Fifa World Cup | ಫಿಫಾ ವಿಶ್ವ ಕಪ್​ ಚಾಂಪಿಯನ್​ ತಂಡಕ್ಕೆ ಸಿಗಲಿರುವ ಬಹುಮಾನ ಮೊತ್ತವೆಷ್ಟು? - Vistara News

ಕ್ರೀಡೆ

Fifa World Cup | ಫಿಫಾ ವಿಶ್ವ ಕಪ್​ ಚಾಂಪಿಯನ್​ ತಂಡಕ್ಕೆ ಸಿಗಲಿರುವ ಬಹುಮಾನ ಮೊತ್ತವೆಷ್ಟು?

ಭಾನುವಾರ ನಡೆಯಲಿರುವ ಕತಾರ್​ ಫಿಫಾ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಫ್ರಾನ್ಸ್​ ಮತ್ತು ಅರ್ಜೆಂಟೀನಾ ತಂಡಗಳು ಸೆಣಸಾಟ ನಡೆಸಲಿವೆ.​

VISTARANEWS.COM


on

fifa world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ: ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ಫುಟ್ಬಾಲ್​ ವಿಶ್ವ ಕಪ್​(Fifa World Cup)ಗೆ ಭಾನುವಾರ ತೆರೆ ಬೀಳಲಿದೆ. ಲುಸೈಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ಮತ್ತು ಅಂತಿಮ ವಿಶ್ವ ಕಪ್​ ಆಡುತ್ತಿರುವ ಲಿಯೋನೆಲ್​ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕಾದಾಟ ನಡೆಸಲಿದೆ. ಈ ವಿಶ್ವ ಕಪ್ ಗೆಲ್ಲುವ ತಂಡಕ್ಕೆ ಭಾರಿ ಮೊತ್ತದ ಬಹುಮಾನವೇ ಸಿಗಲಿದೆ. ಅದು ಎಷ್ಟು ಎಂಬುದರ ವಿವರ ಈ ಕೇಳಗಿನಂತಿದೆ.

ಫೈನಲ್​ನಲ್ಲಿ ಫ್ರಾನ್ಸ್ ಅಥವಾ ಅರ್ಜೆಂಟೀನಾ ಮಧ್ಯೆ ಯಾರೇ ಗೆದ್ದರೂ ಈ ತಂಡಕ್ಕೆ 42 ಮಿಲಿಯನ್ ಡಾಲರ್ ಅಂದರೆ ಅಂದಾಜು 344 ಕೋಟಿ ರೂ. ಹಣ ಬಹುಮಾನದ ರೂಪದಲ್ಲಿ ಸಿಗಲಿದೆ. ದ್ವಿತೀಯ ಸ್ಥಾನ ಅಲಂಕರಿಸುವ ತಂಡಕ್ಕೆ 30 ಮಿಲಿಯನ್ ಅಂದರೆ ಸುಮಾರು 245 ಕೋಟಿ ರೂ. ಬಹುಮಾನ ಸಿಗಲಿದೆ.

ಈಗಾಗಲೇ ಮೂರನೇ ಸ್ಥಾನದ ಪಂದ್ಯ ಶನಿವಾರ ಅಂತ್ಯಕಂಡಿದ್ದು ಮೊರೊಕ್ಕೊ ವಿರುದ್ಧ ಗೆದ್ದ ಕ್ರೊವೇಶಿಯಾ ತಂಡ 27 ಮಿಲಿಯನ್ ಡಾಲರ್ (ಸರಿಸುಮಾರು 220 ಕೋಟಿ ರೂ.) ಸಂಭಾವನೆ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ಮೊರಾಕೊ 25 ಮಿಲಿಯನ್ ಡಾಲರ್ (ಸುಮಾರು 204 ಕೋಟಿ ರೂ.) ಹಣವನ್ನು ಬಹುಮಾನವನ್ನಾಗಿ ಪಡೆಯಲಿದೆ.

