David Warner explains why WTC final should be a three-game series WTC Final 2023 : ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ ಪಂದ್ಯವೇ ಸರಿಯಿಲ್ಲ ಎಂದ ಡೇವಿಡ್​ ವಾರ್ನರ್​! - Vistara News

ಕ್ರಿಕೆಟ್

WTC Final 2023 : ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ ಪಂದ್ಯವೇ ಸರಿಯಿಲ್ಲ ಎಂದ ಡೇವಿಡ್​ ವಾರ್ನರ್​!

ವಿಶ್ವ ಟೆಸ್ಟ್​ ಚಾಂಪಿಯನ್​​ಷಿಪ್​ನ ಫೈನಲ್ ಪಂದ್ಯ ಜೂನ್​ 7ರಂದು ಆರಂಭವಾಗಲಿದ್ದು, ಭಾರತ ಹಾಗೂ ಆಸ್ಟ್ರೇಲಿಯಾ ತಂಡ ಟ್ರೋಫಿಗಾಗಿ ಸೆಣಸಾಡಲಿವೆ.

VISTARANEWS.COM


on

David Warner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಜೂನ್ 7ರಿಂದ 11 ರವರೆಗೆ ಲಂಡನ್​​ನ ಓವಲ್​​ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ (ಡಬ್ಲ್ಯುಟಿಸಿ) ಫೈನಲ್ (WTC Final 2023) ಪಂದ್ಯದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಯಾವ ತಂಡ ಬಲಿಷ್ಠ, ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಹುದು, ಯಾರು ಟ್ರೋಫಿ ಗೆಲ್ಲಬಹುದು ಎಂಬೆಲ್ಲ ಚರ್ಚೆಗಳು ನಡೆಯುತ್ತಿವೆ. ಭಾರತ ತಂಡಕ್ಕೆ ಇದು ಎರಡನೇ ಫೈನಲ್ ಪಂದ್ಯವಾಗಿದ್ದು, ಆಸ್ಟ್ರೇಲಿಯಾ ತಂಡಕ್ಕೆ (Australia Cricket Team) ಚೊಚ್ಚಲ ಟ್ರೋಫಿಯ ಕನಸಾಗಿದೆ. ಭಾರತ (Team India)ಹಿಂದಿನ ಆವೃತ್ತಿಯಲ್ಲಿ ನ್ಯೂಜಿಲಲ್ಯಾಂಡ್​ ವಿರುದ್ದ ಸೋತು ನಿರಾಸೆ ಎದುರಿಸಿತ್ತು. ಹೀಗಾಗಿ ಈ ಬಾರಿ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿದ್ದಾರೆ ಭಾರತೀಯ ಅಭಿಮಾನಿಗಳು.

ಮುಂಬರುವ ಬಹುನಿರೀಕ್ಷಿತ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟರ್​ ಡೇವಿಡ್​ ವಾರ್ನರ್ ಮಾತನಾಡಿದ್ದು, ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಒಂದು ಟೆಸ್ಟ್ ಪಂದ್ಯದ ಬದಲು ಮೂರು ಪಂದ್ಯಗಳ ಸರಣಿಯಾಗಿ ನಡೆಸಬೇಕು ಎಂದು ಹೇಳಿದ್ದಾರೆ. ಈ ಮೂಲಕ ಅವರು ಒಂದೇ ಪಂದ್ಯದಲ್ಲಿ ವಿಜೇತರನ್ನು ನಿರ್ಣಯ ಮಾಡುವ ಐಸಿಸಿ ಧೋರಣೆಯನ್ನು ವಿರೋಧಿಸಿದ್ದಾರೆ.

ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಅದ್ಭುತ ಎಂದು ನಾನು ಅಂದುಕೊಳ್ಳುವೆ. ಆದರೆ ನನ್ನ ವಿಮರ್ಶಾತ್ಮಕ ದೃಷ್ಟಿಕೋನದ ಪ್ರಕಾರ ವಿಜೇತರನ್ನು ಒಂದು ಟೆಸ್ಟ್ ಪಂದ್ಯದೊಂದಿಗೆ ಆರಿಸಬಾರದು. ಕನಿಷ್ಠ ಮೂರು ಪಂದ್ಯಗಳ ಸರಣಿಯಾಗಿರಬೇಕು ಎಂದು ನಾನು ಭಾವಿಸುತ್ತೇನೆ. ತಂಡವೊಂದು ಎರಡು ವರ್ಷಗಳ ಕಾಲ ಉತ್ತಮ ಕ್ರಿಕೆಟ್ ಆಡಿರುತ್ತದೆ. ನಂತರ ನಡೆಯುವ ಫೈನಲ್​ನಲ್ಲಿ ಎದುರಾಳಿ ತಂಡದ ವಿರುದ್ಧ ತಟಸ್ಥ ಸ್ಥಳದಲ್ಲಿ ಆಡಬೇಕಾಗುತ್ತದೆ. ನಾವೆಲ್ಲರೂ ಈ ಹಿಂದೆ ಓವಲ್​ನಲ್ಲಿ ಆಡಿದ್ದೇವೆ. ಆದರೆ, ಇದು ಆತಿಥೇಯ ರಾಷ್ಟ್ರದ ವಿರುದ್ಧ ಆಗಿರುವುದಿಲ್ಲ. ಹೀಗಾಗಿ ಹೆಚ್ಚುವರಿ ಎರಡು ಪಂದ್ಯಗಳು ಅಗತ್ಯ ಇದೆ ಎಂದು ವಾರ್ನರ್​ ಕ್ರಿಕ್​ಇನ್ಫೋ ಜತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ : WTC Final 2023 : ಭಾರತ ತಂಡಕ್ಕೆ ಶುಭ ಸುದ್ದಿ; ಆಸ್ಟ್ರೇಲಿಯಾದ ವೇಗಿ ಫೈನಲ್​ ಪಂದ್ಯದಿಂದ ಔಟ್​​

ಈ ಟ್ರೋಫಿಯ ಗೆಲುವು ವಿಶ್ವದ ಎರಡು ಅತ್ಯುತ್ತಮ ತಂಡಗಳಿಗೆ ದೊಡ್ಡ ಬಹುಮಾನವಾಗಿದೆ. ವಿದೇಶಿ ನೆಲದಲ್ಲಿ ಡ್ಯೂಕ್ಸ್ ಚೆಂಡಿನೊಂದಿಗೆ ಬೌಲಿಂಗ್ ಮಾಡುವ ಎರಡು ವಿಶ್ವ ದರ್ಜೆಯ ಬೌಲಿಂಗ್ ವಿಭಾಗಕ್ಕೂ ಸವಾಲೆನಿಸಿದೆ. ಈ ವಿಚಾರದಲ್ಲಿ ನಾವೆಲ್ಲರೂ ಉತ್ಸುಕರಾಗಿದ್ದೇವೆ. ನಾವು ಕಳೆದ 18-24 ತಿಂಗಳುಗಳಲ್ಲಿ ಕೆಲವು ಅತ್ಯುತ್ತಮ ಕ್ರಿಕೆಟ್ ಆಡಿದ್ದೇವೆ. ಭಾರತ ತಂಡ ಯಾವ ರೀತಿ ಸಜ್ಜಾಗಿದೆ ಎಂಬುದೂ ಗೊತ್ತಿದೆ ಎಂದು ಡೇವಿಡ್​ ವಾರ್ನರ್ ಅಭಿಪ್ರಾಯಪಟ್ಟಿದ್ದಾರೆ.

ನಿವೃತ್ತಿ ದಿನಾಂಕ ಘೋಷಿಸಿದ ವಾರ್ನರ್​

ಭಾರತ ತಂಡದ ವಿರುದ್ಧದ ಬಹುನಿರೀಕ್ಷಿತ ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ ಫೈನಲ್ ಪಂದ್ಯ (WTC Final 2023) ಆರಂಭಕ್ಕೆ ಕೇವಲ ನಾಲ್ಕು ದಿನಗಳ ಮೊದಲು ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾದ ಬೇಸಿಗೆಯ ಕೊನೆಯಲ್ಲಿ ದೀರ್ಘ ಅವಧಿಯ ಕ್ರಿಕೆಟ್​​ಗೆ ವಿದಾಯ ಹೇಳುವ ಯೋಜನೆ ಇದೆ ಎಂಬುದಾಗಿ ವಾರ್ನರ್ ಶನಿವಾರ ಬಹಿರಂಗಪಡಿಸಿದ್ದಾರೆ.

ಯಾವಾಗಲೂ ನನಗೆ ರನ್​ ಗಳಿಸಬೇಕು ಎಂಬ ಉದ್ದೇಶವಿರುತ್ತದೆ. ಆದರೆ, 2024ರ ವಿಶ್ವ ಕಪ್​ ನನ್ನ ವೃತ್ತಿ ಜೀವನದ ಕೊನೇ ಪಂದ್ಯ ಎಂಬುದಾಗಿ ಅವರು ಹೇಳಿದ್ದಾರೆ.

ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನಾನು ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ನಲ್ಲಿ ರನ್ ಗಳಿಸಲು ಮತ್ತು ಆಸ್ಟ್ರೇಲಿಯಾದಲ್ಲಿ ಆಡುವುದನ್ನು ಮುಂದುವರಿಸಲು ಸಾಧ್ಯವಾದರೆ ಖಂಡಿತವಾಗಿಯೂ ವೆಸ್ಟ್ ಇಂಡೀಸ್ ಸರಣಿಯಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ.

