Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​ - Vistara News

ಕ್ರಿಕೆಟ್

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Virat Kohli: ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಭಾನುವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ನ ಹಗಲು ಪಂದ್ಯದಲ್ಲಿ ಬೊಂಬಾಟ್​ ಬ್ಯಾಟಿಂಗ್​ ನಡೆಸಿ ಅಜೇಯ ಅರ್ಧಶತಕ ಬಾರಿಸಿದ ಆರ್​ಸಿಬಿ(Royal Challengers Bengaluru) ಆಟಗಾರ ವಿರಾಟ್​ ಕೊಹ್ಲಿ(Virat Kohli) ಹಲವು ದಾಖಲೆಗಳನ್ನು ಬರೆದಿದ್ದಾರೆ. ಜತೆಗೆ ತಮ್ಮ ಬ್ಯಾಟಿಂಗ್​ ಬಗ್ಗೆ ಟೀಕೆ ಮಾಡಿದ ಎಲ್ಲರಿಗೂ ತೀಕ್ಷವಾದ ಮಾತುಗಳಿಂದ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ.

ವಿರಾಟ್​ ಕೊಹ್ಲಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ ಕಲೆ ಹಾಕಿದರೂ ಕೂಡ ಅವರ ಬ್ಯಾಟಿಂಗ್​ ನಿಧಾನಗತಿಯಿಂದ ಕೂಡಿತ್ತು. ಇದೇ ಕಾರಣಕ್ಕೆ ಸುನೀಲ್​ ಗಾವಾಸ್ಕರ್​, ಆಕಾಶ್​ ಚೋಫ್ರಾ ಸೇರಿ ಅನೇಕ ಮಾಜಿ ಆಟಗಾರರು ಕೊಹ್ಲಿಯನ್ನು ಟೀಕಿಸಿದ್ದರು. ಕೊಹ್ಲಿಯ ಈ ಆಮೆಗತಿಯ ಬ್ಯಾಟಿಂಗ್​ನಿಂದಾಗಿಯೇ ಆರ್​ಸಿಬಿ ಸೋಲು ಕಾಣುತ್ತಿದೆ ಎಂದು ಹೇಳಿದ್ದರು.

ಕಳೆದ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸ್ಪಿನ್ನ್​ ಬೌಲಿಂಗ್​ ದಾಳಿ ಎದುರಿಸಲು ಸಂಪೂರ್ಣವಾಗಿ ಪರದಾಟ ನಡೆಸಿದ್ದರು. ಹೀಗಾಗಿ ಸ್ಪಿನ್​ ಬೌಲಿಂಗ್​ಗೆ ಕೊಹ್ಲಿಗೆ ಆಡಲು ಬರುವುದಿಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬಂದಿತ್ತು. ಇಂದಿನ ಪಂದ್ಯದಲ್ಲಿ ಬೊಂಬಾಟ್​ ಬ್ಯಾಟಿಂಗ್​ ನಡೆಸಿದ ಕೊಹ್ಲಿ ಕೇವಲ 32 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿ ಒಟ್ಟು 44 ಎಸೆತಗಳಿಂದ ಅಜೇಯ 70 ರನ್​ ಬಾರಿಸಿ ಮಿಂಚಿದರು. ಪಂದ್ಯದ ಮುಕ್ತಾಯದ ಬಳಿಕ ಮಾತನಾಡುವ ವೇಳೆ ತನ್ನ ವಿರುದ್ಧ ಯಾರೆಲ್ಲ ಟೀಕೆ ಮಾಡಿದ್ದಾರೋ ಅವರಿಗೆಲ್ಲ ಮುಟ್ಟಿ ನೋಡುವಂತೆ ತಕ್ಕ ಉತ್ತರ ನೀಡಿದ್ದಾರೆ.

ದಾಖಲೆ ಬರೆದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ. ಗುಜರಾತ್​ ವಿರುದ್ಧ ಕೊಹ್ಲಿ ಬಾರಿಸಿದ ಮೂರನೇ ಅರ್ಧಶತಕ ಇದಾಗಿದೆ. ಒಂದು ಶತಕ ಕೂಡ ಒಳಗೊಂಡಿದೆ.

