French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ - Vistara News

ಕ್ರೀಡೆ

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ(French open 2023) ಇಂದಿನಿಂದ(ಭಾನುವಾರ) ಆರಂಭವಾಗಲಿದೆ. ಆದರೆ ರಫೆಲ್‌ ನಡಾಲ್‌ ಅವರ ಅನುಪಸ್ಥಿತಿಯಿಂದ ಟೂರ್ನಿ ಕೊಂಚ ಸಪ್ಪೆಯಾಗುವ ಸಾಧ್ಯತೆ ಇದೆ.

VISTARANEWS.COM


on

french open novak djokovic
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ವರ್ಷದ ದ್ವಿತೀಯ ಗ್ರ್ಯಾನ್ ಸ್ಲಾಮ್ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ(French open 2023) ಇಂದಿನಿಂದ(ಭಾನುವಾರ) ಆರಂಭವಾಗಲಿದೆ. ಆದರೆ ಈ ಬಾರಿ ಟೂರ್ನಿ ಕೊಂಚ ಸಪ್ಪೆಯಾಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಆವೇ ಅಂಗಣದ ರಾಜ ಸ್ಪೇನ್‌ನ ರಫೆಲ್‌ ನಡಾಲ್‌ ಅವರ ಅನುಪಸ್ಥಿತಿ. ಆದರೆ ಈ ಟೂರ್ನಿಯಲ್ಲಿ ಸರ್ಬಿಯಾದ ನೋವಾಕ್‌ ಜೋಕೋ​ವಿಕ್​ ಅವರಿಗೆ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ.

ನಡಾಲ್‌ ಅವರು ಗಾಯದಿಂದಾಗಿ ಈ ಬಾರಿ ಟೂರ್ನಿ ಆಡುತ್ತಿಲ್ಲ. ಇದರ ಜತೆಗೆ ದಿಗ್ಗಜ ಫೆಡ​ರರ್‌ ಕಳೆದ ವರ್ಷ ನಿವೃ​ತ್ತಿ​ಯಾ​ಗಿ​ದ್ದಾರೆ. ಹೀಗಾಗಿ ನಡಾ​ಲ್‌ ಅವರ 22 ಗ್ರ್ಯಾನ್ ಸ್ಲಾಮ್​ಗಳ ದಾಖ​ಲೆ​ ಮುರಿ​ಯಲು ಜೋಕೊಗೆ ಇಲ್ಲಿ ಉತ್ತಮ ಅವ​ಕಾ​ಶ​ವಿದೆ. ನಡಾಲ್​ ಮತ್ತು ಜೋಕೊ ಸದ್ಯ 22 ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಪಡೆದು ಜಂಟಿ ದಾಖಲೆ ಹೊಂದಿದ್ದಾರೆ.

ಟೂರ್ನಿಯಲ್ಲಿರುವ ಉಳಿದ ಸ್ಟಾರ್​ ಟೆನಿಸಿಗರೆಂದರೆ, ಅಗ್ರ ಶ್ರೇಯಾಂಕಿತ, ಹಾಲಿ ಯುಎಸ್‌ ಓಪನ್‌ ಚಾಂಪಿ​ಯನ್‌ ಸ್ಪೇನ್‌ನ ಕಾರ್ಲೊಸ್‌ ಅಲ್ಕ​ರಾಜ್‌, 2ನೇ ಶ್ರೇಯಾಂಕಿತ ಡ್ಯಾನಿಲ್‌ ಮೆಡ್ವೆ​ಡೆವ್‌, ಕಳೆದ ಆವೃತ್ತಿ ರನ್ನ​ರ್‌-ಅಪ್‌ ಕ್ಯಾಸ್ಪೆರ್‌ ರುಡ್‌, ಆ್ಯಂಡ್ರೆ ರುಬ್ಲೆವ್‌, ಹೋಲ್ಗರ್‌ ರ್ಯುನ್‌, ಸ್ಟೆಫಾ​ನೊಸ್‌ ಸಿಸಿ​ಪಾ​ಸ್‌. ಮಹಿಳೆಯರಲ್ಲಿ ಸ್ವಿಯಾ​ಟೆಕ್‌ ಜೊತೆ​ಗೆ ಹಾಲಿ ಆಸ್ಪ್ರೇ​ಲಿ​ಯನ್‌ ಓಪನ್‌ ಚಾಂಪಿ​ಯನ್‌ ಅರೈನಾ ಸಬ​ಲೆಂಕಾ, ಹಾಲಿ ವಿಂಬ​ಲ್ಡನ್‌ ಚಾಂಪಿ​ಯನ್‌ ಎಲೆನಾ ರಬೈ​ಕೆನಾ ಸೇರಿ​ದಂತೆ ಪ್ರಮು​ಖ ಆಕ​ರ್ಷ​ಣೆ​ಯಾ​ಗಿ​ದ್ದಾ​ರೆ.

