Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ - Vistara News

ಕ್ರೀಡೆ

Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

Duleep Trophy 2024: ಈ ವರ್ಷ ದುಲೀಪ್ ಟ್ರೋಫಿಯನ್ನು ಯಾವುದೇ ನಾಕೌಟ್ ಪಂದ್ಯಗಳಿಲ್ಲದೆ ರೌಂಡ್-ರಾಬಿನ್ ಮಾದರಿಯ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಇಂಡಿಯಾ ‘ಎ’, ಇಂಡಿಯಾ ‘ಬಿ’, ಇಂಡಿಯಾ ‘ಸಿ’ ಹಾಗೂ ಇಂಡಿಯಾ ‘ಡಿ’ ತಂಡಗಳೊಂದಿಗೆ ಆಡಲಾಗುತ್ತದೆ.

VISTARANEWS.COM


on

Duleep Trophy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಈ ಬಾರಿಯ ದುಲೀಪ್​ ಟ್ರೋಫಿ(Duleep Trophy 2024) ಪಂದ್ಯಾವಳಿ ಅತ್ಯಂತ ವಿಶೇಷವಾಗಿರಲಿದೆ. ಹೌದು, ಟೀಮ್​ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಕೆ.ಎಲ್​ ರಾಹುಲ್​, ರವೀಂದ್ರ ಜಡೇಜಾ ಸೇರಿ ಹಲವು ಆಟಗಾರರು ಈ ಬಾರಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 5ರಿಂದ 22ರ ತನಕ ಟೂರ್ನಿ ನಡೆಯಲಿದೆ.

ಏನಿದು ದುಲೀಪ್​ ಟ್ರೋಫಿ


ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿಯಾಗಿದೆ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. 1961-62 ರಲ್ಲಿ ಮೊದಲ ಬಾರಿಗೆ ಈ ಟೂರ್ನಿಯನ್ನು ಆರಂಭಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ರೌಂಡ್-ರಾಬಿನ್ ಮಾದರಿ


ಈ ವರ್ಷ ದುಲೀಪ್ ಟ್ರೋಫಿಯನ್ನು ಯಾವುದೇ ನಾಕೌಟ್ ಪಂದ್ಯಗಳಿಲ್ಲದೆ ರೌಂಡ್-ರಾಬಿನ್ ಮಾದರಿಯ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಇಂಡಿಯಾ ‘ಎ’, ಇಂಡಿಯಾ ‘ಬಿ’, ಇಂಡಿಯಾ ‘ಸಿ’ ಹಾಗೂ ಇಂಡಿಯಾ ‘ಡಿ’ ತಂಡಗಳೊಂದಿಗೆ ಆಡಲಾಗುತ್ತದೆ. ಅಜಿತ್ ಅಗರ್ಕರ್ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿಯು ತಂಡಗಳನ್ನು ಆಯ್ಕೆ ಮಾಡುತ್ತದೆ.

ಇದನ್ನೂ ಓದಿ Duleep Trophy: 14 ವರ್ಷಗಳ ಬಳಿಕ ದುಲೀಪ್‌ ಟ್ರೋಫಿ ಆಡಲಿದ್ದಾರೆ ವಿರಾಟ್​ ಕೊಹ್ಲಿ?

