Celebrity Fashion | ಲೆಜೆಂಡರಿ ಫುಟ್‌ಬಾಲ್‌ ಐಕಾನ್‌ ಲಿಯೊನೆಲ್‌ ಮೆಸ್ಸಿ ಫ್ಯಾಷನ್‌ ಲೋಕ - Vistara News

ಫುಟ್‌ಬಾಲ್

Celebrity Fashion | ಲೆಜೆಂಡರಿ ಫುಟ್‌ಬಾಲ್‌ ಐಕಾನ್‌ ಲಿಯೊನೆಲ್‌ ಮೆಸ್ಸಿ ಫ್ಯಾಷನ್‌ ಲೋಕ

ಲೆಜೆಂಡರಿ ಫುಟ್‌ಬಾಲ್‌ ಐಕಾನ್‌ ಲಿಯೊನೆಲ್‌ ಮೆಸ್ಸಿ ಕೇವಲ ಖ್ಯಾತ ಫುಟ್‌ಬಾಲ್‌ ಆಟಗಾರ ಮಾತ್ರವಲ್ಲ, ಅವರು ತಮ್ಮದೇ ಆದ ಫ್ಯಾಷನ್‌ ಲೆಬೆಲ್‌ ಹೊಂದಿದ್ದಾರೆ. ಅವರ ಫ್ಯಾಷನ್‌ ಲವ್‌ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Celebrity Fashion
ಚಿತ್ರಗಳು : ಮೆಸ್ಸಿ, ಲೆಜೆಂಡರಿ ಫುಟ್‌ಬಾಲ್‌ ಐಕಾನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ಇದೀಗ ಜಗತ್ತಿನ ಎಲ್ಲೆಡೆ ಭಾರಿ ಸುದ್ದಿಯಲ್ಲಿರುವ ಲೆಜೆಂಡರಿ ಫುಟ್‌ಬಾಲ್‌ ಐಕಾನ್‌ ಲಿಯೊನೆಲ್‌ ಮೆಸ್ಸಿ ಕೂಡ ಫ್ಯಾಷನ್‌ ಲವರ್‌ ಎಂಬುದು ಬಹಳಷ್ಟು ಮಂದಿಗೆ ತಿಳಿದಿರಲಿಕ್ಕಿಲ್ಲ! ಹೌದು. ಮೆಸ್ಸಿ, ಕೇವಲ ಇಂಟರ್‌ನ್ಯಾಷನಲ್‌ ಬ್ರಾಂಡ್‌ಗಳನ್ನು ಧರಿಸಿ ಪ್ರಮೋಟ್‌ ಮಾಡುವುದು ಮಾತ್ರವಲ್ಲ, ಅವರು ತಮ್ಮದೇ ಆದ ಫ್ಯಾಷನ್‌ ಬ್ರಾಂಡ್‌ ಕೂಡ ಹೊಂದಿದ್ದಾರೆ. ತಮ್ಮ ಫ್ಯಾಷನಿಸ್ಟಾ ಪತ್ನಿಯ ಮಾರ್ಗದರ್ಶನದಲ್ಲಿ ಫ್ಯಾಷನ್‌ ಉದ್ಯಮದಲ್ಲೂ ತೊಡಗಿಸಿಕೊಂಡಿದ್ದಾರೆ.

