Rishabh Pant | ಆಡದಿದ್ದರೂ ಪರ್ವಾಗಿಲ್ಲ, ಐಪಿಎಲ್​ ವೇಳೆ ಪಂತ್​ ನನ್ನ ಜತೆಗಿರಬೇಕು ಎಂದು ಹೇಳಿದ ಡೆಲ್ಲಿ ಕ್ಯಾಪಿಟಲ್ಸ್​ ಕೋಚ್​​ ರಿಕಿ ಪಾಂಟಿಂಗ್​ - Vistara News

ಕ್ರಿಕೆಟ್

Rishabh Pant | ಆಡದಿದ್ದರೂ ಪರ್ವಾಗಿಲ್ಲ, ಐಪಿಎಲ್​ ವೇಳೆ ಪಂತ್​ ನನ್ನ ಜತೆಗಿರಬೇಕು ಎಂದು ಹೇಳಿದ ಡೆಲ್ಲಿ ಕ್ಯಾಪಿಟಲ್ಸ್​ ಕೋಚ್​​ ರಿಕಿ ಪಾಂಟಿಂಗ್​

ರಿಷಭ್​ ಪಂತ್​ಗೆ ಪರ್ಯಾಯ ಆಟಗಾರರೇ ಇಲ್ಲ ಎಂಬುದಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಹೆಡ್ ಕೋಚ್​ ರಿಕಿ ಪಾಂಟಿಂಗ್​ ಹೇಳಿದ್ದಾರೆ.

VISTARANEWS.COM


on

Rickey ponting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತ ತಂಡದ ವಿಕೆಟ್​ಕೀಪರ್​ ಬ್ಯಾಟರ್ ರಿಷಭ್​ ಪಂತ್​ ಕಾರು ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿಕೊಂಡಿದ್ದಾರೆ. ಅವರಿಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದ್ದಾರೆ. ಈ ಅನಿರೀಕ್ಷಿತ ಅವಘಡದಿಂದಾಗಿ ಅವರು ಹಾಲಿ ಕ್ರಿಕೆಟ್​ ಋತುವಿನಲ್ಲಿ ಆಡುವುದು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ. ಪ್ರಮುಖವಾಗಿ ಕೆಲವೇ ತಿಂಗಳಲ್ಲಿ ಆರಂಭವಾಗಲಿರುವ ಐಪಿಎಲ್ ಹಾಗೂ ಮುಂದಿನ ಏಕ ದಿನ ವಿಶ್ವ ಕಪ್​ನಲ್ಲಿ ಆಡುವುದು ಸಾಧ್ಯವಾಗುವುದಿಲ್ಲ. ಇದು ಡೆಲ್ಲ ಕ್ಯಾಪಿಟಲ್ಸ್​ ಹಾಗೂ ಟೀಮ್​ ಇಂಡಿಯಾ ತಂಡಕ್ಕೆ ದೊಡ್ಡ ಮಟ್ಟದ ನಷ್ಟ ಎನಿಸಿಕೊಂಡಿದೆ.

ಐಸಿಸಿ ವಿಮರ್ಶೆಯ ವೇಳೆ ಮಾತನಾಡಿದ ರಿಕಿ ಪಾಂಟಿಂಗ್​, ಎರಡು ದಿನಗಳ ಹಿಂದೆ ನಾನು ರಿಷಭ್​ ಪಂತ್​ ಜತೆ ಮಾತನಾಡಿದ್ದೆ. ಅವರು ಗುಣಮುಖರಾಗುತ್ತಿದ್ದಾರೆ. ಇದೊಂದು ಆಘಾತಕಾರಿ ಘಟನೆ. ಎಲ್ಲರೂ ಆತಂಕ ಪಡಬೇಕಾದ ಸಂಗತಿ. ಈಗ ಅವರನ್ನು ಗುಣಮುಖರಾಗಲು ಏಕಾಂಗಿಯಾಗಿ ಬಿಡುವುದು ಉತ್ತಮ ಎಂದು ಪಾಂಟಿಂಗ್ ಹೇಳಿದ್ದಾರೆ.

