Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ಶಿಖರ್‌ ಧವನ್‌ - Vistara News

ಕ್ರಿಕೆಟ್

Shikhar Dhawan: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ಶಿಖರ್‌ ಧವನ್‌

Shikhar Dhawan: ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, 13 ವರ್ಷಗಳ ಸುದೀರ್ಘ ವೃತ್ತಿ ಜೀವನಕ್ಕೆ ಅಂತ್ಯ ಹಾಡಿದ್ದಾರೆ. “ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯೊಂದಿಗೆ ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ಮುಗಿಸುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!” ಎಂದು ಧವನ್ ಬರೆದುಕೊಂಡು ವಿಡಿಯೊ ಮೂಲಕ ನಿವೃತ್ತಿಯನ್ನು ಘೋಷಿಸಿದ್ದಾರೆ.

VISTARANEWS.COM


on

Shikhar Dhawan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ಶಿಖರ್ ಧವನ್ (Shikhar Dhawan) ಅಂತಾರಾಷ್ಟ್ರೀಯ ಹಾಗೂ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, 13 ವರ್ಷಗಳ ಸುದೀರ್ಘ ವೃತ್ತಿ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಆಟದಿಂದ ದೂರ ಸರಿಯುವ ನಿರ್ಧಾರವನ್ನು ಶಿಖರ್‌ ಧವನ್ ಸೋಷಿಯಲ್‌ ಮೀಡಿಯಾದಲ್ಲಿ ಪ್ರಕಟಿಸಿದ್ದು, ಅಭಿಮಾನಿಗಳು ಶಾಕ್‌ಗೆ ಒಳಗಾಗಿದ್ದಾರೆ.

“ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯೊಂದಿಗೆ ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ಮುಗಿಸುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!” ಎಂದು ಧವನ್ ಬರೆದುಕೊಂಡು ವಿಡಿಯೊ ಮೂಲಕ ನಿವೃತ್ತಿಯನ್ನು ಘೋಷಿಸಿದ್ದಾರೆ.

ಧವನ್‌ ಹೇಳಿದ್ದೇನು?

“ಭಾರತಕ್ಕಾಗಿ ಆಡುವ ಕನಸಿತ್ತು. ನಾನು ಅದನ್ನು ಸಾಧಿಸಿದೆ. ನನ್ನ ಈ ಪ್ರಯಾಣದಲ್ಲಿ ಅನೇಕರು ಸ್ಮರಣೀಯ ಕೊಡುಗೆ ನೀಡಿದ್ದಾರೆ. ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಮೊದಲನೆಯದಾಗಿ ನನ್ನ ಕುಟುಂಬ. ನನ್ನ ಬಾಲ್ಯದ ತರಬೇತುದಾರ ದಿವಂಗತ ತಾರಕ್ ಸಿನ್ಹಾ ಮತ್ತು ಮದನ್‌ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಆಟದ ಮೂಲಭೂತ ಅಂಶಗಳನ್ನು ಕಲಿತಿದ್ದೇನೆʼʼ ಎಂದು ಅವರು ಹೇಳಿದ್ದಾರೆ. ಮುಂದುವರಿದು, ”ನಾನು ಇಷ್ಟು ದೀರ್ಘ ಕಾಲ ಕ್ರಿಕೆಟ್ ಆಡಿದ ನನ್ನ ತಂಡಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ಕ್ರಿಕೆಟ್‌ ತಂಡದ ಮೂಲಕ ನನಗೆ ಮತ್ತೊಂದು ಕುಟುಂಬ ಸಿಕ್ಕಿತು. ಜತೆಗೆ ಹೆಸರು, ಖ್ಯಾತಿ ಮತ್ತು ಅಭಿಮಾನಿಗಳ ಪ್ರೀತಿಯೂ ಲಭಿಸಿತುʼʼ ಎಂದು ಭಾವುಕರಾಗಿ ಹೇಳಿದ್ದಾರೆ. ಅದಾಗ್ಯೂ 38 ವರ್ಷದ ಧವನ್‌ ಐಪಿಎಲ್‌ನಲ್ಲಿ ಆಡಲಿದ್ದಾರೆ.

13 ವರ್ಷಗಳ ಆಟಕ್ಕೆ ತೆರೆ

ಶಿಖರ್‌ ಧವನ್ ಅವರ ಈ ಘೋಷಣೆಯೊಂದಿಗೆ 13 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಬಿದ್ದಿದೆ. 2010ರ ಅಕ್ಟೋಬರ್ 20ರಂದು ವಿಶಾಖಪಟ್ಟಣಂನ ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅವರು ಪಾದಾರ್ಪಣೆ ಮಾಡಿದ್ದರು. 2013ರಲ್ಲಿ ಅವರು ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದರು.

