David Warner: ಪ್ರಚಂಡ ಶತಕದ ಮೂಲಕ ಕೊಹ್ಲಿಯ ದಾಖಲೆ ಸರಿಗಟ್ಟಿದ ಡೇವಿಡ್‌ ವಾರ್ನರ್‌ - Vistara News

ಕ್ರಿಕೆಟ್

David Warner: ಪ್ರಚಂಡ ಶತಕದ ಮೂಲಕ ಕೊಹ್ಲಿಯ ದಾಖಲೆ ಸರಿಗಟ್ಟಿದ ಡೇವಿಡ್‌ ವಾರ್ನರ್‌

ವಾರ್ನರ್​ ಶತಕ ಸಾಹಸದಿಂದ ಆಸೀಸ್​ ತಂಡ ಪಾಕ್​ ವಿರುದ್ಧ 62ರನ್​ಗಳ ಅಮೋಘ ಗೆಲುವು ಸಾಧಿಸಿತು.

VISTARANEWS.COM


on

David Warner brought up his century in just 85 balls
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಾಕಿಸ್ತಾನ(Australia vs Pakistan) ವಿರುದ್ಧದ ಪಂದ್ಯದಲ್ಲಿ ಡೇವಿಡ್​ ವಾರ್ನರ್(David Warner)​ ಅವರು ಶತಕ ಬಾರಿಸುವ ಮೂಲಕ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ವಾರ್ನರ್​ ಶತಕ ಸಾಹಸದಿಂದ ಆಸೀಸ್​ ತಂಡ ಪಾಕ್​ ವಿರುದ್ಧ 62ರನ್​ಗಳ ಅಮೋಘ ಗೆಲುವು ಸಾಧಿಸಿತು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿದ ವಾರ್ನರ್​ ಪಾಕ್​ ಬೌಲರ್​ಗಳನ್ನು ಬೆಂಡೆತ್ತಿದರು. ಚಿನ್ನಸ್ವಾಮಿಯ ಸ್ಟೇಡಿಯಂನ ಮೂಲೆ ಮೂಲೆಗೂ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ನೆರೆದಿದ್ದ ಕ್ರಿಕೆಟ್​ ಅಭಿಮಾನಿಗಳಿಗೆ ಬರಪೂರ ಮನರಂಜನೆ ನೀಡಿದರು. ಅವರ ಬ್ಯಾಟಿಂಗ್‌ ಆರ್ಭಟಕ್ಕೆ 85 ಎಸೆತಗಳಲ್ಲೇ ಶತಕ ಪೂರ್ತಿಗೊಂಡಿತು. ಇದೇ ವೇಳೆ ವಾರ್ನರ್‌ ಅವರಿ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದರು. ಒಂದೇ ತಂಡದ ಎದುರು ಸತತ ನಾಲ್ಕು ಶತಕ ಬಾರಿಸಿದ ವಿಶ್ವದ ಎರಡನೇ ಬ್ಯಾಟರ್‌ ಎನಿಸಿಕೊಂಡರು.

ಡೇವೀಡ್‌ ವಾರ್ನರ್‌ ಅವರು ಪಾಕಿಸ್ತಾನ ವಿರುದ್ಧ 2017ರಲ್ಲಿ ಎರಡು, 2019 ಒಂದು ಮತ್ತು 2023ರಲ್ಲಿ ಒಂದು ಶತಕ ಬಾರಿಸಿ ಪಾಕ್‌ ವಿರುದ್ಧ ಆಡಿದ ಸತತ ನಾಲ್ಕು ಪಂದ್ಯಗಳಲ್ಲಿಯೂ ಶತಕ ಬಾರಿಸಿದ್ದಾರೆ. ವಿರಾಟ್‌ ಕೊಹ್ಲಿ ಅವರು 2017-18ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಸತತ ನಾಲ್ಕು ಶತಕ ಬಾರಿಸಿದ್ದರು.