ಇದನ್ನೂ ಓದಿ IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

ಪಂದ್ಯ ಗೆದ್ದ ಆರ್​ಸಿಬಿ


ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಈ ಮೂಲಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಪೂರ್ತಿಗೊಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

IPL 2024: ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಕ್ಕೆ (IPL 2024) ಇಂಗ್ಲೆಂಡ್ ಕ್ರಿಕೆಟಿಗರು ವಿದಾಯ ಹೇಳಲು ಪ್ರಾರಂಭಿಸಿದ್ದಾರೆ. ಮೇ 22ರಿಂದ ಆರಂಭವಾಗಲಿರುವ 4 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್​ ತಂಡ ಪಾಕಿಸ್ತಾನ ವಿರುದ್ಧ ಸೆಣಸಲಿದೆ. ಈ ವರ್ಷದ ಕೊನೆಯಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ತಯಾರಿ ನಡೆಸಲು ಇಂಗ್ಲಿಷ್ ಕ್ರಿಕೆಟಿಗರು ಐಪಿಎಲ್ ಅನ್ನು ಬೇಗನೆ ತೊರೆಯುತ್ತಾರೆ ಎಂದು ಈ ಹಿಂದೆ ತಿಳಿದುಬಂದಿತ್ತು. ಇದೀಗ ಅವರೆಲ್ಲರೂ ಹೊರಟಿದ್ದಾರೆ.

ಜೋಸ್ ಬಟ್ಲರ್ ಈಗಾಗಲೇ ರಾಜಸ್ಥಾನ್​​ ತಂಡ ತೊರೆದಿದ್ದಾರೆ. ಈ ಬೆಳವಣಿಗೆಯ 2008 ರ ಚಾಂಪಿಯನ್ಸ್​ ತಂಡಕ್ಕೆ ದೊಡ್ಡ ಹೊಡೆತವಾಗಿದೆ. ರಾಜಸ್ಥಾನ್ ರಾಯಲ್ಸ್ ಪರ ಆಡಿರುವ ಬಟ್ಲರ್ 39.88ರ ಸರಾಸರಿಯಲ್ಲಿ 359 ರನ್ ಗಳಿಸಿದ್ದಾರೆ. ಅವರ ಒಂದು ಶತಕವು ಐಪಿಎಲ್ ಇತಿಹಾಸದಲ್ಲಿ ಜಂಟಿಯಾಗಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ದಾಖಲಿಸಲು ರಾಯಲ್ಸ್​ಗೆ ಸಹಾಯ ಮಾಡಿದೆ.

ರಾಯಲ್ಸ್ ‘ಎಕ್ಸ್’ ನಲ್ಲಿ ಒಂದು ಪೋಸ್ಟ್ ಮಾಡಿದ್ದು, ಅದರಲ್ಲಿ ಬಟ್ಲರ್ ತಂಡವನ್ನು ತೊರೆಯುತ್ತಿರುವುದು ಕಂಡುಬಂದಿದೆ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ, ಜೋಸ್ ಭಾಯ್!” ಎಂದು ಬರೆಯಲಾಗಿದೆ. ಬಟ್ಲರ್ ಅನುಪಸ್ಥಿತಿಯಲ್ಲಿ, ರಾಜಸ್ಥಾನ್ ತಂಡವು ​ 190 ಟಿ 20 ಪಂದ್ಯಗಳಲ್ಲಿ 1 ಶತಕ ಮತ್ತು 34 ಅರ್ಧಶತಕಗಳೊಂದಿಗೆ 4734 ರನ್ ಗಳಿಸಿರುವ ಟಾಮ್ ಕೊಹ್ಲರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಿದೆ.

ರಾಯಲ್ಸ್ ಇನ್ನೂ ಪ್ಲೇಆಫ್​ನಲ್ಲಿ ತನ್ನ ಸ್ಥಾನ ಕಾಯ್ದಿರಿಸಿಲ್ಲ. ಸಂಜು ಸ್ಯಾಮ್ಸನ್ ಪಡೆ ಆಡಿರುವ ಮೊದಲ 9 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಸಾಧಿಸಿದ್ದು, 3 ಪಂದ್ಯಗಳಲ್ಲಿ ಸೋತಿದೆ.