ಐದರಿಂದ ಎಂಟನೇ ಸ್ಥಾನ ಪಡೆಯುವ ತಂಡಗಳು 17 ಮಿಲಿಯನ್ ಡಾಲರ್ (ಸುಮಾರು 138 ಕೋಟಿ ರೂ.), ಎಂಟರಿಂದ 16 ನೇ ಶ್ರೇಯಾಂಕದ ತಂಡಗಳಿಗೆ 13 ಮಿಲಿಯನ್ ಡಾಲರ್ (106 ಕೋಟಿ ರೂ.) ಮೊತ್ತ ಸಿಗಲಿದೆ.

ಫಿಫಾ ವಿಶ್ವಕಪ್-2022 ರಲ್ಲಿ ತಂಡಗಳಿಗೆ ಬಹುಮಾನವಾಗಿ ನೀಡಿದ ಒಟ್ಟು ಮೊತ್ತ 440 ಮಿಲಿಯನ್ ಡಾಲರ್ ಆಗಲಿದೆ. ಭಾರತೀಯ ರೂಪಾಯಿಗೆ ಪರಿವರ್ತಿಸಿದರೆ ಸುಮಾರು 3600 ಕೋಟಿ ರೂ. ಆಗಲಿದೆ.

ಇದನ್ನೂ ಓದಿ | FIFA World Cup | ಕ್ರೊವೇಷಿಯಾ ತಂಡಕ್ಕೆ ಮೂರನೇ ಸ್ಥಾನ, ಮೊರಾಕ್ಕೊಗೆ 2-1 ಗೋಲ್​ಗಳ ಸೋಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

IPL 2024: ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವಿರಾಟ್ ಕೊಹ್ಲಿ 70* ರನ್ ಗಳಿಸಿದ್ದಾರೆ. ಆರ್​ಸಿಬಿಯ ಲೆಜೆಂಡರಿ ಓಪನರ್ ತಮ್ಮ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್​​ನಲ್ಲಿ ಆರು ಬೌಂಡರಿಗಳು ಮತ್ತು ಮೂರು ಸಿಕ್ಸರ್​ ಬಾರಿಸಿದ್ದಾರೆ. ಐಪಿಎಲ್ 2024 ರ ತಮ್ಮ ಒಟ್ಟು ರನ್​ಗಳನ್ನು 500 ರ ಗಡಿ ದಾಟಿಸಿದ್ದಾರೆ. ಈ ಮೂಲಕ ಅವರು ಐಪಿಎಲ್​ನಲ್ಲಿ ಬೃಹತ್ ಬ್ಯಾಟಿಂಗ್ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಇದೇ ವೇಳೆ ಅವರು ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟರ್​ ಡೇವಿಡ್​ ವಾರ್ನರ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಏನಿದು ದಾಖಲೆ?

ವಿರಾಟ್ ಕೊಹ್ಲಿ ಪ್ರಸ್ತುತ ‘ಆರೆಂಜ್ ಕ್ಯಾಪ್’ ಪಡೆದಿದ್ದು, ಎರಡನೇ ಸ್ಥಾನದಲ್ಲಿರುವ ಸಾಯಿ ಸುದರ್ಶನ್ ಅವರಿಗಿಂತ 82 ರನ್​ ಮುಂದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ರನ್ ಚೇಸ್ ಮಾಸ್ಟರ್ ಕ್ಲಾಸ್ ಮೂಲಕ ಕೊಹ್ಲಿ ಈ ಐಪಿಎಲ್ 2024 ಋತುವಿನಲ್ಲಿ 500 ರನ್ ಪೂರೈಸಿದ್ದಾರೆ. ಪ್ರಸ್ತುತ, ಅವರ ಪ್ರಸ್ತುತ ಐಪಿಎಲ್ 2024 ರ ಸಂಖ್ಯೆ 10 ಇನಿಂಗ್ಸ್​​ಗಳಲ್ಲಿ 71.42 ರ ಅದ್ಭುತ ಸರಾಸರಿಯಲ್ಲಿ ಈ ರನ್ ಮಾಡಿದ್ದಾರೆ.