ಇದನ್ನೂ ಓದಿ ITF Women’s Open: ಮಹಿಳಾ ಐಟಿಎಫ್ ಟೆನಿಸ್‌: ಫೈನಲ್‌ನಲ್ಲಿ ಮುಗ್ಗರಿಸಿದ ಅಂಕಿತಾ ರೈನಾ

ಬಹುಮಾನ ಮೊತ್ತವೆಷ್ಟು

ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿಯ ಬಹುಮಾನ ಮೊತ್ತವನ್ನು ಸಂಘಟಕರು ಈ ಬಾರಿ ಹೆಚ್ಚಿಸಿದ್ದಾರೆ. ಅದರಂತೆ ಈ ಬಾರಿ ಪುರುಷರ ಮತ್ತು ಮಹಿಳೆಯರ ಸಿಂಗಲ್ಸ್‌ ವಿಭಾಗದ ವಿಜೇತರಯ ತಲಾ 20.60 ಕೋಟಿ ರೂ. ಪಡೆಯಲಿದ್ದಾರೆ. ಟೂರ್ನಿಯು ಒಟ್ಟು 444 ಕೋಟಿ ರೂ. ಬಹುಮಾನ ಮೊತ್ತ ಒಳಗೊಂಡಿರಲಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ, ಬಹುಮಾನ ಮೊತ್ತವನ್ನು ಶೇ 12.3 ಹೆಚ್ಚಳವಾಗಿದೆ. 2022ರ ಟೂರ್ನಿಯ ಸಿಂಗಲ್ಸ್‌ ವಿಭಾಗದ ಚಾಂಪಿಯನ್ನರು 19.69 ಕೋಟಿ ರೂ ನಗದು ಬಹುಮಾನ ಪಡೆದುಕೊಂಡಿದ್ದರು. ಸಿಂಗಲ್ಸ್‌ ವಿಭಾಗದ ಒಟ್ಟು ಬಹುಮಾನ ಮೊತ್ತವನ್ನು ಕಳೆದ ಬಾರಿಗಿಂತ ಶೇ 9.1 ಹೆಚ್ಚಿಸಲಾಗಿದೆ. ಮೊದಲ ಮೂರು ಸುತ್ತುಗಳಲ್ಲಿ ಸೋಲು ಅನುಭವಿಸುವ ಆಟಗಾರರು ಪಡೆಯುವ ಮೊತ್ತ ಈ ವರ್ಷ ಶೇ 11 ರಿಂದ 13 ಏರಿಕೆಯಾಗಿದೆ. ಕಳೆದ ವರ್ಷದ ಟೂರ್ನಿಯಲ್ಲಿ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನಲ್ಲಿ ಸೋತಿದ್ದ ಆಟಗಾರರು 55 ಲಕ್ಷ ನಗದು ಬಹುಮಾನ ಗಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Preity Zinta: ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮುನ್ನ ಮಾತನಾಡಿದ ಪ್ರೀತಿ ಜಿಂಟಾ, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್​ ಅವರನ್ನು ಬಿಡುಗಡೆ ಮಾಡಿದರೆ ಅವರನ್ನು ನಾಯಕನನ್ನಾಗಿ ಮಾಡಲು ತಮ್ಮ ಪ್ರಾಣವನ್ನು ಪಣಕ್ಕಿಡಲು ಸಿದ್ಧ ಎಂದು ಹೇಳಿದ್ದಾರೆ.

