Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ - Vistara News

ಕ್ರೀಡೆ

Hardik Pandya: ಬ್ರೇಕ್ ಅಪ್ ಕುರಿತು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Hardik Pandya: ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Hardik Pandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ನತಾಶಾ ರಹಸ್ಯ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಪೋಸ್ಟ್​ ನೋಡುವಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿದೆ.

ನತಾಶಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪಾಂಡ್ಯ ಹೆಸರನ್ನು ಮತ್ತು ಅವರ ಜತೆಗಿರುವ ಫೋಟೊವನ್ನು ಅಳಿಸಿಹಾಕಿದ ಬಳಿಕ ವಿಚ್ಛೇದನಕ್ಕೆ ಪಡೆಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಸದ್ಯ ಈ ವದಂತಿಗಳ ಬಗ್ಗೆ ಪಾಂಡ್ಯ ಅಥವಾ ನಾತಾಶಾ ಪ್ರತಿಕ್ರಿಯಿಸದಿದ್ದರೂ ಕೂಡ, ಶನಿವಾರ ರಾತ್ರಿ ನತಾಶಾ ಕುರಿಮರಿಯೊಂದಿಗೆ ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿದೆ. ಈ ಫೋಟೊವನ್ನು ಅವರು ತಮ್ಮ ಮುಂದಿನ ಜೀವನದ ಅರ್ಥ ಕಲ್ಪಿಸುವ ನಿಟ್ಟಿನಲ್ಲಿಯೇ ಹಾಕಿದಂತಿದೆ.


ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದಾರೆ. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ಇದನ್ನೂ ಓದಿ Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರು ಗರ್ಭಿಣಿ ಆಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Team India: ಬಾರ್ಬಡೋಸ್(Barbados) ಬೀಚ್​ನಲ್ಲಿ ವಿರಾಟ್​ ಕೊಹ್ಲಿ, ರಿಂಕು ಸಿಂಗ್​, ಯಶಸ್ವಿ ಜೈಸ್ವಾಲ್, ಚಹಲ್​, ಸಂಜು ಸ್ಯಾಮ್ಸನ್​, ಶಿವಂ ದುಬೆ, ಹಾರ್ದಿಕ್​ ಪಾಂಡ್ಯ ಸೇರಿ ಕೆಲ ಆಟಗಾರರು ಬೀಚ್​ ವಾಲಿಬಾಲ್​ ಆಡಿ ಎಂಜಾಯ್​ ಮಾಡಿದ್ದಾರೆ.

VISTARANEWS.COM


on

Team India
Koo

ಬಾರ್ಬಡೋಸ್: ಸೂಪರ್​-8 ಪಂದ್ಯವನ್ನಾಡಲು ವೆಸ್ಟ್ ಇಂಡೀಸ್​ ತಲುಪಿರುವ ಟೀಮ್​ ಇಂಡಿಯಾದ(Team India) ಆಟಗಾರರು ಪಂದ್ಯಕ್ಕೂ ಮುನ್ನ ಇಲ್ಲಿನ ಪ್ರಸಿದ್ಧ ಬಾರ್ಬಡೋಸ್(Barbados) ಬೀಚ್​ನಲ್ಲಿ ವಾಲಿಬಾಲ್​(Beach Volleyball) ಆಡಿ ಎಂಜಾಯ್​ ಮಾಡಿದ್ದಾರೆ. 2 ತಂಡಗಳಾಗಿ ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಶರ್ಟ್​ ಲೆಸ್​ ಆಗಿ ವಾಲಿಬಾಲ್​ ಆಡಿರುವ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

ವಿರಾಟ್​ ಕೊಹ್ಲಿ, ರಿಂಕು ಸಿಂಗ್​, ಯಶಸ್ವಿ ಜೈಸ್ವಾಲ್ ಸೇರಿ ಕೆಲ ಆಟಗಾರರು ಜತೆಯಾಗಿ ಆಡಿದರೆ, ಮತ್ತೊಂದು ತಂಡದಲ್ಲಿ ಚಹಲ್​, ಸಂಜು ಸ್ಯಾಮ್ಸನ್​, ಶಿವಂ ದುಬೆ, ಹಾರ್ದಿಕ್​ ಪಾಂಡ್ಯ ಆಡಿದ್ದಾರೆ. ಎಲ್ಲರು ಮೋಜು ಮಸ್ತಿ ಮಾಡಿ ಆಡುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.