ವಿಶೇಷವೆಂದರೆ, ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಒಂದೇ ಐಪಿಎಲ್ ಋತುವಿನಲ್ಲಿ ಏಳು ಬಾರಿ ಕನಿಷ್ಠ 500 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​​ನ ಸಕ್ರಿಯ ಆರಂಭಿಕ ಬ್ಯಾಟರ್​ ಡೇವಿಡ್ ವಾರ್ನರ್ ಅವರೊಂದಿಗೆ ಅವರು ಸಮಬಲ ಸಾಧಿಸಿದ್ದಾರೆ. ಅವರು ತಮ್ಮ ಐಪಿಎಲ್ ಪ್ರಯಾಣದಲ್ಲಿ ಏಳು ಬಾರಿ ಈ ಸಾಧನೆ ಮಾಡಿದ್ದಾರೆ.

ಕಳೆದ ವರ್ಷ 53ರ ಸರಾಸರಿಯಲ್ಲಿ 639 ರನ್ ಗಳಿಸಿದ್ದ ಕೊಹ್ಲಿ ಸತತ ಎರಡನೇ ಬಾರಿಗೆ ಈ ಋತುವಿನಲ್ಲಿ 500 ರನ್ ಪೂರೈಸಿದ್ದರು. ಅವರ ಇತ್ತೀಚಿನ ಬ್ಯಾಟಿಂಗ್ ಸಾಧನೆಯ ಜೊತೆಗೆ, ಆರ್​ಸಿಬಿ ತಂಡವು ಹಲವಾರು ಬೃಹತ್ ಐಪಿಎಲ್ ಬ್ಯಾಟಿಂಗ್ ಮೈಲಿಗಲ್ಲುಗಳನ್ನು ಹೊಂದಿದೆ. ಇದರಲ್ಲಿ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ (2016 ರಲ್ಲಿ 973 ರನ್) ಮತ್ತು ಪಂದ್ಯಾವಳಿಯ ಇತಿಹಾಸದಲ್ಲಿ ಒಟ್ಟಾರೆಯಾಗಿ ಅತಿ ದೊಡ್ಡ ಸ್ಕೋರ್ ಆಗಿದೆ.

ವಾರ್ನರ್ 2014 ರಿಂದ 2020 ರವರೆಗೆ ಸತತ ಆರು ಐಪಿಎಲ್ ಪಂದ್ಯಗಳಲ್ಲಿ ಒಂದು ಋತುವಿನಲ್ಲಿ 500 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕಳೆದ ವರ್ಷ ಅವರು ಕ್ಯಾಪಿಟಲ್ಸ್ ಪರ ಸುಮಾರು 37 ಸರಾಸರಿಯಲ್ಲಿ 516 ರನ್ ಗಳಿಸಿದ್ದರು.

Continue Reading

ಕ್ರೀಡೆ

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

Kane Williamson: ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

VISTARANEWS.COM


on

Kane Williamson
Koo

ನವದೆಹಲಿ: ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಜೂನ್​ನಲ್ಲಿ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್​​ನಲ್ಲಿ ಅನುಭವ ಹೊಂದಿರುವ ನ್ಯೂಜಿಲ್ಯಾಂಡ್​ ತಂಡವನ್ನು ನಾಲ್ಕನೇ ಟಿ20 ವಿಶ್ವ ಕಪ್​ನಲ್ಲಿ ಮುನ್ನಡೆಸಲಿದ್ದಾರೆ.

ನ್ಯೂಜಿಲ್ಯಾಂಡ್​​ನ ಆಯ್ಕೆದಾರ ಸ್ಯಾಮ್ ವೆಲ್ಸ್ ಬಹಿರಂಗಪಡಿಸಿದ ಅಧಿಕೃತ ತಂಡದ ಪ್ರಕಟಣೆಯಲ್ಲಿ, ಕೇನ್ ವಿಲಿಯಮ್ಸನ್ ನಾಯಕನಾಗಿ ತಮ್ಮ ನಾಲ್ಕನೇ ಟಿ 20 ವಿಶ್ವಕಪ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಅವರ ಒಟ್ಟು ಆರು ಬಾರಿ ಆಡಿದ್ದಾರೆ. ಅವರ ನಾಯಕತ್ವದ ಗುಣಗಳು ಮತ್ತು ಅನುಭವವು ನ್ಯೂಜಿಲ್ಯಾಂಡ್​ಗೆ ಅಮೂಲ್ಯ ಆಸ್ತಿ ಎಂದು ಹೇಳಿದ್ದಾರೆ.

