ICC World Cup 2023 : ಫೈನಲ್ ನರ್ವಸ್​; ಭಾರತದ ವಿಶ್ವ ಕಪ್​ ಸೋಲಿಗೆ ಕಾರಣಗಳೇನು? - Vistara News

ಕ್ರಿಕೆಟ್

ICC World Cup 2023 : ಫೈನಲ್ ನರ್ವಸ್​; ಭಾರತದ ವಿಶ್ವ ಕಪ್​ ಸೋಲಿಗೆ ಕಾರಣಗಳೇನು?

ಆಸ್ಟ್ರೇಲಿಯಾ ವಿರುದ್ಧದ ಫೈನಲ್ (ICC World Cup 2023) ಪಂದ್ಯದಲ್ಲಿ ಭಾರತ ತಂಡ ಆರು ವಿಕೆಟ್​ಗಳ ಸೋಲು ಅನುಭವಿಸುವ ಮೂಲಕ ಟ್ರೋಫಿ ಗೆಲ್ಲುವ ಅವಕಾಶವನ್ನು ನಷ್ಟ ಮಾಡಿಕೊಂಡಿತು.

VISTARANEWS.COM


on

Cricket final
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​​: ಭಾರತ ಕ್ರಿಕೆಟ್ ತಂಡ ಮತ್ತೊಂದು ಬಾರಿ ವಿಶ್ವ ಕಪ್ ಗೆಲ್ಲುವ ಅವಕಾಶ ನಷ್ಟ ಮಾಡಿಕೊಂಡಿದೆ. ಫೈನಲ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಸೋಲು ಕಾಣುವ ಮೂಲಕ ಭಾರತ ತಂಡ ಐಸಿಸಿ ಟ್ರೋಫಿಯ ಬರವನ್ನು ನೀಗಿಸಲು ಇನ್ನಷ್ಟು ದಿನಗಳು ಕಾಯುವಂತಾಯಿತು. ಭಾರತ ತಂಡ ವಿಶ್ವ ಕಪ್ ಗೆಲ್ಲುವ ಫೇವರಿಟ್​ ತಂಡವಾಗಿತ್ತು. ಆದರೆ ಫೈನಲ್​ನಲ್ಲಿ (ICC World Cup 2023) ಭಾರತ ತಂಡದ ಆಟ ಅದಕ್ಕೆ ಪೂರಕವಾಗಿರಲಿಲ್ಲ. ತವರಿನ ಅಭಿಮಾನಿಗಳ ಮುಂದೆ ಟ್ರೋಫಿ ಗೆಲ್ಲುವ ಗೋಲ್ಡನ್ ಅಪರ್ಚುನಿಟಿಯನ್ನು ಅವರು ಕಳೆದುಕೊಂಡಿದ್ದಾರೆ. ಹಾಗಾದರೆ ಭಾರತ ತಂಡದ ಸೋಲುವುದಕ್ಕೆ ಹಲವು ಕಾರಣಗಳಿವೆ. ಹಾಗಾದರೆ ಅವುಗಳಲ್ಲಿ ಪ್ರಮುಖ ಕಾರಣಗಳು ಯಾವುವು ಎಂದು ನೋಡೋಣ.

ಬ್ಯಾಟಿಂಗ್​ ವೈಫಲ್ಯ

ಭಾರತ ತಂಡದ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಪ್ರಮುಖ ಕಾರಣವಾಗಿದೆ. ಇದುವರೆಗಿನ ಎಲ್ಲ ಪಂದ್ಯಗಳಲ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸುತ್ತಾ ಬಂದಿದ್ದ ಭಾರತ ತಂಡದ ಬ್ಯಾಟರ್​ಗಳು ಆಸೀಸ್​ ವಿರುದ್ಧ ಪತರಗುಟ್ಟಿತ್ತು. ರೋಹಿತ್ ಶರ್ಮಾ ತಮ್ಮ ಎಂದಿನ ಶೈಲಿಯಲ್ಲಿ ಬ್ಯಾಟ್ ಮಾಡಿರುವ ಹೊರತಾಗಿಯೂ ಉಳಿದವರಿಂದ ಅದೇ ಮಾದರಿಯ ಪ್ರದರ್ಶನ ಮೂಡಿ ಬರಲಿಲ್ಲ. ಪ್ರಿನ್ಸ್​ ಶುಭ್​ಮನ್​ ಗಿಲ್​ ಫೈನಲ್​ನಲ್ಲಿ ಕೇವಲ ನಾಲ್ಕು ರನ್ ಬಾರಿಸಿ ಔಟಾದರೆ, ಶ್ರೇಯಸ್ ಅಯ್ಯಸ್ ಕೂಡ ನಿರಾಸೆ ಮೂಡಿಸಿದರು. ಕೊಹ್ಲಿ ಮತ್ತು ರಾಹುಲ್ ಅರ್ಧ ಶತಕಗಳನ್ನು ಬಾರಿಸಿದರೂ ಅವರಿಂದ ಆಸೀಸ್ ಬೌಲರ್​ಗಳನ್ನು ಬೆದರಿಸಲು ಸಾಧ್ಯವಾಗಲಿಲ್ಲ. ಸೂರ್ಯಕುಮಾರ್ ಯಾದವ್ ಹಾಲಿ ಟೂರ್ನಿಯಲ್ಲಿ ಹಲವಾರು ಅವಕಾಶಗಳನ್ನು ಪಡೆದುಕೊಂಡಿದ್ದರು. ಆದರೆ, ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಹಾಗೆ ಬ್ಯಾಟ್​ ಮಾಡಲಿಲ್ಲ. ಫೈನಲ್​ನಲ್ಲಿ ಕನಿಷ್ಠ ಅರ್ಧ ಶತಕ ಬಾರಿಸಿದ್ದರೂ ಭಾರತದ ಸ್ಕೋರ್​ 280ರ ಆಸುಪಾಸು ಹೋಗುತ್ತಿತ್ತು. ಆ ವೇಳೆ ಭಾರತ ತಂಡಕ್ಕೆ ಗೆಲುವಿನ ಸಾಧ್ಯತೆಗಳು ಇದ್ದವು.

