Do you know how much marks Virat Kohli got in iron pea maths?Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ? Vistara News
Connect with us

ಕ್ರಿಕೆಟ್

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

ಕೂ ಸಾಮಾಜಿಕ ಜಾಲತಾಣದ ಮೂಲಕ ವಿರಾಟ್​ ಕೊಹ್ಲಿ ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಶೇರ್​ ಮಾಡಿಕೊಂಡಿದ್ದಾರೆ.

VISTARANEWS.COM


on

Do you know how much marks Virat Kohli got in iron pea maths
Koo

ನವ ದೆಹಲಿ: ಟೀಮ್​ ಇಂಡಿಯಾದ ಆಲ್​ಟೈಮ್​ ಸ್ಟಾರ್​ ಬ್ಯಾಟರ್ ವಿರಾಟ್​ ಕೊಹ್ಲಿ ಕ್ರಿಕೆಟ್​ಗಾಗಿ ಶಿಕ್ಷಣವನ್ನು ಮೊಟಕುಗೊಳಿಸಿದವರು. 12ನೇ ತರಗತಿ ಮುಕ್ತಾಯಗೊಂಡ ಬಳಿಕ ಅವರು ವಿದ್ಯಾಭ್ಯಾಸ ಮುಂದುವರಿಸದೇ ಕ್ರಿಕೆಟ್​ಗಾಗಿ ಬದುಕು ಮುಡಿಪಾಗಿಟ್ಟಿದ್ದರು. ಹೀಗಾಗಿ ಶೈಕ್ಷಣಿಕ ವಿಚಾರಕ್ಕೆ ಹೆಚ್ಚು ಡಿಗ್ರಿಗಳನ್ನೇನೂ ಪಡೆದುಕೊಂಡಿಲ್ಲ. ಇವೆಲ್ಲದರ ನಡುವೆಯೂ ಶಾಲಾ ದಿನಗಳಲ್ಲಿ ವಿರಾಟ್​ ಕೊಹ್ಲಿಯ ಕಲಿಕೆ ಮಟ್ಟ ಹೇಗಿದ್ದರಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಇದ್ದೇ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇದುವರೆಗೆ ಇರಲಿಲ್ಲ. ಇದೀಗ ಸ್ವಯಂ ವಿರಾಟ್​ ಕೊಹ್ಲಿಯೇ ತಮ್ಮ 10ನೇ ತರಗತಿಯ ಮಾರ್ಕ್​ ಕಾರ್ಡ್​ ಅನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ವಿರಾಟ್​ ಕೊಹ್ಲಿ ಯಾವುದೆಲ್ಲ ವಿಷಯದಲ್ಲಿ ಎಷ್ಟೆಷ್ಟು ಮಾರ್ಕ್ ತೆಗೆದಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನದಲ್ಲಿ ತಮಗೆ ಗಣಿತದ ಅಲರ್ಜಿ ಇರುವುದಾಗಿ ಹೇಳಿಕೊಂಡಿದ್ದರು. ಗಣಿತದಲ್ಲಿ ಪಾಸ್​ ಆಗುವುದಕ್ಕೆ ತಾವು ಪಟ್ಟ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದೇ ವೇಳೆ ಅವರು ಗಣಿತದ ಅಗತ್ಯವೇನು ಎಂಬುದನ್ನೂ ಪ್ರಶ್ನಿಸಿದ್ದರು. ಇದೀಗ ಅವರು ಯಾಕೆ ಗಣಿತವನ್ನು ದ್ವೇಷ ಮಾಡಿದ್ದರು ಎಂಬುದು ಗೊತ್ತಾಗಿದೆ. ಯಾಕೆಂದರೆ 10ನೇ ತರಗತಿಯಲ್ಲಿ ಕೊಹ್ಲಿ ಗಣಿತದಲ್ಲಿ ಪಡೆದ ಮಾರ್ಕ್​​ 51. ಹೇಗಾದರೂ ಮಾಡಿ ಪಾಸ್​ ಮಾಡಬೇಕು ಎಂಬು ಹಠದಲ್ಲಿ ಅವರು ಅಷ್ಟು ಮಾರ್ಕ್​​ ಪಡೆದುಕೊಂಡಿದ್ದರು.