Celebrity Fashion

ಮೆಸ್ಸಿ ಸ್ಟೋರ್‌ ಫ್ಯಾಷನ್‌ ಲೆಬೆಲ್‌

ಮೆಸ್ಸಿ ತಮ್ಮದೇ ಆದ ದಿ ಮೆಸ್ಸಿ ಸ್ಟೋರ್‌ ಎಂಬ ಮೆನ್ಸ್‌ ಲೈಫ್‌ಸ್ಟೈಲ್‌ ಹಾಗೂ ಫ್ಯಾಷನ್‌ ಬ್ರಾಂಡ್‌ ಮಾಲೀಕತ್ವ ಹೊಂದಿದ್ದಾರೆ. ಸಹೋದರಿಯ ಟೀಮ್‌ ಇವೆಲ್ಲವನ್ನೂ ನೋಡಿಕೊಳ್ಳುತ್ತಿದೆ. ಇಂಟರ್‌ನ್ಯಾಷನಲ್‌ ಬ್ರಾಂಡ್‌ಗಳಾದ ಟಾಮಿ ಹೈಫಿಗೆರ್‌, ಫೈಲಾ ಸೇರಿದಂತೆ ಟಾಪ್‌ ಬ್ರಾಂಡ್‌ಗಳ ಕಲೆಕ್ಷನ್‌ ಲಭ್ಯವಿರುವ ರಿಟೇಲ್‌ ಸ್ಟೋರ್‌ ಇದಾಗಿದೆ. ಇನ್ನು ತಮ್ಮ ಈ ಸ್ಟೋರ್‌ಗೆ ಖುದ್ದು ಮೆಸ್ಸಿಯೇ ಬ್ರಾಂಡ್‌ ಅಂಬಾಸಡರ್‌. ಅಷ್ಟು ಮಾತ್ರವಲ್ಲ, ಆಗಾಗ ತಮ್ಮ ಬ್ರಾಂಡ್‌ ಪ್ರಮೋಷನನ್ನು ತಾವೇ ಮಾಡುತ್ತಾರೆ. ಆನ್‌ಲೈನ್‌ನಲ್ಲೂ ಇವರ ಲೆಬೆಲ್‌ನ ನಾನಾ ಬಗೆಯ ಫ್ಯಾಷನ್‌ವೇರ್‌ಗಳು ದೊರೆಯುತ್ತವೆ. ಇನ್ನು ಮೆಸ್ಸಿ ತಮ್ಮ ಡೈಲಿ ರುಟೀನ್‌ನಲ್ಲಿ ಧರಿಸುವ ಸಿಂಪಲ್‌ ಪೋಲೋ ಶರ್ಟ್‌ನಿಂದ ಹಿಡಿದು ಏರ್‌ಪೋರ್ಟ್ ಲುಕ್‌ವರೆಗೂ ತಮ್ಮ ಬ್ರಾಂಡ್‌ನಡಿ ಬರುವ ಎಲ್ಲಾ ಫ್ಯಾಷನ್‌ವೇರ್‌ಗಳ ಪ್ರಮೋಟ್‌ ಕೂಡ ಮಾಡುತ್ತಾರೆ. ಇದು ಅವರ ಫ್ಯಾಷನ್‌ ಪ್ರೇಮವನ್ನು ತೋರ್ಪಡಿಸುತ್ತದೆ ಎನ್ನುತ್ತಾರೆ ಫ್ಯಾಷನ್‌ ಎಕ್ಸ್‌ಪರ್ಟ್ ವಿದ್ಯಾ.