ಆರ್​ಸಿಬಿ ತೊರೆದ ಜಾಕ್ಸ್, ಟಾಪ್ಲೆ


ಆಟಗಾರರು ಬಿಟ್ಟು ಹೋಗುತ್ತಿರುವ ಮತ್ತೊಂದು ತಂಡ ಆರ್​ಸಿಬಿ. ಇಲ್ಲಿನ ಇಬ್ಬರು ಇಂಗ್ಲಿಷ್ ತಾರೆಯರು ಹೊರಗುಳಿದಿದ್ದಾರೆ. 12 ಅಂಕಗಳು ಮತ್ತು +0.387 ನೆಟ್ ರನ್ ರೇಟ್​ನೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಚಾಲೆಂಜರ್ಸ್ ಪ್ಲೇ ಆಫ್​ಗೆ ಪ್ರವೇಶಿಸಲು ಬಹಳ ದೂರವಿಲ್ಲ.

ಇದನ್ನೂ ಓದಿ: IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಋತುರಾಜ್ ಗಾಯಕ್ವಾಡ್ ಅವರ ಸಿಎಸ್​ಕೆ ವಿರುದ್ಧದ ಕೊನೆಯ ಲೀಗ್ ಪಂದ್ಯಕ್ಕೆ ವಿಲ್ ಜಾಕ್ಸ್ ಮತ್ತು ರೀಸ್ ಟಾಪ್ಲೆ ಅವರ ಸೇವೆ ಲಭ್ಯವಿರುವುದಿಲ್ಲ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್​ಸಿಬಿ ಸತತ 5 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ.

ಲಿಯಾಮ್ ಲಿವಿಂಗ್​ಸ್ಟನ್​ ಕೂಡ ನಿರ್ಗಮಿಸಿದ್ದಾರೆ. ಆದರೂ ಪಿಬಿಕೆಎಸ್ ಈಗಾಗಲೇ ಸ್ಪರ್ಧೆಯಿಂದ ಹೊರಗುಳಿದಿರುವುದರಿಂದ ಇದು ಯಾವುದೇ ವ್ಯತ್ಯಾಸವನ್ನುಂಟು ಮಾಡುವುದಿಲ್ಲ.

Continue Reading

ಪ್ರಮುಖ ಸುದ್ದಿ

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

IPL 2024: ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

VISTARANEWS.COM


on

IPL 2024
Koo

ಅಹಮದಾಬಾದ್​​: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜನೆಗೊಂಡಿದ್ದ ಗುಜರಾತ್​ ಜೈಂಟ್ಸ್​ ಮತ್ತು ಕೋಲ್ಕೊತಾ ನೈಟ್​ ರೈಡರ್ಸ್​ ನಡುವಿನ ಪಂದ್ಯ ರದ್ದಾಗಿದೆ. ಇದು ಹಾಲಿ ಆವೃತ್ತಿಯಲ್ಲಿ ಮಳೆಯಿಂದ ರದ್ದಾಗಿರುವ ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಈ ಫಲಿತಾಂಶದಿಂದಾಗಿ ಜಿಟಿ ತಂಡದ ಪ್ಲೇಆಫ್​ ಅವಕಾಶ ಅಂತ್ಯವಾಯಿತು. ಇದೇ ವೇಳೆ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್ ಅಗ್ರ 2 ರಲ್ಲಿ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಪಂದ್ಯವು ಟಾಸ್​ ಸೇರಿದಂತೆ ಒಂದೇ ಒಂದು ಎಸೆತ ಕಾಣದೇ ರದ್ದಾಯಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಎಂಐ ಮತ್ತು ಪಿಬಿಕೆಎಸ್ ನಂತರ ಟೈಟಾನ್ಸ್ ಸ್ಪರ್ಧೆಯಿಂದ ಹೊರಗುಳಿದ ಮೂರನೇ ತಂಡವಾಗಿದೆ. ಏತನ್ಮಧ್ಯೆ, ನೈಟ್ಸ್ 13 ಪಂದ್ಯಗಳಲ್ಲಿ 9 ರಲ್ಲಿ ಗೆಲುವು ಸಾಧಿಸಿ 19 ಅಂಕಗಳೊಂದಿಗೆ +1.428 ನೆಟ್ ರನ್ ರೇಟ್​ನೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ. 2012 ಮತ್ತು 2014ರಲ್ಲಿ ಕೆಕೆಆರ್ ಅಗ್ರ 2ರಲ್ಲಿ ಸ್ಥಾನ ಪಡೆದಿತ್ತು. ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ಮೇ 19 ರ ಭಾನುವಾರ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ರಾಯಲ್ಸ್ ತಂಡವನ್ನು ಸೋಲಿಸಿದರೆ ಈ ಬಾರಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಗೌತಮ್ ಗಂಭೀರ್ ಕೆಕೆಆರ್​​ಗೆ ಮರಳಿದ ಕಾರಣ ತಂಡಕ್ಕೆ ಭಾರೀ ಅನುಕೂಲಗಳು ಆಗಿವೆ.

