಯಾಕಂದ್ರೆ ಬ್ಯಾಟ್‍ನ ಗ್ರಿಪ್ ಪಡೆದುಕೊಳ್ಳಲು ದ್ರಾವಿಡ್ ಈ ತಂತ್ರವನ್ನು ಬಳಸುತ್ತಿದ್ದರಂತೆ. ಹೀಗೆ ದ್ರಾವಿಡ್ ಬಗ್ಗೆ ಹಲವಾರು ಸ್ವಾರಸ್ಯಕರವಾದ ಘಟನೆಗಳಿವೆ.

VISTARANEWS.COM


on

Rahul Dravid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸನತ್ ರೈ, ಬೆಂಗಳೂರು

ನಾನು ರಾಹುಲ್ ದ್ರಾವಿಡ್ (Rahul Dravid) ಅವರ ಅಪ್ಪಟ ಅಭಿಮಾನಿಯೇನಲ್ಲ. ಆದ್ರೂ ಜಾಮಿ ಬಗ್ಗೆ ಆಗಾಧವಾದ ಪ್ರೀತಿ ಇದೆ. ಅವರ ಕಲಾತ್ಮಕ ಆಟದ ಶೈಲಿಗಂತೂ ಮನಸೋತಿದೆ. ಆಟದ ಮೇಲಿನ ಪ್ರೀತಿ, ಆಕರ್ಷಣೆ, ಬದ್ಧತೆ, ತಾಳ್ಮೆ, ಸ್ಥಿರತೆ, ಶಿಸ್ತು, ಏಕಾಗ್ರತೆ, ಕಲಿಯುವ ಹಂಬಲ, ಪ್ಲ್ಯಾನಿಂಗ್, ಟ್ಯಾಕ್ಟಿಕ್ಸ್, ಸ್ಟ್ರಾಟೆಜಿ ಹೀಗೆ ಕ್ರಿಕೆಟ್ ಆಟವನ್ನು ಪರಿಪೂರ್ಣವಾಗಿ ಪರವಶಮಾಡಿಕೊಂಡವರು ನಮ್ಮ ದಿ ವಾಲ್..

ಆದ್ರೆ ಒಬ್ಬ ಆಟಗಾರನಾಗಿ, ನಾಯಕನಾಗಿ ಅವರ ಕ್ರಿಕೆಟ್ ಬದುಕು ಪರಿಪೂರ್ಣತೆಯನ್ನು ಪಡೆದುಕೊಂಡಿರಲಿಲ್ಲ. ದಿ ಇಂಡಿಯನ್ ಗ್ರೇಟ್ ವಾಲ್, ಕ್ರಿಕೆಟ್ ಬುದ್ಧ.. ಅಪತ್ಭಾಂದವ..ಸೈಲೆಂಟ್ ಕಿಲ್ಲರ್ ಬಿರುದುಗಳು ಅವರ ಹೆಸರಿಗೆ ಅಂಟಿಕೊಂಡಿದ್ದವು. ಹಾಗೇ ನಿಧಾನಗತಿಯ ಬ್ಯಾಟಿಂಗ್‍ನಿಂದಾಗಿ ಹಲವಾರು ಟೀಕೆಗಳಿಗೂ ಗುರಿಯಾಗಿದ್ದರು. ಆದ್ರೆ ದ್ರಾವಿಡ್ ಯಾವತ್ತೂ ಯಾವುದಕ್ಕೂ ಉತ್ತರ ನೀಡುತ್ತಿರಲಿಲ್ಲ. ಬದಲಾಗಿ ತನ್ನ ಬ್ಯಾಟ್‍ನಿಂದಲೇ ಎಲ್ಲರ ಬಾಯಿ ಮುಚ್ಚಿಸುತ್ತಿದ್ದರು. ಇದು ದ್ರಾವಿಡ್ ಅವರ ಜಾಯಮಾನವಾಗಿತ್ತು. ಕ್ರಿಕೆಟ್ ಬದುಕಿನಲ್ಲಿ ಅಂದೂ.. ಇಂದೂ ರೂಢಿಸಿಕೊಂಡು ಬಂದಿರುವ ಪದ್ಧತಿಯೂ ಹೌದು.

ತಂಡಕ್ಕಾಗಿ ಸರ್ವಸ್ಸವನ್ನೇ ತ್ಯಾಗ ಮಾಡಿದ ತ್ಯಾಗಿ..!

1996ರಿಂದ 2012ರವರೆಗೆ ಟೀಮ್ ಇಂಡಿಯಾದ ಹಲವು ಐತಿಹಾಸಿಕ ಗೆಲುವಿನಲ್ಲಿ ರಾಹುಲ್ ದ್ರಾವಿಡ್ ಪ್ರಮುಖ ಪಾತ್ರ ವಹಿಸಿದವರು. ಅದು ಆಸ್ಟ್ರೇಲಿಯಾ ವಿರುದ್ಧದ ಈಡನ್ ಗಾರ್ಡನ್ ಟೆಸ್ಟ್ ಪಂದ್ಯದ ರಣರೋಚಕ ಟೆಸ್ಟ್ ಗೆಲುವು ಆಗಿರಬಹುದು, ಅಂತದ್ದೇ ಹತ್ತು ಹಲವು ಪಂದ್ಯಗಳಿರಬಹುದಯ; ಧೋನಿ ಟೀಮ್ ಇಂಡಿಯಾದೊಳಗೆ ಬರುವುದಕ್ಕಿಂತ ಮುನ್ನ ವಿಕೆಟ್ ಕೀಪರ್ ಜವಾಬ್ದಾರಿಯನ್ನು ನಿಭಾಯಿಸಿದವರು ನಮ್ಮ ರಾಹುಲ್. ಮಧ್ಯಮ ಕ್ರಮಾಂಕದಲ್ಲಿ ಟೀಮ್ ಇಂಡಿಯಾದ ಗೋಡೆಯೂ ಆಗಿದ್ದರು. ಹೀಗೆ ತಂಡದ ಹಿತಕ್ಕಾಗಿ ಒಂಚೂರು ಸ್ವಾರ್ಥವಿಲ್ಲದೆ ಸರ್ವಸ್ವವನ್ನು ತ್ಯಾಗ ಮಾಡಿದ್ದ ಕ್ರಿಕೆಟ್ ಜಗತ್ತಿನ ಬುದ್ಧ ನಮ್ಮ ರಾಹುಲ್ ದ್ರಾವಿಡ್.

ರಾಹುಲ್ ಮೂರು ವಿಶ್ವಕಪ್ ಟೂರ್ನಿಗಳನ್ನು ಆಡಿದ್ದಾರೆ. ಆಟಗಾರನಾಗಿ 1999ರ ವಿಶ್ವಕಪ್‍ನಲ್ಲೂ ನಿರಾಸೆ ಅನುಭವಿಸಿದ್ದರು. ಉಪನಾಯಕನಾಗಿ 2003ರ ವಿಶ್ವಕಪ್‍ನಲ್ಲಿ ಕೈಗೆ ಬಂದಿದ್ದ ಟ್ರೋಫಿ ಕೊನೆ ಹಂತದಲ್ಲಿ ಕೈಜಾರಿತ್ತು. ಇನ್ನೂ ನಾಯಕನಾಗಿ 2007ರ ವಿಶ್ವಕಪ್ ಟೂರ್ನಿಯನ್ನು ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಸಾಕಷ್ಟು ನಿರೀಕ್ಷೆಯನ್ನಿಟ್ಟುಕೊಂಡಿದ್ದ ರಾಹುಲ್ ಹುಡುಗರು ಲೀಗ್‍ನಲ್ಲಿ ಮುಖಭಂಗ ಅನುಭವಿಸಿದ್ದರು. ಹೀಗಾಗಿ ಸೋಲಿನ ಹೊಣೆ ಹೊತ್ತು ನಾಯಕತ್ವ ಸ್ಥಾನವನ್ನೇ ತ್ಯಜಿಸಿದ ತ್ಯಾಗ ಮೂರ್ತಿ ನಮ್ಮ ಜಾಮಿ.