1985ರ ಡಿಸೆಂಬರ್‌ 5ರಂದು ದಿಲ್ಲಿಯಲ್ಲಿ ಜನಿಸಿದ ಶಿಖರ್‌ ಧವನ್‌, 2010ರಲ್ಲಿ ಆಸ್ಟ್ರೇಲಿಯಾ ತಂಡದ ಮೂಲಕ ಒನ್‌ಡೇ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ್ದರೆ, ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯವನ್ನೂ ಆಸ್ಟ್ರೇಲಿಯಾ ವಿರುದ್ಧ ಆಡಿದ್ದು ವಿಶೇಷ. 2013ರಲ್ಲಿ ಟೆಸ್ಟ್‌ ಪಂದ್ಯಕ್ಕೆ ಕಾಲಿಟ್ಟಿದ್ದರು. ವೆಸ್ಟ್‌ ಇಂಡೀಸ್‌ ತಂಡದ ವಿರುದ್ಧ 2011ರಲ್ಲಿ ಟಿ-20 ಪಂದ್ಯಕ್ಕೆ ಅಡಿ ಇಟ್ಟರು. ಇನ್ನು ಐಪಿಎಲ್‌ನಲ್ಲಿ ಡೆಲ್ಲಿ ಡೇರ್‌ ಡೆವಿಲ್ಸ್‌, ಡೆಕ್ಕನ್‌ ಚಾರ್ಜರ್ಸ್‌, ಸನ್​ರೈಸರ್ಸ್​ ಹೈದರಾಬಾದ್​​, ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ಪರ ಆಡಿದ್ದಾರೆ.

ಕೊನೆಯ ಪಂದ್ಯ

2022ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ ಧವನ್, 269 ಪಂದ್ಯಗಳಿಂದ 24 ಶತಕಗಳು, 44 ಅರ್ಧಶತಕಗಳು ಸೇರಿದಂತೆ 10,867 ರನ್ ಕಲೆ ಹಾಕಿದ್ದಾರೆ.

ಇದನ್ನೂ ಓದಿ: Harry Singh: ಇಂಗ್ಲೆಂಡ್​ ಟೆಸ್ಟ್​ ತಂಡದಲ್ಲಿ ಕಾಣಿಸಿಕೊಂಡ ಭಾರತದ ಮಾಜಿ ವೇಗಿ ಆರ್​.ಪಿ. ಸಿಂಗ್​ ಪುತ್ರ; ಇದು ಯಾವ ಆರ್​.ಪಿ. ಸಿಂಗ್​ ಎಂದ ನೆಟ್ಟಿಗರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Rohit Sharma:ರೋಹಿತ್ ಕೊನೆಯ ಬಾರಿಗೆ ಟೆಸ್ಟ್​ ಪಂದ್ಯವನ್ನಾಡಿದ್ದು 2024 ರ ಮಾರ್ಚ್‌ನಲ್ಲಿ. ಇಂಗ್ಲೆಂಡ್ ವಿರುದ್ಧ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು.

VISTARANEWS.COM


on

Rohit Sharma
Koo

ಮುಂಬಯಿ: ಮುಂದಿನ ತಿಂಗಳು ತವರಿನಲ್ಲಿ ನಡೆಯುವ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್​ ಸರಣಿಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಈಗಿಂದಲೇ ಅಭ್ಯಾಸ ಆರಂಭಿಸಿದ್ದಾರೆ. ತಮ್ಮ ತವರಾದ ಮುಂಬೈಯ ಸಾರ್ವಜನಿಕ ಪಾರ್ಕ್ ಒಂದರಲ್ಲಿ, ಭಾರತ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್(Abhishek Nayar) ಅವರೊಂದಿಗೆ ತರಬೇತಿ ಪಡೆಯುತ್ತಿರುವ ವಿಡಿಯೊ ವೈರಲ್(viral video)​ ಆಗಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿ ಸೆಪ್ಟೆಂಬರ್​ 19ರಿಂದ ಆರಂಭಗೊಳ್ಳಲಿದೆ. ಸದ್ಯ ಬಾಂಗ್ಲಾ ತಂಡ ಪಾಕಿಸ್ತಾನ ವಿರುದ್ಧ ಟೆಸ್ಟ್​ ಸರಣಿನ್ನಾಡುತ್ತಿದೆ.

ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿ ಉಳಿದ ಟೀಮ್​ ಇಂಡಿಯಾ ಆಟಗಾರರು ಸೆಪ್ಟೆಂಬರ್​ 5ರಿಂದ ಆರಂಭಗೊಳ್ಳಲಿರುವ ದುಲೀಪ್​ ಟ್ರೋಫಿಯಲ್ಲಿ ಆಡಲಿದ್ದಾರೆ. ಈ ಮೂವರು ಆಟಗಾರರಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ.

ರೋಹಿತ್ ಕೊನೆಯ ಬಾರಿಗೆ ಟೆಸ್ಟ್​ ಪಂದ್ಯವನ್ನಾಡಿದ್ದು 2024 ರ ಮಾರ್ಚ್‌ನಲ್ಲಿ. ಇಂಗ್ಲೆಂಡ್ ವಿರುದ್ಧ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದರು. ಮೂರನೇ ಋತುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ)ನಲ್ಲಿ ಭಾರತ ತಂಡ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ರೋಹಿತ್​ ಬ್ಯಾಟಿಂಗ್​ ಫಾರ್ಮ್​ ದೊಡ್ಡ ಪಾತ್ರವನ್ನು ವಹಿಸಲಿದೆ.

