Final race of Moto GP today in PortugalMoto GP : ಫೋರ್ಚುಗಲ್​ನಲ್ಲಿ ಭಾನುವಾರ ಮೋಟೊ ಜಿಪಿ ಮೊದಲ ಸುತ್ತಿನ ಫೈನಲ್​ ರೇಸ್​ Vistara News
Connect with us

ಕ್ರೀಡೆ

Moto GP : ಫೋರ್ಚುಗಲ್​ನಲ್ಲಿ ಭಾನುವಾರ ಮೋಟೊ ಜಿಪಿ ಮೊದಲ ಸುತ್ತಿನ ಫೈನಲ್​ ರೇಸ್​

ಪೋರ್ಚುಗಲ್​ನಲ್ಲಿ ನಡೆಯುತ್ತಿರುವುದು ಪ್ರಸಕ್ತ ಋತುವಿನ ಮೊದಲ ರೇಸ್​ ಆಗಿದ್ದು, ಸೆಪ್ಟೆಂಬರ್​ನಲ್ಲಿ ಭಾರತದಲ್ಲಿ ಅಯೋಜನೆಗೊಂಡಿದೆ.

VISTARANEWS.COM


on

Final race of Moto GP today in Portugal
Koo

ಬೆಂಗಳೂರು: ಜಗತ್ತಿನ ಅತಿ ದೊಡ್ಡ ಮೋಟಾರ್​ಸೈಕಲ್​ ರೇಸ್​ ಮೋಟೊ ಜಿಪಿಯ ಮೊದಲ ಸುತ್ತು ಮಾರ್ಚ್ 24ರಂದು ಪೋರ್ಚಗಲ್​ನಲ್ಲಿ ಆರಂಭಗೊಂಡಿದೆ. ಅದರ ಫೈನಲ್​ ರೇಸ್​ ಭಾನುವಾರ (ಮಾರ್ಚ್​ 26ರಂದು) ನಡೆಯಲಿದೆ. ಎರಡು ದಿನಗಳ ಅಭ್ಯಾಸದ ಬಳಿಕ ರೇಸರ್​ಗಳು ಅಂತಿಮ ರೇಸ್​ಗೆ ಸಜ್ಜಾಗಿದ್ದಾರೆ. ಇದು ಹಾಲಿ ಋತುವಿನ ಮೊದಲ ರೇಸ್ ಆಗಿದೆ. ಶನಿವಾರ ನಡೆದ ಅರ್ಹತಾ ಸುತ್ತಿನ ರೇಸ್​ನಲ್ಲಿ ಹೋಂಡಾದ ಸವಾರ ಮಾರ್ಕ್​ ಮಾರ್ಕ್ವೆಜ್​ ಗೆಲುವು ಸಾಧಿಸಿದ್ದಾರೆ.

ಪೊರ್ಟಿಮೊದಲ್ಲಿ ನಡೆದ ಈ ರೇಸ್​ನಲ್ಲಿ 1 ನಿಮಿಷ 37.226 ಸೆಕೆಂಡ್​ಗಳಲ್ಲಿ ಒಂದು ಲ್ಯಾಪ್​ ಪೂರ್ಣಗೊಳಿಸುವ ಮೂಲಕ ದಾಖಲೆ ಸೃಷ್ಟಿಸಿದ ಹೋಂಡಾದ ರೇಸರ್​ ಮಾರ್ಕ್ವೆಜ್​ ಫೈನಲ್​ ರೇಸ್​ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. 1’37.290 ರೇಸ್​ ಮುಗಿಸಿದ ಡುಕಾಟಿಯ ಫ್ರಾನ್ಸೆಸ್ಕೊ ಬಗಾನಿಯಾ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಡುಕಾಟಿಯ ಸವಾರರೇ ಆಗಿರುವ ಜಾರ್ಜ್​ ಮಾರ್ಟಿನಾ (1’37.454) ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಒಟ್ಟು 21 ರೇಸ್​ಗಳು

