Dhayn Chand Khel Ratna | ಕ್ರೀಡಾ ಕ್ಷೇತ್ರದ ಅತ್ಯುನ್ನತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಸ್ವೀಕರಿಸಿದ ಶರತ್‌ ಕಮಾಲ್‌ - Vistara News

Latest

Dhayn Chand Khel Ratna | ಕ್ರೀಡಾ ಕ್ಷೇತ್ರದ ಅತ್ಯುನ್ನತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಸ್ವೀಕರಿಸಿದ ಶರತ್‌ ಕಮಾಲ್‌

ಟೇಬಲ್‌ ಟೆನಿಸ್‌ ಪಟು ಅಚಂತ ಶರತ್‌ ಕಮಾಲ್‌ ಅವರು ಬುಧವಾರ ಪ್ರತಿಷ್ಠಿತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ (Dhayn Chand Khel Ratna) ಭಾಜನರಾದರು.

VISTARANEWS.COM


on

achanta sharath kamal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಹಿರಿಯ ಟೇಬಲ್‌ ಟೆನಿಸ್‌ ಪಟು ಅಚಂತ ಶರತ್‌ ಕಮಾಲ್‌ ಅವರು ೨೦೨೨ನೇ ಸಾಲಿನ ಪ್ರತಿಷ್ಠಿತ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿಗೆ (Dhayn Chand Khel Ratna) ಭಾಜನರಾದರು. ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ತಮಿಳುನಾಡು ಮೂಲದ ಶರತ್‌ ಕಮಾಲ್‌ ಅವರು ಬರ್ಮಿಂಗ್ಹಮ್‌ನಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಮೂರು ಚಿನ್ನ ಸೇರಿದಂತೆ ಒಟ್ಟಾರೆ ನಾಲ್ಕು ಪದಕಗಳನ್ನು ಗೆದ್ದಿದ್ದರು. ಜತೆಗೆ ಟಿಟಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದರು. ಹೀಗಾಗಿ ಅವರನ್ನು ದೇಶದ ಅತ್ಯನ್ನತ ಕ್ರೀಡಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಉಳಿದಂತೆ ಲಾಂಗ್‌ಜಂಪ್‌ ಪಟು ಎಲ್ದೋಸ್‌ ಪೌಲ್‌, ಸ್ಟೀಪಲ್‌ಚೇಸ್‌ ಸ್ಪರ್ಧಿ ಅವಿನಾಶ್‌ ಸಬ್ಲೆ, ಬ್ಯಾಡ್ಮಿಂಟನ್‌ ಪಟು ಲಕ್ಷ್ಯ ಸೇನ್‌, ಬಾಕ್ಸರ್‌ ನಿಖತ್‌ ಜರೀನ್‌ ಸೇರಿದಂತೆ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಸಾಧನೆ ಮಾಡಿದ್ದ ಹಲವರು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.

ಅತ್ಯುನ್ನತ ಕ್ರೀಡಾ ಪ್ರಶಸ್ತಿ ಪಡೆದವರ ಪಟ್ಟಿ ಈ ಕೆಳಗಿನಂತಿವೆ.

ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಅಚಂತ ಶರತ್​ ಕಮಾಲ್​ಟೆಬಲ್​ ಟೆನಿಸ್​

