Devdutt Padikkal: ಆರೋಗ್ಯ ಸಮಸ್ಯೆಗೆ ಸಡ್ಡು ಹೊಡೆದು ಎದ್ದುಬಂದ ಪಡಿಕ್ಕಲ್​ ಭಾರತ ಟೆಸ್ಟ್​ ಕ್ಯಾಪ್​ ಧರಿಸುವುದು ಖಚಿತ - Vistara News

ಕ್ರೀಡೆ

Devdutt Padikkal: ಆರೋಗ್ಯ ಸಮಸ್ಯೆಗೆ ಸಡ್ಡು ಹೊಡೆದು ಎದ್ದುಬಂದ ಪಡಿಕ್ಕಲ್​ ಭಾರತ ಟೆಸ್ಟ್​ ಕ್ಯಾಪ್​ ಧರಿಸುವುದು ಖಚಿತ

ಬಹುತೇಕರು ದೇವದತ್ತ್​ ಪಡಿಕ್ಕಲ್​ ಅವರನ್ನು ಕನ್ನಡಿಗ ಎಂದು ಕರೆಯುತ್ತಾರೆ. ಆದರೆ, ಪಡಿಕ್ಕಲ್ ಅವರು ಕೇರಳ ಮೂಲದವರು. ಹೌದು, ಪಡಿಕ್ಕಲ್​ ಜನಿಸಿದ್ದು ಕೇರಳ ರಾಜ್ಯದ ಎಡಪ್ಪಲ್ ಎಂಬ ಪಟ್ಟಣದಲ್ಲಿ.

VISTARANEWS.COM


on

Devdutt Padikkal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಇಂಗ್ಲೆಂಡ್ ನಡುವಣ 5ನೇ ಟೆಸ್ಟ್(India vs England 5th Test) ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕರ್ನಾಟಕ ತಂಡದ ಯುವ ಎಡಗೈ ಬ್ಯಾಟರ್​ ದೇವದತ್ತ್​ ಪಡಿಕ್ಕಲ್ (Devdutt Padikkal) ಕಣಕ್ಕಿಳಿಯುವ ಮೂಲಕ ಭಾರತ ಟೆಸ್ಟ್​ಗೆ ಪದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರಿದ ರಜತ್ ಪಾಟೀದರ್​ ಸ್ಥಾನದಲ್ಲಿ ಪಡಿಕ್ಕಲ್​ ಆಡುವುದು ನಿಶ್ಚಿತ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಕೇರಳ ಮೂಲದ ಆಟಗಾರ


ಬಹುತೇಕರು ದೇವದತ್ತ್​ ಪಡಿಕ್ಕಲ್​ ಅವರನ್ನು ಕನ್ನಡಿಗ ಎಂದು ಕರೆಯುತ್ತಾರೆ. ಆದರೆ, ಪಡಿಕ್ಕಲ್ ಕೇರಳ ಮೂಲದವರು. ಹೌದು, ಪಡಿಕ್ಕಲ್​ ಜನಿಸಿದ್ದು ಕೇರಳ ರಾಜ್ಯದ ಎಡಪ್ಪಲ್ ಎಂಬ ಪಟ್ಟಣದಲ್ಲಿ. ಕೇರಳದಲ್ಲಿ ಹುಟ್ಟಿದ್ದರೂ ಕೂಡ ಪಡಿಕ್ಕಲ್ ತನ್ನ ಬಾಲ್ಯ ಕಳೆದಿದ್ದು ಹೈದರಾಬಾದ್​ನಲ್ಲಿ. 11 ವರ್ಷವಿದ್ದಾಗ ಬೆಂಗಳೂರಿಗೆ ಬಂದ ಪಡಿಕ್ಕಲ್​ ಇಲ್ಲಿನ ಸೈಂಟ್ ಜೋಸೆಫ್ ಹೈಸ್ಕೂಲ್ ಸೇರಿ ಇಲ್ಲಿಯೇ ಕ್ರಿಕೆಟ್ ಅಭ್ಯಾಸ ಆರಂಭಿಸಿದರು. ಬಳಿಕ ಕರ್ನಾಟಕ ತಂಡದ ಪರ ತಮ್ಮ ಕ್ರಿಕೆಟ್​ ಜರ್ನಿ ಆರಂಭಿಸಿದರು. ಅವರ ಐಪಿಎಲ್​ ಜರ್ನಿ ಕೂಡ ಆರಂಭವಾದದ್ದು ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡದ ಪರ. ಸದ್ಯ ಪಡಿಕ್ಕಲ್​ ಅಪ್ಟಟ ಕನ್ನಡಿಗ ಕೆ.ಎಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಸದಸ್ಯನಾಗಿದ್ದಾರೆ.