ಅಷ್ಟೇ ಅಲ್ಲ, ಆಗಷ್ಟೇ ಪ್ರವರ್ಧಮಾನಕ್ಕೆ ಬಂದಿದ್ದ ಟಿ-20 ಕ್ರಿಕೆಟ್ ಯುವಕರ ಆಟ ಅಂತ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಕರ್ತರಾಗಿದ್ದು ಕೂಡ ರಾಹುಲ್ ದ್ರಾವಿಡ್. ಏಕದಿನ ವಿಶ್ವಕಪ್‍ನಲ್ಲಿ ಸೋತು ಸುಣ್ಣವಾಗಿದ್ದ ಟೀಮ್ ಇಂಡಿಯಾಗೆ ಭರವಸೆಯ ಬೆಳಕು ಮೂಡಿಸುವಂತೆ ಮಾಡಿದ್ದು ಕೂಡ ರಾಹುಲ್ ಅವರ ದೂರದೃಷ್ಟಿಯ ಯೋಚನೆ. ವೃತ್ತಿ ಬದುಕಿನ ಕೊನೆಯ ದಿನಗಳಲ್ಲಿ ರಾಹುಲ್ ದ್ರಾವಿಡ್ ಕೇವಲ ಟೆಸ್ಟ್ ಪಂದ್ಯಗಳಿಗೆ ಸೀಮಿತವಾಗಿದ್ದರು. ಹೀಗಾಗಿ 2011ರ ವಿಶ್ವಕಪ್ ಟೂರ್ನಿಯಲ್ಲೂ ರಾಹುಲ್‍ಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಆದ್ರೂ ರಾಹುಲ್ ಯಾವುದಕ್ಕೂ ತಲೆಕೆಡಿಸಿಕೊಳ್ಳಲಿಲ್ಲ. ದೂರದಿಂದಲೇ ಟೀಮ್ ಇಂಡಿಯಾದ ಐತಿಹಾಸಿಕ ಗೆಲುವನ್ನು ನೋಡಿ ಖುಷಿಪಟ್ಟಿದ್ದರು.

ಸಂಕಷ್ಟದ ಸನ್ನಿವೇಶದಲ್ಲಿ ಏಕಾಂಗಿಯಾಗಿ ನಿಂತು ಟೀಮ್ ಇಂಡಿಯಾದ ಮರ್ಯಾದೆ ಕಾಪಾಡಿದ್ದ ರಾಹುಲ್ ದ್ರಾವಿಡ್ ಅವರನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಳ್ಳಲಿಲ್ಲ. ವಿಶ್ವ ಕ್ರಿಕೆಟ್‍ನ ಮಹಾನ್ ಆಟಗಾರನಿಗೆ ಒಂದು ವಿದಾಯದ ಪಂದ್ಯವನ್ನು ಆಯೋಜನೆ ಮಾಡಲಿಲ್ಲ. ಸಚಿನ್, ಗಂಗೂಲಿ, ಅನಿಲ್ ಕುಂಬ್ಳೆಗೆ ಸಿಕ್ಕ ಗೌರವ ರಾಹುಲ್‍ಗೆ ಸಿಗಲೇ ಇಲ್ಲ. ಅಷ್ಟೇ ಯಾಕೆ, ಟೀಮ್ ಇಂಡಿಯಾ ಆಟಗಾರರು ಕೂಡ ಜಾಮಿಗೆ ಗೆಲುವಿನೊಂದಿಗೆ ವಿದಾಯ ಹೇಳಲಿಲ್ಲ. ಇಂಗ್ಲೆಂಡ್ ವಿರುದ್ಧ 2011ರಲ್ಲಿ ಟಿ-20 ಮತ್ತು ಏಕದಿನ ಪಂದ್ಯಗಳಿಗೆ ಸೋಲಿನೊಂದಿಗೆ ವಿದಾಯ ಹೇಳಿದ್ರು. ಹಾಗೇ ಆಸ್ಟ್ರೇಲಿಯಾ ವಿರುದ್ಧ 2012ರಲ್ಲಿ ಟೆಸ್ಟ್ ಕ್ರಿಕೆಟ್‍ಗೂ ಸೋಲಿನೊಂದಿಗೆ ತನ್ನ 16 ವರ್ಷಗಳ ಕ್ರಿಕೆಟ್ ಬದುಕಿಗೆ ಗುಡ್‍ಬೈ ಹೇಳಿದ್ರು.

ಚೆಂಡಿನಲ್ಲಿ ನೂಲಿನಂತೆ ಗೆರೆ ಎಳೆಯುವ ಕಲಾಕಾರ..!

ಅದೇನೇ ಇರಲಿ, ರಾಹುಲ್ ದ್ರಾವಿಡ್ ನೋಡೋಕೆ ಸೌಮ್ಯ ಸ್ವಭಾವದವರು. ಎಂದೂ ಕೂಡ ತಾಳ್ಮೆಯನ್ನು ಕಳೆದುಕೊಳ್ಳುವುದಿಲ್ಲ. ಒಂದು ವೇಳೆ ತಾಳ್ಮೆ ಕಳೆದುಕೊಂಡ್ರೆ ಮೈದಾನದಲ್ಲಿ ರೌದ್ರವತಾರದ ಇನ್ನೊಂದು ಮುಖವನ್ನು ನೋಡಿದ್ದೇವೆ. ಆದ್ರೆ ಇವತ್ತಿಗೂ ರಾಹುಲ್ ದ್ರಾವಿಡ್ ಅಂದ ತಕ್ಷಣ ಕಣ್ಣ ಮುಂದೆ ಬರೋದು ಅವರ ಕಲಾತ್ಮಕ ಶೈಲಿಯ ಬ್ಯಾಟಿಂಗ್ ವೈಖರಿ. ಅದು ಶೋಯಿಬ್ ಅಖ್ತರ್, ಬ್ರೇಟ್ ಲೀ ಸೇರಿದಂತೆ ಘಾತಕ ವೇಗಿಗಳ ಬೆಂಕಿ ಎಸೆತಗಳಿಗೆ ತಲೆ ತಗ್ಗಿಸಿ ತನ್ನ ಕಾಲ ಬುಡದಲ್ಲಿ ನಿಲ್ಲಿಸುವಂತಹ ಸಾಮಥ್ರ್ಯ ಇರೋ ಏಕೈಕ ವಿಶ್ವದ ಬ್ಯಾಟ್ಸ್‍ಮೆನ್ ಅಂದ್ರೆ ಅದು ರಾಹುಲ್ ದ್ರಾವಿಡ್. ಇನ್ನು, ದ್ರಾವಿಡ್ ಅವರ ಬ್ಯಾಟ್‍ನ ಸ್ಪರ್ಶಕ್ಕೆ ಚೆಂಡು ನೂಲಿನಲ್ಲಿ ಗೆರೆ ಎಳೆದಂತೆ ಬೌಂಡರಿ ಲೈನ್ ದಾಟುವುದನ್ನು ನೋಡುವುದೇ ಒಂದು ಚೆಂದ. ‘ನೋಡಲೆರಡು ಕಂಗಳು ಸಾಲದು’ ಅಂತರಲ್ಲ, ಹಾಗೇ ಮತ್ತೆ ಮತ್ತೆ ನೋಡಬೇಕು ಅನ್ನಿಸುವಂತಿರುವ ಕಲಾತ್ಮಕ ತಾಂತ್ರಕ ಪರಿಪೂರ್ಣತೆಯ ಬ್ಯಾಟಿಂಗ್ ವೈಖರಿ ನಮ್ಮ ರಾಹುಲ್ ಬಾಬಾರದ್ದು.

ಇದನ್ನೂ ಓದಿ: IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

ರಾಹುಲ್ ದ್ರಾವಿಡ್ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಶಿಸ್ತು ಮತ್ತು ಬದ್ಧತೆ ಯುವ ಕ್ರಿಕೆಟಿಗರಿಗೆ ದಾರಿದೀಪ. ಅದಕ್ಕೆ ಸಾಕಷ್ಟು ನಿದರ್ಶನಗಳಿವೆ. ಅದರಲ್ಲಿ ಇದೊಂದು ಸಣ್ಣ ನಿದರ್ಶನ. ಒಂದು ಬಾರಿ ಕಾಲೇಜ್ ಕ್ಲಾಸ್ ರೂಂನಲ್ಲಿ ರಾಹುಲ್ ದ್ರಾವಿಡ್ ಕೈಗೆ ಗ್ಲೌಸ್ ಹಾಕೊಂಡು ಬರೆಯುತ್ತಿದ್ದರು. ದ್ರಾವಿಡ್ ಅವರ ವಿಚಿತ್ರ ವರ್ತನೆ ಗೆಳೆಯರಿಗೂ ಅಚ್ಚರಿಯನ್ನುಂಟು ಮಾಡಿತ್ತಂತೆ. ಆದ್ರೆ ಇದಕ್ಕೆ ಕಾರಣ ಕೇಳಿದಾಗ ಯಾರಿಗೂ ಕೂಡ ನಗುಬರಬಹುದು. ಯಾಕಂದ್ರೆ ಬ್ಯಾಟ್‍ನ ಗ್ರಿಪ್ ಪಡೆದುಕೊಳ್ಳಲು ದ್ರಾವಿಡ್ ಈ ತಂತ್ರವನ್ನು ಬಳಸುತ್ತಿದ್ದರಂತೆ. ಹೀಗೆ ದ್ರಾವಿಡ್ ಬಗ್ಗೆ ಹಲವಾರು ಸ್ವಾರಸ್ಯಕರವಾದ ಘಟನೆಗಳಿವೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ಮಹಾ ಗುರು ಆಗಿದ್ದೇಗೆ..?

