Gujarat Titans, who have earned more than any other IPL team, how can they?IPL 2023 : ಎಲ್ಲ ಐಪಿಎಲ್​ ಟೀಮ್​ಗಿಂತ ಅಧಿಕ ಆದಾಯ ಗಳಿಸಿದ ಗುಜರಾತ್​ ಟೈಟನ್ಸ್​, ಹೇಗೆ ಸಾಧ್ಯ? Vistara News
Connect with us

ಕ್ರಿಕೆಟ್

IPL 2023 : ಎಲ್ಲ ಐಪಿಎಲ್​ ಟೀಮ್​ಗಿಂತ ಅಧಿಕ ಆದಾಯ ಗಳಿಸಿದ ಗುಜರಾತ್​ ಟೈಟನ್ಸ್​, ಹೇಗೆ ಸಾಧ್ಯ?

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಇದುವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಫೈನಲ್ ತಲುಪಿದರೆ 9 ಪಂದ್ಯವನ್ನು ಆಡಲು ಸಾಧ್ಯ.

VISTARANEWS.COM


on

gujarat titans
Koo

ಅಹಮದಾಬಾದ್: 2022ರ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದುಕೊಂಡಿತ್ತು. ಹಾರ್ದಿಕ್​ ಪಾಂಡ್ಯ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್ ಗಳಿಂದ ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಇದೀಗ (IPL 2023) ಮತ್ತೆ ಗುಜರಾತ್​ ತಂಡ ಪ್ಲೇಆಫ್​ ಹಂತದಲ್ಲಿದೆ. ಚೆನ್ನೈ ವಿರುದ್ಧದ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಸೋತ ಹೊರತಾಗಿಯೂ ಎರಡನೇ ಕ್ವಾಲಿಫೈಯರ್​ನಲ್ಲಿ ಆಡುವ ಅವಕಾಶ ಪಡೆದುಕೊಂಡಿದೆ. ಮೇ 26ರಂದು ನಡೆಯುವ ಪಂದ್ಯದಲ್ಲಿ ಮುಂಬಯಿ ತಂಡವನ್ನು ಸೋಲಸಿದರೆ ಭಾನುವಾರ ಆಯೋಜನೆಗೊಂಡಿರುವ ಎರಡನೇ ಬಾರಿ ಫೈನಲ್​ಗೆ ಪ್ರವೇಶ ಮಾಡಿದಂತಾಗುತ್ತದೆ. ಈ ಮೂಲಕ ಸತತವಾಗಿ ಎರಡನೇ ಬಾರಿ ಯಶಸ್ಸು ಕಂಡಿರುವ ತಂಡ ಎನಿಸಿಕೊಳ್ಳಲಿದೆ.

ಮೊದಲ ಎರಡು ಋತುಗಳಲ್ಲಿ ಈ ತಂಡದ ಅದ್ಭುತ ಪ್ರದರ್ಶನದ ಕಾರಣಕ್ಕೆ ಗುಜರಾತ್ ಬಳಗಕ್ಕೆ ಭಾರತದಾದ್ಯಂತ ಬೃಹತ್​ ಅಭಿಮಾನಿಗಳ ಬಳಗ ಸೃಷ್ಟಿಯಾಗಿದೆ. ಹೀಗಾಗಿ ಈ ತಂಡ ಹೋದಲ್ಲೆಲ್ಲ ದೊಡ್ಡ ಪ್ರಮಾಣದ ಪ್ರೇಕ್ಷಕರು ಇರುತ್ತಾರೆ. ಇನ್ನೂ ವಿಶೇಷ ಏನೆಂದರೆ ಈ ತಂಡದ ತವರು ಮೈದಾನ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಮ್​. ಇದು ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್​ ಮೈದಾನವೂ ಹೌದು.

ಐಪಿಎಲ್​ ಟೂರ್ನಿ ಮೂರು ವರ್ಷಗಳ ಬಳಿಕ ಹೋಮ್​ ಮತ್ತು ಅವೇ ಮಾದರಿಯಲ್ಲಿ ನಡೆಯುತ್ತಿದೆ. ಅಂತೆಯೇ ಗುಜರಾತ್ ತಮ್ಮ ತವರು ನೆಲದಲ್ಲಿ ಏಳು ಪಂದ್ಯಗಳನ್ನು ಆಡಿದೆ. ಈ ಪಂದ್ಯಗಳ ವೇಳೆ ಮೈದಾನ ಸಂಪೂರ್ಣವಾಗಿ ಭರ್ತಿಯಾಗಿತ್ತು. ಗುಜರಾತ್​ ಫ್ರಾಂಚೈಸಿಗೆ ಟಿಕೆಟ್​ ರೂಪದಲ್ಲಿ ದೊಡ್ಡ ಮಟ್ಟ ಲಾಭ ದೊರಕಿದೆ ಎಂಬುದಾಗಿ ಮನಿ ಕಂಟ್ರೋಲ್​ ವರದಿ ಮಾಡಿದೆ.

ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಇದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ. ಕ್ವಾಲಿಫೈಯರ್ 2 ಮತ್ತು ಫೈನಲ್ ಎರಡೂ ನರೇಂದ್ರ ಮೋದಿಯಲ್ಲಿ ನಡೆಯುವುದರಿಂದ ಟೈಟನ್ಸ್ ತಂಡಕ್ಕೆ ತವರು ಮೈದಾನದಲ್ಲಿ ಇನ್ನೂ ಎರಡು ಪಂದ್ಯಗಳನ್ನು ಆಡಲು ಅವಕಾಶವಿದೆ. ಹೀಗಾಗಿ ಆದಾಯದ ಪ್ರಮಾಣ ಹೆಚ್ಚಬಹುದು. ಜಿಟಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಒಒ) ಅರವಿಂದರ್ ಸಿಂಗ್ ಇತ್ತೀಚೆಗೆ ಟಿಕೆಟ್​ ಮಾರಾಟದ ಮೂಲಕ ಗಳಿಸಿದ ಆದಾಯದ ಬಗ್ಗೆ ಮಾತನಾಡಿದರು.

“ಸುಮಾರು 40 ಪ್ರತಿಶತದಷ್ಟು ಆದಾಯ ಟಿಕೆಟ್​ ಮಾರಾಟದಿಂದ ಬಂದಿದೆ ಎಂದು ಹೇಳಿದ್ದಾರೆ ಅವರು. ಗುಜರಾತ್​ ಫ್ರಾಂಚೈಸಿಯು ಫ್ರೆಂಚ್ ಖಾಸಗಿ ಇಕ್ವಿಟಿ ಸಂಸ್ಥೆಯಾದ ಸಿವಿಸಿ ಕ್ಯಾಪಿಟಲ್ ಒಡೆತನದಲ್ಲಿದೆ. ಐಪಿಎಲ್ ಫ್ರಾಂಚೈಸಿಗಳ ಆದಾಯದಲ್ಲಿ ಟಿಕೆಟ್ ಸಂಗ್ರಹ, ವ್ಯಾಪಾರ, ಆಹಾರ ಮತ್ತು ಪಾನೀಯಗಳ ಮಾರಾಟವೂ ಸೇರಿವೆ. ಗುಜರಾತ್​ ತಂಡ ಆದಾಯದ ಶೇಕಡಾ 20 ರಷ್ಟಿದೆ ಎಂದು ಸಿಇಒ ಹೇಳಿದ್ದಾರೆ.

ನರೇಂದ್ರ ಮೋದಿ ಸ್ಟೇಡಿಯಂ 2022ರಲ್ಲಿ ಐಪಿಎಲ್​ ಪಂದ್ಯಕ್ಕೆ ಪದಾರ್ಪಣೆ ಮಾಡಲಾಗಿತ್ತು. ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯಗಳನ್ನು ಈ ತಾಣದಲ್ಲಿ ನಡೆಸಲಾಯಿತು. ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ 2022 ರ ಫೈನಲ್ ಪಂದ್ಯವು 101,566 ಪ್ರೇಕ್ಷಕರೊಂದಿಗೆ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿತ್ತು.

ಇದನ್ನೂ ಓದಿ : IPL 2023: ಗುಜರಾತ್​-ಮುಂಬೈ ನಡುವೆ ಕ್ವಾಲಿಫೈಯರ್ ಪಂದ್ಯ; ಯಾರಿಗೆ ಒಲಿಯಲಿದೆ ಫೈನಲ್​ ಲಕ್​

