Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು? - Vistara News

ಕ್ರಿಕೆಟ್

Ravindra Jadeja: ಟೀಮ್​ ಇಂಡಿಯಾ ಪರ ಜಡೇಜಾ ಇನ್ನು ಏಕದಿನ ಆಡುವುದು ಅನುಮಾನ; ಕಾರಣವೇನು?

Ravindra Jadeja: ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್​ ಟ್ರೋಫಿಯಲ್ಲಿಯೂ ಜಡೇಜಾಗೆ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಒಂದೊಮ್ಮೆ ಅವರನ್ನು ಏಕದಿನ ತಂಡದಲ್ಲಿ ಮುಂದುವರಿಸುವ ಯೋಜನೆ ಇದಿದ್ದರೆ ಲಂಕಾ ಸರಣಿಯಲ್ಲಿ ಅವಕಾಶ ನೀಡಬೇಕಿತ್ತು.

VISTARANEWS.COM


on

Ravindra Jadeja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟಿ20 ವಿಶ್ವಕಪ್​ ಗೆದ್ದ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದ ರವೀಂದ್ರ ಜಡೇಜಾ ಅವರನ್ನು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಕೈಬಿಡಲಾಗಿದೆ. ಇದೀಗ ಕ್ರಿಕೆಟ್​ ವಲಯದಲ್ಲಿ ಜಡೇಜಾ(Ravindra Jadeja) ಅವರ ಏಕದಿನ ಕ್ರಿಕೆಟ್‌ ಬದುಕು ಬಹುತೇಕ ಮುಕ್ತಾಯಗೊಂಡಿದೆ ಎಂದು ಚರ್ಚೆಗಳು ನಡೆಯುತ್ತಿದೆ.

ಅಕ್ಷರ್‌ ಪಟೇಲ್‌ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ಬಿಸಿಸಿಐ ಯೋಜನೆ ರೂಪಿಸಿದೆ. ಇದೇ ಕಾರಣಕ್ಕೆ ಜಡೇಜಾರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಟಿ20 ವಿಶ್ವಕಪ್​ನಲ್ಲಿಯೂ ಜಡೇಜಾ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದರು. ಅಕ್ಷರ್​ ಪಟೇಲ್ ಬ್ಯಾಟಿಂಗ್​ ಮತ್ತು ಬೌಲಿಂಗ್​ 2 ವಿಭಾಗದಲ್ಲಿಯೂ​ ನಿರೀಕ್ಷಿತ ಪ್ರದರ್ಶನ ತೋರುವ ಮೂಲಕ ಮಿಂಚಿದ್ದರು.

ಇದನ್ನೂ ಓದಿ Ravindra Jadeja: ವಿಶ್ವಕಪ್​ ಟ್ರೋಫಿಯೊಂದಿಗೆ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಜಡೇಜಾ

ಜಡೇಜಾಗೆ ಈಗ 35 ವರ್ಷ, ಮುಂದಿನ ಏಕದಿನ ವಿಶ್ವಕಪ್​ ನಡೆಯಲು ಇನ್ನೂ ಮೂರು ವರ್ಷಗಳಿವೆ. 2027ರಲ್ಲಿ ಏಕದಿನ ವಿಶ್ವಕಪ್​ ನಡೆಯಲಿದೆ. ಈ ವೇಳೆಗೆ ಜಡೇಜಾಗೆ 38 ವರ್ಷ ವಯಸ್ಸಾಗಿರುತ್ತದೆ. ಇಲ್ಲಿಯ ಅವರೆಗೆ ಅವರ ಫಾರ್ಮ್​ ಹೇಗಿರುತ್ತದೆ ಎನ್ನುವ ಪ್ರಶ್ನೆ ಕೂಡ ಸಹಜ. ಅಲ್ಲದೆ ಜಡೇಜಾ ಪದೇಪದೆ ಗಾಯಕ್ಕೂ ತುತ್ತಾಗುತ್ತಿರುತ್ತಾರೆ. ಯುವ ಆಟಗಾರರನ್ನು ಬೆಳೆಸುವ ಸಲುವಾಗಿ ಫಾರ್ಮ್​ ಕಳೆದುಕೊಂಡ ಹಿರಿಯ ಆಟಗಾರರನ್ನು ಬಿಸಿಸಿಐ ತಂಡದಿಂದ ಕೈಬಿಡುವುದು ಖಚಿತ.

ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್​ ಟ್ರೋಫಿಯಲ್ಲಿಯೂ ಜಡೇಜಾಗೆ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ. ಒಂದೊಮ್ಮೆ ಅವರನ್ನು ಏಕದಿನ ತಂಡದಲ್ಲಿ ಮುಂದುವರಿಸುವ ಯೋಜನೆ ಇದಿದ್ದರೆ ಲಂಕಾ ಸರಣಿಯಲ್ಲಿ ಅವಕಾಶ ನೀಡಬೇಕಿತ್ತು. ಅಕ್ಷರ್‌ಗೆ ಹೆಚ್ಚಿನ ಅವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಆದರೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಜಡೇಜಾರನ್ನು ಬಿಸಿಸಿಐ ಮುಂದುವರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಜಡೇಜಾ ಭಾರತ ಪರ 197 ಏಕದಿನ ಪಂದ್ಯಗಳನ್ನಾಡಿದ್ದು, 2756 ರನ್‌ ಕಲೆಹಾಕಿದ್ದಾರೆ. 220 ವಿಕೆಟ್‌ಗಳನ್ನೂ ಪಡೆದಿದ್ದಾರೆ.

ಗಿಲ್​ ಭವಿಷ್ಯದ ನಾಯಕ!