ಇಂಗ್ಲಿಷ್‌ನಲ್ಲಿ 83, ಹಿಂದಿಯಲ್ಲಿ 75, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ 55, ಸಮಾಜ ವಿಜ್ಞಾನದಲ್ಲಿ 81, ಇಂಟ್ರಡಕ್ಟರಿ ಐಟಿಯಲ್ಲಿ 74 ಅಂಕಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಷಯಗಳಲ್ಲಿ ವಿರಾಟ್​ಕೊಹ್ಲಿಗೆ ಆಸಕ್ತಿ ಇತ್ತ ಎಂಬುದು ಮಾರ್ಕ್​ ಕಾರ್ಡ್​ ಮೂಲಕ ಗೊತ್ತಾಗಿದೆ.

ಮೂರು ಪೆಗ್ಗಿನ ಕತೆ ಹೇಳಿದ ವಿರಾಟ್​ ಕೊಹ್ಲಿ

ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ(anushka sharma) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನುಷ್ಕಾ ಶರ್ಮಾ ಅವರು ವಿರಾಟ್​ ಕೊಹ್ಲಿಯ ಕುಡಿತದ ಚಟದ ಬಗ್ಗೆ ರೋಚಕ ಸಂಗತಿಯೊಂದನ್ನು ತಿಳಿಸಿದ್ದಾರೆ.

ಸಾಮಾನ್ಯವಾಗಿ ನೀವಿಬ್ಬರು ಪಾರ್ಟಿಗಳಿಗೆ ಹೋದಾಗ ಯಾರನ್ನು ಹೆಚ್ಚಾಗಿ ಜನ ಗುರುತಿಸುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶರ್ಮಾ, ಅದು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಅವರು ತಿಳಿಸಿದ್ದಾರೆ. ಕೊಹ್ಲಿ ಮೂರು ಪೆಗ್​ ಹಾಕಿದ ಬಳಿಕ ಡ್ಯಾನ್ಸ್ ಮಾಡಲು ಆರಂಭಿಸುತ್ತಾರೆ. ಹೀಗಾಗಿ ಅಲ್ಲಿದ್ದವರು ಕೊಹ್ಲಿಯ ಕಡೆ ಹೆಚ್ಚು ಗಮನ ಕೊಡುತ್ತಾರೆ. ಒಮ್ಮೆ ಅವರು ನೃತ್ಯ ಆರಂಭಿಸಿದರೆ ಇದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ಹೇಳಿದರು.

ಪತ್ನಿಯ ಈ ಮಾತನ್ನು ನಗುತ್ತಲೇ ಒಪ್ಪಿಕೊಂಡ ವಿರಾಟ್​, ಇದು ನಿಜ. ನಾನು ಎರಡು ಪೆಗ್​ಗಳಿಗಿಂತಲೂ ಹೆಚ್ಚು ಕುಡಿದೆನೆಂದರೆ ಡ್ಯಾನ್ಸ್ ಮಾಡಲು ಆರಂಭಿಸುತ್ತೇನೆ. ಆ ಬಳಿಕ ನಾನು ಏನು ಮಾಡುತ್ತೇನೆ ಎಂಬ ಅರಿವೇ ನನಗಿರುವುದಿಲ್ಲ. ಆದರೆ ಈ ವರ್ತನೆಯನ್ನು ಈಗ ನೆನಪಿಸಿಕೊಂಡರೆ ನನಗೆ ನಾಚಿಕೆಯಾಗುತ್ತದೆ. ಈಗ ನಾನು ಕುಡಿತದಿಂದ ಮುಕ್ತವಾಗಿದ್ದೇನೆ. ಇದಕ್ಕೆ ಒಂದು ರೀತಿಯಲ್ಲಿ ಪತ್ನಿ ಅನುಷ್ಕಾ ಕೂಡ ಕಾರಣ. ಅವಳು ನನ್ನ ಬದುಕಿನಲ್ಲಿ ಬಂದ ಬಳಿಕ ಹಲವು ವಿಚಾರದಲ್ಲಿ ನಾನು ಸುಧಾರಿಸಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

ಈಗಾಗಲೇ ಆರೆಂಜ್​ ಕ್ಯಾಪ್​​ ಪಡೆದಿರುವ ಶುಭಮನ್​ ಗಿಲ್ ಅವರು ವಿರಾಟ್​ ಕೊಹ್ಲಿಯ ದಾಖಲೆಯೊಂದನ್ನು ಮುರಿಯಲು ಸಜ್ಜಾಗಿದ್ದಾರೆ.

