Haris Rauf: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ರೌಫ್​ಗೆ ಬೆಂಬಲ ಸೂಚಿಸಿದ ರಿಜ್ವಾನ್ - Vistara News

ಕ್ರೀಡೆ

Haris Rauf: ಅಭಿಮಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ರೌಫ್​ಗೆ ಬೆಂಬಲ ಸೂಚಿಸಿದ ರಿಜ್ವಾನ್

Haris Rauf: ರೌಫ್​ ಅವರು ಪತ್ನಿ ಜತೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ವೇಳೆ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದರು. ಇದಕ್ಕೆ ಸಿಟ್ಟಿನಿಂದ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಕೆಟ್ಟ ಪದಗಳಿಂದ ನಿಂದಿಸಿದ್ದರು. ಇದು ರೌಫ್​ ಅವರ ಪಿತ್ತ ನೆತ್ತಿಗೇರುವಂತೆ ಮಾಡಿತ್ತು.

VISTARANEWS.COM


on

Haris Rauf
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಫ್ಲೋರಿಡಾ: ಭಾರತೀಯನೆಂದು ಪಾಕಿಸ್ತಾನದ ಅಭಿಮಾನಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ ಪಾಕ್​ ವೇಗಿ ಹ್ಯಾರಿಸ್ ರೌಫ್(Haris Rauf)​ ವಿರುದ್ಧ ಭಾರೀ ಟಿಕೆ ವ್ಯಕ್ತವಾಗುತ್ತಿದ್ದರೂ ಕೂಡ ಸಹ ಆಟಗಾರ ಮೊಹಮ್ಮದ್​ ರಿಜ್ವಾನ್​(Mohammad Rizwan) ಅವರು ಬೆಂಬಲ ಸೂಚಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ರೌಫ್​ ಅವರನ್ನು ಸಮರ್ಥಿಸಿಕೊಂಡಿರುವ ರಿಜ್ವಾನ್​, “ರೌಫ್ ಅವರನ್ನು ಅಗೌರವಿಸಿದ ವ್ಯಕ್ತಿ ಪಾಕಿಸ್ತಾನದವನೋ ಅಥವಾ ಭಾರತದವನೋ ಎಂಬುದು ಅಪ್ರಸ್ತುತವಾಗಿದೆ. ಈ ವ್ಯಕ್ತಿಗೆ ಮೌಲ್ಯಗಳು ಮತ್ತು ನಡವಳಿಕೆಯ ಕೊರತೆಯಿದೆ. ಯಾವುದೇ ವ್ಯಕ್ತಿಯನ್ನು ವಿಶೇಷವಾಗಿ ಅವರ ಕುಟುಂಬದ ಸದಸ್ಯರ ಮುಂದೆ ಅಗೌರವಿಸುವ ಹಕ್ಕು ಯಾರಿಗೂ ಇಲ್ಲ. ಸಹನೆ, ಗೌರವ ಮತ್ತು ಸಹಾನುಭೂತಿಯಂತಹ ಮೌಲ್ಯಗಳು ಇರಬೇಕು” ಎಂದು ಹೇಳುವ ಮೂಲಕ ರೌಫ್ ಅವರ ಪರ ಬ್ಯಾಟ್​ ಬೀಸಿದ್ದಾರೆ. ರಿಜ್ವಾನ್​ ಮಾತ್ರವಲ್ಲದೆ ಪಾಕಿಸ್ತಾನ ಕೆಲ ಆಟಗಾರರು ಕೂಡ ರೌಫ್​ ಬೆಂಬಲಕ್ಕೆ ನಿಂತಿದ್ದಾರೆ.


ಏನಿದು ಘಟನೆ?


ಈಗಾಗಲೇ ಟಿ20 ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದಿರುವ ಪಾಕಿಸ್ತಾನ ತಂಡದ ಆಟಗಾರರು ಫ್ಲೋರಿಡಾದಲ್ಲಿ ಕೆಲ ದಿನಗಳ ಕಾಲ ಎಂಜಾಯ್​ ಮಾಡಲಿದ್ದಾರೆ. ಹ್ಯಾರಿಸ್ ರೌಫ್ ಕೂಡ ತಮ್ಮ ಪತ್ನಿ ಜತೆ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಕಾಲ ಕಳೆಯುತ್ತಿದ್ದಾರೆ. ಆದರೆ, ಮಂಗಳವಾರದಂದು ಹ್ಯಾರಿಸ್ ರೌಫ್(Haris Rauf) ಅವರು ಫ್ಲೋರಿಡಾದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಲು ಮುಂದಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(Viral Video)​ ಆಗಿತ್ತು.