ರೋಹಿತ್​ ಶರ್ಮ ಬಳಿಕ ಹಾರ್ದಿಕ್​ ಪಾಂಡ್ಯ ಅಥವಾ ಕೆ.ಎಲ್​ ರಾಹುಲ್​ ಏಕದಿನ ತಂಡದ ನಾಯಕ ಎಂದು ಹೇಳಲಾಗಿತ್ತು. ಆದರೆ, ಲಂಕಾ ಸರಣಿಗೆ ತಂಡ ಪ್ರಕಟಿಸುವಾಗ ಯುವ ಆಟಗಾರ ಶುಭಮನ್​ ಗಿಲ್​ ಅವರನ್ನು ಉಪನಾಯನಾಗಿ ಆಯ್ಕೆ ಮಾಡುವ ಮೂಲಕ ಅವರು ಭವಿಷ್ಯದ ನಾಯಕ ಎಂಬ ಸಂದೇಶವನ್ನು ಬಿಸಿಸಿಐ ನೀಡಿತ್ತು. 2027ರ ಏಕದಿನ ವಿಶ್ವಕಪ್‌ ಗಮನದಲ್ಲಿಟ್ಟುಕೊಂಡು ಹೊಸ ನಾಯಕನನ್ನು ಬೆಳೆಸಲು ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಶುಭಮನ್‌ ಗಿಲ್‌ಗೆ ಉಪನಾಯಕನ ಸ್ಥಾನ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Paris Olympic 2024 : ಚಂಡೀಗಢದಲ್ಲಿ ಜನಿಸಿದ ಮಲ್ಲೇಶ್ವರಿ ಅವರು ಕೇವಲ 12 ವರ್ಷದವರಿದ್ದಾಗ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭಿಸಿದ್ದರು. 1990ರ ಏಷ್ಯನ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ನಡೆದ ರಾಷ್ಟ್ರೀಯ ಶಿಬಿರದಲ್ಲಿ ವಿಶ್ವ ಚಾಂಪಿಯನ್ ಲಿಯೋನಿಡ್ ತರನೆಂಕೊ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಶಿಬಿರದಲ್ಲಿ ಅವರ ಸಹೋದರಿ ಕೃಷ್ಣ ಕುಮಾರಿ ಕೂಡ ಇದ್ದರು.

VISTARANEWS.COM


on

Paris Olympic 2024:
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್ 2024 ((Paris Olympic 2024) ) ​ ಕಳೆಗಟ್ಟುತ್ತಿದೆ. ಭಾರತದ ಒಲಿಂಪಿಕ್ಸ್​​ ಸಾಧನೆ ಸೀಮಿತ. ಅದಕ್ಕೆ ನೂರಾರು ಕಾರಣಗಳಿವೆ. ಇವೆಲ್ಲದರ ನಡುವೆ ವೇಟ್ ಲಿಫ್ಟರ್ ಕರ್ಣಂ ಮಲ್ಲೇಶ್ವರಿ (karnam malleswari) ವೇಟ್​ಲಿಫ್ಟಿಂಗ್​ನಲ್ಲಿ ಕಂಚಿನ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಡೆದವರು. 2000ನೇ ಇಸವಿಯ ಸಿಡ್ನಿ ಒಲಿಂಪಿಕ್ಸ್​​ನಲ್ಲಿ ಅವರು ಈ ದಾಖಲೆ ಮಾಡಿದ್ದರು. ಅವರ ಭಾರತೀಯ ಕ್ರೀಡೆಯಲ್ಲಿ ಮಹತ್ವದ ಮೈಲಿಗಲ್ಲು ರೂಪಿಸಿದ್ದರು. ಮಾತ್ರವಲ್ಲದೆ ಮುಂದಿನ ಪೀಳಿಗೆಯ ಮಹಿಳಾ ಕ್ರೀಡಾಪಟುಗಳಿಗೆ ಪ್ರೇರಣೆಯಾದರು.

ಚಂಡೀಗಢದಲ್ಲಿ ಜನಿಸಿದ ಮಲ್ಲೇಶ್ವರಿ ಅವರು ಕೇವಲ 12 ವರ್ಷದವರಿದ್ದಾಗ ವೇಟ್ ಲಿಫ್ಟಿಂಗ್ ಪ್ರಯಾಣ ಆರಂಭಿಸಿದ್ದರು. 1990ರ ಏಷ್ಯನ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ನಡೆದ ರಾಷ್ಟ್ರೀಯ ಶಿಬಿರದಲ್ಲಿ ವಿಶ್ವ ಚಾಂಪಿಯನ್ ಲಿಯೋನಿಡ್ ತರನೆಂಕೊ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಶಿಬಿರದಲ್ಲಿ ಅವರ ಸಹೋದರಿ ಕೃಷ್ಣ ಕುಮಾರಿ ಕೂಡ ಇದ್ದರು.

ಕರ್ಣಂ ಅವರ ಸಾಮರ್ಥ್ಯದಿಂದ ಪ್ರೇರಿತರಾಗಿದ್ದ ತರನೆಂಕೊ, ಬೆಂಗಳೂರಿಗೆ ತರಬೇತಿಗೆ ಕಳುಹಿಸಿದ್ದರು. ಮಲ್ಲೇಶ್ವರಿಯ ಆರಂಭಿಕ ಯಶಸ್ಸು ಗಮನಾರ್ಹವಾಗಿತ್ತು. 1990ರಲ್ಲಿ ತನ್ನ ಮೊದಲ ಜೂನಿಯರ್ ರಾಷ್ಟ್ರೀಯ ವೇಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ, ಅವರು 52 ಕೆಜಿ ವಿಭಾಗದಲ್ಲಿ ಒಂಬತ್ತು ರಾಷ್ಟ್ರೀಯ ದಾಖಲೆಗಳನ್ನು ಮುರಿದಿದ್ದರು. ಮುಂದಿನ ವರ್ಷ, ಅವರು ತಮ್ಮ ಮೊದಲ ಹಿರಿಯ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದಿದ್ದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ಗೆ ತೆರಳಿರುವ ಭಾರತದ ಹಿರಿಯ ಮತ್ತು ಕಿರಿಯ ಸ್ಪರ್ಧಿಗಳು ಯಾರು ಗೊತ್ತೇ? ಇಲ್ಲಿದೆ ಅವರ ವಿವರ

1993 ರ ವಿಶ್ವ ಚಾಂಪಿಯನ್​​ಷಿಪ್​ನಲ್ಲಿ ಅವರು 54 ಕೆಜಿ ವಿಭಾಗದಲ್ಲಿ ಕಂಚು ಗೆದ್ದಿದ್ದರು. ಮತ್ತು 1994 ರಲ್ಲಿ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ವೇಟ್​ಲಿಫ್ಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯ ನಂತರ 1995 ರಲ್ಲಿ ಮತ್ತೊಂದು ಚಿನ್ನ ಮತ್ತು 1996 ರಲ್ಲಿ ಕಂಚು ಗೆದ್ದರು.