VISTARANEWS.COM


on

Edited by

ipl records gill
Koo

ಅಹಮದಾಬಾದ್​: ನ್ಯೂ ಬ್ಯಾಟಿಂಗ್​ ಸೆನ್ಸೇಷನಲ್ ಶುಭಮನ್​ ಗಿಲ್ ಅವರು ಇದೀಗ ಐಪಿಎಲ್​ನಲ್ಲಿ ವಿರಾಟ್​ ಕೊಹ್ಲಿಯ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ 851 ರನ್​ ಗಳಿಸಿರುವ ಗಿಲ್​ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ 122ರನ್​ ಗಳಿಸಿದರೆ ವಿರಾಟ್​ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳ್ಳಲಿದೆ.

ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ್ದ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ.

ಕಳೆದ ನಾಲ್ಕು ಇನ್ನಿಂಗ್ಸ್​ಗಳಲ್ಲಿ ಮೂರು ಶತಕ ಬಾರಿಸಿರುವ ಗಿಲ್​ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ ಅವರು ಗಳಿಸಿದ್ದ 973ರನ್​ ಗಳ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ. ಇದಕ್ಕೆ ಗಿಲ್​ ಅವರಿಗೆ ಬೇಕಿರುವುದು 122ರನ್​ಗಳ ಗುರಿ. ಫೈನಲ್​ ಪಂದ್ಯದಲ್ಲಿ ಶತಕದೊಂದಿ ಈ ಮೊತ್ತ ಪೇರಿಸಿದಲ್ಲಿ ಗಿಲ್​ ಅವರು ಐಪಿಎಲ್ನ ಇತಿಹಾಸದ ಪುಟ ಸೇರಲಿದ್ದಾರೆ.

ಫೈನಲ್​ ಪಂದ್ಯಕ್ಕೆ ಉಭಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರಿಕೆಟ್

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಹೋರಾಟ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

Edited by

Narendra Modi Stadium Ahmedabad
Koo

ಅಹಮದಾಬಾದ್​: ಹಾಲಿ ಚಾಂಪಿಯನ್​ ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಪ್ರಶಸ್ತಿ ಸಮರಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಸರ್ವ ವಿಧದಲ್ಲೂ ಸಜ್ಜಾಗಿ ನಿಂತಿದೆ. ಈ ಪಂದ್ಯಕ್ಕೆ ಇತ್ತಂಡಗಳ ಪ್ಲೇಯಿಂಗ್​ ಇಲೆವೆನ್​ ಹೇಗಿರಲಿದೆ ಎಂಬ ಮಾಹಿತಿ ಇಂತಿದೆ.

ಸಮಬಲದ ತಂಡಗಳು

ಎರಡೂ ತಂಡಗಳು ಸಮಬಲದಿಂದ ಕೂಡಿದೆ. ಬ್ಯಾಟಿಂಗ್​ ಮತ್ತು ಬೌಲಿಂಗ್‌ ದಾಳಿ ಸಂಘಟಿಸುವಲ್ಲಿ ಎರಡೂ ತಂಡಗಳು ಬಲಿಷ್ಠವಾಗಿದೆ. ಗುಜರಾತ್​ ಪರ ಶುಭಮನ್‌ ಗಿಲ್‌, ಸಾಯಿ ಸುದರ್ಶನ್‌, ವಿಜಯ್‌ ಶಂಕರ್‌, ಡೇವಿಡ್‌ ಮಿಲ್ಲರ್‌, ರಾಹುಲ್‌ ತೆವಾಟಿಯ ಅತ್ಯಂತ ಅಪಾಯಕಾರಿಗಳು. ಚೆನ್ನೈ ಪರ ಋತುರಾಜ್​ ಗಾಯಕ್ವಾಡ್​, ಡೆವೋನ್​ ಕಾನ್ವೆ, ರಹಾನೆ ಮತ್ತು ಶಿವಂ ದುಬೆ ಕೂಡ ಸಿಡಿಯಬಲ್ಲರು. ಆದರೆ ಮೊಯಿನ್​ ಅಲಿ ಈ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಅವರು ಮಹತ್ವದ ಪಂದ್ಯದಲ್ಲಿ ಆಡಬೇಕಾದ ಅನಿವಾರ್ಯತೆ ಇದೆ.

