GT vs SRH: ಹೈದರಾಬಾದ್​ ಬ್ಯಾಟಿಂಗ್​ ಆರ್ಭಟಕ್ಕೆ ತಡೆಯೊಡ್ಡೀತೇ ಗುಜರಾತ್​ ಟೈಟಾನ್?​ - Vistara News

ಕ್ರೀಡೆ

GT vs SRH: ಹೈದರಾಬಾದ್​ ಬ್ಯಾಟಿಂಗ್​ ಆರ್ಭಟಕ್ಕೆ ತಡೆಯೊಡ್ಡೀತೇ ಗುಜರಾತ್​ ಟೈಟಾನ್?​

GT vs SRH: ಉಭಯ ತಂಡಗಳ ಇದುವರೆಗಿನ ಮುಖಾಮುಖಿಯನ್ನು(Gt vs SRH Head To Head Records) ನೋಡುವಾಗ ಗುಜರಾತ್​ ಬಲಿಷ್ಠವಾಗಿ ಗೋಚರಿಸಿದೆ. ಒಟ್ಟು ಮೂರು ಪಂದ್ಯ ಆಡಿ 2ರಲ್ಲಿ ಗೆದ್ದಿದೆ. ಹೈದರಾಬಾದ್​ ಒಂದು ಪಂದ್ಯ ಮಾತ್ರ ಜಯಿಸಿದೆ. ಆದರೆ, ಅಂದು ಇದ್ದ ತಂಡಕ್ಕೂ ಈಗ ಇರುವ ತಂಡಕ್ಕೂ ಬಹಳ ವ್ಯತ್ಯಾಸವಿದೆ. ಹೈದರಾಬಾದ್​ ಬಲಿಷ್ಠಗೊಂಡರೆ, ಗುಜರಾತ್​ ದುರ್ಬಲಗೊಂಡಿದೆ.

VISTARANEWS.COM


on

GT vs SRH
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಬಲಿಷ್ಠ ಬ್ಯಾಟಿಂಗ್​ ಲೈನ್​ ಹೊಂದಿರುವ, ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ರನ್​ ಮಳೆಯನ್ನೇ ಹರಿಸಿ ಐಪಿಎಲ್​ನಲ್ಲಿ ಗರಿಷ್ಠ ಮೊತ್ತ ಪೇರಿಸಿದ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಇದೇ ಜೋಶ್​ನಲ್ಲಿ ಮತ್ತೊಂದು ಪಂದ್ಯವನ್ನಾಡಲು ಸಜ್ಜಾಗಿ ನಿಂತಿದೆ. ಭಾನುವಾರ ನಡೆಯುವ ಐಪಿಎಲ್​ನ(IPL 2024) ಡಬಲ್​ ಹೆಡರ್​ನ(GT vs SRH) ಹಗಲು ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್(gujarat titans)​ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೆ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂ ಅಣಿಯಾಗಿದೆ.

ಹೈದರಾಬಾದ್​ಗೆ ಬ್ಯಾಟಿಂಗ್​ ಬಲ


ಹೈದರಾಬಾದ್​ ತಂಡದಲ್ಲಿ ಅನುಭವಿ ಬೌಲರ್​ಗಳಿದ್ದರೂ ಕೂಡ ಕ್ಲಿಕ್​ ಆದದ್ದು ಬ್ಯಾಟಿಂಗ್​ ವಿಭಾಗ ಮಾತ್ರ. ಈಗಾಗಲೇ ತಂಡ ಆಡಿದ 2 ಪಂದ್ಯಗಳಲ್ಲಿಯೂ ಇದು ಸಾಬೀತಾಗಿದೆ. ಹೀಗಾಗಿ ಈ ಪಂದ್ಯಕ್ಕೂ ತಂಡ ಬ್ಯಾಟಿಂಗ್​ ಬಲವನ್ನೇ ನೆಚ್ಚಿಕೊಂಡಿದೆ. ಕನ್ನಡಿಗ ಮಯಾಂಕ್​ ಅಗರ್ವಾಲ್​ ಮತ್ತು ವಿಶ್ವಕಪ್ ಹೀರೊ ಆಸ್ಟ್ರೇಲಿಯಾದ ಟ್ರಾವಿಸ್​ ಹೆಡ್​ ಸ್ಫೋಟಕ ಬ್ಯಾಟಿಂಗ್​ ಮೂಲಕ ತಮಡಕ್ಕೆ ಉತ್ತಮ ಆರಂಭ ಒದಗಿಸಿದರೆ, ಆ ಬಳಿಕ ಅಭಿಷೇಕ್​ ಶರ್ಮ, ಮಾರ್ಕ್ರಮ್​ ಮತ್ತು ಹೆನ್ರಿಚ್​ ಕ್ಲಾಸೆನ್​ ಮಧ್ಯಮ ಕ್ರಮಾಂಕದಲ್ಲಿ ಜಿದ್ದಿಗೆ ಬಿದ್ದವರಂತೆ ಬ್ಯಾಟಿ ಬೇಸಿ ತಂಡದ ಬೃಹತ್​ ಮೊತ್ತಕ್ಕೆ ನೆರವಾಗುತ್ತಿದ್ದಾರೆ. ಹೀಗಾಗಿ ಬ್ಯಾಟಿಂಗ್​ ವಿಭಾಗದಲ್ಲಿ ಯಾವುದೇ ಕೊರತೆ ಇಲ್ಲ.