ಲೀಗ್ ಹಂತದಲ್ಲಿ ಆಡಿದ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿರುವ ಭಾರತ ಸೂಪರ್-8ನಲ್ಲಿ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಿಲಿದೆ. ಕೆನಡಾ ವಿರುದ್ಧದ ಅಂತಿಮ ಲೀಗ್​ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಭಾರತಕ್ಕೆ ಮೂರು ಲೀಗ್​ ಪಂದ್ಯವನ್ನಾಡುವ ಅವಕಾಶ ಮಾತ್ರ ಲಭಿಸಿತ್ತು. ವಿರಾಟ್​ ಕೊಹ್ಲಿ ಆಡಿದ ಮೂರು ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗಿ ಘೋರ ಬ್ಯಾಟಿಂಗ್​ ವೈಫಲ್ಯ ಕಂಡಿದ್ದರು. ಇದರಲ್ಲೊಂದು ಗೋಲ್ಡನ್​ ಡಕ್​ ಕೂಡ ಒಳಗೊಂಡಿದೆ. ಮಹತ್ವದ ಸೂಪರ್​-8 ಸುತ್ತಿನ ಪಂದ್ಯದಲ್ಲಾದರೂ ಕೊಹ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗಬೇಕಿದೆ.

ಇದನ್ನೂ ಓದಿ Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್​ 20ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಬಾಂಗ್ಲಾದೇಶಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಕೊಹ್ಲಿ ವೈಫಲ್ಯಕ್ಕೆ ನಿಧಾನಗತಿ ಪಿಚ್ ಕಾರಣ!


ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

Continue Reading

ಕ್ರೀಡೆ

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

Euro 2024: 2022ರ ವಿಶ್ವಕಪ್​ನಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿದ್ದ ಬೆಲ್ಜಿಯಂ ಎಲ್ಲ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಯುರೋಪಿಯನ್ ಚಾಂಪಿಯನ್‌ಶಿಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ. ಸೋಮವಾರ ನಡೆಯುವ ಪಂದ್ಯದಲ್ಲಿ ಸ್ಲೋವಾಕಿಯಾ ವಿರುದ್ಧ ಆಡಲಿದೆ. ಇದು ಗ್ರೂಪ್ ‘ಇ’ ವಿಭಾಗದ ಮೊದಲ ಪಂದ್ಯವಾಗಿದೆ.

VISTARANEWS.COM


on

Euro 2024
Koo

ಮ್ಯೂನಿಚ್: ಯೊರೋ ಕಪ್​ನಲ್ಲಿ ಇಂದು (ಸೋಮವಾರ) 2 ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ರೊಮೇನಿಯಾ(Romania vs Ukraine) ಮತ್ತು ಉಕ್ರೇನ್ ಕಾದಾಟ ನಡೆಸಿದರೆ, ರಾತ್ರಿಯ ಪಂದ್ಯದಲ್ಲಿ ಬೆಲ್ಜಿಯಂ ಮತ್ತು ಸ್ಲೊವಾಕಿಯಾ(Belgium vs Slovakia) ಮುಖಾಮುಖಿಯಾಗಲಿವೆ.

ರೊಮೇನಿಯಾ ತಂಡದ ಪರ ಜಾರ್ಜ್ ಪುಸ್ಕಾಸ್, ಡೆನಿಸ್ ಡ್ರಾಗಸ್ ಮತ್ತು ಡೆನಿಸ್ ಅಲಿಬೆಕ್ ಮಧ್ಯೆ ಗೋಲು ಬಾರಿಸಲು ಜಿದ್ದಾಜಿದ್ದು ಏರ್ಪಡುವ ಸಾಧ್ಯತೆ ಇದೆ. ಯಾರು ಎಷ್ಟು ಗೋಲು ಬಾರಿಸಿ ಗೆಲುವಿನ ಹೀರೋ ಎನಿಸಿಕೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ. ಅನುಭವಿ ಗೋಲ್​ ಕೀಪರ್ ಫ್ಲೋರಿನ್ ನೀಟಾ ಕೂಡ ಕ್ಷಣ ಮಾತ್ರದಲ್ಲಿ ಗೋಲು ತಡೆದು ತಂಡಕ್ಕೆ ಅದೆಷ್ಟೋ ಗೆಲುವು ತಂದುಕೊಟ್ಟಿದ್ದಾರೆ. ಹೀಗಾಗಿ ಇವರು ಕೂಡ ಪಂದ್ಯದ ಪ್ರಮುಖ ಆಕರ್ಷಣೆ. ನಾಯಕ ನಿಕೋಲೇ ಸ್ಟಾನ್ಸಿಯು ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 14 ಗೋಲುಗಳನ್ನು ಬಾರಿಸಿದ ಸಾಧನೆ ಮಾಡಿದ್ದು ಈ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ.