ಅರ್ಜುನ ಪ್ರಶಸ್ತಿ ಪಡೆದವರ ಪಟ್ಟಿ

ಸೀಮಾ ಪುನಿಯಾಅಥ್ಲೆಟಿಕ್ಸ್
ಎಲ್ದೋಸ್ ಪಾಲ್ಅಥ್ಲೆಟಿಕ್ಸ್
ಅವಿನಾಶ್ ಮುಕುಂದ್ ಸಬ್ಲೆಅಥ್ಲೆಟಿಕ್ಸ್
ಲಕ್ಷ್ಯ ಸೇನ್ಬ್ಯಾಡ್ಮಿಂಟನ್​
ಎಚ್​.ಎಸ್​ ಪ್ರಣಯ್ಬ್ಯಾಡ್ಮಿಂಟನ್
ಅಮಿತ್​ ಪಂಗಾಲ್​ಬಾಕ್ಸಿಂಗ್
ನಿಖತ್ ಜರೀನ್ಬಾಕ್ಸಿಂಗ್
ಪ್ರದೀಪ್ ಕುಲಕರ್ಣಿಚೆಸ್
ಆರ್. ಪ್ರಜ್ಞಾನಂದಚೆಸ್
ದೀಪ್​ ಗ್ರೇಸ್ ಎಕ್ಕಾಹಾಕಿ
ಸುಶೀಲಾ ದೇವಿಜೂಡೋ
ಸಾಕ್ಷಿ ಕುಮಾರಿಕಬಡ್ಡಿ
ನಯನ್ ಮೋನಿ ಸೈಕಿಯಾಲಾನ್ ಬೌಲ್ಸ್‌
ಸಾಗರ್ ಕೈಲಾಸ್ ಓವಲ್ಕರ್ಮಲ್ಲಕಂಬ
ಎಲವೆನಿಲ್ ವಲರಿವನ್ಶೂಟಿಂಗ್​
ಓಂಪ್ರಕಾಶ್ ಮಿಥರ್ವಾಲ್ಶೂಟಿಂಗ್​
ಶ್ರೀಜಾ ಅಕುಲ್​ಟೇಬಲ್​ ಟೆನಿಸ್​
ವಿಕಾಸ್ ಠಾಕೂರ್ವೇಟ್​ಲಿಫ್ಟಿಂಗ್​
ಅಂಶುಕುಸ್ತಿ
ಸರಿತಾಕುಸ್ತಿ
ಪರ್ವೀನ್ವುಶು
ಮಾನಸಿ ಜೋಶಿಪ್ಯಾರಾ ಬ್ಯಾಡ್ಮಿಂಟನ್
ತರುಣ್ ಧಿಲ್ಲೋನ್ಪ್ಯಾರಾ ಬ್ಯಾಡ್ಮಿಂಟನ್
ಸ್ವಪ್ನಿಲ್ ಸಂಜಯ್ ಪಾಟೀಲ್ಪ್ಯಾರಾ ಸ್ವಿಮ್ಮಿಂಗ್
ಜೆರ್ಲಿನ್ ಅನಿಕಾ ಜೆಡೆಫ್ ಬ್ಯಾಡ್ಮಿಂಟನ್

ದ್ರೋಣಾಚಾರ್ಯ ಪ್ರಶಸ್ತಿ ಪಟ್ಟಿ

ಜೀವನ್ಜೋತ್ ಸಿಂಗ್ ತೇಜಾಆರ್ಚರಿ
ಮೊಹಮ್ಮದ್ ಅಲಿ ಕಮರ್ಬಾಕ್ಸಿಂಗ್​
ಸುಮಾ ಸಿದ್ಧಾರ್ಥ್ ಶಿರೂರ್ಪ್ಯಾರಾ ಶೂಟಿಂಗ್
ಸುಜೀತ್ ಮಾನ್ಕುಸ್ತಿ

ಜೀವಮಾನ ಪ್ರಶಸ್ತಿ ಪಟ್ಟಿ

ದಿನೇಶ್ ಜವಾಹರ್ ಲಾಡ್ಕ್ರಿಕೆಟ್​
ಬಿಮಲ್ ಪ್ರಫುಲ್ಲ ಘೋಷ್ಫುಟ್ಬಾಲ್
ರಾಜ್ ಸಿಂಗ್ಕುಸ್ತಿ

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ

ಅಶ್ವಿನಿ ಅಕ್ಕುಂಜೆಅಥ್ಲೆಟಿಕ್ಸ್
ಧರಂವೀರ್ ಸಿಂಗ್ಹಾಕಿ
ಬಿ ಸಿ ಸುರೇಶ್ಕಬಡ್ಡಿ
ನಿರ್ ಬಹದ್ದೂರ್ ಗುರುಂಗ್ಪ್ಯಾರಾ ಅಥ್ಲೆಟಿಕ್ಸ್

ಇದನ್ನೂ ಓದಿ | IND VS NZ | ಮಳೆಯಿಂದ ಅಂತಿಮ ಪಂದ್ಯ ರದ್ದು; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

IPL 2024 : ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

VISTARANEWS.COM


on

IPL 2024
Koo

ನವದೆಹಲಿ: ಆಧುನಿಕ ಕ್ರಿಕೆಟ್​​ನಲ್ಲಿ ಪವರ್ ಹಿಟ್ಟಿಂಗ್ ಬ್ಯಾಟಿಂಗ್​ ಪ್ರವೃತ್ತಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳ ಗಾತ್ರದ ಪ್ರಾಮುಖ್ಯತೆಯನ್ನು ಕುಗ್ಗಿಸುತ್ತದೆ ಎಂದು ರಾಜಸ್ಥಾನ್ ರಾಯಲ್ಸ್ (Rajastan Royals) ಪರ ಆಡುವ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಹೇಳಿದ್ದಾರೆ. ಇದು ಆಟವನ್ನು ಹೆಚ್ಚು ಏಕಪಕ್ಷೀಯವಾಗಿಸಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಲಿ ಐಪಿಎಲ್​ನಲ್ಲಿ (IPL 2024) ಬೃಹತ್​​ ಮೊತ್ತಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರು ಈ ಮಾತನ್ನು ಉಲ್ಲೇಖಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