ಟಿ 20 ವಿಶ್ವಕಪ್ ತಂಡದ ಅನುಭವಿಗಳ ಸಾಲಿನಲ್ಲಿ ವಿಲಿಯಮ್ಸನ್ ಒಬ್ಬರೇ ಅಲ್ಲ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಿಮ್ ಸೌಥಿ ಆಡಲಿದ್ದಾರೆ ಅವರು ಜಾಗತಿಕ ಟೂರ್ನಿಗೆ ಏಳನೇ ಬಾರಿಗೆ ಆಯ್ಕೆಯಾಗಿದ್ದಾರೆ. ಟ್ರೆಂಟ್ ಬೌಲ್ಟ್ ಐದು ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಿದ್ದಾರೆ. ಅನುಭವಿ ಎಡಗೈ ಬೌಲರ್ ಸೇರಿದಂಥೆ ಮೂವರು ನ್ಯೂಜಿಲೆಂಡ್ ತಂಡದ ಪ್ರಬಲ ಶಕ್ತಿಯಾಗಿದ್ದಾರೆ.

ಟಿ 20 ವಿಶ್ವ ಕಪ್​ನಲ್ಲಿ ಹೊಂದಾಣಿಕೆ ಕೀಲಿ

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿನ ವೈವಿಧ್ಯಮಯ ಆಟದ ಪರಿಸ್ಥಿತಿಗಳನ್ನು ಗುರುತಿಸಿ, ಆಯ್ಕೆದಾರರು ಹೊಂದಾಣಿಕೆಗೆ ಆದ್ಯತೆ ನೀಡಿದ್ದಾರೆ. ಆಯ್ಕೆಯಾದ ಹದಿನೈದು ಆಟಗಾರರಲ್ಲಿ ಹದಿಮೂರು ಮಂದಿ 2022 ರಲ್ಲಿ ತಂಡದ ಇತ್ತೀಚಿನ ವೆಸ್ಟ್ ಇಂಡೀಸ್ ಪ್ರವಾಸದ ಭಾಗವಾಗಿದ್ದರು, ಇದು ಅವರಿಗೆ ನೆರವಾಗಲಿದೆ.

ಇದನ್ನೂ ಓದಿ:

ಕೆರಿಬಿಯನ್ ಪ್ರೀಮಿಯರ್ ಲೀಗ್ ಟಿ 20 ಯಲ್ಲಿ ಆರು ಆಟಗಾರರು ಸ್ಪರ್ಧಿಸಿದ್ದಾರೆ. ಇದು ಕೆರಿಬಿಯನ್ ಪಿಚ್​ಗಳ ಬಗ್ಗೆ ಅವರ ಜ್ಞಾನ ಮತ್ತಷ್ಟು ಹೆಚ್ಚಿಸಿದೆ.

ಅನುಭವವು ಪ್ರಮುಖ ಅಂಶವಾಗಿದ್ದರೂ, ತಂಡವು ಹೊಸ ಮುಖಗಳನ್ನು ಸ್ವಾಗತಿಸಲಿದೆ. ಭರವಸೆಯ ಬೌಲರ್ ಮ್ಯಾಟ್ ಹೆನ್ರಿ ಮತ್ತು ಬ್ಯಾಟಿಂಗ್ ಆಲ್ರೌಂಡರ್ ರಚಿನ್ ರವೀಂದ್ರ ಮಾತ್ರ ಟಿ20 ವಿಶ್ವಕಪ್ ತಂಡದಲ್ಲಿದ್ದಾರೆ. ಅವರ ಸೇರ್ಪಡೆಯು ಯುವ ಪ್ರತಿಭೆಗಳನ್ನು ಪೋಷಿಸುವ ಬ್ಲ್ಯಾಕ್ ಕ್ಯಾಪ್ಸ್ ನ ಬದ್ಧತೆಯಾಗಿದೆ.