ಅಂತಾರಾಷ್ಟ್ರೀಯ ಕ್ರಿಕೆಟ್​ ಆಟಗಾರರು ವಿರಾಮದ ವೇಳೆ ದೇಶೀಯ ಕ್ರಿಕೆಟ್​ನಲ್ಲಿ ಆಡಬೇಕೆಂಬುದು ಬಿಸಿಸಿಐ ನಿಲುವಾಗಿದ್ದು, ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಸ್ಥಿರ ಫಾರ್ಮ್​ ಕಂಡುಕೊಳ್ಳುವ ನಿಟ್ಟಿನಲ್ಲಿ ಎಲ್ಲ ಆಟಗಾರರಿಗೂ ದೇಶೀಯ ಟೂರ್ನಿಯಲ್ಲಿ ಪೂರ್ತಿ ಸರಣಿ ಆಡದೇ ಹೋದರೂ ಕೆಲವು ಪಂದ್ಯಗಳಲ್ಲಾದರೂ ಆಡಬೇಕು ಎಂದು ಬಿಸಿಸಿಐ ಸೂಚನೆ ನೀಡಿತ್ತು. ಹೀಗಾಗಿ ಈ ಬಾರಿ ಸೀನಿಯರ್ ಆಟಗಾರರು ಟೂರ್ನಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಟೆಸ್ಟ್‌ ತಂಡದ ಸಂಭಾವ್ಯ ಆಟಗಾರರಾದ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಶುಭಮನ್‌ ಗಿಲ್‌, ಶ್ರೇಯಸ್‌ ಅಯ್ಯರ್‌, ಕೆ.ಎಲ್‌. ರಾಹುಲ್‌, ರಿಷಭ್‌ ಪಂತ್‌, ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌, ಕುಲದೀಪ್‌ ಯಾದವ್‌ ಮೊದಲಾದವರೆಲ್ಲ ದುಲೀಪ್‌ ಟ್ರೋಫಿಯ ಕೆಲವು ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಜಸ್‌ಪ್ರೀತ್‌ ಬುಮ್ರಾ, ಹಿರಿಯ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌, ಗಾಯಾಳಾಗಿರುವ ವೇಗಿ ಮೊಹಮ್ಮದ್‌ ಶಮಿ ಅವರಿಗೆ ಬಿಸಿಸಿಐ ರಿಯಾಯಿತಿ ನೀಡಿದೆ ಎನ್ನಲಾಗಿದೆ.

ದುಲೀಪ್ ಟ್ರೋಫಿ ವೇಳಾಪಟ್ಟಿ


ಸೆಪ್ಟೆಂಬರ್​ 5-8: ಇಂಡಿಯಾ ಎ-ಇಂಡಿಯಾ ಬಿ-ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಮ್, ಅನಂತಪುರ(ಸ್ಥಳ ಬದಲಾಗುವ ಸಾಧ್ಯತೆ ಇದೆ)

ಸೆಪ್ಟೆಂಬರ್ 5-8: ಇಂಡಿಯಾ ಸಿ- ಇಂಡಿಯಾ ಡಿ-ಅನಂತಪುರದ ಎಸಿಎ ಎಡಿಸಿಎ ಗ್ರೌಂಡ್(ಸ್ಥಳ ಬದಲಾಗುವ ಸಾಧ್ಯತೆ ಇದೆ)

ಸೆಪ್ಟೆಂಬರ್ 12-15: ಇಂಡಿಯಾ ಎ- ಇಂಡಿಯಾ ಡಿ- ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಮ್, ಅನಂತಪುರ

ಸೆಪ್ಟೆಂಬರ್ 12-15: ಇಂಡಿಯಾ ಬಿ- ಇಂಡಿಯಾ ಸಿ-ಎಸಿಎ ಎಡಿಸಿಎ ಗ್ರೌಂಡ್, ಅನಂತಪುರ

ಸೆಪ್ಟೆಂಬರ್ 19-22: ಇಂಡಿಯಾ ಎ-ಇಂಡಿಯಾ ಸಿ- ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಮ್, ಅನಂತಪುರ

ಸೆಪ್ಟೆಂಬರ್ 19-22: ಇಂಡಿಯಾ ಬಿ-ಇಂಡಿಯಾ ಡಿ- ಎಸಿಎ ಎಡಿಸಿಎ ಗ್ರೌಂಡ್, ಅನಂತಪುರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Dodda Ganesh: 50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ.

VISTARANEWS.COM


on

Dodda Ganesh
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್(Dodda Ganesh) ಅವರು ಕೀನ್ಯಾ ತಂಡದ(Dodda Ganesh Kenya Head Coach) ಮುಖ್ಯ ಕೋಚ್​ ಆಗಿ ನೇಕಮಗೊಂಡಿದ್ದಾರೆ. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ ಹೆಗ್ಗಳಿಕೆ ಇವರದ್ದು. ದೊಡ್ಡ ಗಣೇಶ್ ಅವರ ನೇತೃತ್ವದಲ್ಲಿ ಕೀನ್ಯಾ ತಂಡವು ಮುಂಬರುವ ಐಸಿಸಿ ಡಿವಿಷನ್ 2 ಚಾಲೆಂಜ್ ಲೀಗ್​​ನಲ್ಲಿ ಕಣಕ್ಕಿಳಿಯಲಿದೆ.