Celebrity Fashion

ಮೆಸ್ಸಿ ಫ್ಯಾಷೆನಬಲ್‌ ಔಟ್‌ಫಿಟ್ಸ್‌

ಡೆನೀಮ್‌, ಪುಲ್‌ ಓವರ್ಸ್‌, ವೆಲ್ವೆಟ್‌ ಬ್ಲೇಝರ್‌ ಹಾಗೂ ಪೋಲ್ಕಾ ಜಾಕೆಟ್‌ ಸೇರಿದಂತೆ ನಾನಾ ಬಗೆಯ ಫ್ಯಾಷನಬಲ್‌ ಉಡುಪುಗಳನ್ನು ಧರಿಸಿ ಹಲವು ಬಾರಿ ಫ್ಯಾಷನ್‌ ಮಾಗಝೀನ್‌ಗಳ ಸುದ್ದಿಯಾಗಿದ್ದಾರೆ. ಇವೆಲ್ಲದರ ನಡುವೆ ಮೆಸ್ಸಿಯವರಿಗೆ ಕಂಫರ್ಟಬಲ್‌ ಕ್ಲಾತಿಂಗ್‌ಗಳೆಂದರೇ ಪ್ರಿಯವಂತೆ. ತಮ್ಮದೇ ಆದ ಸ್ಟೈಲ್‌ ಸ್ಟೇಟ್‌ಮೆಂಟ್ಸ್‌ ಹೊಂದಿರುವ ಮೆಸ್ಸಿಯವರ ಫ್ಯಾಷನ್‌ ಸ್ಟೇಟ್‌ಮೆಂಟ್‌ಗೆ ಪತ್ನಿ ಆಂಟೆನೆಲಾ ಸದಾ ಗೈಡ್‌ ಮಾಡುತ್ತಾರಂತೆ. ಅಂದಹಾಗೆ, ಇವರು ಕೂಡ ಫ್ಯಾಷನಿಸ್ಟಾ. ಈಗಾಗಲೇ ಸಾಕಷ್ಟು ಫ್ಯಾಷನ್‌ ಬ್ರಾಂಡ್‌ಗಳಿಗೆ ಮಾಡೆಲ್‌ ಆಗಿ ಕಾಣಿಸಿಕೊಂಡಿರುವುದರೊಂದಿಗೆ ಹೈ ಪ್ರೊಫೈಲ್‌ ಫ್ಯಾಷನ್‌ ಶೋಗಳಲ್ಲೂ ಕಾಣಿಸಿಕೊಂಡಿದ್ದಾರೆ. ಜತೆಗೆ ಪತಿಯ ಎಲ್ಲಾ ಫ್ಯಾಷನ್‌ ಹಾಗೂ ಸ್ಟೈಲ್‌ಗೆ ಸಂಬಂಧಿಸಿದ ಕಾರ್ಯಗಳನ್ನು ಇವರೇ ನೋಡಿಕೊಳ್ಳುತ್ತಾರಂತೆ.

Celebrity Fashion

ಮೆಸ್ಸಿ ಔಟ್‌ಫಿಟ್‌ ಸೆಲೆಕ್ಷನ್‌

ಹೂಡಿ, ಜೀನ್ಸ್‌ ಹಾಗೂ ಪೋಲೋ ಶರ್ಟ್ ಇವರ ವಾರ್ಡ್ರೋಬ್‌ನಲ್ಲಿ ಕಾಯಂ ಸ್ಥಾನ ಪಡೆದಿದೆಯಂತೆ.

ಸಾಕಷ್ಟು ಟ್ಯಾಟೂ ಹಾಕಿಸಿಕೊಂಡಿರುವ ಮೆಸ್ಸಿಗೆ ಟ್ಯಾಟೂಗಳೆಂದರೆ ಪ್ರಿಯವಂತೆ.

ಒಮ್ಮೆ ಹೇರ್‌ ಕಲರ್‌ ಬದಲಿಸಿ ಆಟದಿಂದ ಕೆಲಕಾಲ ಸಸ್ಪೆಂಡ್‌ ಆಗುವ ತನಕ ಕಾಂಟ್ರವರ್ಸಿಗೆ ಸಿಲುಕಿ ಹಾಕಿಕೊಂಡಿದ್ದರಂತೆ.

ಟ್ರಾವೆಲ್‌ ಟೈಮ್‌ನಲ್ಲಿ ಪಕ್ಕಾ ಹಾಲಿಡೇ ಔಟ್‌ಫಿಟ್‌ನಲ್ಲೆ ಕಾಣಿಸಿಕೊಳ್ಳುತ್ತಾರಂತೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ| Star travel Fashion | ಕೂಲ್‌ ಟ್ರಾವೆಲ್‌ ಫ್ಯಾಷನ್‌ಗೆ ಸೈ ಎಂದ ನಟಿ ಹಿತಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Sunil Chhetri: ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಚೆಟ್ರಿ 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ

VISTARANEWS.COM


on

Sunil Chhetri
Koo

ಬೆಂಗಳೂರು: ಭಾರತದಲ್ಲಿ ಆಳವಾಗಿ ಬೇರೂರಿರುವ ಕ್ರಿಕೆಟ್, ಕ್ರಿಕೆಟಿಗರೆಂದರೆ ದೇವರು ಎಂದು ಪೂಜಿಸಲ್ಪಡುವ ಜಾಯಮಾನದಲ್ಲಿ ಒಬ್ಬ ಫುಟ್ಬಾಲ್ ಆಟಗಾರ (Indian Football player) 20 ವರ್ಷಗಳಿಂದ ದೇಶಕ್ಕಾಗಿ ಆಡುತ್ತಾನೆ ಅಂದರೆ ನಂಬಲು ಕಷ್ಟ ಆಗಬಹುದು. ಫುಟ್ಬಾಲಿಗೆ ಕೆಲವು ಶ್ರೀಮಂತ ಕ್ಲಬ್ ಬಿಟ್ಟರೆ ಬೇರೆ ಯಾವ ಸಪೋರ್ಟ್ ಕೂಡ ಇಲ್ಲದ ಸನ್ನಿವೇಶದಲ್ಲಿ ಕೂಡ ಈ ದೈತ್ಯ ಪ್ರತಿಭೆಯ ಆಟಗಾರ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಾನೆ ಅಂದರೆ ಅದು ನಿಜವಾಗಿಯೂ ಅದ್ಭುತ! ಭಾರತೀಯ ಫುಟ್ಬಾಲ್ ತಂಡದ (Indian Football team) ಕ್ಯಾಪ್ಟನ್ ಆಗಿ ಭಾರತದಲ್ಲಿ ಫುಟ್ಬಾಲ್ ಕ್ರೇಜನ್ನು ಜೀವಂತವಾಗಿ ಉಳಿಸಿದ ಲೆಜೆಂಡ್ ಮಿಂಚು ಹರಿಸುವ ಫಾರ್ವರ್ಡ್ ಆಟಗಾರ ಸುನೀಲ್ ಚೆಟ್ರಿ (Sunil Chhetri) ಕೊನೆಗೂ ತನ್ನ ನೆಚ್ಚಿನ ಫುಟ್ಬಾಲ್​ ಆಟಕ್ಕೆ ವಿದಾಯ(Sunil Chhetri Announces Retirement) ಹೇಳಲು ನಿರ್ಧರಿಸಿದ್ದಾರೆ.


ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಅವರ ನಿವೃತ್ತಿಯ ನಿರ್ಧಾರ ಕೇಳಿ ಅನೇಕರು ಬೇಸರಗೊಂಡರೂ ಕೂಡ ಅವರ ಸಾಧನೆಗೆ ಸಲಾಂ ಎಂದಿದ್ದಾರೆ. ಚೆಟ್ರಿ ಕುರಿತ ಸಾರಸ್ಯರ ಸಂಗತಿ ಇಂತಿದೆ.


2021 ರಲ್ಲಿ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ಸುನೀಲ್​ ಚೆಟ್ರಿ ಅವರಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವ – ಖೇಲ್ ರತ್ನ ಪ್ರಶಸ್ತಿಯನ್ನು ನೀಡಿತು. ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೊದಲ ಮತ್ತು ಏಕೈಕ ಫುಟ್ಬಾಲ್ ಆಟಗಾರ. ನೀರಜ್ ಚೋಪ್ರಾ ಮತ್ತು ಮಿಥಾಲಿ ರಾಜ್ ಸೇರಿದಂತೆ ಇತರ ಪ್ರಸಿದ್ಧ ಕ್ರೀಡಾಪಟುಗಳೊಂದಿಗೆ ಅವರು ಈ ಗೌರವವನ್ನು ಸ್ವೀಕರಿಸಿದ್ದರು.

ಇದನ್ನೂ ಓದಿ Sunil Chhetri: ಕ್ಲಬ್​ ತೊರೆದು ದೇಶದ ಪರ ಆಡಲು ನಿರ್ಧರಿಸಿದ ಸುನೀಲ್​ ಚೆಟ್ರಿಗೆ ಮೆಚ್ಚುಗೆ

sunil chhetri khel ratna award


2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

sunil chhetri 2005


ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ


ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಶುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ!


18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್​ಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ.

ಇದನ್ನೂ ಓದಿ Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ


ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್. ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ.


1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಈ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು.