ಭಾರತ ತಂಡ ಅತ್ಯಂತ ನಿಧಾನಗತಿಯಲ್ಲಿ ಆಡಿತು ಎಂಬುದೇ ಕ್ರಿಕೆಟ್ ಅಭಿಮಾನಿಗಳ ಬೇಸರ. ಬೌಂಡರಿ , ಸಿಕ್ಸರ್​ಗಳನ್ನು ಬಾರಿಸಿ ಎದುರಾಳಿ ತಂಡದ ಬೌಲರ್​ಗಳ ಮೇಲೆ ಒತ್ತಡ ಹೇರುವಲ್ಲಿ ವಿಫಲಗೊಂಡರು. ರಾಹುಲ್ ಮತ್ತು ಕೊಹ್ಲಿ ಇನ್ನೊಂದಿಷ್ಟು ರನ್ ಗಳಿಸಬೇಕಾಗಿತ್ತು ಎಂಬುದೇ ಎಲ್ಲರ ಅಭಿಪ್ರಾಯ.

ಟಾಸ್​ ಸೋಲು

ಭಾರತ ತಂಡ ಫೈನಲ್​ನಲ್ಲಿ ಟಾಸ್ ಸೋತಿತು. ಇಲ್ಲಿನ ಮೇಲ್ಮೈಗೆ ಪೂರಕವಾಗಿ ಚೇಸ್ ಮಾಡುವುದು ಉತ್ತಮ ಆಯ್ಕೆಯಾಗಿತ್ತು. ಆ ಅದೃಷ್ಟವನ್ನು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬಳಸಿಕೊಂಡರು. ಇನಿಂಗ್ಸ್ ಆರಂಭದಲ್ಲಿ ಭಾರತ ತಂಡದ ಆಸ್ಟ್ರೇಲಿಯಾದ ಮೂರು ವಿಕೆಟ್​ಗಳನ್ನು ಪಡೆದಿತ್ತು. ಆದರೆ, ಇಬ್ಬನಿ ಪರಿಣಾಮ ಆರಂಭಗೊಂಡ ಬಳಿಕ ಭಾರತೀಯ ಬೌಲರ್​ಗಳ ಆಟ ನಡೆಯಲಿಲ್ಲ. ಕಾಂಗರೂ ಪಡೆಯ ಟ್ರಾವಿಸ್​ ಹೆಡ್​ ಗೆಲುವಿನ ಇನಿಂಗ್ಸ್ ಬಾರಿಸಿದರು.

ಇದನ್ನೂ ಓದಿ : ‘ಕಪ್​ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ’; ಭಾರತ ತಂಡವನ್ನು ಸಂತೈಸಿದ ಮೋದಿ

ಫೀಲ್ಡೀಂಗ್​

ಭಾರತ ತಂಡ ಫೀಲ್ಡಿಂಗ್ ಕೂಡ ಫೈನಲ್​ಗೆ ಪೂರಕವಾಗಿ ಇರಲಿಲ್ಲ. ಸರಿಯಾದ ರೀತಿಯಲ್ಲಿ ಅವಕಾಶಗಳನ್ನು ಬಳಸಿಕೊಳ್ಳಲಿಲ್ಲ. ಅನಗತ್ಯ ರನ್​ಗಳನ್ನು ನೀಡುವ ಮೂಲಕ ಎದುರಾಳಿ ತಂಡಕ್ಕೆ ಅವಕಾಶಗಳನ್ನು ಸೃಷ್ಟಿ ಮಾಡಿಕೊಟ್ಟರು. ವಿಕೆಟ್​ ಕೀಪಿಂಗ್​ನಲ್ಲಿ ರಾಹುಲ್ ಹಲವಾರು ವೈಫಲ್ಯಗಳನ್ನು ಅನುಭವಿಸಿದರು. ಕ್ಯಾಚ್ ಬಿಟ್ಟಿಲ್ಲ ಎಂಬುದನ್ನು ಬಿಟ್ಟು ಫೀಲ್ಡಿಂಗ್​ನಲ್ಲಿ ಜಿದ್ದು ಇರಲಿಲ್ಲ.

ನರ್ವಸ್​?