ಹಾಲಿ ಋತುವಿನಲ್ಲಿ ಒಟ್ಟು 21 ರೇಸ್​ಗಳು ನಡೆಯಲಿದೆ. ಮಾರ್ಚ್​ 24ರಂದು ಆರಂಭಗೊಂಡ ರೇಸ್​ ನವೆಂಬರ್​ 26ರಂದು ಕೊನೆಯಾಗಲಿದೆ. ಕೊನೇ ರೇಸ್​ ವೆಲೆನ್ಸಿಯಾದಲ್ಲಿ ನಡೆಯಲಿದೆ. ಅದಕ್ಕಿಂತ ಮೊದಲು 21 ರಾಷ್ಟ್ರಗಳಲ್ಲಿ ಈ ರೇಸ್​​ ಸುತ್ತಲಿದೆ. ಗರಿಷ್ಠ ರೇಸ್​ಗಳನ್ನು ಗೆಲ್ಲುವ ಸವಾರರು ಚಾಂಪಿಯನ್​ಪಟ್ಟ ಪಡೆಯಲಿದ್ದಾರೆ. ಹೋಂಡಾ ಕಂಪನಿಯ ಮಾರ್ಕ್​ ಮಾರ್ಕ್ವೆಜ್​ ಸ್ಪರ್ಧೆಯಲ್ಲಿರುವ ಒಟ್ಟು 8 ಬಾರಿ ಚಾಂಪಿಯನ್​ಪಟ್ಟ ಅಲಂಕರಿಸಿದ ರೇಸರ್ ಆಗಿದ್ದಾರೆ.

ಇದನ್ನೂ ಓದಿ : Moto GP : ಜಿಯೊ ಹವಾ; ಜಗತ್ತಿನ ಅತಿ ದೊಡ್ಡ ಮೋಟಾರ್​ಸೈಕಲ್​ ರೇಸ್​ ಉಚಿತ ಪ್ರಸಾರ

ಭಾರತದಲ್ಲಿ ಇದೇ ಮೊದಲು ರೇಸ್​

ಈ ಭಾರತದಲ್ಲಿ ಇದೇ ಮೊದಲ ಬಾರಿಗೆ ಮೊಟೊ ಜಿಪಿ ಸ್ಪರ್ಧೆ ನಡೆಯಲಿದೆ. ಮೊಟೊ ಜಿಪಿ ಆಯೋಜಕ ಸಂಸ್ಥೆಯಾಗಿರುವ ಡೊರ್ನಾದಿಂದ ಆತಿಥ್ಯ ಪಡೆಯಲು ಭಾರತದ ಫೇರ್​ಸ್ಟ್ರೀಟ್​ ಸ್ಪೋರ್ಟ್ಸ್​ ಸಂಸ್ಥೆ ಯಶಸ್ಸು ಗಳಿಸಿದೆ. ಸೆಪ್ಟೆಂಬರ್​ 22ರಿಂದ 24ರವರೆಗೆ ಗ್ರೇಟರ್​ ನೊಯ್ಡಾದ ಬುದ್ಧ ಇಂಟರ್​ನ್ಯಾಷನಲ್​ ಸರ್ಕೀಟ್​ನಲ್ಲಿ ರೇಸ್ ನಡೆಯಲಿದೆ. ಇದು ಈ ಋತುವಿನ 14ನೇ ರೇಸ್ ಆಗಿದೆ. ಭಾರತದ ಮೋಟಾರ್​ ಸೈಕಲ್​ ರೇಸ್​ ಅಭಿಮಾನಿಗಳ ಪಾಲಿಗೆ ಇದು ಶುಭ ಸುದ್ದಿಯಾಗಿದೆ.

ಈ ಬಾರಿಯ ಮೊಟೊ ಜಿಪಿಯ ಭಾರತದಲ್ಲಿ ನೇರ ಪ್ರಸಾರದ ಹಕ್ಕನ್ನು ಜಿಯೊ ಸಂಸ್ಥೆ ತನ್ನದಾಗಿಸಿಕೊಂಡಿದೆ. ಜಿಯೊ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಣೆ ಮಾಡಲು ಅವಕಾಶವಿದೆ.