ಮೆಟ್ರೋ ಸೇವೆ ಹೆಚ್ಚಿಸುವುದು ಸೇರಿದಂತೆ ಕ್ರೀಡಾಂಗಣಗಳಿಗೆ ಹೆಚ್ಚಿನ ಅಭಿಮಾನಿಗಳನ್ನು ಕರೆತರಲು ನಾವು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕ್ರೀಡಾಂಗಣದಲ್ಲಿ 34 ಪಾರ್ಕಿಂಗ್ ಪ್ರದೇಶಗಳಿವೆ. ಆದ್ದರಿಂದ ನಾವು ಕ್ರೀಡಾಂಗಣದಿಂದ ಪಾರ್ಕಿಂಗ್ ಸ್ಥಳಕ್ಕೆ 100 ಶಟಲ್ ವಾಹನಗಳನ್ನು ಓಡಿಸಿದ್ದೇವೆ. ಆತಿಥ್ಯದ ಪ್ರದೇಶಗಳಿಗೂ ನಾವು ಗಾಲ್ಫ್ ಗಾಡಿಗಳನ್ನು ಓಡಿಸುತ್ತಿದ್ದೆವು” ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

ಜಿಟಿ ಮತ್ತು ಸಿಎಸ್ಕೆ ನಡುವಿನ ಮೊದಲ ಕ್ವಾಲಿಫೈಯರ್ 1 ಪಂದ್ಯವು ಡಿಜಿಟಲ್​ ವೇದಿಕೆ ಮೂಲಕ 2.5 ಕೋಟಿ ವೀಕ್ಷಕರನ್ನು ಕಂಡಿದೆ. ಇದು ಏಪ್ರಿಲ್ 17 ರಂದು ಸಿಎಸ್ಕೆ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ಸಮಯದಲ್ಲಿ ಗಳಿಸಿದ 2.4 ಕೋಟಿ ವೀಕ್ಷಕರ ದಾಖಲೆಯನ್ನು ಮುರಿದಿದೆ. ಈ ಮೂಲಕವೂ ಫ್ರಾಂಚೈಸಿಯ ಆದಾಯ ದುಪ್ಪಟ್ಟಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರಿಕೆಟ್

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

ಇಶಾನ್ ಕಿಶನ್ ಅವರನ್ನು ಕೈಬಿಟ್ಟು ಫೈನಲ್ ಪಂದ್ಯದಲ್ಲಿ ವಿಕೆಟ್​ಕೀಪಿಂಗ್ ಜವಾಬ್ದಾರಿಯನ್ನು ಕೆ. ಎಸ್ ಭರತ್​​ಗೆ ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ

VISTARANEWS.COM


on

KS Bharat
Koo

ಲಂಡನ್: ಲಂಡನ್​ನ ಕೆನ್ನಿಂಗ್ಟನ್ ಓವಲ್​​ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ ಫೈನಲ್​ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. ಟಾಸ್​ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ದಿನದ ಟಿ ವಿರಾಮದ ವೇಳೆಗೆ ಆಸ್ಟ್ರೇಲಿಯಾ 3 ವಿಕೆಟ್​ ಕಳೆದುಕೊಂಡು 171 ರನ್ ಬಾರಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ನಿಧಾನವಾಗಿ ಮೇಲುಗೈ ಸಾಧಿಸಿದೆ.

ಲಂಚ್​ ಬ್ರೇಕ್​ಗಿಂತ ಮೊದಲು ಆಸ್ಟ್ರೇಲಿಯಾ 73 ರನ್​ ಗಳಿಸಿತ್ತು. ಈ ವೇಳೆ ಇಬ್ಬರೂ ಆರಂಭಿಕರನ್ನು ಆಸ್ಟ್ರೇಲಿಯಾ ತಂಡ ಕಳೆದುಕೊಂಡಿತು. ವಾರ್ನರ್ 8 ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮವಾಗಿ ಆಡಿದರು ಆದರೆ ಭೋಜನ ವಿರಾಮಕ್ಕೆ ಕೆಲವೇ ನಿಮಿಷಗಳ ಮೊದಲು ಶಾರ್ದೂಲ್ ಠಾಕೂರ್​​ಗೆ ವಿಕೆಟ್​ ಒಪ್ಪಿಸಿ 7 ರನ್​ಗಳಿಂದ ಅರ್ಧ ಶತಕವನ್ನು ಕಳೆದುಕೊಂಡರು. ಈ ವಿಕೆಟ್​ ಕಬಳಿಸಲು ವಿಕೆಟ್​ಕೀಪರ್​ ಕೆ. ಎಸ್​ ಭರತ್​ ನೆರವಾದರು. ಅವರು ಅದ್ಭುತವಾಗಿ ಕ್ಯಾಚ್​ ಹಿಡಿಯುವ ಮೂಲಕ ವಾರ್ನರ್​ ವಿಕೆಟ್​ ಉರುಳಿಸಿದರು.

