Fifth win for Mumbai team, 55 run crushing defeat for Gujarat Giants WPL 2023 : ಮುಂಬಯಿ ತಂಡಕ್ಕೆ ಐದನೇ ಗೆಲುವು, ಗುಜರಾತ್​ ಜಯಂಟ್ಸ್​ಗೆ 55 ರನ್​ ಹೀನಾಯ ಸೋಲು Vistara News
Connect with us

ಕ್ರಿಕೆಟ್

WPL 2023 : ಮುಂಬಯಿ ತಂಡಕ್ಕೆ ಐದನೇ ಗೆಲುವು, ಗುಜರಾತ್​ ಜಯಂಟ್ಸ್​ಗೆ 55 ರನ್​ ಹೀನಾಯ ಸೋಲು

ಸತತ ಗೆಲುವಿನ ಸವಿ ಉಂಡಿರುವ ಮುಂಬಯಿ ಇಂಡಿಯನ್ಸ್​ ತಂಡ ಡಬ್ಲ್ಯುಪಿಎಲ್​ (WPL 2023) ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲೇ ಮುಂದುವರಿಯಿತು.

VISTARANEWS.COM


on

Fifth win for Mumbai team 55 run crushing defeat for Gujarat Giants
Koo

ಮುಂಬಯಿ: ನಾಯಕಿ ಹರ್ಮನ್​ಪ್ರೀತ್ ಕೌರ್​ (51 ರನ್​) ಅವರ ಅರ್ಧ ಶತಕ ಹಾಗೂ ಬೌಲರ್​ಗಳ ಪರಿಶ್ರಮದ ಫಲ ಪಡೆದ ಮುಂಬಯಿ ಇಂಡಿಯನ್ಸ್ ತಂಡ ಮಹಿಳೆಯರ ಪ್ರಿಮಿಯರ್​ ಲೀಗ್​ನ (WPL 2023) 12ನೇ ಪಂದ್ಯದಲ್ಲಿ ಗುಜರಾತ್ ಜಯಂಟ್ಸ್​ ವಿರುದ್ಧ 55 ರನ್​ಗಳ ಭರ್ಜರಿ ವಿಜಯ ಸಾಧಿಸಿತು. ಇದು ಮುಂಬಯಿ ತಂಡಕ್ಕೆ ಸತತ ಐದನೇ ಗೆಲುವಾಗಿದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಮುಂದುವರಿಸಿತು. ಅತ್ತ ಗುಜರಾತ್ ತಂಡ ಮತ್ತೊಮ್ಮೆ ತನ್ನ ವೈಫಲ್ಯ ಪ್ರದರ್ಶಿಸಿ ನಾಲ್ಕನೇ ಸೋಲಿಗೆ ಒಳಗಾಯಿತು.

ಮಹಿಳೆಯರ ಪ್ರಿಮಿಯರ್​ ಲೀಗ್​ನ ಟ್ವೀಟ್​ ಇಲ್ಲಿದೆ

ಇಲ್ಲಿನ ಬ್ರಬೊರ್ನ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಗುಜರಾತ್​ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೆ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 162 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಗುಜರಾತ್​ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ಕಳೆದುಕೊಂದು 107 ರನ್​ ಬಾರಿಸಲು ಮಾತ್ರ ಶಕ್ತಗೊಂಡಿತು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಗುಜರಾತ್ ತಂಡದ ಪರ ಯಾವ ಬ್ಯಾಟರ್​ಗಳೂ ಪ್ರತಿರೋಧ ತೋರಲಿಲ್ಲ. ಹರ್ಲಿನ್​ ಡಿಯೋಲ್​ 22 ಗರಿಷ್ಠ ಸ್ಕೋರರ್​ ಎನಿಸಿಕೊಂಡರು. ನಾಯಕಿ ಸ್ನೇಹಾ ರಾಣಾ 20 ರನ್​ಗಳಿಗೆ ಔಟಾದರು.