ಮುಖಾಮುಖಿ

ಚೆನ್ನೈ ಮತ್ತು ಗುಜರಾತ್​ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್​ ಮೂರು ಬಾರಿ ಗೆದ್ದಿದೆ. ಚೆನ್ನೈ ತಂಡ ಒಂದು ಪಂದ್ಯ ಗೆದ್ದಿದೆ. ಈ ಗೆಲುವು ಇದೇ ಆವೃತ್ತಿಯ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ದಾಖಲಾಗಿತ್ತು. ಅಹಮದಾಬಾದ್​ನಲ್ಲೇ ನಡೆದ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್​ ಗೆದ್ದು ತನ್ನ ಅಭಿಯಾನವನ್ನು ಆರಂಭಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಇತ್ತಂಡಗಳು ಮುಖಾಮುಖಿಯಾಗಿವೆ. ಇಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಈ ಪಂದ್ಯದ ಕೌತುಕ.

ಸಂಭಾವ್ಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರಿಕೆಟ್

World Cup 2023 : ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಬಹುತೇಕ ಎಲ್ಲ ಮೆಟ್ರೋ ಸಿಟಿಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ಯೋಜನೆ ರೂಪಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿದ್ದಾರೆ.

VISTARANEWS.COM


on

BCCI MEETING
Koo

ಅಹಮದಾಬಾದ್​​: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023ರ ಮುಕ್ತಾಯದ ಬಳಿಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್​​ನಲ್ಲಿ ಆಡಲು ಇಂಗ್ಲೆಂಡ್​ಗೆ ತೆರಳಲಿದೆ. ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೂರ್ನಿಯ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದಾದ ಬಳಿಕ ನಡೆಯಲಿರುವ ಐಸಿಸಿ ಟೂರ್ನಿಯೆಂದರೆ ಏಕ ದಿನ ವಿಶ್ವ ಕಪ್​. ಇದು ಭಾರತದ ಆತಿಥ್ಯದಲ್ಲಿ ಆಯೋಜನೆಗೊಂಡಿದೆ. ಅದಕ್ಕಾಗಿ ಬಿಸಿಸಿಐ ಸಜ್ಜಾಗುತ್ತಿದೆ. ವರ್ಷದ ಕೊನೆಯಲ್ಲಿ ನಡೆಯಲಿರುವ ಈ ಟೂರ್ನಿಯ ವೇಳಾಪಟ್ಟಿ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಉಂಟಾಗಿದೆ. ಜತೆಗೆ ಪಂದ್ಯದ ತಾಣಗಳು ಎಲ್ಲೆಲ್ಲಿ ಎಂದು ತಿಳಿಯುವ ಕುತೂಹಲವೂ ಸೃಷ್ಟಿಯಾಗಿದೆ. ಮಾಹಿತಿಯೊಂದರ ಪ್ರಕಾರ ಟೂರ್ನಿಯ ವೇಳಾಪಟ್ಟಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ನ ಫೈನಲ್​ ಪಂದ್ಯದ ಬಳಿಕ ನಡೆಯಲಿದೆ.

ಡಬ್ಲ್ಯುಟಿಸಿ ಫೈನಲ್ ಸಮೀಪಿಸುತ್ತಿರುವುದರಿಂದ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ಸಮಯದಲ್ಲಿ ಬಿಸಿಸಿಐ ವಿಶ್ವಕಪ್​ನ ಸ್ಥಳಗಳು ಮತ್ತು ವೇಳಾಪಟ್ಟಿಯನ್ನು ಅನಾವರಣ ಮಾಡಲಿದೆ ಎಂದು ಹಲವಾರು ವರದಿಗಳು ಹೇಳುತ್ತಿವೆ.