​ಹೈದರಾಬಾದ್​ಗೆ ಚಿಂತೆ ಇರುವುದು ಬೌಲಿಂಗ್​ ವಿಭಾಗದಲ್ಲಿ. ಟಿ.ನಟರಾಜನ್​, ಭುವನೇಶ್ವರ್​ ಕುಮಾರ್​, ನಾಯಕ ಪ್ಯಾಟ್​ ಕಮಿನ್ಸ್​, ಶಾಬಾಜ್​ ಅಹ್ಮದ್​, ಉನಾದ್ಕತ್​ ಇವರೆಲ್ಲೆ ಆರಂಭಿಕ ಓವರ್​ ಕಂಟ್ರೋಲ್​ ಮಾಡಿದರೂ ಕೂಡ ಮುಂದಿನ ಓವರ್​ಗಳಲ್ಲಿ ದುಬಾರಿಯಾಗಿ ಕಂಡುಬರುತ್ತಿದ್ದಾರೆ. ಹೀಗಾಗಿ ಗುಜರಾತ್​ ವಿರುದ್ಧದ ಪಂದ್ಯದಲ್ಲಿ ಫಾರ್ಮ್​ ಕಂಡುಕೊಳ್ಳಲೇ ಬೇಕಾದ ಅನಿವಾರ್ಯತೆ ಇವರ ಮುಂದಿದೆ. ಕೇವಲ ಬ್ಯಾಟಿಂಗ್​ ಮಾತ್ರ ನಂಬಿ ಕುಳಿತರೆ ಆಗದು.

ಇದನ್ನೂ ಓದಿ IPL 2024: ಮುಂಬೈ ತಂಡಕ್ಕೆ ಮತ್ತಷ್ಟು ಚಿಂತೆ ಹೆಚ್ಚಿಸಿದ ಸೂರ್ಯಕುಮಾರ್ ಫಿಟ್‌ನೆಸ್‌

ಗುಜರಾತ್​ ಸಾಮಾನ್ಯ ತಂಡ


5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ತಂಡಕ್ಕೆ ಮೊದಲ ಪಂದ್ಯದಲ್ಲಿ ಸೋಲಿಣಿಸಿದರೂ ಕೂಡ ಗುಜರಾತ್​ ಸಾಮಾನ್ಯ ತಂಡವಾಗಿದೆ. ಇಲ್ಲಿ ಸ್ಟಾರ್​ ಆಟಗಾರರು ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಕಳೆದ ಆವೃತ್ತಿಯಲ್ಲಿ ಗರಿಷ್ಠ ಸ್ಕೋರರ್​​ ಆಗಿದ್ದ ಶುಭಮನ್​ ಗಿಲ್​ ತಂಡದ ನಾಯಕನಾದ ಬಳಿಕ ನಿರೀಕ್ಷಿತ ಪ್ರದರ್ಶನ ತೋರಿ ಬರುತ್ತಿಲ್ಲ. ಇದಕ್ಕೆ ನಾಯಕತ್ವದ ಒತ್ತಡವೂ ಕೂಡ ಕಾರಣವಾಗಿರಬಹುದು. ಬೌಲಿಂಗ್​ನಲ್ಲಿ ಮೋಹಿತ್​ ಶರ್ಮ ಹೊರತುಪಡಿಸಿ ಉಳಿದೆಲ್ಲರೂ ಸರಿಯಾಗಿ ದಂಡಿಸಿಕೊಳ್ಳುತ್ತಿದ್ದಾರೆ. ರಶೀದ್​ ಖಾನ್​ ಸ್ಪಿನ್​ ಮ್ಯಾಜಿಕ್​ ಕೂಡ ವರ್ಕ್ ಆಗುತ್ತಿಲ್ಲ. ಡೇವಿಡ್​ ಮಿಲ್ಲರ್​ ಒಂದೆರಡು ಬೌಂಡರಿಗಿ ಸೀಮಿತರಾಗಿದ್ದಾರೆ. ಹೀಗಾಗಿ ತಂಡದ ಮೇಲೆ ಹೆಚ್ಚಿನ ಭರವಸೆ ಇಡುವುದು ಕಷ್ಟ.