50 ವರ್ಷದ ದೊಡ್ಡ ಗಣೇಶ್ ನೇರ ನುಡಿಗಳಿಂದಲೇ ಹೆಸರುವಾಸಿ. 1997ರಲ್ಲಿ ಭಾರತ ಪರ 4 ಟೆಸ್ಟ್ ಮತ್ತು ಒಂದು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 104 ಪಂದ್ಯಗಳಿಂದ 365 ವಿಕೆಟ್​ ಪಡೆದಿದ್ದಾರೆ. ಭಾರತ ತಂಡದ ಪರ 6 ವಿಕೆಟ್​ ಕಿತ್ತಿದ್ದಾರೆ. ಲಿಸ್ಟ್​ ‘ಎ’ ಕ್ರಿಕೆಟ್​ನಲ್ಲಿ 89 ಪಂದ್ಯಗಳನ್ನಾಡಿ 128 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿಯೂ ಉತ್ತಮ ದಾಖಲೆ ಹೊಂದಿರುವ ಇವರು ಲಿಸ್ಟ್​ ‘ಎ’ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ ಸೇರಿ ಒಟ್ಟು 2,548 ರನ್​ ಬಾರಿಸಿದ್ದಾರೆ. 6 ಬಾರಿ 10 ಕ್ಕೂ ಅಧಿಕ ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ Dodda Ganesh: ಬಿಜೆಪಿ ಸೇರಿದ ನೇರ ನುಡಿಯ ಕ್ರಿಕೆಟಿಗ ದೊಡ್ಡ ಗಣೇಶ್

4 ತಿಂಗಳ ಹಿಂದಷ್ಟೇ ದೊಡ್ಡ ಗಣೇಶ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B. S. Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು. ದೊಡ್ಡ ಗಣೇಶ್ ಮೊದಲು ವಿಕೆಟ್ ಕೀಪರ್ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ಆಗಿ ವೃತ್ತಿಜೀವನ ಪ್ರಾರಂಭಿಸಿದರು. ಭಾರತದ 1983ರ ವಿಶ್ವಕಪ್ ವಿಜೇತ ವಿಕೆಟ್-ಕೀಪರ್ ಸೈಯದ್ ಕಿರ್ಮಾನಿ ಅವರನ್ನು ಆರಾಧ್ಯ ಕ್ರಿಕೆಟಿಗನಾಗಿ ಕಂಡುಕೊಂಡಿದ್ದರು. ಗುಂಡಪ್ಪ ವಿಶ್ವನಾಥ್ ಅವರು ದೊಡ್ಡ ಗಣೇಶ್ ಬೌಲಿಂಗ್ ಪ್ರತಿಭೆಯನ್ನು ಗುರುತಿಸಿ ಅವರಿಗೆ ಹಲವು ಕ್ಲಬ್​ಗಳ ಪರ ಆಡುವ ಅವಕಾಶ ಕಲ್ಪಿಸಿದ್ದರು ಎನ್ನಲಾಗಿದೆ.

ಕೀನ್ಯಾ ತಂಡದ ಕೋಚ್​ ಆಗಿ ನೇಮಕಗೊಂಡ ವಿಚಾರವನ್ನು ದೊಡ್ಡ ಗಣೇಶ್ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ತನ್ನ ಎಲ್ಲ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ತಂಡದ ಏಳಿಗೆಗೆ ಶ್ರಮಿಸಲಿದ್ದೇನೆ” ಎಂದು ಹೇಳಿದ್ದಾರೆ.

Continue Reading

ಕ್ರೀಡೆ

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Buchi Babu Tournament:ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ.

