Fifa World Cup | ಅರ್ಜೆಂಟೀನಾದ ಕರೆನ್ಸಿಯಲ್ಲಿ ಫುಟ್ಬಾಲ್​ ತಾರೆ ಲಿಯೋನೆಲ್​ ಮೆಸ್ಸಿಯ ಫೋಟೊ! - Vistara News

ಕ್ರೀಡೆ

Fifa World Cup | ಅರ್ಜೆಂಟೀನಾದ ಕರೆನ್ಸಿಯಲ್ಲಿ ಫುಟ್ಬಾಲ್​ ತಾರೆ ಲಿಯೋನೆಲ್​ ಮೆಸ್ಸಿಯ ಫೋಟೊ!

ಫ್ರಾನ್ಸ್​ ವಿರುದ್ಧ ಗೆಲುವು ದಾಖಲಿಸಿ 36 ವರ್ಷದ ಬಳಿಕ ಚಾಂಪಿಯನ್​ ಪಟ್ಟ ಅಲಂಕರಿಸಿದ ಅರ್ಜೆಂಟೀನಾ ಇದೀಗ ತಂಡದ ಆಟಗಾರ ಲಿಯೋನೆಲ್​ ಮೆಸ್ಸಿಯ ಫೋಟೊವನ್ನು ತನ್ನ ದೇಶದ ಕರೆನ್ಸಿಯಲ್ಲಿ ಮುದ್ರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

VISTARANEWS.COM


on

lionel messi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ಯೂನಸ್​ ಐರಿಸ್:​ 36 ವರ್ಷಗಳ ಬಳಿಕ ಅರ್ಜೆಂಟೀನಾ ತಂಡವನ್ನು ಫಿಫಾ ವಿಶ್ವ(Fifa World Cup ) ಚಾಂಪಿಯನ್​ ಮಾಡಿದ ಲಿಯೋನೆಲ್ ಮೆಸ್ಸಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಇದೀಗ ಈ ಗೆಲುವಿನ ಗೌರವವಾಗಿ ಅರ್ಜೆಂಟೀನಾ ಸರ್ಕಾರ ತನ್ನ ದೇಶದ ನೋಟಿನ ಮೇಲೆ ಮೆಸ್ಸಿ ಚಿತ್ರವನ್ನು ಮುದ್ರಿಸುವ ತೀರ್ಮಾನ ಕೈಗೊಂಡಿದೆ ಎಂದು ತಿಳಿದುಬಂದಿದೆ.

ಅರ್ಜೆಂಟೀನಾ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಜಾರಿಗೆ ತಂದು ಅಲ್ಲಿನ ನೋಟಿನ ಮೇಲೆ ಮೆಸ್ಸಿಯ ಚಿತ್ರವನ್ನು ಮುದ್ರಿಸಿದರೆ ಬಹುಶಃ ಆಟಗಾರನೊಬ್ಬನ ಫೋಟೊ ದೇಶದ ಕರೆನ್ಸಿ ಮೇಲೆ ಮುದ್ರಣಗೊಳ್ಳುವುದು ಇತಿಹಾದಲ್ಲಿ ಇದೇ ಮೊದಲು ಎಂಬ ಖ್ಯಾತಿಗೆ ಮೆಸ್ಸಿ ಪಾತ್ರರಾಗಲಿದ್ದಾರೆ.