Continue Reading

ಕ್ರೀಡೆ

Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ

Sunil Chhetri: ವಿರಾಟ್ ಕೊಹ್ಲಿ ಹಾಗೂ ಸುನಿಲ್ ಚೆಟ್ರಿ ಉತ್ತಮ ಸ್ನೇಹಿತರು. ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನವೊಂದರಲ್ಲಿ ತಮ್ಮ ಫಿಟ್​ನೆಸ್​ಗೆ ಸುನಿಲ್ ಚೆಟ್ರಿಯೇ ನಿಜವಾದ ಸ್ಫೂರ್ತಿ ಎಂದು ಹೇಳಿದ್ದರು.

VISTARANEWS.COM


on

sunil chhetri
Koo

ಬೆಂಗಳೂರು: ಭಾರತ ಕಂಡ ಶ್ರೇಷ್ಠ ಫುಟ್ಬಾಲ್(Indian football icon)​ ಆಟಗಾರ ಸುನೀಲ್​ ಚೆಟ್ರಿ(Sunil Chhetri) ಅವರು ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್​ ವೃತ್ತಿ ಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ. ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಚೆಟ್ರಿ ತಮ್ಮ ನಿವೃತ್ತಿಯನ್ನು ಘೋಷಿಸುತ್ತಿದ್ದಂತೆ, ಅನೇಕ ಭಾರತೀಯ ದಿಗ್ಗಜ ಕ್ರೀಡಾಪಟುಗಳು ಚೆಟ್ರಿಗೆ ಹಾರೈಸಿದ್ದಾರೆ ಜತೆಗೆ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಚೆಟ್ರಿ ಅವರ ಆಪ್ತ ಗೆಳೆಯ ಟೀಮ್​ ಇಂಡಿಯಾದ ಕ್ರಿಕೆಟಿಗ ವಿರಾಟ್​ ಕೊಹ್ಲಿ(virat kohli) ನಿಮ್ಮ ಬಗ್ಗೆ ಹೆಮ್ಮೆಯಿದೆ, ಮೈ ಬದ್ರರ್ ಎಂದು ಕಮೆಂಟ್​ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ಸುನಿಲ್ ಚೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜತೆಯಾಗಿ ಕಾಣಿಸಿಕೊಂಡಿದ್ದರು. ಚೆಟ್ರಿ ಇಂಡಿಯನ್​ ಸೂಪರ್​ ಲೀಗ್​ನಲ್ಲಿ ಬೆಂಗಳೂರು ತಂಡದ ಪರ ಆಡುತ್ತಿದ್ದು, ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡುತ್ತಿದ್ದಾರೆ. ಹಲವು ಬಾರಿ ಚೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಕೂಡ ಚೆಟ್ರಿಗೆ ಶುಭ ಹಾರೈಸಿದೆ. ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನವೊಂದರಲ್ಲಿ ತಮ್ಮ ಫಿಟ್​ನೆಸ್​ಗೆ ಸುನಿಲ್ ಚೆಟ್ರಿಯೇ ನಿಜವಾದ ಸ್ಫೂರ್ತಿ ಎಂದು ಹೇಳಿದ್ದರು.

ಸೈನಿಕನ ಮಗ

1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು. ತನ್ನ 18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್ಬುಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ. ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್.

ಒಬ್ಬ ಕ್ರೀಡಾಪಟುವಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿ, ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಸುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ! ನಿವೃತ್ತಿ ಘೋಷಿಸಿರುವ ಸುನೀಲ್ ಚೆಟ್ರಿ ಭಾರತೀಯ ಫುಟ್ಬಾಲ್ ಲೋಕದ ಲೆಜೆಂಡ್ ಆಟಗಾರ ಎಂದು ನೀವು ಖಂಡಿತವಾಗಿಯೂ ಒಪ್ಪುತ್ತೀರಿ. ಅಲ್ಲವೇ?

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ. ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

Continue Reading

ಕ್ರೀಡೆ

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Sunil Chhetri: 2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

VISTARANEWS.COM


on

Sunil Chhetri
Koo

ಮುಂಬಯಿ: ಭಾರತದ ಖ್ಯಾತ ಫುಟ್ಬಾಲ್(Indian football icon)​ ಆಟಗಾರ ಸುನೀಲ್‌ ಚೆಟ್ರಿ(Sunil Chhetri) ಅವರು ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯದ ನಂತರ ಚೆಟ್ರಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡುವ ಮೂಲಕ ಚೆಟ್ರಿ ತಮ್ಮ ನಿವೃತ್ತಿಯ ವಿಚಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ.