ಭಾರತ ತಂಡದ ಆಟಗಾರರು ಮೈದಾನದಲ್ಲಿ ಫೈನಲ್ ಪಂದ್ಯದ ಒತ್ತಡಕ್ಕೆ ಬಿದ್ದಂತೆ ಕಂಡು ಬಂದರು. ಆಟಗಾರರು ಪ್ರತಿ ಬಾರಿಯೂ ಹೆದರಿಕೊಂಡೇ ಆಡುವಂತೆ ಭಾಸವಾಯಿತು. ಬ್ಯಾಟಿಂಗ್​ ವೇಳೆಯಲ್ಲಿ ಹೆದರಿಕೊಂಡು ಆಗಾಗ ವಿಕೆಟ್​ ಕಳೆದುಕೊಂಡರು . ಇದರಿಂದಾಗಿ ವಿಶ್ವಾಸದಿಂದ ಆಡಲು ಭಾರತ ತಂಡದ ಆಟಗಾರರಿಗೆ ಸಾಧ್ಯವಾಗಲಿಲ್ಲ. ದೊಡ್ಡ ಮೊತ್ತವನ್ನು ಪೇರಿಸಲು ಸಾಧ್ಯವಾಗದ ಕಾರಣ ಬೌಲರ್​ಗಳಿಗೆ ಆ ಸ್ಕೋರ್ ಅನ್ನು ರಕ್ಷಿಸಿಕೊಳ್ಳುವುದಕ್ಕೂ ಸಾಧ್ಯವಾಗಲಿಲ್ಲ. ಆಕ್ರಮಣಕಾರಿ ಆಟವನ್ನು ತೋರಿಸದ ಕಾರಣ ಎದುರಾಳಿ ತಂಡದ ಆಟಗಾರರು ಅದನ್ನು ಸದ್ಬಳಕೆ ಮಾಡಿಕೊಂಡರು. ಭಾರತ ತಂಡ ಕಳೆದ ಹತ್ತು ಪಂದ್ಯಗಳಲ್ಲಿ ಆಡಿದ ಆಕ್ರಮಣಶೀಲತೆಯನ್ನು ಈ ಪಂದ್ಯದಲ್ಲಿ ತೋರಿಸಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli : ಕೊಹ್ಲಿಯ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Virat Kohli: ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಮೇ 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಾಲ್ಕು ವಿಕೆಟ್‌ಗಳ ಸೋಲನ್ನು ಆಸ್ಟ್ರೇಲಿಯಾದ ಮಾಜಿ ಬ್ಯಾಟರ್ ಮತ್ತು ವೀಕ್ಷಕ ವಿವರಣೆಗಾರ ಮ್ಯಾಥ್ಯೂ ಹೇಡನ್ ಬೇಸರದ ವಿಷಯ ಎಂದು ವಿಶ್ಲೇಷಿಸಿದ್ದಾರೆ. ಇದೇ ವೇಳೆ ಅವರು ವಿರಾಟ್​ ಕೊಹ್ಲಿಗೆ ನಿಜವಾದ ಗೌರವ ಸಲ್ಲಿಸಬೇಕು. ತಂಡದ ಸೋಲಿಗೆ ಅವರನ್ನು ಹೊಣೆಗಾರನನ್ನಾಗಿ ಮಾಡಬಾರದು ಒತ್ತಿ ಹೇಳಿದರು. ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗರು ಪಂದ್ಯದುದ್ದಕ್ಕೂ ಕೊಹ್ಲಿಯ ಸಮರ್ಪಣೆ ಮತ್ತು ಪ್ರಭಾವಶಾಲಿ ಆಟವನ್ನು ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

ಆರ್‌ಆರ್ ವಿರುದ್ಧ 24 ಎಸೆತಗಳಲ್ಲಿ 33 ರನ್ ಬಾರಿಸಿದ ಕೊಹ್ಲಿ ಅದ್ಭುತ ಮೈಲಿಗಲ್ಲನ್ನು ಸಾಧಿಸಿದ್ದರು. ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹೇಡನ್ ಇದನ್ನು ಅಸಾಮಾನ್ಯ ಸಾಧನೆ ಎಂದು ಕರೆದಿದ್ದಾರೆ. ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅವರು ಎಂದು ಹೇಳಿದ್ದಾರೆ

ಇದಲ್ಲದೆ, ಐಪಿಎಲ್ 2024 ರಲ್ಲಿ ಆರ್​​ಬಿಗಾಗಿ ಕೊಹ್ಲಿ ತೋರಿದ ಸ್ಪರ್ಧಾತ್ಮಕ ಮನೋಭಾವ ಸ್ಥಿರ ಪ್ರದರ್ಶನವನ್ನು ಹೇಡನ್ ಶ್ಲಾಘಿಸಿದರು. ಬಲಗೈ ಬ್ಯಾಟರ್​ ಈ ಋತುವಿನಲ್ಲಿ ರನ್‌ಗಾಗಿ ಹಸಿದ ರೀತಿಯಲ್ಲಿ ತೋರುತ್ತಿದ್ದರು. ಮೈದಾದನದಲ್ಲಿ ಅವರ ಉಪಸ್ಥಿತಿಯು ಪರಿಣಾಮ ಬೀರಿತ್ತು. ಬೆಂಗಳೂರು ತಂಡ ಪ್ಲೇಆಫ್‌ ಪ್ರವೇಶಿಸುವಲ್ಲಿ ಅವರ ಪಾತ್ರ ಮುಖ್ಯ ಎಂದು ಹೇಳಿದರು.