ಕಳೆದ ಬುಧವಾರ ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ್ದರು. ಈ ಫೋಟೊ ವೈರಲ್(Viral News)​ ಆಗಿತ್ತು.

ಇದನ್ನೂ ಓದಿ Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

2ನೇ ಮಗುವಿನ ನಿರೀಕ್ಷೆಯಲ್ಲಿ ರೋಹಿತ್​


ರೋಹಿತ್​ ಪತ್ನಿ ರಿತಿಕಾ ಸಜ್ದೇಹ್ (Ritika Sajdeh) ಗರ್ಭಿಣಿಯಾಗಿದ್ದಾರೆ ಎಂದು ವರದಿಯಾಗಿದೆ. ರಿತಿಕಾ ಬೇಬಿ ಬಂಪ್‌ ವಿಡಿಯೊ ಒಂದು ವೈರಲ್​ ಆಗುತ್ತಿದ್ದು, ರೋಹಿತ್​ ಅಭಿಮಾನಿಗಳು ಜೂನಿಯರ್​ ಹಿನ್​ಮ್ಯಾನ್​ ಶೀಘ್ರದಲ್ಲೇ ಬರಲಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ. ರಿತಿಯಾ ಮುಂಬೈಯಲ್ಲಿ ತಿರುಗಾಡುವುದನ್ನು ಪಾಪರಾಜಿಗಳು ಸೆರೆ ಹಿಡಿದಿದ್ದಾರೆ. ಈ ವಿಡಿಯೊದಲ್ಲಿ ರಿತಿಕಾ ಅವರ ಬೆಬಿ ಬಂಪ್‌ ದೃಶ್ಯವು ಸೆರೆಯಾಗಿದೆ. ಹಾಗಾಗಿ, ರೋಹಿತ್​ ಪತ್ನಿಯು ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

ತನ್ನ ಬ್ಯುಸಿನೆಸ್ ಮ್ಯಾನೇಜರ್ ಆಗಿದ್ದ ರಿತಿಕಾ ಸಜ್ದೇಹ್ ಅವರನ್ನು ರೋಹಿತ್ ಶರ್ಮಾ 2015ರಲ್ಲಿ ಮದುವೆಯಾಗಿದ್ದರು. ಮದುವೆಗೂ ಮುನ್ನ ರೋಹಿತ್-ರಿತಿಕಾ ಇಬ್ಬರೂ 6 ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಮದುವೆಯಾದ ಬಳಿಕವೂ ಕ್ರಿಕೆಟ್‌ ಪಂದ್ಯಗಳ ವೇಳೆ ಮೈದಾನದಲ್ಲಿದ್ದು ತನ್ನ ಪತಿ ರೋಹಿತ್​ಗೆ ರಿತಿಕಾ ಚಿಯರ್ ಮಾಡುತ್ತಿರುತ್ತಾರೆ. ರೋಹಿತ್​ ಶರ್ಮ ಮತ್ತು ರಿತಿಕಾ ಸಜ್ದೇಹ್(Ritika Sajdeh) ದಂಪತಿಗೆ ಈಗಾಗಲೇ ಓರ್ವ ಪುತ್ರಿ ಇದ್ದಾಳೆ. ಈಕೆಯ ಹೆಸರು ಸಮೈರಾ.

Continue Reading

ಕ್ರೀಡೆ

Rahul Charity Auction: ಕ್ರಿಕೆಟಿಗ ರಾಹುಲ್ ಹರಾಜಿಗಿಟ್ಟ ವಸ್ತುಗಳಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ವಸ್ತು ಯಾವುದು?

Rahul Charity Auction: ರಾಹುಲ್ ಹರಾಜಿಗಿಟ್ಟ ಕ್ರಿಕೆಟ್ ಪರಿಕರಗಳಲ್ಲಿ ಕೊಹ್ಲಿಯ ಜೆರ್ಸಿ 40 ಲಕ್ಷ ರೂ.ಗಳಿಗೆ ಬಿಕರಿಯಾದರೆ, ಗ್ಲೌಸ್ 28 ಲಕ್ಷ ರೂ.ಗೆ ಮಾರಾಟವಾಗಿದೆ.

VISTARANEWS.COM


on

Rahul Charity Auction
Koo

ಮುಂಬಯಿ: ಟೀಮ್​ ಇಂಡಿಯಾ(Team India) ಕ್ರಿಕೆಟಿಗ ಕೆ.ಎಲ್​ ರಾಹುಲ್(KL Rahul) ಮತ್ತು ಅವರ ಪತ್ನಿ ಅಥಿಯಾ ಶೆಟ್ಟಿ (Athiya Shetty) ಜತೆಗೂಡಿ ವಿಶೇಷ ಮಕ್ಕಳ ಶಾಲೆಯ (Rahul Charity Auction) ನೆರವಿಗಾಗಿ ಮುಂಬೈನ BKCಯಲ್ಲಿನ ವಿಶೇಷ ಮಕ್ಕಳ ಶಾಲೆಗೆ ಅಗತ್ಯವಿರುವ ಬೆಂಬಲ ನೀಡುವ ಸಲುವಾಗಿ ವಿಪ್ಲಾ ಫೌಂಡೇಶನ್‌ಗೆ (Vipla Foundation) ನಿಧಿ ಸಂಗ್ರಹಿಸಲು ಮುಂದಾಗಿದ್ದರು. ಈ ಬಗ್ಗೆ ರಾಹುಲ್​ ಮತ್ತು ಅಥಿಯಾ ಸಾಮಾಜಿಕ ಜಾಲತಾಣದಲ್ಲಿಯೂ ಘೋಷಣೆ ಮಾಡಿದ್ದರು.