ಇದನ್ನೂ ಓದಿ : WPL 2023: ಸತತ 5ನೇ ಸೋಲು; ಟೂರ್ನಿಯಿಂದ ಬಹುತೇಕ ಹೊರಬಿದ್ದ ಆರ್​ಸಿಬಿ

ಮೊದಲು ಬ್ಯಾಟ್​ ಮಾಡಿದ ಮುಂಬಯಿ ಬಳಗ ಒಂದು ರನ್​ಗೆ ಮೊದಲ ವಿಕೆಟ್​ ಕಳೆದುಕೊಳ್ಳುವ ಮೂಲಕ ಆತಂಕ್ಕೆ ಬಿತ್ತು. ಸ್ಫೋಟಕ ಬ್ಯಾಟರ್​ ಹೇಲಿ ಮ್ಯಾಥ್ಯೂಸ್​ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಎದುರಿಸಿದರು. ಆದರೆ, ಯಸ್ತಿಕಾ ಹಾಗೂ ಬ್ರಂಟ್​ ಜೋಡಿ ಎರಡನೇ ವಿಕೆಟ್​ಗೆ 74 ರನ್​ ಜತೆಯಾಟ ನೀಡುವ ಮೂಲಕ ಆರಂಭಿಕ ಹಿನ್ನಡೆ ತಗ್ಗಿಸಿದರು. ಬಳಿಕ ಹರ್ಮನ್​ಪ್ರೀತ್​ ಕೌರ್​ ಏಳು ಫೋರ್​ ಹಾಗೂ 2 ಸಿಕ್ಸರ್​ಗಳ ನೆರವಿನಿಂದ ಅರ್ಧ ಶತಕ ಬಾರಿಸಿ ದೊಡ್ಡ ಮೊತ್ತ ಪೇರಿಲು ತಂಡಕ್ಕೆ ನೆರವಾದರು.

ಗುಜರಾತ್​ ತಂಡದ ಪರ ಆಶ್ಲೀ ಗಾರ್ಡ್ನರ್​ 34 ರನ್​ ವೆಚ್ಚದಲ್ಲಿ 3 ವಿಕೆಟ್​ ಕಬಳಿಸಿ ಮಿಂಚಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

ಕೂ ಸಾಮಾಜಿಕ ಜಾಲತಾಣದ ಮೂಲಕ ವಿರಾಟ್​ ಕೊಹ್ಲಿ ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಶೇರ್​ ಮಾಡಿಕೊಂಡಿದ್ದಾರೆ.

VISTARANEWS.COM


on

Do you know how much marks Virat Kohli got in iron pea maths
Koo

ನವ ದೆಹಲಿ: ಟೀಮ್​ ಇಂಡಿಯಾದ ಆಲ್​ಟೈಮ್​ ಸ್ಟಾರ್​ ಬ್ಯಾಟರ್ ವಿರಾಟ್​ ಕೊಹ್ಲಿ ಕ್ರಿಕೆಟ್​ಗಾಗಿ ಶಿಕ್ಷಣವನ್ನು ಮೊಟಕುಗೊಳಿಸಿದವರು. 12ನೇ ತರಗತಿ ಮುಕ್ತಾಯಗೊಂಡ ಬಳಿಕ ಅವರು ವಿದ್ಯಾಭ್ಯಾಸ ಮುಂದುವರಿಸದೇ ಕ್ರಿಕೆಟ್​ಗಾಗಿ ಬದುಕು ಮುಡಿಪಾಗಿಟ್ಟಿದ್ದರು. ಹೀಗಾಗಿ ಶೈಕ್ಷಣಿಕ ವಿಚಾರಕ್ಕೆ ಹೆಚ್ಚು ಡಿಗ್ರಿಗಳನ್ನೇನೂ ಪಡೆದುಕೊಂಡಿಲ್ಲ. ಇವೆಲ್ಲದರ ನಡುವೆಯೂ ಶಾಲಾ ದಿನಗಳಲ್ಲಿ ವಿರಾಟ್​ ಕೊಹ್ಲಿಯ ಕಲಿಕೆ ಮಟ್ಟ ಹೇಗಿದ್ದರಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಇದ್ದೇ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇದುವರೆಗೆ ಇರಲಿಲ್ಲ. ಇದೀಗ ಸ್ವಯಂ ವಿರಾಟ್​ ಕೊಹ್ಲಿಯೇ ತಮ್ಮ 10ನೇ ತರಗತಿಯ ಮಾರ್ಕ್​ ಕಾರ್ಡ್​ ಅನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ವಿರಾಟ್​ ಕೊಹ್ಲಿ ಯಾವುದೆಲ್ಲ ವಿಷಯದಲ್ಲಿ ಎಷ್ಟೆಷ್ಟು ಮಾರ್ಕ್ ತೆಗೆದಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.

ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನದಲ್ಲಿ ತಮಗೆ ಗಣಿತದ ಅಲರ್ಜಿ ಇರುವುದಾಗಿ ಹೇಳಿಕೊಂಡಿದ್ದರು. ಗಣಿತದಲ್ಲಿ ಪಾಸ್​ ಆಗುವುದಕ್ಕೆ ತಾವು ಪಟ್ಟ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದೇ ವೇಳೆ ಅವರು ಗಣಿತದ ಅಗತ್ಯವೇನು ಎಂಬುದನ್ನೂ ಪ್ರಶ್ನಿಸಿದ್ದರು. ಇದೀಗ ಅವರು ಯಾಕೆ ಗಣಿತವನ್ನು ದ್ವೇಷ ಮಾಡಿದ್ದರು ಎಂಬುದು ಗೊತ್ತಾಗಿದೆ. ಯಾಕೆಂದರೆ 10ನೇ ತರಗತಿಯಲ್ಲಿ ಕೊಹ್ಲಿ ಗಣಿತದಲ್ಲಿ ಪಡೆದ ಮಾರ್ಕ್​​ 51. ಹೇಗಾದರೂ ಮಾಡಿ ಪಾಸ್​ ಮಾಡಬೇಕು ಎಂಬು ಹಠದಲ್ಲಿ ಅವರು ಅಷ್ಟು ಮಾರ್ಕ್​​ ಪಡೆದುಕೊಂಡಿದ್ದರು.

ಇಂಗ್ಲಿಷ್‌ನಲ್ಲಿ 83, ಹಿಂದಿಯಲ್ಲಿ 75, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ 55, ಸಮಾಜ ವಿಜ್ಞಾನದಲ್ಲಿ 81, ಇಂಟ್ರಡಕ್ಟರಿ ಐಟಿಯಲ್ಲಿ 74 ಅಂಕಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಷಯಗಳಲ್ಲಿ ವಿರಾಟ್​ಕೊಹ್ಲಿಗೆ ಆಸಕ್ತಿ ಇತ್ತ ಎಂಬುದು ಮಾರ್ಕ್​ ಕಾರ್ಡ್​ ಮೂಲಕ ಗೊತ್ತಾಗಿದೆ.

ಮೂರು ಪೆಗ್ಗಿನ ಕತೆ ಹೇಳಿದ ವಿರಾಟ್​ ಕೊಹ್ಲಿ

ಭಾರತೀಯ ಕ್ರಿಕೆಟ್‌ ತಂಡದ ಆಟಗಾರ ವಿರಾಟ್‌ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ(anushka sharma) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನುಷ್ಕಾ ಶರ್ಮಾ ಅವರು ವಿರಾಟ್​ ಕೊಹ್ಲಿಯ ಕುಡಿತದ ಚಟದ ಬಗ್ಗೆ ರೋಚಕ ಸಂಗತಿಯೊಂದನ್ನು ತಿಳಿಸಿದ್ದಾರೆ.