ಇನ್ನು, ವೃತ್ತಿಪರ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ನಂತ್ರ ದ್ರಾವಿಡ್ ಸುಮ್ಮನೆ ಮನೆಯಲ್ಲಿ ಕೂರಲಿಲ್ಲ. ಮನಸು ಮಾಡಿದ್ರೆ ವೀಕ್ಷಕ ವಿವರಣೆಕಾರನಾಗಬಹುದಿತ್ತು.. ತನ್ನದೇ ಕ್ರಿಕೆಟ್ ಅಕಾಡೆಮಿ ಕೂಡ ಶುರು ಮಾಡಬಹುದಿತ್ತು. ಆದ್ರೆ ದ್ರಾವಿಡ್ ಉದ್ದೇಶವೇ ಬೇರೆ ಇತ್ತು. ದೇಶದ ಯುವ ಕ್ರಿಕೆಟಿಗರ ಪ್ರತಿಭೆಯನ್ನು ಬೆಳಕಿಗೆ ತರುವಂತಹ ದೂರದೃಷ್ಟಿಯನ್ನು ಹೊಂದಿದ್ದರು. ಬಲಿಷ್ಠ ಟೀಮ್ ಇಂಡಿಯಾ ಕಟ್ಟುವಂತಹ ಮಹೋನ್ನತ ಕಾರ್ಯಕ್ಕೆ ದ್ರಾವಿಡ್ ಮುಂದಾದ್ರು. ಅದಕ್ಕೆ ಪೂರಕವಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ನಿದೇರ್ಶಕನಾದ್ರು. ಬಳಿಕ 19 ವಯೋಮಿತಿ ತಂಡದ ಕೋಚ್ ಆಗಿ ವಿಶ್ವಕಪ್ ಕೂಡ ಗೆಲ್ಲಿಸಿಕೊಂಡು ಬಂದ್ರು. ಆದಾದ ನಂತ್ರ ಭಾರತ ಎ ತಂಡದ ಕೋಚ್ ಆಗಿ ಭವಿಷ್ಯದ ಟೀಮ್ ಇಂಡಿಯಾಗೆ ಫೌಂಡೇಶನ್ ಕಟ್ಟುವ ಕಾರ್ಯದಲ್ಲಿ ನಿರತರಾದ್ರು. ನಮ್ಮ ಕಣ್ಣ ಮುಂದೆ ಸಾಲು ಸಾಲಾಗಿ ಸಮರ್ಥ ಟೀಮ್ ಇಂಡಿಯಾದ ಯುವ ಪಡೆ ನಿಂತಿದೆ ಅಂದ್ರೆ ಅದಕ್ಕೆ ಮೂಲ ಕಾರಣ ಜಾಮಿ. ಯುವ ಆಟಗಾರರಿಗೆ ಶಿಸ್ತು, ಬದ್ಧತೆಯನ್ನು ಹೇಳಿಕೊಟ್ಟ ಹೆಡ್ ಮಾಸ್ಟರ್ ಕೂಡ ಹೌದು ರಾಹುಲ್.

ಸರಿಯಾಗಿ ಮೂರು ವರ್ಷಗಳ ಹಿಂದೆ ದ್ರಾವಿಡ್ ದ್ರಾವಿಡ್ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ನೇಮಕಗೊಂಡ್ರು. ಸುಮಾರು 9-10 ವರ್ಷಗಳ ನಂತ್ರ ಟೀಮ್ ಇಂಡಿಯಾದ ಗರ್ಭಗುಡಿಯೊಳಗೆ ಮಹಾಗುರುವಾಗಿ ಪ್ರವೇಶಿಸಿದ್ರು. ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮಾತ್ರ ದ್ರಾವಿಡ್ ಜೊತೆ ಆಡಿದ್ದರು. ಇನ್ನುಳಿದವರು ಅನುಭವ ಮಾಗದ ಎಳೆತನದ ಯುವ ಆಟಗಾರರು. ದ್ರಾವಿಡ್ ಎಂಟ್ರಿಯಾಗುತ್ತಿದ್ದಂತೆ ತಂಡದಲ್ಲಿ ಕೆಲವೊಂದು ಬದಲಾವಣೆಗಳು ಕೂಡ ಆಗಿದ್ದವು. ರೋಹಿತ್ ಶರ್ಮಾ ಹೆಗಲಿಗೆ ನಾಯಕತ್ವವೂ ಒಲಿದು ಬಂತು. ಹಾಗೇ ನಾಯಕನ ಜೊತೆ ಸೇರಿಕೊಂಡು ಮೂರು ವರ್ಷಗಳ ಪ್ಲ್ಯಾನ್ ಕೂಡ ರೆಡಿಯಾಗಿತ್ತು. ‘ಮಿಷನ್ ಐಸಿಸಿ ಟ್ರೋಫಿ’ ಗೆಲ್ಲಲು ಸೈನ್ಯ ಕಟ್ಟುವ ಕೆಲಸಕ್ಕೆ ಮುಂದಾದ್ರು. ಪ್ರತಿ ಸರಣಿಗಳಲ್ಲೂ ಪ್ರಯೋಗ ಮಾಡಿದ್ರು. ಯುವ ಆಟಗಾರರಿಗೆ ಅವಕಾಶಗಳನ್ನು ನೀಡಿದ್ರು. ಪ್ರತಿ ಆಟಗಾರನ ಸಾಮಥ್ರ್ಯವನ್ನು ಅರಿತುಕೊಂಡ್ರು. ಆದ್ರೆ 2023ರ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ಮತ್ತು ಏಕದಿನ ವಿಶ್ವಕಪ್ ಫೈನಲ್‍ನಲ್ಲಿ ಸೋತಾಗ ಮಂಕಾಗಿದ್ದು ನಿಜ. ಆದ್ರೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳಲಿಲ್ಲ. ಮಾನಸಿಕವಾಗಿ ಕುಗ್ಗಿ ಹೋಗಿದ್ದ ಆಟಗಾರರ ಮನಸ್ಥಿತಿಯನ್ನು ಅರಿತುಕೊಂಡು ಮತ್ತೆ ಪ್ರೇರಣೆ ನೀಡಿದ್ದು ಕೂಡ ಮಹಾ ಗುರು ರಾಹುಲ್ ದ್ರಾವಿಡ್.