ಸವಾಲುಗಳನ್ನು ಮೆಟ್ಟಿನಿಂತ ಪಡಿಕ್ಕಲ್​


ಪಡಿಕ್ಕಲ್​ ಅವರ ಕ್ರಿಕೆಟ್​ ಜರ್ನಿಯ ಆರಂಭಿಕ ದಿನಗಳು ತುಂಬಾ ಯಶಸ್ಸಿನಿಂದ ಕೂಡಿತ್ತು. ಆದರೆ, ಬಳಿಕ ಅವರು ಅನಾರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಸರಿ ಸುಮಾರು ನಾಲ್ಕು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲಿದ ಅವರು ಒಂದು ವರ್ಷ ಸಂಪೂರ್ಣವಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಏನೇ ಆದರೂ ಕೂಡ ಛಲ ಬಿಡಿದ 23 ವರ್ಷದ ಈ ಕ್ರಿಕೆಟಿಗ ಎಲ್ಲ ಸವಾಲನ್ನು ಮೆಟ್ಟಿ ನಿಂತು ಇದೀಗ ಭಾರತ ಪರ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡುವ ತವಕದಲ್ಲಿದ್ದಾರೆ. ಅನಾರೋಗ್ಯ ಕಾಡದಿದ್ದಿದ್ದರೆ ಅವರು ಮೂರು ವರ್ಷಗಳ ಹಿಂದೆಯೇ ಭಾರತ ಪರ ಟೆಸ್ಟ್​ ಆಡುವ ಸಾಧ್ಯತೆ ಇತ್ತು.

2017ರ ಕೆಪಿಎಲ್ ಸೀಸನ್ ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್ ಬಾರಿಸಿ ಮಿಂಚು ಹರಿಸಿದ್ದರು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ದೇವದತ್ತ್ ಆ ಋತುವಿನ ಎಮರ್ಜಿಂಗ್ ಆಟಗಾರ ಗೌರವ ಪಡೆದಿದ್ದರು 2018ರಲ್ಲಿ ಕೂಚ್ ಬೆಹರ್ ಕೂಟದಲ್ಲಿ ರಾಜ್ಯ ತಂಡದ ಪರ ಮಿಂಚಿನ ಆಟವಾಡಿದ್ದ ಪಡಿಕ್ಕಲ್, ಕೂಟದಲ್ಲಿ 829 ರನ್ ಬಾರಿಸಿದ್ದರು. ಈ ಕಾರಣದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನೀಡುವ ‘ಅತ್ಯುತ್ತಮ ಬ್ಯಾಟ್ಸಮನ್’ ಪ್ರಶಸ್ತಿಗೂ ಪಡಿಕ್ಕಲ್ ಪಾತ್ರರಾಗಿದ್ದರು. 2019-20ರಲ್ಲಿ ಕರ್ನಾಟಕ ರಾಜ್ಯ ಮುಖ್ಯ ತಂಡಕ್ಕೆ ಆಯ್ಕೆಯಾದ ಪಡಿಕ್ಕಲ್ ತಮ್ಮ ಪ್ರದರ್ಶನದಿಂದ ಎಲ್ಲರ ಗಮನ ಸೆಳೆದರು. ಆರಡಿ ಉದ್ದದ ಪಡಿಕ್ಕಲ್ ಆ ಋತುವಿನಲ್ಲಿ 1838 ರನ್ ಗಳಿಸಿ ಕರ್ನಾಟಕ ಪರ ಅತೀ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದರು.

ಇದನ್ನೂ ಓದಿ James Anderson: ಟೆಸ್ಟ್​ನಲ್ಲಿ 700 ವಿಕೆಟ್ ಹೊಸ್ತಿಲಲ್ಲಿರುವ ಆ್ಯಂಡರ್ಸನ್​ ಯಶಸ್ಸಿಗೆ ಜಹೀರ್‌ ಖಾನ್​ ಕೂಡ ಕಾರಣವಂತೆ!

ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ ಅವರನ್ನು 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಖರೀದಿಸಿದ್ದು. ಆದರೆ ಇಡೀ ಆವೃತ್ತಿಯಲ್ಲಿ ಒಂದೇ ಒಂದು ಪಂದ್ಯವಾಡುವ ಅವಕಾಶ ನೀಡದೆ ಬೆಂಚ್ ಕಾಯ್ದಿಸಿತ್ತು. 2020ರಲ್ಲಿ ಯುಎಇನಲ್ಲಿ ನಡೆದ 13ನೇ ಆವೃತ್ತಿಯಲ್ಲಿ ಅವಕಾಶ ಪಡೆದ ಪಡಿಕ್ಕಲ್ ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದ್ದರು. ಆ ಟೂರ್ನಿಯಲ್ಲಿ 473 ರನ್‌ಗಳನ್ನು ಕಲೆಹಾಕಿ ಉದಯೋನ್ಮುಖ ಆಟಗಾರ ಪ್ರಶಸ್ತಿ ಗಳಿಸಿದ್ದರು.

ಕಾಡಿದ ಆರೋಗ್ಯ ಸಮಸ್ಯೆ


2021ರ ಐಪಿಎಲ್‌ನಲ್ಲಿಯೂ ಅವರು 400ಕ್ಕೂ ಹೆಚ್ಚು ರನ್ ಗಳಿಸಿದ್ದರು. ಅದೇ ವರ್ಷ ಶ್ರೀಲಂಕಾ ಎದುರಿನ ಟಿ20 ಸರಣಿಯಲ್ಲಿ ಆಡಲು ಭಾರತ ತಂಡದಲ್ಲಿ ಸ್ಥಾನ ಗಳಿಸಿದ್ದರು. ಅದೇ ವರ್ಷ ಪಡಿಕಲ್ ಆರೋಗ್ಯ ಕೈಕೊಟ್ಟಿತು. ಪಚನಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಕಾಡಿ ದೇಹದ ತೂಕ ಇಳಿದುಹೋಯಿತು. ಚೇತರಿಸಿಕೊಳ್ಳಲು ದೀರ್ಘ ಕಾಲ ಹಿಡಿಯಿತು. ಸುಮಾರು ಒಂದೂವರೆ ವರ್ಷ ಅವರು ಕ್ರಿಕೆಟ್‌ ಮರಳಲು ಶ್ರಮಪಡಬೇಕಾಯಿತು. ಹೀಗಾಗಿ ಅವರನ್ನು ಆರ್​ಸಿಬಿ ತಂಡದಿಂದ ಕೈಬಿಟ್ಟಿತು. ರಾಜಸ್ಥಾನ್​ ತಂಡ ಸೇರಿದ ಅವರು ಇಲ್ಲಿಯೂ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಬಳಿಕ ದೇಶೀಯ ಕ್ರಿಕೆಟ್​ನಲ್ಲಿ ತಮ್ಮ ಬ್ಯಾಟಿಂಗ್​ ಲಯ ಕಂಡುಕೊಂಡು ಈ ಬಾರಿಯ ರಣಜಿ ಟೂರ್ನಿಯಲ್ಲಿ ರಾಜ್ಯ ಪರ ಉತ್ತಮ ರನ್​ ಗಳಿಸಿದ್ದರು. ಗಾಯಗೊಂಡು ಮೂರನೇ ಟೆಸ್ಟ್​ನಿಂದ ರಾಹುಲ್​ ಹೊರ ಬಿದ್ದ ಕಾರಣ ಭಾರತ ತಂಡದಲ್ಲಿ ಸ್ಥಾನ ಪಡೆದ ಪಡಿಕ್ಕಲ್​ ಅಂತಿಮ ಟೆಸ್ಟ್​ನಲ್ಲಿ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಶೇ.90ರಷ್ಟು ಖಚಿತ ಎನ್ನಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

PBKS vs RCB: ಪಂಜಾಬ್​ ಮತ್ತು ಆರ್​ಸಿಬಿ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್​ 17 ಪಂದ್ಯ ಗೆದ್ದರೆ, ಆರ್​ಸಿಬಿ 15 ಪಂದ್ಯಗಳನ್ನು ಗೆದ್ದಿದೆ. ಧರ್ಮಶಾಲಾದಲ್ಲಿ ಒಂದು ಪಂದ್ಯ ಆಡಿದ್ದು, ಈ ಪಂದ್ಯವನ್ನು ಪಂಜಾಬ್​ ಜಯಿಸಿದೆ.