ಅವರು 2023ನೇ ಆವೃತ್ತಿಯ ಐಪಿಎಲ್​ನಲ್ಲಿ ಆಡುವುದು ಸಾಧ್ಯವಿಲ್ಲ ಎಂದು ಅನಿಸುತ್ತದೆ. ಹೀಗಾಗಿ ಅವರ ಪರ್ಯಾಯ ಆಟಗಾರರಿಗೆ ಹುಡುಕಾಟ ನಡೆಸುತ್ತಿದ್ದೇವೆ. ವಾಸ್ತವದಲ್ಲಿ ಅವರಿಗೆ ಪರ್ಯಾಯ ಇನ್ಯಾರೂ ಇಲ್ಲ. ಹೀಗಾಗಿ ರಿಷಭ್​ ಪೂರ್ತಿಯಾಗಿ ಗುಣಮುಖರಾಗದೇ ಹೋದರೂ ಅವರು ತಂಡದ ಜತೆ ಇರುವುದನ್ನು ನಾನು ಬಯಸುತ್ತೇನೆ ಎಂದು ರಿಕಿ ಪಾಂಟಿಂಗ್​ ಹೇಳಿದ್ದಾರೆ.

ಇದನ್ನೂ ಓದಿ | Rishabh pant | ಇನ್ನೆರಡು ವಾರಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ರಿಷಭ್​ ಪಂತ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

T20 World Cup 2024: ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

VISTARANEWS.COM


on

T20 World Cup 2024
Koo

ನವದೆಹಲಿ: ಕೆಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಕೇಳಿಬರುತ್ತಿದ್ದ ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ(Team India) ಪ್ರಕಟಗೊಳ್ಳುವ ವಿಚಾರದಲ್ಲಿ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್(Ajit Agarkar) ಮತ್ತು ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮಾ(Rohit Sharma) ಅವರು ದೆಹಲಿಯಲ್ಲಿ ಇಂದು ಸಭೆ ಸೇರಿ ಆಟಗಾರರ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯದ ಮಾಹಿತಿ ಪ್ರಕಾರ ಆರಂಭಿಕ ಆಟಗಾರನ ಸ್ಥಾನ ಮತ್ತು ವಿಕೆಟ್ ಕೀಪರ್ ಆಯ್ಕೆ ಹಾಗೂ ಆಲ್ ರೌಂಡರ್ ಕುರಿತು ಹೆಚ್ಚಿನ ಚರ್ಚೆಗಳಾಗಲಿದೆ ಎಂದು ತಿಳಿದುಬಂದಿದೆ. ಹಾರ್ದಿಕ್ ಪಾಂಡ್ಯ ಅವರು ಸಂಪೂರ್ಣ ಫಿಟ್​ ಆಗಿದ್ದರೆ ಮಾತ್ರ ಅವರಿಗೆ ಅವಕಾಶ ಎನ್ನಲಾಗಿದೆ. ಮೇ 1ರಂದು ತಂಡ ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳು ಕೂಡ ಮೇ 1ರ ಒಳಗಡೆ ಆಟಗಾರರ ಅಂತಿಮ ಪಟ್ಟಿ ರಚಿಸಿ ಐಸಿಸಿಗೆ ನೀಡಬೇಕಿದೆ. ಇದೇ ಕಾರಣದಿಂದ ಆಯ್ಕೆ ಸಮಿತಿಯು ಭಾರತದ ಮೊದಲ ಸಂಭಾವ್ಯ ತಂಡವನ್ನು ಮೇ 1ರಂದು ಪ್ರಕಟಿಸಲಿದೆ ಎನ್ನಲಾಗಿದೆ. ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