ಗುಜರಾತ್​ಗೆ ನಿರಾಶಾದಾಯಕ ಅಭಿಯಾನ

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

ಇದನ್ನೂ ಓದಿ: IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣ

ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೇ 16 ರಂದು ನಡೆಯಲಿರುವ ಪಂದ್ಯದಲ್ಲಿ ಶುಭ್ಮನ್ ಗಿಲ್ ಪಡೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. 2022ರಲ್ಲಿ, ಜಿಟಿ ತಮ್ಮ ಮೊದಲ ಪ್ರವೇಶದಲ್ಲಿ ಪ್ರಶಸ್ತಿ ಗೆದ್ದಿತ್ತು. 2023ರಲ್ಲಿ ಸಿಎಸ್​ಕೆ ತಂಡವನ್ನು ಮಣಿಸುವಲ್ಲಿ ವಿಫಲವಾದ ಬಳಿಕ ರನ್ನರ್ ಅಪ್ ಸ್ಥಾನ ಪಡೆದಿತ್ತು. ಆದರೆ ಈ ಋತುವಿನಲ್ಲಿ ಗಿಲ್ ಒತ್ತಡದ ನಡುವೆ ನಾಯಕತ್ವ ಹಾಗೂ ಬ್ಯಾಟಿಂಗ್​ನಲ್ಲಿ ವೈಫಲ್ಯ ಕಂಡಿದ್ದರು.

Continue Reading

ಕ್ರೀಡೆ

Muhammad Waseem : ಇತಿಹಾಸ ಸೃಷ್ಟಿಸಿದ ಯುಎಇ ಕ್ರಿಕೆಟ್​ ತಂಡದ ನಾಯಕ ವಸೀಮ್​

Muhammad Waseem : ಒಮಾನ್​​ನಲ್ಲಿ ನಡೆದ ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯ ಯಶಸ್ಸಿನಲ್ಲಿ ವಸೀಮ್ ಪ್ರಮುಖ ಪಾತ್ರ ವಹಿಸಿದ್ದರು. ಕುವೈತ್ ವಿರುದ್ಧ ಡಕ್ ಔಟ್ ನೊಂದಿಗೆ ಅಭಿಯಾನ ಆರಂಭಿಸಿದ ವಸೀಮ್, ಬಹ್ರೇನ್ ವಿರುದ್ಧ 65 ರನ್ ಗಳಿಸಿ ಪುಟಿದೆದ್ದರು. ನಂತರ ಅವರು ಒಮಾನ್ ಮತ್ತು ಕಾಂಬೋಡಿಯಾ ವಿರುದ್ಧ ಕ್ರಮವಾಗಿ 45 ಮತ್ತು 48 ರನ್ ಗಳಿಸಿದ್ದರು.