ಡಬ್ಲ್ಯುಟಿಸಿ ಫೈನಲ್ ಮತ್ತು ಮುಂಬರುವ ಆ್ಯಶಸ್ ಸರಣಿ ಮುಗಿಸಿ ಪಾಕಿಸ್ತಾನ ಸರಣಿಯನ್ನು ಗೆಲ್ಲಲು ಸಾಧ್ಯವಾದರೆ ನಾನು ಖಂಡಿತವಾಗಿಯೂ ಅಲ್ಲಿಗೆ ನನ್ನ ಟೆಸ್ಟ್​ ವೃತ್ತಿಯನ್ನು ಮುಗಿಸುತ್ತೇನೆ ಎಂದು ವಾರ್ನರ್​ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

IPL 2024: ಚೈನಾಮನ್​ ಖ್ಯಾತಿಯ ಸ್ಪಿನ್ನರ್​ ಕುಲ್​ದೀಪ್​ ಯಾದವ್(35*)​ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿ ಅತ್ಯಧಿಕ ರನ್​ ಗಳಿಸಿದ 2ನೇ ಬ್ಯಾಟರ್​ ಎಂಬ ಕೀರ್ತಿಗೆ ಪಾತ್ರರಾದರು. ಮಾಜಿ ಆಟಗಾರ ಹರ್ಭಜನ್​ ಸಿಂಗ್(49*)​ ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

VISTARANEWS.COM


on

IPL 2024
Koo

ಕೋಲ್ಕತ್ತಾ: ಕೋಲ್ಕತ್ತಾ ನೈಟ್​ ರೇಡರ್ಸ್(Kolkata Knight Riders)​ ಮತ್ತು ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ನಡುವೆ ನಿನ್ನೆ(ಸೋಮವಾರ) ನಡೆದ ಐಪಿಎಲ್​ನ(IPL 2024) 37ನೇ ಲೀಗ್​ ಪಂದ್ಯದಲ್ಲಿ ಸುನೀಲ್​ ನರೈನ್​​(Sunil Narine) ಮತ್ತು ಕುಲ್​ದೀಪ್​ ಯಾದವ್(Kuldeep Yadav) ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಉಭಯ ಆಟಗಾರರ ದಾಖಲೆಯ ವಿವರ ಇಂತಿದೆ.

ಸುನೀಲ್​ ನಾರಾಯಣ್​ ಐಪಿಎಲ್​ನಲ್ಲಿ ಒಂದೇ ಕ್ರೀಡಾಂಗಣದಲ್ಲಿ ಗರಿಷ್ಠ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡರು. ಈ ಮೂಲಕ ಲಸಿತ್ ಮಾಲಿಂಗ ಅವರ ದಾಖಲೆ ಮುರಿದರು. ಮಾಲಿಂಗ ಮುಂಬಯಿಯ ವಾಂಖೆಡೆ ಸ್ಟೇಡಿಯಂನಲ್ಲಿ 68 ವಿಕೆಟ್​ ಕಿತ್ತಿದ್ದಾರೆ. ನಾರಾಯಣ್​ ಕೋಲ್ಕತ್ತಾದ ಈಡನ್​ ಗಾರ್ಡನ್ಸ್​ನಲ್ಲಿ 69 ವಿಕೆಟ್​ ಕಿತ್ತು ಐಪಿಎಲ್​ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಬೌಲರ್


ಸುನೀಲ್​ ನರೈನ್​-69 ವಿಕೆಟ್​ (ಈಡನ್​ ಗಾರ್ಡನ್ಸ್​
)

ಲಸಿತ್​ ಮಾಲಿಂಗ್​-68 ವಿಕೆಟ್​(ವಾಂಖೆಡೆ)

ಅಮಿತ್​ ಮಿಶ್ರಾ-58 ವಿಕೆಟ್​(ಫಿರೋಜ್ ಶಾ ಕೋಟ್ಲಾ)

ಯಜುವೇಂದ್ರ ಚಹಲ್​-52 ವಿಕೆಟ್​(ಬೆಂಗಳೂರು)

ಹರ್ಭಜನ್​ ಸಿಂಗ್​-49 ವಿಕೆಟ್​(ವಾಂಖೆಡೆ)

