CWG- 2022 | ಭಾರತೀಯ ವನಿತೆಯರಿಗೆ ಆರಂಭದಲ್ಲೇ ಸೋಲಿನ ಕಹಿ - Vistara News

ಕ್ರಿಕೆಟ್

CWG- 2022 | ಭಾರತೀಯ ವನಿತೆಯರಿಗೆ ಆರಂಭದಲ್ಲೇ ಸೋಲಿನ ಕಹಿ

ಕಾಮನ್ವೆಲ್ತ್‌ ಗೇಮ್ಸ್‌ (CWG-2022) ಮಹಿಳೆಯರ ಟಿ೨೦ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ೩ ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ.

VISTARANEWS.COM


on

CWG-2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬರ್ಮಿಂಗ್‌ಹ್ಯಾಮ್‌: ಕಾಮನ್ವೆಲ್ತ್‌ ಗೇಮ್ಸ್‌ನ (CWG- 2022) ಮಹಿಳೆಯರ ಟಿ೨೦ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಮೂರು ವಿಕೆಟ್‌ಗಳಿಂದ ಸೋಲಿಗೆ ಒಳಗಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಸ್ಪರ್ಧೆಯ ಪಟ್ಟಿಗೆ ಸೇರಿದ್ದ ಟಿ೨೦ ಕ್ರಿಕೆಟ್‌ನಲ್ಲಿ ಭಾರತದ ಮೊದಲ ಹೆಜ್ಜೆ ನಿರಾಸೆಯಿಂದ ಕೂಡಿತು.

ಎಜ್‌ಬಾಸ್ಟನ್ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ ವನಿತೆಯರ ಬಳಕ ೨೦ ಓವರ್‌ಗಳಲ್ಲಿ ೮ ವಿಕೆಟ್‌ ನಷ್ಟಕ್ಕೆ ೧೫೪ ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಇನ್ನೂ ಆರು ಎಸೆತಗಳು ಬಾಕಿ ಇರುವಂತೆಯೇ ೭ ವಿಕೆಟ್‌ ಕಳೆದುಕೊಂಡು ೧೫೭ ರನ್‌ ಬಾರಿಸಿ ಸೋಲಿಗೆ ಒಳಗಾಯಿತು.

ಮೊದಲು ಬ್ಯಾಟ್‌ ಮಾಡಿದ ಭಾರತರ ಶಫಾಲಿ ವರ್ಮ ೪೮ ರನ್‌ ಬಾರಿಸಿದರೆ, ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (೫೨) ರನ್‌ ಬಾರಿಸಿದರು. ಆದರೆ, ಉಳಿದ ಬ್ಯಾಟರ್‌ಗಳಿಂದ ಉತ್ತಮ ನೆರವು ಲಭಿಸಲಿಲ್ಲ. ಹೀಗಾಗಿ ಉತ್ತಮ ಆರಂಭ ಪಡೆದಿರುವ ಹೊರತಾಗಿಯೂ ಬೃಹತ್‌ ಮೊತ್ತ ಪೇರಿಸಲು ಭಾರತಕ್ಕೆ ಸಾಧ್ಯವಾಗಲಿಲ್ಲ.