ಸಾಮಾನ್ಯವಾಗಿ ನೀವಿಬ್ಬರು ಪಾರ್ಟಿಗಳಿಗೆ ಹೋದಾಗ ಯಾರನ್ನು ಹೆಚ್ಚಾಗಿ ಜನ ಗುರುತಿಸುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶರ್ಮಾ, ಅದು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಅವರು ತಿಳಿಸಿದ್ದಾರೆ. ಕೊಹ್ಲಿ ಮೂರು ಪೆಗ್​ ಹಾಕಿದ ಬಳಿಕ ಡ್ಯಾನ್ಸ್ ಮಾಡಲು ಆರಂಭಿಸುತ್ತಾರೆ. ಹೀಗಾಗಿ ಅಲ್ಲಿದ್ದವರು ಕೊಹ್ಲಿಯ ಕಡೆ ಹೆಚ್ಚು ಗಮನ ಕೊಡುತ್ತಾರೆ. ಒಮ್ಮೆ ಅವರು ನೃತ್ಯ ಆರಂಭಿಸಿದರೆ ಇದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ಹೇಳಿದರು.

ಪತ್ನಿಯ ಈ ಮಾತನ್ನು ನಗುತ್ತಲೇ ಒಪ್ಪಿಕೊಂಡ ವಿರಾಟ್​, ಇದು ನಿಜ. ನಾನು ಎರಡು ಪೆಗ್​ಗಳಿಗಿಂತಲೂ ಹೆಚ್ಚು ಕುಡಿದೆನೆಂದರೆ ಡ್ಯಾನ್ಸ್ ಮಾಡಲು ಆರಂಭಿಸುತ್ತೇನೆ. ಆ ಬಳಿಕ ನಾನು ಏನು ಮಾಡುತ್ತೇನೆ ಎಂಬ ಅರಿವೇ ನನಗಿರುವುದಿಲ್ಲ. ಆದರೆ ಈ ವರ್ತನೆಯನ್ನು ಈಗ ನೆನಪಿಸಿಕೊಂಡರೆ ನನಗೆ ನಾಚಿಕೆಯಾಗುತ್ತದೆ. ಈಗ ನಾನು ಕುಡಿತದಿಂದ ಮುಕ್ತವಾಗಿದ್ದೇನೆ. ಇದಕ್ಕೆ ಒಂದು ರೀತಿಯಲ್ಲಿ ಪತ್ನಿ ಅನುಷ್ಕಾ ಕೂಡ ಕಾರಣ. ಅವಳು ನನ್ನ ಬದುಕಿನಲ್ಲಿ ಬಂದ ಬಳಿಕ ಹಲವು ವಿಚಾರದಲ್ಲಿ ನಾನು ಸುಧಾರಿಸಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.

Continue Reading

ಕ್ರಿಕೆಟ್

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮುಕೇಶ್​ ಚೌಧರಿಗೆ ಬದಲಿಗೆ ಆಕಾಶ್​ ಸಿಂಗ್​ ಅವಕಾಶ ಪಡೆದುಕೊಂಡಿದ್ದಾರೆ.

VISTARANEWS.COM


on

Former bowler of Rajasthan Royals who joined Chennai Super Kings
Koo

ಚೆನ್ನೈ: ಐಪಿಎಲ್​ 16ನೇ ಆವೃತ್ತಿಗೆ ವೇಗದ ಬೌಲರ್​ ಮುಕೇಶ್​ ಚೌಧರಿ ಅಲಭ್ಯರಾಗಿದ್ದಾರೆ. ಎಡಗೈ ಬೌಲರ್​ ಗಾಯದ ಸಮಸ್ಯೆಗೆ ಒಳಗಾಗಿದ್ದು, ಇನ್ನೂ ಸುಧಾರಿಸಿಕೊಳ್ಳದ ಕಾರಣ ಅವರಿಗೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪರ ಆಡಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನ್​ ರಾಯಲ್ಸ್​​ನ ಮಾಜಿ ವೇಗದ ಬೌಲರ್​ ಆಕಾಶ್​ ಸಿಂಗ್​ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಸಿಎಸ್​ಕೆ.