ಬಿಸಿಸಿಐನ ವಿಶೇಷ ಸಾಮಾನ್ಯ ಸಭೆ ಮೇ 27 ರಂದು ಅಹಮದಾಬಾದ್​​ನಲ್ಲಿ ನಡೆದಿದೆ. ಅಲ್ಲಿ ಕ್ರೀಡಾಂಗಣಗಳ ಗುಣಮಟ್ಟ ಹದಗೆಡುತ್ತಿರುವುದನ್ನು ಮಂಡಳಿಯು ಬೊಟ್ಟು ಮಾಡಿ ತೋರಿಸಿದೆ. ದೇಶಾದ್ಯಂತ ಅನೇಕ ಸ್ಟೇಡಿಯಮ್​ಗಳೂ ಇರುವುದರಿಂದ ಸೌಲಭ್ಯಗಳ ಗುಣಮಟ್ಟವನ್ನು ಸುಧಾರಿಸುವ ಜವಾಬ್ದಾರಿಯನ್ನು ಆಯಾಯ ಕ್ರಿಕೆಟ್​ ಸಂಸ್ಥೆಗಳು ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಹೇಳಲಾಗಿದೆ. ಮೂಲ ಸೌಕರ್ಯ ಹೆಚ್ಚಿಸಲು ಬೇಕಾದ ಅನುದಾನ ವಿತರಣೆಗೂ ವ್ಯವಸ್ಥೆ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ :IPL 2023: ಟಿ20 ವಿಶ್ವ ಕಪ್​ಗೆ ಹಾರ್ದಿಕ್​ ಪಾಂಡ್ಯ ಸೂಕ್ತ ನಾಯಕ; ರವಿಶಾಸ್ತ್ರಿ ವಿಶ್ವಾಸ

ಬಿಸಿಸಿಐ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಕ್ರೀಡಾಂಗಣಗಳ ಸಂಭಾವ್ಯ ನವೀಕರಣಗಳ ಬಗ್ಗೆ ಚರ್ಚಿಸಲಾಯಿತು. ಮೂಲಸೌಕರ್ಯ ಸುಧಾರಣೆಯು ಹೆಚ್ಚು ಚರ್ಚಿಸಲಾದ ವಿಷಯಗಳಲ್ಲಿ ಒಂದು. ಏಕದಿನ ವಿಶ್ವ ಕಪ್ ವೇಗವಾಗಿ ಸಮೀಪಿಸುತ್ತಿರುವುದರಿಂದ, ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸು ನಿರ್ಧಾರ ಕೈಗೊಳ್ಳಲಾಯಿತು. ವಿಶ್ವ ಕಪ್​ ಅಕ್ಟೋಬರ್ ಅಥವಾ ನವೆಂಬರ್​ನಲ್ಲಿ ನಡೆಯುವ ಕಾರಣ ಅದಕ್ಕಿಂತ ಮೊದಲು ಸಜ್ಜುಗೊಳಿಸುವಂತೆ ಸೂಚಿಸಲಾಯಿತು.

ವಿಶ್ವಕಪ್ನ ಸ್ಥಳಗಳ ಯೋಜನೆಯೊಂದಿಗೆ, ಪದಾಧಿಕಾರಿಗಳಿಗೆ ನಿರ್ದಿಷ್ಟ ಸ್ಥಳಗಳ ಉಸ್ತುವಾರಿ ನೀಡುವ ಯೋಜನೆ ರೂಪಿಸಲಾಯಿತು. ನಾವು ಎಲ್ಲಾ ಮಹಾನಗರಗಳನ್ನು ಪಂದ್ಯಗಳಿಗೆ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Continue Reading

ಕ್ರಿಕೆಟ್

IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಅಪ್ಪ, ಅಮ್ಮನ ಹೆಸರು, ಪತ್ನಿಯ ಮಾತಿನಂತೆ ಬಿಡಿಸಿದ ಟ್ಯಾಟೂಗಳು ದೇಹದ ಮೇಲಿವೆ ಎಂದು ಸೂರ್ಯಕುಮಾರ್ ಯಾದವ್ ವಿವರಿಸಿದ್ದಾರೆ.