9ನೇ ಕ್ರಮಾಂಕದಲ್ಲಿ ಕುಲ್​ದೀಪ್ ದಾಖಲೆ​


ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಚೈನಾಮನ್​ ಖ್ಯಾತಿಯ ಸ್ಪಿನ್ನರ್​ ಕುಲ್​ದೀಪ್​ ಯಾದವ್(35*)​ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿ ಅತ್ಯಧಿಕ ರನ್​ ಗಳಿಸಿದ 2ನೇ ಬ್ಯಾಟರ್​ ಎಂಬ ಕೀರ್ತಿಗೆ ಪಾತ್ರರಾದರು. ಮಾಜಿ ಆಟಗಾರ ಹರ್ಭಜನ್​ ಸಿಂಗ್(49*)​ ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್

ಡೆಲ್ಲಿ ಕ್ಯಾಟಪಿಲ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿ ಗಮನಸೆಳೆದ ಕೆಕೆಆರ್(​KKR vs DC) ತಂಡದ ಆರಂಭಿಕ ಆಟಗಾರ ಫಿಲ್​ ಸಾಲ್ಟ್(Phil Salt)​ ಅವರು ಮಾಜಿ ಆಟಗಾರ ದಾದಾ ಖ್ಯಾತಿಯ ಸೌರವ್ ಗಂಗೂಲಿಯ(Sourav Ganguly) ಐಪಿಎಲ್​(IPL 2024) ದಾಖಲೆಯೊಂದನ್ನು ಮುರಿದರು.

ಫಿಲ್ ಸಾಲ್ಟ್​ ಅವರು ಅರ್ಧಶತಕ ಬಾರಿಸುವ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಕೆಕೆಆರ್​ ಪರ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಸೌರವ್​ ಗಂಗೂಲಿಯ ದಾಖಲೆಯನ್ನು ಮುರಿದರು. ಗಂಗೂಲಿ 2010ರ ಆವೃತ್ತಿಯಲ್ಲಿ 7 ಇನಿಂಗ್ಸ್​ ಆಡಿ 331 ರನ್​ ಬಾರಿಸಿದ್ದರು. ಆದರೆ ಫಿಲ್​ ಸಾಲ್ಟ್​ ಕೇವಲ 6 ಇನಿಂಗ್ಸ್​ಗಳಿಂದ 344* ರನ್​ ಕಲೆಹಾಕುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಆ್ಯಂಡ್ರೆ ರಸೆಲ್​ ಮೂರನೇ ಸ್ಥಾನದಲ್ಲಿದ್ದಾರೆ. ರಸೆಲ್​ 2019ರಲ್ಲಿ 7 ಇನಿಂಗ್ಸ್​ ನಿಂದ 311 ರನ್​ ಬಾರಿಸಿದ್ದೆರು.

ಫಿಲ್​ ಸಾಲ್ಟ್​-344* ರನ್​, 6* ಇನಿಂಗ್ಸ್​

ಸೌರವ್​ ಗಂಗೂಲಿ-331 ರನ್​, 7 ಇನಿಂಗ್ಸ್​

ಆ್ಯಂಡ್ರೆ ರಸೆಲ್​- 311 ರನ್​, 7 ಇನಿಂಗ್ಸ್​

ಕ್ರಿಸ್​ ಲೀನ್​-303 ರನ್​, 9 ಇನಿಂಗ್ಸ್​

ಕೆಕೆಆರ್​ಗೆ 7 ವಿಕೆಟ್​ ಜಯ

ಈಡನ್​ ಗಾರ್ಡನ್ಸ್​ನಲ್ಲಿ ಸೋಮವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಇದು ಕೆಕೆಆರ್​ಗೆ 9ನೇ ಪಂದ್ಯದಲ್ಲಿ ಒಲಿದ 6ನೇ ಗೆಲುವಾಗಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ.

Continue Reading

ಕ್ರೀಡೆ

LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

LSG vs MI: ಮಯಾಂಕ್​ ಯಾದವ್ ಏಪ್ರಿಲ್​ 7ರಂದು ನಡೆದಿದ್ದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ಆ ಬಳಿಕದ ಪಂದ್ಯಗಳಿಂದ ಹೊರಗುಳಿದಿದ್ದರು. ಆಡಿದ 3 ಪಂದ್ಯಗಳಿಂದ 6 ವಿಕೆಟ್​ ಕಿತ್ತಿದ್ದಾರೆ. 2 ಬಾರಿ 150ಕ್ಕಿಂತ ಅಧಿಕ ವೇಗದಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