2023ರ ಮೋಟೊ ಜಿಟಿ ವೇಳಾಪಟ್ಟಿ ಇಂತಿದೆ

  • ಮಾರ್ಚ್​ 24-26 ಪೋರ್ಚುಗಲ್​ ಗ್ರ್ಯಾನ್​ ಪ್ರಿ
  • ಮಾರ್ಚ್​ 31-ಏಪ್ರಿಲ್​ 2 ಅರ್ಜೆಂಟೀನಾ ಗ್ರ್ಯಾನ್​ ಪ್ರಿ
  • ಏಪ್ರಿಲ್​ 14-16 ಅಮೆರಿಕ ಗ್ರ್ಯಾನ್​ ಪ್ರಿ
  • ಏಪ್ರಿಲ್​ 28-30 ಸ್ಪಾನಿಶ್​ ಗ್ರ್ಯಾನ್​ ಪ್ರಿ
  • ಮೇ 12-14 ಫ್ರೆಂಚ್​ ಗ್ರ್ಯಾನ್​ ಪ್ರಿ
  • ಜೂನ್​ 09-11 ಇಟಲಿ ಗ್ರ್ಯಾನ್​ ಪ್ರಿ
  • ಜೂನ್​ 16-18 ಜರ್ಮನ್​ ಗ್ರ್ಯಾನ್​ ಪ್ರಿ
  • ಜೂನ್​ 23-25 ಡಚ್​ ಗ್ರ್ಯಾನ್​ ಪ್ರಿ
  • ಜುಲೈ 7-9 ಕಜಕ​ಸ್ತಾನ ಗ್ರ್ಯಾನ್​ ಪ್ರಿ
  • ಆಗಸ್ಟ್​ 4-6 ಬ್ರಿಟಿಷ್​ ಗ್ರ್ಯಾನ್​ ಪ್ರಿ
  • ಆಗಸ್ಟ್​ 4-6 ಆಸ್ಟ್ರೀಯಾ ಗ್ರ್ಯಾನ್​ ಪ್ರಿ
  • ಆಗಸ್ಟ್​ 18-20 ಗ್ರ್ಯಾನ್​ ಪ್ರಿ ವೊನ್​ ಒಸ್ಟೆರಿಚ್​, ಆಸ್ಟ್ರಿಯಾ
  • ಸೆಪ್ಟೆಂಬರ್​ 1-3 ಕ್ಯಾಟಲಾನ್​ ಗ್ರ್ಯಾನ್​ ಪ್ರಿ
  • ಸೆಪ್ಟೆಂಬರ್​ 8-10 ಸ್ಯಾನ್​ ಮರಿನೊ ಗ್ರ್ಯಾನ್​ ಪ್ರಿ
  • ಸೆಪ್ಟೆಂಬರ್​ 22-24 ಇಂಡಿಯನ್​ ಗ್ರ್ಯಾನ್​ ಪ್ರಿ
  • ಸೆಪ್ಟೆಂಬರ್ 29-ಅಕ್ಟೋಬರ್​ 1 ಜಪಾನ್​ ಗ್ರ್ಯಾನ್​ ಪ್ರಿ
  • ಅಕ್ಟೋಬರ್​ 13-15 ಇಂಡೋನೇಷ್ಯಾ ಗ್ರ್ಯಾನ್​ ಪ್ರಿ
  • ಅಕ್ಟೋಬರ್​ 20-22 ಆಸ್ಟ್ರೇಲಿಯನ್​ ಗ್ರ್ಯಾನ್​ ಪ್ರಿ
  • ಅಕ್ಟೋಬರ್​ 27-29 ಥಾಯ್ಲೆಂಡ್​ ಗ್ರ್ಯಾನ್​ ಪ್ರಿ
  • ನವೆಂಬರ್​ 10-12 ಮಲೇಷ್ಯಾ ಗ್ರ್ಯಾನ್​ ಪ್ರಿ
  • ನವೆಂಬರ್​ 17-19 ಕತಾರ್​ ಗ್ರ್ಯಾನ್​ ಪ್ರಿ
  • ನವೆಂಬರ್​ 24-26 ವಲೆನ್ಸಿಯಾ ಗ್ರ್ಯಾನ್​ ಪ್ರಿ
ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

ಈಗಾಗಲೇ ಆರೆಂಜ್​ ಕ್ಯಾಪ್​​ ಪಡೆದಿರುವ ಶುಭಮನ್​ ಗಿಲ್ ಅವರು ವಿರಾಟ್​ ಕೊಹ್ಲಿಯ ದಾಖಲೆಯೊಂದನ್ನು ಮುರಿಯಲು ಸಜ್ಜಾಗಿದ್ದಾರೆ.