ಮುಖಾಮುಖಿ


ಉಭಯ ತಂಡಗಳ ಇದುವರೆಗಿನ ಮುಖಾಮುಖಿಯನ್ನು(Gt vs SRH Head To Head Records) ನೋಡುವಾಗ ಗುಜರಾತ್​ ಬಲಿಷ್ಠವಾಗಿ ಗೋಚರಿಸಿದೆ. ಒಟ್ಟು ಮೂರು ಪಂದ್ಯ ಆಡಿ 2ರಲ್ಲಿ ಗೆದ್ದಿದೆ. ಹೈದರಾಬಾದ್​ ಒಂದು ಪಂದ್ಯ ಮಾತ್ರ ಜಯಿಸಿದೆ. ಆದರೆ, ಅಂದು ಇದ್ದ ತಂಡಕ್ಕೂ ಈಗ ಇರುವ ತಂಡಕ್ಕೂ ಬಹಳ ವ್ಯತ್ಯಾಸವಿದೆ. ಹೈದರಾಬಾದ್​ ಬಲಿಷ್ಠಗೊಂಡರೆ, ಗುಜರಾತ್​ ದುರ್ಬಲಗೊಂಡಿದೆ.

ಸಂಭಾವ್ಯ ತಂಡ


ಗುಜರಾತ್​:
ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಸಾಯಿ ಕಿಶೋರ್, ಸ್ಪೆನ್ಸರ್ ಜಾನ್ಸನ್.

ಹೈದರಾಬಾದ್​: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಜಯದೇವ್ ಉನದ್ಕತ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

Singapore Open: ಸಿಂಗಾಪುರ ಓಪನ್ ಸೂಪರ್ 750 ಬ್ಯಾಡ್ಮಿಂಟನ್(Singapore Open) ಟೂರ್ನಿಯ ಮಹಿಳಾ ವಿಭಾಗದ ಸಿಂಗಲ್ಸ್‌ನಲ್ಲಿ ಪಿ.ವಿ.ಸಿಂಧು(PV Sindhu) ಸ್ಪೇನ್‌ನ ಶಟ್ಲರ್‌ ಕೆರೊಲಿನಾ ಮರಿನ್‌(Carolina Marin) ವಿರುದ್ಧ 21-11, 11-21, 20-22 ಅಂತರದಿಂದ ಸೋಲು ಕಂಡರು.

VISTARANEWS.COM


on

Singapore Open
Koo

ಸಿಂಗಾಪುರ: ಮಾಜಿ ಚಾಂಪಿಯನ್ ಪಿ.ವಿ.ಸಿಂಧು(PV Sindhu) ಅವರು ಸಿಂಗಾಪುರ ಓಪನ್ ಸೂಪರ್ 750 ಬ್ಯಾಡ್ಮಿಂಟನ್(Singapore Open) ಟೂರ್ನಿಯ ಮಹಿಳಾ ವಿಭಾಗದ ಸಿಂಗಲ್ಸ್‌ನಲ್ಲಿ ಎರಡನೇ ಸುತ್ತಿನಲ್ಲಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಗುರುವಾರ ನಡೆದ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಸಿಂಧು ಸ್ಪೇನ್‌ನ ಶಟ್ಲರ್‌ ಕೆರೊಲಿನಾ ಮರಿನ್‌(Carolina Marin) ವಿರುದ್ಧ 21-11, 11-21, 20-22 ಅಂತರದಿಂದ ಸೋಲು ಕಂಡರು.

ತೀವ್ರ ಪೈಪೋಟಿಯಿಂದ ನಡೆದ ಮೂರು ಗೇಮ್​ಗಳ ಹೋರಾಟದಲ್ಲಿ ಮೊದಲ ಗೇಮ್​ ಅನ್ನು ಸಿಂಧು ಗೆದ್ದು ಮುನ್ನಡೆ ಸಾಧಿಸಿದರು. ಆದರೆ ಆ ಬಳಿಕದ 2 ಗೇಮ್​ಗಳನ್ನು ಸೋತು ನಿರಾಸೆ ಎದುರಿಸಿದರು. ಅಂತಿಮ ಗೇಮ್​ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿತ್ತು. ಅಂಕಕ್ಕಾಗಿ ಉಭಯ ಆಟಗಾರ್ತಿಯರು ತಮ್ಮ ಉತ್ಕೃಷ್ಟ ಮಟ್ಟದ ಆಟವಾಡಿದರು. ಆದರೆ ಅದೃಷ್ಟ ಮರಿನ್​ಗೆ ಒಲಿಯಿತು. ಕೇವಲ 2 ಅಂಕದ ಅಂತರದಿಂದ ಪಂದ್ಯವನ್ನು ಗೆದ್ದು ಬೀಗಿದರು. ಇದು ಸ್ಪೇನ್ ಆಟಗಾರ್ತಿಯ ವಿರುದ್ಧ ಸಿಂಧುಗೆ ಎದುರಾದ ಸತತ ಆರನೇ ಸೋಲಾಗಿದೆ. ಒಟ್ಟಾರೆಯಾಗಿ ಸಿಂಧು ವಿರುದ್ಧ 12-5ರ ಗೆಲುವಿನ ದಾಖಲೆ ಹೊಂದಿದ್ದಾರೆ.‌