VISTARANEWS.COM


on

Muhammad Waseem
Koo

ಬೆಂಗಳೂರು: ಯುಎಇ ನಾಯಕ ಮುಹಮ್ಮದ್ ವಸೀಮ್ (Muhammad Waseem) ಪ್ರತಿಷ್ಠಿತ ಐಸಿಸಿ ಪುರುಷರ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ ತಮ್ಮ ದೇಶದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಪ್ರಿಲ್ ನಲ್ಲಿ ಬ್ಯಾಟ್ ನೊಂದಿಗೆ ಸಮೃದ್ಧ ಓಟವನ್ನು ಆನಂದಿಸಿದ ನಂತರ ಅವರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಸೀಮ್ ಅವರಲ್ಲದೆ, ಪಾಕಿಸ್ತಾನದ ಸ್ಟಾರ್ ಆಟಗಾರ ಶಾಹೀನ್ ಅಫ್ರಿದಿ ಮತ್ತು ನಮೀಬಿಯಾದ ಗೆರ್ಹಾರ್ಡ್ ಎರಾಸ್ಮಸ್ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅವರಿಬ್ಬರನ್ನು ವಸೀಮ್ ಸೋಲಿಸಿ ತನ್ನ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪಡೆದರು.

ಒಮಾನ್​​ನಲ್ಲಿ ನಡೆದ ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯ ಯಶಸ್ಸಿನಲ್ಲಿ ವಸೀಮ್ ಪ್ರಮುಖ ಪಾತ್ರ ವಹಿಸಿದ್ದರು. ಕುವೈತ್ ವಿರುದ್ಧ ಡಕ್ ಔಟ್ ನೊಂದಿಗೆ ಅಭಿಯಾನ ಆರಂಭಿಸಿದ ವಸೀಮ್, ಬಹ್ರೇನ್ ವಿರುದ್ಧ 65 ರನ್ ಗಳಿಸಿ ಪುಟಿದೆದ್ದರು. ನಂತರ ಅವರು ಒಮಾನ್ ಮತ್ತು ಕಾಂಬೋಡಿಯಾ ವಿರುದ್ಧ ಕ್ರಮವಾಗಿ 45 ಮತ್ತು 48 ರನ್ ಗಳಿಸಿದ್ದರು.

ಬಲಗೈ ಬ್ಯಾಟರ್​ ನೇಪಾಳ ವಿರುದ್ಧ ಆಡಲು ವಿಫಲರಾದರು ಮತ್ತು ಒಮಾನ್ ವಿರುದ್ಧದ ಫೈನಲ್​ನಲ್ಲಿ ಪಂದ್ಯ ವಿಜೇತ ಶತಕವನ್ನು ಹೊಡೆದಿದ್ದರು. ವಸೀಮ್ 44.83ರ ಸರಾಸರಿಯಲ್ಲಿ 269 ರನ್ ಗಳಿಸಿದ್ದರು. ಪಂದ್ಯಾವಳಿಯಲ್ಲಿ ಅವರ ಉತ್ತಮ ಓಟಕ್ಕೆ ಈಗ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ನೀಡಲಾಗಿದೆ.

ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯನ್ನು ಗೆದ್ದ ಬಗ್ಗೆ ಸಂತಸ ವ್ಯಕ್ತಪಡಿಸಿದ ಮುಹಮ್ಮದ್ ವಸೀಮ್, ಇದು ಉದಯೋನ್ಮುಖ ಕ್ರಿಕೆಟ್ ತಂಡಗಳ ಆಟಗಾರರಿಗೆ ದೊಡ್ಡ ಪ್ರೇರಣೆಯಾಗಲಿದೆ ಎಂದು ಹೇಳಿದರು. ಏಷ್ಯಾ ಕಪ್​​ನಲ್ಲಿ ಮುಂದಿನ ಆವೃತ್ತಿಯ ಮೇಲೆ ಕಣ್ಣಿಟ್ಟಿರುವ ಅವರು ಎಸಿಸಿ ಪ್ರೀಮಿಯರ್ ಕಪ್​ನಲ್ಲಿ ಯುಎಇಯನ್ನು ಮುಂಚೂಣಿಯಿಂದ ಮುನ್ನಡೆಸಲು ಸಾಧ್ಯವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ರೋಮಾಂಚನ ಎಂದ ವಸೀಮ್​