ಕ್ರಿಕೆಟ್​ ಪರಿಕರಗಳನ್ನು ನೀಡುವ ಮೂಲಕ ಭಾರತ ತಂಡದ ವಿರಾಟ್​ ಕೊಹ್ಲಿ, ಎಂ.ಎಸ್​ ಧೋನಿ, ರೋಹಿತ್​ ಶರ್ಮ, ರಾಹುಲ್​ ದ್ರಾವಿಡ್​. ಆರ್​ ಅಶ್ವಿನ್​ ಸೇರಿ ಹಲವು ಮಾಜಿ ಆಟಗಾರರು ರಾಹುಲ್​ ಅವರ ಈ ಸಮಾಜಮುಖಿ ಕಾರ್ಯಕ್ಕೆ ಜೈಜೋಡಿಸಿದ್ದರು. ಇದೀಗ ರಾಹುಲ್​ ಈ ಪರಿಕರಗಳನ್ನು ಹರಾಜಿಗಿಟ್ಟು 1.96 ಕೋಟಿ ರೂ. ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ಬಡ ಮಕ್ಕಳ ನೆರವಿಗೆ ನೀಡಿದ್ದಾರೆ. ರಾಹುಲ್​ ಹರಾಜಿಗಿಟ್ಟ ವಸ್ತುಗಳಲ್ಲಿ ಅತ್ಯಂತ ಹೆಚ್ಚಿನ ಮೊತ್ತಕ್ಕೆ ಸೇಲ್​ ಆದ ವಸ್ತು ಯಾವುದು? ಎಂಬ ಕುತೂಹಲ ಅಭಿಮಾನಿಗಳದ್ದು.

ಮೊನ್ನೆಯಷ್ಟೇ ಕೆಎಲ್ ರಾಹುಲ್ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ, ನಾನೊಂದು ಮಹತ್ವದ ಘೋಷಣೆ ಮಾಡಲಿದ್ದೇನೆ, ಕಾಯುತ್ತಿರಿ ಎಂದು ಎಲ್ಲರನ್ನೂ ಕುತೂಹಲಕ್ಕೆ ದೂಡಿದ್ದರು. ಅವರ ಈ ಪೋಸ್ಟ್ ನೋಡಿದ ಕೆಲವರು ಅವರು ನಿವೃತ್ತಿಯಾಗುತ್ತಿದ್ದಾರೆಯೇ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅಂದು ರಾಹುಲ್​ ಪೋಸ್ಟ್ ಮಾಡಿದ್ದು ಹರಾಜಿನಲ್ಲಿ ಸಿಕ್ಕ ಮೊತ್ತವೆಷ್ಟು ಎಂದು ರಿವಿಲ್​ ಮಾಡುವುದಾಗಿತ್ತು.​

ರಾಹುಲ್ ಹರಾಜಿಗಿಟ್ಟ ಕ್ರಿಕೆಟ್ ಪರಿಕರಗಳಲ್ಲಿ ವಿರಾಟ್ ಕೊಹ್ಲಿ ಜೆರ್ಸಿ ಮತ್ತು ಗ್ಲೌಸ್, ರೋಹಿತ್ ಶರ್ಮಾ ಬ್ಯಾಟ್​, ಧೋನಿಯ ಬ್ಯಾಟ್, ದ್ರಾವಿಡ್ ಅವರ ಬ್ಯಾಟ್, ಆರ್​.ಅಶ್ವಿನ್​ ಜೆರ್ಸಿ ಸೇರಿ ಹಲವು ಕ್ರಿಕೆಟಿಗರ ಪರಿಕರಗಳು ಸೇರಿದ್ದವು. ಈ ಪೈಕಿ ಅತೀ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿದ್ದು ಕಿಂಗ್​ ಖ್ಯಾತಿಯ ವಿರಾಟ್ ಕೊಹ್ಲಿ ಅವರ ಜೆರ್ಸಿ ಮತ್ತು ಗ್ಲೌಸ್. ಕೊಹ್ಲಿಯ ಜೆರ್ಸಿ 40 ಲಕ್ಷ ರೂ.ಗಳಿಗೆ ಬಿಕರಿಯಾದರೆ, ಗ್ಲೌಸ್ 28 ಲಕ್ಷ ರೂ.ಗೆ ಮಾರಾಟವಾಗಿದೆ. ರಾಹುಲ್​ ಕೂಡ ತಮ್ಮ ಬ್ಯಾಟ್​, ಜೆರ್ಸಿ ಮತ್ತು ಕ್ಯಾಪ್​ ಹರಾಜಿಗಿಟ್ಟಿದ್ದರು.