ಆರ್‌ಆರ್‌ಗೆ ಆರ್‌ಸಿಬಿ ಸೋಲಿಗೂ ವಿರಾಟ್ ಕೊಹ್ಲಿಗೂ ಯಾವುದೇ ಸಂಬಂಧವಿಲ್ಲ: ಮ್ಯಾಥ್ಯೂ ಹೇಡನ್

ಮ್ಯಾಥ್ಯೂ ಹೇಡನ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೀಗೆ ಹೇಳಿದ್ಧಾರೆ. “ಈ ಸೋಲಿಗೆ ಕೊಹ್ಲಿಯೊಂದಿಗೆ ಯಾವುದೇ ಸಂಬಂಧವಿಲ್ಲ. ನಮಗೆ ತಿಳಿದಿದೆ, ಅವರು ತನ್ನ ಸಂಪೂರ್ಣ ಹೃದಯ ಮತ್ತು ಆತ್ಮವನ್ನು ತಂಡಕ್ಕಾಗಿ ಕೊಟ್ಟಿದ್ದಾರೆ. ಅವರ ಫೀಲ್ಡಿಂಗ್ ಪ್ರಯತ್ನದ ಬಗ್ಗೆ ನೀವು ಯೋಚಿಸಿದಾಗ ಇನ್ನು ವಿಶೇಷ ಎನಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಬ್ಯಾಟ್‌ನೊಂದಿಗೆ ಅದ್ಭುತವಾಗಿದ್ದರು. 15 ಪಂದ್ಯಗಳಲ್ಲಿ 154 ರ ಪ್ರಭಾವಶಾಲಿ ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕೊಹ್ಲಿ ಆಗಾಗ್ಗೆ ಆರ್​ಸಿಬಿ ತಂಡವನ್ನು ಅನ್ನು ಏಕಾಂಗಿಯಾಗಿ ಗೆಲ್ಲಿಸಿದ್ದರು. 2024 ರಲ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೊಹ್ಲಿ ಶೀಘ್ರದಲ್ಲೇ T20 ವಿಶ್ವಕಪ್ 2024 ಗಾಗಿ ಭಾರತೀಯ ತಂಡದೊಂದಿಗೆ ಯುಎಸ್​ಎ ಮತ್ತು ವೆಸ್ಟ್​ ಇಂಡೀಸ್​​ಗೆ ತೆರಳಲಿದ್ದಾರೆ. ಅವರು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಲಿದ್ದಾರೆ. ಆರ್​ಸಿಬಿ ಓಪನರ್ ಐಪಿಎಲ್ 2024 ರಲ್ಲಿ ಉತ್ತಮ ಫಾರ್ಮ್​ ತೋರಿದ ಕಾರಣ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕ ಆಟಗಾರನಾಗಿ ಆಡುವ ಸಾಧ್ಯತೆಯಿದೆ.

Continue Reading

ಪ್ರಮುಖ ಸುದ್ದಿ

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Glenn Maxwell : ಮ್ಯಾಕ್ಸ್​ವೆಲ್​ ಗೋಲ್ಡನ್ ಡಕ್‌ ಆಗುವ ಮೂಲಕ ಮತ್ತೊಂದು ಬಾರಿ ಬೇಜವಾಬ್ದಾರಿ ಆಟವಾಡಿದರು. ಈ ವಿರುದ್ಧದ ವೈಫಲ್ಯವು ಐಪಿಎಲ್​ 2024ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮರೆಯಲಾಗದ ಅಭಿಯಾನನವಾಗಿದೆ. ಈ ಋತುವಿನ 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ 28 ರ ಗರಿಷ್ಠ ಸ್ಕೋರ್‌ನೊಂದಿಗೆ ಕೇವಲ 52 ರನ್ ಗಳಿಸಿದ್ದಾರೆ. ಅವರು ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

VISTARANEWS.COM


on

Glenn Maxwell
Koo

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ (ಮೇ 22) ನಡೆದ ಐಪಿಎಲ್​ 2024 (IPL 2024) ಎಲಿಮಿನೇಟರ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಸೋಲುಕಂಡಿತು. ಇದರೊಂದಿಗೆ ಆರ್​ಸಿಬಿಯ ಅಭಿಯಾನ ಕೊನೆಗೊಂಡಿತು. ಸೋಲಿನ ನಡುವೆಯೂ ಹೆಚ್ಚು ಚರ್ಚೆಗೆ ಒಳಗಾಗಿದ್ದು ಐಪಿಎಲ್ 2024 ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಅವರ ಕೆಟ್ಟ ಅಭಿಯಾನ.

ಆರ್​​ಸಿಬಿ ತನ್ನ ಹಿಂದಿನ ಲೀಗ್​ ಹಂತದ ಆರು ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದ ನಂತರ ಎಲಿಮಿನೇಟರ್​ನಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಮತ್ತೊಂದೆಡೆ, ರಾಜಸ್ಥಾನ್​ ತನ್ನ ಹಿಂದಿನ ನಾಲ್ಕು ಪಂದ್ಯಗಳನ್ನು ಕಳೆದುಕೊಂಡಿತ್ತು. ಮೇ ತಿಂಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆದ್ದಿರಲಿಲ್ಲ. ಹೀಗಾಗಿ ಆರ್​​ಸಿಬಿ ಫೇವರಿಟ್​ ಆಗಿತ್ತು. ಆದಾಗ್ಯೂ, ಸಂಜು ಸ್ಯಾಮ್ಸನ್ ನೇತೃತ್ವದ ಆರ್‌ಸಿಬಿಯನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಕ್ವಾಲಿಫೈಯರ್‌ನಲ್ಲಿ ತಮ್ಮ ಸ್ಥಾನ ಕಾಯ್ದಿರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 172 ರನ್ ಗಳಿಸಿತು. ಆರ್​ಸಿಬಿ ಬ್ಯಾಟರ್‌ಗಳು ಉತ್ತಮ ಆರಂಭ ಪಡೆದರೂ ಅವರಲ್ಲಿ ಯಾರೂ ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲಿಲ್ಲ. ರಜತ್ ಪಾಟಿದಾರ್ 34 ರನ್ ಗಳಿಸಿದ್ದೇ ಗರಿಷ್ಠ. ಉತ್ತರವಾಗಿ, ಆರ್​ಆರ್​ 19 ಓವರ್‌ಗಳಲ್ಲಿ ಮೊತ್ತವನ್ನು ಬೆನ್ನಟ್ಟಿ ಎರಡನೇ ಕ್ವಾಲಿಫೈಯರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನೊಂದಿಗಿನ ಹಣಾಹಣಿಯನ್ನು ನಿಕ್ಕಿ ಮಾಡಿಕೊಂಡಿತು.