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಕೆಲವು ದಿನಗಳ ಹಿಂದೆಯೇ ಸುನೀಲ್‌ ಚೆಟ್ರಿ ಅವರ ನಿವೃತ್ತಿಯ ವಿಚಾರ ಮುನ್ನಕೆಗೆ ಬಂದಿತ್ತು. ಈ ವಿಚಾರವನ್ನು ಕೋಚ್‌ ಐಗರ್‌ ಸ್ಟಿಮ್ಯಾಕ್‌ ಹೇಳಿದ್ದರು. “ಸುನೀಲ್‌ ಚೆಟ್ರಿ ಅವರಿಗೆ ಈಗ 38 ವಯಸ್ಸಾಗಿದೆ. ಇದು ಅವರಿಗೂ ಅರಿವಿಗೂ ಬಂದಿದೆ. ಇಷ್ಟು ವಯಸ್ಸಿನಲ್ಲಿ ಅವರಿಗೆ 90 ನಿಮಿಷಗಳ ಆಟ ಆಡಲು ದೇಹ ಸ್ಪಂದಿಸುವುದು ಕೂಡ ಕಷ್ಟಕರ. ಅವರು ಭಾರತ ಕಂಡ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ನನ್ನ ಪ್ರಕಾರ ಈ ಬಾರಿ ಏಷ್ಯಾ ಕಪ್​ ಅವರ ವಿದಾಯದ ಋತು ಆಗಿರುವ ಸಾಧ್ಯತೆಯೇ ಹೆಚ್ಚು ಎಂಬುದಾಗಿ ಸ್ಟಿಮ್ಯಾಕ್‌ ಹೇಳಿದ್ದರು. ಇದೀಗ ಅಂತಿಮವಾಗಿ ಚೆಟ್ರಿ ತಮ್ಮ ನಿವೃತ್ತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

“ನಾನು ಎಂದಿಗೂ ಮರೆಯದ ಮತ್ತು ಆಗಾಗ ನೆನಪಿಸಿಕೊಳ್ಳುವ ಒಂದು ದಿನವಿದೆ, ಅದು ನಾನು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯ. ಅದು ನಂಬಲಸಾಧ್ಯವಾಗಿತ್ತು. ಆ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ ಮತ್ತು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದು ಚೆಟ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್ ಆಡುವಾಗ, ದೇಶಕ್ಕಾಗಿ ಆಡುತ್ತೇನೆ ಎಂದು ನಾನು ಭಾವಿಸಿರಲಿಲ್ಲ ಅಥವಾ ಕನಸು ಕಾಣಲಿಲ್ಲ. ಕ್ಲಬ್‌ಗಾಗಿ ಆಡುವ ವೃತ್ತಿಪರ ಸೆಟಪ್ ತುಂಬಾ ದೂರವಾಗಿತ್ತು. ಏಕೆಣದರೆ ಆ ದಿನಗಳಲ್ಲಿ ಅದು ಬಹಳ ಕಷ್ಟಕರವಾಗಿತ್ತು. ಹಾಗಾಗಿ ನಾನು ಆಡುವ ಕನಸು ಕಾಣಲಿಲ್ಲ. ಆದರೆ ದೇವರ ದಯೆಯಿಂದ ನನಗೆ ಈ ಅವಕಾಶ ಒದಗಿ ಬಂತು. ದೇಶವನ್ನು ಪ್ರತಿನಿಧಿಸುವ ಪ್ರತಿ ಕ್ಷಣವೂ ಕೂಡ ವಿಶೇಷ” ಎಂದರು.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

“ಕಳೆದ 19 ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುವ ಭಾವನೆಯು ಕರ್ತವ್ಯದ ಒತ್ತಡ ಮತ್ತು ಅಪಾರ ಸಂತೋಷದ ನಡುವಿನ ಉತ್ತಮ ಸಂಯೋಜನೆಯಾಗಿದೆ ಎಂದು ನಿಮಗೆ ತಿಳಿದಿದೆ. ನಾನು ವೈಯಕ್ತಿಕವಾಗಿ ಎಂದಿಗೂ ಯೋಚಿಸಲಿಲ್ಲ, ಇವು ದೇಶಕ್ಕಾಗಿ ನಾನು ಆಡಿದ ಹಲವಾರು ಆಟಗಳಾಗಿವೆ” ಎಂದರು.

