Women's Asia Cup | ಏಷ್ಯಾ ಕಪ್‌ನಲ್ಲಿ ಭಾರತದ ವನಿತೆಯರ ಶುಭಾರಂಭ, ಲಂಕಾ ವಿರುದ್ಧ 41 ರನ್ ಜಯ - Vistara News

ಕ್ರಿಕೆಟ್

Women’s Asia Cup | ಏಷ್ಯಾ ಕಪ್‌ನಲ್ಲಿ ಭಾರತದ ವನಿತೆಯರ ಶುಭಾರಂಭ, ಲಂಕಾ ವಿರುದ್ಧ 41 ರನ್ ಜಯ

ಭಾನುವಾರ ಆರಂಭಗೊಂಡ ಮಹಿಳೆಯರ ಏಷ್ಯಾ ಕಪ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ 41 ರನ್‌ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿದೆ.

VISTARANEWS.COM


on

women's Asia Cup
ಜೆಮಿಮಾ ರೋಡ್ರಿಗಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಲ್‌ಹಟ್‌ (ಬಾಂಗ್ಲಾದೇಶ): ಮಹಿಳೆಯರ ಏಷ್ಯಾ ಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತ ತಂಡ ಶ್ರೀಲಂಕಾ ಬಳಗದ ವಿರುದ್ಧ ೪೧ ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಟಿ೨೦ ಮಾದರಿಯಲ್ಲಿ ನಡೆಯುತ್ತಿರುವ ಹಾಲಿ ಆವೃತ್ತಿಯ ಟೂರ್ನಿಯ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ೬ ವಿಕೆಟ್‌ ಕಳೆದುಕೊಂಡು ೧೫೦ ರನ್‌ ಬಾರಿಸಿದರೆ, ಬಳಿಕ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ೧೮.೨ ಓವರ್‌ಗಳಲ್ಲಿ ೧೦೯ ರನ್‌ಗಳಿಗೆ ಔಟ್‌ ಆಯಿತು.

ಸಿಲ್‌ಹಟ್‌ ಇಂಟರ್‌ನ್ಯಾಷನ್‌ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್‌ ಗೆದ್ದ ಲಂಕಾ ತಂಡದ ನಾಯಕಿ ಚಾಮರಿ ಅಟ್ಟಪಟ್ಟು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡರು. ಅಂತೆಯ ಮೊದಲು ಬ್ಯಾಟ್‌ ಮಾಡಿದ ಭಾರತ ಬಳಗ ಉತ್ತಮ ಆರಂಭ ಪಡೆದುಕೊಳ್ಳದ ಹೊರತಾಗಿಯೂ ಜೆಮಿಮಾ ರೋಡ್ರಿಗಸ್‌ (೭೬) ಅರ್ಧ ಶತಕ ಹಾಗೂ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಅವರ ಉಪಯುಕ್ತ ೩೩ ರನ್‌ಗಳ ನೆರವಿನಿಂದ ೧೫೦ ರನ್ ಬಾರಿಸಿತು.