ರೌಫ್​ ಅವರು ಪತ್ನಿ ಜತೆ ತಾವು ತಂಗಿದ್ದ ಹೋಟೆಲ್​ಗೆ ಹೋಗುತ್ತಿದ್ದಾಗ ವೇಳೆ ಅಭಿಮಾನಿಯೊಬ್ಬ ನಿಮ್ಮ ಜತೆಗೊಂದು ಫೋಟೊ ಬೇಕಿತ್ತು ಎಂದು ಕೇಳಿದ್ದ. ಈ ವೇಳೆ ರೌಫ್​, ನೀನು ಭಾರತೀಯನಾಗಿರಬೇಕು ಎಂದು ಹೇಳಿದ್ದರು. ಇದಕ್ಕೆ ಸಿಟ್ಟಿನಿಂದ ಉತ್ತರಿಸಿದ ಅಭಿಮಾನಿ ನಾನು ಕೂಡ ಪಾಕಿಸ್ತಾನ ಮೂಲದವನೇ ಎಂದು ಹೇಳಿ ಬಳಿಕ ಏನೋ ಕೆಟ್ಟ ಪದಗಳಿಂದ ನಿಂದಿಸಿದ್ದರು. ಇದು ರೌಫ್​ ಅವರ ಪಿತ್ತ ನೆತ್ತಿಗೇರುವಂತೆ ಮಾಡಿತ್ತು.

ಇದನ್ನೂ ಓದಿ IND vs AFG: ಈ ಬಾರಿಯಾದರೂ ಭಾರತದ ಪಾಲಿಗೆ ಲಕ್ಕಿಯಾಗಲಿ ವಿಂಡೀಸ್​ ನೆಲ; ಹಿಂದಿನ 2 ವಿಶ್ವಕಪ್​ನಲ್ಲಿ ಏನಾಗಿತ್ತು?

ಅಭಿಮಾನಿಯ ಮಾತಿನಿಂದ ಸಿಟ್ಟುಗೊಂಡ ರೌಫ್​ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಪತ್ನಿ ರೌಫ್​ ಅವರನ್ನು ಹಿಡಿದು ನಿಲ್ಲಿಸುವ ಪ್ರಯತ್ನ ಪಟ್ಟರೂ ಕೂಡ ರೌಫ್​ ತಪ್ಪಿಸಿಕೊಂಡು ಹಲ್ಲೆಗೆ ಮುಂದಾದರು. ತಕ್ಷಣ ರೌಫ್​ ಅವರ ಮ್ಯಾನೇಜರ್​ ಹಾಗು ಕೆಲ ಸಿಬ್ಬಂದಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಪತ್ನಿ ಕೂಡ ಅವರ ಕೈಗಳನ್ನು ಹಿಡಿದು ಹಲ್ಲೆ ಮಾಡದಂತೆ ಮನವಿ ಮಾಡುತ್ತಲೇ ಅವರನ್ನು ಸಮಾಧಾನ ಪಡೆಸಿದ್ದರು. ಈ ಎಲ್ಲ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Ollie Robinson: ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ಗೆ 43 ರನ್‌ ಕೊಟ್ಟಿದ್ದಾರೆ. ಸಸೆಕ್ಸ್‌ ಪರವಾಗಿ ಬೌಲಿಂಗ್‌ ಮಾಡುತ್ತಿರುವಾಗ ಒಂದೇ ಓವರ್‌ನಲ್ಲಿ ಐದು ಸಿಕ್ಸರ್‌ಗಳು (3 ನೋಬಾಲ್‌ಗಳಿಗೆ ಸಿಕ್ಸರ್)‌, ಮೂರು ಬೌಂಡರಿ ಹಾಗೂ ಒಂದು ಸಿಂಗಲ್‌ ರನ್‌ ಬಿಟ್ಟುಕೊಂಡಿದ್ದಾರೆ. ಇದು ಪ್ರಥಮ ದರ್ಜೆ ಕ್ರಿಕೆಟ್‌ ಪಂದ್ಯಗಳಲ್ಲಿಯೇ ಜಗತ್ತಿನಲ್ಲಿ ಎರಡನೇ ದುಬಾರಿ ಓವರ್‌ ಎನಿಸಿದೆ.