VISTARANEWS.COM


on

Preity Zinta
Koo

ಬೆಂಗಳೂರು: ಪಂಜಾಬ್ ಕಿಂಗ್ಸ್ ತಂಡದ ಮಾಲೀಕರಾದ ಪ್ರೀತಿ ಜಿಂಟಾ (Preity Zinta) ಅವರು ಐಪಿಎಲ್ 2024 (IPL 2024) ರಲ್ಲಿ ಸಂಪೂರ್ಣವಾಗಿ ಬ್ಯುಸಿಯಾಗಿದ್ದಾರೆ. ಅವರು ತಮ್ಮ ಪಂಜಾಬ್ ಕಿಂಗ್ಸ್ (Punjab Kings) ತಂಡವನ್ನು ಹುರಿದುಂಬಿಸಲೆಂದೇ ಸ್ಟೇಡಿಯಮ್​ಗೆ ಬರುತ್ತಿದ್ದಾರೆ. ಅಂತೆಯೇ ಗುರುವಾರ (ಏಪ್ರಿಲ್​ 18ರಂದು) ಕಾಯಂ ನಾಯಕ ಶಿಖರ್ ಧವನ್ ಇಲ್ಲದೆ ಮುಂಬೈ ಇಂಡಿಯನ್ಸ್ ಆಡುತ್ತಿರುವ ಪಂಜಾಬ್ ತಂಡಕ್ಕೆ ಪ್ರೋತ್ಸಾಹ ನೀಡಲು ಅವರು ಬಂದಿದ್ದರು. ಅಂತೆಯೇ ಅವರು ಪಂದ್ಯಕ್ಕೆ ಮೊದಲು ಮಾತನಾಡುತ್ತಾ ರೋಹಿತ್​ ಶರ್ಮಾ ಅವರನ್ನು ಪಡೆದುಕೊಳ್ಳುವುದಕ್ಕೆ ಜೀವನ ಪಣವಿಡುತ್ತೇನೆ ಎಂದು ಹೇಳಿದ್ದಾರೆ. ಈ ಮಾರು ವೈರಲ್​ ಆಗಿದೆ.

ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯಕ್ಕೂ ಮುನ್ನ ಮಾತನಾಡಿದ ಪ್ರೀತಿ ಜಿಂಟಾ, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ರೋಹಿತ್​ ಅವರನ್ನು ಬಿಡುಗಡೆ ಮಾಡಿದರೆ ಅವರನ್ನು ನಾಯಕನನ್ನಾಗಿ ಮಾಡಲು ತಮ್ಮ ಪ್ರಾಣವನ್ನು ಪಣಕ್ಕಿಡಲು ಸಿದ್ಧ ಎಂದು ಹೇಳಿದ್ದಾರೆ.

“ರೋಹಿತ್ ಶರ್ಮಾ ಮೆಗಾ ಹರಾಜಿಗೆ ಬಂದರೆ ಅವರನ್ನು ಪಡೆಯಲು ನಾನು ನನ್ನ ಜೀವನವನ್ನು ಪಣಕ್ಕಿಡುತ್ತೇನೆ. ನಮ್ಮ ತಂಡದಲ್ಲಿ ಸ್ಥಿರತೆ ಮತ್ತು ಚಾಂಪಿಯನ್ ಮನಸ್ಥಿತಿಯನ್ನು ತರುವ ನಾಯಕನನ್ನು ಮಾತ್ರ ನಾವು ಕಳೆದುಕೊಳ್ಳುತ್ತಿದ್ದೇವೆ”ಎಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋತ ನಂತರ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಪ್ರೀತಿ ಜಿಂಟಾ ಹೇಳಿದ್ದಾರೆ.