ಅಧಿಕೃತವಾಗಿಲ್ಲ

ಹೆಚ್ಚಾಗಿ ಪ್ರಮುಖ ಪ್ರಶಸ್ತಿ ಗೆದ್ದ ಬಳಿಕ ಆಟಗಾರರಿಗೆ ಆ ದೇಶದ ಸರ್ಕಾರ ಅತ್ಯನ್ನತ ಪ್ರಶಸ್ತಿ ನೀಡಿ ಗೌರವಿಸುವುದು ವಾಡಿಕೆ. ಆದರೆ ಇದೀಗ ದೇಶದ ನೋಟಿನ ಮೇಲೆ ಆಟಗಾರನೊಬ್ಬನ ಫೋಟೊ ಅಚ್ಚೊತ್ತುವ ವಿಷಯ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಲಿದೆ. ಆದರೆ ಈ ವಿಷಯದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಬಗ್ಗೆ ಅರ್ಜೆಂಟೀನಾದ ಸರ್ಕಾರಿ ಇಲಾಖೆಯಲ್ಲಿ ಚರ್ಚೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ | Fifa World Cup | ಫ್ರಾನ್ಸ್​ ವಿರುದ್ಧದ ಫೈನಲ್​ಗೂ ಮುನ್ನ ಅರ್ಜೆಂಟೀನಾ ಆಟಗಾರ ಆ್ಯಂಜಲ್​ ಡಿ ಮರಿಯ ಪತ್ನಿಗೆ ಕಳುಹಿಸಿದ ವಾಟ್ಸಪ್‌ ಸಂದೇಶ ವೈರಲ್​!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Rafael Nadal: ಸ್ನಾಯು ಸೆಳೆತದಿಂದ ಬರೋಬ್ಬರಿ ಒಂದು ವರ್ಷ ಟೆನಿಸ್​ನಿಂದ ದೂರ ಉಳಿದಿದ್ದ ನಡಾಲ್​ ಇದೇ ವರ್ಷಾರಂಭದಲ್ಲಿ ನಡೆದಿದ್ದ ಬ್ರಿಸ್ಬೇನ್‌ ಇಂಟರ್‌ನ್ಶಾಶನಲ್‌ ಕಣಕ್ಕಿಳಿದಿದ್ದರು. ಆದರೆ ಮತ್ತೆ ಗಾಯಕ್ಕೆ ತುತ್ತಾಗಿ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಕೂಟದಿಂದ ಹಿಂದೆ ಸರಿದಿದ್ದರು. ಇದೀಗ ಲೇವರ್‌ ಕಪ್‌ ಟೂರ್ನಿ ನಡಾಲ್​ಗೆ ವಿದಾಯದ ಟೂರ್ನಿಯಾಗುವ ಸಾಧ್ಯತೆ ಇದೆ.

VISTARANEWS.COM


on

Rafael Nadal
Koo

ಪ್ಯಾರಿಸ್‌: ಪದೇ ಪದೇ ಗಾಯದ ಸಮಸ್ಯೆಯನ್ನು ಎದುರಿಸುತ್ತಿರುವ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್, ಸ್ಪೇನ್‌ನ ರಾಫೆಲ್ ನಡಾಲ್(Rafael Nadal)​ ಅವರು 2024ರ ಲೇವರ್‌ ಕಪ್‌(Laver Cup 2024) ಟೆನಿಸ್‌ ಟೂರ್ನಿಯಲ್ಲಿ ಆಡಲಿದ್ದಾರೆ. ಅದೇ ಅವರ ಕೊನೆ ಟೂರ್ನಿಯಾಗುವ(rafael nadal retirement) ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಸ್ನಾಯು ಸೆಳೆತದಿಂದ ಬರೋಬ್ಬರಿ ಒಂದು ವರ್ಷ ಟೆನಿಸ್​ನಿಂದ ದೂರ ಉಳಿದಿದ್ದ ನಡಾಲ್​ ಇದೇ ವರ್ಷಾರಂಭದಲ್ಲಿ ನಡೆದಿದ್ದ ಬ್ರಿಸ್ಬೇನ್‌ ಇಂಟರ್‌ನ್ಶಾಶನಲ್‌ ಕಣಕ್ಕಿಳಿದಿದ್ದರು. ಆದರೆ ಮತ್ತೆ ಗಾಯಕ್ಕೆ ತುತ್ತಾಗಿ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಕೂಟದಿಂದ ಹಿಂದೆ ಸರಿದಿದ್ದರು. ಇದೀಗ ಲೇವರ್‌ ಕಪ್‌ ಟೂರ್ನಿ ನಡಾಲ್​ಗೆ ವಿದಾಯದ ಟೂರ್ನಿಯಾಗುವ ಸಾಧ್ಯತೆ ಇದೆ.