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಭಾರತ ಬೌಲರ್‌ ರೇಣುಕಾ ಸಿಂಗ್‌ (೧೮ ರನ್‌ಗಳಿಗೆ ೪ ವಿಕೆಟ್‌) ಅಮೋಘ ಬೌಲಿಂಗ್‌ ದಾಳಿಗೆ ನಲುಗಿ ೪೯ ರನ್‌ಗಳಿಗೆ ೫ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಈ ವೇಳೆ ಆಶ್ಲೇ ಗಾರ್ಡ್‌ನರ್‌ (೩೫ ಎಸೆತಗಳಲ್ಲಿ ೫೨ ರನ್‌) ಸ್ಫೋಟಕ ಅರ್ಧ ಶತಕ ಹಾಗೂ ಗ್ರೇಸ್‌ ಹ್ಯಾರಿ ೨೦ ಎಸೆತಗಳಲ್ಲಿ ೩೭ ರನ್‌ ಬಾರಿಸಿ ತಂಡವನ್ನು ಗೆಲ್ಲಿಸಿದರು. ಆರಂಭಿಕ ಮುನ್ನಡೆ ದೊರೆತ ಹೊರತಾಗಿಯೂ ಅದನ್ನು ಕಾಪಾಡಿಕೊಳ್ಳಲು ವಿಫಲಗೊಂಡ ಹರ್ಮನ್‌ಪ್ರೀತ್‌ ಪಡೆ ಸೋಲಿನ ನಿರಾಸೆಗೆ ಒಳಗಾಯಿತು.

ಸ್ಕೋರ್‌ ವಿವರ

ಭಾರತ: ೨೦ ಓವರ್‌ಗಳಲ್ಲಿ ೮ ವಿಕೆಟ್‌ಗೆ ೧೫೪ (ಶಫಾಲಿ ವರ್ಮ ೪೮, ಹರ್ಮನ್‌ಪ್ರೀತ್‌ ಕೌರ್‌ ೫೨, ಸ್ಮೃತಿ ಮಂಧಾನಾ ೨೪; ಜೆಸ್‌ ಜೊನಾಸೆನ್‌ ೨೨ಕ್ಕೆ೪, ಮೇಗನ್‌ ಶೂಟ್‌ ೨೬ಕ್ಕೆ೨)

ಆಸ್ಟ್ರೇಲಿಯಾ: ೧೯ ಓವರ್‌ಗಳಲ್ಲಿ ೭ ವಿಕೆಟ್‌ಗೆ ೧೫೭ (ಆಶ್ಲೇ ಗಾರ್ಡ್‌ನರ್‌ ೫೨*, ಗ್ರೇಸ್‌ ಹ್ಯಾರಿಸ್‌ ೩೭, ರೇಣುಕಾ ಸಿಂಗ್‌ ೧೮ಕ್ಕೆ೪).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

RCB vs CSK: ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಕಣಕ್ಕಿಳಿದಿದೆ. ಪಂದ್ಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು ತವರಿನ ತಂಡಕ್ಕೆ ಬೆಂಬಲ ಸೂಚಿಸಲು ರಾಜಕೀಯ ಗಣ್ಯರು, ಸಿನೆಮಾ ನಟ ನಟಿಯರು ಹಾಜರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್‌, ನಟ ಶಿವರಾಜ್​ ಕುಮಾರ್​, ರಿಷಬ್​ ಶೆಟ್ಟಿ ಸೇರಿ ಅನೇಕರು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದಾರೆ. ಶಿವರಾಜ್​ ಕುಮಾರ್​ ಆರ್​ಸಿಬಿಯ ಜೆರ್ಸಿ ತೊಟ್ಟು ಗಮನಸೆಳೆದಿದ್ದಾರೆ. ಗಣ್ಯರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಆರ್​ಸಿಬಿಗೆ ಸಪೋರ್ಟ್​ ಮಾಡಲು ಮಹಿಳಾ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ, ತಂಡದ ಆಟಗಾರ್ತಿಯರಾದ ಶ್ರೇಯಾಂಕ ಪಾಟೀಲ್​,ಆಶಾ ಶೋಭನಾ ಹಾಗೂ ಇತರೆ ಆಟಗಾರ್ತಿಯರು ಕೂಡ ಹಾಜರಾಗಿದ್ದಾರೆ. ಆರ್​ಸಿಬಿ ಮಾಜಿ ಆಟಗಾರ ಕ್ರಿಸ್​ ಗೇಲ್​ ಕೂಡ 333 ನಂಬರ್​ನ ಆರ್​ಸಿಬಿ ಜೆರ್ಸಿಯಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ.