ಚಹಲ್​ಗೆ ಅವಕಾಶ ಅನುಮಾನ


ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೋಚಿಂಗ್ ಸ್ಟಾಫ್‌ ನ ಪ್ರಭಾವಿ ಸದಸ್ಯರಿಗೆ ಚಾಹಲ್ ಆದ್ಯತೆಯ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದಲ್ಲಿ ಮೊದಲ ಆಯ್ಕೆಯಾಗಿದ್ದು, ಮೂರನೇ ಸ್ಪಿನ್ನರ್ ಸ್ಥಾನಕ್ಕೆ ಅಕ್ಷರ್ ಪಟೇಲ್ ಅಥವಾ ರವಿ ಬಿಷ್ಣೋಯಿ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ಸದ್ಯಕ್ಕೆ ಆರಂಭಿಕ ಸ್ಥಾನಕ್ಕೆ ಶುಭಮನ್​ ಗಿಲ್​, ಯಶಸ್ವಿ ಜೈಸ್ವಾಲ್​ ಮತ್ತು ಅಭಿಷೇಕ್​ ಶರ್ಮ, ಆಲ್​ರೌಂಡರ್​ ಕೋಟಾದಲ್ಲಿ ಶಿವಂ ದುಬೆ ಮತ್ತು ಹಾರ್ದಿಕ್​ ಪಾಂಡ್ಯ ನಡುವೆ ತೀವ್ರ ಪೈಪೋಟಿ ಇದೆ. ರೋಹಿತ್​ ಶರ್ಮ ಜತೆ ಕೊಹ್ಲಿ ಇನಿಂಗ್ಸ್​ ಆರಂಭಿಸಲಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ರಿಷಭ್​ ಪಂತ್​ ಅವರು ಮೊದಲ ಆಯ್ಕೆಯ ವಿಕೆಟ್​ ಕೀಪರ್​ ಆಗಿದ್ದರೆ, 2ನೇ ಕೀಪರ್ ಆಯ್ಕೆಗೆ ಒಟ್ಟು 4 ಮಂದಿ ಆಟಗಾರರ ನಡುವೆ ತೀವ್ರ ಸ್ಪರ್ಧೆ ಇದೆ. ರಾಹುಲ್​, ಜಿತೇಶ್​ ಶರ್ಮ, ಇಶಾನ್​ ಕಿಶನ್​ ಮತ್ತು ಸಂಜು ಸ್ಯಾಮ್ಸನ್ ಇವರಲ್ಲಿ ಒಬ್ಬರು ಆಯ್ಕೆಯಾಗಬಹುದು. ಈ ಬಾರಿಯ ಐಪಿಎಲ್‌ನಲ್ಲಿ ಶರವೇಗದ ಎಸೆತಗಳ ಮೂಲಕ ಭಾರೀ ಸಂಚಲನ ಮೂಡಿಸಿದ ಲಕ್ನೋ ತಂಡದ ಮಾಯಾಂಕ್‌ ಯಾದವ್‌ ಮತ್ತು ಹರ್ಷಿತ್​ ರಾಣಾ ಮೀಸಲು ಬೌಲರ್​ಗಳಾಗಿ ತಂಡದೊಂದಿಗೆ ಪ್ರಯಾಣಿಸಬಹುದು. ರವಿಚಂದ್ರನ್ ಅಶ್ವಿನ್ ಮತ್ತು ಶ್ರೇಯಸ್​ ಅಯ್ಯರ್​ಗೆ ಸ್ಥಾನ ಸಿಗುವುದು ಬಹುತೇಕ ಡೌಟ್​ ಎನ್ನಲಾಗಿದೆ.

ಈಗಾಗಲೇ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

Continue Reading

ಕ್ರೀಡೆ

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 Points Table: 17ನೇ ಆವೃತ್ತಿಯ ಐಪಿಎಲ್​ನಲ್ಲಿ ರಾಜಸ್ಥಾನ್​ ರಾಯಲ್ಸ್​ ತಂಡ 16 ಅಂಕ ಗಳಿಸಿ ಪ್ಲೇ ಆಫ್​ ಟಿಕೆಟ್ ಬಹುತೇಕ​ ಖಚಿತಪಡಿಸಿಕೊಂಡಿದೆ.

VISTARANEWS.COM


on

IPL 2024 Points Table
Koo

ಬೆಂಗಳೂರು: ಶನಿವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​(Delhi Capitals) ಮತ್ತು ರಾಜಸ್ಥಾನ್(Rajasthan Royals)​ ರಾಯಲ್ಸ್​ ತಂಡಗಳು ಗೆಲುವು ಸಾಧಿಸಿದರೆ. ಲಕ್ನೋ ಸೂಪರ್​ ಜೈಂಟ್ಸ್(Lucknow Super Giants )​ ಮತ್ತು ಮುಂಬೈ ಇಂಡಿಯನ್ಸ್(Mumbai Indians)​​ ಸೋಲು ಕಂಡಿತು. ಈ ಸೋಲು ಮತ್ತು ಗೆಲುವಿನಿಂದ ಅಂಕಪಟ್ಟಿಯಲ್ಲಿ(IPL 2024 Points Table) ಮಹತ್ವದ ಬದಲಾವಣೆ ಸಂಭವಿಸಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಹೈದರಾಬಾದ್​​85310 (+0.577)
ಲಕ್ನೋ95410 (+0.059)
ಡೆಲ್ಲಿ105510 (0.276)
ಚೆನ್ನೈ8448 (+0.415)
ಗುಜರಾತ್​9458 (-0.974)
ಪಂಜಾಬ್9366 (-0.187)
ಮುಂಬೈ9366 (-0.261)
ಆರ್​ಸಿಬಿ9274 (-0.721)