ಐಪಿಎಲ್ 2024 ಪಾಯಿಂಟ್ಸ್ ಟೇಬಲ್​ನ್ಲಲಿ 8 ನೇ ಸ್ಥಾನದಲ್ಲಿರುವ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ಈ ಋತುವಿನಲ್ಲಿ ಕೆಟ್ಟ ಫಾರ್ಮ್​ನಿಂದ ಬಳಲುತ್ತಿದೆ.

ಇದನ್ನೂ ಓದಿ: IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

ಮತ್ತೊಂದು ಫ್ರಾಂಚೈಸಿ ರೋಹಿತ್ ಶರ್ಮಾ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ಲಭ್ಯವಿರಬೇಕು ಎಂದು ಹಲವು ತಂಡಗಳು ಬಯಸಿವೆ. ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಕೂಡ ರೋಹಿತ್ ಶರ್ಮಾ ಅವರನ್ನು ತಮ್ಮ ತಂಡದಲ್ಲಿ ಹೊಂದುವ ಬಗ್ಗೆ ಮಾತನಾಡಿದ್ದರು.

Continue Reading

ಕ್ರೀಡೆ

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

IPL 2024: ಆಹ್ವಾನವನ್ನು ಐಪಿಎಲ್ ಟಿಕೆಟ್ ರೂಪದಲ್ಲಿ ರಚಿಸಲಾಗಿದೆ. ಮ್ಯಾಚ್ ಪ್ರಿವ್ಯೂ” ಮತ್ತು “ಮ್ಯಾಚ್ ಪ್ರೆ ಡಿಕ್ಷನ್” ನಂತಹ ಪದಗಳ ಬಳಕೆ ಮಾಡಲಾಗಿದ್ದು ಆಮಂತ್ರಣ ಪತ್ರಿಕೆ ಸಂಪೂರ್ಣವಾಗಿ ಐಪಿಎಲ್​ನಿಂದ ಪ್ರೇರಿತವಾಗಿದೆ. ಮದುವೆ ಆಮಂತ್ರಣ ಪತ್ರಿಕೆಯ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು, 10 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 60,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

VISTARANEWS.COM


on

IPL 2024
Koo

ಚೆನ್ನೈ: ಮನುಷ್ಯನ ಜೀವನದಲ್ಲಿ ವಿವಾಹವು ಒಂದು ವಿಶೇಷ ಸಂದರ್ಭ. ಈ ಸಂದರ್ಭವನ್ನು ಅತ್ಯಂತ ಸಂಭ್ರಮದಿಂದ ಕಳೆಯಲು ಎಲ್ಲರೂ ಬಯಸುತ್ತಾರೆ. ಇನ್ನೂ ಕೆಲವರು ಅದನ್ನು ಇನ್ನಷ್ಟು ವಿಶೇಷವಾಗಿ ಅಥವಾ ಆಕರ್ಷಣೀಯವಾಗಿ ಮಾಡುತ್ತಾರೆ. ಅಂತೆಯೇ ತಮಿಳುನಾಡಿನ ಕ್ರಿಕೆಟ್​ ಪ್ರೇಮಿ ದಂಪತಿಗಳು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಥೀಮ್​ ಬಣ್ಣಗಳನ್ನು ಬಳಸಿಕೊಂಡು ತಮ್ಮ ಮದುವೆಯ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿ ಸುದ್ದಿಯಾಗಿದ್ದಾರೆ. ಐಪಿಎಲ್ (IPL 2024) ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದು ಬಹುವಾಗಿ ಗಮನ ಸೆಳೆದಿದೆ. ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಸಿಎಸ್​ಕೆ ಲೋಗೋದೊಳಗೆ ವಧು ಮತ್ತು ವರನ ಹೆಸರುಗಳನ್ನು ಹಾಕಲಾಗಿದೆ.