ಹಿಂದಿನ ದಿನಗಳಲ್ಲಿ ನಿರ್ಮಿಸಲಾದ ಕ್ರೀಡಾಂಗಣಗಳು ಆಧುನಿಕ ದಿನಗಳಲ್ಲಿ ಪ್ರಸ್ತುತವಲ್ಲ. ಆಗ ಬಳಸಲಾಗುತ್ತಿದ್ದ ಬ್ಯಾಟ್ ಗಳನ್ನು ಈಗ ಉಪಯೋಗಿಸುತ್ತಿಲ್ಲ. ಪ್ರಾಯೋಜಕರ ಎಲ್ಇಡಿ ಬೋರ್ಡ್​​ಗಳನ್ನು ಬಳಸುವುದರಿಂದ, ಬೌಂಡರಿ ಲೈನ್​ 10 ಗಜಗಳಷ್ಟು ಗಾತ್ರ ಚಿಕ್ಕದಾಗಿದೆ. ಹೀಗಾಗಿ ಬೌಲರ್​ಗಳು ದಂಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಮಾನಸಿಕ ಉತ್ತೇಜನದ ಅಗತ್ಯವಿದೆ ಎಂದು ಆರ್​ಆರ್​ ಪ್ರಚಾರ ಕಾರ್ಯಕ್ರಮದಲ್ಲಿ ಅಶ್ವಿನ್ ಹೇಳಿದರು.

ಪ್ರತಿಭಾವಂತ ಬೌಲರ್ ತನ್ನನ್ನು ತಾನು ಸ್ಥಾಪಿಸಿಕೊಳ್ಳುತ್ತಾನೆ. ತನ್ನ ಆವಿಷ್ಕಾರಗಳೊಂದಿಗೆ ಮೈದಾನದ ಉಳಿದ ಭಾಗಗಳಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳುತ್ತಾನೆ ಎಂದು ಅಶ್ವಿನ್ ಹೇಳಿದ್ದಾರೆ. ಇದೇ ವೇಳೆ ಅವರು ಚೆಂಡನ್ನು ಹೊಡೆಯುವ ಬ್ಯಾಟರ್​ಗಳ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್​​ ಬೌಲಿಂಗ್ ದಾಳಿಯು ಇತರ ಕೆಲವು ತಂಡಗಳಂತೆ ತೊಂದರೆ ಅನುಭವಿಸಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬೌಲರ್​ಗಳು ರನ್ ಬಿಟ್ಟುಕೊಟ್ಟಿರುವ ಸರಾಸರಿ ರನ್​ ನೋಡಿದರೆ ಅಚ್ಚರಿಯಾಗುತ್ತದೆ. ಅದರಲ್ಲಿ ನಾವು (ರಾಜಸ್ಥಾನ್​ ಬೌಲರ್​ಗಳು) ಕಡಿಮೆ ರನ್ ನೀಡಿದ್ದೇವೆ. ಜೈಪುರದಲ್ಲಿ ನಡೆದ ಒಂದು ಪಂದ್ಯದಲ್ಲಿ ನಾವು 180 ರನ್ ಗಳನ್ನೂ ರಕ್ಷಿಸಿದ್ದೇವೆ. ಆದಾಗ್ಯೂ ದಿನದ ಕೊನೆಯಲ್ಲಿ, ಪ್ರೇಕ್ಷಕರು ಬೌಂಡರಿ ಮತ್ತು ಸಿಕ್ಸರ್ ಗಳನ್ನು ವೀಕ್ಷಿಸಲು ಬರುತ್ತಾರೆ ಎಂಬುದು ಸತ್ಯ. ಆದರೆ, ಬೌಲರ್​ಗಳ ದಂಡನೆ ನಿರಂತರ ಎಂದು ನುಡಿದಿದ್ದಾರೆ.