VISTARANEWS.COM


on

Buchi Babu Tournament
Koo

ಬೆಂಗಳೂರು: ಇಶನ್​ ಕಿಶನ್​ ಬಳಿಕ ಇದೀಗ ಟೀಮ್​ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್​ ಯಾದವ್(Suryakumar Yadav)​ ಮತ್ತು ಶ್ರೇಯಸ್​​ ಅಯ್ಯರ್(Shreyas Iyer)​ ದೇಶೀಯ ಕ್ರಿಕೆಟ್​ ಟೂರ್ನಿಯ ಪಂದ್ಯವೊಂದನ್ನು ಆಡಲು ಮುಂದಾಗಿದ್ದಾರೆ. ಇದೇ ಗುರುವಾರದಿಂದ ಆರಂಭವಾಗಲಿರುವ “ಬುಚ್ಚಿಬಾಬು ಟ್ರೋಫಿ’ ಆಹ್ವಾನಿತ(Buchi Babu Tournament) ಪಂದ್ಯಾವಳಿಯಲ್ಲಿ ಆಡುವ ನಿರ್ಧಾರಕ್ಕೆ ಬಂದಿದ್ದಾರೆ. ಉಭಯ ಆಟಗಾರರು ಮುಂಬಯಿ ತಂಡದ ಪರ ಆಡಲಿದ್ದಾರೆ ಎಂದು ಮುಂಬೈ ಕ್ರಿಕೆಟ್​ ಅಸೋಸಿಯೇಶನ್​ ಅಧಿಕೃತ ಹೇಳಿಕೆ ನೀಡಿದೆ.

ಶ್ರೇಯಸ್‌ ಅಯ್ಯರ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಆಗಸ್ಟ್​ 27ರಂದು ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಎಂಸಿಎ ಜಂಟಿ ಕಾರ್ಯದರ್ಶಿ ದೀಪಕ್‌ ಪಾಟೀಲ್‌ ಹೇಳಿದ್ದಾರೆ. ದುಲೀಪ್​ ಟ್ರೋಫಿಯಲ್ಲಿಯೂ ಅಯ್ಯರ್​ ಆಡಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಬಿಸಿಸಿಐ ಹೊಸ ನಿಲುವಿಗೆ ಹೆದರಿ ಸೀನಿಯರ್​ ತಂಡದ ಆಟಗಾರರೆಲ್ಲ ದೇಶೀಯ ಟೂರ್ನಿಯಲ್ಲಿ ಆಡಲು ಸಾಲುಗಟ್ಟಿದಂತಿದೆ.

12 ತಂಡಗಳ ಪಂದ್ಯಾವಳಿ


ತಮಿಳುನಾಡಿನ 4 ಕೇಂದ್ರಗಳಲ್ಲಿ ನಡೆಯುವ ಪಂದ್ಯಾವಳಿಯಲ್ಲಿ 12 ತಂಡಗಳು ಪಾಲ್ಗೊಳ್ಳಲಿವೆ. ಇವುಗಳೆಂದರೆ ಮಧ್ಯಪ್ರದೇಶ, ದಿಲ್ಲಿ, ಹರಿಯಾಣ, ಹೈದರಾಬಾದ್‌, ಬಂಗಾಲ, ಮುಂಬಯಿ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್‌, ಛತ್ತೀಸ್‌ಗಢ, ಗುಜರಾತ್‌, ತಮಿಳುನಾಡು ಕ್ರಿಕೆಟ್‌ ಮಂಡಳಿ ಇಲೆವೆನ್‌ ಮತ್ತು ತಮಿಳುನಾಡು ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಬಳಗ.

ಇದನ್ನೂ ಓದಿ Duleep Trophy 2024: ದುಲೀಪ್ ಟ್ರೋಫಿ ವೇಳಾಪಟ್ಟಿ ಪ್ರಕಟ; ಕೊಹ್ಲಿ, ರೋಹಿತ್​ ಭಾಗವಹಿಸುವ ನಿರೀಕ್ಷೆ

ಭಾರತದ ಮಾಜಿ ಕ್ರಿಕೆಟಿಗ ಮೊತವರಪು ವೆಂಕಟ ಮಹಿಪತಿ ನಾಯ್ಡು ಅವರ ಸ್ಮರಣಾರ್ಥವಾಗಿ ನಡೆಸುವ ಕ್ರಿಕೆಟ್​ ಟೂರ್ನಿ ಇದಾಗಿದೆ. ಭಾರತ ಪರ ಆಡುವ ವೇಳೆ ಇವರು ಬುಚ್ಚಿ ಬಾಬು ನಾಯ್ಡು ಎಂದೇ ಖ್ಯಾತಿ ಗಳಿಸಿದ್ದರು. ಹೀಗಾಗಿ ಈ ಟೂರ್ನಿಗೆ ಇದೇ ಹೆಸರನ್ನು ಇರಿಸಲಾಗಿದೆ. ರಣಜಿ ಮಾದರಿಯಂತೆ 4 ದಿನಗಳ ಕಾಲ ನಡೆಯುವ ಟೂರ್ನಿ ಇದಾಗಿದೆ. 12 ತಂಡಗಳನ್ನು ತಲಾ ಮೂರರಂತೆ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.