ಪಾಕ್‌ ವಿರುದ್ಧದ ಪಂದ್ಯದಲ್ಲಿ ವಾರ್ನರ್‌ ಕೇವಲ 124 ಎಸೆತಗಳಲ್ಲಿ 14 ಬೌಂಡರಿ ಮತ್ತು 9 ಸಿಕ್ಸರ್‌ ನೆರವಿನಿಂದ 163 ರನ್‌ ಗಳಿಸಿದರು. ಅವರ ಈ ಸಾಧನೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಒಲಿಯಿತು. ಇದು ವಾರ್ನರ್‌ ಅವರ 21 ನೇ ಏಕದಿನ ಶತಕವಾಗಿದೆ. ವಿಶ್ವಕಪ್‌ನಲ್ಲಿ 5ನೇ ಶತಕವಾಗಿದೆ.

ಜತೆಯಾಟದಲ್ಲಿ ದಾಖಲೆ

ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಆಸ್ಟ್ರೇಲಿಯಾ ಪರ ಅತ್ಯಧಿಕ ಆರಂಭಿಕ ಜೊತೆಯಾಟವನ್ನು (259) ದಾಖಲಿಸಿದ ಸಾಧನೆಗೈದರು. 2011ರ ಮಾರ್ಚ್ 16ರಂದು ಇದೇ ಮೈದಾನದಲ್ಲಿ ಕೆನಡಾ ವಿರುದ್ಧ ಬ್ರಾಡ್ ಹ್ಯಾಡಿನ್ ಹಾಗೂ ಶೇನ್ ವ್ಯಾಟ್ಸನ್ 183 ರನ್ ಗಳಿಸಿದ್ದರು. ಆ ದಾಖಲೆಯನ್ನು ಮಾರ್ಷ್​ ಮತ್ತು ವಾರ್ನರ್​ ಮುರಿದಿದ್ದಾರೆ.

ಇದನ್ನೂ ಓದಿ Aus vs Pak : ಪಾಕ್​ ತಂಡವನ್ನು ಹೀನಾಯವಾಗಿ ಸೋಲಿಸಿದ ಆಸ್ಟ್ರೇಲಿಯಾ

ಪಾಕ್‌ಗೆ ಸೋಲು

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ತೇಲಿಯಾ ತಂಡ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 367 ರನ್ ಬಾರಿಸಿತ್ತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 45.3 ಓವರ್​ಗಳಲ್ಲಿ 305 ರನ್​ಗಳಿಗೆ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು. ಈ ಗೆಲುವಿನ ಬಳಿಕ ಆಸ್ಟ್ರೇಲಿಯಾ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದರೆ, ಪಾಕಿಸ್ತಾನ ತಂಡ ಐದನೇ ಸ್ಥಾನಕ್ಕೆ ಕುಸಿಯಿತು.

ಆಸ್ಟ್ರೇಲಿಯಾ ತಂಡದ ಪರ ಸ್ಪಿನ್ನರ್ ಆ್ಯಡಂ ಜಂಪಾ ಅವರು 53 ರನ್​ಗೆ 4 ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪಾತ್ರ ವಹಿಸಿದರು. ಶಾನ್‌ ಮಾರ್ಷ್‌ ಅವರು 108 ಎಸೆತಗಳಿಂದ 10 ಬೌಂಡರಿ ಮತ್ತು 9 ಸಿಕ್ಸರ್‌ ನೆರವಿನಿಂದ 121 ರನ್‌ ಬಾರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

IND vs ENG Semi Final: ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಲಿಯಾಂಗ್​ ಲಿಂಗ್​ ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ.