ಜೈಪುರದ ಮೈದಾನದ ಬೌಂಡರಿ ಲೈನ್​ ದೊಡ್ಡದಾಗಿದೆ. ಧ್ರುವ್ ಜುರೆಲ್ “ಇದು ತುಂಬಾ ದೊಡ್ಡದಾಗಿದೆ” ಎಂದು ಹೇಳಿದ್ದರು. ಅದರೆ, ನಾನು ಅದಾದರೂ ಇರಲಿ ಎಂದು ಹೇಳಿದೆ. ಈ ಕ್ರೀಡಾಂಗಣ ಸುತ್ತಲು ಬೈಸಿಕಲ್ ಬೇಕಾಗುತ್ತದೆ ಎಂದು ತಿಳಿದುಕೊಂಡೆ. ಅದರೆ, ಕೆಲವು ಕ್ರೀಡಾಂಗಣಗಳು ಚಿಕ್ಕದಾಗಿವೆ. ಚೂಯಿಂಗ್ ಗಮ್ ಜೋರಾಗಿ ಉಗಿದರೆ ಅದು ಬೌಂಡಿ ಲೈನ್​ಗಿಂತ ಆಚೆ ಹೋಗಿ ಬೀಳುತ್ತದೆ ಎಂದು ಹೇಳಿದರು.

Continue Reading

Latest

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Champions Trophy: ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ.

VISTARANEWS.COM


on

Champions Trophy
Koo

ಬೆಂಗಳೂರು: ಪಾಕಿಸ್ತಾನ ಸೂಪರ್ ಲೀಗ್ (PSL) ನ 2025 ರ ಆವೃತ್ತಿಯನ್ನು ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಪ್ರಿಲ್ 7 ರಿಂದ ಮೇ 20 ರವರೆಗೆ ಸಮಯವನ್ನು ನಿಗದಿಪಡಿಸಿದೆ. ಇದರರ್ಥ ಮುಂದಿನ ವರ್ಷದ ಪಿಎಸ್ಎಲ್ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಋತುವಿನೊಂದಿಗೆ ಸಂಘರ್ಷ ಹೊಂದುತ್ತದೆ. ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಲಿರುವ 2025 ರ ಚಾಂಪಿಯನ್ಸ್ ಟ್ರೋಫಿಯಿಂದಾಗಿ (Champions Trophy) ಪಿಎಸ್ಎಲ್ 2025 ಅನ್ನು ವಿಳಂಬಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಬಿಸಿಸಿಐಗೆ ತೊಂದರೆ ನೀಡಲು ಪಾಕಿಸ್ತಾನ ಸಂಚು ರೂಪಿಸಿದೆ.

ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಇದು ಶತ್ರು ರಾಷ್ಟ್ರವನ್ನು ಕೆರಳಿಸಿದೆ. ಮತ್ತೊಂದು ಬಾರಿ ಆಗಲಿರುವ ಮುಜುಗರವನ್ನು ತಪ್ಪಿಸಿಕೊಳ್ಳುವುದಕ್ಕೆ ಭಾರತ ಮತ್ತು ಬಿಸಿಸಿಐಗೆ ಕಾಟ ಕೊಡಲು ಮುಂದಾಗಿದೆ. ಅರದಂತೆ ಫೆಬ್ರವರಿ ವೇಳೆಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಿ ಬಳಿಕ ಪಿಎಸ್​ಎಲ್​ ನಡೆಸಲು ಮುಂದಾಗಿದೆ. ಇದರಿಂದ ಭಾರತಕ್ಕೆ ಐಪಿಎಲ್​ ನಡೆಸಲು ತೊಂದರೆ ಆಗಲಿ ಮತ್ತು ವಿದೇಶಿ ಆಟಗಾರರ ಲಭ್ಯತೆ ಕಡಿಮೆಯಾಗಲಿ ಎಂದು ಯೋಜನೆ ರೂಪಿಸಿದೆ.

ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ. ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ಆಯೋಜಿಸಲಿದ್ದು, ಎರಡೂ ತಂಡಗಳು ತವರು ನೆಲದಲ್ಲಿ ಕನಿಷ್ಠ ಐದು ಪಂದ್ಯಗಳನ್ನು ಆಡಲಿವೆ.