ಪಂದ್ಯವನ್ನು ಆರ್​ಸಿಬಿ ತಂಡ ಗೆಲ್ಲುತ್ತದೆ ಎಂದು ಮಹಿಳಾ ಆಟಗಾರ್ತಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೋಟೋವನ್ನು ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹ್ಯಾಟ್ರಿಕ್​ ಹೀರೊ ಶಿವರಾಜ್​ ಕುಮಾರ್​ ಅವರು ಆರ್​ಸಿಬಿ ಜೆರ್ಸಿ ತೊಟ್ಟ ಫೋಟೊವನ್ನು ಅವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್​ಸಿಬಿ ಹುಡುಗರೇ ಎಂದು ಬರೆದುಕೊಂಡಿದ್ದಾರೆ.

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

Continue Reading

ಕ್ರೀಡೆ

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Virat Kohli: ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್​ ಶರ್ಮ ದಾಖಲೆಯನ್ನು ಮುರಿದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆರ್​ಸಿಬಿ(RCB) ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಐಪಿಎಲ್​ನಲ್ಲಿ(IPL 2024) ಒಂದೇ ತಾಣದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್​ ಶರ್ಮ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ ಈ ಮೈಲುಗಲ್ಲು ನೆಟ್ಟರು.

ಚೆನ್ನೈ ವಿರುದ್ಧದ ಪಂದ್ಯದಲ್ಲಿ 3 ರನ್​ ಗಳಿಸುತ್ತಿದ್ದಂತೆ ಕೊಹ್ಲಿ ಅವರು ರೋಹಿತ್​ ದಾಖಲೆಯನ್ನು ಹಿಂದಿಕ್ಕಿದರು. ರೋಹಿತ್​ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್​ ಬಾರಿಸಿದ್ದರು. ಇದೀಗ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3005* ರನ್​ ಬಾರಿಸಿ ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಎಬಿಡಿ ವಿಲಿಯರ್ಸ್​ ಚಿನ್ನಸ್ವಾಮಿಯಲ್ಲಿ 1960 ರನ್​ ಬಾರಿಸಿದ್ದಾರೆ.

ಮಳೆಯಿಂದ ಪಂದ್ಯ ಸ್ಥಗಿತ


ಹವಾಮಾನ ಇಲಾಖೆ ನೀಡಿದ ಎಚ್ಚರಿಕೆಯ ಪ್ರಕಾರ ಸದ್ಯ ಪಂದ್ಯ ಭಾರೀ ಮಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ಉತ್ತಮವಾಗು ಆಡುತ್ತಿದ್ದ ವೇಳೆ ಮಳೆ ಸುರಿದಿದೆ. ಸದ್ಯ ಆರ್​ಸಿಬಿ ವಿಕೆಟ್​ ನಷ್ಟವಿಲ್ಲದೆ 3 ಓವರ್​ಗೆ 31 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದೆ. ವಿರಾಟ್​ ಕೊಹ್ಲಿ(19) ಮತ್ತು ಫಾಫ್​ ಡುಪ್ಲೆಸಿಸ್​ (12) ರನ್​ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy)ವಿದೆ. ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರಿ ಮಳೆ ಸುರಿದರೆ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ. ನೀರನ್ನು ಹೀರಿಕೊಂಡ ನಂತರ ಸಬ್‌ ಏರ್‌ ಯಂತ್ರದ ಮೂಲಕ ಅದೇ ಕೊಳವೆಗಳಲ್ಲಿ ಔಟ್‌ಫೀಲ್ಡ್‌ಗೆ ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನು ಒಣಗಿಸುವ ವ್ಯವಸ್ಥೆಯಿದೆ. ಒಂದೊಮ್ಮೆ ಮಳೆಯ ಆರ್ಭಟ ನಿಲ್ಲದೇ ಹೋದಲ್ಲಿ, ಆಗ ಎಷ್ಟೇ ದೊಡ್ಡ ತಂತ್ರಜ್ಞಾನವಿದ್ದರೂ ಇದು ಉಪಯೋಗಕ್ಕೆ ಬಾರದು. ಹೀಗಾಗಿ ಪಂದ್ಯದ ಅಳಿವು ಉಳಿವಿನ ಭವಿಷ್ಯ ಮಳೆಯ ಕೈಯಲ್ಲಿದೆ.