ರಣಜಿ ಆಡಲು ನಿರಾಕರಿಸಿದ್ದ ಕಾರಣದಿಂದಾಗಿ ಟೀಮ್​ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಇಶಾನ್ ಕಿಶನ್(Ishan Kishan)​ ಬುಚ್ಚಿ ಬಾಬು(Buchi Babu) ಕ್ರಿಕೆಟ್ ಟೂರ್ನಿಯಲ್ಲಿ ಜಾರ್ಖಂಡ್ ಪರ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡುವ ಪ್ರಯತ್ನ ಮಾಡಲಿದ್ದಾರೆ.

ಕಳೆದ ವರ್ಷ ನವೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್​ಗೆ ಅಂದಿನ ಕೋಚ್​ ದ್ರಾವಿಡ್​ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್​ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.

Continue Reading

ಕ್ರೀಡೆ

Sachin Tendulkar: ‘ಕ್ರಿಕೆಟ್​ ದೇವರ’ ಮೊದಲ ಅಂತಾರಾಷ್ಟ್ರೀಯ ಶತಕಕ್ಕೆ ತುಂಬಿತು 34 ವರ್ಷ

Sachin Tendulkar: ಓಲ್ಡ್ ಟ್ರಾಫರ್ಡ್ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಸಚಿನ್​ ಈ ಶತಕದ ಆಟವಾಡಿದ್ದರು. ಇದರ ಸಹಾಯದಿಂದ ಭಾರತ ತಂಡ ಈ ಪಂದ್ಯವನ್ನು ಡ್ರಾ ಮಾಡಲು ಸಾಧ್ಯವಾಯಿತು.

VISTARANEWS.COM


on

Sachin Tendulkar
Koo

ಮುಂಬಯಿ: ಕ್ರಿಕೆಟ್ ದೇವರು ಎಂದೇ ಖ್ಯಾತಿ ಗಳಿಸಿರುವ ಭಾರತ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್(Sachin Tendulkar) ಅವರು ಹಲವು ದಾಖಲೆಗಳ ಸರದಾರ ಎನಿಸಿಕೊಂಡಿರುವುದು ನಮಗೆಲ್ಲ ತಿಳಿದೇ ಇದೆ. ಇಂದಿಗೂ ಅವರು ಯುವ ಆಟಗಾರರಿಗೆ ಸ್ಫೂತಿಯಾಗಿದ್ದಾರೆ. ಶತಕಕಗಳ ಶತಕ ಬಾರಿಸಿರುವ ಸಚಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೊದಲ ಶತಕ(Sachin Tendulkar maiden century) ಬಾರಿಸಿದಾಗ ಅವರಿಗಿನ್ನೂ 17 ವರ್ಷ. ಆ ಮೊದಲ ಶತಕಕ್ಕೆ ಇಂದಿಗೆ 34 ವರ್ಷಗಳ ಸಂಭ್ರಮ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಸಚಿನ್​ ಅವರ ಅಂದಿನ ಶತಕ ಫೊಟೊ ಹಂಚಿಕೊಂಡು ಶತಕದ ದಿನವನ್ನು ನೆನಪಿಸಿಕೊಂಡಿದೆ.

ಹೌದು, 1990 ಆಗಸ್ಟ್ 14ರಂದು ಸಚಿನ್ ತೆಂಡೂಲ್ಕರ್ ಮೊದಲ ಅಂತಾರಾಷ್ಟ್ರೀಯ ಶತಕ ಬಾರಿಸಿದ್ದರು. ಇಂಗ್ಲೆಂಡ್ ವಿರುದ್ಧ ಓಲ್ಡ್ ಟ್ರಾಫರ್ಡ್(Old Trafford) ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸಚಿನ್​ ಈ ಸಾಧನೆ ಮಾಡಿದ್ದರು. ಇದೇ ವೇಳೆ ಟೆಸ್ಟ್ ಮಾದರಿಯಲ್ಲಿ ಶತಕ ದಾಖಲಿಸಿದ ಮೂರನೇ-ಕಿರಿಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆಗ ಅವರಿಗೆ ಕೇವಲ 17 ವರ್ಷ ಪ್ರಾಯ.