VISTARANEWS.COM


on

Edited by

ipl records gill
Koo

ಅಹಮದಾಬಾದ್​: ನ್ಯೂ ಬ್ಯಾಟಿಂಗ್​ ಸೆನ್ಸೇಷನಲ್ ಶುಭಮನ್​ ಗಿಲ್ ಅವರು ಇದೀಗ ಐಪಿಎಲ್​ನಲ್ಲಿ ವಿರಾಟ್​ ಕೊಹ್ಲಿಯ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ 851 ರನ್​ ಗಳಿಸಿರುವ ಗಿಲ್​ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ 122ರನ್​ ಗಳಿಸಿದರೆ ವಿರಾಟ್​ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳ್ಳಲಿದೆ.

ಮುಂಬೈ ಇಂಡಿಯನ್ಸ್​ ವಿರುದ್ಧದ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ್ದ ಗಿಲ್​ ಅವರು ಈ ಬಾರಿಯ ಐಪಿಎಲ್​ನ​ ಆರೆಂಜ್​ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. 730 ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್​ ಅವರು 851 ರನ್​ ಬಾರಿಸಿದ್ದಾರೆ. ಆರ್​ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್​ಗೆ ಇನ್ನು ಗಿಲ್​ ದಾಖಲೆ ಮುರಿಯುವ ಅವಕಾಶವಿಲ್ಲ.

ಕಳೆದ ನಾಲ್ಕು ಇನ್ನಿಂಗ್ಸ್​ಗಳಲ್ಲಿ ಮೂರು ಶತಕ ಬಾರಿಸಿರುವ ಗಿಲ್​ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ ಅವರು ಗಳಿಸಿದ್ದ 973ರನ್​ ಗಳ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ. ಇದಕ್ಕೆ ಗಿಲ್​ ಅವರಿಗೆ ಬೇಕಿರುವುದು 122ರನ್​ಗಳ ಗುರಿ. ಫೈನಲ್​ ಪಂದ್ಯದಲ್ಲಿ ಶತಕದೊಂದಿ ಈ ಮೊತ್ತ ಪೇರಿಸಿದಲ್ಲಿ ಗಿಲ್​ ಅವರು ಐಪಿಎಲ್ನ ಇತಿಹಾಸದ ಪುಟ ಸೇರಲಿದ್ದಾರೆ.

ಫೈನಲ್​ ಪಂದ್ಯಕ್ಕೆ ಉಭಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರೀಡೆ

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

ಭಾರತೀಯ ಕ್ರೀಡಾಪಟುಗಳು ಶಾಂತಿಯಿಂದ ಅಭ್ಯಾಸ ನಡೆಸುವ ವಾತಾವರಣ ಶೀಘ್ರದಲ್ಲೇ ಸೃಷ್ಟಿಯಾಗಲಿ ಎಂದು ಹೇಳುವ ಮೂಲಕ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತೆ ಕವಾಯ್ ಅವರು ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿದ್ದಾರೆ.

VISTARANEWS.COM


on

Edited by

Tokyo Olympics Champion Risako Kawai
Koo

ನವದೆಹಲಿ: ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ಪಟ್ಟು ಹಿಡಿದು ಕಳೆದ ಸುಮಾರು ಒಂದು ತಿಂಗಳಿನಿಂದ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತದ ಒಲಿಂಪಿಯನ್​ ಕುಸ್ತಿಪಟುಗಳಿಗೆ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತೆ ರಿಸಾಕೊ ಕವಾಯ್ ಅವರ ಬೆಂಬಲವೊಂದು ದೊರೆತಿದೆ.