“ಪಿಸಿಬಿ ಹೆಚ್ಚುವರಿ ಸ್ಥಳಗಳನ್ನು ಅನ್ವೇಷಿಸುವುದನ್ನು ಮುಂದುವರಿಸುತ್ತದೆ. ನಾಲ್ಕು ಪ್ಲೇಆಫ್​ಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ, “ಎಂದು ಪಿಸಿಬಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

ವಿದೇಶಿ ಆಟಗಾರರಿಗೆ ಸಮಸ್ಯೆ

2025 ರಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ದಿನಾಂಕಗಳ ನಡುವಿನ ಸಂಭಾವ್ಯ ಘರ್ಷಣೆಯು ಅನೇಕ ವಿದೇಶಿ ಆಟಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತದೆ. ಏಕೆಂದರೆ ಅವರು ಎರಡು ಲೀಗ್​ಗಳ ನಡುವೆ ಒಂದನ್ನು ಮಾತ್ರ ಆರಿಸಬೇಕಾಗುತ್ತದೆ.

“ಎಂದಿನಂತೆ, ಪಾಕಿಸ್ತಾನ ಸೂಪರ್ ಲೀಗ್ 2025 ಗಾಗಿ ನಾವು ಫ್ರಾಂಚೈಸಿ ಮಾಲೀಕರೊಂದಿಗೆ ಬಹಳ ರೋಮಾಂಚಕಾರಿ ಮತ್ತು ಆಸಕ್ತಿದಾಯಕ ಸಭೆಯನ್ನು ನಡೆಸಿದ್ದೇವೆ. ಫ್ರಾಂಚೈಸಿ ಮಾಲೀಕರು 2025 ರ ಈವೆಂಟ್ ಮತ್ತು ಅದರಾಚೆಗೆ ಪಿಸಿಬಿ ಶಿಫಾರಸು ಮಾಡಿದ ವಿಂಡೋ ಮತ್ತು ಪ್ಲೇಆಫ್ ಸ್ಥಳಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

“ಈ ಸಭೆಯಲ್ಲಿ ಪಿಎಸ್ಎಲ್ 2025 ಮತ್ತು ಅದಕ್ಕಿಂತ ಹೆಚ್ಚಿನ ಸೂಕ್ತ ವಿಂಡೋಗೆ ಸಂಬಂಧಿಸಿದಂತೆ ಪಿಸಿಬಿ ಫ್ರಾಂಚೈಸಿ ಮಾಲೀಕರೊಂದಿಗೆ ಹೆಚ್ಚಿನ ಡೇಟಾ ಹಂಚಿಕೊಳ್ಳಲಿದೆ. ಇದರಿಂದ ಅವರು ತಮ್ಮೊಳಗೆ ಚರ್ಚಿಸಬಹುದು, ಹೆಚ್ಚು ಮಾಹಿತಿಯುತ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಸಾಮಾನ್ಯ ಮಂಡಳಿ ಸಭೆಯಲ್ಲಿ ತಮ್ಮ ಆಲೋಚನೆಗಳು ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲಾಗಿದೆ ಎಂದು ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

ಪಾಕಿಸ್ತಾನದ ಅತಿದೊಡ್ಡ ಬ್ರಾಂಡ್​​ ಒಂದರ ಭವಿಷ್ಯಕ್ಕಾಗಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಫ್ರಾಂಚೈಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

Continue Reading

Latest

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

Titanic Movie: ಪ್ರಭಾವಶಾಲಿ ಬ್ರಿಟಿಷ್ ಕಿರು ಸರಣಿ ‘ಬಾಯ್ಸ್ ಫ್ರಮ್ ದಿ ಬ್ಲ್ಯಾಕ್ಸ್ಟಫ್’ ನಲ್ಲಿ ಕಾರ್ಮಿಕ ವರ್ಗದ ನಾಯಕ ಯೋಸರ್ ಹ್ಯೂಸ್ ಅವರಂತಹ ಸಂಕೀರ್ಣ ಪಾತ್ರಗಳನ್ನು ಮಾಡಿರುವ ಅವರ ಪ್ರತಿಭೆಯನ್ನು ಸ್ಮರಿಸಿದ್ದಾರೆ. ಬರ್ನಾರ್ಡ್​ ಹಿಲ್​ ಭಾರತೀಯರಿಗೆ ಟೈಟಾನಿಕ್​ ಸಿನಿಮಾ ಮೂಲಕ ಪರಿಚಿತ. ಅವರು ಆ ಸಿನಿಮಾದಲ್ಲಿ ಹಡಗಿನ ಕ್ಯಾಪ್ಟನ್​ ಎಡ್ವರ್ಡ್ ಸ್ಮಿತ್ ಪಾತ್ರದಲ್ಲಿ ನಟಿಸಿದ್ದರು.