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಕ್ರೀಡೆ

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

CSK vs SRH: 40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

CSK vs SRH
Koo

ಚೆನ್ನೈ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸತತ ಎರಡು ಸೋಲು ಕಂಡು ಮಂಕಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಭರ್ಜರಿ(CSK vs SRH) ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ ತವರಿನಲ್ಲಿ ನಡೆದ ಭಾನುವಾರದ ಪಂದ್ಯದಲ್ಲಿ 78 ರನ್​ಗಳ ಗೆಲುವು ಸಾಧಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಕಾಡಿದ ತುಷಾರ್​ ದೇಶ್​ಪಾಂಡೆ


ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ಗೆ ಮೊದಲ ಎಸೆತದಲ್ಲೇ ಟ್ರಾವಿಸ್​ ಹೆಡ್​ ಬೌಂಡರಿ ಮೂಲಕ ರನ್​ ಖಾತೆ ತೆರೆದರು. ಮುಂದಿನ ಓವರ್​ನಲ್ಲಿ ತುಷಾರ್​ ದೇಶ್​ಪಾಂಡೆಗೆ ಸಿಕ್ಸರ್​ ರುಚಿ ತೋರಿಸಿದರು. ಅಭಿಷೇಕ್​ ಶರ್ಮ ಕೂಡ ಒಂದು ಸಿಕ್ಸರ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಈ ವೇಳೆ ಧೋನಿ ನೀಡಿದ ಸಲಹೆಯನ್ನಾಧರಿಸಿ ಇದೇ ಓವರ್​ನಲ್ಲಿ ತುಷಾರ್​ ದೊಡ್ಡ ಬೇಟೆಯಾಡುವಲ್ಲಿ ಯಶಸ್ವಿಯಾದರು. ಟ್ರಾವಿಸ್​ ಹೆಡ್(13)​ ಮತ್ತು ಅನ್ಮೋಲ್ಪ್ರೀತ್ ಸಿಂಗ್​(0) ಖಾತೆ ತರೆಯುವ ಮುನ್ನವೇ ವಿಕೆಟ್​ ಕಿತ್ತು ಪೆವಿಲಿಯನ್​ ಕಡೆಗೆ ದಾರಿ ತೋರಿದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೈದರಾಬಾದ್​ ಈ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ಅಭಿಷೇಕ್​ ಶರ್ಮ(15) ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಕೂಡ ತುಷಾರ್ ಪಾಲಾಯಿತು. ಅಲ್ಲಿಗೆ ಅಗ್ರ ಕ್ರಮಾಂಕದ ಮೂರು ವಿಕೆಟ್​ ಕೂಡ ತುಷಾರ್​ ಕಿತ್ತರು.

40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಹೆನ್ರಿಚ್​ ಕ್ಲಾಸೆನ್​ ಮತ್ತು ಅಬ್ದುಲ್​ ಸಮದ್​ ಕೂಡ ಈ ಪಂದ್ಯದಲ್ಲಿ ರನ್​ ಗಳಿಸಲು ಪರದಾಡಿದರು. ಕ್ಲಾಸೆನ್​ 21 ಎಸೆತ ಎದುರಿಸಿ 20 ರನ್​ ಗಳಿಸಿದರು. ಸಿಡಿದದ್ದು 1 ಸಿಕ್ಸರ್​ ಮಾತ್ರ. ಅಬ್ದುಲ್​ ಸಮದ್ 18 ಎಸೆತಗಳಿಂದ 19 ರನ್​ ಕಲೆಹಾಕಿದರು. ಡೇರಿಯಲ್​ ಮಿಚೆಲ್​ ಈ ಪಂದ್ಯದಲ್ಲಿ 5 ಕ್ಯಾಚ್​ ಹಿಡಿದು ಮಿಂಚಿದರು.