VISTARANEWS.COM


on

LSG vs MI
Koo

ಲಕ್ನೋ: ಐಪಿಎಲ್​ನಲ್ಲಿ(IPL 2024) ಗಂಟೆಗೆ 150ಕ್ಕಿಂತ ಅಧಿಕ ವೇಗದಲ್ಲಿ ಬೌಲಿಂಗ್​ ನಡೆಸಿ ಭಾರೀ ಸಂಚಲನ ಮೂಡಿಸಿದ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ತಂಡದ ಯುವ ವೇಗಿ ಮಯಾಂಕ್​ ಯಾದವ್(Mayank Yadav)​ ಗಾಯದ ಸಮಸ್ಯೆಯಿಂದ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ ಅವರು ಫಿಟ್​ ಆಗಿದ್ದು ಇಂದು (ಮಂಗಳವಾರ) ನಡೆಯುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಈ ವಿಚಾರವನ್ನು ತಂಡದ ಬೌಲಿಂಗ್​ ಕೋಚ್​ ಮಾರ್ನೆ ಮಾರ್ಕೆಲ್‌(Morne Morkel)​ ಖಚಿತಪಡಿಸಿದ್ದಾರೆ. ಮಯಾಂಕ್​ ಯಾದವ್ ಕಮ್​ಬ್ಯಾಕ್​ನಿಂದ ಲಕ್ನೋ(Lucknow Super Giants) ತಂಡದ ಬೌಲಿಂಗ್​ ವಿಭಾಗ ಮತ್ತಷ್ಟು ಬಲಿಷ್ಠಗೊಂಡಿದೆ.

“ಮಯಾಂಕ್ ಫಿಟ್ ಆಗಿದ್ದಾರೆ. ಅವರು ತಮ್ಮ ಎಲ್ಲಾ ಫಿಟ್ನೆಸ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ನಾವು ಅವರನ್ನು ತಂಡಕ್ಕೆ ಮರಳಿ ಪಡೆಯಲು ಉತ್ಸುಕರಾಗಿದ್ದೇವೆ. ಮುಂಬೈ ವಿರುದ್ಧ ಆಡುವುದು ಖಚಿತ” ಎಂದು ಮಾರ್ಕೆಲ್‌ ಹೇಳಿದ್ದಾರೆ. ಮಯಾಂಕ್​ ಯಾದವ್ ಏಪ್ರಿಲ್​ 7ರಂದು ನಡೆದಿದ್ದ ಗುಜರಾತ್​ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ಆ ಬಳಿಕದ ಪಂದ್ಯಗಳಿಂದ ಹೊರಗುಳಿದಿದ್ದರು. ಆಡಿದ 3 ಪಂದ್ಯಗಳಿಂದ 6 ವಿಕೆಟ್​ ಕಿತ್ತಿದ್ದಾರೆ. 2 ಬಾರಿ 150ಕ್ಕಿಂತ ಅಧಿಕ ವೇಗದಲ್ಲಿ ಬೌಲಿಂಗ್​ ನಡೆಸಿ ಗಮನಸೆಳೆದಿದ್ದರು.

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(LSG vs MI)​ ಮತ್ತು ಸತತವಾಗಿ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್​ ಸೆಣಸಾಟ ನಡೆಸಲಿದೆ. ಸದ್ಯ ಮುಂಬೈ ಅಂಕಪಟ್ಟಿಯಲ್ಲಿ 9ನೇ ಸ್ಥಾನಿಯಾಗಿರುವ ಮುಂಬೈಗೆ ಪ್ಲೇ ಆಫ್​ ಆಸೆ ಜೀವಂತವಿರಿಸಬೇಕಿದ್ದರೆ ಇದು ಮಸ್ಟ್​ ವಿನ್​ ಗೇಮ್​ ಆಗಿದೆ. ಲಕ್ನೋಗೂ ಕೂಡ ಮಹತ್ವದ ಪಂದ್ಯವಾಗಿದೆ.

ಇದನ್ನೂ ಓದಿ IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

ಲಕ್ನೋ ಬ್ಯಾಟಿಂಗ್‌ ಅಗ್ರ ಕ್ರಮಾಂಕವನ್ನು ಹೆಚ್ಚು ಅವಲಂಬಿಸಿದೆ. ರಾಹುಲ್‌- ಡಿ ಕಾಕ್‌ ಕ್ರೀಸ್‌ ಆಕ್ರಮಿಸಿಕೊಂಡರೆ ಮಾತ್ರ ತಂಡಕ್ಕೆ ಗೆಲುವು ಖಚಿತ ಎನ್ನಬಹುದು. ಪವರ್​ ಪ್ಲೇ ತನಕ ಉಭಯ ಆಟಗಾರರು ನಿಲ್ಲದೆ ಹೋದರೆ ತಂಡದ ಬೃಹತ್​ ಮೊತ್ತಕ್ಕೆ ದೊಡ್ಡ ಹೊಡೆತ ಬೀಳಲಿದೆ. ಮಾರ್ಕಸ್​ ಸ್ಟೋಯಿನಿಸ್​ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿ ತಂಡವನ್ನು ಗೆಲ್ಲಿಸಿದ್ದರೂ ಕೂಡ ಇವರ ಬ್ಯಾಟಿಂಗ್​ ಮೇಲೆ ಹೆಚ್ಚು ನಂಬಿಕೆ ಇಡುವಂತಿಲ್ಲ. ನಿಂತು ಆಡುವ ಕಲೆ ಇವರಿಗೆ ಅಷ್ಟಾಗಿ ತಿಳಿದಿಲ್ಲ. ತಾವೆದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್​ ಬಾರಿಸುವ ಯೋಚನೆಯಲ್ಲಿರುತ್ತಾರೆ.