ಎರಡು ವಾರಗಳ ಹಿಂದೆ ಕುಸ್ತಿಪಟುಗಳು ತಮ್ಮ ಪ್ರತಿಭಟನೆಗೆ ಬೆಂಬಲಿಸುವಂತೆ ಒಲಿಂಪಿಕ್‌ ಪದಕ ವಿಜೇತರು ಸೇರಿ ತಾರಾ ವಿದೇಶಿ ಅಥ್ಲೀಟ್‌ಗಳನ್ನು ವಿನಂತಿಸಿಕೊಂಡಿದ್ದರು. ಇದೀಗ ಮೂರು ಬಾರಿಯ ವಿಶ್ವ ಚಾಂಪಿಯನ್‌ ಜಪಾನ್‌ನ ರಿಸಾಕೊ ಕವಾಯ್ ಅವರು ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿದ್ದಾರೆ. ಇದರೊಂದಿಗೆ ಕುಸ್ತಿಪಟುಗಳಿಗೆ ಬೆಂಬಲವಾಗಿ ಬಂದ ಮೊದಲ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಕುಸ್ತಿಪಟು ಎನಿಸಿಕೊಂಡಿದ್ದಾರೆ. ಕವಾಯ್ ಅವರು ಟೋಕಿಯೊದಲ್ಲಿ ನಡೆದ 57 ಕೆಜಿ ಮಹಿಳಾ ಫ್ರೀಸ್ಟೈಲ್​ನಲ್ಲಿ ಚಿನ್ನ ಗೆದ್ದ ವೇಟ್‌ ಲಿಫ್ಟರ್.

ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಬಿಬಿಸಿ ನ್ಯೂಸ್​ನ ವೀಡಿಯೋವನ್ನು ರಿಟ್ವೀಟ್ ಮಾಡುವ ಮೂಲಕ, “ಭಾರತೀಯ ಕ್ರೀಡಾಪಟುಗಳು ಶಾಂತಿಯಿಂದ ಅಭ್ಯಾಸ ನಡೆಸುವ ವಾತಾವರಣ ಶೀಘ್ರದಲ್ಲೇ ಸೃಷ್ಟಿಯಾಗಲಿ” ಎಂದು ಹೇಳುವ ಮೂಲಕ ಕವಾಯ್ ಬೆಂಬಲ ಸೂಚಿಸಿದ್ದಾರೆ.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಪ್ರಮುಖರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ Wrestlers Protest: ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ,ಯೋಗಿ ಹೆಸರು ಬಳಕೆ; ಬ್ರಿಜ್ ಭೂಷಣ್ ಆರೋಪ

ಇತ್ತೀಚೆಗೆ ಕುಸ್ತಿಪಟುಗಳು ಸಾವಿರಾರು ಪ್ರತಿಭಟನಾಕಾರರ ಬೆಂಬಲದೊಂದಿಗೆ ಇಂಡಿಯಾ ಗೇಟ್‌ ತನಕ ಕ್ಯಾಂಡಲ್ ಮಾರ್ಚ್ ಮಾಡಿದ್ದರು. ಇದೇ ವೇಳೆ ಮಾತನಾಡಿದ್ಧ ವಿನೇಶ್​ ಪೋಗಟ್​ ಇದು ಕೇವಲ ಆರಂಭವಷ್ಟೇ ಅಸಲಿ ಹೋರಾಟ ಇನ್ನು ಮುಂದೆ ಇದೆ ಎಂದು ಹೇಳುವ ಮೂಲಕ ಉಗ್ರ ಹೋರಟದ ಎಚ್ಚರಿಕೆಯನ್ನು ನೀಡಿದ್ದರು.

Continue Reading

ಕ್ರಿಕೆಟ್

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಹೋರಾಟ ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

Edited by

Narendra Modi Stadium Ahmedabad
Koo

ಅಹಮದಾಬಾದ್​: ಹಾಲಿ ಚಾಂಪಿಯನ್​ ಗುಜರಾತ್ ಟೈಟನ್ಸ್​​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ಫೈನಲ್​ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಪ್ರಶಸ್ತಿ ಸಮರಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಸರ್ವ ವಿಧದಲ್ಲೂ ಸಜ್ಜಾಗಿ ನಿಂತಿದೆ. ಈ ಪಂದ್ಯಕ್ಕೆ ಇತ್ತಂಡಗಳ ಪ್ಲೇಯಿಂಗ್​ ಇಲೆವೆನ್​ ಹೇಗಿರಲಿದೆ ಎಂಬ ಮಾಹಿತಿ ಇಂತಿದೆ.