“ನಾನು ನನ್ನ ತಾಯಿ, ತಂದೆ ಮತ್ತು ನನ್ನ ಹೆಂಡತಿ, ಕುಟುಂಬ ಮತ್ತು ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ನಾನು ಒತ್ತಡದಲ್ಲಿದ್ದ ವೇಳೆ ಇವರೆಲ್ಲ ನನ್ನ ಜತೆಗಿದ್ದು ನನ್ನನು ಬೆಂಬಲಿಸಿದ್ದಾರೆ. ದೇಶಕ್ಕಾಗಿ ಒಷ್ಟು ವರ್ಷ ಆಡಿದ್ದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದರು.

Continue Reading

ಕ್ರೀಡೆ

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

FIFA World Cup qualifiers: ಭಾರತ ತಂಡ ಮೇ 10ರಿಂದ ಭುವನೇಶ್ವರದಲ್ಲಿ ತರಬೇತಿ ಶಿಬಿರ ಆರಂಭಿಸಲಿದ್ದು, ಜೂನ್ 6ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಸೆಣಸಲಿದೆ. ಜೂನ್ 11ರಂದು ದೋಹಾದಲ್ಲಿ ಕತಾರ್ ವಿರುದ್ಧ ಆಡಲಿದೆ. ಆಡಿರುವ ನಾಲ್ಕು ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

VISTARANEWS.COM


on

FIFA World Cup qualifiers
Koo

ನವದೆಹಲಿ: ಫಿಫಾ ವಿಶ್ವಕಪ್ ಪೂರ್ವಭಾವಿ ಅರ್ಹತಾ(FIFA World Cup qualifiers) ಸುತ್ತಿನ ಎರಡು ಪಂದ್ಯಗಳಿಗೆ ಭಾರತದ(Indian Football Team) 26 ಮಂದಿಯ ಸಂಭವನೀಯ ಆಟಗಾರರ ಪಟ್ಟಿ ಪ್ರಕಟಗೊಂಡಿದೆ. ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಚ್‌ ಈ ತಂಡವನ್ನು ಪ್ರಕಟಿಸಿದರು. ಐ-ಲೀಗ್ ನ ನಾಲ್ವರು ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕುವೈತ್ ಮತ್ತು ಕತಾರ್ ವಿರುದ್ಧ ಭಾರತ ಪಂದ್ಯವನ್ನಾಡಲಿದೆ.

ಭಾರತ ತಂಡ ಮೇ 10ರಿಂದ ಭುವನೇಶ್ವರದಲ್ಲಿ ತರಬೇತಿ ಶಿಬಿರ ಆರಂಭಿಸಲಿದ್ದು, ಜೂನ್ 6ರಂದು ಕೋಲ್ಕತ್ತಾದಲ್ಲಿ ಕುವೈತ್ ವಿರುದ್ಧ ಸೆಣಸಲಿದೆ. ಜೂನ್ 11ರಂದು ದೋಹಾದಲ್ಲಿ ಕತಾರ್ ವಿರುದ್ಧ ಆಡಲಿದೆ. ಆಡಿರುವ ನಾಲ್ಕು ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಮೂರನೇ ಸುತ್ತಿಗೆ ಅರ್ಹತೆ ಪಡೆಯಲಿವೆ ಮತ್ತು 2027ರ ಎಎಫ್‌ಸಿ ಏಷ್ಯನ್ ಕಪ್‌ಗೆ ತಮ್ಮ ಸ್ಥಾನವನ್ನು ಕಾಯ್ದಿರಿಸಿಕೊಳ್ಳಲಿವೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ನಡೆದ ಹಲವು ಫುಟ್ಬಾಲ್​ ಟೂರ್ನಿಯಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿತ್ತು.