ಎದುರಾಳಿ ಉಕ್ರೇನ್​ ಕೂಡ ಬಲಿಷ್ಠವಾಗಿ ಗೋಚರಿಸಿದೆ. ಆದರೆ ಸ್ಟಾರ್​ ಆಟಗಾರ ವಿಟಾಲಿ ಮೈಕೊಲೆಂಕೊ ಪಾದದ ಗಾಯದಿಂದಾಗಿ ಈ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಮೈಖೈಲೊ ಮುದ್ರಿಕ್ ಮತ್ತು ವಿಕ್ಟರ್ ತ್ಸೈಗಾಂಕೋವ್ ತಂಡದ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ. ಉಳಿದಂತೆ ಲಾ ಲಿಗಾ ಕೂಟದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಆರ್ಟೆಮ್ ಡೊವ್ಬಿಕ್ ಮೇಲು ತಂಡ ಹೆಚ್ಚಿನ ನಂಬಿಕೆ ಇರಿಸಿದೆ.

ಉಕ್ರೇನ್ ಇದುವರೆಗೆ ಯುರೋಸ್‌ನಲ್ಲಿ 11 ಪಂದ್ಯಗಳನ್ನು ಆಡಿ 8ರಲ್ಲಿ ಗೆಲುವು ಸಾಧಿಸಿದೆ. ರೊಮೇನಿಯಾ ತನ್ನ ಆರನೇ ಯುರೋಪಿಯನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದೆ, 2016ರಲ್ಲಿ ಮೊದಲ ಬಾರಿಗೆ ಈ ಟೂರ್ನಿಯಲ್ಲಿ ಆಡಿತ್ತು.

ಇದನ್ನೂ ಓದಿ Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

ಬೆಲ್ಜಿಯಂ ಸವಾಲಿಗೆ ಸ್ಲೊವಾಕಿಯಾ ಸಿದ್ಧ


2022ರ ವಿಶ್ವಕಪ್​ನಲ್ಲಿ ನಿರಾಶಾದಾಯಕ ಪ್ರದರ್ಶನ ತೋರಿದ್ದ ಬೆಲ್ಜಿಯಂ ಎಲ್ಲ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಯುರೋಪಿಯನ್ ಚಾಂಪಿಯನ್‌ಶಿಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ. ಸೋಮವಾರ ನಡೆಯುವ ಪಂದ್ಯದಲ್ಲಿ ಸ್ಲೋವಾಕಿಯಾ ವಿರುದ್ಧ ಆಡಲಿದೆ. ಇದು ಗ್ರೂಪ್ ‘ಇ’ ವಿಭಾಗದ ಮೊದಲ ಪಂದ್ಯವಾಗಿದೆ.

ಕರಾತ್​ನಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ಬೆಲ್ಜಿಯಂ ಮೊದಲ ಸುತ್ತಿನ ಪಂದ್ಯದಲ್ಲೇ ಸೋತು ಟೂರ್ನಿಯಿಂದ ಹೊರಬಿದಿತ್ತು. ಈ ವೇಳೆ ಅಭಿಮಾನಿಗಳು ತಂಡದ ಆಟಗಾರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಸೋಲಿನ ಬಳಿಕ ಹಲವು ಆಟಗಾರರನ್ನು ತಂಡದಿಂದ ಕೈಬಿಟ್ಟು ಹೊಸ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಾರಿ ತಂಡದಲ್ಲಿ ಹೊಸ ಪ್ರತಿಭೆಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ಕೋಚ್ ಡೊಮೆನಿಕೊ ಟೆಡೆಸ್ಕೊ ಅಧಿಕಾರ ವಹಿಸಿಕೊಂಡಾಗಿನಿಂದ ಬೆಲ್ಜಿಯಂ ತಂಡ ಆಡಿದ ಎಲ್ಲ ಪಂದ್ಯಗಳಲ್ಲಿ ಗೆದ್ದು ಅಜೇಯವಾಗಿದೆ.