ಕಳೆದ ವಾರ ನಡೆದಿದ್ದ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸಿಂಧು ದ್ವಿತೀಯ ಸ್ಥಾನಿಯಾಗಿದ್ದರು. ಫೈನಲ್​ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ಧ 21-16, 5-21, 21-16 ಗೇಮ್​ಗಳ ಅಂತರದಿಂದ ಸೋಲು ಕಂಡಿದ್ದರು. ಇದೀಗ ಸಿಂಗಾಪುರ ಓಪನ್​ನಲ್ಲಿ 2ನೇ ಸುತ್ತಿಗೆ ಆಟ ಮುಗಿಸಿದರು.

ಇದನ್ನೂ ಓದಿ Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

ಬುಧವಾರ ನಡೆದಿದ್ದ ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಧು 21-12, 22-20 ರಿಂದ ವಿಶ್ವದ 21ನೇ ಕ್ರಮಾಂಕದ ಆಟಗಾರ್ತಿ ಲಿನೆ ಹೊಜ್‌ರಮಾಕ್‌ ಕಾಯರ್ಸ್‌ಫೆಲ್ಟ್‌ ಅವರನ್ನು ಸೋಲಿಸಿ ದ್ವಿತೀಯ ಸುತ್ತಿಗೆ ಲಗ್ಗೆಯಿಟ್ಟಿದ್ದರು. ಸಿಂಧು 2022ರಲ್ಲಿ ಸ್ವಿಸ್ ಓಪನ್, ಸಿಂಗಾಪೂರ ಓಪನ್, ಸೆಯ್ಯದ್ ಮೋದಿ ಇಂಟರ್‌ನ್ಯಾಷನಲ್ ಟೂರ್ನಿಯಲ್ಲಿ ಗೆದ್ದಿದ್ದರು. ಆ ಬಳಿಕ ಯಾವುದೇ ಟೂರ್ನಿಯಲ್ಲಿ ಚಾಂಪಿಯನ್ ಆಗಿಲ್ಲ. ಕಳೆದ ವರ್ಷ ಸ್ಪೇನ್ ಮಾಸ್ಟರ್ಸ್ ಫೈನಲ್‌ಗೇರಿ ಸೋತಿದ್ದರು. ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಮಲೇಷ್ಯಾ ಮಾಸ್ಟರ್ಸ್ ಮೂಲಕ 2 ವರ್ಷಗಳ ಬಳಿಕ ಪ್ರಶಸ್ತಿಯೊಂದನ್ನು ಗೆಲ್ಲುವ ಇರಾದೆಯಲ್ಲಿದ್ದ ಸಿಂಧುಗೆ ಫೈನಲ್​ನಲ್ಲಿ ವಾಂಗ್‌ ಝಿ ಅಡಗಾಲಿಕ್ಕಿದ್ದರು.

ಇದೇ ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಿಂಪಿಕ್ಸ್ 2024 ಆರಂಭಕ್ಕೂ ಮುನ್ನ ಸಿಂಧು ಅವರು ಸೋಲು ಕಂಡಿದ್ದು. ಅವರ ಮೇಲಿನ ಪದಕ ಭರವಸೆಯನ್ನು ಕುಂಠಿತಗೊಳ್ಳುವಂತೆ ಮಾಡಿದೆ. ಸತತವಾಗಿ 2 ಒಲಿಂಪಿಕ್ಸ್​ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಮಹಿಳಾ ಕ್ರೀಡಪಟು ಎನಿಸಿಕೊಂಡಿರುವ ಸಿಂಧು ಇತ್ತೀಚೆಗೆ ಎಲ್ಲ ಟೂರ್ನಿಯಲ್ಲೂ ವಿಫಲರಾಗಿದ್ದಾರೆ. ಸಿಂಧು ಪ್ಯಾರಿಸ್‌ಗೆ ತೆರಳುವ ಮೊದಲು ಜರ್ಮನಿಯ ಸಾರ್ಬ್ರುಕೆನ್‌ನಲ್ಲಿರುವ ಹರ್ಮನ್-ನ್ಯೂಬರ್ಗರ್ ಸ್ಪೋರ್ಟ್‌ ಕ್ಲಬ್​ನಲ್ಲಿ ತರಬೇತಿ ಪಡೆಯಲಿದ್ದಾರೆ.