ಇದೇ ವರ್ಷಾರಂಭದಲ್ಲಿ 37 ವರ್ಷದ ನಡಾಲ್ ನಾನು ಈಗಲೇ ನಿವೃತ್ತಿ ಘೋಷಿಸಲು ಬಯಸುವುದಿಲ್ಲ ಎಂದು ಹೇಳಿದ್ದರು. ‘ಮುಂದೆ ಏನಾಗಬಹುದೆಂದು ಈಗಲೇ ಹೇಳಲು ಸಾಧ್ಯವಿಲ್ಲ. ನಾನೇ ನನಗೊಂದು ಅವಕಾಶ ನೀಡಬೇಕಿದೆ. ಹಿಂದೆಯೂ ಅನೇಕ ಸಲ ಗಾಯದಿಂದ ಚೇತರಿಸಿ ಟೆನಿಸ್​ ಅಂಗಳಕ್ಕೆ ಮರಳಿ ಟ್ರೋಫಿ ಗೆದ್ದಿದ್ದೇನೆ. ದೈಹಿಕವಾಗಿ ನಾನು ಗಟ್ಟಿಯಾಗಿದ್ದು ಆಡುವ ಮನಸ್ಸು ಇದ್ದಾಗ ನಾನೇಕೆ ಈಗಲೇ ನಿವೃತ್ತಿಗೆ ಕಾಲ ನಿಗದಿಪಡಿಸಲಿ” ಎಂದು ಹೇಳುವ ಮೂಲಕ ತಮ್ಮ ನಿವೃತ್ತಿ ಸದ್ಯಕ್ಕಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದರು.

ಇದನ್ನೂ ಓದಿ Rafael Nadal: ಫ್ರೆಂಚ್​ ಓಪನ್, ಒಲಿಂಪಿಕ್ಸ್​ ಟೂರ್ನಿಯಲ್ಲಿ ಆಡುವ ವಿಶ್ವಾಸ ವ್ಯಕ್ತಪಡಿಸಿದ ನಡಾಲ್​

ಆದರೆ, ಅವರನ್ನು ಗಾಯ ಬೆನ್ನು ಬಿಡುವಂತೆ ತೋರುತ್ತಿಲ್ಲ. ಹೀಗಾಗಿ ಅವರು ಅಂತಿಮ ನಿರ್ಧಾರವೊಂದನ್ನು ಕೈಗೊಂಡಿದ್ದು ಲೇವರ್‌ ಕಪ್‌ ಬಳಿಕ ವಿದಾಯ ಘೋಷಿಸ ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಷ ಟೆನಿಸ್​ ದಿಗ್ಗಜ ರಫೆಲ್‌ ನಡಾಲ್‌ ಅವರನ್ನು ಐಟಿ ಸಂಸ್ಥೆ ಇನ್ಫೋಸಿಸ್(Infosys) ಬ್ರ್ಯಾಂಡ್‌ ಅಂಬಾಸಿಡರ್(global ambassador) ಆಗಿ ನೇಮಿಸಿತ್ತು. ಮುಂದಿನ ಮೂರು ವರ್ಷಗಳ ಕಾಲ ನಡಾಲ್​ ಅವರು ಇನ್ಫೋಸಿಸ್​ನ ಬ್ರ್ಯಾಂಡ್‌ ಅಂಬಾಸಿಡರ್ ಆಗಿರಲಿದ್ದಾರೆ.

“ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಗೌರವಾನ್ವಿತ ಟೆನಿಸ್​ ಚಾಂಪಿಯನ್​ ಆಗಿರುವ ರಫೆಲ್‌ ನಡಾಲ್‌ ಅವರನ್ನು ಇನ್ಫೋಸಿಸ್‌ನ ರಾಯಭಾರಿಯಾಗಿ ಸ್ವಾಗತಿಸಲು ಹೆಮ್ಮೆಯಾಗುತ್ತಿದೆ” ಎಂದು ಇನ್ಫೋಸಿಸ್​ನ ಸಿಇಒ ಮತ್ತು ಎಂಡಿ ಆಗಿರುವ ಸಲೀಲ್ ಪರೇಖ್ ಹೇಳಿದ್ದರು. ಎಟಿಪಿ ಟೂರ್, ರೋಲ್ಯಾಂಡ್-ಗ್ಯಾರೋಸ್, ಆಸ್ಟ್ರೇಲಿಯನ್ ಓಪನ್ ಮತ್ತು ಸೇರಿ ಟೆನಿಸ್ ಹಾಲ್ ಆಫ್ ಫೇಮ್‌ಗೆ ಡಿಜಿಟಲ್ ಇನ್ನೋವೇಶನ್ ಪಾಲುದಾರರಾಗಿ, ಬ್ರಾಂಡ್ ಇನ್ಫೋಸಿಸ್ ಜಾಗತಿಕವಾಗಿ ಎಐ, ಕ್ಲೌಡ್, ಡೇಟಾವನ್ನು ಬಳಸಿಕೊಂಡು ಒಂದು ಬಿಲಿಯನ್ ಅಭಿಮಾನಿಗಳಿಗೆ ಟೆನಿಸ್​ ಕುರಿತ ಮಾಹಿತಿಯನ್ನು ನೀಡಲು ಸದಾ ಸಿದ್ಧ ಎಂದು ಇನ್ಫೋಸಿಸ್ ತನ್ನ ಹೇಳಿಕೆಯಲ್ಲಿ ಪ್ರಕಟಿಸಿತ್ತು.

Continue Reading

ಕ್ರೀಡೆ

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

Gukesh D: 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

VISTARANEWS.COM


on

Gukesh D
Koo

ಬೆಂಗಳೂರು: ಭಾನುವಾರ ನಡೆದಿದ್ದ ಫಿಡೆ ಕ್ಯಾಂಡಿಡೇಟ್ಸ್‌ ಚೆಸ್‌ನಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್‌(Gukesh D) ಅವರ ಸಾಧನೆಯ ಹಿಂದೆ ಅವರ ತಂದೆಯ ಅಪಾರ ಶ್ರಮವಿದೆ. ಮಗನ ಚೆಸ್​ ಸಾಧನೆಗೆ ಯಾವುದೇ ಅಡೆತಡೆ ಉಂಟಾಗಬಾರದೆಂದು ತಂದೆ ತಂದೆ ಡಾ.ರಜನೀಕಾಂತ್‌(Rajinikanth) ಅವರು ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಹೌದು, ಬಾಲ್ಯದಲ್ಲೇ ಚೆಸ್‌ ಮೇಲೆ ಒಲವು ಹೊಂದಿದ್ದ ಗುಕೇಶ್‌ಗೆ ಕೋಚಿಂಗ್‌, ಟೂರ್ನಿಯ ಸಿದ್ಧತೆ, ಪ್ರಯಾಣಕ್ಕಾಗಿ ಪೋಷಕರು ಆರ್ಥಿಕ ಸಮಸ್ಯೆ ಎದುರಿಸಿದ್ದರು. ಆದರೆ, ಮಗನ ಸಾಧನೆಗೆ ಹಣಕಾಸಿನ ಕೊರತೆ ಅಡ್ಡಿಯಾಗಬಾರದೆಂದು ತಂದೆ ಡಾ.ರಜನೀಕಾಂತ್‌, ತಾಯಿ ಪದ್ಮಾ ದೃಢನಿರ್ಧಾರ ಕೈಗೊಂಡಿದ್ದರು. ಹಣ ಹೊಂದಿಸಲು ಕ್ರೌಂಡ್‌ ಪಂಡಿಂಗ್ ಕೂಡಾ ನಡೆಸಿದ್ದರು. ಇದು ಮಾತ್ರವಲ್ಲದೆ ಗುಕೇಶ್‌ ಜತೆ ಟೂರ್ನಿಗಳಲ್ಲಿ ಪಾಲ್ಗೊಳ್ಳಲು ವಿದೇಶಕ್ಕೆ ಹೋಗುವ ಕಾರಣಕ್ಕಾಗಿ ಅವರ ತಂದೆ 2017-18ರಲ್ಲಿ ತಮ್ಮ ವೈದ್ಯ ವೃತ್ತಿಯನ್ನೇ ತಾತ್ಕಾಲಿಕವಾಗಿ ತೊರೆದಿದ್ದರು.