Continue Reading

ಕ್ರೀಡೆ

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

MS Dhoni: ಕಳೆದ ವಾರವಷ್ಟೇ ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ. ಈ ಫೋಟೊ ಎಲ್ಲಡೆ ವೈರಲ್​ ಆಗಿತ್ತು. ಇದೀಗ ರಾಂಚಿಯಲ್ಲಿ ಅಭಿಮಾನಿಯೊಬ್ಬ ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ನಿಲ್ಲಿಸಿ ಅವರ ಜತೆ ಫೋಟೊ ತೆಗಿಸಿಕೊಂಡಿದ್ದಾನೆ.

VISTARANEWS.COM


on

MS Dhoni
Koo

ರಾಂಚಿ: ಐಪಿಎಲ್​ ಟೂರ್ನಿ ಮುಗಿಸಿ ಪ್ಯಾರಿಸ್​ ಪ್ರವಾಸ ಮಾಡಿದ್ದ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರು ಮತ್ತೆ ತವರಿಗೆ ವಾಪಸ್​ ಆಗಿದ್ದಾರೆ. ತವರಿಗೆ ಮರಳಿದ್ದೇ ತಡ ರಾಂಚಿಯಲ್ಲಿ ಧೋನಿ ತಮ್ಮ ಐಶಾರಾಮಿ ಮರ್ಸಿಡಿಸ್‌ ಬೆಂಜ್‌ ಕಾರಿನಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೊವನ್ನು ಧೋನಿ ಅವರ ಅಭಿಮಾನಿಯೊಬ್ಬ(ms dhoni fan) ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಇದೇ ವೇಳೆ ಧೋನಿ ಜತೆಗೆ ಈ ಅಭಿಮಾನಿ ಫೋಟೊ ಕೂಡ ತೆಗೆಸಿಕೊಂಡಿದ್ದಾರೆ.


ಕಳೆದ ವಾರವಷ್ಟೇ ಧೋನಿ ಅವರು ಪ್ಯಾರಿಸ್​ನ ಪ್ರವಾಸಿ ಸ್ಥಳವೊಂದಕ್ಕೆ ಭೇಟಿ ನೀಡಿದ ಸಂದರ್ಭ ಅವರ ಅಭಿಮಾನಿಯೊಬ್ಬ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ. ಈ ಫೋಟೊ ಎಲ್ಲಡೆ ವೈರಲ್​ ಆಗಿತ್ತು. ಇದೀಗ ರಾಂಚಿಯಲ್ಲಿ ಅಭಿಮಾನಿಯೊಬ್ಬ ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ನಿಲ್ಲಿಸಿ ಅವರ ಜತೆ ಫೋಟೊ ತೆಗಿಸಿಕೊಂಡಿದ್ದಾನೆ. ಈ ಫೊಟೊ ಕಂಡ ಧೋನಿ ಅಭಿಮಾನಿಗಳು ನೀವು ನಿಜವಾಗಿಯೂ ಅದೃಷ್ಟಶಾಲಿ ಎಂದು ಕಮೆಂಟ್‌ ಮಾಡಿದ್ದಾರೆ.

ಧೋನಿ(MS Dhoni) ಯಾವಾಗಲೂ ತಮ್ಮ ವ್ಯಕ್ತಿತ್ವದಿಂದ ಅವರ ಅಭಿಮಾನಿಗಳ ಹೃದಯವನ್ನು ಗೆಲ್ಲುತ್ತಾರೆ. ಹೀಗಾಗಿ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು(MS Dhoni Fan) ಹೊಂದಿದ್ದಾರೆ. ಅವರ ಭೇಟಿಗಾಗಿ ಅಭಿಮಾನಿಗಳು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಕೆಲ ಅಭಿಮಾನಿಗಳು ಧೋನಿಯನ್ನು ಭೇಟಿಯಾಗಿ ಅವರಿಗೆ ವಿಶೇಷ ಉಡುಗೊರೆಯನ್ನು ನೀಡುತ್ತಾರೆ. 