ಸಮಬಲದ ತಂಡಗಳು

ಎರಡೂ ತಂಡಗಳು ಸಮಬಲದಿಂದ ಕೂಡಿದೆ. ಬ್ಯಾಟಿಂಗ್​ ಮತ್ತು ಬೌಲಿಂಗ್‌ ದಾಳಿ ಸಂಘಟಿಸುವಲ್ಲಿ ಎರಡೂ ತಂಡಗಳು ಬಲಿಷ್ಠವಾಗಿದೆ. ಗುಜರಾತ್​ ಪರ ಶುಭಮನ್‌ ಗಿಲ್‌, ಸಾಯಿ ಸುದರ್ಶನ್‌, ವಿಜಯ್‌ ಶಂಕರ್‌, ಡೇವಿಡ್‌ ಮಿಲ್ಲರ್‌, ರಾಹುಲ್‌ ತೆವಾಟಿಯ ಅತ್ಯಂತ ಅಪಾಯಕಾರಿಗಳು. ಚೆನ್ನೈ ಪರ ಋತುರಾಜ್​ ಗಾಯಕ್ವಾಡ್​, ಡೆವೋನ್​ ಕಾನ್ವೆ, ರಹಾನೆ ಮತ್ತು ಶಿವಂ ದುಬೆ ಕೂಡ ಸಿಡಿಯಬಲ್ಲರು. ಆದರೆ ಮೊಯಿನ್​ ಅಲಿ ಈ ಆವೃತ್ತಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಅವರು ಮಹತ್ವದ ಪಂದ್ಯದಲ್ಲಿ ಆಡಬೇಕಾದ ಅನಿವಾರ್ಯತೆ ಇದೆ.

ಮುಖಾಮುಖಿ

ಚೆನ್ನೈ ಮತ್ತು ಗುಜರಾತ್​ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್​ ಮೂರು ಬಾರಿ ಗೆದ್ದಿದೆ. ಚೆನ್ನೈ ತಂಡ ಒಂದು ಪಂದ್ಯ ಗೆದ್ದಿದೆ. ಈ ಗೆಲುವು ಇದೇ ಆವೃತ್ತಿಯ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ದಾಖಲಾಗಿತ್ತು. ಅಹಮದಾಬಾದ್​ನಲ್ಲೇ ನಡೆದ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್​ ಗೆದ್ದು ತನ್ನ ಅಭಿಯಾನವನ್ನು ಆರಂಭಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಇತ್ತಂಡಗಳು ಮುಖಾಮುಖಿಯಾಗಿವೆ. ಇಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಈ ಪಂದ್ಯದ ಕೌತುಕ.

ಸಂಭಾವ್ಯ ತಂಡಗಳು

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.

ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!

ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.

Continue Reading

ಕ್ರೀಡೆ

Malaysia Masters: ಪ್ರಣಯ್​ ಫೈನಲ್​ಗೆ; ಭಾರತಕ್ಕೆ ಒಂದು ಪದಕ ಖಾತ್ರಿ

ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಸ್ಟಾರ್‌ ಶಟ್ಲರ್‌ ಪಿವಿ ಸಿಂಧು ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.

VISTARANEWS.COM


on

Edited by

Malaysia Masters Badminton
Koo

ಕೌಲಾಲಂಪುರ: ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌(Malaysia Masters) ಟೂರ್ನಿಯಲ್ಲಿ ಭಾರತದ ಸ್ಟಾರ್‌ ಶಟ್ಲರ್‌ ಎಚ್‌.ಎಸ್‌. ಪ್ರಣಯ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಆದರೆ ಪದಕ ಭರವಸೆಯಾಗಿದ್ದ ಅನುಭವಿ ಆಟಗಾರ್ತಿ ಪಿ.ವಿ. ಸಿಂಧು ಸೆಮಿಫೈನಲ್‌ನಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದ ಮೊದಲ ಗೇಮ್‌ ವೇಳೆ ಪ್ರಣಯ್​ ಅವರ ಎದುರಾಳಿ ಇಂಡೋನೇಷ್ಯಾದ ಕ್ರಿಸ್ಟಿಯನ್‌ ಆದಿನಾಥ ಅವರ ಎಡ ಮೊಣಕಾಲಿಗೆ ಗಂಭೀರ ಗಾಯವಾದ ಕಾರಣದಿಂದ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಈ ವೇಳೆ 19-17ರ ಮುನ್ನಡೆಯಲ್ಲಿದ್ದ ಪ್ರಣಯ್ ಅವರು ನೇರವಾಗಿ ಫೈನಲ್​ ಟಿಕೆಟ್​ ಪಡೆದರು. ಇಂದು(ಭಾನುವಾರ) ನಡೆಯುವ ಫೈನಲ್‌ನಲ್ ಹಣಾಹಣಿಯಲ್ಲಿ ಪ್ರಣಯ್‌ ಚೀನಾದ ವೆಂಗ್‌ ಹಾಂಗ್‌ ಯಾಂಗ್‌ ಸವಾಲು ಎದುರಿಸಲಿದ್ದಾರೆ.