ಐಸಿಸಿ ತಿಂಗಳ ಪುರುಷ ಆಟಗಾರ ಪ್ರಶಸ್ತಿಯನ್ನು ಗೆದ್ದಿರುವುದು ದೊಡ್ಡ ಗೌರವವಾಗಿದೆ. ವಿಶ್ವದಾದ್ಯಂತದ ಪ್ರಶಸ್ತಿ ವಿಜೇತರ ವಿಶಿಷ್ಟ ಪಟ್ಟಿಗೆ ಸೇರಲು ನಾನು ರೋಮಾಂಚನಗೊಂಡಿದ್ದೇನೆ ಎಂದು ವಸೀಮ್ ಹೇಳಿದರು.

ಈ ಪ್ರಶಸ್ತಿಯು ಆಟಗಾರರಿಗೆ ವಿಶೇಷವಾಗಿ ಯುಎಇಯಂತಹ ಉದಯೋನ್ಮುಖ ಕ್ರಿಕೆಟ್ ತಂಡಗಳ ಆಟಗಾರರಿಗೆ ದೊಡ್ಡ ಪ್ರೇರಣೆ. ನಮ್ಮ ಗುರಿ ಮುಂದಿನ ವರ್ಷದ ಏಷ್ಯಾ ಕಪ್​​ಗೆ ಅರ್ಹತೆ ಪಡೆಯುವುದು ಮತ್ತು ನನ್ನ ತಂಡ ಮತ್ತು ಪಂದ್ಯಾವಳಿಯಲ್ಲಿ ಅವರ ಪ್ರದರ್ಶನದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ವೈಯಕ್ತಿಕ ಮಟ್ಟದಲ್ಲಿ, ವಿಶೇಷವಾಗಿ ಫೈನಲ್​ನಲ್ಲಿ ನಾನು ತಂಡವನ್ನು ಮುಂಚೂಣಿಯಿಂದ ಮುನ್ನಡೆಸಿದ್ದೇನೆ ಎಂದು ನನಗೆ ಸಂತೋಷವಾಗಿದೆ. ದೊಡ್ಡ ಪಂದ್ಯದಲ್ಲಿ ಶತಕ ಗಳಿಸುವುದು ನಿಜಕ್ಕೂ ವಿಶೇಷ ಕ್ಷಣವಾಗಿದೆ, ವಿಶೇಷವಾಗಿ ಅದು ತಂಡಕ್ಕೆ ಗೆಲುವಿಗೆ ಸಹಾಯ ಮಾಡಿದಾಗ. ಏಷ್ಯಾಕಪ್ಗಾಗಿ ನಮ್ಮ ಸಿದ್ಧತೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಮತ್ತು ಯುಎಇ ಕ್ರಿಕೆಟ್ನ ಈ ರೋಮಾಂಚಕಾರಿ ಸಮಯದಲ್ಲಿ ಬ್ಯಾಟ್ನೊಂದಿಗೆ ತಂಡಕ್ಕೆ ಉತ್ತಮ ಪ್ರದರ್ಶನ ನೀಡುವುದನ್ನು ಮುಂದುವರಿಸುವುದು ಮತ್ತು ಮಾದರಿಯಾಗಿ ಮುನ್ನಡೆಸುವುದು ನನ್ನ ಗುರಿಯಾಗಿದೆ, “ಎಂದು ಅವರು ಹೇಳಿದರು.