ಇದನ್ನೂ ಓದಿ : WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಪಂದ್ಯಕ್ಕೆ ಪೂರ್ವದಲ್ಲಿ ಕೀಪಿಂಗ್ ಜವಾಬ್ದಾರಿ ಯಾರಿಗೆ ನೀಡಬೇಕು ಎಂಬ ಗೊಂದಲ ಸೃಷ್ಟಿಯಾಗಿತ್ತು. ಆದರೆ, ಇಶಾನ್​ ಕಿಶನ್​ ಅವರನ್ನು ಹಿಂದಿಕ್ಕಿದ ಭರತ್ ಅವಕಾಶ ಗಿಟ್ಟಿಸಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಭರತ್ 5 ಪಂದ್ಯಗಳನ್ನು ಆಡಿದ್ದಾರೆ. ಅವರು ಖಾತೆಯಲ್ಲಿ 100ಕ್ಕೂ ಹೆಚ್ಚು ರನ್​ಗಳಿವೆ. ಇದೀಗ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ನಲ್ಲೂ ಛಾಪು ಮೂಡಿಸಲಿದ್ದಾರೆ.

ಶಮಿಗೆ ಸಿಗದ ಅವಕಾಶ, ನೆಟ್ಟಿಗರ ಆಕ್ರೊಶ

ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್​ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್​ ಮ್ಯಾನೆಜ್​ಮೆಂಟ್​ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್​ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್‌ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್‌ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.

Continue Reading

ಕ್ರಿಕೆಟ್

WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಿದ್ದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

VISTARANEWS.COM


on

Edited by

ICC World Test Championship Final 2023
Koo

ಲಂಡನ್​: ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಲಂಡನ್​ನ ಓವಲ್​ ಮೈದಾನದಲ್ಲಿ ಬುಧವಾರ ಆರಂಭಗೊಂಡ ಈ ಪಂದ್ಯದಲ್ಲಿ ಟಾಸ್​ ವೇಳೆ ಪ್ರಕಟಗೊಂಡ ಭಾರತ ತಂಡದಲ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬೌಲರ್ ಆಗಿರುವ ಆಫ್‌ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್ ಅವರನ್ನು ಆಡುವ 11ರ ಬಳಗದಿಂದ ಕೈಬಿಟ್ಟು ಅಚ್ಚರಿ ಮೂಡಿಸಿತು. ಇದೇ ವೇಳೆ ನೆಟ್ಟಿಗರು ಟೀಮ್​ ಮ್ಯಾನೆಜ್​ಮೆಂಟ್​ ವಿರುದ್ಧ ಟ್ವಿಟರ್​ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ಅಶ್ವಿನ್​ ಬದಲು ಮಧ್ಯಮ ವೇಗಿ ಹಾಗೂ ಆಲ್​ರೌಂಡರ್​ ಆಗಿರುವ ಶಾರ್ದೂಲ್​ ಠಾಕೂರ್​ ಅವರನ್ನು ಟೀಮ್ ಇಂಡಿಯಾ ಹೆಚ್ಚುವರಿ ವೇಗಿಯನ್ನಾಗಿ ಆಯ್ಕೆ ಮಾಡಿಕೊಂಡಿತು. ಇದೇ ವಿಚಾರವಾಗಿ ಮಾತನಾಡಿದ ರೋಹಿತ್​ ಅವರು “ಇಲ್ಲಿನ ಪರಿಸ್ಥಿತಿಗಳು ಬೌಲಿಂಗ್‌ಗೆ ಉತ್ತಮವಾಗಿದೆ. ಹೀಗಾಗಿ ನಾವು ಮೊದಲು ಬೌಲಿಂಗ್‌ ಮಾಡಲಿದ್ದೇವೆ. ಮೋಡ ಕವಿದ ವಾತಾವರಣವೂ ಇದೆ. ಈ ಪಿಚ್‌ನಲ್ಲಿ ಸ್ಪಿನ್​ ಹೆಚ್ಚು ಪರಿಣಾಮಕಾರಿಯಾಗುವ ಸಾಧ್ಯತೆ ಕಡಿಮೆ. ಹೀಗಾಗಿ ನಾವು 4 ವೇಗಿಗಳು ಮತ್ತು ಒಬ್ಬ ಸ್ಪಿನ್ನರ್‌ನ ಆಯ್ಕೆ ಮಾಡಿಕೊಂಡಿದ್ದೇವೆ. ಜಡೇಜಾ ಅವರನ್ನು ಏಕೈಕ ಸ್ಪಿನ್ನರ್‌ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ. ಅಶ್ವಿನ್ ಅವರನ್ನು ಹೊರಗಿಡುವುದು ಕಠಿಣ ನಿರ್ಧಾರವಾಗಿದೆ. ಆದರೂ ತಂಡದ ಹಿತದೃಷ್ಟಿಯಿಂದ ಅವರನ್ನು ಅನಿವಾರ್ಯವಾಗಿ ಕೈಬಿಡಬೇಕಾಯಿತು” ಎಂದರು.