ಇದನ್ನೂ ಓದಿ IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

Continue Reading

ಕ್ರೀಡೆ

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ.

VISTARANEWS.COM


on

RCB vs CSK
Koo

ಬೆಂಗಳೂರು: ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್​ ಫುಲ್​ ಆಗಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ(Bengaluru) ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 50ಕ್ಕೂ ಅಧಿಕ ಬಾರಿ ಚೇಸಿಂಗ್​ ನಡೆಸಿದ ತಂಡವೇ ಜಯಶಾಲಿಯಾಗಿದೆ. 40 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2993 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿ ಕೊಹ್ಲಿ 13 ಪಂದ್ಯ ಆಡಿ 661 ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

ಆರ್​ಸಿಬಿಗೆ ಬೇಕು ಲೆಕ್ಕಾಚಾರದ ಗೆಲುವು


ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿದೆ. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಸ್ವಾರಸ್ಯವೆಂದರೆ ಚೆನ್ನೈ ವಿರುದ್ಧವೇ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದು ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆ.

Continue Reading

ಕ್ರೀಡೆ

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Virat Kohli: ಇಂಪ್ಯಾಕ್ಟ್​ ಪ್ಲೇಯರ್​ ನಿಯಮದಿಂದ ಆಟದಲ್ಲಿ ಸಮತೋಲನ ಉಳಿಯುತ್ತಿಲ್ಲ. ಇದು ಕ್ರಿಕೆಟಿಗರ ಭವಿಷ್ಯಕ್ಕೂ ಮಾರಕವಾಗಲಿದೆ. ಒಂದು ಇನಿಂಗ್ಸ್​ ಆಡಿದ ಬಳಿಕ ಆತ, ಮೈದಾನ ತೊರೆಯಬೇಕು. ಇದರಿಂದ ಆತ ಕ್ರಿಕೆಟ್​ ಎಂದರೆ ಏನು ಎಂಬುದನ್ನು ಕಲಿಯಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಐಪಿಎಲ್​ನಲ್ಲಿ ಜಾರಿಯಲ್ಲಿರುವ ಇಂಪ್ಯಾಕ್ಟ್​ ನಿಯಮದ(Impact Player) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿದ್ದರು. ಇದೀಗ ವಿರಾಟ್​ ಕೊಹ್ಲಿ(Virat Kohli) ಕೂಡ ಈ ನಿಮಯದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧದ ಪಂದ್ಯಕ್ಕೂ ಮುನ್ನ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಕೊಹ್ಲಿ, ಇಂಪ್ಯಾಕ್ಟ್​ ಪ್ಲೇಯರ್​ ನಿಯಮ ಕ್ರಿಕೆಟ್​ನ ಸಮತೋಲನವನ್ನು ಹಾಳು ಮಾಡುತ್ತಿದೆ. ಮನರಂಜನೆ ಎನ್ನುವುದು ಕ್ರಿಕೆಟ್​ನ ಒಂದು ಭಾಗವಾಗಿರಬೇಕು. ಆಟವೇ ಮನರಂಜನೆಯಾಗಬಾರದು. ಹಾಗಾದಲ್ಲಿ ಕ್ರಿಕೆಟ್​ನ ನೈಜ ಸ್ವರೂಪ್ ಕಳೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಇಂಪ್ಯಾಕ್ಟ್​ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರೋಹಿತ್ ಶರ್ಮಾ ಅವರ ಮಾತನ್ನು ನಾನು ಒಪ್ಪುತ್ತೇನೆ. ಇಂಪ್ಯಾಕ್ಟ್​ ಪ್ಲೇಯರ್​ ನಿಯಮದಿಂದ ಆಟದಲ್ಲಿ ಸಮತೋಲನ ಉಳಿಯುತ್ತಿಲ್ಲ. ಇದು ಕ್ರಿಕೆಟಿಗರ ಭವಿಷ್ಯಕ್ಕೂ ಮಾರಕವಾಗಲಿದೆ. ಒಂದು ಇನಿಂಗ್ಸ್​ ಆಡಿದ ಬಳಿಕ ಆತ, ಮೈದಾನ ತೊರೆಯಬೇಕು. ಇದರಿಂದ ಆತ ಕ್ರಿಕೆಟ್​ ಎಂದರೆ ಏನು ಎಂಬುದನ್ನು ಕಲಿಯಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿದರು.