ಐರನ್ ಲೇಡಿ ಖ್ಯಾತಿ


ಮಲ್ಲೇಶ್ವರಿಯ ಯಶಸ್ಸು ವಿಶ್ವ ಚಾಂಪಿಯನ್ ಶಿಪ್ ಗಳನ್ನು ಮೀರಿ ವಿಸ್ತರಿಸಿತ್ತು ಅವರು 1994 ಮತ್ತು 1998 ರ ಏಷ್ಯನ್ ಕ್ರೀಡಾಕೂಟಗಳಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ತಮ್ಮ ಪರಾಕ್ರಮವನ್ನು ಮತ್ತಷ್ಟು ಪ್ರದರ್ಶಿಸಿದರು. ಸಾಧನೆಗಳಿಗಾಗಿ ಅವರು 1994 ರಲ್ಲಿ ಅರ್ಜುನ ಪ್ರಶಸ್ತಿ, 1999 ರಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಮತ್ತು ಅದೇ ವರ್ಷದಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಪಾತ್ರರಾದರು.

ಸಿಡ್ನಿ ಒಲಿಂಪಿಕ್ಸ್​​ನಲ್ಲಿ ಮೊದಲ ಬಾರಿಗೆ ಮಹಿಳಾ ವೇಟ್ಲಿಫ್ಟಿಂಗ್ ಸ್ಪರ್ಧೆಗಳ ಪಟ್ಟಿಗೆ ಸೇರಿಸಲಾಗಿತ್ತು. 1996 ರಿಂದ ವಿಶ್ವ ಚಾಂಪಿಯನ್​ಷಿಪ್​​ ಪದಕವನ್ನು ಗೆದ್ದಿರಲಿಲ್ಲ. ಜತೆಗೆ 69 ಕೆ.ಜಿ ವಿಭಾಗಕ್ಕೆ ಏರಿದ್ದರು. ಆದಾಗ್ಯೂ ಅವರು ಸ್ನ್ಯಾಚ್​ನಲ್ಲಿ 110 ಕೆ.ಜಿ ಮತ್ತು ಕ್ಲೀನ್ ಆ್ಯಂಡ್​ ಜರ್ಕ್ ವಿಭಾಗಗಳಲ್ಲಿ 130 ಕೆ.ಜಿ ಭಾರ ಎತ್ತುವ ಮೂಲಕ ನಿರೀಕ್ಷೆಗಳನ್ನು ಮೀರಿ ಕಂಚಿನ ಪದಕ ಗೆದ್ದರು. ಐತಿಹಾಸಿಕ ಸಾಧನೆಯು ಅವಳನ್ನು ತಕ್ಷಣದ ಮನೆಮಾತಾಗಿಸಿತ್ತು. ಅವರಿಗೆ “ಉಕ್ಕಿನ ಮಹಿಳೆ ” ಎಂಬ ಹೆಸರು ಬಂತು.

ಮಲ್ಲೇಶ್ವರಿ ಸ್ಫೂರ್ತಿದಾಯಕ

ಮಲ್ಲೇಶ್ವರಿ ಅವರ ಒಲಿಂಪಿಕ್ ಪದಕವು ಭಾರತೀಯ ಕ್ರೀಡೆಯ ಮೇಲೆ ಆಳವಾದ ಪ್ರಭಾವ ಬೀರಿತು. ಇದು 2012 ರ ಲಂಡನ್ ಒಲಿಂಪಿಕ್ಸ್​ನಲ್ಲಿ ಬ್ಯಾಡ್ಮಿಂಟನ್​ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ಗೆದ್ದ ಸೈನಾ ನೆಹ್ವಾಲ್ ಮತ್ತು 2016 ರ ರಿಯೋ ಒಲಿಂಪಿಕ್ಸ್​ ಬ್ಯಾಡ್ಮಿಂಟರ್​ನಲ್ಲಿ ಬೆಳ್ಳಿ ಗೆದ್ದ ಪಿ.ವಿ.ಸಿಂಧು ಸೇರಿದಂತೆ ಹೊಸ ತಲೆಮಾರಿನ ಭಾರತೀಯ ಮಹಿಳೆಯರಿಗೆ ಸ್ಫೂರ್ತಿ ನೀಡಿತು.

ಮಲ್ಲೇಶ್ವರಿ ಅವರ ಪರಂಪರೆಯು ಅವರ ಸ್ವಂತ ಸಾಧನೆಗಳನ್ನು ಮೀರಿ ವಿಸ್ತರಿಸಿದೆ ಏಕೆಂದರೆ ಅವರು ಅಸಂಖ್ಯಾತ ಯುವ ಭಾರತೀಯ ಕ್ರೀಡಾಪಟುಗಳಿಗೆ ಭರವಸೆ ಮತ್ತು ಸ್ಫೂರ್ತಿಯ ಸಂಕೇತವಾಗಿದ್ದಾರೆ. ಅವರು 2002ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಸ್ಪರ್ಧೆಗಳಿಗೆ ಮರಳಲು ಯೋಜಿಸಿದ್ದರು. ಆದರೆ ಅವರ ತಂದೆ ನಿಧನರಾದ ನಂತರ ಹಿಂದೆ ಸರಿದಿದ್ದರು. 2004ರ ಒಲಿಂಪಿಕ್ಸ್ ನಲ್ಲಿ ಪ್ರದರ್ಶನ ನೀಡಲು ವಿಫಲವಾದ ನಂತರ ಅವರು ವೇಟ್ ಲಿಫ್ಟಿಂಗ್ ನಿಂದ ನಿವೃತ್ತರಾದರು.