ಇದನ್ನೂ ಓದಿ D Gukesh: 17ನೇ ವಯಸ್ಸಿಗೇ ‘ಚೆಸ್‌ ಕ್ಯಾಂಡಿಡೇಟ್ಸ್‌’ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಗುಕೇಶ್!

ಪೋಷಕರ ತ್ಯಾಗ ಮತ್ತು ಶ್ರಮಕ್ಕೆ ಇಂದು ಗುಕೇಶ್‌ ಚೆಸ್​ನಲ್ಲಿ ಮಿಂಚುವ ಮೂಲಕ ಅವರಿಗೂ ಕೀರ್ತಿ ತಂದಿದ್ದಾನೆ. 12ನೇ ವರ್ಷದಲ್ಲೇ ಗ್ರ್ಯಾಂಡ್‌ಮಾಸ್ಟರ್‌ ಆಗಿ ಹೊರಹೊಮ್ಮಿದ್ದ ಗುಕೇಶ್‌, ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪ್ರಶಸ್ತಿ ಗೆದ್ದ 2ನೇ ಭಾರತೀಯ ಎಂಬ ಕೀರ್ತಿಯೂ ಅವರದ್ದಾಗಿದೆ. ವಿಶ್ವನಾಥನ್‌ ಆನಂದ್‌ ಮೊದಲಿಗ. ಅವರು 2014ರಲ್ಲಿ ಕ್ಯಾಂಡಿಡೇಟ್ಸ್‌ ಪ್ರಶಸ್ತಿ ಗೆದ್ದಿದ್ದರು.

ಡಿ.ಗುಕೇಶ್‌ ವಿಶ್ವ ಚಾಂಪಿಯನ್‌ ಎನಿಸಿಕೊಳ್ಳಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಈ ಸ್ಪರ್ಧೆಯಲ್ಲಿ ಚೀನಾದ ಡಿಂಗ್‌ ಲಿರೆನ್‌ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ವರ್ಷಾಂತ್ಯದಲ್ಲಿ ಪಂದ್ಯ ನಡೆಯಲಿದ್ದು, ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ಭಾರತದಿಂದ ಈ ವರೆಗೂ ವಿಶ್ವನಾಥನ್‌ ಆನಂದ್ ಮಾತ್ರ ವಿಶ್ವ ಚಾಂಪಿಯನ್‌ ಆಗಿದ್ದಾರೆ. ಅವರು 5 ಬಾರಿ ಪ್ರಶಸ್ತಿ ಗೆದ್ದಿದ್ದಾರೆ.