ಇದನ್ನೂ ಓದಿ Malaysia Masters: ಸೆಮಿಫೈನಲ್​ಗೆ ಲಗ್ಗೆಯಿಟ್ಟ ಸಿಂಧು,ಪ್ರಣಯ್; ಶ್ರೀಕಾಂತ್​ಗೆ ಸೋಲು

ಇದು ಪ್ರಸಕ್ತ ಋತುವಿನಲ್ಲಿ ಪ್ರಣಯ್‌ ಕಾಣುತ್ತಿರುವ ಮೊದಲ ಫೈನಲ್‌ ಆಗಿದೆ. ಕಳೆದ ವರ್ಷ ಸ್ವಿಸ್‌ ಓಪನ್‌ ಟೂರ್ನಿಯಲ್ಲಿ ರನ್ನರ್ ಅಪ್‌ ಆದ ಬಳಿಕ ಪ್ರಣಯ್‌ ಮೊದಲ ಸಲ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದಾರೆ. ಗಾಯಗೊಂಡ ಆದಿನಾಥ 2019ರ ವಿಶ್ವ ಜೂನಿಯರ್‌ ಚಾಂಪಿಯನ್‌ ಆಗಿದ್ದಾರೆ.

ಸಿಂಧುಗೆ ಸೋಲು

ಪದಕ ಭರವಸೆಯಾಗಿದ್ದ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ. ಸಿಂಧು ಅವರು ಸೆಮಿಫೈನಲ್‌ ಪಂದ್ಯದಲ್ಲಿ ಎಡವಿ ಸೋಲು ಕಂಡರು. ಇಂಡೋನೇಷ್ಯಾದ ಗ್ರೆಗೋ ರಿಯಾ ಮರಿಸ್ಕಾ ಟುಂಜುಂಗ್‌ ವಿರುದ್ಧ 14-21, 17-21 ನೇರ ಗೇಮ್‌ಗಳಿಂದ ಪರಾಭವಗೊಂಡರು. ಇದು ಟುಂಜುಂಗ್‌ ವಿರುದ್ಧ ಸಿಂಧು ಅನುಭವಿಸಿದ ಸತತ 2ನೇ ಸೋಲು. ಇದಕ್ಕೂ ಮೊದಲು ಈ ಇಂಡೋನೇಷ್ಯಾ ಆಟಗಾರ್ತಿ ವಿರುದ್ಧ ಸತತ 7 ಗೆಲುವು ಸಾಧಿಸಿದ ಹೆಗ್ಗಳಿಕೆ ಸಿಂಧು ಅವರದಾಗಿತ್ತು. ಆದರೆ ಇಲ್ಲಿ ಕೆಲ ಸ್ವಯಂ ತಪ್ಪುಗಳಿಂದ ಪಂದ್ಯದಲ್ಲಿ ಸೋಲು ಕಂಡರು.

Continue Reading
Advertisement
naresh and pavitra lokesh Live in Relationship
South Cinema7 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema9 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ13 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್27 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ37 mins ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ47 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ1 hour ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ1 hour ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

Narendra Modi Stadium, Ahmedabad
ಕ್ರಿಕೆಟ್2 hours ago

IPL 2023: ಫೈನಲ್​ ಪಂದ್ಯಕ್ಕೆ ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್​ ಇಲೆವೆನ್​

Sarv dharma prayer ceremony
ದೇಶ2 hours ago

New Parliament Building: ಕಾರ್ಮಿಕರಿಗೆ ಸನ್ಮಾನಿಸಿದ ಪ್ರಧಾನಿ ಮೋದಿ; ಸರ್ವ ಧರ್ಮ ಪ್ರಾರ್ಥನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ47 mins ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ6 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!