ನಿಕೋಲಸ್​ ಪೂರನ್​ ಆರಂಭಿಕ ಕೆಲ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸಿ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ, ಈಗ ಅವರ ಬ್ಯಾಟಿಂಗ್​ ಆರ್ಭಟ ಕೊಂಚ ಕಡಿಮೆಯಾದಂತೆ ತೋರುತ್ತಿದೆ. ದೀಪಕ್​ ಹೂಡಾ ಮತ್ತೆ ಬ್ಯಾಟಿಂಗ್​ ಫಾರ್ಮ್​ಗೆ ಮರಳಿರುವುದು ತಂಡಕ್ಕೆ ಬಲ ನೀಡಿದೆ. 

ಪಿಚ್​ ರಿಪೋರ್ಟ್


ಲಕ್ನೋದ ಏಕಾನ ಸ್ಟೇಡಿಯಂನ ಪಿಚ್​ ಇದುವರೆಗೆ ನಿಧಾನಗತಿಯಿಂದ ಕೂಡಿತ್ತು. ಬೌಲರ್‌ಗಳು ಪರಿಣಾಮಕಾರಿಯಾಗಿ ದಾಳಿ ನಡೆಸುವ ಪಿಚ್​ ಇದಾಗಿತ್ತು. ಆದರೆ ಈಗ ಈ ಪಿಚ್​ ಈ ಹಿಂದಿನಂತೆ ವರ್ತಿಸುತ್ತಿಲ್ಲ. ಇಲ್ಲಿ ದೊಡ್ಡ ಮೊತ್ತವನ್ನು ಪೇರಿಸಿದರೂ ಕೂಡ ಚೇಸಿಂಗ್​ ನಡೆಸಬಹುದು. ಇದಕ್ಕೆ ಕಳೆದ 2 ಪಂದ್ಯಗಳ ಫಲಿತಾಂಶವೇ ಉತ್ತಮ ನಿದರ್ಶನ. ಈ ಮೊದಲು ಇಲ್ಲಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ಕೆ ಮಾಡಿಕೊಳ್ಳುತ್ತಿತ್ತು. ಈಗ ಇಲ್ಲಿ ಮಂಚಿನ ಕಾಟ ಶುರುವಾಗಿದ್ದು ಚೇಸಿಂಗ್​ ನಡೆಸಿದ ತಂಡಗಳೇ ಗೆಲ್ಲುತ್ತಿವೆ. ಹೀಗಾಗಿ ಟಾಸ್‌ ಗೆದ್ದವರು ಮೊದಲು ಬ್ಯಾಟಿಂಗ್‌ ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

Continue Reading

ಕ್ರೀಡೆ

IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

IPL 2024: ಫಿಲ್ ಸಾಲ್ಟ್​ ಅವರು ಅರ್ಧಶತಕ ಬಾರಿಸುವ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಕೆಕೆಆರ್​ ಪರ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಸೌರವ್​ ಗಂಗೂಲಿಯ ದಾಖಲೆಯನ್ನು ಮುರಿದರು

VISTARANEWS.COM


on

IPL 2024
Koo

ಕೋಲತ್ತಾ: ಡೆಲ್ಲಿ ಕ್ಯಾಟಪಿಲ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿ ಗಮನಸೆಳೆದ ಕೆಕೆಆರ್(​KKR vs DC) ತಂಡದ ಆರಂಭಿಕ ಆಟಗಾರ ಫಿಲ್​ ಸಾಲ್ಟ್(Phil Salt)​ ಅವರು ಮಾಜಿ ಆಟಗಾರ ದಾದಾ ಖ್ಯಾತಿಯ ಸೌರವ್ ಗಂಗೂಲಿಯ(Sourav Ganguly) ಐಪಿಎಲ್​(IPL 2024) ದಾಖಲೆಯೊಂದನ್ನು ಮುರಿದಿದ್ದಾರೆ.