ಮಲ್ಲೇಶ್ವರಿ ಭಾರತೀಯ ಕ್ರೀಡೆಗೆ ಕೊಡುಗೆ ನೀಡುವುದನ್ನು ಮುಂದುವರಿಸಿದ್ದಾರೆ. ಜೂನ್ 2021 ರಲ್ಲಿ ದೆಹಲಿ ಸರ್ಕಾರ ಸ್ಥಾಪಿಸಿದ ಕ್ರೀಡಾ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಅವರನ್ನು ನೇಮಿಸಲಾಗಿತ್ತು. ಕರ್ಣಂ ಮಲ್ಲೇಶ್ವರಿ ಫೌಂಡೇಶನ್, ಭಾರತದಲ್ಲಿ ವೇಟ್ ಲಿಫ್ಟಿಂಗ್ ಮತ್ತು ಪವರ್ ಲಿಫ್ಟಿಂಗ್ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಅವರ ಪರಂಪರೆಯು ಭವಿಷ್ಯದ ಪೀಳಿಗೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ.

Continue Reading

ಕ್ರೀಡೆ

Harbhajan Singh: ಧೋನಿ-ರಿಜ್ವಾನ್ ನಡುವೆ ಹೋಲಿಕೆ ಮಾಡಿದ ಪಾಕ್ ಪತ್ರಕರ್ತನಿಗೆ ಚಳಿ ಬಿಡಿಸಿದ ಹರ್ಭಜನ್

Harbhajan Singh: ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿದ್ದ ಕಮ್ರಾನ್​ ಅಕ್ಮಲ್(Kamran Akmal)ಗೆ ಹರ್ಭಜನ್​ ಸಿಂಗ್(Harbhajan Singh) ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದರು.

VISTARANEWS.COM


on

Harbhajan Singh
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಹರ್ಭಜನ್​ ಸಿಂಗ್(Harbhajan Singh)​ ಅವರು ಪಾಕಿಸ್ತಾನದ ವಿರುದ್ಧ ಆಗಾಗ ಕಿಡಿಕಾರುತ್ತಲೇ ಇರುತ್ತಾರೆ. ಸುಮ್ಮ ಸುಮ್ಮನೆ ಭಾರತೀಯ ಕ್ರಿಕೆಟ್​ ಮತ್ತು ಆಟಗಾರರ ವಿರುದ್ಧ ಆರೋಪ ಮಾಡಿದಾಗ ಪಾಕ್​ಗೆ ತಕ್ಕ ತಿರುಗೇಟು ನೀಡುವವರ ಸಾಲಿನಲ್ಲಿ ಹರ್ಭಜನ್​ ಮುಂಚೂಣಿಯಲ್ಲಿರುತ್ತಾರೆ. ಇದೀಗ ಧೋನಿ(MS Dhoni) ವಿಚಾರದಲ್ಲಿ ಪಾಕ್​ ಪತ್ರಕರ್ತನ(Pakistan Journalist) ಬೆಂಡೆತ್ತಿದ್ದಾರೆ.

ಪಾಕಿಸ್ತಾನ ಪತ್ರಕರ್ತ ಫರೀದ್ ಖಾನ್(Pakistan Journalist Farid Khan) ತನ್ನ ಟ್ವೀಟರ್​ ಎಕ್ಸ್​ ಖಾತೆಯಲ್ಲಿ ಎಂ.ಎಸ್.ಧೋನಿ ಮತ್ತು ಮೊಹಮ್ಮದ್ ರಿಜ್ವಾನ್(Mohammad Rizwan) ಇಬ್ಬರಲ್ಲಿ ಯಾರು ಬೆಸ್ಟ್​? ಈ ಪ್ರಶ್ನೆಗೆ ಪ್ರಾಮಾಣಿಕ ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ್ದರು. ಈ ಪೋಸ್ಟ್ ನೋಡಿದ್ದೇ ತಡ ಹರ್ಭಜನ್​ ಪಿತ್ತ ನೆತ್ತಿಗೇರಿದ್ದು ಇದೆಂತಾ ಸಿಲ್ಲಿ ಪ್ರಶ್ನೆ ಎಂದು ಪ್ರತಿಕ್ರಿಯಿಸಿದ್ದಾರೆ. “ನೀವು ಇತ್ತೀಚಿನ ದಿನಗಳಲ್ಲಿ ಏನು ಸೇದುತ್ತೀರ? ಇದೆಂತಾ ಸಿಲ್ಲಿ ಪ್ರಶ್ನೆ. ಧೋನಿಯಂತ ದಿಗ್ಗಜ ಆಟಗಾರನೊಂದಿಗೆ ಈಗ ತಾನೆ ಕ್ರಿಕೆಟ್​ನಲ್ಲಿ ಬೆಳೆಯುತ್ತಿರುವ ರಿಜ್ವಾನ್​ ಅವರನ್ನು ಹೋಲಿಕೆ ಮಾಡುವುದು ಎಷ್ಟು ಸರಿ. ನೀವು ರಿಜ್ವಾನ್‌ಗೆ ಈ ಪ್ರಶ್ನೆ ಕೇಳಿದರೂ ಅವರು ನಿಮಗೆ ಇದೇ ಉತ್ತರ ಕೊಡುತ್ತಾರೆ” ಎಂದು ಖಾರವಾಗಿಯೇ ಉತ್ತರಿಸಿದ್ದಾರೆ.