ಬೌಲರ್‌ಗಳ ಅಬ್ಬರ

ಸ್ಪರ್ಧಾತ್ಮಕ ಗುರಿ ಬೆನ್ನಟ್ಟಲು ಆರಂಭಿಸಿದ ಲಂಕಾ ತಂಡಕ್ಕೆ ಭಾರತ ಬೌಲರ್‌ಗಳಾದ ಡಿ. ಹೇಮಲತಾ (೧೫ ರನ್‌ಗಳಿಗೆ ೩ ವಿಕೆಟ್), ಪೂಜಾ ವಸ್ತ್ರಾಕರ್‌ (೧೨ ರನ್‌ಗಳಿಗೆ ೨ ವಿಕೆಟ್‌), ದೀಪ್ತಿ ಶರ್ಮ (೧೫ ರನ್‌ಗಳಿಗೆ ೨ ವಿಕೆಟ್‌) ಕಡಿವಾಣ ಹಾಕಿದರು. ಲಂಕಾದ ಆರಂಭಿಕ ಬ್ಯಾಟರ್‌ ಹರ್ಷಿತ್ ಸಮರವಿಕ್ರಮ (೨೬) ಹಾಗೂ ಮಧ್ಯಮ ಕ್ರಮಾಂಕದಲ್ಲಿ ಹಸಿನಿ ಪೆರೆರಾ (೩೦) ಲಂಕಾ ಪರ ಸ್ವಲ್ಪ ಚೈತನ್ಯದ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಏಷ್ಯ ಕಪ್‌ನಲ್ಲಿ ಭಾರತ ಅಕ್ಟೋಬರ್‌ ೩ರಂದು ಮಲೇಷ್ಯಾ, ಅಕ್ಟೋಬರ್‌ ೪ರಂದು ಯಎಇ, ಅಕ್ಟೋಬರ್‌ ೭ರಂದು ಪಾಕಿಸ್ತಾನ, ಅಕ್ಟೋಬರ್‌ ೮ರಂದು ಬಾಂಗ್ಲಾದೇಶ, ಅಕ್ಟೋಬರ್‌ ೧೦ರಂದು ಥಾಯ್ಲೆಂಡ್‌ ವಿರುದ್ಧ ಆಡಬೇಕಾಗಿದೆ.

ಇದನ್ನೂ ಓದಿ | Deepti Sharma | ದೀಪ್ತಿ ಶರ್ಮ ಬೆಂಬಲಕ್ಕೆ ನಿಂತ ಕ್ರಿಕೆಟ್‌ ನಿಯಮ ರೂಪಿಸುವ ಎಮ್‌ಸಿಸಿ ಕ್ಲಬ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

KKR vs SRH Final 2024: ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

VISTARANEWS.COM


on

KKR vs SRH Final 2024
Koo

ಚೆನ್ನೈ: ಈ ಬಾರಿಯ ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಮುಖಾಮುಖಿಯಾಗಿದ್ದ ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ತಂಡಗಳು ಮತ್ತೊಮ್ಮೆ ಸೆಣಸಾಟ ನಡೆಸಲು ಸಜ್ಜಾಗಿದೆ. ನಾಳೆ (ಭಾನುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಲಕ್ಕಿ ಕ್ಯಾಪ್ಟನ್​ ಕಮಿನ್ಸ್​


ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

ಇದನ್ನೂ ಓದಿ IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಲೀಗ್​ ಹಂತದ ಪಂದ್ಯದಲ್ಲಿ ವಿಫಲರಾಗಿದ್ದರೂ ಕೂಡ ಮಹತ್ವದ ಕ್ವಾಲಿಫೈಯರ್​ ಪಂದ್ಯದಲ್ಲಿ ಘಾತಕ ದಾಳಿ ನಡೆಸಿ ಮಿಂಚಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

IPL Final 2024: ಫೈನಲ್​ನಲ್ಲಿ ಕೆಕೆಆರ್​ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಕರುನಾಡ ಕ್ರಿಕೆಟಿಗ

IPL Final 2024: ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿರುವ ಕೆಕೆಆರ್​ ತಂಡ ಕಪ್​ ಗೆಲ್ಲುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