ಇದನ್ನೂ ಓದಿ KL Rahul Retirement: ಕ್ರಿಕೆಟ್​ಗೆ ದಿಢೀರ್​ ನಿವೃತ್ತಿ ಘೋಷಿಸಿದ ಕೆ.ಎಲ್​ ರಾಹುಲ್?; ಇನ್​ಸ್ಟಾಗ್ರಾಮ್​ ಪೋಸ್ಟ್​ ವೈರಲ್​​

ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟ್​ 24 ಲಕ್ಷ ರೂ., ಮಹೇಂದ್ರ ಸಿಂಗ್​ ಧೋನಿಯ ಬ್ಯಾಟ್ 13 ಲಕ್ಷ, ರಾಹುಲ್ ದ್ರಾವಿಡ್ ಅವರ ಬ್ಯಾಟ್ 11 ಲಕ್ಷ ರೂ.ಗೆ ಬಿಕರಿಯಾಗಿದೆ ಎಂದು ತಿಳಿದುಬಂದಿದೆ. ವಿರಾಟ್​ ಕೊಹ್ಲಿ ಮತ್ತು ರೋಹಿತ್​ ಶರ್ಮ ಕೂಡ ಎನ್​ಜಿಒ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವ ಕಾರ್ಯ ಮಾಡುತ್ತಿದ್ದಾರೆ. ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ‘ಸೇವಾ’ ಎಂಬ ಹೆಸರಿನ ಟ್ರಸ್ಟ್​ ಮೂಲಕ ಅದೆಷ್ಟೋ ಬಡ ಜನರಿಗೆ ಆರೋಗ್ಯ ಸಂಬಂಧಿಸಿ ಹಣಕಾಸಿನ ನೆರವು ಒದಗಿಸಿದ್ದಾರೆ.

Continue Reading

ಕ್ರೀಡೆ

MS Dhoni: 43ನೇ ವಯಸ್ಸಿನಲ್ಲಿಯೂ ಜಂಪಿಂಗ್ ಸ್ಮ್ಯಾಶ್ ಹೊಡೆದ ಧೋನಿ; ವೈರಲ್​ ವಿಡಿಯೊ ಇಲ್ಲಿದೆ

MS Dhoni: ಧೋನಿ ತಮ್ಮ ಸ್ನೇಹಿತರ ಜತೆ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ಜಾನ್ಸ್ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ

VISTARANEWS.COM


on

MS Dhoni
Koo

ರಾಂಚಿ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಆಟಗಾರ ಎಂಎಸ್‌ ಧೋನಿ(MS Dhoni) ಫುಟ್​ಬಾಲ್‌(ms dhoni football) ಅಭಿಮಾನಿ. ಭಾರತ ತಂಡದ ಪರ ಆಡುತ್ತಿದ್ದ ವೇಳೆ ಧೋನಿ ಬಿಡುವು ಸಿಕ್ಕಾಗಲೆಲ್ಲಾ ಹೆಚ್ಚಾಗಿ ಸ್ನೇಹಿತರ ಜತೆ ಫುಟ್​ಬಾಲ್‌ ಆಡುತ್ತಿದ್ದರು. ನಿವೃತ್ತಿಯಾದ ಬಳಿಕ ಅವರು ಫುಟ್​ಬಾಲ್‌ ಆಡುವುದನ್ನು ನಿಲ್ಲಿಸಿದ್ದರು. ಇದೀಗ ಧೋನಿಗೆ ಬ್ಯಾಡ್ಮಿಂಟನ್​ ಕ್ರೀಡೆಯ ಮೇಲೆ ಒಲವು ಹುಟ್ಟಿಕೊಂಡಂತಿದೆ. ಹೌದು, ಧೋನಿ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವೊಂದು ವೈರಲ್​ ಆಗಿದೆ.

ಧೋನಿ ತಮ್ಮ ಸ್ನೇಹಿತರ ಜತೆ ಬ್ಯಾಡ್ಮಿಂಟನ್​ ಆಡುತ್ತಿರುವ ವಿಡಿಯೊವನ್ನು ಜಾನ್ಸ್ ಎನ್ನುವ ನೆಟ್ಟಿಗರೊಬ್ಬರು ತಮ್ಮ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಎಲ್ಲೋ ಟಿ-ಶರ್ಟ್​ ಧರಿಸಿ ಧೋನಿ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ನೋಡಬಹುದಾಗಿದೆ. ಅದರಲ್ಲೂ ಧೋನಿಯ ರಾಕೆಟ್​ ವೇಗದ ಜಂಪಿಂಗ್ ಸ್ಮ್ಯಾಶ್​(jump smash) ಕಂಡು ಅಭಿಮಾನಿಗಳು ದಂಗಾಗಿದ್ದಾರೆ. ಸದ್ಯ ಈ ವಿಡಿಯೊ ವೈರಲ್​ ಆಗಿದೆ.