ಇದನ್ನೂ ಓದಿ MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್​ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿತ್ತು. ಆದರೆ ಧೋನಿ ಇದುವರೆಗೆ ತಮ್ಮ ನಿವೃತ್ತಿ ಪ್ರಕಟಿಸಿಲ್ಲ. ಮುಂದಿನ ಬಾರಿಯೂ ಅವರು ಆಡಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ.

ಆರ್​ಸಿಬಿ ವಿರುದ್ಧ ಸೋಲುವ ಮೂಲಕ ಚೆನ್ನೈ ಸೂಪರ್​ ಕಿಂಗ್ಸ್​(CSK) ತಂಡ 17ನೇ ಆವೃತ್ತಿಯ ಐಪಿಎಲ್​ನಿಂದ ಹೊರಬಿದ್ದಿತ್ತು. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಚೆನ್ನೈ 27 ರನ್​ಗಳ ಅಂತರದಿಂದ ಸೋಲು ಕಂಡಿತ್ತು. ಈ ಸೋಲಿನ ಮರು ದಿನವೇ ಧೋನಿ(MS Dhoni) ತಮ್ಮ ತವರಾದ ರಾಂಚಿಗೆ ಮರಳಿದ್ದರು. ತವರಿನಲ್ಲಿ ಬೈಕ್​ ರೈಡಿಂಗ್​ ಮಾಡಿದ್ದರು. ಅವರು ಬೈಕ್​ನಲ್ಲಿ ಸುತ್ತಾಡಿಕೊಂಡು ವಾಪಸ್​ ಮನೆಗೆ ಬರುತ್ತಿರುವ ವಿಡಿಯೊ ವೈರಲ್​ ಆಗಿತ್ತು.

ಧೋನಿ ತಮ್ಮ ಬೈಕ್ ಮತ್ತು ಕಾರ್​ಗಳನ್ನು ಇರಿಸಲು ತಮ್ಮ ಮನೆಯ ಪಕ್ಕದಲ್ಲಿ ದೊಡ್ಡ ಕಟ್ಟಡವನ್ನೇ ಹೊಂದಿದ್ದಾರೆ. ಕೆಳವು ದಿನಗಳ ಹಿಂದೆ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್​ನಲ್ಲಿರುವ ಬೈಕ್​(ms dhoni bike collection) ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಈ ಫಾರ್ಮ್​ಹೌಸ್​ನ ವಿಡಿಯೊ ವೈರಲ್​ ಆಗಿತ್ತು.

Continue Reading

ಕ್ರೀಡೆ

Sandeep Lamichhane: ಪಾಕ್​ ಆಟಗಾರನನ್ನು ಹಿಂದಿಕ್ಕಿ ಟಿ20 ಕ್ರಿಕೆಟ್​ನಲ್ಲಿ ದಾಖಲೆ ಬರೆದ ನೇಪಾಳ ಸ್ಪಿನ್ನರ್​

Sandeep Lamichhane: ನೇಪಾಳ ತಂಡದ ಪ್ರಮುಖ ಸ್ಪಿನ್ನರ್‌ ಸಂದೀಪ್‌ ಲಮಿಚಾನೆ(Sandeep Lamichhane) ಅವರು ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಪಂದ್ಯಗಳನ್ನಾಡಿ 100 ವಿಕೆಟ್​ ಕಿತ್ತ ವಿಶ್ವದ 2ನೇ ಬೌಲರ್​(fastest bowler to 100 T20I wickets) ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