VISTARANEWS.COM


on

Suryakumar Yadav Tattoo
Koo

ಮುಂಬಯಿ: ಮುಂಬಯಿ ಇಂಡಿಯನ್ಸ್​ ತಂಡ ಹಾಲಿ ಆವೃತ್ತಿಯ ಐಪಿಎಲ್​ ಪ್ರಶಸ್ತಿ ರೇಸ್​ನಿಂದ ಹೊರ ಬಿದ್ದಿದೆ. ಗುಜರಾತ್ ಜೈಂಟ್ಸ್ ವಿರುದ್ಧದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲುವ ಮೂಲಕ ಆರನೇ ಪ್ರಶಸ್ತಿ ಗಲ್ಲುವ ಅವಕಾಶದಿಂದ ವಂಚಿತವಾಗಿದೆ. ಏತನ್ಮಧ್ಯೆ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅರ್ಧ ಶತಕ ಬಾರಿಸುವ ಮೂಲಕ ಮಿಂಚಿದ್ದರು. ಆದರೆ, ತಂಡಕ್ಕೆ ಗೆಲುವು ತಂದುಕೊಡಲಾಗದ ಬೇಸರಕ್ಕೂ ಒಳಗಾದರು. ಇದೀಗ ಅವರು ಬೇಸರದಿಂದ ಮುಕ್ತರಾಗಿದ್ದು ತಮ್ಮ ಕುರಿತು ಹಲವಾರು ವಿವರಣೆಗಳನ್ನು ನೀಡಿದ್ದಾರೆ. ಈ ವೇಳೆ ಅವರು ತಮ್ಮ ದೇಹದ ಮೇಲಿರುವ ಟ್ಯಾಟೂಗಳ ಬಗ್ಗೆಯೂ ಮಾತನಾಡಿಕೊಂಡಿದ್ದಾರೆ.

ಸೂರ್ಯಕುಮಾರ್ ಯಾದವ್ ತಮ್ಮ ದೇಹದ ಮೇಲೆ ತಾಯಿ, ತಂದೆ, ಪತ್ನಿ ಮತ್ತು ರಾಷ್ಟ್ರೀಯ ಕ್ಯಾಪ್ ಸಂಖ್ಯೆಗಳು (ಟೆಸ್ಟ್, ಏಕದಿನ ಮತ್ತು ಟಿ 20 ಐ) ಸೇರಿದಂತೆ ತಮ್ಮ ದೇಹದ ಮೇಲೆ ಅನೇಕ ಹಚ್ಚೆಗಳನ್ನು ಹೊಂದಿರುವುದಾಗಿ ಹೇಳಿದ್ದಾರೆ. ನಕಾರಾತ್ಮಕ ಶಕ್ತಿಯನ್ನು ದೂರವಿರಿಸಲು ತಮ್ಮ ಕೈಯಲ್ಲಿ ಹೊಂದಿರುವ ಸಿಂಹದ ಮುಖದ ಹಚ್ಚೆಯನ್ನೂ ಹಾಕಿಸಿಕೊಂಡಿದ್ದೇನೆ ಎಂಬುದಾಗಿ ಅವರು ಹೇಳಿದ್ದಾರೆ.

“ನನ್ನ ತಾಯಿ ಮತ್ತು ತಂದೆಯ ಹೆಸರಿನ ಹಚ್ಚೆ ನನ್ನ ಬಳಿ ಇದೆ. ಇದು ನನ್ನ ಮೊದಲ ಹಚ್ಚೆ, ಆದ್ದರಿಂದ ನಾನು ಉಳಿದವುಗಳಿಗೆ ಅನುಮತಿ ಪಡೆದುಕೊಂಡೆ. ನನ್ನ ಹೆಂಡತಿ ಈ ದೃಷ್ಟಿ ತಾಗದಂತಿರುವ ಹಾಕಿಸಿಕೊಳ್ಳುವಂತೆ ನನಗೆ ಹೇಳಿದಳು ಎಂದು ಸೂರ್ಯಕುಮಾರ್ ಜಿಯೋ ಸಿನೆಮಾದೊಂದಿಗೆ ಮಾತನಾಡುತ್ತಾ ಹೇಳಿದರು.

“ನನ್ನ ಭುಜದ ಮೇಲೆ ನನ್ನ ತಾಯಿ ಮತ್ತು ತಂದೆಯ ಭಾವಚಿತ್ರವಿದೆ, ಅದು 4-5 ವರ್ಷಗಳಷ್ಟು ಹಳೆಯದು. ಇದು ನನ್ನ ಅಚ್ಚುಮೆಚ್ಚಿನದು. ಇದು ಶಾಂತ ಸಿಂಹ. ನಾನು ಶಾಂತ ಸಿಂಹ ಎಂದು ಸ್ಫೋಟಕ ಬ್ಯಾಟರ್​ ಹೇಳಿದ್ದಾರೆ.