ಆರ್​ಸಿಬಿ ತಂಡ ತಮ್ಮ ಅಭಿಯಾನವನ್ನು ಪರಿವರ್ತಿಸಿದ ರೀತಿ ಮತ್ತು ಎಲ್ಲಾ ಅಡೆತಡೆಗಳನ್ನು ಮೀರಿ ಪ್ಲೇಆಫ್‌ಗೆ ಅರ್ಹತೆ ಗಳಿಸಿದ್ದಕ್ಕಾಗಿ ಹಲವಾರು ಕಡೆಗಳಿಂದ ಪ್ರಶಂಸೆ ಪಡೆಯುತ್ತಿದ್ದರೆ, ಗ್ಲೆನ್ ಮ್ಯಾಕ್ಸ್‌ವೆಲ್ ಎಲ್ಲೆಡೆಯಿಂದ ತೀವ್ರ ಟೀಕೆ ಎದುರಿಸುತ್ತಿದ್ದಾರೆ. ಅವರಿಗೆ ಕೊಟ್ಟಿರುವ ಕೋಟ್ಯಂತರ ರೂಪಾಯಿ ವಾಪಸ್​ ಪಡೆಯಿರಿ ಎಂಬುದಾಗಿ ಒತ್ತಾಯ ಕೇಳಿ ಬಂದಿದೆ.

ಎಲಿಮಿನೇಟರ್‌ನಲ್ಲಿ ಆರ್​ಆರ್​ ವಿರುದ್ಧ ಉತ್ತಮ ಪ್ರದರ್ಶನ ನೀಡುವ ಮೂಲಕ ಆಸ್ಟ್ರೇಲಿಯನ್ ಆಟಗಾರನಿಗೆ ತನ್ನನ್ನು ಸಮರ್ಥಿಸಿಕೊಳ್ಳುವ ಅವಕಾಶ ಇತ್ತು. ಆದರೆ ಅವರು ಗೋಲ್ಡನ್ ಡಕ್‌ ಆಗುವ ಮೂಲಕ ಮತ್ತೊಂದು ಬಾರಿ ಬೇಜವಾಬ್ದಾರಿ ಆಟವಾಡಿದರು. ಈ ವಿರುದ್ಧದ ವೈಫಲ್ಯವು ಐಪಿಎಲ್​ 2024ರಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಮರೆಯಲಾಗದ ಅಭಿಯಾನನವಾಗಿದೆ. ಈ ಋತುವಿನ 10 ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಆಲ್‌ರೌಂಡರ್ 28 ರ ಗರಿಷ್ಠ ಸ್ಕೋರ್‌ನೊಂದಿಗೆ ಕೇವಲ 52 ರನ್ ಗಳಿಸಿದ್ದಾರೆ. ಅವರು ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ.

ಮನೋಜ್ ತಿವಾರಿ ವಾಗ್ದಾಳಿ

ಗ್ಲೆನ್ ಮ್ಯಾಕ್ಸ್‌ವೆಲ್ ಆರ್‌ಆರ್ ವಿರುದ್ಧ ಭಾರತದ ಮಾಜಿ ಬ್ಯಾಟ್ಸ್‌ಮನ್ ಮನೋಜ್ ತಿವಾರಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಋತುವಿನಲ್ಲಿ ಮ್ಯಾಕ್ಸ್‌ವೆಲ್ ಅವರ ಪ್ರದರ್ಶನವನ್ನು ತಿವಾರಿ ತೀವ್ರವಾಗಿ ಟೀಕಿಸಿದ್ದಲ್ಲದೆ, ಫ್ರಾಂಚೈಸಿಗೆ ಅವರ ಬದ್ಧತೆ ಏನೆಂದು ಪ್ರಶ್ನಿಸಿದ್ದಾರೆ.

ಮ್ಯಾಕ್ಸ್‌ವೆಲ್ ಆಸ್ಟ್ರೇಲಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಆರ್‌ಸಿಬಿಗೆ ಅದೇ ಪ್ರದರ್ಶನವನ್ನು ಪುನರಾವರ್ತಿಸುವುದಿಲ್ಲ ಯಾಕೆ ಎಂದು ತಿವಾರಿ ಪ್ರಶ್ನಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿಮಗೆ ತುಂಬಾ ಅನುಭವವಿದೆ. ನೀವು ಆಸ್ಟ್ರೇಲಿಯಾ ಪರ ಆಡಿದಾಗ ನೀವು ತುಂಬಾ ಉತ್ತಮ ಪ್ರದರ್ಶನ ನೀಡುತ್ತೀರಿ. ಆದರೆ ನೀವು ಐಪಿಎಲ್‌ಗೆ ಬಂದ ತಕ್ಷಣ ಏನಾಗುತ್ತೋ ಗೊತ್ತಿಲ್ಲ. ಅವರಿಗೆ ಆಸಕ್ತಿಯಿರುವುದಿಲ್ಲ ಎಂದು ತಿವಾರಿ ಹೇಳಿದ್ದಾರೆ.