IPL Final 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL Final 2024) ಟೂರ್ನಿ ಮುಕ್ತಾಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ಫೈನಲ್​ ಪಂದ್ಯ ನಡೆಯಲಿದ್ದು, ಟೇಬಲ್‌ ಟಾಪರ್‌ ಕೋಲ್ಕತಾ ನೈಟ್‌ರೈಡರ್ ಮತ್ತು ದ್ವಿತೀಯ ಸ್ಥಾನಿ ಸನ್‌ರೈಸರ್ ಪ್ರಶಸ್ತಿಗಾಗಿ ಸೆಣಸಲಿವೆ. ಈ ಬಾರಿ ಚಾಂಪಿಯನ್​ ಯಾರಾಗಲಿದ್ದಾರೆ ಎಂಬ ಅಭಿಮಾನಿಗಳ ಕುತೂಹಲದ ಮಧ್ಯೆ ಕರ್ನಾಟಕದ ಕ್ರಿಕೆಟಿಗ ಕೆ. ಗೌತಮ್(Krishnappa Gowtham)​ ಅವರು ಕೆಕೆಆರ್​ ತಂಡ ಕಪ್​ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ವಿಸ್ತಾರ ನ್ಯೂಸ್​ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಗೌತಮ್, ಸಿನೆಮಾ, ಕ್ರಿಕೆಟ್​ ಬಗ್ಗೆ ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಹಲವು ಕ್ರಿಕೆಟಿಗರ ಜೀವನಾಧಾರಿತ ಸಿನಿಮಾ ಬಂದಿದೆ. ನಿಮ್ಮ ಜೀವನಾಧಾರಿತ ಸಿನಿಮಾ ಕೂಡ ತೆರೆ ಮೇಲೆ ಬರುವ ಆಸೆ ಇದೆಯಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮ್​, ಇಲ್ಲ ಈ ರೀತಿಯ ಯಾವುದೇ ಆಸೆ ಇಲ್ಲ. ಸದ್ಯಕ್ಕೆ ಉತ್ತಮ ಕ್ರಿಕೆಟ್​ ಆಡುವುದೊಂದೇ ನನ್ನ ಗುರಿ ಎಂದರು. ಇದೇ ವೇಳೆ ಸಿನಿಮಾವನ್ನು ತಾನು ಹೆಚ್ಚಾಗಿ ನೋಡುವುದಿಲ್ಲ. ಕೊನೆಯ ಬಾರಿಗೆ ನೋಡಿದ ಸಿನೆಮಾವೆಂದರೆ ಕಾತಾಂರ ಎಂದರು. ಸಮಯ ಸಿಕ್ಕಾಗ ಮಗಳ ಜತೆ ಆಡುತ್ತಾ ಕಾಲ ಕಳೆಯುತ್ತೇನೆ ಎಂದರು.


ಆರ್​ಸಿಬಿಯ ಹೊಸ ಅಧ್ಯಾಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೌತಮ್, ಈ ಬಾರಿಯ ಲೀಗ್​ನಲ್ಲಿ ಆರಂಭಿಕ ಹಂತದಲ್ಲಿ ಸತತವಾಗಿ ಸೋಲು ಕಂಡು ಆ ಬಳಿಕ ಗೆಲ್ಲಲೇ ಬೇಕಾದ ಎಲ್ಲ 6 ಪಂದ್ಯಗಳನ್ನು ಗೆದ್ದಿರುವುದು ನಿಜಕ್ಕೂ ಹೊಸ ಅಧ್ಯಾಯ ಎಂದರು. ಇದೇ ವೇಳೆ ಆರ್​ಸಿಬಿ ಪರ ಆಡುವ ಬಯಕೆಯನ್ನು ಕೂಡ ವ್ಯಕ್ತಪಡಿಸಿದರು. ಲಕ್ನೋ ತಂಡದ ಪರ ಆಡಿದ ಅನುಭವ ಕೂಡ ಹಂಚಿಕೊಂಡು, ಮೂರು ವರ್ಷದಿಂದ ಲಕ್ನೋ ತಂಡದ ಪರ ಆಡಿದರೂ ಕೂಡ ಬೇರೆ ಫ್ರಾಂಚೈಸಿ ಪರ ಆಡಿದಂತಾಗಿಲ್ಲ. ಏಕೆಂದರೆ ತಂಡದ ನಾಯಕ ಕೆ.ಎಲ್​ ರಾಹುಲ್​ ಸೇರಿ ಹಲವು ಕರ್ನಾಟಕದ ಆಟಗಾರರಿದ್ದರು. ಹೀಹಾಗಿ ಕರ್ನಾಟಕ ತಂಡದ ಪರವೇ ಆಡುತ್ತಿರುವಂತೆ ಭಾಸವಾಗುತ್ತಿತ್ತು ಎಂದರು.