ಆಕಾಶ್​ ಸಿಂಗ್​ 2020ರಲ್ಲಿ 19ರ ವಯೋಮಿತಿಯ ವಿಶ್ವ ಕಪ್​ನಲ್ಲಿ ಭಾರತ ತಂಡದ ಪರವಾಗಿ ಆಡಿದ್ದರು. 9 ಪಂದ್ಯಗಳಲ್ಲಿ ಅವರು 7 ವಿಕೆಟ್​ ಉರುಳಿಸಿದ್ದರು. ಮುಕೇಶ್​ ಚೌಧರಿ 2021ರ ಐಪಿಎಲ್​ನ 13 ಪಂದ್ಯಗಳಲ್ಲಿ 16 ವಿಕೆಟ್ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಕ್ರಿಕೆಟ್ ವಿಶ್ಲೇಷಕರ ಗಮನ ಸೆಳೆದಿದ್ದರು. ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್​ ಅವರು ಮಕೇಶ್​ ಚೌಧರಿ ಈ ಬಾರಿಯ ಐಪಿಎಲ್​ನಲ್ಲಿ ಆಡುವುದಿಲ್ಲ ಎಂದು ಈ ಹಿಂದೆಯೇ ಸೂಚನೆ ಕೊಟ್ಟಿದ್ದರು. ಇದೀಗ ಅವರ ಅಲಭ್ಯತೆಗೆ ಖಾತರಿಯಾಗಿದೆ. ಸಿಎಸ್​ಕೆ ತಂಡ ಗುಜರಾತ್​ ಟೈಟನ್ಸ್​ ವಿರುದ್ಧ ಮಾರ್ಚ್​ 31ರಂದು ನಡೆಯುವ ಪಂದ್ಯದಲ್ಲಿ ಎದುರಾಗಲಿದೆ.

5000 ರನ್ ಸನಿಹದಲ್ಲಿ ಧೋನಿ

ಕೂಲ್​ ಕ್ಯಾಪ್ಟನ್​ ಖ್ಯಾತಿಯ ಮಹೇಂದ್ರ ಸಿಂಗ್​ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಸಿಕ್ಸರ್ ದಾಖಲೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ದಾಖಲೆ ಯುನಿವರ್ಸ್​ ಬಾಸ್​ ಖ್ಯಾತಿಯ ವಿಂಡೀಸ್​ ಕ್ರಿಕೆಟಿಗ ಕ್ರಿಸ್​ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್​ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್‌ ಕ್ಲಬ್​ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್​ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.

ಇದನ್ನೂ ಓದಿ IPL 2023: ಐಪಿಎಲ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ

250ನೇ ಐಪಿಎಲ್‌ ಪಂದ್ಯ

ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯವನ್ನಾಡಿದ ದಾಖಲೆ ಧೋನಿ ಹೆಸರಿನಲ್ಲಿದೆ. ಸದ್ಯ ಅವರು 234 ಪಂದ್ಯಗಳನ್ನಾಡಿದ್ದಾರೆ. ಈ ಬಾರಿ ಅವರು 16 ಪಂದ್ಯಗಳಲ್ಲಿ ಆಡಿದರೆ 250 ಪಂದ್ಯಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆರ್​ಸಿಬಿ ಆಟಗಾರ ದಿನೇಶ್​ ಕಾರ್ತಿಕ್​ 229 ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ದ್ವಿ

Continue Reading

ಕ್ರಿಕೆಟ್

IPL 2022 : ಟ್ರೋಫಿ ಎತ್ತಿ ಹಿಡಿದು ವಿದಾಯ ಹೇಳುತ್ತಾರಾ ಧೋನಿ?