43 ವರ್ಷದಲ್ಲಿಯೂ ಧೋನಿಯ ಈ ಫಿಟ್​ನೆಸ್​ ನೋಡುವಾಗ ಅವರು ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ ಆಡುವುದು ಖಚಿತ ಎನ್ನುವಂತಿದೆ. ಇದೇ ವರ್ಷ ಐಪಿಎಲ್​ ಆರಂಭಕ್ಕೂ ಮುನ್ನ ಧೋನಿ ದುಬೈನಲ್ಲಿ ಟೆನಿಸ್​ ಆಡಿದ್ದ ವಿಡಿಯೊ ವೈರಲ್​ ಆಗಿತ್ತು. ಧೋನಿ ಜತೆ ಪಂತ್​ ಕೂಡ ಕಾಣಿಸಿಕೊಂಡಿದ್ದರು.

ವರದಿಯೊಂದರ ಪ್ರಕಾರ ಬಿಸಿಸಿಐ(BCCI) ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆಟಗಾರರನ್ನು ಅನ್‌ಕ್ಯಾಪ್ಡ್ ವಿಭಾಗದಲ್ಲಿ ಇರಿಸುವ ನಿಯಮವನ್ನು ಮರಳಿ ತರಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಧೋನಿ ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

ಅನ್‌ಕ್ಯಾಪ್ಡ್ ಆಟಗಾರನಿಗೆ ಫ್ರಾಂಚೈಸಿ ಕೇವಲ 4 ಕೋಟಿ ರೂ. ನೀಡಲಿದೆ. ಈ ನಿಯಮ ಜಾರಿಗೆ ಬಂದರೆ ಧೋನಿ ಇದೇ ಮೊತ್ತದಲ್ಲಿ ಚೆನ್ನೈಗಾಗಿ ಆಡುವುದನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ. ಇದೇ ಮೊತ್ತಕ್ಕೆ ಚೆನ್ನೈ ತಂಡ ಧೋನಿಯನ್ನು ಮತ್ತೆ ರೀಟೈನ್​ ಮಾಡಿಕೊಳ್ಳಬಹುದು.  ಧೋನಿ(MS Dhoni) ಅವರು ಕಳೆದ ವರ್ಷವೇ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಒಂದು ವರ್ಷದ ಮಟ್ಟಿಗೆ ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿ ಎಂದೇ ಹೇಳಲಾಗಿತ್ತು. ಆದ್ಯಾಗೂ ಧೋನಿ ತಮ್ಮ ನಿವೃತ್ತಿ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಪ್ರಕಟಿಸಿಲ್ಲ.

ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕೆ

ರಿಷಭ್​ ಪಂತ್​ ಡೆಲ್ಲಿ ತಂಡದ ಪರ ರಿಟೈನ್ ಆಸಕ್ತಿ ಹೊಂದಿಲ್ಲ ಅವರು ಚೆನ್ನೈ ತಂಡ ಸೇರಲಿದ್ದಾರೆ ಎಂದು ಈಗಾಗಲೇ ವರದಿಯಾಗಿದೆ. ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿರುವ ಕಾರಣ ಪಂತ್​ ಅವರನ್ನು ಚೆನ್ನೈ ತಂಡಕ್ಕೆ ಸೇರಿಸಿಕೊಂಡು ಕೀಪಿಂಗ್​ ಹೊಣೆ ಅವರಿಗೆ ನೀಡುವ ಮೂಲಕ ಧೋನಿ ಇಂಪ್ಯಾಕ್ಟ್​ ಆಟಗಾರನಾಗಿ ಆಡುವುದು ಸದ್ಯ ಫ್ರಾಂಚೈಸಿ ಮತ್ತು ಧೋನಿಯ ಯೋಜನೆಯಾಗಿದೆ. ಕಳೆದ ಆವೃತ್ತಿಯಲ್ಲಿ ಧೋನಿ ತಂಡದಲ್ಲಿ ಸೂಕ್ತ ವಿಕೆಟ್​ ಕೀಪರ್​ ಇಲ್ಲದ ಕಾರಣ ತಮ್ಮ ಕಾಲು ನೋವಿನ ಮಧ್ಯೆಯೂ ಸಂಪೂರ್ಣವಾಗಿ ಕೀಪಿಂಗ್​ ನಡೆಸಿದ್ದರು. 

Continue Reading

ಕ್ರೀಡೆ

Virender Sehwag: ಧೋನಿಯನ್ನು ಬ್ಯಾನ್​ ಮಾಡಬೇಕಿತ್ತು ಎಂದ ಟೀಮ್​ ಇಂಡಿಯಾ ಮಾಜಿ ಆಟಗಾರ

Virender Sehwag: 2019ರಲ್ಲಿ(IPL 2019) ನಡೆದಿದ್ದ ಐಪಿಎಲ್(IPL 2024)​ ಪಂದ್ಯವೊಂದರಲ್ಲಿ ಧೋನಿ ಆ್ಯಂಗ್ರಿಮ್ಯಾನ್‌ಆಗಿ ಬದಲಾಗಿದ್ದರು. ಜತೆಗೆ ದಂಡದ ಶಿಕ್ಷೆಗೂ ಗುರಿಯಾಗಿದ್ದರು.