ವಿಶ್ವದ ನಂಬರ್​ ಒನ್​ ಟಿ20 ಬ್ಯಾಟರ್​ ತನ್ನ ಮೇಲಿನ ತೋಳಿನ ಮೇಲೆ ಬಾಣಗಳ ಹಚ್ಚೆಯನ್ನೂ ಹೊಂದಿದ್ದಾರೆ. ವ್ಯಕ್ತಿಯೊಬ್ಬ ಜೀವನದಲ್ಲಿ ಹಿಂದಕ್ಕೆ ಹೋದಷ್ಟು ಮುಂದಕ್ಕೆ ಹೋಗುತ್ತಾನೆ ಎಂಬುದನ್ನು ಸೂಚಿಸಲು ಈ ಹಚ್ಚೆ ಹಾಕಿಕೊಂಡಿದ್ದೇನೆ ಎಂದು ಅವರು ವಿವರಣೆ ನೀಡಿದರು. ನಾನು ಆಸ್ಟ್ರೇಲಿಯಾ ವಿರುದ್ಧ ಸತತವಾಗಿ ಮೂರು ಬಾರಿ ಶೂನ್ಯಕ್ಕೆ ಔಟಾಗಿ ಬಳಿಕ ಫಾರ್ಮ್​ಗೆ ಮರಳಿರುವುದೇ ಇದಕ್ಕೆ ಸೂಕ್ತ ಉದಾಹರಣೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ : ICC T20 Ranking: ನಂ.1 ಸ್ಥಾನ ಉಳಿಸಿಕೊಂಡ ಸೂರ್ಯಕುಮಾರ್​ ಯಾದವ್​

ವಿಶೇಷವೆಂದರೆ, ಮುಂಬೈ ಮೂಲದ ಕ್ರಿಕೆಟಿಗ ತನ್ನ ಮೇಲಿನ ತೋಳಿನ ಮೇಲೆ ವಿಶಿಷ್ಟ ಹಚ್ಚೆಯೊಂದನ್ನೂ ಹಾಕಿಸಿಕೊಂಡಿದ್ದಾರೆ. ಇದು ನ್ಯೂಜಿಲ್ಯಾಂಡ್​ನ ಮಾವೊರಿ ಬುಡಕಟ್ಟು ಸಂಪ್ರದಾಯಕ್ಕೆ ಸಂಬಂಧಿಸಿದ್ದು. ಈ ವಿನ್ಯಾಸದ ಬಗ್ಗೆ ಮಾತನಾಡಿದ ಸೂರ್ಯ, ಇದು ಅದೃಷ್ಟವನ್ನು ತರುತ್ತದೆ ಮತ್ತು ನನ್ನನ್ನು ಸದಾ ಶಾಂತವಾಗಿರಿಸುತ್ತದೆ ಎಂದು ವಿವರಿಸಿದ್ದಾರೆ.

“ನಾನು ನ್ಯೂಜಿಲೆಂಡ್ ಪ್ರವಾಸದಲ್ಲಿದ್ದಾಗ, ಮಾವೊರಿ ಬುಡಕಟ್ಟಿನ ಈ ವಿನ್ಯಾಸದ ಬಗ್ಗೆ ತಿಳಿದುಕೊಂಡೆ, ಈ ವಿನ್ಯಾಸವು ಅದೃಷ್ಟ ಮತ್ತು ಪ್ರೀತಿಯನ್ನು ತರುತ್ತದೆ ಮತ್ತು ನಿಮ್ಮನ್ನು ಶಾಂತವಾಗಿರಿಸುತ್ತದೆ ಎಂದು ಅಲ್ಲಿನ ವ್ಯಕ್ತಿಯೊಬ್ಬರು ಹೇಳಿದರು. ಅದನ್ನು ನಾನು ದೇಹದಲ್ಲಿ ಟ್ಯಾಟೂ ಮಾಡಿಸಿಕೊಂಡೆ ಎಂಬುದಾಗಿ ಅವರು ಹೇಳಿದರು.

Continue Reading
Advertisement
french open novak djokovic
ಕ್ರೀಡೆ2 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ8 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema18 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema21 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ25 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್38 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ49 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ59 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ2 hours ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ2 hours ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ59 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!