ಮಹೇಂದ್ರ ಸಿಂಗ್​ ಧೋನಿ ನೇತೃತ್ವದ ಚೆನ್ನೈ ತಂಡ ಈ ಬಾರಿ ಟ್ರೋಫಿ ಗೆಲ್ಲಬಹುದು ಎನ್ನುತ್ತಾರೆ ಕಿರಣ್​ ಡಿ.ಕೆ.

VISTARANEWS.COM


on

will dhoni lift the trophy and say goodbye
Koo
Continue Reading

ಕ್ರಿಕೆಟ್

IPL 2023 : ಫೋಟೊ ಶೂಟ್​ಗೆ ಮುಂಬೈ ತಂಡದ ನಾಯಕ ರೋಹಿತ್​ ಗೈರು; ಏನಾಯಿತು ಅವರಿಗೆ?

ರೋಹಿತ್​ ಶರ್ಮಾ ಅವರಿಗೆ ಅಸೌಖ್ಯ ಕಾಡಿದ್ದು ಹೀಗಾಗಿ ಅಹಮದಾಬಾದ್​ಗ ಪ್ರಯಾಣ ಮಾಡಲು ಅವರಿಗೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.

VISTARANEWS.COM


on

Mumbai team captain Rohit absent for photo shoot What happened to them
Koo

ಅಹಮದಾಬಾದ್​: ಐಪಿಎಲ್​ ಆರಂಭಕ್ಕೆ ಬಿಸಿಸಿಐ ಕಹಳೆ ಊದಿದೆ. ಮಾರ್ಚ್​ 31ರಂದು ಸಿಎಸ್​ಕೆ ಹಾಗೂ ಕಳೆದ ಬಾರಿಯ ಚಾಂಪಿಯನ್​ ಮುಂಬಯಿ ಇಂಡಿಯನ್ಸ್​ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ, ಐಪಿಎಲ್​ ಆರಂಭಿಕ ಚಟವಟಿಕೆಗಳು ಈಗಾಗಲೇ ಆರಂಭಗೊಂಡಿವೆ. ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಪತ್ರಿಕಾಗೋಷ್ಠಿ ಹಾಗೂ ಪೋಟೋ ಶೂಟ್​ ನಡೆದಿದೆ. ತಂಡಗಳ ನಾಯಕರೆಲ್ಲರೂ ಅದರಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಕಾರ್ಯಕ್ರಮದಲ್ಲಿ ಮುಂಬಯಿ ಇಂಡಿಯನ್ಸ್​ ತಂಡದ ನಾಯಕ ರೋಹಿತ್​ ಶರ್ಮಾ ಪಾಲ್ಗೊಂಡಿಲ್ಲ. ಹೀಗಾಗಿ ಅವರಿಗೆ ಏನಾಗಿದೆ ಎಂಬ ಗೊಂದಲ ಮೂಡಿದೆ.