VISTARANEWS.COM


on

PBKS vs RCB
Koo

ಧರ್ಮಶಾಲಾ: ಇಂದು ನಡೆಯುವ ಐಪಿಎಲ್​ನ(IPL 2024) 58ನೇ ಪಂದ್ಯದಲ್ಲಿ ಆರ್​ಸಿಬಿ(PBKS vs RCB) ಮತ್ತು ಪಂಜಾಬ್​ ಕಿಂಗ್ಸ್​ ಸೆಣಸಾಟ ನಡೆಸಲಿದೆ. ಈ ಪಂದ್ಯ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿ(rcb vs pbks weather report) ಕಾಡಿದೆ. ಇದು ಉಭಯ ತಂಡಗಳಿಗೂ ಚಿಂತೆ ಪಡುವಂತೆ ಮಾಡಿದೆ. ಏಕೆಂದರೆ ಎರಡೂ ತಂಡಗಳಿಗೂ ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿದ್ದು ಗೆಲ್ಲಲೇ ಬೇಕಾದ ಒತ್ತಡವಿದೆ.

ಸದ್ಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ ಸಂಜೆಯ ಹೊತ್ತಿಗೆ, ಧರ್ಮಶಾಲಾದ ತಾಪಮಾನವು(dharamsala weather) ಸುಮಾರು 20 ಡಿಗ್ರಿ ಸೆಲ್ಸಿಯಸ್‌ನಲ್ಲಿರಲಿದೆ ಎನ್ನಲಾಗಿದೆ. ರಾತ್ರಿ ವೇಳೆ ಶೇ. 44 ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬುಧವಾರ ಕೂಡ ಭಾರೀ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಇತ್ತಂಡಗಳು ಕೂಡ ಟೂರ್ನಿಯಿಂದ ಹೊರಬೀಳಲಿದೆ.

ಮುಖಾಮುಖಿ


ಪಂಜಾಬ್​ ಮತ್ತು ಆರ್​ಸಿಬಿ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್​ 17 ಪಂದ್ಯ ಗೆದ್ದರೆ, ಆರ್​ಸಿಬಿ 15 ಪಂದ್ಯಗಳನ್ನು ಗೆದ್ದಿದೆ. ಧರ್ಮಶಾಲಾದಲ್ಲಿ ಒಂದು ಪಂದ್ಯ ಆಡಿದ್ದು, ಈ ಪಂದ್ಯವನ್ನು ಪಂಜಾಬ್​ ಜಯಿಸಿದೆ. ಈ ಆವೃತ್ತಿಯಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಈ ಸೋಲಿಗೆ ಸೇಡು ತಿರಿಸಲು ಪಂಜಾಬ್​ ಕಾದು ಕುಳಿತಿದೆ.

ಎಚ್‌ಪಿಸಿಎ ಕ್ರಿಕೆಟ್​ ಸ್ಟೇಡಿಯಂನಲ್ಲಿ ಇದುವರೆಗೆ 12 ಐಪಿಎಲ್​ ಪಂದ್ಯಗಳು ನಡೆದಿವೆ. ಈ ಪೈಕಿ 7 ಪಂದ್ಯಗಳನ್ನು ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದ್ದರೆ, 5 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. 2 ವಿಕೆಟ್​ಗೆ 232 ರನ್​ ಇಲ್ಲಿ ದಾಖಲಾದ ಅತ್ಯಧಿಕ ರನ್​ ಗಳಿಕೆಯಾಗಿದೆ. 2011ರಲ್ಲಿ ಪಂಜಾಬ್​ ಮತ್ತು ಆರ್​ಸಿಬಿ ನಡುವಿನ ಪಂದ್ಯದಲ್ಲಿ ಈ ಮೊತ್ತ ದಾಖಲಾಗಿತ್ತು.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಪಿಚ್​ ರಿಪೋರ್ಟ್​

ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಶನ್‌ ಸ್ಟೇಡಿಯಂ (ಎಚ್‌ಪಿಸಿಎ) ಪ್ರಕೃತಿಯ ಅತ್ಯಂತ ರಮಣೀಯ ಸ್ಟೇಡಿಯಂ ಆಗಿದ್ದು, ಹಿಮಾಲಯ ಶ್ರೇಣಿಯಲ್ಲಿ ತಲೆಯೆತ್ತಿ ನಿಂತಿದೆ. ಸಮುದ್ರ ಮಟ್ಟದಿಂದ 1,317 ಮೀ. ಎತ್ತರದಲ್ಲಿದೆ. ಅಡಿಲೇಡ್‌ ಓವಲ್‌, ನ್ಯೂಜಿಲ್ಯಾಂಡ್​ ಸ್ಟೇಡಿಯಂಗಳಂತೆ ಇದು ಕೂಡ ಚಿತ್ರಸದೃಶವಾಗಿದೆ. 23 ಸಾವಿರದಷ್ಟು ವೀಕ್ಷಕರ ಸಾಮರ್ಥ್ಯ ಹೊಂದಿರುವ ಈ ಸ್ಟೇಡಿಯಂ ಪ್ರಕೃತಿಗೆ ತೆರೆದುಕೊಂಡಿದೆ. ರಾತ್ರಿ ಪಂದ್ಯ ನಡೆಯುವ ಕಾರಣ ಇಲ್ಲಿ ಹುಳದ ಕಾಟ ಕೂಡ ಹೆಚ್ಚಾಗಿ ಕಾಡಲಿದೆ.

ಡು ಪ್ಲೆಸಿಸ್ ಆಡುವುದು ಅನುಮಾನ


ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್​ ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದು ಈ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ. ಒಂದೊಮ್ಮೆ ಅವರು ಪಂದ್ಯದಿಂದ ಇಂಪ್ಯಾಕ್ಟ್​ ಆಟಗಾರನಾಗಿ ಕೇವಲ ಬ್ಯಾಟಿಂಗ್​ ಮಾಡುವ ಸಾಧ್ಯತೆ ಇದೆ. ವಿರಾಟ್​ ಕೊಹ್ಲಿ ಹಂಗಾಮಿ ನಾಯಕನಾಗಿ ತಂಡವನ್ನು ಮುನ್ನಡೆಸಬಹುದು.

ಸಂಭಾವ್ಯ ತಂಡಗಳು

ಪಂಜಾಬ್​ ಕಿಂಗ್ಸ್​: ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್ (ನಾಯಕ), ರಿಲೀ ರೊಸೊ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ವಿಲ್ ಜಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯ್ ಕುಮಾರ್ ವೈಶಾಕ್.

Continue Reading

ಕ್ರಿಕೆಟ್

Viral Video: ಪಂದ್ಯ ಸೋತ ಸಿಟ್ಟಿನಲ್ಲಿ ರಾಹುಲ್​ಗೆ ಮೈದಾನದಲ್ಲೇ ಬೈದ ಲಕ್ನೋ ತಂಡದ ಮಾಲಿಕ

Viral Video: ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯು ಕೂಡ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ.

VISTARANEWS.COM


on

viral video
Koo

ಹೈದರಾಬಾದ್​: ಲಕ್ನೋ ಸೂಪರ್​ ಜೈಂಟ್ಸ್(Lucknow Super Giants) ತಂಡ ಬುಧವಾರ ನಡೆದ ಐಪಿಎಲ್​ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತು. ಈ ಸೋಲಿನಿಂದಾಗಿ ತಂಡದ ಪ್ಲೇ ಆಫ್​ ಹಾದಿ ದುರ್ಗಮಗೊಂಡಿದೆ. ತಂಡದ ಈ ಕಳಪೆ ಪ್ರದರ್ಶನ ಕಂಡು ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಯ ರಾಹುಲ್(KL Rahul)​ ಜತೆ ಜಗಳವಾಡಿದ್ದಾರೆ. ಇದರ ವಿಡಿಯೊ ವೈರಲ್(Viral Video)​ ಆಗಿದೆ.

ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯು ಕೂಡ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿಯುತ್ತದೆ. ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ಈ ದೃಶ್ಯದಲ್ಲಿ ಕಾಣಬಹುದಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನು ಗಮನಿಸಿರುವ ನೆಟ್ಟಿಗರು ಇವರಿಬ್ಬರು ಜಗಳವಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

ಈ ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿ ಕೇವಲ 19 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು.