ಇದನ್ನೂ ಓದಿ Yuvraj Singh : ಅಂಗವಿಕಲರಂತೆ ರೀಲ್ಸ್​ ಮಾಡಿದ ಯುವರಾಜ್​, ಹರ್ಭಜನ್​ ಸಿಂಗ್ ವಿರುದ್ಧ ದೂರು ದಾಖಲು

“ನಾನು ರಿಜ್ವಾನ್‌ ಅವರನ್ನು ಇಲ್ಲಿ ಅವಮಾನ ಮಾಡುತ್ತಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರು ಯಾವಾಗಲೂ ತುಂಬಾ ಪಾಸಿಟಿವ್ ಆಗಿ ಆಡುತ್ತಾರೆ. ಕ್ರಿಕೆಟ್​ನಲ್ಲಿ ಅವರು ಇನ್ನೂ ಉತ್ತಮ ಸಾಧನೆ ಮಾಡುವಂತಾಗಿ. ಆದರೆ, ಧೋನಿ ಜತೆ ಹೋಲಿಕೆ ಮಾಡುವುದು ತಪ್ಪು. ಧೋನಿ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದರೂ ಕೂಡ ಈಗಲೂ ಅವರು ವಿಶ್ವ ಕ್ರಿಕೆಟ್​ನಲ್ಲಿ ನಂಬರ್ 1 ಕೀಪರ್​ ಎನ್ನುವ ಖ್ಯಾತಿ ಹೊಂದಿದ್ದಾರೆ. ಹೀಗಾಗಿ ಮೊದಲು ಈ ಮೂರ್ಖತನದ ಪ್ರಶ್ನೆಯನ್ನು ಕೇಳುವುದು ನಿಲ್ಲಿಸಿ ಎಂದು ಪತ್ರಕರ್ತ ಫರೀದ್ ಖಾನ್​ಗೆ ಟರ್ಬನೇಟರ್ ಖ್ಯಾತಿಯ ಭಜ್ಜಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಮುಕ್ತಾಯ ಕಂಡಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿದ್ದ ಕಮ್ರಾನ್​ ಅಕ್ಮಲ್(Kamran Akmal)ಗೆ ಹರ್ಭಜನ್​ ಸಿಂಗ್(Harbhajan Singh) ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದರು.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

Continue Reading

ಕ್ರೀಡೆ

Mohammed Shami: ಪಾಕ್​ ಮಾಜಿ ನಾಯಕ ಇಂಜಮಾಮ್ ಬೆಂಡೆತ್ತಿದ ಮೊಹಮ್ಮದ್​ ಶಮಿ

Mohammed Shami: ನೀವೊಬ್ಬ ಮಾಜಿ ಆಟಗಾರರಾಗಿಯೂ ಪದೇಪದೆ ಈ ರೀತಿಯ ಸುಳ್ಳು ಆರೋಪ ಮಾಡುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ ಎಂದು ಮೊಹಮ್ಮದ್​ ಶಮಿ(Mohammed Shami) ಇಂಜಮಾಮ್ ಉಲ್ ಹಕ್(Inzamam Ul Haq)ಗೆ ತಿರುಗೇಟು ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯ ವೇಳೆ ಭಾರತ ತಂಡದ ವೇಗಿ ಅರ್ಶ್‌ದೀಪ್ ಸಿಂಗ್(Arshdeep Singh) ಅವರ ರಿವರ್ಸ್ ಸ್ವಿಂಗ್ ಎಸೆತವನ್ನು ಪ್ರಶ್ನೆ ಮಾಡಿ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದ ಪಾಕಿಸ್ತಾನ ತಂಡದ ಮಾಜಿ ಆಟಗಾರ ಹಾಗೂ ನಾಯಕ ಇಂಜಮಾಮ್ ಉಲ್ ಹಕ್(Inzamam Ul Haq)ಗೆ ಟೀಮ್​ ಇಂಡಿಯಾ ವೇಗಿ ಮೊಹಮ್ಮದ್​ ಶಮಿ(Mohammed Shami) ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ವಿಶ್ಲೇಷಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಇಂಜಮಾಮ್, ಅರ್ಶ್​ದೀಪ್ ರಿವರ್ಸ್ ಸ್ವಿಂಗ್ ಬಗ್ಗೆ ಅನುಮಾನವಿದೆ. 15ನೇ ಓವರ್​ನಲ್ಲಿ ಅವರು ಬೌಲಿಂಗ್​ ನಡೆಸುವ ವೇಳೆ ಚೆಂಡು ಹೆಚ್ಚು ಸ್ವಿಂಗ್​ ಆಗುತ್ತಿತ್ತು. ನಾನು ಗಮನಿಸಿದ ಹಾಗೆ ಈ ರೀತಿ ಚೆಂಡು ಏಕಾಏಕಿ ಸ್ವಿಂಗ್​ ಆಗಲು ಸಾಧ್ಯವಿಲ್ಲ. ನನ್ನ ಪ್ರಕಾರ ಭಾರತೀಯ ಆಟಗಾರರು 12 ಅಥವಾ 13ನೇ ಓವರ್​ನಲ್ಲಿ ಚೆಂಡಿಗೆ ಶೈನಿಂಗ್​ ಹಚ್ಚಿದಂತೆ ಕಾಣುತ್ತಿದೆ. ಅಂಪೈರ್​ಗಳು ಇದನ್ನು ಸೂಕ್ಷವಾಗಿ ಪರಿಗಣಿಸಬೇಕು. ಇಲ್ಲಿ ಯಾವುದೋ ಮೋಸದಾಟ ನಡೆದಂತಿದೆ” ಎಂದು ಆರೋಪಿಸಿದ್ದರು.