VISTARANEWS.COM


on

Koo

ಟರೂಬ/ಪ್ರೊವಿಡೆನ್ಸ್‌: ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಾರತಕ್ಕೆ ಕೊಹ್ಲಿಯದ್ದೇ ಚಿಂತೆ


ಪ್ರತಿ ಐಸಿಸಿ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿಯ ಬ್ಯಾಟ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸದ್ದು ಮಾಡುತ್ತಿಲ್ಲ. ಇದು ಭಾರತ ತಂಡಕ್ಕೆ ದೊಡ್ಡ ಚಿಂತೆ ಉಂಟು ಮಾಡಿದೆ. ಆಡಿದ 7 ಪಂದ್ಯಗಳಲ್ಲಿ 2 ಶೂನ್ಯ ಸುತ್ತಿದ್ದಾರೆ. ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ದಾಟಿದ್ದಾರೆ. ಹೀಗಾಗಿ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಸಿಡಿದು ನಿಲ್ಲಬೇಕಾದುದ ಅನಿವಾರ್ಯತೆ ಇದೆ. ಕೊಹ್ಲಿ ಜತೆಗೆ ಶಿವಂ ದುಬೆ ಕೂಡ ಸಿಡಿದು ನಿಲ್ಲಬೇಕಿದೆ. ಐಪಿಎಲ್​ನಲ್ಲಿ ತೋರಿದ ಬ್ಯಾಟಿಂಗ್​ ಆರ್ಭಟವನ್ನು ದುಬೆ ಈ ಟೂರ್ನಿಯಲ್ಲಿ ಇದುವರೆಗೆ ತೋರಿಸಿಲ್ಲ. ಎಲ್ಲ ಪಂದ್ಯಗಳಲ್ಲಿಯೂ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆ ಉಂಟುಮಾಡುತ್ತಿದ್ದಾರೆ.

ಉಪನಾಯಕ ಹಾರ್ದಿಕ್​ ಪಾಂಡ್ಯ ಅವರು ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದರು. ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಆದರೆ, ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ನೆರವಾಗುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂದು ಪಾಂಡ್ಯ ಬೇಡ ಎಂದವರು ಇಂದು ಪಾಂಡ್ಯ ಇಲ್ಲದೇ ಇದ್ದರೆ ಗೆಲುವು ಕಷ್ಟ ಎನ್ನುತ್ತಿದ್ದಾರೆ. ಕಳೆದ ಆಸೀಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ನಂಬಿಕೆ ಇರಿಸಿದೆ.

ಇದನ್ನೂ ಓದಿ IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

ಇಂಗ್ಲೆಂಡ್​ ಕೂಡ ಬಲಿಷ್ಠ

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಲಿಯಾಂಗ್​ ಲಿಂಗ್​ ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

ಸೇಡಿನ ಪಂದ್ಯ

2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

Continue Reading

ಕ್ರೀಡೆ

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

1983 World Cup: ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​, ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು

VISTARANEWS.COM


on

1983 World Cup
Koo

ಗಯಾನ: ಭಾರತೀಯ ಕ್ರಿಕೆಟಿನ ದಿಕ್ಕನ್ನೇ ಬದಲಿಸಿದ ಈ ಮಹಾ ವಿಜಯಕ್ಕೆ(1983 World Cup) ಮಂಗಳವಾರ 41 ವರ್ಷ ತುಂಬಿತು(1983 WC Win Anniversary). 1983ರ ಜೂ. 25ರಂದು ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್‌, ಭಯಾನಕ ವೆಸ್ಟ್‌ ಇಂಡೀಸ್​ ತಂಡವನ್ನು ಫೈನಲ್‌ನಲ್ಲಿ 43 ರನ್ನುಗಳಿಂದ ಉರುಳಿಸಿದ “ಕಪಿಲ್‌ ಡೆವಿಲ್ಸ್‌’ ಹೊಸ ಇತಿಹಾಸ ಬರೆದ ಅದ್ಭುತ ಕ್ಷಣವದು. ಈ ಸಂಭ್ರಮಕ್ಕೆ 41 ವರ್ಷ ತುಂಬಿದ ನಿಟ್ಟಿನಲ್ಲಿ ಅಂದಿನ ವಿಶ್ವಕಪ್​ ತಂಡದ ಸದಸ್ಯರಾದ ರವಿಶಾಸ್ತ್ರಿ(Ravi Shastri), ಸುನೀಲ್ ಗವಾಸ್ಕರ್(Sunil Gavaskar)​ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ(Roger Binny) ಅವರು ಹಾಲಿ ಟಿ20 ವಿಶ್ವಕಪ್​ ಆಡುತ್ತಿರುವ ಟೀಮ್​ ಇಂಡಿಯಾ ಆಟಗಾರರೊಂದಿಗೆ ಸಂಭ್ರಮಾಚರಣನೆ ನಡೆಸಿದ್ದಾರೆ.

ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​(Rishabh Pant), ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು. ಈ ಸುಂದರ ಕ್ಷಣದ ಫೋಟೊವನ್ನು ರವಿಶ್ರಾಸ್ತ್ರಿ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟನ್ನು ಐಸಿಸಿ ಕೂಡ ಶೇರ್​ ಮಾಡಿದೆ.

ಆ ಕಾಲಕ್ಕೆ ಭಾರತದಲ್ಲಿ ಇನ್ನೂ ಕ್ರಿಕೆಟ್​ ಅಷ್ಟಾಗಿ ಖ್ಯಾತಿ ಪಡೆದಿರಲಿಲ್ಲ. ಭಾರತ ತಂಡವೂ ಕೂಡ ಬಲಿಷ್ಠವಾಗಿರಲಿಲ್ಲ. ಕೇವಲ ಲೆಕ್ಕ ಭರ್ತಿಗೆ ಇದ್ದ ತಂಡ ಎಂದು ಎಲ್ಲರಿಂದಲೂ ಅಪಹಾಸ್ಯಕ್ಕೆ ಒಳಗಾಗಿತ್ತು. ಜತೆಗೆ ಭಾರತೀಯ ಆಟಗಾರರಿಗೂ ಇದೊಂದು ವಿದೇಶ ಪ್ರವಾಸ ಎಂಬ ಭಾವನೆ ಇದ್ದಿತ್ತು. ಆದರೆ ಲಂಡನ್​ನಲ್ಲಿ ನಡೆದದ್ದೇ ಬೇರೆ.

ಫೈನಲ್​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್​ ಎದುರಾದಾಗ ಇಡೀ ವಿಶ್ವವೇ ಮತ್ತೊಮ್ಮೆ ವಿಂಡೀಸ್​ ಚಾಂಪಿಯನ್​ ಆಗಲಿದೆ ಎಂದು ಹೇಳಿದ್ದರು. ಆದರೆ, ಕಪಿಲ್​ದೇವ್​ ನೇತೃತ್ವದ ಭಾರತ ತಂಡ ಅಸಾಧಾರಣ ಪ್ರದರ್ಶನ ತೋರಿ ಹ್ಯಾಟ್ರಿಕ್​​ ಹಾದಿಯಲ್ಲಿದ್ದ ವಿಂಡೀಸ್​ ತಂಡವನ್ನು ಕಟ್ಟಿಹಾಕಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ 1983 World Cup: ಕಪಿಲ್‌ ಪಡೆಯ ಏಕದಿನ ವಿಶ್ವಕಪ್‌ ವಿಜಯ ದಿವಸಕ್ಕೆ 40ರ ಸಂಭ್ರಮ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 183 ರನ್​ಗಳಿಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್​ಗೆ ಛಲ ಬಿಡದ ಮದನ್​ಲಾಲ್​ ಮತ್ತು ಮೊಹಿಂದರ್​ ಅಮರ್​ನಾಥ್​(Mohinder Amarnath) ಉತ್ಕೃಷ್ಟ ಮಟ್ಟದ ಬೌಲಿಂಗ್​ ನಡೆಸಿ ತಲಾ 3 ವಿಕೆಟ್​ ಕೆಡವಿದರು. ಅಂತಿಮವಾಗಿ ಕೆರೆಬಿಯನ್ನರನ್ನು 140 ರನ್​​ಗೆ ಆಲೌಟ್​ ಮಾಡುವ ಮೂಲಕ 43 ರನ್​ಗಳಿಂದ ಗೆಲುವು ಸಾಧಿಸಿ ದೇಶಕ್ಕೆ ಮೊದಲ ಏಕದಿನ ವಿಶ್ವಕಪ್​ ತಂದುಕೊಟ್ಟರು. ನಾಯಕ ಕಪಿಲ್​ದೇವ್​ ಅವರು ಲಾರ್ಡ್ಸ್​ನಲ್ಲಿ ಕಪ್​ ಎತ್ತಿ ಭಾರತದ ವಿಜಯ ಪತಾಕೆ ಹಾರಿಸಿದ್ದರು.