VISTARANEWS.COM


on

Virender Sehwag
Koo

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರನ್ನು ಐಪಿಎಲ್​ನಿಂದ ಬ್ಯಾನ್​ ಮಾಡಬೇಕಿತ್ತು ಎಂದು ಮಾಜಿ ಆಟಗಾರ ವಿರೇಂದ್ರ ಸೆಹವಾಗ್​ ಹೇಳಿದ್ದಾರೆ. ಹಿಂದೊಮ್ಮೆ ಧೋನಿ(MS Dhoni) ಐಪಿಎಲ್​ ವೇಳೆ ನೇರವಾಗಿ ಮೈದಾನಕ್ಕೆ ನುಗ್ಗಿ ಅಂಪೈರ್ ತೀರ್ಪಿನ ಬಗ್ಗೆ​ ವಾಗ್ವಾದ ನಡೆಸಿದ್ದರು. ಈ ಘಟನೆ ಭಾರೀ ಸದ್ದು ಮಾಡಿತ್ತು. ಇದೇ ವಿಚಾರವಾಗಿ ಸೆಹವಾಗ್(Virender Sehwag)​ ಧೋನಿಯನ್ನು ಅಂದು ಮೂರು ಪಂದ್ಯಗಳಿಂದ ಬ್ಯಾನ್​ ಮಾಡಬೇಕಿತ್ತು(MS Dhoni banned from IPL) ಎಂದು ಹೇಳಿದ್ದಾರೆ.

2019ರಲ್ಲಿ(IPL 2019) ನಡೆದಿದ್ದ ಐಪಿಎಲ್(IPL 2024)​ ಪಂದ್ಯವೊಂದರಲ್ಲಿ ಧೋನಿ ಆ್ಯಂಗ್ರಿಮ್ಯಾನ್‌ಆಗಿ ಬದಲಾಗಿದ್ದರು. ಜತೆಗೆ ದಂಡದ ಶಿಕ್ಷೆಗೂ ಗುರಿಯಾಗಿದ್ದರು. 12ನೇ ಆವೃತ್ತಿಯ ಐಪಿಎಲ್​ನಲ್ಲಿ ಧೋನಿ ಅವರ ಪಿತ್ತ ನೆತ್ತಿಗೇರಿದ ಘಟನೆ ಸಂಭವಿಸಿತ್ತು. ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ(RR Vs CSK) ವಿರುದ್ಧ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಕೊನೆಯ ಎಸೆತದಲ್ಲಿ ಜಯ ಸಾಧಿಸಿ ಸಂಭ್ರಮಿಸಿತು. ಇದೇ ವೇಳೆ ಕ್ಯಾಪ್ಟನ್‌ ಕೂಲ್‌ ಭಾರೀ ಚರ್ಚೆಗೆ ಗುರಿಯಾದ್ದರು.

ಬೆನ್‌ ಸ್ಟೋಕ್ಸ್‌ ಎಸೆದ ಅಂತಿಮ ಓವರ್‌ನಲ್ಲಿ ಚೆನ್ನೈಗೆ 18 ರನ್‌ ಬೇಕಿತ್ತು. ಸ್ಟೋಕ್ಸ್‌ ಅವರ 4ನೇ ಎಸೆತ ನೋ ಬಾಲ್‌ ಆಗಿತ್ತು. ಪಂಪೈರ್​ ಉಲ್ಲಾಸ್‌ ಗಾಂದೆ ನೋಬಾಲ್‌ ನೀಡಿದ್ದರು. ಆದರೆ ಲೆಗ್‌ ಅಂಪಾಯರ್‌ ನೋಬಾಲ್‌ ನೀಡಿರಲಿಲ್ಲ. ಈ ಸನ್ನಿವೇಶ ಎಲ್ಲರನ್ನೂ ಗೊಂದಲಕ್ಕೀಡು ಮಾಡಿತ್ತು. ಈ ಎಸೆತದಲ್ಲಿ ಚೆನ್ನೈಆಟಗಾರರು 2 ರನ್‌ ಕಸಿದಿದ್ದರು. ಜಡೇಜ ಈ ಕುರಿತು ಅಂಪಾಯರ್‌ಗಳನ್ನು ಪ್ರಶ್ನಿಸಿದ್ದರೂ ಯಾವುದೇ ಧನಾತ್ಮಕ ಉತ್ತರ ದೊರೆಯಲಿಲ್ಲ. ಆಗ ಬೌಂಡರಿ ಗೆರೆ ಬಳಿ ನಿಂತು ಪಂದ್ಯ ವೀಕ್ಷಿಸುತ್ತಿದ್ದ ಧೋನಿ ಮೈದಾನಕ್ಕೆ ಓಡೋಡಿ ಬಂದು ಅಂಪಾಯರ್‌ಗಳ ಜತೆ ವಾಗ್ವಾದಕ್ಕಿಳಿದರು.