ಅಭಿಷೇಕ್​ ಶರ್ಮ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅದರಲ್ಲೂ ಹೆಡ್​ ಕನ್ನಡಿಗ ಕೃಷ್ಣಪ್ಪ ಗೌತಮ್​ ಅವರಿಗೆ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಚಳಿ ಬಿಡಿಸಿದರು. 30 ಎಸೆತ ಎದುರಿಸಿದ ಹೆಡ್​ ತಲಾ 8 ಸಿಕ್ಸರ್​ ಮತ್ತು ಬೌಂಡರಿ ಸಿಡಿಸಿ ಅಜೇಯ 89 ರನ್​ ಬಾರಿಸಿದರು. ಅಭಿಷೇಕ್​ ಶರ್ಮ 8 ಬೌಂಡರಿ ಮತ್ತು 6 ಸಿಕ್ಸರ್​ ನೆರವಿನಿಂದ ಅಜೇಯ 75 ರನ್​ ಬಾರಿಸಿ ತಂಡದ ಜಯ ಸಾರಿದರು.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ತಂಡದ ಪವರ್​ ಪ್ಲೇ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. ರನ್​ ಗಳಿಸಲು ಪರದಾಡಿದ ಕ್ವಿಂಟನ್​ ಡಿ ಕಾಕ್(2) ರನ್​ಗೆ ವಿಕೆಟ್​ ಕಳೆದುಕೊಂಡರೆ, ಇದರ ಬೆನ್ನಲ್ಲೇ ಮಾರ್ಕಸ್​ ಸ್ಟೋಯಿನಿಸ್​ 3 ರನ್​ ಗಳಿಸಿ ಪೆವಿಲಿಯನ್​ ಕಡೆಗೆ ನಡೆದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತು. ಪವರ್​ ಪ್ಲೇಯಲ್ಲಿ ದಾಖಲಾದದ್ದು ಕೇವಲ 27 ರನ್​ ಮಾತ್ರ. ಇದು ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆಯಾಯಿತು.

ನಾಯಕ ರಾಹುಲ್​ ಕೂಡ ಅತ್ಯಂತ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟು 33 ಎಸೆತಗಳಿಂದ 29 ರನ್​ ಬಾರಿಸಿದರು. ಬಾರಿಸಿದ್ದು ತಲಾ ಒಂದು ಸಿಕ್ಸರ್​ ಮತ್ತು ಬೌಂಡರಿ ಮಾತ್ರ. 4ನೇ ವಿಕೆಟ್​ಗೆ ಆಡಲು ಬಂದ ಕೃಣಾಲ್​ ಪಾಂಡ್ಯ ಮಧ್ಯಮ ಕ್ರಮಾಂದಲ್ಲಿ ಸಣ್ಣ ಮಟ್ಟದ ಹೋರಾಟ ಸಂಘಟಿಸಿ 2 ಸಿಕ್ಸರ್​ ಸಿಡಿಸಿ 24 ರನ್​ ಗಳಿಸಿ ಪ್ಯಾಟ್​ ಕಮಿನ್ಸ್​ ಅವರ ನೇರ ಥ್ರೋಗೆ ರನೌಟ್​ ಆದರು. ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದದ್ದು ಆಯುಷ್​ ಬದೋನಿ ಮತ್ತು ನಿಕೋಲಸ್​ ಪೂರನ್​. ಉಭಯ ಆಟಗಾರರು ಹೈದರಾಬಾದ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 5ನೇ ವಿಕೆಟ್​ಗೆ ಮುರಿಯದ 99 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು. ಹೀಗಾಗಿ ತಂಡ 150ರ ಗಡಿ ದಾಡಿತು.

Continue Reading

ಕ್ರೀಡೆ

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

IPL 2024 Points Table: ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು.

VISTARANEWS.COM


on

IPL 2024 - Points Table
Koo

ಹೈದರಾಬಾದ್​: ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ ವಿರುದ್ಧ 10 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಬಹುತೇಕ ಪ್ಲೇ ಆಫ್​ ಪ್ರವೇಶಿಸುವುದು ಖಚಿತ. ಹೈದರಾಬಾದ್​ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ಮುಖಾಮುಖಿಯಾಗಲಿವೆ. ಪ್ಲೇ ಆಫ್​ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​118316 (+1.453)
ರಾಜಸ್ಥಾನ್​ ರಾಯಲ್ಸ್​​​118316 (+0.476)
ಚೆನ್ನೈ​​116514 (+0.700)
ಹೈದರಾಬಾದ್​116512 (-0.065)
ಡೆಲ್ಲಿ126612 (-0.316)
ಲಕ್ನೋ116512 (-0.371)
ಆರ್​ಸಿಬಿ11478 (-0.049)
ಪಂಜಾಬ್​10468 (-0.062)
ಮುಂಬೈ12488 (-0.212)
ಗುಜರಾತ್​11478 (-1.320)

ಲಕ್ನೋಗೆ ಸೋಲು


ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು.