ಅಂದಿನ ಕಪಿಲ್‌ ಪಡೆಯ ಓರ್ವ ಸದಸ್ಯ ಸಯ್ಯದ್‌ ಕಿರ್ಮಾನಿ ಹೇಳಿದಂತೆ “ನಮ್ಮ 1983ರ ವಿಶ್ವಕಪ್‌ ಗೆಲುವು ಮೊದಲ ಪ್ರೀತಿಯಂತೆ, ಯಾವತ್ತೂ ಮರೆಯಲಾಗದ್ದು” ನಿಜಕ್ಕೂ ಈ ಮಾತು ಇಂದಿಗೂ ಮರೆಯಲಾಗದಂತೆ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದುಕೊಂಡಿದೆ.

Continue Reading

ಕ್ರಿಕೆಟ್

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

IND vs ENG: ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

VISTARANEWS.COM


on

IND vs ENG
Koo


ಗಯಾನಾ: ಲೀಗ್‌ ಮತ್ತು ಸೂಪರ್​-8 ಹಂತದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಟಿ20 ವಿಶ್ವಕಪ್‌(T20 World Cup 2024) ನಾಕೌಟ್‌ ಪ್ರವೇಶಿಸಿರುವ ಭಾರತ(IND vs ENG) ತಂಡದ ಮುಂದೀಗ ಸೇಡಿನ ಪಂದ್ಯವೊಂದು ಕಾದು ಕುಳಿತಿದೆ. ನಾಳೆ(ಗುರುವಾರ) ರಾತ್ರಿ ನಡೆಯಲಿರುವ ಸೆಮಿಫೈನಲ್‌(T20 World Cup 2024) ಮುಖಾಮುಖಿಯಲ್ಲಿ ರೋಹಿತ್​ ಶರ್ಮ ಪಡೆ ಬಲಿಷ್ಠ ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ. ದಿನದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ತಂಡ ಸೆಣಸಾಟ ನಡೆಸಲಿದೆ.

ಅಡಿಲೇಡ್​ನಲ್ಲಿ ನಡೆದಿದ್ದ ಕಳೆದ ಟಿ20 ವಿಶ್ವಕಪ್​ ಸೆಮೀ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 6 ವಿಕೆಟ್​ಗೆ 168 ರನ್​ಗಳ ಸಾಧಾರಣ ಮೊತ್ತ​ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಇಂಗ್ಲೆಂಡ್​ 16 ಓವರ್​ಗಳಲ್ಲೇ ವಿಕೆಟ್​ ನಷ್ಟವಿಲ್ಲದೆ 170 ರನ್​ ಗಳಿಸಿ ಗೆದ್ದಿತ್ತು. ಜಾಸ್​ ಬಟ್ಲರ್​(80*) ಮತ್ತು ಅಲೆಕ್ಸ್​ ಹೇಲ್ಸ್​(86*) ಅಜೇಯ ಬ್ಯಾಟಿಂಗ್​ ಆರ್ಭಟದ ಮುಂದೆ ಭಾರತೀಯ ಬೌಲರ್​ಗಳು ಸಂಪೂರ್ಣ ಮಂಕಾದರು. ಭಾರತ ಪರ ವಿರಾಟ್​ ಕೊಹ್ಲಿ ಮತ್ತು ಹಾರ್ದಿಕ್​ ಪಾಂಡ್ಯ ಅರ್ಧಶತಕ ಬಾರಿಸಿದ್ದರು. ಆದರೆ ಈ ಬಾರಿ ಕೊಹ್ಲಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. 2 ಶೂನ್ಯ ಕೂಡ ಸುತ್ತಿದ್ದಾರೆ. ಎರಡಂಕಿ ಮೊತ್ತ ಪೇರಿಸಿದ್ದು ಒಮ್ಮೆ ಮಾತ್ರ.

ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

ಮಳೆ ಬಂದರೆ ಭಾರತಕ್ಕೆ ಲಾಭ


ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಇತ್ತಂಡಗಳ ನಡುವಣ ಈ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ಎಚ್ಚರಿಕೆ ನೀಡಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಈ ಪಂದ್ಯಕ್ಕೆ ಮೀಸಲು ದಿನವಿಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading

ಕ್ರೀಡೆ

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

Inzamam Ul Haq: ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

VISTARANEWS.COM


on

Inzamam Ul Haq
Koo

ಕರಾಚಿ: ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಮಾತಿನಂತೆ ಪಾಕಿಸ್ತಾನದ ತಕರಾರು ಮುಗಿದಂತೆ ಕಾಣುತ್ತಿಲ್ಲ. ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಿಂದ ಹೊರಬಿದ್ದಿರುವುದನ್ನು ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತೋರುತ್ತಿದೆ. ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಇಂಜಮಾಮ್ ಉಲ್ ಹಕ್(Inzamam Ul Haq) ಅವರು ಭಾರತದ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ವಿಶ್ಲೇಷಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಇಂಜಮಾಮ್ ಉಲ್ ಹಕ್ ಈ ಆರೋಪ ಮಾಡಿದ್ದಾರೆ. ಇದೇ ಕಾರ್ಯಕ್ರಮದಲ್ಲಿದ್ದ ಸಲೀಂ ಮಲಿಕ್ ಅವರು ವೇಗಿ ಅರ್ಶ್​ದೀಪ್ ಸಿಂಗ್(Arshdeep Singh) ಅವರ ರಿವರ್ಸ್ ಸ್ವಿಂಗ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಆದರೆ, ಇಂಜಮಾಮ್ ಅವರು ಅರ್ಶ್​ದೀಪ್ ರಿವರ್ಸ್ ಸ್ವಿಂಗ್ ಬಗ್ಗೆ ಅನುಮಾನವಿದೆ ಎಂದು ಹೇಳಿದರು.

“15ನೇ ಓವರ್​ನಲ್ಲಿ ಅರ್ಶದೀಪ್​ ಸಿಂಗ್​ ಬೌಲಿಂಗ್​ ನಡೆಸುವ ವೇಳೆ ಚೆಂಡು ಹೆಚ್ಚು ಸ್ವಿಂಗ್​ ಆಗುತ್ತಿತ್ತು. ನಾನು ಗಮನಿಸಿದ ಹಾಗೆ ಈ ರೀತಿ ಚೆಂಡು ಏಕಾಏಕಿ ಸ್ವಿಂಗ್​ ಆಗಲು ಸಾಧ್ಯವಿಲ್ಲ. ನನ್ನ ಪ್ರಕಾರ ಭಾರತೀಯ ಆಟಗಾರರು 12 ಅಥವಾ 13ನೇ ಓವರ್​ನಲ್ಲಿ ಚೆಂಡಿಗೆ ಶೈನಿಂಗ್​ ಹಚ್ಚಿದಂತೆ ಕಾಣುತ್ತಿದೆ. ಅಂಪೈರ್​ಗಳು ಇದನ್ನು ಸೂಕ್ಷವಾಗಿ ಪರಿಗಣಿಸಬೇಕು. ಇಲ್ಲಿ ಯಾವುದೋ ಮೋಸದಾಟ ನಡೆದಂತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ ಪಾಕ್​ ತಂಡದ ಸರಣಿ ಸೋಲಿನ ರಹಸ್ಯ ಬಯಲು ಮಾಡಿದ ಮಾಜಿ ನಾಯಕ