ಮಿಷನ್ ಟಿ-20 ವಿಶ್ವಕಪ್ -2024 ಕಂಪ್ಲೀಟ್…

ಹಾಗೇ ನೋಡಿದ್ರೆ 2024ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆದ್ದೇ ಗೆಲ್ಲುತ್ತೆ ಅನ್ನೋ ನಂಬಿಕೆ ಬಹುತೇಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇರಲಿಲ್ಲ. ಯಾಕಂದ್ರೆ 13 ವರ್ಷಗಳಿಂದ ಟೀಮ್ ಇಂಡಿಯಾ ಆಟಗಾರರು ಸತತವಾಗಿ ತಮ್ಮ ಮೇಲಿಟ್ಟಿದ್ದ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದರು. ಹೀಗಾಗಿ ಫೈನಲ್‍ಗೆ ಬರಬಹುದು ಎಂಬ ಲೆಕ್ಕಾಚಾರವಂತೂ ಇದ್ದೇ ಇತ್ತು. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನೆಲದಲ್ಲಿ ದ್ರಾವಿಡ್ ಶಿಷ್ಯಂದಿರು ನಿರೀಕ್ಷಿತ ಪ್ರದರ್ಶನವನ್ನೇ ನೀಡಿದ್ರು. ಟೀಮ್ ಇಂಡಿಯಾ ಆಡಿರುವ ಎಂಟು ಪಂದ್ಯಗಳ ಗೆಲುವನ್ನು ನೋಡಿದಾಗ ದಶಕಗಳ ಹಿಂದಿನ ಸ್ಟೀವ್ ವಾ, ಪಾಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡವನ್ನು ನೆನಪಿಸುವಂತಿತ್ತು. ಯಾಕಂದ್ರೆ, ದ್ರಾವಿಡ್ ಶಿಷ್ಯಂದಿರು ಎಲ್ಲೂ ಕೂಡ ‘ಶೃತಿ’ ತಪ್ಪಲಿಲ್ಲ. ಬ್ಯಾಟರ್‍ಗಳು ‘ತಾಳ‘ ತಪ್ಪಿದಾಗ ಬೌಲರ್‍ಗಳು ‘ವೀಣೆ’ ನುಡಿಸುವಂತೆ ಬೌಲಿಂಗ್ ಮಾಡುತ್ತಾ ಗೆಲುವಿನ ದಡ ಸೇರಿಸುತ್ತಿದ್ದರು. ಹಾಗೇ ಬೌಲರ್‍ಗಳು ‘ಲಯ‘ ತಪ್ಪಿದಾಗ ಬ್ಯಾಟರ್‍ಗಳು ‘ಡ್ರಮ್ಸ್‘ ಬಾರಿಸುವಂತೆ ಅಂಗಣದಲ್ಲಿ ದರ್ಬಾರು ಮಾಡಿ ಅಭಿಮಾನಿಗಳಿಗೆ ‘ರಸಮಂಜರಿ’ಯ ಮನರಂಜನೆಯನ್ನು ನೀಡುತ್ತಿದ್ದರು. ಇತ್ತ ಡಕೌಟ್‍ನಲ್ಲಿ ನಿರ್ದೇಶಕ/ ಮಹಾ ಗುರು ರಾಹುಲ್ ದ್ರಾವಿಡ್ ಆಚಾರ್ಯನಂತೆ ಶಿಷ್ಯಂದಿರ ಸಾಧನೆಯನ್ನು ಮನದೊಳಗೆ ಖುಷಿಪಟ್ಟು ಹೆಮ್ಮೆಯಿಂದ ಬೀಗುತ್ತಿದ್ದರು. ಅಷ್ಟೇ ಅಲ್ಲ, ರೋಹಿತ್ ಹುಡುಗರು ಟ್ರೋಫಿ ಸ್ವೀಕರಿಸುವಾಗ ತೆರೆಮರೆಯಲ್ಲಿ ನೋಡುತ್ತಿದ್ದ ದ್ರಾವಿಡ್ ಮುಖದಲ್ಲಿ ಮಿಷನ್ ಟಿ-20 ವಿಶ್ವಕಪ್ ಕಂಪ್ಲೀಟ್ ಮಾಡಿದ ಸಾರ್ಥಕತೆ ಎದ್ದುಕಾಣುತ್ತಿತ್ತು.

ಮತ್ತೆ ಕ್ರಿಕೆಟ್ ಬುದ್ಧ ನಕ್ಕಾಗ… ನಕ್ಕು ನಲಿದಾಡಿದಾಗ…ನಾ ಸೋತು ಹೋದೆ..!

ಹೌದು, ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಸೋತಾಗ ಕಣ್ಣೀರು ಹಾಕಿದ್ದಾರೆ. ವೇದನೆ ಅನುಭವಿಸಿದ್ದಾರೆ. ಹಾಗೇ, ಟೀಮ್ ಇಂಡಿಯಾ ಗೆದ್ದಾಗಲೂ ಸಂಭ್ರಮಪಟ್ಟಿದ್ದಾರೆ. ಆದ್ರೆ ಗೆದ್ದಾಗ ಕಣ್ಣೀರು ಹಾಕಿದ್ದು ಇದೇ ಮೊದಲು.. ಜೊತೆಗೆ ಈ ಪರಿ ಸಂಭ್ರಮಪಟ್ಟಿದ್ದು ಇದೇ ಮೊದಲ ಸಲ. ಈ ರೀತಿ ದ್ರಾವಿಡ್ ಯಾವತ್ತೂ ಸಂಭ್ರಮಪಟ್ಟಿರುವುದನ್ನು ಯಾರು ಕೂಡ ನೋಡಿರಲಿಲ್ಲ. ಯಾಕಂದ್ರೆ ತನಗೆ ಗಗನ ಕುಸುಮವಾಗಿದ್ದ ಐಸಿಸಿ ವಿಶ್ವಕಪ್ ಟ್ರೋಫಿಯನ್ನು ತನ್ನ ಶಿಷ್ಯಂದಿರ ಮೂಲಕ ಪಡೆದುಕೊಂಡು ತನ್ನ ಕ್ರಿಕೆಟ್ ಬದುಕನ್ನು ಸಾರ್ಥಕವನ್ನಾಗಿಸಿಕೊಂಡ ಸಂತೃಪ್ತಿ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ರೋಹಿತ್, ವಿರಾಟ್, ಜಡೇಜಾ ಅವರ ಕಣ್ಣೇದುರೇ ಸೋಲಿನೊಂದಿಗೆ ವಿದಾಯ ಹೇಳಿದ್ದ ದ್ರಾವಿಡ್‍ಗೆ ವಿಶ್ವಕಪ್ ಗೆಲ್ಲುವ ಮೂಲಕ ಮಹಾ ಗುರುವಿಗೆ ಅರ್ಥಪೂರ್ಣ ವಿದಾಯ ಹೇಳುವಂತೆ ಮಾಡಿದವರು ಇದೇ ಕೋಹ್ಲಿ, ಶರ್ಮಾ & ಜಡೇಜಾ.. ಅಷ್ಟೇ ಅಲ್ಲ, ಟೀಮ್ ಇಂಡಿಯಾ ಹುಡುಗರು ದ್ರಾವಿಡ್‍ಗೆ ಟಿ-20 ವಿಶ್ವಕಪ್ ಟ್ರೋಫಿಯನ್ನೇ ಗುರು ಕಾಣಿಕೆಯನ್ನಾಗಿ ನೀಡಿದ್ರು. ಅಲ್ಲದೆ ವಿರಾಟ್, ರೋಹಿತ್ ಸೇರಿದಂತೆ ಟೀಮ್ ಇಂಡಿಯಾ ಹುಡುಗರು ಗುರು ಎಂಬುದನ್ನು ಮರೆತು ದ್ರಾವಿಡ್ ಅವರನ್ನು ಮಗುವಿನಂತೆ ಮೇಲಕ್ಕೆತ್ತಿ ಕೊಂಡಾಟ ಮಾಡಿ ಸಂಭ್ರಮಿಸಿದ ಕ್ಷಣವನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ. ಹಾಗೇ ರೋಹಿತ್ ಮತ್ತು ವಿರಾಟ್‍ನನ್ನು ದ್ರಾವಿಡ್ ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಯಶಸ್ವಿ ಜೈಸ್ವಾಲ್ ಪುಟ್ಟ ಮಗುವಿನಂತೆ ನೋಡುತ್ತಿದ್ದ ದೃಶ್ಯವಂತೂ ಕಣ್ಣಿಗೆ ಕಟ್ಟುವಂತಿತ್ತು. ಅದರಲ್ಲೂ ವಿರಾಟ್ ಕೊಹ್ಲಿ ವಿಶ್ವಕಪ್ ಟ್ರೋಫಿಯನ್ನು ದ್ರಾವಿಡ್ ಕೈಗಿಟ್ಟಾಗ ಭಾವೋದ್ರಿಕ್ತರಾಗಿ ಒಂದು ಕ್ಷಣ ಸುಮ್ಮನಿದ್ದ ದ್ರಾವಿಡ್, ಏಕಾಏಕಿ ಟ್ರೋಪಿಯನ್ನು ಮೇಲಕ್ಕೆತ್ತಿ ಸಂಭ್ರಮಿಸಿದ ರೀತಿಯನ್ನು ವರ್ಣಿಸಲು ಅಸಾಧ್ಯ. ಟ್ರೋಫಿಯೊಂದಿಗೆ ಮನ ತಣಿಸುವಷ್ಟು ಜಾಮಿ ಸಂಭ್ರಮಿಸಿ, ಕುಣಿದಾಡಿದ್ರು. ಎರಡು ದಶಕಗಳ ನೋವುಗಳನ್ನು ಕೇವಲ ಎರಡು ನಿಮಿಷಗಳಲ್ಲಿ ಮರೆಮಾಚುವಂತೆ ಮಾಡಿ ನಾಚಿ ನೀರಾದ್ರು.