ಇದನ್ನೂ ಓದಿ Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

ಆದರೆ, ಧೋನಿ ಮಾತನ್ನು ಯಾರೂ ಒಪ್ಪಲಿಲ್ಲ. ಥರ್ಡ್‌ ಅಂಪಾಯರ್‌ ಕೂಡ ಮನವಿ ನಿರಾಕರಿಸಿದ್ದರು. ಧೋನಿ ಈ ಹಿಂದೆ ಒಮ್ಮೆಯೂ ಕೂಡ ಮೈದಾನದಲ್ಲಿ ಇಷ್ಟೊಂದು ತಾಳ್ಮೆ ಕಳೆದುಕೊಂಡಿದನ್ನು ಯಾರು ಕೂಡ ನೋಡಿರಲಿಲ್ಲ. ಅಂದು ಧೋನಿಯನ್ನು ಕಂಡ ಅವರ ಅಭಿಮಾನಿಗಳು ಒಂದು ಕ್ಷಣ ದಂಗಾಗಿದ್ದರು. ಧೋನಿಯ ಈ ಅತಿರೇಕದ ವರ್ತನೆಗೆ ಪಂದ್ಯ ಶುಲ್ಕದ ಶೇಕಡಾ 50ರಷ್ಟು ದಂಡ ವಿಧಿಸಲಾಗಿತ್ತು.

ಕ್ರಿಕ್​ಬಜ್​ಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಸೆಹ್ವಾಗ್, ಅಂದು ಧೋನಿಯ ನಡೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಇದರಿಂದ ಅವರು ಸುಲಭವಾಗಿ ತಪ್ಪಿಸಿಕೊಂಡರು. ನನ್ನ ಪ್ರಕಾರ ಧೋನಿಯನ್ನು ಕನಿಷ್ಠ ಎರಡು ಮೂರು ಪಂದ್ಯಗಳಿಂದ ಬ್ಯಾನ್ ಮಾಡಬೇಕಿತ್ತು. ಏಕೆಂದರೆ ಧೋನಿ ಮಾಡಿರುವುದನ್ನು, ನಾಳೆ ಇನ್ನೊಬ್ಬ ನಾಯಕನೂ ಮಾಡಬಹುದು ಎಂದು ಸೆಹವಾಗ್​ ಹೇಳಿದ್ದಾರೆ.

Continue Reading
Advertisement
Actor darshan
ಸ್ಯಾಂಡಲ್ ವುಡ್5 mins ago

Actor Darshan : ಕೊಲೆ ಕೇಸ್‌ನಲ್ಲಿ ದರ್ಶನ್‌ ಮೂಲಕವೇ ಪವಿತ್ರಾಗೌಡ ಲಾಕ್‌; ಜತೆಗೆ ಇದ್ದ ಹುಡುಗರನ್ನು ನಂಬಿ ಕೆಟ್ಟೆ ಎಂದ ನಟ!

Western Ghats
ಕರ್ನಾಟಕ29 mins ago

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Israel vs Hezbollah War
ವಿದೇಶ47 mins ago

Israel vs Hezbollah War: ಹೆಜ್ಬುಲ್ಲಾ ಉಗ್ರರ ಅಟ್ಟಹಾಸ; ಲೆಬನಾನ್‌ ಮೇಲೆ ರಾಕೆಟ್​ ದಾಳಿ ಆರಂಭಿಸಿದ ಇಸ್ರೇಲ್​; ಭಯಾನಕ ವಿಡಿಯೊ ಇಲ್ಲಿದೆ

Dhanya Ramkumar-Vicky Varun starrer Kaalapathar to release on September 13
ಸಿನಿಮಾ1 hour ago

Dhanya Ramkumar: ತೆರೆಗೆ ಸಿದ್ಧವಾಯ್ತು ಕಾಲಾಪತ್ಥರ್‌; ಸೆ.13ಕ್ಕೆ ಧನ್ಯಾ ರಾಮ್‌ಕುಮಾರ್- ವಿಕ್ಕಿ ವರುಣ್‌ ನಟನೆ ಮೋಡಿ

Karkala Shocker
ಕರ್ನಾಟಕ1 hour ago

Karkala Shocker: ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿದ ಅಲ್ತಾಫ್‌ಗೆ ಕಠಿಣ ಶಿಕ್ಷೆಯಾಗಲಿ ಎಂದ ಮುಸ್ಲಿಂ ಒಕ್ಕೂಟ

Pavel Durov Arrest
ವಿದೇಶ1 hour ago

Pavel Durov Arrest: ಟೆಲಿಗ್ರಾಂ ಸಿಇಒ ಪಾವೆಲ್‌‌ ಫ್ರಾನ್ಸ್‌‌ನಲ್ಲಿ ಬಂಧನ; ಕಾರಣ ಏನು?

CBI Raid
ದೇಶ2 hours ago

CBI Raid: ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಸಿಬಿಐ ದಾಳಿ

Israel strike
ವಿದೇಶ2 hours ago

Israel strike: ರಾಕೆಟ್ ದಾಳಿ; ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Rohit Sharma
ಕ್ರೀಡೆ3 hours ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ3 hours ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ21 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