ಮಹಿಳಾ ವಿಭಾಗದಲ್ಲಿ ಹೇಲಿ ಮ್ಯಾಥ್ಯೂಸ್

ದಕ್ಷಿಣ ಆಫ್ರಿಕಾದ ನಾಯಕಿ ಲಾರಾ ವೊಲ್ವಾರ್ಡ್ ಮತ್ತು ಶ್ರೀಲಂಕಾದ ನಾಯಕಿ ಚಾಮರಿ ಅಟ್ಟಪಟ್ಟು ಅವರಿಂದ ಸ್ಪರ್ಧೆಯನ್ನು ಸೋಲಿಸಿದ ವೆಸ್ಟ್ ಇಂಡೀಸ್ ಸ್ಟಾರ್ ಹೇಲಿ ಮ್ಯಾಥ್ಯೂಸ್ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮ್ಯಾಥ್ಯೂಸ್ ಮೂರನೇ ಬಾರಿಗೆ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಪ್ರಶಸ್ತಿ ಗೆದ್ದಿರುವುದಕ್ಕೆ ನನಗೆ ನಿಜವಾಗಿಯೂ ಸಂತೋಷವಾಗಿದೆ. ಪ್ರದರ್ಶನಗಳು ತಂಡದ ಯಶಸ್ಸಿಗೆ ಕಾರಣವಾದವು ಮತ್ತು ನಾಯಕನಾಗಿ ಅದು ನನಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ ಎಂದು ಮ್ಯಾಥ್ಯೂಸ್ ಹೇಳಿದರು.

ಏಪ್ರಿಲ್​​ನಲ್ಲಿ ಮ್ಯಾಥ್ಯೂಸ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಮತ್ತು ಅನೇಕ ಏಕದಿನ ಪಂದ್ಯಗಳನ್ನು ಆಡಿದ್ದರು. ಏಕದಿನ ಪಂದ್ಯಗಳಲ್ಲಿ ಅವರು ಎರಡು ಶತಕಗಳ ಸಹಾಯದಿಂದ 325 ರನ್ ಗಳಿಸಿದ್ದಾರೆ ಮತ್ತು ಆರು ವಿಕೆಟ್​ಗಳನ್ನು ಪಡೆದಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಮ್ಯಾಥ್ಯೂಸ್ 126 ರನ್ ಹಾಗೂ 6 ವಿಕೆಟ್ ಕಬಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

IPL 2024 : ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2024 (IPL 2024) ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ದೆಹಲಿಗೆ ಪ್ರವಾಸ ಮಾಡಿದೆ. ಆದರೆ ಈ ತಂಡದ ಜತೆ ಕೆಎಲ್ ರಾಹುಲ್ (KL Rahul) ಇರಲಿಲ್ಲ. ಈ ಅನುಪಸ್ಥಿತಿ ಅನೇಕರನ್ನು ಆಶ್ಚರ್ಯಗೊಳಿಸಿದೆ. ಅವರು ನೇರವಾಗಿ ಪಂದ್ಯಕ್ಕೆ ತಂಡದ ಜತೆ ಸೇರಬಹುದು ಎಂಬ ಊಹಾಪೋಹಗಳಿವೆಯಾದರೂ, ನಾಯಕ ಸಾಮಾನ್ಯ ರೀತಿಯಲ್ಲಿ ಪ್ರಯಾಣಿಸಲಿಲ್ಲ ಎಂಬ ಅಂಶವು ಹುಬ್ಬೇರುವಂತೆ ಮಾಡಿದೆ. ಮಾಲೀಕ ಸಂಜೀವ್​ ಗೋಯೆಂಕಾ ಅವರ ಗಲಾಟೆಯಿಂದ ಬೇಸತ್ತಿರುವ ರಾಹುಲ್ ಸ್ವಂತ ಖರ್ಚಿನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಇದು ಅವರ ನಡುವಿನ ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು. ಇನ್ನೂ ಅನೇಕರು ತಂಡದಲ್ಲಿ ಅವರ ನಾಯಕತ್ವದ ಪಾತ್ರದ ಬಗ್ಗೆ ಚರ್ಚೆಗಳನ್ನು ನಡೆಸಿದ್ದರು. ಇದಕ್ಕೆಲ್ಲ ಕಾರಣ ಲಕ್ನೊ ನೀಡಿದ್ದ 166 ರನ್​ಗಳನ್ನು ಎಸ್​ಆರ್​ಎಚ್​ ತಂಡ 9.4 ಓವರ್​ಗಳಲ್ಲಿ ಬೆನ್ನಟ್ಟಿರುವುದು.