ಇದನ್ನೂ ಓದಿ WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಸದ್ಯ ಬ್ಯಾಟಿಂಗ್​ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡ ಮೂರು ವಿಕೆಟ್​ ಕಳೆದುಕೊಂಡು 85 ರನ್​ ಗಳಿಸಿದೆ. ಉತ್ತಮ ರನ್​ ಕಲೆ ಹಾಕುತ್ತಿದ್ದ ಡೇವಿಡ್​ ವಾರ್ನರ್​ ಅವರನ್ನು ಔಟ್​ ಮಾಡುವ ಮೂಲಕ ಶಾರ್ದೂಲ್​ ಅವರು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು.

Continue Reading

ಕ್ರಿಕೆಟ್

Honda Motors : ಎಸ್​​ಯುವಿ ಸೆಗ್ಮೆಂಟ್​​ಗೂ ಹೋಂಡಾ ಎಂಟ್ರಿ, ಸ್ಟೈಲಿಸ್ಟ್​ ಕಾರು ಅನಾವರಣ

ಜುಲೈನಲ್ಲಿ ಹೋಂಡಾ ಎಲಿವೇಟ್​ ಕಾರಿನ (Honda Elevate) ಬುಕಿಂಗ್ ಆರಂಭಗೊಳ್ಳಲಿದ್ದು ಹಬ್ಬದ ಋತುವಿನಲ್ಲಿ ವಿತರಣೆ ಆರಂಭಗೊಳ್ಳಲಿವೆ.

VISTARANEWS.COM


on

Honda Elevate
Koo

ನವ ದೆಹಲಿ: ಹೋಂಡಾ (Honda Motors) ತನ್ನ ಭಾರತ ಕೇಂದ್ರಿತ ಎಲಿವೇಟ್ ಎಸ್​ಯುವಿ (Honda Elevate) ಕಾರನ್ನು ಜೂನ್​ 6ರಂದು ಅನಾವರಣ ಮಾಡಿದೆ. ಇದೇ ವೇಳೆ 2030ರ ಒಳಗೆ ಭಾರತದಲ್ಲಿ ಐದು ಎಸ್​ಯುವಿಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಯೋಜನೆಯ ಮೊದಲ ಕಾರು ಎಲಿವೇಟ್​. ಇದರ ಬುಕಿಂಗ್​ ಜುಲೈನಲ್ಲಿ ಪ್ರಾರಂಭವಾಗಲಿದ್ದು, ಹಬ್ಬದ ಋತುವಿಗೆ ಮುಂಚಿತವಾಗಿ ಬಿಡುಗಡೆಗೊಳ್ಳಲಿದೆ.

ಹೋಂಡಾ ಕಾರ್ಸ್ ಇಂಡಿಯಾದ ಅಧ್ಯಕ್ಷ ಮತ್ತು ಸಿಇಒ ತಕುಯಾ ಸುಮುರಾ ಎಲಿವೇಟ್​ ಕಾರನ್ನು ಅನಾವರಣಗೊಳಿಸಿ ಮಾತನಾಡಿ ನಾವು ಭಾರತಕ್ಕಾಗಿ ಅತ್ಯಂತ ಬಲಿಷ್ಠ ಉತ್ಪನ್ನ ಕಾರ್ಯತಂತ್ರ ರೂಪಿಸಿದ್ದೇವೆ. 2030ರ ವೇಳೆಗೆ ಐದು ಎಸ್ ಯುವಿಗಳನ್ನು ಹೊಂದಲು ಯೋಜಿಸಿದ್ದೇವೆ. ಎಲಿವೇಟ್​​​ಗೆ ಭಾರತವು ಪ್ರಮುಖ ಮಾರುಕಟ್ಟೆಯಾಗಿದ್ದರೂ, ಭವಿಷ್ಯದಲ್ಲಿ ಮಾದರಿಗೆ ಭಾರತ ಪ್ರಮುಖ ರಫ್ತು ಕೇಂದ್ರವಾಗಲಿದೆ. ಹೋಂಡಾ ಕಾರ್ಸ್ ಇಂಡಿಯಾ ಮುಂದಿನ ಮೂರು ವರ್ಷಗಳಲ್ಲಿ ಎಲಿವೇಟ್​್ನ ಎಲೆಕ್ಟ್ರಿಕ್ ಆವೃತ್ತಿಯನ್ನೂಐ ಮಾರುಕಟ್ಟೆಗೆ ತರಲು ಯೋಜಿಸಿದೆ ಎಂದು ಹೇಳಿದ್ದಾರೆ.