ಗಾಯಕ್ವಾಡ್​ ಸೂಪರ್​ ಅರ್ಧಶತಕ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್​ ಕಳೆದುಕೊಂಡರೂ ಕೂಡ ಇದರಿಂದ ವಿಚಲಿತರಾಗಲಿಲ್ಲ. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಡೇರಿಯಲ್​ ಮಿಚೆಲ್​ ಸೇರಿಕೊಂಡು ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ನಡೆಸಿ ಅರ್ಧಶತಕ ಬಾರಿಸಿದರು. ಗಾಯಕ್ವಾಡ್​ ಕೇವಲ 27 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಜಯ್​ದೇವ್​ ಉನಾದ್ಕತ್​ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಗಾಯಕ್ವಾಡ್ ಮತ್ತು ಮಿಚೆಲ್​ ದ್ವಿತೀಯ ವಿಕೆಟ್​ಗೆ 107 ರನ್​ಗಳ ಅಮೋಘ ಜತೆಯಾಟ ನಡೆಸಿತು. ಮಿಚೆಲ್​ ಅವರು ​ಉನಾದ್ಕತ್ ಎಸೆತ ಲೋ ಫುಲ್​ಟಾಸ್ ಎಸೆತಕ್ಕೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. 7 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿದ ಮಿಚೆಲ್​ 52 ರನ್​ ಗಳಿಸಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

​ಮಿಚೆಲ್​ ವಿಕೆಟ್​ ಬಿದ್ದರೂ ಕೂಡ ಚೆನ್ನೈ ತಂಡದ ರನ್​ ಗಳಿಕೆಗೆ ಯಾವುದೇ ಹಿನ್ನಡೆಯಾಗಲಿಲ್ಲ. ಶಿವಂ ದುಬೆ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು. 19.2 ಓವರ್​ ತನಕ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಗಾಯಕ್ವಾಡ್​ 98 ರನ್​ ಗಳಿಸಿ ವಿಕೆಟ್​ ಕಳೆದುಕೊಂಡು ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಕಳೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಶತಕ ಸಿಡಿಸಿದ್ದರು. ಸತತವಾಗಿ 2ನೇ ಶತಕ ಬಾರಿಸುವ ಅವಕಾಶ ಕೈ ಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಗಾಯಕ್ವಾಡ್​ 10 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 98 ರನ್​ ಗಳಿಸಿದರು.

ಶಿವಂ ದುಬೆ 4 ಬಿಗ್​ ಹಿಟ್ಟಿಂಗ್​ ಸಿಕ್ಸರ್​ ಮತ್ತು 1 ಬೌಂಡರಿ ಬಾರಿಸಿ ಅಜೇಯ 39 ರನ್​ ಗಳಿಸಿದರು. ಧೋನಿ ಕೂಡ 5 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೈದರಾಬಾದ್​ ಪರ ಭುವನೇಶ್ವರ್ ಕುಮಾರ್​, ಟಿ. ನಟರಾಜನ್​ ಮತ್ತು ಉನಾದ್ಕತ್​ ತಲಾ ಒಂದು ವಿಕೆಟ್​ ಕಿತ್ತರು.​​

Continue Reading
Advertisement
srinivasa prasad sutturu sri
ಕರ್ನಾಟಕ10 mins ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ31 mins ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ37 mins ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್52 mins ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ60 mins ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ1 hour ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್2 hours ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Kane Williamson
ಕ್ರೀಡೆ2 hours ago

Kane Williamson : ನ್ಯೂಜಿಲ್ಯಾಂಡ್ ವಿಶ್ವ ಕಪ್​ ತಂಡಕ್ಕೆಕೇನ್​ ವಿಲಿಯಮ್ಸನ್​ ನಾಯಕ

PM Narendra Modi
ಕರ್ನಾಟಕ2 hours ago

PM Narendra Modi: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

PM Not OBC Said by Rahul Gandhi and BJP hits back to him
ಪ್ರಮುಖ ಸುದ್ದಿ2 hours ago

PM Narendra Modi: ಸಂಪತ್ತು ಮರುಹಂಚಿಕೆಯ ರಾಹುಲ್ ಗಾಂಧಿ ಐಡಿಯಾ ನಗರ ನಕ್ಸಲ್ ಚಿಂತನೆ: ಪಿಎಂ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202418 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202420 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202422 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202422 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