ಮ್ಯಾಕ್ಸ್​​ವೆಲ್ ಆಡದಿದ್ದರೂ ಪರ್ವಾಗಿಲ್ಲ. ಅವರ ಬ್ಯಾಂಕ್ ಬ್ಯಾಲೆನ್ಸ್ ಚೆನ್ನಾಗಿದೆ. ಚೆಕ್ ಅವರಿಗೆ ತಲುಪುತ್ತದೆ. ಅವರು ರಾತ್ರಿಯಲ್ಲಿ ಗೆಟ್-ಟುಗೆದರ್ ಮಾಡುತ್ತಾರೆ. ನಗುತ್ತಾರೆ ಮತ್ತು ಫೋಟೋಗಳನ್ನು ಕ್ಲಿಕ್ ಮಾಡಿಸಿಕೊಳ್ಳುತ್ತಾರೆ ಎಂದು ತಿವಾರಿ ಕ್ರಿಕ್‌ಬಜ್‌ಗೆ ಮಾತನಾಡುತ್ತಾ ಆರೋಪಿಸಿದ್ದಾರೆ.

ಇದನ್ನೂ ಓದಿ: IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

ಆರ್‌ಸಿಬಿ ಆರಂಭದಲ್ಲಿ ಉತ್ತಮವಾಗಿ ಪ್ರದರ್ಶನ ನೀಡದೇ ಹೋದಾಗ ನಾವು ಇಲ್ಲಿ ಕುಳಿತು ವಿಶ್ಲೇಷಿಸುತ್ತಿದ್ದೆವು. ಆದರೆ, ಕೊನೆಯಲ್ಲಿ, ಅವರು ಆರು ಗೆಲುವ ಕಂಡರು. ಅದಕ್ಕಾಗಿ ಅವರು ಸಂತೋಷಪಡಬಹುದು. ಆದರೂ ಅಂತಿಮ ಫಲಿತಾಂಶವು ಟ್ರೋಫಿಯಾಗಿರುತ್ತದೆ. ಹೀಗಾಗಿ ತಂಡದಲ್ಲಿ ಸಮಸ್ಯೆ ಇದೆ, ”ಎಂದು ತಿವಾರಿ ಹೇಳಿದ್ದಾರೆ.

ಮ್ಯಾಕ್ಸ್‌ವೆಲ್ ಮುಂಬರುವ ಟಿ20 ವಿಶ್ವಕಪ್ 2024ರಲ್ಲಿ ಆಸ್ಟ್ರೇಲಿಯಾ ತಂಡದ ಪರವಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲಿ ಅವರು ಹೇಗೆ ಪ್ರದರ್ಶನ ನೀಡುತ್ತಾರೆ ಎಂದು ಕಾದು ನೋಡಬೇಕು.

Continue Reading

ಕ್ರೀಡೆ

IPL 2024: ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ಈ ಫ್ರಾಂಚೈಸಿ ಪರ ಆಡಿದರೆ ಉತ್ತಮ ಎಂದ ಆರ್​ಸಿಬಿ ಮಾಜಿ ನಾಯಕ

IPL 2024: ಕ್ರೀಡೆಯಲ್ಲಿ ಶ್ರೇಷ್ಠ ಆಟಗಾರರು ಇತರ ಫ್ರಾಂಚೈಸಿಗಳಿಗೆ ಹೋಗಿ ಗೆಲುವು ಸಾಧಿಸಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಮತ್ತೊಮ್ಮೆ ಆರ್​ಸಿಬಿ ಗೆಲುವಿಗೆ ಪ್ರಯತ್ನಿಸುದಕ್ಕಿಂತ ಡೆಲ್ಲಿ ಪರ ಆಡಿದರೆ ಉತ್ತಮ. ಅವರಿಗೆ ದೆಹಲಿಯಲ್ಲಿ ಮನೆ ಇದೆ. ಕೊಹ್ಲಿಗೆ ಕುಟುಂಬವಿದೆ. ದೆಹಲಿಯಲ್ಲಿ ಆಡಿದರೆ, ಅವರಿಗೆ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಬಹುದು. ವಿರಾಟ್ ಅವರು ದೆಹಲಿಗೆ ಏಕೆ ಆಡಬಾರದು? ಎಂದು ಕೆವಿನ್​ ಪೀಟರ್ಸನ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

IPL 202
Koo

ಬೆಂಗಳೂರು: ಕಳೆದ 17 ವರ್ಷಗಳಿಂದ ಆರ್​ಸಿಬಿ(RCB) ಪರ ನಿಷ್ಠೆಯಿಂದ ಆಡುತ್ತಿರುವ ವಿರಾಟ್​ ಕೊಹ್ಲಿ(Virat Kohli) ಮುಂದಿನ ಆವೃತ್ತಿಗೆ ತಂಡ ತೊರೆದು ಬೇರೆ ಫ್ರಾಂಚೈಸಿ ಪರ ಆಡಬೇಕೆಂದು ಆರ್​ಸಿಬಿಯ ಮಾಜಿ ನಾಯಕ ಕೆವಿನ್​ ಪೀಟರ್ಸನ್ ಸಲಹೆ ನೀಡಿದ್ದಾರೆ.

​ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಬುಧವಾರ ನಡೆದಿದ್ದ ಎಲಿಮಿನೇಟರ್​ ಪಂದ್ಯದಲ್ಲಿ(IPL 2024) ಆರ್​ಸಿಬಿ 4 ವಿಕೆಟ್​ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿತ್ತು. ಈ ಸೋಲಿನ ಹತಾಶೆಯಲ್ಲಿ ವಿರಾಟ್​ ಕೊಹ್ಲಿ ಕಣ್ಣೀರು ಕೂಡ ಸುರಿಸಿದರು. ಅಲ್ಲದೆ ಅತ್ಯಂತ ಭಾವುಕರಾಗಿ ಕಂಡುಬಂದರು. ಇದನ್ನು ನೋಡಿದ ಅವರ ಅಭಿಮಾನಿಗಳು ಕೂಡ ಅತ್ಯಂತ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ಮಾತನಾಡಿದ ಪೀಟರ್ಸನ್, ಮುಂದಿನ ಆವೃತ್ತಿಯಲ್ಲಿ ಕೊಹ್ಲಿ ತಮ್ಮ ತವರಾದ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಬೇಕು ಎಂದು ಹೇಳಿದ್ದಾರೆ.

ಸ್ಟಾರ್​ ಸ್ಟೋರ್ಟ್ಸ್​ ಸಂದರ್ಶನದಲ್ಲಿ ಮಾತನಾಡಿದ ಪೀಟರ್ಸನ್, ಮುಂದಿನ ಆವೃತ್ತಿಗೆ ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಲವು ಆಟಗಾರರು ತಮ್ಮ ತವರು ತಂಡದ ಪೊರ ಆಟಲು ಕಾತರಗೊಂಡಿದ್ದಾರೆ. ಕನ್ನಡಿಗ ಕೆ.ಎಲ್​ ರಾಹುಲ್​ ಕೂಡ ಆರ್​ಸಿಬಿ ಪರ ಆಡಬೇಕು, ಬೆಂಗಳೂರು ನನ್ನ ತವರು ಎಂದು ಹೇಳಿದ್ದರು. ಕೊಹ್ಲಿ ಕೂಡ ಆರ್​ಸಿಬಿ ತೊರೆದು ಡೆಲ್ಲಿ ಪರ ಆಡಿದರೆ ಉತ್ತಮ ಎಂದು ಪೀಟರ್ಸನ್​ ಹೇಳಿದ್ದಾರೆ.

“ಕ್ರೀಡೆಯಲ್ಲಿ ಶ್ರೇಷ್ಠ ಆಟಗಾರರು ಇತರ ಫ್ರಾಂಚೈಸಿಗಳಿಗೆ ಹೋಗಿ ಗೆಲುವು ಸಾಧಿಸಿದ್ದಾರೆ. ಆದರೆ, ವಿರಾಟ್ ಕೊಹ್ಲಿ ಮತ್ತೊಮ್ಮೆ ಆರ್​ಸಿಬಿ ಗೆಲುವಿಗೆ ಪ್ರಯತ್ನಿಸುದಕ್ಕಿಂತ ಡೆಲ್ಲಿ ಪರ ಆಡಿದರೆ ಉತ್ತಮ. ಅವರಿಗೆ ದೆಹಲಿಯಲ್ಲಿ ಮನೆ ಇದೆ. ಕೊಹ್ಲಿಗೆ ಕುಟುಂಬವಿದೆ. ದೆಹಲಿಯಲ್ಲಿ ಆಡಿದರೆ, ಅವರಿಗೆ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಬಹುದು. ವಿರಾಟ್ ಅವರು ದೆಹಲಿಗೆ ಏಕೆ ಆಡಬಾರದು? ರೊನಾಲ್ಡೊ, ಮೆಸ್ಸಿ, ಹ್ಯಾರಿ ಕೇನ್ ಅವರಂತಹ ದಿಗ್ಗಜ ಫುಟ್ಬಾಲ್​ ಆಟಗಾರರು ತಮ್ಮ ನೆಚ್ಚಿನ ಫ್ರಾಂಚೈಸಿ ತೊರೆದ ಉದಾಹರಣೆ ಇದೆ” ಎಂದು ಹೇಳುವ ಮೂಲಕ ಕೊಹ್ಲಿ ಡೆಲ್ಲಿ ಪರ ಆಡುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ವಿರಾಟ್​ ಕೊಹ್ಲಿ ಮಾತ್ರ ಚೊಚ್ಚಲ ಆವೃತ್ತಿಯ ಐಪಿಎಲ್​ನಿಂದ ಇದುವರೆಗಿನ ಐಪಿಎಲ್​ ತನಕ ಒಂದೇ ತಂಡದ ಪರ ಆಡಿದ ಏಕೈಕ ಆಟಗಾರನಾಗಿದ್ದಾರೆ. ಚೆನ್ನೈ ತಂಡ 2 ವರ್ಷ ಬ್ಯಾನ್​ ಆಗದಿದ್ದರೆ ಧೋನಿ ಕೂಡ ಈ ಹಿರಿಮೆಗೆ ಪಾತ್ರರಾಗುತ್ತಿದ್ದರು. ವಿರಾಟ್​ ಕೊಹ್ಲಿ 252 ಐಪಿಎಲ್​ ಪಂದ್ಯಗಳನ್ನಾಡಿ 8,004 ರನ್​ ಬಾರಿಸಿದ್ದಾರೆ. ಇದರಲ್ಲಿ 8 ಶತಕ ಮತ್ತು 55 ಅರ್ಧಶತಕ ಗಳಿಸಿದ್ದಾರೆ.