ಆಹ್ವಾನವನ್ನು ಐಪಿಎಲ್ ಟಿಕೆಟ್ ರೂಪದಲ್ಲಿ ರಚಿಸಲಾಗಿದೆ. ಮ್ಯಾಚ್ ಪ್ರಿವ್ಯೂ” ಮತ್ತು “ಮ್ಯಾಚ್ ಪ್ರೆ ಡಿಕ್ಷನ್” ನಂತಹ ಪದಗಳ ಬಳಕೆ ಮಾಡಲಾಗಿದ್ದು ಆಮಂತ್ರಣ ಪತ್ರಿಕೆ ಸಂಪೂರ್ಣವಾಗಿ ಐಪಿಎಲ್​ನಿಂದ ಪ್ರೇರಿತವಾಗಿದೆ. ಮದುವೆ ಆಮಂತ್ರಣ ಪತ್ರಿಕೆಯ ಫೋಟೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದ್ದು, 10 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ 60,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದೆ.

ಫೋಟೋದಲ್ಲಿ ದಂಪತಿಗಳಾದ ಗಿಫ್ಟ್ಲೀನ್ ಪರ್ಸಿ ಮತ್ತು ಮಾರ್ಟಿನ್ ರಾಬರ್ಟ್ ಗೆ ಶುಭಾಶಯ ತಿಳಿಸಲಾಗಿದೆ. ಇದು ಅದ್ಭುತ ಜತೆಯಾಟ ಎಂದು ಕೆಲವು ಕಾಮೆಂಟ್ ಬರೆದಿದ್ದಾರೆ. ಈ ಪೋಸ್ಟ್​ನಲ್ಲಿ ನವವಿವಾಹಿತರು ತಮ್ಮ ಚಿತ್ರಗಳನ್ನು ಒಳಗೊಂಡ ಟ್ರೋಫಿಯಂತಹ ಕಟ್-ಔಟ್ ಪೋಸ್ಟರ್​ಗಳನ್ನು ನೀಡಿದ್ದಾರೆ. ಬಳಕೆದಾರರು ದಂಪತಿಗಳನ್ನು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಯಶಸ್ವಿ ಜೀವನಕ್ಕಾಗಿ ಹಾರೈಸಿದ್ದಾರೆ.

ಇದನ್ನೂ ಓದಿ: Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

“ಸುಂದರ ಜತೆಯಾಟ ಮತ್ತು ಇನ್ನಿಂಗ್ಸ್​​ಗಾಗಿ ಹೆಚ್ಚಿನ ಅಭಿನಂದನೆಗಳು” ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. “ಆಮಂತ್ರಣದ ಎಡಭಾಗದಲ್ಲಿರುವ ಆ ಪೈವ್​ ಸ್ಟಾರ್​” ಎಂದು ಇನ್ನೊಬ್ಬರು ಹೇಳಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 22 ರಂದು ಪ್ರಾರಂಭವಾಗಿ ಮೇ 26 ರವರೆಗೆ ನಡೆಯುತ್ತದೆ. 17ನೇ ಆವೃತ್ತಿಯ ಟಿ20 ಟೂರ್ನಿ ಭಾರತದ 13 ನಗರಗಳಲ್ಲಿ ನಡೆಯುತ್ತಿದ್ದು, 10 ತಂಡಗಳು 74 ಪಂದ್ಯಗಳಲ್ಲಿ ಸ್ಪರ್ಧಿಸುತ್ತಿವೆ.

ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಐದನೇ ಬಾರಿಗೆ ಪ್ರಶಸ್ತಿ ಗೆದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಜೊತೆಗೆ ಟೂರ್ನಿಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿ ಎಂಬ ಖ್ಯಾತಿ ಪಡೆದುಕೊಂಡಿದೆ.