ಸ್ಪರ್ಧೆಯಲ್ಲಿ ಜೀವಂತವಾಗಿರಲು ಲಕ್ನೊ ತಂಡಕ್ಕೆ ಗೆಲುವು ಬೇಕಾಗಿದೆ. ಅವರು ಪ್ರಸ್ತುತ 12 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ ಮತ್ತು ಪ್ಲೇಆಫ್ಗೆ ಅವರ ಹಾದಿ ಸುಲಭವಲ್ಲ. ಈ ನಿರ್ಣಾಯಕ ಮುಖಾಮುಖಿಗೆ ಸಜ್ಜಾಗುತ್ತಿರುವಾಗ, ಎಲ್ಲರ ಕಣ್ಣುಗಳು ರಾಹುಲ್ ಮತ್ತು ಎಲ್ಎಸ್​ಜಿ ತಂಡದ ಮೇಲೆ ನೆಟ್ಟಿವೆ.

ರಾಹುಲ್ ಅವರ ಫಾರ್ಮ್ ಕೂಡ ಪರಿಶೀಲನೆಗೆ ಒಳಗಾಗಿದೆ. ವಿಶೇಷವಾಗಿ ಟಿ 20 ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ಅವರ ಆಟದ ವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ. ಐಪಿಎಲ್ 2024 ಋತುವಿನಾದ್ಯಂತ ಅವರ ಬ್ಯಾಟಿಂಗ್ ಪರಾಕ್ರಮವು ಶ್ಲಾಘನೀಯ. ವಿಕೆಟ್ ಕೀಪರ್-ಬ್ಯಾಟರ್​ 38.33 ಸರಾಸರಿಯಲ್ಲಿ 460 ರನ್ ಗಳಿಸಿದ್ದಾರೆ. 136.09 ಉತ್ತಮ ಉತ್ತಮ ರನ್​​ ರೇಟ್ ಹೊಂದಿದ್ದಾರೆ. ಅವರು ಶತಕ ಕಳೆದುಕೊಂಡಿದ್ದರೂ ರಾಹುಲ್ ಈ ಋತುವಿನಲ್ಲಿ ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

ಎಲ್ಎಸ್​ಜಿ ಫ್ರಾಂಚೈಸಿಯ ಬಗ್ಗೆ ಮಾತನಾಡುವುದಾದರೆ ಅವರು 2022 ರಿಂದ ಐಪಿಎಲ್ ಸರ್ಕ್ಯೂಟ್​​ಗೆ ಗಮನಾರ್ಹ ಸೇರ್ಪಡೆಯಾಗಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಆಡಿದ ಎರಡೂ ಋತುಗಳಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದಿದ್ದಾರೆ. ರಾಹುಲ್, ಕ್ವಿಂಟನ್ ಡಿ ಕಾಕ್, ಮಾರ್ಕ್ ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರ ಗಮನಾರ್ಹ ಸಹಿಗಳಲ್ಲಿ ಸೇರಿದ್ದಾರೆ. ನಂತರ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು, ಆಂಡಿ ಫ್ಲವರ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಗೌತಮ್ ಗಂಭೀರ್ ಅವರನ್ನು ತಂಡದ ಮಾರ್ಗದರ್ಶಕರಾಗಿ ನೇಮಿಸಲಾಯಿತು. 2022 ಮತ್ತು 2023 ರ ಋತುಗಳಲ್ಲಿ ಗುಂಪು ಹಂತದಲ್ಲಿ ಮೂರನೇ ಸ್ಥಾನದಲ್ಲಿದ್ದರೂ, ಅವರು ಪ್ಲೇಆಫ್ನಲ್ಲಿ ಹೊರಗುಳಿದರು.

Continue Reading
Advertisement
IPL 2024
ಪ್ರಮುಖ ಸುದ್ದಿ12 mins ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ30 mins ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ51 mins ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ51 mins ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ1 hour ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ1 hour ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ1 hour ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ2 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು3 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ5 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ6 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ6 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ7 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ7 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ13 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ18 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ19 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