ರೋಹಿತ್​ ಹೇಳಿದ್ದೇನು?


‘ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದಿಂದಾಗಿ ನೈಜ ಕ್ರಿಕೆಟ್​ಗೆ ಹಾನಿಯಾಗಿದೆ. ಇದು ಮನರಂಜನೆ ಒದಗಿಸಬಹುದೇ ಹೊರತು ಕ್ರಿಕೆಟ್​ ಬೆಳವಣಿಗೆಗೆ ಅಪಾಯಕಾರಿ. ಈ ನಿಯಮದಿಂದ ಓರ್ವ ಆಟಗಾರನಿಗೆ ತನ್ನ ಸಾಮರ್ಥ್ಯವನ್ನು ತೋರ್ಪಡಿಸುವ ಅವಕಾಶ ಸಿಗುತಿಲ್ಲ. ಉದಾಹರಣೆಗೆ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬ್ಯಾಟಿಂಗ್​ ಸಿಕ್ಕರೆ ಬೌಲಿಂಗ್​ ಸಿಗುತ್ತಿಲ್ಲ. ಬೌಲಿಂಗ್​ ಸಿಕ್ಕರೆ ಬ್ಯಾಟಿಂಗ್​ ಸಿಗುತ್ತಿಲ್ಲ” ಎಂದು ರೋಹಿತ್ ಕಳವಳ ವ್ಯಕ್ತಪಡಿಸಿದ್ದರು.

ಇಂಪ್ಯಾಕ್ಟ್ ನಿಯಮ ಎಂದರೇನು?

ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಟದ ಸಮಯದಲ್ಲಿ ಯುದ್ಧತಂತ್ರದ ಬದಲಾವಣೆಯನ್ನು ಮಾಡಲು ತಂಡಕ್ಕೆ ಅವಕಾಶವನ್ನು ನೀಡುತ್ತದೆ. ಟಾಸ್ ಸಮಯದಲ್ಲಿ, ನಾಯಕನು ಆರಂಭಿಕ 11 ಆಟಗಾರರ ಜೊತೆಗೆ ನಾಲ್ಕು ಬದಲಿ ಆಟಗಾರರನ್ನು ಉಲ್ಲೇಖಿಸಬೆಕು. ಈ ಬದಲಿ ಆಟಗಾರನು (ಇಂಪ್ಯಾಕ್ಟ್ ಪ್ಲೇಯರ್) ಇನ್ನಿಂಗ್ಸ್‌ ನ 14 ನೇ ಓವರ್‌ ನ ಮುಕ್ತಾಯದ ಮೊದಲು ಯಾವುದೇ ನಿರ್ದಿಷ್ಟ ಹಂತದಲ್ಲಿ ಆರಂಭಿಕ 11 ನ ಸದಸ್ಯರನ್ನು ಬದಲಾಯಿಸಬಹುದು. ಆಟಗಾರನು ಬ್ಯಾಟಿಂಗ್ ಮಾಡಲು ಹಾಗೂ ತನ್ನ ಸಂಪೂರ್ಣ ಕೋಟಾದ (ನಾಲ್ಕು) ಓವರ್‌ಗಳನ್ನು ಪೂರ್ಣಗೊಳಿಸಲು ಅವಕಾಶವಿದೆ.