VISTARANEWS.COM


on

ollie robinson
Koo

ಲಂಡನ್‌: ಎಂತಹದ್ದೇ ಕೆಟ್ಟ ಬೌಲರ್‌ ಆದರೂ, ಎಂತಹ ಕೆಟ್ಟ ಎಸೆತಗಳನ್ನೇ ಎಸೆದರೂ, ಒಬ್ಬ ಬೌಲರ್‌ ಒಂದು ಓವರ್‌ನಲ್ಲಿ ಎಷ್ಟು ರನ್‌ ಬಿಟ್ಟುಕೊಡಲು ಸಾಧ್ಯ? ಆರಕ್ಕೆ ಆರು ಎಸೆತಗಳಿಗೆ ಸಿಕ್ಸರ್‌ ಬಾರಿಸಿದರೂ ಗರಿಷ್ಠ 36 ರನ್‌ ಬಿಟ್ಟುಕೊಡಬಹುದು. ಭಾರತದ ಯುವರಾಜ್‌ ಸಿಂಗ್‌ (Yuvraj Singh) ಸೇರಿ ಜಗತ್ತಿನಲ್ಲಿ ಕೆಲವೇ ಕೆಲವು ಬ್ಯಾಟ್ಸ್‌ಮನ್‌ಗಳು ಮಾತ್ರ ಒಂದೇ ಓವರ್‌ನ ಆರಕ್ಕೆ ಆರೂ ಎಸೆತಗಳನ್ನು ಸಿಕ್ಸರ್‌ಗೆ ಅಟ್ಟಿದ್ದಾರೆ. ಆದರೆ, ಇಂಗ್ಲೆಂಡ್‌ನ ವೇಗದ ಬೌಲರ್‌ ಒಲೀ ರಾಬಿನ್‌ಸನ್‌ (Ollie Robinson) ಅವರು ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಅನಗತ್ಯ ದಾಖಲೆ ಬರೆದಿದ್ದಾರೆ.

ಹೌದು, ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ಗೆ 43 ರನ್‌ ಕೊಟ್ಟಿದ್ದಾರೆ. ಸಸೆಕ್ಸ್‌ ಪರವಾಗಿ ಬೌಲಿಂಗ್‌ ಮಾಡುತ್ತಿರುವಾಗ ಒಂದೇ ಓವರ್‌ನಲ್ಲಿ ಐದು ಸಿಕ್ಸರ್‌ಗಳು (3 ನೋಬಾಲ್‌ಗಳಿಗೆ ಸಿಕ್ಸರ್)‌, ಮೂರು ಬೌಂಡರಿ ಹಾಗೂ ಒಂದು ಸಿಂಗಲ್‌ ರನ್‌ ಬಿಟ್ಟುಕೊಂಡಿದ್ದಾರೆ. ಲೀಸೆಸ್ಟರ್‌ಶೈರ್‌ ತಂಡದ ಲೂಯಿಸ್‌ ಕಿಂಬರ್‌ ಅವರು ಐದು ಸಿಕ್ಸರ್‌ ಹಾಗೂ ಮೂರು ಬೌಂಡರಿ ಬಾರಿಸುವ ಮೂಲಕ ವಿಶಿಷ್ಟ ದಾಖಲೆ ಬರೆದಿದ್ದಾರೆ.

ಒಲೀ ರಾಬಿನ್‌ಸನ್‌ ಎಸೆದ ಮೊದಲ ಎಸೆತವನ್ನು ಲೂಯಿಸ್‌ ಕಿಂಬರ್‌ ಸಿಕ್ಸರ್‌ಗೆ ಅಟ್ಟಿದರು. ಎರಡನೇ ಎಸೆತವು ನೋ ಬಾಲ್‌ ಆದರೆ, ಅದಕ್ಕೂ ಸಿಕ್ಸರ್‌ ಬಾರಿಸಿದರು. ನಂತರ ಬೌಂಡರಿ, ಸಿಕ್ಸರ್‌, ಬೌಂಡರಿ, ಸಿಕ್ಸರ್‌ (ನೋ ಬಾಲ್)‌, ಬೌಂಡರಿ, ಸಿಕ್ಸರ್‌ (ನೋ ಬಾಲ್)‌ ಹಾಗೂ ಕೊನೆಯ ಎಸೆತದಲ್ಲಿ ಒಂದು ರನ್‌ ಬಾರಿಸಿದರು. 30 ವರ್ಷದ ರಾಬಿನ್‌ಸನ್‌ ಅವರು ಇಂಗ್ಲೆಂಡ್‌ ಪರವಾಗಿ 20 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, ಸಾಕಷ್ಟು ಅನುಭವ ಇದ್ದರೂ ಒಂದೇ ಒಂದು ಡಾಟ್‌ ಬಾಲ್‌ ಎಸೆಯಲು ಆಗಲಿಲ್ಲ.