Continue Reading

ಕ್ರಿಕೆಟ್

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Team India T20 World Cup: 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

VISTARANEWS.COM


on

Team India Dream 11
Koo

ಮುಂಬಯಿ: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಇನ್ನೆರಡು ದಿನಗಳಲ್ಲಿ ಕಾವೇರಲಿದೆ. ಭಾರತ(Team India T20 World Cup) ತನ್ನ ಮೊದಲ ಪಂದ್ಯವನ್ನು ಜೂನ್​ 5ರಂದು ಐರ್ಲೆಂಡ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. 2007ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಕಪ್​ ಗೆದ್ದ ಬಳಿಕ ಇದುವರೆಗೆ ಭಾರತ(Team India) ಕಪ್​ ಗೆದಿಲ್ಲ. 17 ವರ್ಷಗಳ ಬಳಿಕ ಮತ್ತೊಂದು ಕಪ್​ ಗೆಲ್ಲುವ ಇರಾದೆಯೊಂದಿಗೆ ಆಟಗಾರರು ಕಣಕ್ಕಿಳಿಯಲಿದ್ದಾರೆ. ಇದೀಗ ಡ್ರೀಮ್​ ಇಲೆವೆನ್​ನ(Dream11) ಜಾಹೀರಾತೊಂದು ಭಾರೀ ಸದ್ದು ಮಾಡುತ್ತಿದೆ.

ಭಾರತ ತಂಡ ಉತ್ತಮವಾಗಿ ಆಡು ಕಪ್​ ಗೆಲ್ಲಲಿ ಎನ್ನುವ ಪ್ರಧಾನ ಗುರಿಯೊಂದಿಗೆ ಡ್ರೀಮ್​ ಇಲೆವೆನ್​ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ. ಇದಲ್ಲಿ ಪುಟ್ಟ ಮಗು ಭಾರತ ತಂಡ ಜೆರ್ಸಿ ತೊಟ್ಟು ತನ್ನ ತಾಯಿಯ ಬಳಿ ನನ್ನ ತಂದೆ, ಸಹೋದರ ಭಾರತ ತಂಡ ವಿಶ್ವಕಪ್​ ಗೆದ್ದಿರುವುದನ್ನು ನೋಡಿದ್ದಾರೆ. ಆದರೆ ನಾನು ಯಾವಾಗ ಈ ಸುಂದರ ಕ್ಷಣವನ್ನು ನೋಡಲು ಸಾಧ್ಯ. ಈ ಬಾರಿ ಖಂಡಿತವಾಗಿಯೂ ನೋಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡುತ್ತಾನೆ. ಈ ವಿಡಿಯೊವನ್ನು ತಾಯಿ ಟೀಮ್​ ಇಂಡಿಯಾದ ಆಟಗಾರರಿಗೆ ತೋರಿಸಿ ನೀವು ಏನು ಮಾಡುತ್ತೀರಾ ಎಂದು ನನಗೆ ತಿಳಿದಿಲ್ಲ ನನ್ನ ಮಗ ಚಿಂಟುವಿನ ಆಸೆಯನ್ನು ಈ ಬಾರಿ ಈಡೇರಿಸಲೇ ಬೇಕೆಂದು ಮಗುವಿನ ತಾಯಿ ಆಟಗಾರರಿಗೆ ಖಡಕ್​ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