VISTARANEWS.COM


on

Sandeep Lamichhane
Koo

ಕಿಂಗ್ಸ್‌ಟೌನ್‌: ಅತ್ಯಾಚಾರ ಪ್ರಕರಣ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ನಿರ್ದೋಷಿ ಎಂದು ಸಾಬೀತಾದ ಬಳಿಕ ಟಿ20 ವಿಶ್ವಕಪ್​ ಆಡಲಿಳಿದ ನೇಪಾಳ ತಂಡದ ಪ್ರಮುಖ ಸ್ಪಿನ್ನರ್‌ ಸಂದೀಪ್‌ ಲಮಿಚಾನೆ(Sandeep Lamichhane) ಅವರು ಟಿ20 ಕ್ರಿಕೆಟ್​ನಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಅತಿ ಕಡಿಮೆ ಪಂದ್ಯಗಳನ್ನಾಡಿ 100 ವಿಕೆಟ್​ ಕಿತ್ತ ವಿಶ್ವದ 2ನೇ ಬೌಲರ್​(fastest bowler to 100 T20I wickets) ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಸೋಮವಾರ ಬಾಂಗ್ಲಾದೇಶ(BAN vs NEP) ವಿರುದ್ಧದ ಟಿ20 ವಿಶ್ವಕಪ್​ ಲೀಗ್​ ಪಂದ್ಯದಲ್ಲಿ 2 ವಿಕೆಟ್​ ಪಡೆಯುವ ಮೂಲಕ ವೇಗವಾಗಿ 100 ವಿಕೆಟ್​ ಕಿತ್ತ ಮೈಲುಗಲ್ಲು ನಿರ್ಮಿಸಿದರು. ವಿಶ್ವ ದಾಖಲೆ ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಖಾನ್(Rashid Khan)​ ಹೆಸರಿನಲ್ಲಿದೆ. ರಶೀದ್​ 53 ಪಂದ್ಯಗಳಿಂದ 100 ವಿಕೆಟ್​ ಕಿತ್ತಿದ್ದಾರೆ. ಲಮಿಚಾನೆ 54 ಪಂದ್ಯ ಆಡಿ 100 ವಿಕೆಟ್​ ಪೂರ್ತಿಗೊಳಿಸಿದರು. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್‌ ಲಮಿಚಾನೆಗೆ ಯುಎಸ್‌ ವೀಸಾ ಲಭಿಸುವುದು ವಿಳಂಬವಾಗಿತ್ತು. ಹೀಗಾಗಿ ಅವರು ಆರಂಭಿಕ ಪಂದ್ಯಳಲ್ಲಿ ಆಡುವ ಅವಕಾಶ ಕಳೆದುಕೊಂಡರು.

ಟಿ20ಯಲ್ಲಿ ವೇಗವಾಗಿ 100 ವಿಕೆಟ್​ ಕಿತ್ತ ಬೌಲರ್​ಗಳು


ರಶೀದ್​ ಖಾನ್​-53 ಪಂದ್ಯ

ಸಂದೀಪ್‌ ಲಮಿಚಾನೆ-54 ಪಂದ್ಯ

ಹ್ಯಾರಿಸ್ ರೌಫ್- 71 ಪಂದ್ಯ

ಮಾರ್ಕ್ ಅಡೇರ್-72 ಪಂದ್ಯ

ಬಿಲಾಲ್ ಖಾನ್-72 ಪಂದ್ಯ

ಲಸಿತ್ ಮಾಲಿಂಗ-76 ಪಂದ್ಯ

ಸಂದೀಪ್‌ ಲಮಿಚಾನೆ ಅವರು 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೇ ವರ್ಷದ ಜನವರಿಯಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಲಮಿಚಾನೆಗೆ 8 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಶಿಶಿರ್ ರಾಜ್ ಧಾಕಲ್ ಅವರ ಪೀಠವು ವಿಚಾರಣೆಯ ಬಳಿಕ 8 ವರ್ಷಗಳ ಜೈಲು ಶಿಕ್ಷೆ, ಪರಿಹಾರ ಮತ್ತು ದಂಡದ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಸಂದೀಪ್ ಲಮಿಚಾನೆ ಹೈಕೋರ್ಟ್ ಮೆಟ್ಟಿಲ್ಲೇರಿದ್ದರು. ಮರು ವಿಚಾರಣೆ ನಡೆಸಿದ ನೇಪಾಳ ಹೈಕೋರ್ಟ್(Nepal High Court) ಕಳೆದ ತಿಂಗಳಷ್ಟೇ ಲಮಿಚಾನೆ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಿರಪರಾಧಿ ಎಂದು ಸಾಬೀತಾದ ನಂತರ ಸಂದೀಪ್ ಅವರಿಗೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ನೀಡಲಾಗಿತ್ತು.