ಮತ್ತೊಂದು ವಿಶೇಷವೆಂದರೆ ಇಂಪ್ಯಾಕ್ಟ್ ಪ್ಲೇಯರ್ ಈಗಾಗಲೇ ಔಟ್ ಆಗಿರುವ ಆಟಗಾರನ ಬದಲಿಯಾಗಿ ಬಂದು ಮತ್ತೊಮ್ಮೆ ಬ್ಯಾಟಿಂಗ್ ಮಾಡಬಹುದು. ಆದರೆ ತಂಡದಲ್ಲಿ ಕೇವಲ 11 ಬ್ಯಾಟರ್‌ ಗಳಿಗೆ ಬ್ಯಾಟಿಂಗ್ ಗೆ ಅವಕಾಶವಿದೆ. ಮತ್ತೊಂದೆಡೆ, ಈಗಾಗಲೇ ಕೆಲವು ಓವರ್‌ ಗಳನ್ನು ಬೌಲ್ ಮಾಡಿದ ಬೌಲರ್ ಬದಲಿಗೆ ಬಂದು ನಾಲ್ಕು ಓವರ್‌ ಗಳ ಪೂರ್ಣ ಕೋಟಾ ಬೌಲ್ ಮಾಡಬಹುದು.

ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ. ಆದರೆ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸುವ ಮೊದಲು ನಾಯಕ ಅಥವಾ ಮುಖ್ಯ ಕೋಚ್ ಅಥವಾ ಮ್ಯಾನೇಜರ್ ಅದನ್ನು ಆನ್-ಫೀಲ್ಡ್ ಅಂಪೈರ್‌ ಗೆ ತಿಳಿಸಬೇಕು.

ಇಂಪ್ಯಾಕ್ಟ್ ಪ್ಲೇಯರ್ ಓವರ್‌ ನಡುವಿನಲ್ಲಿ ಬರುವಂತಿಲ್ಲ. ಓವರ್ ಮುಗಿದ ಬಳಿಕವಷ್ಟೇ ಆಟಕ್ಕೆ ಬರಬಹುದು. ಆದಾಗ್ಯೂ, ಕೆಲವು ವಿನಾಯಿತಿಗಳಿದ್ದು, ಬ್ಯಾಟಿಂಗ್ ತಂಡವು ವಿಕೆಟ್ ಪತನದ ಸಮಯದಲ್ಲಿ ಅದರ ಇಂಪ್ಯಾಕ್ಟ್ ಪ್ಲೇಯರ್ ಕಾರ್ಡ್ ಅನ್ನು ಓವರ್ ನಡುವೆ ಬಳಸಿಬಹುದು, ಫೀಲ್ಡಿಂಗ್ ತಂಡದಲ್ಲಿ ಗಾಯಗೊಂಡ ಫೀಲ್ಡರ್ ಬದಲು ಓವರ್ ನ ನಡುವೆ ಇಂಪ್ಯಾಕ್ಟ್ ಪ್ಲೇಯರ್‌ ನನ್ನು ಆಟಕ್ಕೆ ಕರೆಯಬಹುದು

Continue Reading
Advertisement
RCB vs CSK
ಕ್ರೀಡೆ7 mins ago

RCB vs CSK: ಆರ್​ಸಿಬಿಗೆ ಸಿದ್ದರಾಮಯ್ಯ, ಶಿವಣ್ಣ, ರಿಷಬ್​ ಶೆಟ್ಟಿ, ಗೇಲ್​ ಸೇರಿ ಗಣ್ಯರ ಸಪೋರ್ಟ್​

Road Accident
ಕರ್ನಾಟಕ18 mins ago

Road Accident: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

Russia Tourism
ಪ್ರವಾಸ23 mins ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ24 mins ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ30 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 202431 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ52 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ53 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ56 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ57 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