ಈ ಬಾರಿಯ ಟೂರ್ನಿಗೆ ಸಿದ್ಧತೆ ಹೇಗಿದೆ ಎಂದು ಕೇಳಿದಾಗ ರೋಹಿತ್​ ನಾವು ಕಠಿಣ ತರಬೇತಿ ಪಡೆಯುತ್ತಿದ್ದೇವೆ ಎನ್ನುತ್ತಾರೆ. ಈ ವೇಳೆ ಚಿಂಟು ತಾಯಿ ನೋಡುತ್ತಿದ್ದೇನೆ ನಿಮ್ಮ ತಯಾರಿಯನ್ನು… ಹೀಗೆ ಅಭ್ಯಾಸ ನಡೆಸಿದರೆ ಕಪ್​ ಗೆಲ್ಲಲು ಸಾಧ್ಯವೇ ಎನ್ನುತ್ತಾರೆ. ಈ ವೇಳೆ ಉಪನಾಯಕ ಹಾರ್ದಿಕ್​ ಪಾಂಡ್ಯ ನೀವು ಆಶೀರ್ವಾದ ಮಾಡಿ ಸಾಕು ಉಳಿದದ್ದು ನಾವು ನೋಡಿಕೊಳ್ಳುತ್ತೇವೆ ಎನ್ನುತ್ತಾರೆ. ನಾವು ವಿಶ್ವದ ನಂ.1 ತಂಡ ಎಂದು ರೋಹಿತ್​ ಹೇಳುತ್ತಾರೆ. ಆಗ ಈ ತಾಯಿ ತಾನು ಈ ವಿಶ್ವದ ನಂ.1 ಮಮ್ಮಿ ಎಂದು ಹೇಳುತ್ತಾರೆ. ಈ ವೇಳೆ ಜಡೇಜಾ ಮಮ್ಮಿಜೀ ಇದು ಕ್ರಿಕೆಟ್​ ಎಂದು ಹೇಳುತ್ತಾರೆ. ಇದಕ್ಕೆ ಮಮ್ಮಿ ಹಾ… ಇದು ಕ್ರಿಕೆಟ್..​ ಬ್ಯಾಟ್​, ವಿಕೆಟ್​ ಮತ್ತು ಚೆಂಡು ತಂದು ಅಭ್ಯಾಸ ಆರಂಭಿಸಿ ಎಂದು ಹೇಳುವ ಮೂಲಕ ಕೋಚಿಂಗ್​ ಮಾಡುತ್ತಾರೆ.

ಈ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡು, ವಿಶ್ವಕಪ್‌ಗಳು ಅಭಿಮಾನಿಗಳ ಶಕ್ತಿಯ ಜತೆಗೆ ಈ ಬಾರಿ ತಾಯಂದಿರ ಹರ್ಷೋದ್ಗಾರ ಜೋರಾಗಿರಲಿವೆ. ‘ಮಮ್ಮಿ ಕೆ ಮ್ಯಾಜಿಕ್ ಕೆ ಸಾಥ್'(ತಾಯಿಯ ವಿಶೇಷ ಬೆಂಬಲದೊಂದಿಗೆ) ಟೀಮ್​ ಇಂಡಿಯಾ ವಿಶ್ವಕಪ್​ ಗೆಲ್ಲಲು ಸಜ್ಜಾಗಿದೆ ಎಂದು ಬರೆದುಕೊಂಡಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

T20 World Cup 2007: ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

VISTARANEWS.COM


on

T20 World Cup 2007
Koo

ಬೆಂಗಳೂರು: ಟಿ20 ಎಂಬ ಚುಟುಕು ಮಾದರಿಯ ಮೊದಲ ವಿಶ್ವಕಪ್(ICC World T20 2007) ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. 2007 ಸೆ. 24ರಂದು(T20 World Cup 2007) ಮಹೇಂದ್ರ ಸಿಂಗ್ ಧೋನಿ(ms dhoni) ನೇತೃತ್ವದ ಯುವ ಭಾರತ ತಂಡ ವಿಶ್ವಕಪ್ ಗೆದ್ದು ಬೀಗಿತ್ತು. ದುರಾದೃಷ್ಟವೆಂದರೆ ಆ ಬಳಿಕ ಭಾರತ ಇದುವರೆಗೂ ಒಂದೂ ಟ್ರೋಫಿ ಗೆದ್ದಿಲ್ಲ. ಇದೀಗ 17 ವರ್ಷಗಳ ಬಳಿಕ ಭಾರತ ಕಪ್​ ಗೆದ್ದು ಬೀಗೀತೇ ಎಂದು ಕಾದು ನೋಡಬೇಕಿದೆ. ಚೊಚ್ಚಲ ಟಿ20 ವಿಶ್ವಕಪ್​ ಫೈನಲ್​ನ ಮೆಲುಕು ನೋಟ ಇಂತಿದೆ.

ಅದು, ವೆಸ್ಟ್‌ ಇಂಡೀಸ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡವು ಹೀನಾಯವಾಗಿ ಸೋಲು ಕಂಡ ವರ್ಷವಾಗಿತ್ತು. ಈ ಸೋಲಿನಿಂದ ಕಂಗೆಟ್ಟಿದ್ದ ಸಚಿನ್​ ತೆಂಡೂಲ್ಕರ್​, ರಾಹುಲ್​ ದ್ರಾವಿಡ್​, ಸೌರವ್​ ಗಂಗೂಲಿ ಸೇರಿ ಖ್ಯಾತನಾಮ ಆಟಗಾರರು ಈ ಟೂರ್ನಿಯಲ್ಲಿ ಆಡಲು ಹಿಂದೇಟು ಹಾಕಿದರು. ಎಲ್ಲರು ವಿಶ್ರಾಂತಿ ಬಯಸಿದರು. ದಿಕ್ಕು ತೋಚದೆ ಬಿಸಿಸಿಐ ಆಗಿದ್ದಾಗಲಿ ಎಂದು ವಿಕೆಟ್‌ಕೀಪರ್ ಧೋನಿಗೆ ನಾಯಕತ್ವ ನೀಡಿ ಯುವ ಪಡೆಯನ್ನು ಕಣಕ್ಕಿಳಿಸಿತು. ಧೋನಿ ನೇತೃತ್ವದ ಯುವಪಡೆ ತಮ್ಮ ಮೊದಲ ಪ್ರಯತ್ನದಲೇ ಕಪ್​ ಗೆದ್ದು ಇತಿಹಾಸ ಸೃಷ್ಟಿಸಿತ್ತು.