ಇಂಜಮಾಮ್ ಅವರ ಈ ಆರೋಪಕ್ಕೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಸರಿಯಾದ ತಿಇರುಗೇಟು ನೀಡಿದ್ದಾರೆ. ನೀವು ಮಾಡುತ್ತಿರುವ ಈ ಆರೋಪ ಯಾವ ಕಾರಣಕ್ಕೆ ಎಂದು ಭಾರತೀಯರಿಗೆ ಮಾತ್ರವಲ್ಲ ಬೇರೆ ದೇಶದ ಕ್ರಿಕೆಟಿಗರಿಗು ತಿಳಿದಿದೆ. ಟೂರ್ನಿಯಿಂದ ಹೊರ ಬಿದ್ದರೂ ಕೂಡ ಕೊಂಕು ಬಯಸುವ ನಿಮ್ಮ ಈ ನರಿ ಬುದ್ದಿಯನ್ನು ಮೊದಲು ಬಿಟ್ಟು ಬಿಡಿ ಎಂದಿದ್ದಾರೆ.

ಪಾಕ್​ ತಂಡ ಈ ಬಾರಿ ಆಡಿದ ಟಿ20 ವಿಶ್ವಕಪ್​ ಪಂದ್ಯದಲ್ಲಿ ಕ್ರಿಕೆಟ್​ ಶಿಶು ಅಮೆರಿಕ ವಿರುದ್ಧವೂ ಹೀನಶಯವಾಗಿ ಸೋಲು ಕಂಡಿತ್ತು. ಆಡಿದ 4 ಪಂದ್ಯಗಳಲ್ಲಿ ಕೇವ 2 ಪಂದ್ಯ ಮಾತ್ರ ಗೆದ್ದು ಲೀಗ್​ ಹಂತದಿಂದಲೇ ನಿರ್ಗಮನ ಕಂಡಿತ್ತು. ಈ ಸೋಲು ಪಾಕ್​ನ ಮಾಜಿ ಆಟಗಾರರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಭಾರತದ ಬಿರುದ್ಧ ಇಲ್ಲ ಸಲ್ಲದ ಆರೋಪ ಮಾಡಲಾರಂಭಿಸಿದ್ದಾರೆ.

ಪಾಕಿಸ್ತಾನದ ಮಾಜಿ ಆಟಗಾರರು ಭಾರತೀಯ ಆಟಗಾರರ ಮೇಲೆ ಈ ರೀತಿಯ ಆರೋಪಗಳು ಮಾಡುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ಟೂರ್ನಿಯ ವೇಳೆಯೂ ಇಂತಹ ಹಲವು ಆರೋಪಗಳನ್ನು ಮಾಡಿದ್ದರು. ಭಾರತೀಯ ಆಟಗಾರರು ಬೌಲಿಂಗ್​ ಮತ್ತು ಬ್ಯಾಟಿಂಗ್​ ನಡೆಸುವ ವೇಳೆ ಬೇರೆ ಬೆಂಡನ್ನು ಬಳಸುತ್ತಾರೆ, ಐಸಿಸಿ ಕೂಡ ಭಾರತಕ್ಕೆ ಬೆಂಬಲ ನೀಡುತ್ತಿದೆ ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ್ದರು.

Continue Reading
Advertisement
Gold Rate Today
ಚಿನ್ನದ ದರ19 seconds ago

Gold Rate Today: ಆಭರಣಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ5 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್11 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ16 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ17 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest28 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ31 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್36 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ50 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