ಇದನ್ನೂ ಓದಿ IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

ಒಟ್ಟು 30 ಎಸೆತ ಎದುರಿಸಿದ ಹೆಡ್​ 8 ಸೊಗಸಾದ ಸಿಕ್ಸರ್​ ಮತ್ತು 8 ಬೌಂಡರಿ ನೆರವಿನಿಂದ ಅಜೇಯ 89 ರನ್​ ಬಾರಿಸಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಇವರ ಜತೆಗಾರ ಅಭಿಷೇಕ್​ ಶರ್ಮ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಅಜೇಯ 75 ರನ್​ ಬಾರಿಸಿದರು. ಈ ಜೋಡಿಯ ಬ್ಯಾಟಿಂಗ್​ ಆರ್ಭಟದಿಂದಾಗಿ ಪವರ್​ ಪ್ಲೇ ಮುಕ್ತಾಯಕ್ಕೆ ತಂಡಕ್ಕೆ ವಿಕೆಟ್​ ನಷ್ಟವಿಲ್ಲದೆ 107 ರನ್​ ಹರಿದು ಬಂತು. 

Continue Reading

ಕ್ರೀಡೆ

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

SRH vs LSG: ಲಕ್ನೋ ಸೂಪರ್​ ಜೈಂಟ್ಸ್(SRH vs LSG)​ ವಿರುದ್ಧದ ಪಂದ್ಯದಲ್ಲಿ 19 ಎಸೆತಗಳಿಂದ ಅರ್ಧಶತಕ ಬಾರಿಸಿದ ಟ್ರಾವಿಸ್​ ಹೆಡ್​ ಪವರ್​ ಪ್ಲೇಯಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ 2ನೇ ಆಟಗಾರ ಎಂಬ ದಾಖಲೆ ಬರೆದರು.

VISTARANEWS.COM


on

SRH vs LSG
Koo

ಹೈದರಾಬಾದ್​: ಲಕ್ನೋ ಸೂಪರ್​ ಜೈಂಟ್ಸ್(SRH vs LSG)​ ವಿರುದ್ಧದ ಪಂದ್ಯದಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಯನ್ನೇ ಸುರಿಸಿದ ಸನ್​ರೈಸರ್ಸ್​ ಹೈದರಾಬಾದ್​ ತಂಡದ ಆರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್(Travis Head)​, ತಮ್ಮ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಐಪಿಎಲ್​ನಲ್ಲಿ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.

ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿ ಕೇವಲ 19 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಈ ಮೂಲಕ ಪವರ್​ ಪ್ಲೇಯಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ 2ನೇ ಆಟಗಾರ ಎನಿಸಿಕೊಂಡರು. ದಾಖಲೆ ಡೇವಿಡ್​ ವಾರ್ನರ್​(6) ಹೆಸರಿನಲ್ಲಿದೆ. ಹೆಡ್​ 4 ಬಾರಿ ಈ ಸಾಧನೆ ಮಾಡಿದರು. ಇದು ಮಾತ್ರವಲ್ಲದೆ, ಈ ಈ ಆವೃತ್ತಿಯಲ್ಲಿ ಹೆಡ್​ 16 ಎಸೆತಗಳಿಂದ ಬಾರಿಸಿದ ಮೂರನೇ ಅರ್ಧಶತ ಇದಾಗಿದೆ.