ಹಲವು ಅಚ್ಚರಿ


ಕೂಟದಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗಿ ಭಾರತ ತಂಡ ಫೈನಲ್ ಪ್ರವೇಶ ಪಡೆದಿತ್ತು. ಲೀಗ್ ಹಂತದಲ್ಲಿ ಪಾಕಿಸ್ತಾನ ವಿರುದ್ಧ ಬಾಲ್ ಔಟ್ ಮುಖಾಂತರ ಜಯ ಸಾಧಿಸಿದ್ದ ಭಾರತ ಮತ್ತೊಂದು ಹೈ ವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿತ್ತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 157 ರನ್ ಗಳಿಸಿತು. ಗೌತಮ್ ಗಂಭೀರ್ 75 ರನ್ ಗಳಿಸಿದ್ದರೆ, ರೋಹಿತ್ ಶರ್ಮಾ 30 ರನ್ ಕೊಡುಗೆ ನೀಡಿದ್ದರು. ಉಳಿದ ಯಾರಿಂದಲೂ ಹೇಳಿಕೊಳ್ಳುವ ಪ್ರದರ್ಶನ ತಂಡಕ್ಕೆ ಸಿಗಲಿಲ್ಲ. ಪಾಕ್ ಪರ ಉಮರ್ ಗುಲ್ ಮೂರು ವಿಕೆಟ್ ಕಿತ್ತಿದ್ದರು.

ಇದನ್ನೂ ಓದಿ T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

ಸಾಧಾರಣ ಗುರಿ ಬೆನ್ನತ್ತಿದ್ದ ಪಾಕ್​ ಓಂದೆಡೆ ವಿಕೆಟ್ ಬೀಳುತ್ತಿದ್ದರೂ ಮಿಸ್ಬಾ ಉಲ್ ಹಕ್ ನಿಂತು ಆಡುತ್ತಿದ್ದರು. ಕೊನೆಯ ಓವರ್ ನಲ್ಲಿ 13 ರನ್ ಬೇಕಾಗಿತ್ತು. ಕೈಯಲ್ಲಿ ಇದ್ದಿದ್ದು ಒಂದು ವಿಕೆಟ್. ಜೋಗಿಂದರ್ ಶರ್ಮಾರ ಎರಡನೇ ಎಸೆತವನ್ನು ಸಿಕ್ಸರ್​ಗೆ ಅಟ್ಟಿದ ಮಿಸ್ಬಾ ಮೂರನೇ ಎಸೆತವನ್ನು ಫೈನ್ ಲೆಗ್​ಗೆ ಸ್ಕೂಪ್ ಮಾಡಿದ್ದರು. ಆದರೆ ಚೆಂಡು ಶ್ರೀಶಾಂತ್ ಕೈ ಸೇರಿತ್ತು. ಪಾಕಿಸ್ತಾನ ಆಲ್​ಔಟ್​ ಆಯಿತು. ಭಾರತ ಕೇವಲ 5 ರನ್​ ಅಂತರದಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು. ಇಲ್ಲಿದ ಧೋನಿ ಯುವ ಕೂಡ ಆರಂಭವಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಇರ್ಫಾನ್​ ಪಠಾಣ್​ (16 ಕ್ಕೆ 3), ಆರ್​.ಪಿ ಸಿಂಗ್​(24ಕ್ಕೆ 3), ಜೋಗಿಂದರ್ ಶರ್ಮಾ(20ಕ್ಕೆ 2) ವಿಕೆಟ್​ ಕಿತ್ತು ಮಿಂಚಿದ್ದರು.

Continue Reading

ಕ್ರೀಡೆ

T20 World Cup 2024: ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರು?

T20 World Cup 2024: ಈ ಬಾರಿಯ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು 2 ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಟೂರ್ನಿಯಲ್ಲಿ ದಾಖಲಾದ ಹಲವು ದಾಖಲೆಗಳನ್ನು ಮೆಲುಕು ಹಾಕಲಾಗಿದೆ. ಇದೀಗ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳು ಯಾರೆಂಬ ಮಾಹಿತಿ ಇಂತಿದೆ.

