Site icon Vistara News

Rohit Sharma | ಇಶಾನ್​, ಸೂರ್ಯಕುಮಾರ್​ಗೆ ಅವಕಾಶ ನೀಡದ ರೋಹಿತ್​ ವಿರುದ್ಧ ಅಭಿಮಾನಿಗಳ ಆಕ್ರೋಶ

ishan Kishan

ಗುವಾಹಟಿ: ಶ್ರೀಲಂಕಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್​ ಕಿಶನ್​ ಹಾಗೂ ಸೂರ್ಯಕುಮಾರ್​ ಯಾದವ್​ಗೆ ಅವಕಾಶ ನೀಡದ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ (Rohit Sharma) ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಫಾರ್ಮ್​ನಲ್ಲಿರುವ ಅವರನ್ನು ಯಾಕೆ ಬೆಂಚು ಕಾಯಿಸಬೇಕಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಇಶಾನ್​ ಕಿಶನ್ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ದಾಖಲೆಯ ದ್ವಿ ಶತಕ ಬಾರಿಸಿದ್ದರು. ಅದೇ ರೀತಿ ಸೂರ್ಯಕುಮಾರ್​ ಯಾದವ್​ ಅವರು ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಹೀಗಾಗಿ ಅವರಿಬ್ಬರನ್ನೂ ತಂಡಕ್ಕೆ ಸೇರಿಕೊಳ್ಳಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ಮೊದಲ ಪಂದ್ಯಕ್ಕೆ ಟೀಮ್​ ಇಂಡಿಯಾ ಪ್ರಕಟಗೊಂಡಾಗ ಅವರಿಬ್ಬರ ಹೆಸರು ಇರಲಿಲ್ಲ. ಈ ವೇಳೆ ಕ್ರಿಕೆಟ್​ ಅಭಿಮಾನಿಗಳ ಕೋಪ ಸ್ಫೋಟಗೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಯಿತು.

ಭಾರತ ತಂಡದ ಮಾಜಿ ವೇಗದ ಬೌಲರ್​ ವೆಂಕಟೇಶ್​ ಪ್ರಸಾದ್ ಅವರು ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್​​ ತೀರ್ಮಾನವನ್ನು ಟೀಕಿಸಿದ್ದಾರೆ. ದ್ವಿ ಶತಕ ಬಾರಿಸಿದ ಆಟಗಾರನನ್ನು ಮಂದಿನ ಸರಣಿಗೆ ಬೆಂಚು ಕಾಯಿಸಿದ್ದು ಸರಿಯಲ್ಲ ಎಂಬುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ | INDvsSL ODI | ಮೊದಲ ಏಕ ದಿನ ಪಂದ್ಯ; ಟಾಸ್​ ಗೆದ್ದ ಶ್ರೀಲಂಕಾ ತಂಡದಿಂದ ಫೀಲ್ಡಿಂಗ್​ ಆಯ್ಕೆ, ಭಾರತಕ್ಕೆ ಮೊದಲು ಬ್ಯಾಟಿಂಗ್​​

Exit mobile version