2023ರ ವರ್ಷಾರಂಭದಲ್ಲಿ ಹೋಂಡಾ ಕಾರ್ಸ್​​ ಭಾರತದಲ್ಲಿ ಪ್ರತಿ ವರ್ಷ ಒಂದು ಹೊಸ ಮಾದರಿ ಪರಿಚಯಿಸುವ ಯೋಜನೆಯನ್ನು ಹಂಚಿಕೊಂಡಿತ್ತು ಇದರಲ್ಲಿ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳೂ ಸೇರಿವೆ. ದೇಶದಲ್ಲಿ ಹೋಂಡಾ ಬ್ರ್ಯಾಂಡ್ ಅನ್ನು ಬಲಪಡಿಸಲು ಪ್ರೀಮಿಯಂ ಮಾದರಿಗಳನ್ನು ಭಾರತಕ್ಕೆ ತರುವ ಪ್ರಯತ್ವನ್ನು ಮಾಡಲಾಗಿದೆ.

ಹ್ಯುಂಡೈ ಕ್ರೆಟಾಗೆ ಪ್ರತಿಸ್ಪರ್ಧಿ

ಭಾರತದಲ್ಲಿ ಎಸ್​ಯುವಿ ಸೆಗ್ಮೆಂಟ್​​ ಪ್ರಬಲವಾಗುತ್ತಿರವು ಸಮದಲ್ಲಿ ಮಿಡ್​ಸೈಜ್​ ಎಸ್​ಯುವಿ ವಿಭಾಗಕ್ಕೆ ಹೋಂಡಾ ಪ್ರವೇಶ ಮಾಡಿದೆ. ಒಟ್ಟು ಕಾರು ಮಾರುಕಟ್ಟೆಯ ಶೇಕಾಡ 40ರಷ್ಟು ಎಸ್​​ಯುವಿಗಳ ಪಾಲಿದೆ. ಹೀಗಾಗಿ ಹೋಂಡಾ ಎಲಿವೇಟ್ ಅನ್ನು ಮಧ್ಯಮ ಗಾತ್ರದ ಎಸ್​​ಯುವಿ ಮಾರುಕಟ್ಟೆಯಲ್ಲಿ ಸ್ಥಾಪಿಸಲು ಹೋಂಡಾ ಮುಂದಾಗಿದೆ. ಈ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಹೋಂಡಾ ಕಂಪನಿಯು ಭಾರತದ ಮಾರುಕಟ್ಟೆಯಲ್ಲಿ ಸಿಟಿ ಮತ್ತು ಅಮೇಜ್ ಮೂಲಕ ತನ್ನ ಇರುವಿಕೆಯನ್ನು ಗಟ್ಟಿ ಮಾಡಿಕೊಂಡಿದೆ. ಇದೀಗ ಆ ಪಟ್ಟೆಗೆ ಎಲಿವೇಟ್ ಸೇರ್ಪಡೆಗೊಂಡಿದೆ. ಇದು ಇದು ವೇಗವಾಗಿ ಬೆಳೆಯುತ್ತಿರುವ ಎಸ್​ಯುವಿ ವಿಭಾಗದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸುತ್ತದೆ ಎಂದು ಕಂಪನಿ ಹೇಳಿದೆ.