VISTARANEWS.COM


on

Bernard Hill
Koo

ಬೆಂಗಳೂರು: ‘ದಿ ಲಾರ್ಡ್ ಆಫ್ ದಿ ರಿಂಗ್ಸ್’ ಟ್ರೈಲಜಿ ಮತ್ತು ವಿಶ್ವ ವಿಖ್ಯಾತಿ ಪಡೆದ ಹಾಲಿವುಡ್​ ಸಿನಿಮಾ ‘ಟೈಟಾನಿಕ್’ ನಲ್ಲಿ (Titanic Movie) ಪ್ರಭಾವಶಾಲಿ ಪಾತ್ರಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಇಂಗ್ಲಿಷ್ ನಟ ಬರ್ನಾರ್ಡ್ ಹಿಲ್ (Bernard Hill) ನಿಧನ ಹೊಂದಿದ್ದಾರೆ. ಅವರಿಗೆ ತಮ್ಮ 79 ವರ್ಷ. ಸ್ಕಾಟ್ಲೆಂಟ್​ನ ಜನಪ್ರಿಯ ಹಾಡುಗಾರ್ತಿ ಬಾರ್ಬರಾ ಡಿಕ್ಸನ್ ಈ ಸುದ್ದಿಯನ್ನು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪ್ರಕಟಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಲ್ ಅವರು 1982ರಲ್ಲಿ ಮಹಾತ್ಮ ಗಾಂಧಿಯ ಜೀವನ ಚರಿತ್ರೆಯ ಕುರಿತು ರಿಚರ್ಡ್​ ಅಟೆನ್​ಬರೊ ಅವರ ಗಾಂಧಿ ಸಿನಿಮಾದಲ್ಲೂ ನಟಿಸಿದ್ದರು.

“ಬರ್ನಾರ್ಡ್ ಹಿಲ್ ಅವರ ನಿಧನದಿಂದ ನಾನು ದುಃಖ ತೃಪ್ತನಾಗಿದ್ದೇನೆ. ನಾವು 1974-1975 ರಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಿಜವಾಗಿಯೂ ಗಮನಾರ್ಹ ನಟ. ಅವರೊಂದಿಗೆ ಕೆಲಸ ಮಾಡುವುದು ಒಂದು ಗೌರವವಾಗಿತ್ತು ಎಂದು ಬರೆದುಕೊಂಡಿದ್ದಾರೆ. ಹಿಲ್ ಅವರ ನಿಧನದ ನಂತರ ಅಭಿಮಾನಿಗಳು ಅವರಿಗೆ ಗೌರವ ಸಲ್ಲಿಸಿದ್ದಾರೆ. ಅನೇಕರು ಅವರ ಬಹುಮುಖ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ.

ಪ್ರಭಾವಶಾಲಿ ಬ್ರಿಟಿಷ್ ಕಿರು ಸರಣಿ ‘ಬಾಯ್ಸ್ ಫ್ರಮ್ ದಿ ಬ್ಲ್ಯಾಕ್ಸ್ಟಫ್’ ನಲ್ಲಿ ಕಾರ್ಮಿಕ ವರ್ಗದ ನಾಯಕ ಯೋಸರ್ ಹ್ಯೂಸ್ ಅವರಂತಹ ಸಂಕೀರ್ಣ ಪಾತ್ರಗಳನ್ನು ಮಾಡಿರುವ ಅವರ ಪ್ರತಿಭೆಯನ್ನು ಸ್ಮರಿಸಿದ್ದಾರೆ. ಬರ್ನಾರ್ಡ್​ ಹಿಲ್​ ಭಾರತೀಯರಿಗೆ ಟೈಟಾನಿಕ್​ ಸಿನಿಮಾ ಮೂಲಕ ಪರಿಚಿತ. ಅವರು ಆ ಸಿನಿಮಾದಲ್ಲಿ ಹಡಗಿನ ಕ್ಯಾಪ್ಟನ್​ ಎಡ್ವರ್ಡ್ ಸ್ಮಿತ್ ಪಾತ್ರದಲ್ಲಿ ನಟಿಸಿದ್ದರು.

ವೈವಿಧ್ಯಮಯ ಪಾತ್ರ

ಹಿಲ್ ಅವರು ತಮ್ಮ ಐದು ದಶಕಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ ರಂಗಭೂಮಿ, ದೂರದರ್ಶನ ಮತ್ತು ಚಲನಚಿತ್ರದಾದ್ಯಂತ ವೈವಿಧ್ಯಮಯ ಪಾತ್ರಗಳನ್ನು ಮಾಡಿದ್ದರು. ‘ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಟರ್ನ್ ಆಫ್ ದಿ ಕಿಂಗ್’ ಮತ್ತು ‘ಟೈಟಾನಿಕ್’ ಸಿನಿಮಾಗಳ ಮೂಲಕ ಅಕಾಡಮಿ ಪ್ರಶಸ್ತಿಗಳನ್ನು ಗೆದ್ದಿದ್ದರು.