ಒಟ್ಟಿನಲ್ಲಿ ಐಸಿಸಿ ಟಿ-20 ವಿಶ್ವಕಪ್ ಟ್ರೋಫಿ ದ್ರಾವಿಡ್ ಕೈಗೆ ಸ್ಪರ್ಶಿಸುತ್ತಿದ್ದಂತೆ ಎಲ್ಲ ನೋವು , ಬೇಸರ, ವೇದನೆ ಮಾಯವಾಗಿ ಅಲ್ಲಿ ತುಂಬಿಕೊಂಡಿದ್ದು ಬರೀ ಸಂಭ್ರಮ..ಸಡಗರ.. ಭಾವೋದ್ವೇಗ, ಆನಂದಭಾಷ್ಟ.. ಆ ಭಾವುಕ ದೃಶ್ಯಗಳನ್ನು ನೋಡಿದ ಕೋಟ್ಯಾನುಕೋಟಿ ಅಭಿಮಾನಿಗಳ ಹೃನ್ಮನ ತುಂಬಿ ಬಂದಿದೆ. ನನ್ನಲ್ಲೂ ಅರಿವಿಲ್ಲದೇ ಭಾವೋದ್ವೇಗದಿಂದ ಕಣ್ಣೀರಧಾರೆ.. ಅರೇ ಕ್ಷಣ ನನ್ನನ್ನೇ ಮರೆತಂಗೆ ಶೂನ್ಯ ಭಾವ… ಕೊನೆಗೂ ನಾನು ದ್ರಾವಿಡ್‍ನ ಅಪ್ಪಟ ಅಭಿಮಾನಿಯಾದೆ.. ಸಲಾಂ ಜಾಮಿ ಭಾಯ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

Narendra Modi: ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ಟ್ರೋಫಿ ಬರವನ್ನು ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು.

VISTARANEWS.COM


on

Narendra modi
Koo

ಬೆಂಗಳೂರು ; ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸಕ್ಕೆ ಕರೆಸಿ ಆತಿಥ್ಯ ನೀಡಿದ್ದಾರೆ. ಭಾರತಕ್ಕೆ ಗುರುವಾರ ಬೆಳಗ್ಗೆ ಮರಳಿದ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಕ್ರಿಕೆಟ್​ ಗಣ್ಯರಿಗೆ ಆತಿಥ್ಯ ನೀಡಿದ ನಂತರ ನರೇಂದ್ರ ಮೋದಿ ತಮ್ಮ ಅಧಿಕೃತ ಹ್ಯಾಂಡಲ್​​ನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಣೆಗಳನ್ನು ಹ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಜೂನ್ 29 ರಂದು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್​ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಮೆನ್ ಇನ್ ಬ್ಲೂ ತಮ್ಮ 11 ವರ್ಷಗಳ ವಿಶ್ವಕಪ್​ ಟ್ರೋಫಿ ಬರ ಕೊನೆಗೊಳಿಸಿತು. ರೋಚಕ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ ಗಳ ಗೆಲುವು ಸಾಧಿಸಿತು. ಇದು ಭಾರತ ತಂಡದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಗುರುತಿಸಿತು.

ನರೇಂದ್ರ ಮೋದಿ ಬಣ್ಣನೆ

ಭಾರತ ತಂಡವು ಗುರುವಾರ ಸ್ವದೇಶಕ್ಕೆ ಮರಳಿತು ಮತ್ತು ಜುಲೈ 4 ರ ಗುರುವಾರ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಮೋದಿ ನಿವಾಸಕ್ಕೆ ಭೇಟಿ ನೀಡಿತು. ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಮತ್ತು ತಂಡದ ಇತರ ಸದಸ್ಯರೊಂದಿಗೆ ಬೆಳಗ್ಗೆ 11 ಗಂಟೆ ಸುಮಾರಿಗೆ ಉಪಾಹಾರ ಮಾಡಿ ಮೋದಿ ಸಂವಾದ ನಡೆಸಿದರು.

ತಂಡಕ್ಕೆ ನರೇಂದ್ರ ಮೋದಿ ಒಂದು ಗಂಟೆ ಕಾಲ ಆತಿಥ್ಯ ನೀಡಿದರು. ನಂತರ, ಮೋದಿ ಫೋಟೋಗಳನ್ನು ಎಕ್ಸ್​ನಲ್ಲಿ ಪೋಟೋಗಳನ್ನು ಹಂಚಿಕೊಂಡರು. ನಮ್ಮ ಚಾಂಪಿಯನ್ ಗಳೊಂದಿಗೆ ಅತ್ಯುತ್ತಮ ಭೇಡಿ. ವಿಶ್ವಕಪ್ ವಿಜೇತ ತಂಡಕ್ಕೆ ಆತಿಥ್ಯ ವಹಿಸಿದ್ದೇನೆ ಮತ್ತು ಪಂದ್ಯಾವಳಿಯಾದ್ಯಂತ ಅವರ ಅನುಭವಗಳ ಬಗ್ಗೆ ಸಂಭಾಷಣೆ ನಡೆಸಿದ್ದೇನೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ, ಭಾರತೀಯ ಆಟಗಾರರು ಮುಂಬೈಗೆ ತೆರಳಿದರು. ಅಲ್ಲಿ ಬಿಸಿಸಿಐ ಮರೀನ್ ಡ್ರೈವ್​​ನಿಂದ ವಾಂಖೆಡೆ ಕ್ರೀಡಾಂಗಣ ತನಕ ತೆರೆದ ಬಸ್​ನಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಂದ ಭಾರತ ತಂಡ 125 ಕೋಟಿ ರೂ.ಗಳ ಬಹುಮಾನ ಸ್ವೀಕರಿಸಲಿದೆ.

ಹೃತ್ಪೂರ್ವಕ ಕೃತಜ್ಞತೆ: ಬಿಸಿಸಿಐ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆತಿಥ್ಯ ನೀಡಿದ್ದಕ್ಕೆ ಬಿಸಿಸಿಐ ಕೃತಜ್ಞತೆ ಸಲ್ಲಿಸಿದೆ. ಅವರ ಸ್ಪೂರ್ತಿದಾಯಕ ಮಾತುಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದ ಎಂದು ಹೇಳಿದ್ದಾರೆ. ಸಭೆಯ ನಂತರ ಆಟಗಾರರು ಪ್ರಧಾನಿಗೆ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ವಿಜಯಶಾಲಿ ಭಾರತೀಯ ಕ್ರಿಕೆಟ್ ತಂಡವು ಇಂದು ಆಗಮಿಸಿದ ಭಾರತದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿತು. ಬೆರಿಲ್ ಚಂಡಮಾರುತದಿಂದಾಗಿ ಭಾರತೀಯ ಕ್ರಿಕೆಟ್ ತಂಡವು ಸಹಾಯಕ ಸಿಬ್ಬಂದಿ, ಕುಟುಂಬಗಳು ಮತ್ತು ಮಾಧ್ಯಮ ಸಿಬ್ಬಂದಿಯೊಂದಿಗೆ ಬಾರ್ಬಡೋಸ್​​ನಲ್ಲಿ ಕಠಿಣ ಪರಿಸ್ಥಿತಿ ಎದುರಿಸಿತು. ಚಂಡಮಾರುತದಿಂದಾಗಿ ಬ್ರಿಡ್ಜ್ ಟೌನ್ ನಲ್ಲಿರುವ ಗ್ರಾಂಟ್ಲಿ ಆಡಮ್ಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೂರು ದಿನಗಳ ಕಾಲ ಮುಚ್ಚಲಾಗಿತ್ತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರು ಬಾರ್ಬಡೋಸ್​​ನಿಂದ ಭಾರತಕ್ಕೆ ವಿಮಾನದಲ್ಲಿ ಪ್ರಯಾಣಿಸಲು ವ್ಯವಸ್ಥೆ ಮಾಡಿದರು. ತಂಡವು ಐಟಿಸಿ ಮೌರ್ಯ ಹೋಟೆಲ್​ಗೆ ತೆರಳಿತು. ಅಲ್ಲಿ ಅವರು ನರೇಂದ್ರ ಮೋದಿಯವರನ್ನು ಭೇಟಿಯಾಗುವ ಮೊದಲು ತಂಗಿದ್ದರು. ಹೋಟೆಲ್​ನಲ್ಲಿ ಅವರು ಟಿ 20 ವಿಶ್ವಕಪ್ ಟ್ರೋಫಿಯನ್ನು ಒಳಗೊಂಡ ವಿಶೇಷ ಕೇಕ್​ನೊಂದಿಗೆ ತಮ್ಮ ವಿಜಯೋತ್ಸವ ಆಚರಿಸಿದರು.