ಫಿಲ್ ಸಾಲ್ಟ್​ ಅವರು ಅರ್ಧಶತಕ ಬಾರಿಸುವ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಕೆಕೆಆರ್​ ಪರ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಸೌರವ್​ ಗಂಗೂಲಿಯ ದಾಖಲೆಯನ್ನು ಮುರಿದರು. ಗಂಗೂಲಿ 2010ರ ಆವೃತ್ತಿಯಲ್ಲಿ 7 ಇನಿಂಗ್ಸ್​ ಆಡಿ 331 ರನ್​ ಬಾರಿಸಿದ್ದರು. ಆದರೆ ಫಿಲ್​ ಸಾಲ್ಟ್​ ಕೇವಲ 6 ಇನಿಂಗ್ಸ್​ಗಳಿಂದ 344* ರನ್​ ಕಲೆಹಾಕುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಆ್ಯಂಡ್ರೆ ರಸೆಲ್​ ಮೂರನೇ ಸ್ಥಾನದಲ್ಲಿದ್ದಾರೆ. ರಸೆಲ್​ 2019ರಲ್ಲಿ 7 ಇನಿಂಗ್ಸ್​ ನಿಂದ 311 ರನ್​ ಬಾರಿಸಿದ್ದೆರು.

ಈಡನ್​ ಗಾರ್ಡನ್ಸ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಕೆಕೆಆರ್ ಆಟಗಾರರು


ಫಿಲ್​ ಸಾಲ್ಟ್​-344* ರನ್​, 6* ಇನಿಂಗ್ಸ್​

ಸೌರವ್​ ಗಂಗೂಲಿ-331 ರನ್​, 7 ಇನಿಂಗ್ಸ್​

ಆ್ಯಂಡ್ರೆ ರಸೆಲ್​- 311 ರನ್​, 7 ಇನಿಂಗ್ಸ್​

ಕ್ರಿಸ್​ ಲೀನ್​-303 ರನ್​, 9 ಇನಿಂಗ್ಸ್​

ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು. ಮೂರು ಓವರ್​ಗೆ 38 ರನ್​ ಹೊಡೆಸಿಕೊಂಡರು. ಸಾಲ್ಟ್​ 33 ಎಸೆತಗಳಿಂದ 68 ರನ್​ ಚಚ್ಚಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಸೊಗಸಾದ ಸಿಕ್ಸರ್​ ಮತ್ತು 7 ಬೌಂಡರಿ ಸಿಡಿಯಿತು.

 ಈಡನ್​ ಗಾರ್ಡನ್ಸ್​ನಲ್ಲಿ ಸೋಮವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಇದು ಕೆಕೆಆರ್​ಗೆ 9ನೇ ಪಂದ್ಯದಲ್ಲಿ ಒಲಿದ 6ನೇ ಗೆಲುವಾಗಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ.

Continue Reading

ಕ್ರೀಡೆ

T20 World Cup 2024: ಇಂದು ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ; ಸಂಭಾವ್ಯ ತಂಡ ಹೀಗಿದೆ

T20 World Cup 2024: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್​ ಅಗರ್ಕರ್(Ajit Agarkar)​ ಕಳೆದ 2 ದಿನಗಳ ಹಿಂದೆಯೇ ದೆಹಲಿಯಲ್ಲಿ ಸಭೆ ನಡೆಸಿ ತಂಡವನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಂಡ ಪ್ರಕಟಿಸುವ ಸುದ್ದಿಗೋಷ್ಠಿಯಲ್ಲಿ ಅಜಿತ್‌ ಅಗರ್ಕರ್‌ ಮತ್ತು ಕೋಚ್‌ ರಾಹುಲ್‌ ದ್ರಾವಿಡ್‌(Rahul Dravid) ಭಾಗವಹಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್‌ಗೆ(T20 World Cup 2024) ಮಂಗಳವಾರ ಭಾರತೀಯ ತಂಡ(Team India) ಪ್ರಕಟಗೊಳ್ಳುವ ಸಾಧ್ಯತೆಯಿದೆ. ಈಗಾಗಲೇ ನ್ಯೂಜಿಲ್ಯಾಂಡ್ ತಂಡ ಪ್ರಟಕಗೊಂಡಿದೆ. ಟಿ20 ವಿಶ್ವಕಪ್‌ಗಾಗಿ ತಂಡ ಪ್ರಕಟಿಸಲು ಮೇ 1 (ಬುಧವಾರ) ಕೊನೆಯ ದಿನವಾಗಿರುವುದರಿಂದ ಭಾರತ ಸೇರಿ ಇನ್ನುಳಿದ ದೇಶಗಳು ಕೂಡ ಇಂದೇ ತಮ್ಮ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್​ ಅಗರ್ಕರ್(Ajit Agarkar)​ ಕಳೆದ 2 ದಿನಗಳ ಹಿಂದೆಯೇ ದೆಹಲಿಯಲ್ಲಿ ಸಭೆ ನಡೆಸಿ ತಂಡವನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ತಂಡ ಪ್ರಕಟಿಸುವ ಸುದ್ದಿಗೋಷ್ಠಿಯಲ್ಲಿ ಅಜಿತ್‌ ಅಗರ್ಕರ್‌ ಮತ್ತು ಕೋಚ್‌ ರಾಹುಲ್‌ ದ್ರಾವಿಡ್‌(Rahul Dravid) ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೋಹಿತ್​ ಅವರು ಇಂದು ಲಕ್ನೋ ವಿರುದ್ಧ ಪಂದ್ಯವನ್ನಾಡುವ ಹಿನ್ನಡೆಯಲ್ಲಿ ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿದುಬಂದಿದೆ.

ತಂಡ ಪ್ರಕಟಗೊಳ್ಳುವ ಮುನ್ನವೇ ಕ್ರಿಕ್​ಬಜ್​ ಸೇರಿ ಕೆಲ ಆಂಗ್ಲ ಮಾಧ್ಯಗಳು ಕೆಲ ಆಟಗಾರರಿಗೆ ಅವಕಾಶ ಸಿಗುವುದು ಅನುಮಾನ ಎನ್ನುವ ಸುದ್ದಿಯನ್ನು ಪ್ರಕಟಿಸಿದೆ. ಕೆಲ ವರದಿಗಳ ಪ್ರಕಾರ ಹಾರ್ದಿಕ್​ ಪಾಂಡ್ಯ ಬದಲು ರಿಷಭ್​ ಪಂತ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಪಂತ್​ ಮೊದಲ ಆಯ್ಕೆಯ ಕೀಪರ್​ ಅಲ್ಲ ಸಂಜು ಸ್ಯಾಮ್ಸನ್​ ಮೊದಲ ಆಯ್ಕೆಯ ಕೀಪರ್​ ಎನ್ನಲಾಗಿದೆ.​

ಇದನ್ನೂ ಓದಿ T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

ಭಾರತದ ಸಂಭಾವ್ಯರ ಪಟ್ಟಿ

ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್‌/ಕೆ.ಎಲ್​ ರಾಹುಲ್​, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಿವಂ ದುಬೆ, ರಿಂಕು ಸಿಂಗ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌/ಮೊಹಮದ್‌ ಸಿರಾಜ್‌.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಆದರೆ, ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಸಿನಿಮಾ8 mins ago

Rakhi Sawant: ವೈಮನಸ್ಸು ಬಿಟ್ಟು ಮಾಜಿ ಪತಿ ಜೊತೆ ಒಂದಾದ್ರಾ ರಾಖಿ ಸಾವಂತ್‌?

Hassan Pen Drive Case Sexual assault case Prajwal Revanna suspended from JDS
ಕ್ರೈಂ10 mins ago

Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

Khalistani Separatist Gurpatwant Singh Pannun
ಪ್ರಮುಖ ಸುದ್ದಿ18 mins ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ʼರಾʼ ಕೈವಾಡ: ವಾಷಿಂಗ್ಟನ್‌ ವರದಿಗೆ ಭಾರತ ಕಟು ಟೀಕೆ

Ayushman Bharat Diwas 2024
ಆರೋಗ್ಯ28 mins ago

Ayushman Bharat Diwas 2024: 50 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವ ಅಯುಷ್ಮಾನ್ ಭಾರತ್

Hassan Pen Drive Case Revanna and Siddaramaiah pact in Prajwal case Says Pralhad Joshi
ಕ್ರೈಂ51 mins ago

Hassan Pen Drive Case: ಪ್ರಜ್ವಲ್ ಪ್ರಕರಣದಲ್ಲಿ ರೇವಣ್ಣ-ಸಿದ್ದರಾಮಯ್ಯ ಒಪ್ಪಂದ; ಪ್ರಲ್ಹಾದ್ ಜೋಶಿ ಹೇಳಿದ್ದೇನು?

amith shah
ಪ್ರಮುಖ ಸುದ್ದಿ1 hour ago

Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

JNU Campus
ದೇಶ1 hour ago

Physical abuse: JNU ಉಪನ್ಯಾಸಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಭುಗಿಲೆದ್ದ ಆಕ್ರೋಶ

LSG vs MI
ಕ್ರೀಡೆ1 hour ago

LSG vs MI: ಫಿಟ್​ ಆದ ಶರವೇಗದ ಎಸೆತಗಾರ ಮಾಯಾಂಕ್‌ ಯಾದವ್‌; ಮುಂಬೈ ವಿರುದ್ಧ ಕಣಕ್ಕೆ

gold rate today 34
ಪ್ರಮುಖ ಸುದ್ದಿ2 hours ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ಬೆಲೆ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ8 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202424 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