ಈ ಆವೃತ್ತಿಯಲ್ಲಿ ಕೊಹ್ಲಿ 15 ಪಂದ್ಯಗಳಿಂದ 741 ರನ್​ ಬಾರಿಸಿ ಸದ್ಯ ಆರೆಂಜ್​ ಕ್ಯಾಪ್​ ಹೋಲ್ಡರ್​ ಆಗಿದ್ದಾರೆ. 38 ಸಿಕ್ಸರ್​ ಮತ್ತು 62 ಬೌಂಡರಿ ಬಾರಿಸಿದ್ದಾರೆ. ಎಮಿನೇಟರ್​ ಪಂದ್ಯದಲ್ಲಿಯೂ ಕೊಹ್ಲಿ ತಂಡದ ಗೆಲುವಿಗಾಗಿ ಮೈದಾನದ ಮೂಲೆ ಮೂಲೆಗೂ ಚಿರತೆ ವೇಗದಲ್ಲಿ ಓಡಿ ಬೌಂಡರಿ ತಡೆಯುವ ಕಾರ್ಯ ಮಾಡಿದ್ದರು. ಆದದೆ ಅದೃಷ್ಟ ನೆಟ್ಟಗಿರದ ಕಾರಣ ಅಂತಿಮವಾಗಿ ಸೋಲು ಕಾಣಬೇಕಾಯಿತು.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಸಂಜುಗಿಂತ ಪಂತ್​ ಬೆಸ್ಟ್​ ಎಂದ ಯುವರಾಜ್

T20 World Cup 2024: ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಯುವರಾಜ್​ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರನ್ನು ಆಡಿದರೆ ಉತ್ತಮ ಎಂದು ಹಲವು ಮಾಜಿ ಆಟಗಾರರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದೀಗ ಈ ಪಟ್ಟಿಗೆ ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್​ ಸಿಂಗ್(Yuvraj Singh) ಕೂಡ ಯಾರನ್ನು ಆಡಿಸಿದರೆ ಉತ್ತಮ ಎಂದು ಹೇಳಿದ್ದಾರೆ.​​

​ಐಸಿಸಿ​ ಸಂದರ್ಶವೊಂದರಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ನಾನು ಸಂಜು ಸ್ಯಾಮ್ಸನ್‌ಗಿಂತ(sanju samson) ರಿಷಭ್​ ಪಂತ್(Rishabh Pant) ಅವರನ್ನು ಆಯ್ಕೆ ಮಾಡುತ್ತೇನೆ. ಅವರು ಎಡಗೈ ಆಟಗಾರ, ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲುವ ಬೃಹತ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಹಿಂದೆಯೂ ಕೂಡ ಭಾರತಕ್ಕೆ ಸ್ಮರಣೀಯ ಇನಿಂಗ್ಸ್​ ಆಡಿ ಗೆಲುವು ತಂದುಕೊಟ್ಟಿದ್ದಾರೆ. ಟಿ20 ವಿಶ್ವಕಪ್​ನಲ್ಲಿಯೂ ಅವರು ಮ್ಯಾಚ್​ ವಿನ್ನಿಂಗ್​ ಪ್ರದರ್ಶನ ತೋರುವ ವಿಶ್ವಾಸವಿದೆ” ಎಂದು ಹೇಳಿದರು.

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್​ ಪಂತ್​ ಅವರು 14 ತಿಂಗಳ ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್​ ಮೂಲಕ ಮತ್ತೆ ಕ್ರಿಕೆಟ್​ ಕಮ್​ಬ್ಯಾಕ್​ ಮಾಡಿದ್ದರು. ಪಂತ್​ ದೀರ್ಘಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರೂ ಕೂಡ ಅವರ ಪ್ರದರ್ಶನದಲ್ಲಿ ಯಾವುದೇ ವ್ಯತ್ಯಾಸ ಮಾತ್ರ ಕಂಡುಬಂದಿರಲಿಲ್ಲ. ಹಳೆಯ ಫಾರ್ಮ್​ನಂತೆ ಪ್ರದರ್ಶನ ತೋರಿದ್ದರು. ಹೀಗಾಗಿ ಯುವರಾಜ್​ ಕೂಡ ಪಂತ್​ರನ್ನು ಟಿ20ಯಲ್ಲಿ ಆಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Continue Reading
Advertisement
Prashant Kishor
ದೇಶ8 seconds ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾರ್ಮಿಕ ಪೋಸ್ಟ್!

Virat Kohli
ಕ್ರೀಡೆ2 mins ago

Virat Kohli : ಕೊಹ್ಲಿಯ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ46 mins ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ48 mins ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ50 mins ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ52 mins ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ55 mins ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ57 mins ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Glenn Maxwell
ಪ್ರಮುಖ ಸುದ್ದಿ1 hour ago

Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

Theatre
ಸಿನಿಮಾ1 hour ago

‘ಸ್ಟಾರ್‌’ ಸಿನಿಮಾಗಳಿಲ್ಲದ ಕಾರಣ ಚಿತ್ರಮಂದಿರಗಳ ಬಂದ್‌ಗೆ ಚಿಂತನೆ;‌ ನಿರ್ಮಾಪಕರಿಂದ ಭಾರಿ ಆಕ್ರೋಶ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