ಟೈಮ್ಸ್​ ಇಂಡಿಯಾದ ವರದಿ ಪ್ರಕಾರ ರೋಹಿತ್​ ಶರ್ಮಾ ಅವರಿಗೆ ಸ್ವಲ್ಪ ಮಟ್ಟಿಗೆ ಅನಾರೋಗ್ಯವಿದೆ. ಹೀಗಾಗಿ ಅವರಿಗೆ ಮಾರ್ಚ್​ 30ರಂದು ನಡೆದ ಫೋಟೋಶೂಟ್​ನಲ್ಲಿ ಪಾಲ್ಗೊಳ್ಳುವುಕ್ಕೆ ಸಾಧ್ಯವಾಗಲಿಲ್ಲ. ಆದರೆ ಮಾರ್ಚ್​ 31ರಂದು ನಡೆಯುವ ಪಂದ್ಯದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ರೋಹಿತ್​ ಶರ್ಮಾ ಅವರು ಅಸೌಖ್ಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೆ ಅಹಮದಾಬಾದ್​ಗೆ ಪ್ರಯಾಣ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಅವರು ಏಪ್ರಿಲ್​ 2ರಂದು ಬೆಂಗಳೂರಿನಲ್ಲಿ ನಡೆಯುವ ಮುಂಬಯಿ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಬಲ್ಲ ಮೂಲಗಳ ಪ್ರಕಾರ ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ಮಂಬಯಿ ಇಂಡಿಯನ್ಸ್ ತಂಡವನ್ನು ಹೊರತುಪಡಿಸಿ ಉಳಿದ ತಂಡಗಳ ನಾಯಕರು ಪ್ರೆಸ್​ಮೀಟ್​ ಹಾಗೂ ಫೋಟೊ ಶೂಟ್​ನಲ್ಲಿ ಭಾಗಿಯಾಗಿದ್ದಾರೆ. ಮಹೇಂದ್ರ ಸಿಂಗ್​ ಧೋನಿ (ಚೆನ್ನೈ ಸೂಪರ್ ಕಿಂಗ್ಸ್), ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟನ್ಸ್), ಶಿಖರ್ ಧವನ್ (ಪಂಜಾಬ್ ಕಿಂಗ್ಸ್), ನಿತೀಶ್ ರಾಣಾ (ಕೋಲ್ಕೊತಾ ನೈಟ್ ರೈಡರ್ಸ್), ಕೆಎಲ್ ರಾಹುಲ್ (ಲಖನೌ ಸೂಪರ್ ಜೈಂಟ್ಸ್), ಭುವನೇಶ್ವರ್ ಕುಮಾರ್ (ಸನ್ ರೈಸರ್ಸ್ ಹೈದರಾಬಾದ್), ಫಾಫ್ ಡು ಪ್ಲೆಸಿಸ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಮತ್ತು ಡೇವಿಡ್ ವಾರ್ನರ್ (ದೆಹಲಿ ಕ್ಯಾಪಿಟಲ್ಸ್) ಫೋಟೋ ಶೂಟ್​ನಲ್ಲಿ ಪಾಲ್ಗೊಂಡಿದ್ದರು.

ದಾಖಲೆ ಮಾಡಲು ಸಜ್ಜಾಗಿದ್ದಾರೆ ಧೋನಿ

ಶುಕ್ರವಾರ ಆರಂಭಗೊಳ್ಳಲಿರುವ ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್​ನ(IPL 2023) ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಗುಜರಾತ್​ ಟೈಟಾನ್ಸ್​ ಸೆಣಸಾಟ ನಡೆಸಲಿದೆ. ಈ ಬಾರಿಯ ಐಪಿಎಲ್​ ಬಳಿಕ ಧೋನಿ(ms dhoni) ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡಲಾರಂಭಿಸಿದೆ. ಆದರೆ ಈ ಬಗ್ಗೆ ಧೋನಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯಕ್ಕೆ ಧೋನಿ ಅವರು ಹಲವು ದಾಖಲೆಗಳನ್ನು ನಿರ್ಮಿಸುತ್ತ ಚಿತ್ತ ನೆಟ್ಟಿದ್ದಾರೆ.

ಇದನ್ನೂ ಓದಿ : IPL 203 : ಐಪಿಎಲ್​ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ

5000 ರನ್ ಸನಿಹದಲ್ಲಿ ಧೋನಿ

ಕೂಲ್​ ಕ್ಯಾಪ್ಟನ್​ ಖ್ಯಾತಿಯ ಮಹೇಂದ್ರ ಸಿಂಗ್​ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್‌ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಸಿಕ್ಸರ್ ದಾಖಲೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ದಾಖಲೆ ಯುನಿವರ್ಸ್​ ಬಾಸ್​ ಖ್ಯಾತಿಯ ವಿಂಡೀಸ್​ ಕ್ರಿಕೆಟಿಗ ಕ್ರಿಸ್​ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್​ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್‌ ಕ್ಲಬ್​ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್​ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ3 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್3 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ3 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ3 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ3 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ4 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್4 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ5 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!