ಭಾನುವಾರ ತಡರಾತ್ರಿ ಕೆನಡಾದ ಟೊರೊಂಟೊದಲ್ಲಿ ನಡೆದ ಮುಕ್ತ ವಿಭಾಗದ 14 ಹಾಗೂ ಕೊನೆ ಸುತ್ತಿನ ಹಣಾಹಣಿಯಲ್ಲಿ ಗುಕೇಶ್‌ ಅವರು ಅಮೆರಿಕದ ಹಿಕರು ನಕಮುರಾ ವಿರುದ್ಧ ಡ್ರಾ ಸಾಧಿಸಿದರು. ಇದರೊಂದಿಗೆ ಗುಕೇಶ್‌ ಅಂಕ ಗಳಿಕೆಯನ್ನು 9ಕ್ಕೆ ಹೆಚ್ಚಿಸಿ ಅಗ್ರಸ್ಥಾನ ಕಾಯ್ದುಕೊಂಡರು. ರಷ್ಯಾದ ಇಯಾನ್‌ ನೆಪೊಮ್ನಿಯಾಚಿ ಹಾಗೂ ಫ್ಯಾಬಿಯಾನೊ ಕರುನಾ ನಡುವಿನ ಪಂದ್ಯ ಡ್ರಾಗೊಳ್ಳುವುದರೊಂದಿಗೆ ಗುಕೇಶ್‌ ಚಾಂಪಿಯನ್‌ ಎನಿಸಿಕೊಂಡರು.

ಇದೇ ವೇಳೆ ಗುಕೇಶ್‌ 40 ವರ್ಷಗಳ ದಾಖಲೆಯನ್ನು ಅಳಿಸಿ ಹಾಕಿ, ನೂತನ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಗುಕೇಶ್‌ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದ ವಿಶ್ವದ ಅತಿ ಕಿರಿಯ ಚೆಸ್‌ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರಷ್ಯಾದ ದಿಗ್ಗಜ ಚೆಸ್‌ ಪಟು ಗ್ಯಾರಿ ಕಾಸ್ಪರೋವ್‌ 1984ರಲ್ಲಿ ತಮ್ಮ 22ನೇ ವರ್ಷದಲ್ಲಿ ಕ್ಯಾಂಡಿಡೇಟ್ಸ್‌ ಟೂರ್ನಿ ಗೆದ್ದಿದ್ದರು. ಇದು ಈವರೆಗಿನ ಟೂರ್ನಿಯ ಇತಿಹಾಸವಾಗಿತ್ತು. ಆದರೆ ಗುಕೇಶ್‌ 17ನೇ ವಯಸ್ಸಿಗೆ ಚಾಂಪಿಯನ್​ ಆಗುವ ಮೂಲಕ ಕಾಸ್ಪರೋವ್‌ ದಾಖಲೆ ಮುರಿದರು.

Continue Reading

ಕ್ರೀಡೆ

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Viral Video: ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಸನ್​ರೈಸರ್ಸ್ ಹೈದರಾಬಾದ್(SRH vs DC)​ ತಂಡಗಳು ಏಪ್ರಿಲ್​ 20ರಂದು ಐಪಿಎಲ್​ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದ ವೇಳೆ ಕ್ರಿಕೆಟ್​ ಅಭಿಮಾನಿಯೊಬ್ಬ ಗ್ಯಾಲರಿಯಲ್ಲಿ ಕುಳಿತು ತನ್ನ ಮೊಬೈಲ್​ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್(PAK vs NZ)​ ನಡುವಣ 2ನೇ ಟಿ20 ಪಂದ್ಯವನ್ನು ವೀಕ್ಷಿಸಿದ್ದಾನೆ. ಈ ವಿಡಿಯೊ 3 ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊವನ್ನು ಪಾಕಿಸ್ತಾನ ಮೂಲದ ನವಾಝ್​​ ಎನ್ನುವಾತ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಸಹೋದರ ಕ್ರೀಡಾಂಗಣದಲ್ಲಿ ಕುಳಿತು ಐಪಿಎಲ್​ ಪಂದ್ಯದ ಬದಲು ಪಾಕಿಸ್ತಾನ-ನ್ಯೂಜಿಲ್ಯಾಂಡ್​ ಪಂದ್ಯ ವೀಕ್ಷಿಸುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ. ಈ ಪಂದ್ಯವನ್ನು ಪಾಕಿಸ್ತಾನ 7 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​(89) ಮತ್ತು ಅಭಿಷೇಕ್​ ಶರ್ಮ(46) ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 266 ರನ್​ ಬಾರಿಸಿತು. ಸವಾಲಿನ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಡೆಲ್ಲಿ ಕ್ಯಾಪಿಟಲ್ಸ್​ ಅಂತಿಮವಾಗಿ 19.1 ಓವರ್​ಗಳಲ್ಲಿ 199 ರನ್​ಗೆ ಸರ್ವಪತನ ಕಂಡಿತ್ತು.