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಈ ಬಾರಿ ಯಾವ ತಂಡ ಕಪ್​ ಗೆಲ್ಲಲಿದೆ ಎಂದು ಕೇಳಿದಾಗ ಕೆಕೆಆರ್​ ತಂಡ ಗೆಲ್ಲುವ ಸಾಧ್ಯತೆ ಹೆಚ್ಚು ಎಂದರು. ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿ ವೈವಿಧ್ಯಮಯವಾಗಿದೆ. ಹೀಗಾಗಿ ಕೆಕೆಆರ್​ ಟ್ರೋಫಿ ಗೆಲ್ಲಲಿದೆ ಎಂದರು.

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ನೀಡಲಾಗುತ್ತದೆ. ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಗೆದ್ದ ಆಟಗಾರರಿಗೆ 15 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಸದ್ಯ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಈ ಬಾರಿಯ ಟೂರ್ನಿಯಲ್ಲಿ 741 ರನ್​ ಬಾರಿಸಿ ಆರೆಂಜ್ ಕ್ಯಾಪ್ ಹೋಲ್ಡರ್​ ಆಗಿದ್ದಾರೆ. ಇವರ ರನ್​ ಹಿಂದಿಕ್ಕಲು ಇನ್ನು ಯಾರಿಗೂ ಅವಕಾಶ ಇಲ್ಲದ ಕಾರಣ ಈ ಪ್ರಶಸ್ತಿ ಇವರಿಗೇ ಸಿಗಲಿದೆ.

Continue Reading

ಕ್ರೀಡೆ

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

SRH vs RR: ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

VISTARANEWS.COM


on

SRH vs RR
Koo

ಚೆನ್ನೈ: ಶುಕ್ರವಾರ ರಾತ್ರಿ ನಡೆದ ಐಪಿಎಲ್​(IPL 2024) ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್​(SRH vs RR) ತಂಡ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ದ 36 ರನ್​ಗಳಿಂದ ಸೋಲು ಕಾನುಣು ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಈ ಸೋಲಿಗೆ ಕಾರಣ ಏನೆಂಬುದನ್ನು ತಂಡದ ನಾಯಕ ಸಂಜು ಸ್ಯಾಮನ್ಸ್(Sanju Samson)​ ವಿವರಿಸಿದ್ದಾರೆ.

ಪಂದ್ಯದ ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್​, ನಮ್ಮ ತಂಡದ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಹೈದರಾಬಾದ್​ ತಂಡದ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು. ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಹೆಚ್ಚಿನ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು ಎಂದರು.

ಮಧ್ಯಮ ಕ್ರಮಾಂಕದಲ್ಲಿ ಶಿಮ್ರೋನ್​ ಹೆಟ್ಮೆಯರ್​ ಹೊರತುಪಡಿಸಿ ಯಾರು ಎಡಗೈ ಬ್ಯಾಟ್ಸ್​ಮನ್​ಗಳಿರಲಿಲ್ಲ. ಇದುವೇ ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಸ್ಯಾಮ್ಸನ್​ ಪೋಸ್ಟ್​ ಮ್ಯಾಚ್​ ಪ್ರೆಸೆಂಟೇಷನ್​ನಲ್ಲಿ ಹೇಳಿದರು. ಕ್ರೀಡೆ ಎಂದ ಮೇಲೆ ಸೋಲು-ಗೆಲುವು ಸಾಮಾನ್ಯ. ಯಾವುದೇ ಒಂದು ತಂಡ ಸೋಲಲೇ ಬೇಕು. ಈ ಸೋಲಿನಿಂದ ಹಲವು ಪಾಠ ಕಲಿತಿದ್ದೇವೆ. ಮುಂದಿನ ಬಾರಿ ಮತ್ತಷ್ಟು ಬಲಿಷ್ಠವಾಗಿ ಕಮ್​ಬ್ಯಾಕ್​ ಮಾಡುವ ವಿಶ್ವಾಸವಿದೆ ಎಂದರು.

ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಸನ್​ರೈಸರ್ಸ್​ ಹೈದರಾಬಾದ್​ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ಗೆ 175 ರನ್​ ಬಾರಿಸಿತು. ಜವಾಬಿತ್ತ ರಾಜಸ್ಥಾನ್​ ಉತ್ತಮ ಆರಂಭ ಪಡೆದರೂ ಕೂಡ ಆ ಬಳಿಕ ನಾಟಕೀಯ ಕುಸಿತ ಕಂಡು 7 ವಿಕೆಟ್​ ನಷ್ಟಕ್ಕೆ 139 ರನ್​ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಮೇ 26ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಹೈದರಾಬಾದ್​ ತಂಡ ಕೆಕೆಆರ್​ ವಿರುದ್ಧ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಈ ಪಂದ್ಯ ಕೂಡ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿದೆ.​

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಚೇಸಿಂಗ್​ ವೇಳೆ ನಾಯಕ ಸಂಜು ಸ್ಯಾಮ್ಸನ್​(10), ಟಾಮ್ ಕೊಹ್ಲರ್-ಕ್ಯಾಡ್ಮೋರ್(10), ರಿಯಾನ್​ ಪರಾಗ್​(6), ಆರ್​ ಅಶ್ವಿನ್​(0), ಶಿಮ್ರಾನ್ ಹೆಟ್​ಮೇರ್​(4) ಒಬ್ಬರ ಹಿಂದೆ ಒಬ್ಬರಂತೆ ವಿಕೆಟ್​ ಒಪ್ಪಿಸಿ ಪೆವಿಲಿಯನ್​ ಪರೇಡ್​ ನಡೆಸಿದರು. ಯಾರೂ ಕೂಡ ತಂಡಕ್ಕೆ ಆಸರೆಯಾಗುವಲ್ಲಿ ಯಶಸ್ಸು ಕಾಣಲಿಲ್ಲ. ಜೈಸ್ವಾಲ್​ 3 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿ 42 ರನ್​ ಗಳಿಸಿದರು.

ಅಂತಿಮ ಹಂತದಲ್ಲಿ ಧೃವ್​ ಜುರೇಲ್​ ಅರ್ಧಶತಕ ಬಾರಿಸುವ ಮೂಲಕ ಶಕ್ತಿ ಮೀರಿದ ಬ್ಯಾಟಿಂಗ್​ ಹೋರಾಟ ನಡೆಸಿದರೂ ಕೂಡ ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ಸಿಗದ ಕಾರಣ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಜೇಯರಾಗಿ ಉಳಿದ ಜುರೇಲ್ 35 ಎಸೆತಗಳಿಂದ 56 ರನ್​ ಬಾರಿಸಿದರು. ಇದರದ್ದೇ ತಂಡದ ಪರ ಅತ್ಯಧಿಕ ಗಳಿಕೆ. ಹೈದರಾಬಾದ್​ ಪರ ಶಾಬಾಜ್​ ಅಹ್ಮದ್​ 4 ಓವರ್​ಗೆ ಕೇವಲ 23 ರನ್​ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್​ ಕಡೆವಿದರು. ಪಾರ್ಟ್​ ಟೈಮ್​ ಬೌಲರ್​ ಅಭಿಷೇಕ್​ ಶರ್ಮ 24 ರನ್​ಗೆ 2 ವಿಕೆಟ್​ ಕಿತ್ತರು

Continue Reading

ಕ್ರೀಡೆ

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Hardik Pandya: ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ಈಗಾಗಲೇ ನತಾಶಾಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಸದ್ಯ ನತಾಶಾ ಲಂಡನ್​ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗಿದೆ.

VISTARANEWS.COM


on

Hardik Pandya
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್ ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿಯ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದೆ. ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ಈಗಾಗಲೇ ನತಾಶಾಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ. ಸದ್ಯ ನತಾಶಾ ಲಂಡನ್​ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗಿದೆ.