ಇದನ್ನೂ ಓದಿ: Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

ಬಿಬಿಸಿ ಟಿವಿ ಸರಣಿ “ವೂಲ್ಫ್ ಹಾಲ್” ನಲ್ಲಿ, ಬರ್ನಾರ್ಡ್ ಹಿಲ್ ಡ್ಯೂಕ್ ಆಫ್ ನಾರ್ಫೋಕ್ ಆಗಿ ಸ್ಮರಣೀಯ ಅಭಿನಯ ಮಾಡಿದ್ದರು. ಕಾರ್ಡಿನಲ್ ವೋಲ್ಸಿಯ ವಿರೋಧಿ ಮತ್ತು ಅನ್ನಿ ಬೊಲೆನ್ ಅವರ ಚಿಕ್ಕಪ್ಪನಾದ ಈ ಪಾತ್ರವು ಹಿಲ್ ಅವರ ಬಹುಮುಖ ನಟನಾ ಕೌಶಲ್ಯವನ್ನು ಪ್ರದರ್ಶಿಸಿತ್ತು.

ದಶಕಗಳ ಸುದೀರ್ಘ ವೃತ್ತಿಜೀವನದುದ್ದಕ್ಕೂ, ಹಿಲ್ ವಿವಿಧ ಪಾತ್ರಗಳನ್ನು ಮಾಡಿದ್ದರ. ಅದು ಶಾಶ್ವತ ಪರಿಣಾಮ ಬೀರಿತ್ತು. 1976 ರ ಗೌರವಾನ್ವಿತ ಬಿಬಿಸಿ ಸರಣಿ “ಐ, ಕ್ಲಾಡಿಯಸ್” ನಲ್ಲಿ ಕಾಣಿಸಿಕೊಂಡಾಗಿನಿಂದ ಹಿಡಿದು 1982 ರಲ್ಲಿ ಮೆಚ್ಚುಗೆ ಪಡೆದ ಚಲನಚಿತ್ರ “ಗಾಂಧಿ” ಯಲ್ಲಿನ ಅವರ ಸರ್ಜೆಂಟ್​ ಪುಟ್ನಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 1989 ರಲ್ಲಿ “ಶೆರ್ಲಿ ವ್ಯಾಲೆಂಟೈನ್”, 2002 ರಲ್ಲಿ “ದಿ ಸ್ಕಾರ್ಪಿಯನ್ ಕಿಂಗ್” ಮತ್ತು 2008 ರ ಟಾಮ್ ಕ್ರೂಸ್ ಚಲನಚಿತ್ರ “ವಾಲ್ಕೈರಿ” ನಂತಹ ಸಿನಿಮಾಗಳಲ್ಲಿ ಪಾತ್ರ ವಹಿಸಿದ್ದರು.

Continue Reading

Latest

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

IPL 2024 : ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು.

VISTARANEWS.COM


on

IPL 2024
Koo

ಬೆಂಗಳೂರು: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) 53 ನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಯಾಮ್ ಕರ್ರನ್ ನೇತೃತ್ವದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ 28 ರನ್​ಗಳ ಗೆಲವು ಸಾಧಿಸಿದೆ. ಅದರ ಹೊರತಾಗಿಯೂ ಸಿಎಸ್​ಕೆ ತಂಡದಲ್ಲಿ ಕೆಲವೊಂದು ಸಮಸ್ಯೆಗಳು ಉಂಟಾಗಿವೆ ಎಂಬುದಾಗಿ ನಾಯಕ ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಗಾಯಕ್ವಾಡ್ ಟಾಸ್ ಸೋತರು. ಸಿಎಸ್​​ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡದ ಕಾರಣ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ರವೀಂದ್ರ ಜಡೇಜಾ (43) ಗರಿಷ್ಠ ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ ಮತ್ತು ಡ್ಯಾರಿಲ್ ಮಿಚೆಲ್ 30 ರನ್ ಗಳಿಸಿದರು. ರವೀಂದ್ರ ಜಡೇಜಾ 20 ರನ್ ನೀಡಿ 3 ವಿಕೆಟ್ ಪಡೆದರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್​ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು. ಸಿಮರ್ಜೀತ್ ಸಿಂಗ್ ಬಗ್ಗೆ ಮಾತನಾಡಿದ ಋತುರಾಜ್ ಗಾಯಕ್ವಾಡ್, ವೇಗಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅವರನ್ನು ಪರಿಚಯಿಸಲು ತಡ ಮಾಡಿಲ್ಲ ಎಂದ ಹೇಳಿದರ.