ರಾಜಸ್ಥಾನ್​ಗೆ 7 ವಿಕೆಟ್​ ಗೆಲುವು


ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​​ ನಡೆಸಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್​ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲುವು ತನ್ನದಾಗಿಸಿಕೊಂಡಿತು. ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ಇದನ್ನೂ ಓದಿ IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

ಡೆಲ್ಲಿಗೆ 10 ರನ್​ ಗೆಲುವು


ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 10 ರನ್​ ಗೆಲುವು ಸಾಧಿಸಿತು. ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

Continue Reading

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

VISTARANEWS.COM


on

IPL 2024
Koo

ಲಖನೌ: ಸಂಜು ಸ್ಯಾಮ್ಸನ್ ಬಾರಿಸಿದ ಅಜೇಯ 71 ರನ್​ (ಅರ್ಧ ಶತಕ) ಹಾಗೂ ಧ್ರುವ್ ಜುರೆಲ್​ ಬಾರಿಸಿದ ಅಜೇಯ 52 ರನ್​ (ಅರ್ಧ ಶತಕ) ನೆರವಿನಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ನ 44ನೇ ಪಂದ್ಯದಲ್ಲಿ (IPL 2024) ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ 7 ವಿಕೆಟ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ತಂಡ ಹಾಲಿ ಆವೃತ್ತಿಯಲ್ಲಿ 8ನೇ ವಿಜಯವನ್ನು ತನ್ನದಾಗಿಸಿಕೊಂಡಿದೆ. ಒಟ್ಟು 16 ಅಂಕಗಳನ್ನು ಪಡೆದಿರುವ ರಾಜಸ್ಥಾನ್ ಬಳಗ ಬಹುತೇಕ ಪ್ಲೇ ಆಫ್ ಹಂತಕ್ಕೇರಿದೆ. ಆದರೆ, ಅದಿನ್ನೂ ಅಧಿಕೃತಗೊಂಡಿಲ್ಲ. ಅತ್ತ ಲಕ್ನೊ ತಂಡ ಸತತ ಎರಡು ಗೆಲುವಿನ ಬಳಿಕ ಸೋಲಿಗೆ ಸಿಲುಕಿದೆ. ಇದು ಆ ತಂಡಕ್ಕೆ ಒಟ್ಟು 9 ಪಂದ್ಯಗಳಲ್ಲಿ 4ನೇ ಸೋಲು. ಆದಾಗ್ಯೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆಯಿತು. ಟಾಸ್ ಗೆದ್ದ ರಾಜಸ್ಥಾನ್ ಆಯ್ಕೆ ಮಾಡಿಕೊಂಡರೆ ಮೊದಲು ಬ್ಯಾಟ್​ ಮಾಡಿದ ಲಕ್ನೊ ಬಳಗ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡ ಇನ್ನೂ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಸಂಜು ಉತ್ತಮ ಬ್ಯಾಟಿಂಗ್​

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ಕಳಪೆ ಆರಂಭ

ಹಿಂದಿನ ಗೆಲುವಿನ ಉತ್ಸಾಹದೊಂದಿಗೆ ಬ್ಯಾಟಿಂಗ್ ಆರಂಭಿಸಿದ ಲಕ್ನೊ ತಂಡಕ್ಕೆ ಕ್ವಿಂಟನ್ ಡಿ ಕಾಕ್​ 8 ರನ್​ಗೆ ಔಟಾಗುವ ಮೂಲಕ ಹಿನ್ನಡೆ ಉಂಟಾಯಿತು. ಕೆ. ಎಲ್ ರಾಹುಲ್ 76 ರನ್​ ಬಾರಿಸುವ ಮೂಲಕ ತಂಡವನ್ನು ಕಾಪಾಡಿದರು. ಆದರೆ, ಹಿಂದಿನ ಪಂದ್ಯದ ಹೀರೊ ಮಾರ್ಕಸ್​ ಸ್ಟೊಯ್ನಿಸ್​ ಶೂನ್ಯಕ್ಕೆ ಔಟಾಗಿ ಹಿನ್ನಡೆ ಉಂಟು ಮಾಡಿದರು. ದೀಪಕ್ ಹೂಡ 50 ರನ್​ ಬಾರಿಸಿದರು. ಕೊನೆಯ ಬ್ಯಾಟರ್​ಗಳ ಸಣ್ಣ ಪುಟ್ಟ ರನ್​ಗಳ ಕೊಡುಗೆಗಳೊಂದಿಗೆ ಸ್ಪರ್ಧಾತ್ಮ ಮೊತ್ತ ಪೇರಿಸಿತು.