ಪವರ್​ ಪ್ಲೇಯಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಬ್ಯಾಟರ್​ಗಳು


ಡೇವಿಡ್​ ವಾರ್ನರ್​-6

ಟ್ರಾವಿಸ್​ ಹೆಡ್​-4

ಸುನೀಲ್​ ನರೈನ್​-3

ಕ್ರಿಸ್​ ಗೇಲ್​-3

ಒಟ್ಟು 30 ಎಸೆತ ಎದುರಿಸಿದ ಹೆಡ್​ 8 ಸೊಗಸಾದ ಸಿಕ್ಸರ್​ ಮತ್ತು 8 ಬೌಂಡರಿ ನೆರವಿನಿಂದ ಅಜೇಯ 89 ರನ್​ ಬಾರಿಸಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಇವರ ಜತೆಗಾರ ಅಭಿಷೇಕ್​ ಶರ್ಮ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಅಜೇಯ 75 ರನ್​ ಬಾರಿಸಿದರು. ಈ ಜೋಡಿಯ ಬ್ಯಾಟಿಂಗ್​ ಆರ್ಭಟದಿಂದಾಗಿ ಪವರ್​ ಪ್ಲೇ ಮುಕ್ತಾಯಕ್ಕೆ ತಂಡಕ್ಕೆ ವಿಕೆಟ್​ ನಷ್ಟವಿಲ್ಲದೆ 107 ರನ್​ ಹರಿದು ಬಂತು. ಸದ್ಯ ಹೈದರಾಬಾದ್​ ಈ ಗೆಲುವಿನೊಂದಿಗೆ 14 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಮೂರನೇ ಸ್ಥಾನಿಯಾಗಿದ್ದ ಚೆನ್ನೈ 4ನೇ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

ಈ ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ತಂಡ ಪವರ್​ ಪ್ಲೇಯಲ್ಲಿ ವೈಫಲ್ಯ ಕಂಡು 2 ವಿಕೆಟ್​ಗೆ ಕೇವಲ 27 ರನ್​ ಗಳಿಸಿ ಸಂಕಷ್ಟಕ್ಕೆ ಸಿಲುಕಿತು. ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದದ್ದು ಆಯುಷ್​ ಬದೋನಿ ಮತ್ತು ನಿಕೋಲಸ್​ ಪೂರನ್​. ಉಭಯ ಆಟಗಾರರು ಹೈದರಾಬಾದ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 5ನೇ ವಿಕೆಟ್​ಗೆ ಮುರಿಯದ 99 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು. ಹೀಗಾಗಿ ತಂಡ 150ರ ಗಡಿ ದಾಡಿತು. ಬದೋನಿ 30 ಎಸೆತ ಎದುರಿಸಿ 55 ರನ್​ ಬಾರಿಸುವ ಮೂಲಕ ಅರ್ಧಶತಕ ಪೂರ್ತಿಗೊಳಿಸಿದರು. ನಿಕೋಲಸ್​ ಪೂರನ್​ 26 ಎಸೆತಗಳಿಂದ 48 ರನ್​ ಗಳಿಸಿದರು. ಹೈದರಾಬಾದ್​ ಪರ ಅನುಭವಿ ಭುವನೇಶ್ವರ್ ಕುಮಾರ್​ 2 ವಿಕೆಟ್​ ಪಡೆದರೆ, ಕಮಿನ್ಸ್​ 1 ವಿಕೆಟ್​ ಕಿತ್ತರು.

Continue Reading
Advertisement
gadag crime murder case
ಕ್ರೈಂ11 mins ago

Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ!

PBKS vs RCB
ಕ್ರೀಡೆ17 mins ago

PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

Viral News
ವೈರಲ್ ನ್ಯೂಸ್42 mins ago

Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

viral video
ಕ್ರಿಕೆಟ್50 mins ago

Viral Video: ಪಂದ್ಯ ಸೋತ ಸಿಟ್ಟಿನಲ್ಲಿ ರಾಹುಲ್​ಗೆ ಮೈದಾನದಲ್ಲೇ ಬೈದ ಲಕ್ನೋ ತಂಡದ ಮಾಲಿಕ

Cancer Causing Chemicals
ವಿದೇಶ53 mins ago

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

hd revanna jailed 2
ಕ್ರೈಂ1 hour ago

HD Revanna Jailed: ಇಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಹೆಚ್.ಡಿ ರೇವಣ್ಣ ಭವಿಷ್ಯ ನಿರ್ಧಾರ

Jyothi Rai clarity For torturing on indecent videos
ಕಿರುತೆರೆ1 hour ago

Jyothi Rai: ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಹೀಗಿದೆ!

IPL 2024 - Points Table
ಕ್ರೀಡೆ1 hour ago

IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

Reservation Row
Lok Sabha Election 20241 hour ago

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Gurpatwant Singh Pannun
ವಿದೇಶ2 hours ago

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