ಐ-ಲೀಗ್‌ನಲ್ಲಿ ಮೊಹಮ್ಮದನ್ ಸ್ಪೋರ್ಟಿಂಗ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಿಜೋರಾಂನ ಫಾರ್ವರ್ಡ್ ಆಟಗಾರ ಡೇವಿಡ್ ಲಾಲ್ಹನ್ಸಂಗಾ, ಐಜ್ವಾಲ್ ಎಫ್‌ಸಿ ತಂಡದ ಲಾಲ್ರಿನ್ಜುವಾಲಾ ಲಾಲ್ಬಿಯಾಕ್ನಿಯಾ, ರಿಯಲ್ ಕಾಶ್ಮೀರ ಕ್ಲಬ್‌ನ ಡಿಫೆಂಡರ್ ಮುಹಮ್ಮದ್ ಹಮ್ಮದ್ ಮತ್ತು ಇಂಟರ್ ಕಾಶಿ ಎಫ್‌ಸಿ ಮಿಡ್ ಫೀಲ್ಡರ್ ಎಡ್ಮಂಡ್ ಲಾಲ್ರಿಂಡಿಕಾ ಸ್ಥಾನ ಪಡೆದ ಆಟಗಾರರಾಗಿದ್ದಾರೆ.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

ಸಂಭಾವ್ಯ ತಂಡ


ಗೋಲ್ ಕೀಪರ್‌ಗಳು: ಅಮರಿಂದರ್ ಸಿಂಗ್, ಗುರ್‌ಪ್ರೀತ್‌ ಸಿಂಗ್ ಸಂಧು.

ಡಿಫೆಂಡರ್ಸ್: ಅಮೇಯ ಗಣೇಶ್ ರಣವಾಡೆ, ಜಯ್‌ ಗುಪ್ತಾ, ಲಾಲ್‌ಚುಂಗ್ನುಂಗಾ, ಮೊಹಮ್ಮದ್ ಹಮ್ಮದ್, ನರೇಂದರ್, ನಿಖಿಲ್ ಪೂಜಾರಿ, ರೋಷನ್ ಸಿಂಗ್ ನೌರೆಮ್.

ಮಿಡ್ ಫೀಲ್ಡರ್ಸ್: ಬ್ರೆಂಡನ್ ಫರ್ನಾಂಡಿಸ್, ಎಡ್ಮಂಡ್ ಲಾಲ್ರಿಂಡಿಕಾ, ಇಮ್ರಾನ್ ಖಾನ್, ಇಸಾಕ್ ವನ್ಲಾಲ್ರುವಾಟ್ಫೆಲ್ಲಾ, ಜೀಕ್ಸನ್ ಸಿಂಗ್, ಮಹೇಶ್ ಸಿಂಗ್ ನೌರೆಮ್, ಮೊಹಮ್ಮದ್ ಯಾಸಿರ್, ನಂದಕುಮಾರ್ ಶೇಕರ್, ರಾಹುಲ್ ಕನೋಲಿ ಪ್ರವೀಣ್, ಸುರೇಶ್ ಸಿಂಗ್ ವಾಂಗ್ಜಾಮ್, ವಿಬಿನ್ ಮೋಹನನ್.

ಫಾರ್ವರ್ಡ್ಸ್: ಡೇವಿಡ್ ಲಾ‌ಲ್ಹನ್ಸಂಗಾ, ಜಿತಿನ್ ಮಡತಿಲ್ ಸುಬ್ರಾನ್, ಲಾಲ್ರಿನ್ಜುವಾಲಾ ಲಾಲ್ಬಿಯಾಕ್‌ನಿಯಾ, ಪಾರ್ಥಿಬ್ ಗೊಗೊಯ್, ರಹಿಮ್ ಅಲಿ, ಸುನಿಲ್ ಚೆಟ್ರಿ

Continue Reading
Advertisement
drowned 4 death in kolhapur
ಕ್ರೈಂ2 mins ago

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Virat kohli
ಪ್ರಮುಖ ಸುದ್ದಿ8 mins ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Crime News
ಕ್ರೈಂ18 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ23 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ54 mins ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ1 hour ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ2 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ3 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