Continue Reading

ಪ್ರಮುಖ ಸುದ್ದಿ

ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

ZIM vs IND: ಜುಲೈ 6, 7, 10, 13 ಮತ್ತು 14 ರಂದು ಪಂದ್ಯಗಳು ನಿಗದಿಯಾಗಿದೆ. ಜಿಂಬಾಬ್ವೆ ತಂಡವನ್ನು ಸಿಕಂದರ್ ರಾಜಾ ಮುನ್ನಡೆಸಿದರೆ ಭಾರತವನ್ನು ಯುವ ಬಲಗೈ ಬ್ಯಾಟರ್​ ಶುಬ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಸ್ಮರಣೀಯ ಟಿ 20 ವಿಶ್ವಕಪ್ ಗೆಲುವಿನ ನಂತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ ಅತ್ಯಂತ ಯುವ ಭಾರತೀಯ ತಂಡವನ್ನು ಹೆಸರಿಸಿದೆ

VISTARANEWS.COM


on

ZIM vs IND
Koo

ಬೆಂಗಳೂರು : ಮುಂಬರುವ ಭಾರತ ವಿರುದ್ಧದ ಟಿ 20 ಐ ಸರಣಿಗೆ ಮುಂಚಿತವಾಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಚಾರ್ಲ್ ಲ್ಯಾಂಗೆವೆಲ್ಟ್ ಅವರನ್ನು ಜಿಂಬಾಬ್ವೆ ತಂಡದ (ZIM vs IND) ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲಾಗಿದೆ. ಐದು ಪಂದ್ಯಗಳ ಸರಣಿ ಜುಲೈ 6 ರಿಂದ 14 ರವರೆಗೆ ಆಯೋಜನೆಗೊಂಡಿದ್ದು, ಹರಾರೆ ಕ್ರಿಕೆಟ್ ಸ್ಟೇಡಿಯಮ್​ ಎಲ್ಲಾ ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಜುಲೈ 6, 7, 10, 13 ಮತ್ತು 14 ರಂದು ಪಂದ್ಯಗಳು ನಿಗದಿಯಾಗಿದೆ. ಜಿಂಬಾಬ್ವೆ ತಂಡವನ್ನು ಸಿಕಂದರ್ ರಾಜಾ ಮುನ್ನಡೆಸಿದರೆ ಭಾರತವನ್ನು ಯುವ ಬಲಗೈ ಬ್ಯಾಟರ್​ ಶುಬ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಸ್ಮರಣೀಯ ಟಿ 20 ವಿಶ್ವಕಪ್ ಗೆಲುವಿನ ನಂತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ ಅತ್ಯಂತ ಯುವ ಭಾರತೀಯ ತಂಡವನ್ನು ಹೆಸರಿಸಿದೆ. ಟಿ 20 ವಿಶ್ವಕಪ್​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಜಿಂಬಾಬ್ವೆ ಟಿ 20 ವಿಶ್ವಕಪ್ ಚಾಂಪಿಯನ್ ಕಿರೀಟ ಧರಿಸಿದ ಭಾರತ ತಂಡವನ್ನು ಎದುರಿಸಲಿದೆ. ತಂಡವು ಕಡಿಮೆ ಅಂತರರಾಷ್ಟ್ರೀಯ ಅನುಭವವನ್ನು ಹೊಂದಿದ್ದರೂ, ಅವರ ಐಪಿಎಲ್ ಅನುಭವವು ಅವರನ್ನು ಸ್ಪರ್ಧಾತ್ಮಕ ತಂಡವನ್ನಾಗಿ ಮಾಡಿದೆ.

ಚಾರ್ಲ್ ಲ್ಯಾಂಗೆವೆಲ್ಟ್ ಈ ಹಿಂದೆ ಎರಡು ಅವಧಿಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ಟಿ 20 ವಿಶ್ವಕಪ್​​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಜಿಂಬಾಬ್ವೆ ಟಿ 20 ವಿಶ್ವಕಪ್ ಚಾಂಪಿಯನ್ ಕಿರೀಟ ಧರಿಸಿದ ತಂಡವನ್ನು ಎದುರಿಸಲಿದೆ. ತಂಡವು ಕಡಿಮೆ ಅಂತಾರಾಷ್ಟ್ರೀಯ ಅನುಭವ ಹೊಂದಿದ್ದರೂ, ಅವರ ಐಪಿಎಲ್ ಅನುಭವವು ಅವರನ್ನು ಸ್ಪರ್ಧಾತ್ಮಕ ತಂಡವನ್ನಾಗಿ ಮಾಡುತ್ತದೆ.

ಇದನ್ನೂ ಓದಿ: Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

ಚಾರ್ಲ್ ಲ್ಯಾಂಗೆವೆಲ್ಟ್ ಈ ಹಿಂದೆ ಎರಡು ಅವಧಿಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದರು. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಅವರು ಕೆಲಸ ಮಾಡಿದ್ದಾರೆ.

ಜಿಂಬಾಬ್ವೆ ಈ ಹಿಂದೆ ಜಸ್ಟಿನ್ ಸಮ್ಮನ್ಸ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಡಿಯೋನ್ ಇಬ್ರಾಹಿಂ ಅವರನ್ನು ಬ್ಯಾಟಿಂಗ್ ಕೋಚ್ ಆಗಿ ನೇಮಿಸಿತ್ತು. ಸಮ್ಮನ್ಸ್ ಈ ಹಿಂದೆ 2021 ರಿಂದ 2023 ರವರೆಗೆ ದಕ್ಷಿಣ ಆಫ್ರಿಕಾ ಪುರುಷರ ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ಕೆಲಸ ಮಾಡಿದ್ದರು. ಡಿಯೋನ್ ಇಬ್ರಾಹಿಂ ಜಿಂಬಾಬ್ವೆ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದಾರೆ. ಅವರು 2001 ರಿಂದ 2005 ರವರೆಗೆ 29 ಟೆಸ್ಟ್ ಮತ್ತು 82 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಮತ್ತು ಇತ್ತೀಚೆಗೆ ನ್ಯೂಜಿಲೆಂಡ್ ಹಿರಿಯ ಪುರುಷರ ತಂಡದೊಂದಿಗೆ ಕೆಲಸ ಮಾಡಿದ್ದಾರೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಮೂಲಕ ಬಿಸಿಸಿಐ 17 ಸದಸ್ಯರ ಯುವ ತಂಡವನ್ನು ಪ್ರಕಟಿಸಿದೆ. ತುಷಾರ್ ದೇಶಪಾಂಡೆ, ರಿಯಾನ್ ಪರಾಗ್ ಮತ್ತು ಅಭಿಷೇಕ್ ಶರ್ಮಾ ತಮ್ಮ ಮೊದಲ ಭಾರತ ಕರೆಗಳನ್ನು ಗಳಿಸಿದ್ದಾರೆ. ಏತನ್ಮಧ್ಯೆ, ರಿಂಕು ಸಿಂಗ್ ಸೇರಿದಂತೆ ಇನ್ನೂ ಕೆಲವರು ನಂತರ ಅವರೊಂದಿಗೆ ಸೇರಲಿದ್ದಾರೆ.

ಆರಂಭಿಕ ತಂಡವನ್ನು ಹೆಸರಿಸಿದ ನಂತರ, ಬಿಸಿಸಿಐ ಶಿವಂ ದುಬೆ, ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಬದಲಿ ಆಟಗಾರರನ್ನು ಘೋಷಿಸಿತು. ಅವರು ವಿಶ್ವ ಕಪ್​ ಗೆಲುವಿನ ಆಚರಣೆಯ ಭಾಗವಾಗಿ ಭಾರತಕ್ಕೆ ಬಂದಿದ್ದಾರೆ. ಸ್ಯಾಮ್ಸನ್, ಜೈಸ್ವಾಲ್ ಮತ್ತು ದುಬೆ ಕೊನೆಯ ಮೂರು ಪಂದ್ಯಗಳಿಗೆ ಜಿಂಬಾಬ್ವೆಯಲ್ಲಿ ತಂಡದ ಭಾಗವಾಗಿರುವುದರಿಂದ ಬಿಸಿಸಿಐ ಮೊದಲ ಎರಡು ಪಂದ್ಯಗಳಿಗೆ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಅವರನ್ನು ಹೆಸರಿಸಿದೆ. 2010, 2015 ಮತ್ತು 2016ರ ಬಳಿಕ ಜಿಂಬಾಬ್ವೆಯಲ್ಲಿ ಟಿ20 ಸರಣಿ ಆಡಲು ಭಾರತ ತಂಡ ನಾಲ್ಕನೇ ಬಾರಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿದೆ.