ಇದನ್ನೂ ಓದಿ : Maruti Suzuki : ಮಾರುತಿಯ 5 ಡೋರ್​ ಜಿಮ್ನಿ ಬಿಡುಗಡೆ, ಮಹೀಂದ್ರಾ ಥಾರ್​ಗೆ ಪೈಪೋಟಿ ಖಚಿತ

ಸವಾಲುಗಳ ಹೊರತಾಗಿಯೂ, ಭಾರತೀಯ ಕಾರು ಮಾರುಕಟ್ಟೆ ತನ್ನ ಶಕ್ತಿಯನ್ನು ಸಾಬೀತುಪಡಿಸಿದೆ. ವಿಶ್ವದ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಯಾಗಿ ಮುಂದುವರಿದೆ. ನಾವು ಸೆಡಾನ್ ವಿಭಾಗದಲ್ಲಿ ಜನಪ್ರಿಯತೆ ಹೊಂದಿದ್ದೇವೆ ಮತ್ತು ಅದನ್ನು ಎಸ್​​ಯುವಿ ವಿಭಾಗಕ್ಕೆ ಕೊಂಡೊಯ್ಯಲು ಆಶಿಸಿದ್ದೇವೆ . ಎಲಿವೇಟ್ ಪರಿಪೂರ್ಣ ನಗರ ಕೇಂದ್ರಿತ ಎಸ್​ಯುವಿ ಎಂದು ತ್ಸುಮುರಾ ಹೇಳಿದರು.

ತಪುಕಾರಾ ಘಟಕದಲ್ಲಿ ನಿರ್ಮಾಣ

ಎಲಿವೇಟ್ ಮತ್ತು ಭವಿಷ್ಯದ ಉತ್ಪನ್ನಗಳಿಗೆ ಪೂರಕವಾಗಿ ಹೋಂಡಾ ಕಂಪನಿಯು ರಾಜಸ್ಥಾನದ ತಪುಕಾರದಲ್ಲಿರುವ ತನ್ನ ಘಟಕದಲ್ಲಿನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿದೆ. ದೈನಂದಿನ ಉತ್ಪಾದನಾ ಸಾಮರ್ಥ್ಯವನ್ನು 2023ರ ಮೊದಲ ತ್ರೈಮಾಸಿಕದಲ್ಲಿ 540 ವಾಹನಗಳಿಂದ ದಿನಕ್ಕೆ 660 ವಾಹನಗಳಿಗೆ ವಿಸ್ತರಿಸಲಾಗಿದೆ.

ಎಲಿವೇಟ್ ಬಿಡುಗಡೆಗೆ ಮುಂಚಿತವಾಗಿ ಹೋಂಡಾ ಡೀಲರ್​​ಶಿಪ್​ ನೆಟ್​​ವರ್ಕ್ ಕೂಡ ನವೀಕರಿಸಲಾಗಿದೆ.
ಬ್ರ್ಯಾಂಡಿಂಗ್ ಮತ್ತು ರಿಟೇಲ್ ದೃಷ್ಟಿಕೋನದಿಂದ ಹೋಂಡಾ ಕಾರ್ಸ್ ಇಂಡಿಯಾ ತನ್ನ ಶೋರೂಂಗಳ ಹೊಸ ಗ್ರಾಹಕ ಇಂಟರ್ಫೇಸ್​ಗಾಗಿ (ಸಿಐ) 260 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಹೋಂಡಾ 238 ನಗರಗಳಲ್ಲಿ ಸುಮಾರು 326 ಮಳಿಗೆಗಳನ್ನು ಹೊಂದಿದೆ. ತನ್ನ ಒಟ್ಟಾರೆ ಮಾರಾಟದಲ್ಲಿ 3ನೇ ಶ್ರೇಣಿಯ ನಗರಗಳು ಸುಮಾರು 30 ಪ್ರತಿಶತದಷ್ಟು ಪಾಲನ್ನು ಹೊಂದಿವೆ ಎಂದು ಕಂಪನಿ ಹೇಳಿಕೊಂಡಿದೆ. ಹೋಂಡಾ ಎಲಿವೇಟ್ ಅನ್ನು ಮೊದಲು ಭಾರತದಲ್ಲಿ ಬಿಡುಗಡೆ ಮಾಡಲಿದ್ದು, ನಂತರ ಇತರ ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಕ್ರಿಕೆಟ್

WTC Final 2023: ಭಾರತ, ಆಸ್ಟ್ರೇಲಿಯಾ​ ಆಟಗಾರರು ಕಪ್ಪು ಪಟ್ಟಿ ಧರಿಸಿ ಆಡಿದ್ದರ ಹಿಂದಿದೆ ಭಾವುಕ ಕಾರಣ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟರಿಗೆ ಸಂತಾಪ ಸೂಚಿಸುವ ನಿಟ್ಟಿನಲ್ಲಿ ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯವನ್ನಾಡುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ.