“ಇಂಜಮಾಮ್ ಬಗ್ಗೆ ನನಗೆ ಗೌರವವಿದೆ. ಆದರೆ ಅವರು ಜನರನ್ನು ಮೂರ್ಖರನ್ನಾಗಿಸಲು ನೀಡುವ ಹೇಳಿಕೆ ಬಗ್ಗೆ ನನ್ನ ವಿರೋದವಿದೆ. ಕಳೆದ ಏಕದಿನ ವಿಶ್ವಕಪ್​ನಲ್ಲಿಯೂ ಅವರು ಇದೇ ರೀತಿಯ ಹೇಳಿಕೆ ನೀಡಿದಕ್ಕೆ ನಾನು ತಕ್ಕ ಉತ್ತರ ನೀಡಿದ್ದೇನೆ. ನಾನು ಒಂದೇ ಒಂದು ವಿಷಯವನ್ನು ಹೇಳಲು ಬಯಸುತ್ತೇನೆ. ಪಾಕಿಸ್ತಾನ ಬೌಲರ್​ಗಳು ಸ್ವಿಂಗ್​ ಮಾಡಿದರೆ ಅದು ಬಾಲ್ ಟ್ಯಾಂಪರಿಂಗ್ ಅಲ್ಲವೇ?, ಭಾರತ ಮತ್ತು ಪಾಕಿಸ್ತಾನ ಸಾಂಪ್ರದಾಯಿಕ ಎದುರಾಳಿಗಳಾಗಿವೆ. ಹಾಗಂತ ಸುಮ್ಮಸುಮ್ಮನೆ ಆರೋಪ ಮಾಡುವುದು ಸರಿಯಲ್ಲ” ಎಂದು ಮೊಹಮ್ಮದ್ ಶಮಿ ತಿರುಗೇಟು ನೀಡಿದರು.

ಇದನ್ನೂ ಓದಿ Shami-Sania Mirza: ಸಾನಿಯಾ ಮಿರ್ಜಾ ಜತೆ ಮದುವೆ?; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಶಮಿ

“ನೀವೊಬ್ಬ ಮಾಜಿ ಆಟಗಾರರಾಗಿಯೂ ಪದೇಪದೆ ಈ ರೀತಿಯ ಸುಳ್ಳು ಆರೋಪ ಮಾಡುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ” ಎಂದು ಶಮಿ ಕುಟುಕಿದ್ದಾರೆ. ರೋಹಿತ್ ಶರ್ಮಾ (Rohit Sharma) ಕೂಡ ಇಂಜಮಾಮ್ ಹೇಳಿಕೆಗೆ ಅಂದು ತಿರುಗೇಟು ನೀಡಿದ್ದರು. ‘ನಾನು ಇದಕ್ಕೆ ಏನು ಉತ್ತರ ಕೊಡಲಿ? ಬಿಸಿಲಿನಲ್ಲಿ ಆಡುತ್ತಿದ್ದರೆ ಮತ್ತು ಪಿಚ್​ ಒಣಗಿದ್ದರೆ ಚೆಂಡು ರಿವರ್ಸ್​ ಸ್ವಿಂಗ್ ಆಗುತ್ತಿದೆ. ಚೆಂಡು ಎಲ್ಲಾ ತಂಡಗಳಿಗೂ ಅದೇ ರೀತಿ ವರ್ತಿಸುತ್ತದೆ. ನಮಗೆ ಮಾತ್ರ ಅನುಕೂಲವಾಗಿಲ್ಲ. ಕೆಲವೊಮ್ಮೆ, ನಿಮ್ಮ ತಲೆಯನ್ನು ತೆರೆದು ಮೆದುಳನ್ನು ಬಳಸಿ ಮಾತನಾಡಬೇಕಾಗುತ್ತದೆ” ಎಂದು ಹೇಳಿದ್ದರು. 

ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಾಣುತ್ತಿರುವ ಶಮಿ  ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಬೌಲಿಂಗ್​ ಅಭ್ಯಾಸ ಆರಂಭಿಸಿದ್ದಾರೆ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು.

Continue Reading

ಕ್ರಿಕೆಟ್

Viral Video: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಗುಳ್ಳೆ ನರಿ; ವಿಡಿಯೊ ವೈರಲ್​

Viral Video: ಲಂಡನ್​ನಲ್ಲಿ ಕ್ರಿಕೆಟ್​ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಕಂದು ಬಣ್ಣದ ನರಿಯೊಂದು(Brown Fox) ಏಕಾಏಕಿಯಾಗಿ ಮೈದಾನಕ್ಕೆ ನುಗ್ಗಿದೆ. ನೆರದಿದ್ದ ಪ್ರೇಕ್ಷಕರು ಮತ್ತು ಆಟಗಾರರ ಗದ್ದಲದಿಂದ ಹೆದರಿಕೊಂಡ ಈ ನರಿ ಕೆಲ ಕಾಲ ಮೈದಾನದ ಸುತ್ತಲೂ ಓಡಿ ಕೊನೆಗೂ ಮೈದಾನದಿಂದ ಜಿಗಿದು ಹೊರ ಹೋಗಿದೆ.

VISTARANEWS.COM


on

Viral Video
Koo

ಲಂಡನ್​: ಸಾಮನ್ಯವಾಗಿ ಕ್ರಿಕೆಟ್​ ಪಂದ್ಯದ ವೇಳೆ ನಾಯಿ, ಹಾವು, ಬೆಕ್ಕು ಕಾಣಿಸಿಕೊಳ್ಳುವುದು ಸರ್ವೆ ಸಾಮಾನ್ಯ. ಪಂದ್ಯದ ವೇಳೆ ಇವುಗಳು ಮೈದಾನಕ್ಕೆ ಬಂದು ಪಂದ್ಯಗಳು ಅಡಚಣೆಯಾದ ಹಲವು ನಿದರ್ಶನಗಳು ನಮ್ಮ ಕಣ್ಣ ಮುಂದಿದೆ. ಆದರೆ, ಈ ಬಾರಿ ವಿಶೇಷ ಅತಿಥಿಯಂತೆ ನರಿಯೊಂದು(Monitor Lizard) ಮೈದಾನಕ್ಕೆ ಬಂದಿದೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ. ಲಂಡನ್​ನಲ್ಲಿ ಈ ಘಟನೆ ನಡೆದಿದೆ.