ತಂಡಗಳು ಈ ರೀತಿ ಇವೆ

ಶುಬ್ಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಜಿಂಬಾಬ್ವೆ ತಂಡ: ಸಿಕಂದರ್ ರಾಜಾ (ನಾಯಕ), ಫರಾಜ್ ಅಕ್ರಮ್, ಬ್ರಿಯಾನ್ ಬೆನೆಟ್, ಜೋನಾಥನ್ ಕ್ಯಾಂಪ್ಬೆಲ್, ತೆಂಡೈ ಚಟಾರಾ, ಲ್ಯೂಕ್ ಜೊಂಗ್ವೆ, ಇನ್ನೋಸೆಂಟ್ ಕೈಯಾ, ಕ್ಲೈವ್ ಮಂಡೆ, ವೆಸ್ಲಿ ಮಡ್ವೆರೆ, ತಡಿವಾನಾಶೆ ಮಾರುಮಾನಿ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ರಾಂಡನ್ ಮಾವುಟಾ, ಬ್ಲೆಸ್ಸಿಂಗ್ ಮುಜರಬಾನಿ, ಡಿಯೋನ್ ಮೈಯರ್ಸ್, ಅಂಟಮ್ ನಖ್ವಿ, ರಿಚರ್ಡ್ ಎನ್ಗರವಾ, ಮಿಲ್ಟನ್ ಶುಂಬಾ.

Continue Reading

ಪ್ರಮುಖ ಸುದ್ದಿ

Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

VISTARANEWS.COM


on

Rohit Sharma
Koo

ನವದೆಹಲಿ : ಟಿ20 ವಿಶ್ವಕಪ್ (T20 World Cup) ವಿಜೇತ ರೋಹಿತ್ ಶರ್ಮಾ ನೇತೃತ್ವದ (Rohit Sharma) ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭೇಟಿಯಾಗಿ ಕರೆಸಿ ಆತಿಥ್ಯ ಕೊಟ್ಟರು. 2024ರ ಟಿ 20 ವಿಶ್ವಕಪ್ ನ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸಿದ ನಂತರ ನರೇಂದ್ರ ಮೋದಿ ಅವರು ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಕರೆ ಮಾಡಿದ ನಿವಾಸಕ್ಕೆ ಆಹ್ವಾನಿಸಿದ್ದರು. ಅಂತೆಯೇ ತಂಡಕ್ಕೆ ಆತಿಥ್ಯ ಕೊಟ್ಟ ಅವರು ರೋಹಿತ್​ ಜತೆ ಗುಟ್ಟಾಗಿ ಮಾತನಾಡಿದರು. ಅವರಿಬ್ಬರು ಏನು ಮಾತನಾಡಿದರು ಎಂಬುದು ಆ ಕ್ಷಣದಲ್ಲಿ ಗೊತ್ತಾಗಲಿಲ್ಲ. ಹೀಗಾಗಿ ಕೌತುಕ ಹೆಚ್ಚಾಯಿತು.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆದ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದು ಭಾರತ ತಂಡಕ್ಕೆ ಎರಡನೇ ಟಿ20 ವಿಶ್ವ ಕಪ್​. ಜೂನ್ 29ರಂದು ಬಾರ್ಬಡೋಡ್​ನಲ್ಲಿ ನಡೆದ ಫೈನಲ್​​ನಲ್ಲಿ ಮೆನ್ ಇನ್ ಬ್ಲೂ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿತು.

ಬಾರ್ಬಡೋಸ್​ನಲ್ಲಿ ರೋಹಿತ್ ಶರ್ಮಾ 2024 ರ ಟಿ 20 ವಿಶ್ವಕಪ್ ಗೆಲುವನ್ನು ಪಿಚ್ ಮಣ್ಣಿನ ತುಂಡನ್ನು ತಿನ್ನುವ ಮೂಲಕ ಆಚರಿಸಿದರು. ಪ್ರತಿ ಗೆಲುವಿನ ನಂತರ ವಿಂಬಲ್ಡನ್​ ಅಂಗಣದ ಹುಲ್ಲು ತಿನ್ನುವ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಅವರ ಸಂಪ್ರದಾಯವನ್ನು ಭಾರತೀಯ ನಾಯಕ ಅನುಕರಿಸಿದರು. ರೋಚಕ ಮುಖಾಮುಖಿಯಲ್ಲಿ ಗೆಲುವಿನೊಂದಿಗೆ ಭಾರತ ಕ್ರಿಕೆಟ್ ತಂಡವು 11 ವರ್ಷಗಳ ಐಸಿಸಿ ಪ್ರಶಸ್ತಿ ಬರ ಕೊನೆಗೊಂಡಿತು.

ಮಣ್ಣಿನ ರುಚಿ ಹೇಗಿದೆ ಎಂದು ಪ್ರಶ್ನಿಸಿದ ನರೇಂದ್ರ ಮೋದಿ

ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡ ಬಾರ್ಬಡೋಸ್​ನಿಂದ ನಿರ್ಗಮನ ತಡವಾಯಿತು. ಟಿ 20 ವಿಶ್ವಕಪ್ ಗೆಲುವಿನ ಐದು ದಿನಗಳ ನಂತರ ಭಾರತೀಯ ಕ್ರಿಕೆಟ್ ತಂಡ ಭಾರತಕ್ಕೆ ಮರಳಿತು. ವಿಶೇಷವಾಗಿ ವ್ಯವಸ್ಥೆ ಮಾಡಿದ ಚಾರ್ಟರ್ ವಿಮಾನದ ಮೂಲಕ ದೆಹಲಿಗೆ ಬಂದಿಳಿದರು. ಗುರುವಾರ ಮುಂಜಾನೆ ಆಗಮಿಸಿದ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಮೋದಿ ಅವರ ಬಲಭಾಗದಲ್ಲಿ ರೋಹಿತ್ ಶರ್ಮಾ, ಎಡಭಾಗದಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕುಳಿತಿದ್ದರು. ಭಾರತೀಯ ಕ್ರಿಕೆಟಿಗರು ಮತ್ತು ಕೋಚಿಂಗ್ ಸಿಬ್ಬಂದಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜರ್ಸಿಗಳನ್ನು ಮುಂಭಾಗದಲ್ಲಿ ದಪ್ಪ ಅಕ್ಷರಗಳಲ್ಲಿ ಧರಿಸಿದ್ದರು, ಬಿಸಿಸಿಐ ಲಾಂಛನದ ಮೇಲಿನ ಜರ್ಸಿಯ ಮೇಲೆ ಎರಡು ಸ್ಟಾರ್​​ಗಳಿದ್ದವು.

ಇದನ್ನೂ ಓದಿ: Narendra Modi : ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ, ಕಾರಣವೇನು?

ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ನರೇಂದ್ರ ಮೋದಿ ಅವರು ಭಾರತೀಯ ಕ್ರಿಕೆಟ್ ತಂಡದ ಗೆಲುವಿನ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ನಿರ್ಣಾಯಕ ಕ್ಷಣಗಳಲ್ಲಿ ತಂಡದ ಸಂವೇದನೆಯನ್ನು ಶ್ಲಾಘಿಸಿದರು. ಈ ವೇಳೆ ಅವರು ರೋಹಿತ್ ಬಳಿ ಗುಟ್ಟಾಗಿ, ಗೆದ್ದ ಮೇಲೆ ಪಿಚ್​ನ ಮಣ್ಣು ತಿಂದಿದ್ದೀರಲ್ವಾ ಅದರ ರುಚಿಯೇನು ಎಂದು ಕೇಳಿದರು ಎಂಬುದು ಗೊತ್ತಾಯಿತು.

ವಿರಾಟ್ ಕೊಹ್ಲಿ ಮತ್ತು ಮೋದಿ ಅವರು ಪ್ರಧಾನಿಯೊಂದಿಗಿನ ಭಾರತೀಯ ತಂಡದ ಭೇಟಿಯ ಬಗ್ಗೆ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗುವ ಆಹ್ವಾನ ಮತ್ತು ಗೌರವಕ್ಕೆ ಕೊಹ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ

ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ನಾಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ವಿಧಾನಸಭೆಯಲ್ಲಿ ಭೇಟಿಯಾಗಲಿದ್ದಾರೆ ಎಂದು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಎಎನ್ಐಗೆ ತಿಳಿಸಿದ್ದಾರೆ. ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಆಟಗಾರರು ತಮ್ಮ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಸರ್ನಾಯಕ್ ಹೇಳಿದ್ದಾರೆ.