Continue Reading

ಕ್ರಿಕೆಟ್

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

KL Rahul: ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಶನಿವಾರ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಸ್ಥಿರ ಪ್ರದರ್ಶನ ಮುಂದವರಿಸಿದ್ದಾರೆ. ಅವರು ಆವೇಶ್​ ಖಾನ್ ಎಸೆತಕ್ಕೆ ಟ್ರೆಂಟ್ ಬೌಲ್ಟ್​ ಹಿಡಿದ ಕ್ಯಾಚ್​ಗೆ ಬಲಿಯಾಗುವ ಮೊದಲು ಪಂದ್ಯಾವಳಿಯಲ್ಲಿ ಆರಂಭಿಕನಾಗಿ 4000 ರನ್​ಗಳ ದಾಖಲೆ ಪೂರೈಸಿದ್ದಾರೆ. ಅವರು ಪಂದ್ಯದಲ್ಲಿ 76 ರನ್ ಗಳಿಸಿದ್ದಾರೆ.

ಲಕ್ನೊ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್​ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಬೇಗನೆ ಕಳೆದುಕೊಂಡರೂ ಎಲ್ಎಸ್ಜಿ ಪಂದ್ಯದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಂಡಿತು. ರಾಹುಲ್​ 31 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಈ ವೇಳೆ ಅವರು ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಐದನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯನ್ನು ಸಾಧಿಸಲು ಅವರು 94 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡರು.

ಶಿಖರ್ ಧವನ್ (6362), ಡೇವಿಡ್ ವಾರ್ನರ್ (5909), ಕ್ರಿಸ್ ಗೇಲ್ (4480) ಮತ್ತು ವಿರಾಟ್ ಕೊಹ್ಲಿ (4041) ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಕತಾಳೀಯವೆಂಬಂತೆ ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ. ಪ್ರಸಕ್ತ ಋತುವಿನಲ್ಲಿ ಅವರು 137.82 ರ ಯೋಗ್ಯ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಒಟ್ಟಾರೆಯಾಗಿ, ರಾಹುಲ್ 127 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ, 46.57 ಸರಾಸರಿಯಲ್ಲಿ 4517* ರನ್ ಗಳಿಸಿದ್ದಾರೆ. ಲಾಭದಾಯಕ ಪಂದ್ಯಾವಳಿಯಲ್ಲಿ ಅವರು ನಾಲ್ಕು ಶತಕಗಳು ಮತ್ತು 36 ಅರ್ಧಶತಕಗಳನ್ನು ಹೊಂದಿದ್ದಾರೆ.

ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

Continue Reading
Advertisement
Mohan Bhagwat
ದೇಶ6 mins ago

Mohan Bhagwat: ಆರ್‌ಎಸ್‌ಎಸ್‌ ಮೀಸಲಾತಿ ಪರ; ಮೋಹನ್‌ ಭಾಗವತ್‌ ದಿಢೀರನೆ ಹೀಗೆ ಹೇಳಿದ್ದೇಕೆ?

Congress instigates bombers We are crushing traitors through NIA PM Narendra Modi
Lok Sabha Election 20249 mins ago

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

Election Commission
ದೇಶ10 mins ago

Election Commission: ಎಎಪಿಯ ಪ್ರಚಾರ ಗೀತೆಗೆ ಬದಲಾವಣೆ ಸೂಚಿಸಿದ ಚುನಾವಣಾ ಆಯೋಗ; ಕಾರಣವೇನು?

T20 World Cup 2024
ಕ್ರೀಡೆ13 mins ago

T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

Foods rich in vitamin D
ದೇಶ19 mins ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ26 mins ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ43 mins ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 202452 mins ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi in Sirsi
Lok Sabha Election 20241 hour ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ವೈರಲ್ ನ್ಯೂಸ್2 hours ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 20241 hour ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ6 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