Continue Reading

ಮಂಡ್ಯ

IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

Self Harming: ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಪತಿಯೊಬ್ಬ ಸಾಲಗಾರರ ಕಾಟಕ್ಕೆ ಪತ್ನಿ ಹಾಗೂ ಮಕ್ಕಳಿಬ್ಬರಿಗೆ ವಿಷವಿಕ್ಕಿ ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥನಾಗಿದ್ದು, ಆಸ್ಪತ್ರೆಪಾಲಾಗಿದ್ದಾನೆ.

VISTARANEWS.COM


on

By

IPL Betting
Koo

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರಿನ ಕಮ್ಮನಹಳ್ಳಿ ಮುಖ್ಯರಸ್ತೆಯ ಸುಖಸಾಗರ್ ಬಳಿ ವೃದ್ಧರೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

Kodagu News: ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

Kodagu News: ಕೊಡಗು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.

VISTARANEWS.COM


on

Kodagu Gowda Premier League Cricket Tournament inauguration
Koo

ಮಡಿಕೇರಿ: ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ 25ನೇ ವರ್ಷದ ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ (Kodagu News) ಚಾಲನೆ ದೊರೆಯಿತು.

ಕಾರ್ಯಕ್ರಮವನ್ನು ವಿಧಾನಸಭೆ ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೊಡಗು ಗೌಡ ಯುವ ವೇದಿಕೆಯು ಕ್ರೀಡಾಕೂಟದ ಆಯೋಜನೆಯೊಂದಿಗೆ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: LSG vs CSK: ಗೆಲುವಿನ ಹಳಿ ಏರೀತೇ ಲಕ್ನೋ?; ಚೆನ್ನೈ ಎದುರಾಳಿ

ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ಈ ಹಿಂದೆ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿತ್ತು. ಪ್ರಸ್ತುತ ಕ್ರೀಡಾ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಗಣ್ಯರು ಪಂದ್ಯಾವಳಿಯ ಆಕರ್ಷಕ ಟ್ರೋಫಿಯನ್ನು ಅನಾವರಣ ಗೊಳಿಸಿದರು. ಮಡಿಕೇರಿಯ ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಬ್ಯಾಟಿಂಗ್‌ ಮಾಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.

ಇದನ್ನೂ ಓದಿ: Navya Naveli Nanda: ಆರಾಧ್ಯ ಬಚ್ಚನ್‌ ನನಗಿಂತ ಹೆಚ್ಚು ಬುದ್ಧಿವಂತೆ ಎಂದ ಶ್ವೇತಾ ಬಚ್ಚನ್ ಮಗಳು!

ಈ ಸಂದರ್ಭದಲ್ಲಿ ರಣಜಿ ಕ್ರಿಕಟ್ ಆಟಗಾರ ಸುಳ್ಯಕೋಡಿ ರಿಷಿ ಬೋಪಣ್ಣ, ವೇದಿಕೆಯ ಸ್ಥಾಪಕಾಧ್ಯಕ್ಷ ಪೊನ್ನಚ್ಚನ ಮಧು ಸೋಮಣ್ಣ, ಗೌರವ ಸಲಹೆಗಾರ ಕಟ್ಟೆಮನೆ ಸೋನಾಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Man death in tiger attack in Nittur village
ಕೊಡಗು5 mins ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ9 mins ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ18 mins ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 202431 mins ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabah Election
ಪ್ರಮುಖ ಸುದ್ದಿ45 mins ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

DRDO
ತಂತ್ರಜ್ಞಾನ55 mins ago

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

Iran Israel war
ಪ್ರಮುಖ ಸುದ್ದಿ1 hour ago

Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Record number of students wrote CET 2024 exam Outrage over out of syllabus question
ಶಿಕ್ಷಣ1 hour ago

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

IPL 2024
ಕ್ರೀಡೆ2 hours ago

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

MP D K Suresh latest statement In Anekal
ಬೆಂಗಳೂರು ಗ್ರಾಮಾಂತರ2 hours ago

Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