ಅಂದು 189 ಎಸೆತ ಎದುರಿಸಿದ್ದ ಸಚಿನ್ ಅಜೇಯ 119 ರನ್ ಗಳಿಸಿದ್ದರು. 1989ರ ನವೆಂಬರ್​ನಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ್ದ ಸಚಿನ್ ಎಂಟು ಟೆಸ್ಟ್ ಪಂದ್ಯಗಳ ಬಳಿಕ ಶತಕ ಬಾರಿಸಿದ್ದರು. ಓಲ್ಡ್ ಟ್ರಾಫರ್ಡ್ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಸಚಿನ್​ ಈ ಶತಕದ ಆಟವಾಡಿದ್ದರು. ಇದರ ಸಹಾಯದಿಂದ ಭಾರತ ತಂಡ ಈ ಪಂದ್ಯವನ್ನು ಡ್ರಾ ಮಾಡಲು ಸಾಧ್ಯವಾಯಿತು. ಟೆಸ್ಟ್ ಕ್ರಿಕೆಟ್​ನಲ್ಲಿ 51 ಶತಕ ಬಾರಿಸಿದ್ದ ವಿಶ್ವ ದಾಖಲೆ ಈಗಲೂ ಸಚಿನ್​ ಹೆಸರಿನಲ್ಲಿದೆ. ಸಚಿನ್ ಟೆಸ್ಟ್​ನಲ್ಲಿ 15,921 ರನ್ ಗಳಿಸಿದ್ದಾರೆ.

ಇದನ್ನೂ ಓದಿ Vinesh Phogat : ವಿನೇಶ್​ ಪೋಗಟ್​ಗೆ ಬೆಳ್ಳಿ ಪದಕ ಕೊಡಿ; ಕುಸ್ತಿಪಟುವಿನ ಬೆಂಬಲಕ್ಕೆ ನಿಂತ ಸಚಿನ್ ತೆಂಡೂಲ್ಕರ್​

ಸಚಿನ್​ ಅವರು 24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading

ಕ್ರೀಡೆ

Manu Bhaker: ಭಾರೀ ಏರಿಕೆ ಕಂಡ ಮನು ಭಾಕರ್ ಬ್ರ್ಯಾಂಡ್​ ಮೌಲ್ಯ

Manu Bhaker: ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು

VISTARANEWS.COM


on

Manu Bhaker
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನ(Paris Olympics) ಶೂಟಿಂಗ್​ ವಿಭಾಗದಲ್ಲಿ ಅವಳಿ ಕಂಚಿನ ಪದಕ ಗೆದ್ದ ಮನು ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮನು ಭಾಕರ್​ ಅವರು 12 ಕಂಪನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದರು. ಪದಕ ಸಾಧನೆಯ ಬಳಿಕ ತನ್ನ ಚಿತ್ರಗಳನ್ನು ಬಳಸಿ, ತನಗೆ ಅಭಿನಂದನೆ ಸಲ್ಲಿಸುವ ಜಾಹೀರಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅನಧಿಕೃತವಾಗಿ ಪ್ರಕಟಿಸಿದ್ದು ಇದಕ್ಕೆ ಕಾರಣ. ಬ್ರ್ಯಾಂಡ್​​ಗಳು ತನಗೆ ಪ್ರಾಯೋಜಕತ್ವ ನೀಡಿರದಿದ್ದರೂ ಮತ್ತು ತನ್ನನ್ನು ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳದಿದ್ದರೂ, ಇದೀಗ ತನ್ನ ಯಶಸ್ಸಿನಲ್ಲಿ ಪಾಲು ಪಡೆಯಲು ಮುಂದಾಗುವ ಮೂಲಕ ಉಚಿತ ಮಾರ್ಕೆಟಿಂಗ್​ ಮಾಡಿವೆ ಎಂದು ಮನು ಅವರ ವ್ಯವಹಾರಗಳನ್ನು ನೋಡಿಕೊಳ್ಳುವ ತಂಡ ಆರೋಪಿಸಿ ಕಾನೂನು ನೋಟಿಸ್​ ಕಳುಹಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ವ್ಯಕ್ತಿಯೊಬ್ಬರಿಗೆ ಪ್ರಾಯೋಜಕತ್ವ ಒಪ್ಪಂದ ನೀಡದೆ ಅವರ ಚಿತ್ರಗಳ ಹಕ್ಕು ಪಡೆದುಕೊಳ್ಳುವಂತಿಲ್ಲ. ಇದು ಭಾರತದಲ್ಲಿ ಕಾನೂನುಬಾಹಿರ ಎನಿಸಿದೆ.