ತಂಡದಲ್ಲಿದೆ ಸಮಸ್ಯೆ

ನಮ್ಮ ತಂಡದಲ್ಲಿ ಸಮಸ್ಯೆಯಿದೆ. ಆಟಗಾರರು ಜ್ವರದಿಂದ ಬಳಲುತ್ತಿದ್ದಾರೆ. ಯಾರು ಆಡುತ್ತಿದ್ದಾರೆ ಅಥವಾ ಇಲ್ಲ ಎಂದು ಬೆಳಿಗ್ಗೆಯವರೆಗೆ ಖಚಿತವಾಗಿರಲಿಲ್ಲ. ಹೀಗಾಗಿ ಗೆಲುವು ನಿಜವಾಗಿಯೂ ಸಂತೋಷ ಕೊಟ್ಟಿದೆ ಎಂದು ಹೇಳದಿರು.

ಐದು ಸೋಲುಗಳನ್ನು ಕಂಡಿದ್ದ ಚೆನ್ನೈ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ದಾಖಲೆಯನ್ನು ಹೊಂದಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿರುವ ಸಿಎಸ್​ಕೆ ತಂಡ ಪಿಬಿಕೆಎಸ್ ವಿರುದ್ಧ 15-14 ಗೆಲುವಿನ ಅಂತರದ ಮುನ್ನಡೆ ಹೊಂದಿದೆ. ಆದಾಗ್ಯೂ, ಹಿಂದಿನ ಐದು ಪಂದ್ಯಗಳಲ್ಲಿ, ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಏಕೆಂದರೆ ಅವರು ಆ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

ಐಪಿಎಲ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸತತ ಐದು ಪಂದ್ಯಗಳಲ್ಲಿ ಸೋಲಿಸಿವೆ, ಮೊದಲ ತಂಡ ಮುಂಬೈ ಇಂಡಿಯನ್ಸ್ ಮತ್ತು ಇನ್ನೊಂದು ತಂಡ ಪಂಜಾಬ್ ಕಿಂಗ್ಸ್, ಇದು 2021 ರಲ್ಲಿ ತಮ್ಮ ಗೆಲುವಿನ ಸರಣಿಯನ್ನು ಪ್ರಾರಂಭಿಸಿತು ಮತ್ತು ಮೇ 1 ರ ಬುಧವಾರ ಚೆಪಾಕ್​​ನಲ್ಲಿ ಸಿಎಸ್ಕೆ ವಿರುದ್ಧ ಏಳು ವಿಕೆಟ್​​ಗಳಿಂದ ಸೋಲಿಸುವ ಮೂಲಕ ಮುಂಬೈ ದಾಖಲೆ ಸರಿಗಟ್ಟಿತು.

ಅಕ್ಟೋಬರ್ 7, 2021 ರಂದು, ಪಿಬಿಕೆಎಸ್ 42 ಎಸೆತಗಳು ಬಾಕಿ ಇರುವಾಗ 6 ವಿಕೆಟ್​​ಗಳಿಂದ ಗೆದ್ದಿತು ಮತ್ತು ಐಪಿಎಲ್ 2022ರಲ್ಲಿ ಕ್ರಮವಾಗಿ 54 ಮತ್ತು 11 ರನ್​ಗಳಿಂದ ಸತತ ಗೆಲುವುಗಳನ್ನು ದಾಖಲಿಸಿತು. ಐಪಿಎಲ್ 2023 ರಲ್ಲಿ, ಅವರು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದರು ಏಪ್ರಿಲ್ 30 ರಂದು ನಡೆದ ಪಂದ್ಯವನ್ನು ಪಿಬಿಕೆಎಸ್ 4 ವಿಕೆಟ್​​ಗಳಿಂದ ಗೆದ್ದಿತು.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಪಂದ್ಯದ ಮುಕ್ತಾಯದ ನಂತರ, ಸಿಎಸ್​ಕೆ ಪರವಾಗಿ 16-14 ಅಂತರದ ದಾಖಲೆ ಹೊಂದಿದೆ.

Continue Reading
Advertisement
Ramanagara News
ಕರ್ನಾಟಕ4 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ4 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ4 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ4 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ4 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ5 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ5 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ5 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest5 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ8 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ10 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ10 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