“ಮುಂಬೈನಲ್ಲಿ ಇಂದಿನ ಕಾರ್ಯಕ್ರಮವನ್ನು ಬಿಸಿಸಿಐ ಆಯೋಜಿಸಿದೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಸೇರಿದಂತೆ ಮುಂಬೈನ ಟೀಮ್ ಇಂಡಿಯಾ ಆಟಗಾರರು ನಾಳೆ ಮಹಾರಾಷ್ಟ್ರ ವಿಧಾನಸಭೆಗೆ ಬರಲಿದ್ದು, ಸಿಎಂ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲಿದ್ದಾರೆ. ಎಂಸಿಎ ಸದಸ್ಯನಾಗಿ, ನಾನು ಆಟಗಾರರನ್ನು ಆಹ್ವಾನಿಸಿದ್ದೇನೆ ಮತ್ತು ಅವರು ನನ್ನ ಆಹ್ವಾನವನ್ನು ಸ್ವೀಕರಿಸಿದ್ದಾರೆ ” ಎಂದು ಸರ್ನಾಯಕ್ ಹೇಳಿದರು.

Continue Reading

ಪ್ರಮುಖ ಸುದ್ದಿ

Narendra Modi : ಟ್ರೋಫಿಯನ್ನು ಕೈಯಲ್ಲಿ ಮುಟ್ಟದ ಪ್ರಧಾನಿ ಮೋದಿ, ಕಾರಣವೇನು?

Narendra Modi:ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

VISTARANEWS.COM


on

Koo

ಬೆಂಗಳೂರು: ವೆಸ್ಟ್​ ಇಂಡೀಸ್​​ನಲ್ಲಿ ನಡೆದ ಟಿ20 ವಿಶ್ವ ಕಪ್​ ಗೆದ್ದು ಭಾರತಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಪ್ರಧಾನಿ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದ್ದಾರೆ. ಈ ವೇಳೆ ಅವರು ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ಜತೆ ಅವರು ವಿಶ್ವ ಕಪ್​​ನೊಂದಿಗೆ ಫೋಟೊಗೆ ಫೋಸ್ ಕೊಟ್ಟಿದ್ದಾರೆ. ಆದರೆ ಅವರು ವಿಶ್ವ ಕಪ್​ ಅನ್ನು ಕೈಯಲ್ಲಿ ಮುಟ್ಟಿಲ್ಲ ಎಂಬುದಾಗಿ ವರದಿಯಾಗಿದೆ. ಅವರು ರೋಹಿತ್​ ಮತ್ತು ವಿರಾಟ್​ ಕೊಹ್ಲಿಯ ಕೈಯನ್ನು ಮಾತ್ರ ಹಿಡಿದುಕೊಂಡಿದ್ದಾರೆ. ಅವರು ಆ ರೀತಿ ಮಾಡಿದ ಫೋಟೋ ವೈರಲ್ ಆಗಿದೆ.

ಪ್ರಧಾನಿ ಮೋದಿ ಅವರು ಯಾಕೆ ಟ್ರೋಫಿ ಮುಟ್ಟಿಲ್ಲ ಎಂಬ ಚರ್ಚೆ ಶುರುವಾಗಿದೆ. ಕೆಲವರು ಅದನ್ನು ಉತ್ತಮ ಗುಣವೆಂದು ಕೊಂಡಾಡಿದರೆ ಇನ್ನೂ ಕೆಲವರು ಸರಿಯಲ್ಲ ಎಂಬುದಾಗಿ ಹೇಳಿದ್ದಾರೆ,

ಗುರುವಾರ ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು.

ಮೋದಿ ಅವರ ಜತೆ ಆಟಗಾರರು ಉಪಾಹಾರ ಸೇವಿಸಿದರು. ನಂತರ ಕೆಲ ಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಮೋದಿ ವಿಶ್ವಕಪ್‌ ಹೀರೋಗಳನ್ನು ಸನ್ಮಾನಿಸಿ, ಅಭಿನಂದಿಸಿದರು. ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಗೆದ್ದುಕೊಂಡ ರೋಹಿತ್‌ ಶರ್ಮ ಮತ್ತು ತಂಡದ ಗೆಲುವನ್ನು ಪ್ರಧಾನಿ ಕೊಂಡಾಡಿದರು.

ಬಾರ್ಬಡಾಸ್​ನಲ್ಲೇ ಸಿಲುಕಿದ್ದ ಆಟಗಾರರು

ವೆಸ್ಟ್‌ ಇಂಡೀಸ್‌ನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್‌ (T20 World Cup 2024) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬಗ್ಗುಬಡಿದ ರೋಹಿತ್‌ ಶರ್ಮಾ ನೇತೃತ್ವದ ಭಾರತದ ಕ್ರಿಕೆಟ್‌ ತಂಡವು ಇಂದು ಬೆಳಗ್ಗೆ ಭಾರತಕ್ಕೆ ಆಗಮಿಸಿತ್ತು. ಏರ್‌ ಇಂಡಿಯಾ ಏರ್‌ಲೈನ್ಸ್‌ನ ವಿಶೇಷ ಚಾರ್ಟರ್ಡ್‌ ವಿಮಾನದಲ್ಲಿ ಭಾರತ ತಂಡದ ಆಟಗಾರರು ದೆಹಲಿಗೆ ಆಗಮಿಸಿದ್ದರು. ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಇದೀಗ ತವರಿಗೆ ಆಗಮಿಸಿದ ವಿಶ್ವಕಪ್‌ ಹೀರೋಗಳಿಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಇದನ್ನೂ ಓದಿ : Virat kohli: ಏಕಾಂಗಿಯಾಗಿ ಎದುರಾಳಿಯನ್ನು ಧ್ವಂಸಗೊಳಿಸುವ ವೀರ ಹೋರಾಟಗಾರ ವಿರಾಟ್​​​

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಭಾರತೀಯ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Continue Reading
Advertisement
Muda site allocation Politically motivated allegation says CM Siddaramaiah
ಕರ್ನಾಟಕ2 mins ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Narendra modi
ಪ್ರಮುಖ ಸುದ್ದಿ4 mins ago

Narendra Modi : ಭಾರತ ತಂಡಕ್ಕೆ ಆತಿಥ್ಯ ನೀಡಿದ ಬಳಿಕ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ನರೇಂದ್ರ ಮೋದಿ

LK Advani
ದೇಶ20 mins ago

LK Advani: ಎಲ್‌.ಕೆ. ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್‌

Kannada New Movie Kadalura Kanmani will release soon
ಕರ್ನಾಟಕ29 mins ago

Kannada New Movie: ಶೀಘ್ರದಲ್ಲೇ ತೆರೆಗೆ ಬರಲಿದೆ ‘ಕಡಲೂರ ಕಣ್ಮಣಿ’ ಚಿತ್ರ

Zircon Jewellery Fashion
ಫ್ಯಾಷನ್38 mins ago

Zircon Jewellery Fashion: ಹೈ ಫ್ಯಾಷನ್‌ ಜ್ಯುವೆಲರಿ ಲಿಸ್ಟ್‌ಗೆ ಸೇರಿದ ವೈವಿಧ್ಯಯಮಯ ಜಿರ್ಕೊನ್‌ ಆಭರಣಗಳ ಹಂಗಾಮಾ!

ZIM vs IND
ಪ್ರಮುಖ ಸುದ್ದಿ43 mins ago

ZIM vs IND : ಭಾರತ ವಿರುದ್ಧ ಸರಣಿಗೂ ಮುನ್ನ ಜಿಂಬಾಬ್ವೆ ಬೌಲಿಂಗ್ ಕೋಚ್ ಆಗಿ ಚಾರ್ಲ್ ಲ್ಯಾಂಗೆವೆಲ್ಟ್ ನೇಮಕ

Cabinet Meeting
ಕರ್ನಾಟಕ48 mins ago

Cabinet Meeting: ವಿಮಾದಾರರು, ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್;‌ ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಇಲ್ಲಿವೆ

Hair Oil Tips
ಆರೋಗ್ಯ1 hour ago

Hair Oil Tips: ರಾತ್ರಿ ಕೂದಲಿಗೆ ಎಣ್ಣೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಿದರೆ ಲಾಭವೋ ನಷ್ಟವೋ?

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Anganwadi workers should not be worried says Minister Lakshmi Hebbalkar
ಬೆಂಗಳೂರು2 hours ago

Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ3 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ4 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ6 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ6 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ8 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ9 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