ಇದನ್ನೂ ಓದಿ Manu Bhaker : ಶೂಟಿಂಗ್​​ನಿಂದ ಬ್ರೇಕ್ ತೆಗೆದುಕೊಂಡ ಮನು ಭಾಕರ್​​, ಡೆಲ್ಲಿಯಲ್ಲಿ ನಡೆಯುವ ವಿಶ್ವಕಪ್​ಗೆ ಅಲಭ್ಯ

ಭಾಕರ್ (Manu Bhaker) ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹೀಗಾಗಿ ಅಕ್ಟೋಬರ್​ನಲ್ಲಿ ನಡೆಯಲಿರುವ ಶೂಟಿಂಗ್​ ವಿಶ್ವಕಪ್​ನಿಂದ ಹೊರಕ್ಕೆ ಉಳಿಯಲಿದ್ದಾರೆ ಎಂದು ಅವರ ಕೋಚ್ ಜಸ್ಪಾಲ್ ರಾಣಾ ಮಾಹಿತಿ ನೀಡಿದ್ದಾರೆ. ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ 22 ವರ್ಷದ ಭಾಕರ್ ಅವರು ಎರಡು ಪದಕ ಗೆದ್ದು ಇತಿಹಾಸ ಬರೆದಿದ್ದರು.

ಮಂಗಳವಾರ ಮುಂಜಾನೆ ಪ್ಯಾರಿಸ್​ನಿಂದ ಹಿಂದಿರುಗಿದ ಮನು ಭಾಕರ್​ ಕ್ರೀಡೆಯಿಂದ ಮೂರು ತಿಂಗಳ ವಿರಾಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅವರು ಮೂರು ತಿಂಗಳ ವಿರಾಮ ತೆಗೆದುಕೊಳ್ಳುತ್ತಿರುವುದರಿಂದ ಅಕ್ಟೋಬರ್​ನಲ್ಲಿ ಡೆಯಲಿರುವ ಶೂಟಿಂಗ್ ವಿಶ್ವಕಪ್​​ನಲ್ಲಿ ಭಾಗವಹಿಸುತ್ತಾರೆಯೇ ಎಂದು ನನಗೆ ಖಚಿತವಿಲ್ಲ. ಇದು ಸಾಮಾನ್ಯ ವಿರಾಮ. ಬಹಳ ಸಮಯದಿಂದ ಅವರು ತರಬೇತಿ ಪಡೆಯುತ್ತಿದ್ದಾರೆ.” ರಾಣಾ ತಿಳಿಸಿದ್ದಾರೆ. ಅಕ್ಟೋಬರ್ 13 ರಿಂದ 18 ರವರೆಗೆ ನವದೆಹಲಿಯಲ್ಲಿ ಶೂಟಿಂಗ್ ವಿಶ್ವ ಕಪ್​ ಆಯೋಜನೆಗೊಂಡಿದೆ.

Continue Reading
Advertisement
Viral News
Latest18 mins ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest29 mins ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ33 mins ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ37 mins ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Rachael Lillis The voice of Pokémon Misty and Jessie passes away
ಸಿನಿಮಾ38 mins ago

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Gold Rate Today
ಚಿನ್ನದ ದರ41 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Independence Day 2024 gadag students pm narendra modi
ಪ್ರಮುಖ ಸುದ್ದಿ1 hour ago

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Buchi Babu Tournament
ಕ್ರೀಡೆ1 hour ago

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Police Raid puttur mangalore
ಕ್ರೈಂ1 hour ago

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Actor Darshan case Renukaswamy blood found on Pavitra Gowda's slippers, beer bottle
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