ಇದನ್ನೂ ಒದಿ Euro 2024: ಗೆಲುವಿನ ಶುಭಾರಂಭ ಕಂಡ ಇಂಗ್ಲೆಂಡ್​; ರೋಚಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್

ಏನಿದು ಪ್ರಕರಣ?

2022ರಲ್ಲಿ ಲಾಮಿಚಾನೆ ವಿರುದ್ಧ ಹದಿಹರೆಯದ ಹುಡುಗಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಈ ಆರೋಪದ ಬಳಿಕ ಲಾಮಿಚಾನೆ ಬಂಧನ ಕೂಡ ಆಗಿತ್ತು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಕ್ರಿಕೆಟಿಗನ ಮೇಲೆ ಆರೋಪ ಹೊರಿಸಲಾಗಿತ್ತು.

2022ರಲ್ಲಿ ಲಾಮಿಚಾನೆ ಅವರು ವೆಸ್ಟ್​ ಇಂಡೀಸ್​ನಲ್ಲಿ ನಡೆಯುತ್ತಿದ್ದ ಕೆರಿಬಿಯನ್​ ಕ್ರಿಕೆಟ್​ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ವೇಳೆ ಅವರ ಮೇಲೆ ಅತ್ಯಾಚಾರದ ದೂರು ದಾಖಲಾಗಿತ್ತು. ತನಿಖೆಗೆ ಹಾಜರಾಗದ ಕಾರಣ ಅವರ ವಿರುದ್ಧ ಕೋರ್ಟ್​ ಜಾಮೀನು ರಹಿತ ವಾರಂಟ್​ ಹೊರಡಿಸಿತ್ತು. ಬಳಿಕ ಅವರು ತವರಿಗೆ ಮರಳಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಪಡಿಸಿಕೊಂಡು ಕೋರ್ಟ್​ಗೆ ಹಾಜರುಪಡಿಸಿದ್ದರು. ಕೆಳ ಹಂತದ ನ್ಯಾಯಾಲಯ ಲಾಮಿಚಾನೆಯನ್ನು ನ್ಯಾಯಾಂಗ ಬಂಧನದಲ್ಲಿ ಇಡುವಂತೆ ಆದೇಶಿಸಿತ್ತು. ಹೀಗಾಗಿ ಮೂರು ತಿಂಗಳು ಜೈಲಿನಲ್ಲಿದ್ದರು.

Continue Reading
Advertisement
Dawood Ibrahim
ವಿದೇಶ2 mins ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ3 mins ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು15 mins ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Job Recruitment
Latest16 mins ago

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Viral Video
Latest23 mins ago

Viral Video: ಯುಪಿಎಸ್‌ಸಿ ಪರೀಕ್ಷಾ ಕೇಂದ್ರಕ್ಕೆ ನೋ ಎಂಟ್ರಿ; ಗೇಟ್ ಬಳಿ ಮೂರ್ಛೆ ಹೋದ ತಾಯಿ!

Kannada New Movie RAMARASA Hero Introduction By Kiccha Sudeepa
ಸ್ಯಾಂಡಲ್ ವುಡ್29 mins ago

Kannada New Movie: ʻರಾಮರಸ’ಸಿನಿಮಾಗೆ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಹೀರೊ ; ಬೆಂಬಲಿಸಿದ ಸುದೀಪ್!

Eid Prayers
ದೇಶ31 mins ago

Eid Prayers: ಬಕ್ರೀದ್‌ ದಿನವೂ ಶ್ರೀನಗರದ ಜಾಮಾ ಮಸೀದಿಯಲ್ಲಿ ನಮಾಜ್‌ಗೆ ಭದ್ರತಾ ಸಿಬ್ಬಂದಿ ನಕಾರ; ಏಕೆ?‌

Road Accident
ಬೆಳಗಾವಿ32 mins ago

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

HPCL Job Interview
ಉದ್ಯೋಗ37 mins ago

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

Team India
ಕ್ರೀಡೆ57 mins ago

Team India: ಬಾರ್ಬಡೋಸ್​ನಲ್ಲಿ ಬೀಚ್​ ವಾಲಿಬಾಲ್​ ಆಡಿದ ಟೀಮ್​ ಇಂಡಿಯಾ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ23 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ24 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