ಇದನ್ನೂ ಓದಿ SRH vs DC: ಬೃಹತ್​ ಮೊತ್ತದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್

ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯ ಕಂಡಿದೆ. ಉಭಯ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿವೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ನಾಲ್ಕನೇ ಪಂದ್ಯ ಏಪ್ರಿಲ್​ 25ರಂದು ನಡೆಯಲಿದೆ.

3ನೇ ಪಂದ್ಯದಲ್ಲಿ ಕಿವೀಸ್​ಗೆ ಗೆಲುವು


ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ತಂಡ 7 ವಿಕೆಟ್​ಗಳಿಂದ ಪಾಕಿಸ್ತಾನವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಭಾನುವಾರ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 178 ರನ್​ ಬಾರಿಸಿತು. ಇದನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 18.2 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 179 ರನ್​ ಬಾರಿಸಿ ಗೆಲುವು ಸಾಧಿಸಿತ್ತು.

Continue Reading

ಕ್ರೀಡೆ

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

Karun Nair: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

VISTARANEWS.COM


on

Karun Nair
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ 2016ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಭರವಸೆ ಮೂಡಿಸಿದ್ದ ಕರುಣ್​ ನಾಯರ್​ ಬಳಿಕ ರಾಷ್ಟ್ರೀಯ ತಂಡದಲ್ಲಿ ಸರಿಯಾದ ಅವಕಾಶ ಸಿಗದೆ ಸುಮಾರು ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೂಡ ಅವರನ್ನು ಟೀಮ್​ ಇಂಡಿಯಾ ಕಡೆಗಣಿಸುತ್ತಲೇ ಬಂದಿತ್ತು. ಇದೀಗ ಕರುಣ್​ ನಾಯರ್(Karun Nair)​ ಕೌಂಟಿ ಕ್ರಿಕೆಟ್​ನಲ್ಲಿ(County Championship) ದ್ವಿಶತಕ ಬಾರಿಸಿ ಮಿಂಚಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಕಳೆದ ವರ್ಷ ಪ್ರೀತಿಯ ಕ್ರಿಕೆಟ್, ನನಗೆ ಇನ್ನೂ ಒಂದು ಅವಕಾಶ ನೀಡಿ.” ಎಂದು ಕರುಣ್​ ಟ್ವೀಟ್​ ಮೂಲಕ ಕೇಳಿಕೊಂಡಿದ್ದರು. ಆದರೂ ಕೂಡ ಅವರಿಗೆ ಅವಕಾಶ ಸಿಗಲಿಲ್ಲ. ದೇಶೀಯ ಕ್ರಿಕೆಟ್​ನಲ್ಲಿಯೂ ಕರ್ನಾಟಕ ತಂಡದ ಪರ ಸರಿಯಾದ ಅವಕಾಶ ಸಿಗದೇ ಇದ್ದ ಹಿನ್ನೆಲೆ ಅವರು ರಾಜ್ಯ ತಂಡ ತೊರೆದು ವಿದರ್ಭ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2023-24ನೇ ಸಾಲಿನ ರಣಜಿಯಲ್ಲಿ ವಿದರ್ಭ ಪರ ಉತ್ತಮ ಬ್ಯಾಟಿಂಗ್​ ಪ್ರದರ್ಶನವನ್ನೂ ತೋರಿದ್ದರು.

ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ನಾರ್ಥಾಂಪ್ಟನ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಕರುಣ್, ಗ್ಲಾಮೋರ್ಗನ್ ತಂಡದ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. 253 ಎಸೆತಗಳನ್ನು ಎದುರಿಸಿ ಅಜೇಯ 202 ರನ್ ಗಳಿಸಿದರು. ನಾಯರ್ ಅವರ ಈ ಅಮೋಘ ಆಟದಿಂದಾಗಿ ನಾರ್ಥಾಂಪ್ಟನ್‌ಶೈರ್ ತಂಡ 334 ರನ್‌ಗಳಿಸಿ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 6 ವಿಕೆಟ್‌ಗೆ 605 ರನ್ ಗಳಿಸಿದೆ.

32 ವರ್ಷದ ಕರುಣ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 6 ಟೆಸ್ಟ್ ಮತ್ತು 2 ಏಕ ದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ ತ್ರಿಶತಕ ಸೇರಿದಂತೆ ಒಟ್ಟು 374 ರನ್ ಗಳಿಸಿದ್ದಾರೆ. ಇದರ ಜತೆಗೆ ಏಕ ದಿನ ಕ್ರಿಕೆಟ್‌ನಲ್ಲಿ 2 ಪಂದ್ಯಗಳಲ್ಲಿ 46 ರನ್ ಗಳಿಸಿದ್ದಾರೆ. ಜೂನ್ 2016 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಇದಾಗ ಬಳಿಕ ಅವರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ IPL 2024 Points Table: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್​

ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ

ಕರುಣ್ ನಾಯರ್ ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ 49.75 ಸರಾಸರಿಯಲ್ಲಿ 19 ಶತಕ ಮತ್ತು 32 ಅರ್ಧ ಶತಕಗಳೊಂದಿಗೆ 7164 ರನ್ ಗಳಿಸಿದ್ದಾರೆ. 101 ಲಿಸ್ಟ್ ‘ಎ’ ಪಂದ್ಯಗಳಲ್ಲಿ 3 ಶತಕ ಮತ್ತು 13 ಅರ್ಧಶತಕಗಳೊಂದಿಗೆ 2349 ರನ್ ಗಳಿಸಿದ್ದಾರೆ. 157 ಟಿ20 ಪಂದ್ಯಗಳಲ್ಲಿ ಅವರು 2 ಶತಕ ಮತ್ತು 18 ಅರ್ಧ ಶತಕಗಳ ಜತೆಗೆ 132.41 ಸ್ಟ್ರೈಕ್ ರೇಟ್‌ನಲ್ಲಿ 3207 ರನ್ ಗಳಿಸಿದ್ದಾರೆ.

Continue Reading
Advertisement
Road Accident
ಉಡುಪಿ22 mins ago

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

supreme court baba ramdev IMA
ಪ್ರಮುಖ ಸುದ್ದಿ23 mins ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 202427 mins ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ45 mins ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ59 mins ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 20241 hour ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು1 hour ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

MDH everest spices row
ದೇಶ2 hours ago

Spices Row: ಸಿಂಗಾಪುರ, ಹಾಂಕಾಂಗ್‌ ಬಳಿಕ ಭಾರತದಲ್ಲೂ ಎವರೆಸ್ಟ್, ಎಂಡಿಎಚ್‌ ಮಸಾಲೆ ಪರಿಶೀಲನೆ ಶುರು

Narendra Modi and Siddaramaiah
ರಾಜಕೀಯ2 hours ago

Narendra Modi: ಕಾಂಗ್ರೆಸ್‌ ರಾಜ್ಯದಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾಪರಾಧ; ರಾಜಸ್ಥಾನದಲ್ಲಿ ಮೋದಿಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ತರಾಟೆ

Gukesh D
ಕ್ರೀಡೆ2 hours ago

Gukesh D: ಡಿ.ಗುಕೇಶ್‌ ಸಾಧನೆಗಾಗಿ ವೈದ್ಯ ವೃತ್ತಿಯನ್ನೇ ತೊರೆದಿದ್ದ ತಂದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು21 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ22 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