ಲಂಡನ್​ನಲ್ಲಿ ಕ್ರಿಕೆಟ್​ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಕಂದು ಬಣ್ಣದ ನರಿಯೊಂದು(Brown Fox) ಏಕಾಏಕಿಯಾಗಿ ಮೈದಾನಕ್ಕೆ ನುಗ್ಗಿದೆ. ನೆರದಿದ್ದ ಪ್ರೇಕ್ಷಕರು ಮತ್ತು ಆಟಗಾರರ ಗದ್ದಲದಿಂದ ಹೆದರಿಕೊಂಡ ಈ ನರಿ ಕೆಲ ಕಾಲ ಮೈದಾನದ ಸುತ್ತಲೂ ಓಡಿ ಕೊನೆಗೂ ಮೈದಾನದಿಂದ ಜಿಗಿದು ಹೊರ ಹೋಗಿದೆ. ಆಟಗಾರರು ನರಿ…ನರಿ ಎಂದು ಕೂಗುತ್ತಿರುವುದನ್ನು ವಿಡಿಯೊದಲ್ಲಿ ಕೇಳಬಹುದಾಗಿದೆ.

ಕೆಲವು ತಿಂಗಳುಗಳ ಹಿಂದೆ ಕೊಲಂಬೊದಲ್ಲಿ ನಡೆದಿದ್ದ ಅಫಘಾನಿಸ್ತಾನ ಮತ್ತು ಶ್ರೀಲಂಕಾ(Sri Lanka vs Afghanistan) ನಡುವಣ ಏಕೈಕ ಟೆಸ್ಟ್​ ಪಂದ್ಯದಲ್ಲಿ ಉಡವೊಂದು(Monitor Lizard) ಬೌಂಡರಿ ಗೆರೆ ದಾಟಿ ಮೈದಾನಕ್ಕೆ ಎಂಟ್ರಿ ಕೊಟ್ಟಿತ್ತು. ಸೀಳಿದಂತಿದ್ದ ಕೆಂಗುಲಾಬಿ ಬಣ್ಣದ ನಾಲಿಗೆಯನ್ನು ಹೊರಚಾಚುತ್ತಾ ಮೈದಾನದಲ್ಲಿ ಓಡಾಡಿತ್ತು. ಈ ವಿಡಿಯೊ ಕೂಡ ವೈರಲ್ ಆಗಿತ್ತು. 

ಉಡವನ್ನು ಕಂಡ ಫೀಲ್ಡ್​ ಅಂಪೈರ್ ಬೌಲಿಂಗ್​ ನಡೆಸಲು ಓಡಿ ಬಂದ ನಿಜತ್ ಮಸೂದ್ ಅವರನ್ನು ತಡೆದು ನಿಲ್ಲಿಸಿ ಬಳಿಕ ಮೈದಾನ ಸಿಬ್ಬಂದಿಗೆ ಉಡವನ್ನು ಹೊರಗಡೆ ಹಾಕುವಂತೆ ಸೂಚನೆ ನೀಡಿದ್ದರು. ಈ ವೇಳೆ ಮೈದಾನದ ಹೊರಗಿದ್ದ ಅಂಪೈರ್​ ಉಡವನ್ನು ಓಡಿಸಲು ಕೆಲ ಕಾಲ ಹರ ಸಾಹಸ ಪಟ್ಟು ಅಂತಿಮವಾಗಿ ಉಡವನ್ನು ಮೈದಾನದಿಂದ ಓಡಿಸಿದ್ದರು.

ದಿಟ್ಟ ಹೋರಾಟ ನಡೆಸಿದ ವಿಂಡೀಸ್​


ಇಂಗ್ಲೆಂಡ್‌ ಎದುರಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ದಿಟ್ಟ ಆಟವಾಡುವ ಮೂಲಕ ತೀವ್ರ ಪೈಪೋಟಿ ನೀಡಿದೆ. ಇಂಗ್ಲೆಂಡ್​ ತಂಡದ ಮೊದಲ ಇನಿಂಗ್ಸ್​ನ 416 ರನ್ನಿಗೆ ಉತ್ತರವಾಗಿ ಬ್ಯಾಟಿಂಗ್​ ನಡೆಸುತ್ತಿರುವ ವೆಸ್ಟ್​ ಇಂಡೀಸ್​ ಕಾವೆಮ್‌ ಹಾಜ್‌(120) ಅಮೋಘ ಶತಕದ ನೆರವಿನಿಂದ 5 ವಿಕೆಟಿಗೆ 351 ರನ್‌ ಗಳಿಸಿ ದ್ವಿತೀಯ ದಿನದಾಟ ಮುಂದುವರಿಸಿದೆ. ಇನ್ನೂ 65 ರನ್​ ಹಿನ್ನಡೆಯಲ್ಲಿದೆ. ಸದ್ಯದ ಪರಿಸ್ಥಿತಿ ನೋಡುವಾಗ ವಿಂಡೀಸ್​ ಮೊದಲ ಇನಿಂಗ್ಸ್​ನಲ್ಲಿ ಭಾರೀ ಮುನ್ನಡೆ ಸಾಧಿಸುವ ನಿರೀಕ್ಷೆಯಿದೆ. ಜಾಸನ್​ ಹೋಲ್ಡರ್​(23) ಮತ್ತು ಜೋಶುವಾ ಡಾ ಸಿಲ್ವಾ(32) ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ Viral Video: ನೋಡ ನೋಡ್ತಿದ್ದಂತೆ ಕುಸಿದು ಬಿತ್ತು ಕ್ಲಾಸ್‌ರೂಂ ಗೋಡೆ; ಒಳಗಿದ್ದ ಮಕ್ಕಳ ಕತೆ ಏನಾಯ್ತು ಗೊತ್ತಾ? ವಿಡಿಯೋ ಇದೆ