ವಿರಾಟ್​ ಕೊಹ್ಲಿ


ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2014ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಕೊಹ್ಲಿ 319 ರನ್​ ಬಾರಿಸಿದ್ದರು. 2022ರಲ್ಲಿಯೂ ಕೊಹ್ಲಿ 296 ರನ್​ ಬಾರಿಸಿದ್ದರು. 2 ಬಾರಿ ಟೂರ್ನಿಯೊಂದರಲ್ಲಿ ಗರಿಷ್ಠ ರನ್​ ಗಳಿಸಿದ ದಾಖಲೆಯೂ ಅವರ ಹೆಸರಿನಲ್ಲಿದೆ. ಸದ್ಯ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ಕೊಹ್ಲಿ ಈ ಬಾರಿಯೂ ಸ್ಫೋಟಕ ಬ್ಯಾಟಿಂಗ್​ ನಡೆಸುವ ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ಮುಕ್ತಾಯ ಕಂಡಿದ್ದ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಕೊಹ್ಲಿ 700 ರನ್​ಗಳ ಗಡಿ ದಾಟಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎಂದೆನಿಸಿದ್ದರು.

ತಿಲಕರತ್ನೆ ದಿಲ್ಶನ್


ಶ್ರೀಲಂಕಾ ಕ್ರಿಕೆಟ್​ ತಂಡದ ಮಾಜಿ ಆರಂಭಿಕ ಆಟಗಾರ ತಿಲಕರತ್ನೆ ದಿಲ್ಶನ್ ಅವರು ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಯಾದಿಯಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. 2009ರಲ್ಲಿ ತಿಲಕರತ್ನೆ ದಿಲ್ಶನ್ 317 ರನ್​ ಬಾರಿಸಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು ಯಾರು?


ಬಾಬರ್​ ಅಜಂ


ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ ಅವರು 2021ರಲ್ಲಿ ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ 303 ರನ್​ ಬಾರಿಸಿದ್ದರು. ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿಯೂ ಆಡುತ್ತಿರುವ ಅವರಿಗೆ ಈ ದಾಖಲೆಯನ್ನು ಮತ್ತೆ ತಿದ್ದಿ ಬರೆಯುವ ಅವಕಾಶವಿದೆ.


ಮಹೇಲಾ ಜಯವರ್ಧನೆ


ಟಿ20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಬ್ಯಾಟರ್​ಗಳ ಯಾದಿಯಲ್ಲಿ ಶ್ರೀಲಂಕಾ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಲಾ ಜಯವರ್ಧನೆ ನಾಲ್ಕನೇ ಸ್ಥಾನಿಯಾಗಿದ್ದಾರೆ. ಅವರು 2010ರಲ್ಲಿ ನಡೆದಿದ್ದ ಟೂರ್ನಿಯಲ್ಲಿ 302 ರನ್​ ಬಾರಿಸಿದ್ದರು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

ಈ ಬಾರಿಯ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಲೀಗ್​ ಪಂದ್ಯಗಳು ಜೂನ್​ 1ರಿಂದ ಆರಂಭಗೊಳ್ಳಲಿದೆ. ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ ಮತ್ತು ಕೆನಾಡ ಮುಖಾಮುಖಿಯಾಗಲಿವೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ.

Continue Reading
Advertisement
Agnikul Cosmos
ತಂತ್ರಜ್ಞಾನ9 mins ago

Agnikul Cosmos: ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿದ ಸ್ಟಾರ್ಟ್ ಅಪ್ ಕಂಪನಿ ಅಗ್ನಿಕುಲ್ ಕಾಸ್ಮೋಸ್; ಮೋದಿ ಅಭಿನಂದನೆ

PM Modi
Lok Sabha Election 202414 mins ago

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

Love Case in vijayapura
ವಿಜಯಪುರ23 mins ago

Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

Kantara Movie Mollywood actor enters
ಸಿನಿಮಾ27 mins ago

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Singapore Open
ಕ್ರೀಡೆ28 mins ago

Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

prajwalrevanna case hassan protest
ಕ್ರೈಂ43 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

PM Narendra Modi
ದೇಶ46 mins ago

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

Assault Case
ಧಾರವಾಡ2 hours ago

Assault Case : ಆಸ್ತಿ ವಿಚಾರಕ್ಕೆ ಕಿರಿಕ್‌; ನಡುರಸ್ತೆಯಲ್ಲಿ ಯುವತಿಯನ್ನು ಮನಸೋ ಇಚ್ಛೆ ಥಳಿಸಿದ ಗ್ರಾಪಂ ಸದಸ್ಯ

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್2 hours ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