VISTARANEWS.COM


on

Edited by

wtc final 2023
Koo

ಲಂಡನ್​: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯವನ್ನಾಡುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ. ಕಳೆದ ಶುಕ್ರವಾರ ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಾಗಾ ಎಂಬಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟರಿಗೆ ಸಂತಾಪ ಸೂಚಿಸುವ ಸಲುವಾಗಿ ಉಭಯ ತಂಡಗಳ ಆಟಗಾರರು ಕಪ್ಪುಪಟ್ಟಿ ಧರಿಸಿದರು.

ಲಂಡನ್​ನ ಓವಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆಸ್ಟ್ರೇಲಿಯಾ ತಂಡ ಮೊದಲ ಅವಧಿಯ ಆಟದಲ್ಲಿ ಒಂದು ವಿಕೆಟ್​ ನಷ್ಟಕ್ಕೆ 54 ರನ್​ ಗಳಿಸಿ ಆಟವಾಡುತ್ತಿದೆ. ಉಸ್ಮಾನ್​ ಖವಾಜಾ ಅವರು ಖಾತೆ ತೆರೆಯವ ಮುನ್ನವೇ ಮೊಹಮ್ಮದ್​ ಸಿರಾಜ್​ಗೆ ವಿಕೆಟ್​ ಒಪ್ಪಿಸಿ ನಿರಾಸೆ ಅನುಭವಿಸಿದರು.

ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್​ ಯಾದವ್​, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ WTC Final 2023: ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವ ಟೆಸ್ಟ್​ ಫೈನಲ್​ ಲೈವ್​ ಅಪ್​ಡೇಟ್ಸ್​

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್​ ವಾರ್ನರ್​, ಉಸ್ಮಾನ್ ಖವಾಜಾ, ಮಾರ್ನಸ್ ಲಾಬುಶೇನ್, ಸ್ಟೀವನ್​ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್. ಟ್ರಾವಿಸ್​ ಹೆಡ್​

Continue Reading
Advertisement
wrestlers protest
ಕ್ರೀಡೆ16 mins ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ17 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

KS Bharat
ಕ್ರಿಕೆಟ್18 mins ago

WTC Final 2023 : ವಿಕೆಟ್​ ಕೀಪರ್​ ಕೆಎಸ್​ ಭರತ್​​ ಹಿಡಿದ ರೋಮಾಂಚಕಾರಿ ಕ್ಯಾಚ್​ ಹೀಗಿತ್ತು

for tenants also to wrestlers protest and more news
ಕರ್ನಾಟಕ22 mins ago

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

Anita Madhu Bangarappa was felicitated by Block Mahila Congress at soraba
ಕರ್ನಾಟಕ34 mins ago

Shivamogga News: ಸೊರಬ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅನಿತಾ ಮಧು ಬಂಗಾರಪ್ಪ

MLA TB Jayachandra visited Shira Public Hospital
ಕರ್ನಾಟಕ36 mins ago

Tumkur News: ಶಿರಾ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಟಿ.ಬಿ. ಜಯಚಂದ್ರ ಭೇಟಿ, ಪರಿಶೀಲನೆ

Farooq Abdullah meets HD Devegowda
ಕರ್ನಾಟಕ47 mins ago

Farooq Abdullah: ಮಾಜಿ ಪಿಎಂ ದೇವೇಗೌಡ, ಸಿಎಂ ಸಿದ್ದರಾಮಯ್ಯ ಜತೆ ಫಾರೂಕ್‌ ಅಬ್ದುಲ್ಲಾ ʼಲೋಕಾʼಭಿರಾಮ!

Good Train Accident
ದೇಶ57 mins ago

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

BJP lose in karnataka
ಕರ್ನಾಟಕ57 mins ago

BJP Karnataka: ಸೋತು 25 ದಿನದ ನಂತರ ಅವಲೋಕನ ನಡೆಸಲಿದೆ ಬಿಜೆಪಿ!: ಗೆದ್ದ-ಸೋತವರ ಸಭೆ ಗುರುವಾರ

Kolhapur Protest
ದೇಶ1 hour ago

ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ16 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ17 mins ago

Abhishek Ambareesh Reception: ಅಭಿ- ಅವಿವಾ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ8 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ16 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!