ಮುಂಬೈ ತಂಡ ಸೇರಲಿದ್ದಾರೆ ಬೆನ್ ಸ್ಟೋಕ್ಸ್​​

ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಫ್ರ್ಯಾಂಚೈಸ್ ಲೀಗ್ ಎಸ್ಎ 20 ಯ ಮುಂದಿನ ಆವೃತ್ತಿಯಲ್ಲಿ ಇಂಗ್ಲೆಂಡ್ ಸ್ಟಾರ್ ಬೆನ್ ಸ್ಟೋಕ್ಸ್ (Ben Stokes) ಎಂಐ ಕೇಪ್ ಟೌನ್​ ತಂಡಕ್ಕೆ ಆಡಲು ಸಹಿ ಹಾಕಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಎಸ್ಎ 20 ಅನ್ನು 2023 ರಲ್ಲಿ ಒಟ್ಟು ಆರು ತಂಡಗಳೊಂದಿಗೆ ಪ್ರಾರಂಭಿಸಲಾಯಿತು. ಎಲ್ಲಾ ತಂಡಗಳು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಮಾಲೀಕರ ಒಡೆತನದಲ್ಲಿವೆ. ಎಂಐ ಕೇಪ್ ಟೌನ್ ಅಂಬಾನಿ ಒಡೆತನದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಪಾಲುದಾರ ತಂಡವಾಗಿದೆ.

ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಬೆನ್ ಸ್ಟೋಕ್ಸ್ ಎಸ್ಎ 20 ನ ಮೂರನೇ ಆವೃತ್ತಿಯಲ್ಲಿ ಕೇಪ್ ಟೌನ್ ಮೂಲದ ಫ್ರಾಂಚೈಸಿಗಾಗಿ ಆಡುವುದನ್ನು ಕಾಣಬಹುದು. ಮುಂದಿನ ಜನವರಿಯಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಆಡಲು ಇಂಗ್ಲೆಂಡ್ ಟೆಸ್ಟ್ ನಾಯಕನಿಗೆ 800,000 ಪೌಂಡ್ (ಅಂದಾಜು 8.65 ಕೋಟಿ ರೂ.) ವರೆಗೆ ಆಫರ್ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಬೆನ್ ಸ್ಟೋಕ್ಸ್ ಇತ್ತೀಚಿನ ದಿನಗಳಲ್ಲಿ ಟಿ 20 ಯಿಂದ ದೂರವಿದ್ದರೂ, ಅವರು ಇನ್ನೂ ವಿಶ್ವದ ಅತ್ಯುತ್ತಮ ಆಲ್​ರೌಂಡರ್​ಗಳಲ್ಲಿ ಒಬ್ಬರು. ಅವರು ಇತ್ತೀಚೆಗೆ ನಿಯಮಿತವಾಗಿ ಬೌಲಿಂಗ್ ಪುನರಾರಂಭಿಸಿದ್ದಾರೆ. ಇದು ಅವರನ್ನು ಇನ್ನಷ್ಟು ಮೌಲ್ಯಯುತವಾಗಿಸುತ್ತದೆ.

Continue Reading
Advertisement
union budget 2024
ಬಜೆಟ್ 20243 mins ago

Union Budget 2024: ಷೇರು ಮಾರುಕಟ್ಟೆ ಮೇಲೆ ಬಜೆಟ್ ದಿನದ ಎಫೆಕ್ಟ್‌ ಏನು? ಇಲ್ಲಿದೆ 10 ವರ್ಷಗಳ ಹಿನ್ನೋಟ

Viral Video
ಕ್ರೈಂ15 mins ago

Viral Video: ಅತೀ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ; ಮೇಲೆ ಹಾರಿ ನೆಲಕ್ಕೆ ಅಪ್ಪಳಿಸಿದ ದಂಪತಿ

CM Siddaramaiah
ರಾಜಕೀಯ39 mins ago

CM Siddaramaiah: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ

Monsoon Fashion
ಫ್ಯಾಷನ್45 mins ago

Monsoon Fashion: ಮಾನ್ಸೂನ್‌ಗೆ ತಕ್ಕಂತೆ ಬದಲಾದ ಸೂಪರ್‌ ಮಾಡೆಲ್‌ ಸಂತೋಷ್‌ ರೆಡ್ಡಿ ಫ್ಯಾಷನ್‌!

karnataka rain
ಮಳೆ48 mins ago

Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Paris Olympic 2024:
ಕ್ರೀಡೆ51 mins ago

Paris Olympic 2024 : ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಮಹಿಳಾ ಅಥ್ಲೀಟ್​ ಕರ್ಣಂ ಮಲ್ಲೇಶ್ವರಿ ಸಾಧನೆಯ ವಿವರ ಇಲ್ಲಿದೆ

Manoj Soni
ದೇಶ1 hour ago

Manoj Soni: ಅಕ್ರಮ ಆರೋಪದ ಬೆನ್ನಲ್ಲೇ ಯುಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್‌ ಸೋನಿ ರಾಜೀನಾಮೆ

ಕರ್ನಾಟಕ1 hour ago

CM Siddaramaiah: ಅಧಿಕಾರ ದುರುಪಯೋಗ ಆರೋಪ; ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು

UP Minister Resigns
ದೇಶ2 hours ago

UP Minister Resigns: ಯೋಗಿ ಸರ್ಕಾರದಿಂದ ಒಂದು ವಿಕೆಟ್‌ ಪತನ; ಸಚಿವೆ ಸೋನಮ್‌ ಚಿಶ್ಟಿ ರಾಜೀನಾಮೆ

Belgavi News
ಬೆಳಗಾವಿ2 hours ago

Belgavi News : ಬೆಳಗಾವಿಯಲ್ಲಿ ಮದ್ದು ಕುಟ್ಟುವಾಗ ಭಾರಿ ಸ್ಫೋಟ; ವ್ಯಕ್ತಿ ಸಜೀವ ದಹನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ7 hours ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ1 day ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 day ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ4 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ5 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ5 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