ಹಾರ್ದಿಕ್​ ಪಾಂಡ್ಯ ಕಳೆದ 2 ಆವೃತ್ತಿಯಲ್ಲಿ ಗುಜರಾತ್​ ಟೈಟಾನ್ಸ್​ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಪ್ರತಿ ಪಂದ್ಯದಲ್ಲಿಯೂ ನತಾಶಾ ಸ್ಟೇಡಿಯಂಗೆ ಬಂದು ಗಂಡನಿಗೆ ಬೆಂಬಲ ಸೂಚಿಸಿದ್ದರು. ಆದರೆ ಈ ಬಾರಿ ಮುಂಬೈ ತಂಡವನ್ನು ಮುನ್ನಡೆಸಿ ವೇಳೆ ಒಮ್ಮೆಯೂ ಕೂಡ ನತಾಶಾ ಪಂದ್ಯ ನೋಡಲು ಸ್ಟೇಡಿಯಂಗೆ ಬಂದಿರಲಿಲ್ಲ. ಅಲ್ಲದೆ ನತಾಶಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಮ್ಮ ಹೆಸರನ್ನು ಕೂಡ ಬದಲಿಸಿದ್ದಾರೆ ಹೀಗಾಗಿ ಈ ಜೋಡಿ ಬೇರ್ಪಡಲಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತಾಗಿ ಯಾವುದೆ ಸ್ಪಷ್ಟನೆ ಇಲ್ಲ.


ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಇದನ್ನೂ ಓದಿ IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

ಹುಟ್ಟುಹಬ್ಬಕ್ಕೂ ಶುಭ ಕೋರದ ಪಾಂಡ್ಯ


ಮಾರ್ಚ್ 4 ರಂದು ಪತ್ನಿ ನತಾಶಾ ಅವರ ಹುಟ್ಟುಹಬ್ಬವಿತ್ತು. ಆದರೆ, ಪತ್ನಿಯ ಹುಟ್ಟುಹಬ್ಬಕ್ಕೆ ಹಾರ್ದಿಕ್ ಯಾವುದೇ ಶುಭ ಹಾರೈಕೆಯ ಪೋಸ್ಟ್ ಮಾಡಿಲ್ಲ. ಕೆಲ ದಿನಗಳ ಹಿಂದೆ ನತಾಶಾ ಅವರು ಸಿಂಗಲ್​ ಫೋಟೋವನ್ನು ಮತ್ತು ಮಗನ ಜತೆಗಿನ ಫೋಟೊವನ್ನು ಮಾತ್ರ ಪೋಸ್ಟ್​ ಮಾಡಿದ್ದರು. ಇದೆನೆಲ್ಲ ನೋಡುವಾಗ ಈ ಜೋಡಿ ಸದ್ಯದಲ್ಲೇ ದೂರವಾಗು ಸೂಚನೆಯೊಂದು ಲಭಿಸಿದೆ. ಹಾರ್ದಿಕ್ ಜತೆಗಿರುವ ಇತ್ತೀಚಿನ ಎಲ್ಲ ಪೋಸ್ಟ್‌ಗಳನ್ನು ತೆಗೆದುಹಾಕಿದ್ದಾರೆ ಎಂದು ಹೇಳಲಾಗಿದೆ. 

ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡ ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಈ ಬಾರಿ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಜತೆಗೆ ಪಾಂಡ್ಯ ಕೆಟ್ಟ ನಾಯಕತ್ವದಿಂದ ಮುಂಬೈ ಹಿಂದೆದು ಕಾಣದ ಘೋರ ವೈಫಲ್ಯ ಕಂಡಿತ್ತು ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಈ ಬಾರಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಯಿತು.

Continue Reading
Advertisement
ಕರ್ನಾಟಕ10 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್10 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ10 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್12 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ25 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ38 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ47 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ49 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ52 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Munawar Faruqui hospitalised Bigg Boss 17 winner
ಸಿನಿಮಾ1 hour ago

Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ52 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