2ನೇ ಅತಿ ದುಬಾರಿ ಓವರ್‌‌

ಒಲೀ ರಾಬಿನ್‌ಸನ್‌ ಅವರು ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಪ್ರಥಮ ದರ್ಜೆ ಇತಿಹಾಸದಲ್ಲಿಯೇ ಎರಡನೇ ಅತಿ ದುಬಾರಿ ಓವರ್‌ ಎಸೆದ ಬೌಲರ್‌ ಎನಿಸಿದರು. 1990ರಲ್ಲಿ ನ್ಯೂಜಿಲ್ಯಾಂಡ್‌ನ ಬರ್ಟ್‌ ವ್ಯಾನ್ಸ್‌ ಅವರು ಶೆಲ್‌ ಟ್ರೋಫಿ ಪಂದ್ಯದಲ್ಲಿ 77 ರನ್‌ಗಳನ್ನು ಬಿಟ್ಟುಕೊಟ್ಟಿದ್ದು ಇತಿಹಾಸವಾಗಿದೆ. 1998ರಲ್ಲಿ ಇಂಗ್ಲೆಂಡ್‌ನ ಅಲೆಕ್ಸ್‌ ಟುಡೋರ್‌ ಅವರು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯದಲ್ಲಿ ‌38 ರನ್‌ ಬಿಟ್ಟುಕೊಟ್ಟಿದ್ದು ಇದುವರೆಗಿನ ಎರಡನೇ ದಾಖಲೆ ಆಗಿತ್ತು. ಈಗ ಆ ಅನಗತ್ಯ ದಾಖಲೆಯು ಒಲೀ ರಾಬಿನ್‌ಸನ್‌ ಅವರದ್ದಾಗಿದೆ.

ಇದನ್ನೂ ಓದಿ: WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

Continue Reading

ಕ್ರೀಡೆ

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Rohit Sharma: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ರೋಹಿತ್,​ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕೇವಲ 4 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಲಿದ್ದಾರೆ.

VISTARANEWS.COM


on

Rohit Sharma
Koo


ಪ್ರೊವಿಡೆನ್ಸ್‌: ಭಾರತ ತಂಡ ನಾಳೆ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಇಂಗ್ಲೆಂಡ್​ ವಿರುದ್ಧ(IND vs ENG Semi Final) ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಟೀಮ್​ ಇಂಡಿಯಾ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರಿಗೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಸುವರ್ಣಾವಕಾಶವೊಂದಿದೆ.

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ರೋಹಿತ್,​ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕೇವಲ 4 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಲಿದ್ದಾರೆ. ಈ ಮೂಲಕ ಶ್ರೀಲಂಕಾದ ಮಾಜಿ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ದಾಖಲೆಯನ್ನು ಮುರಿಯಲಿದ್ದಾರೆ. ಮಹೇಲ ಜಯವರ್ಧನೆ 111 ಬೌಂಡರಿ ಬಾರಿಸಿದ್ದಾರೆ. ರೋಹಿತ್​ ಸದ್ಯ 107* ಬೌಂಡರಿ ಬಾರಿಸಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು.

ಇದನ್ನೂ ಓದಿ IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

ರೇಸ್​ನಲ್ಲಿ ಕೊಹ್ಲಿ


ಮಹೇಲ ಜಯವರ್ಧನೆ ಅವರ ಈ ದಾಖಲೆಯನ್ನು ಮುರಿಯಲು ಮೊದಲು ಅವಕಾಶವಿದದ್ದು ವಿರಾಟ್​ ಕೊಹ್ಲಿಗೆ. ಆದರೆ ಅವರು ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾದ ಕಾರಣ ಈ ದಾಖಲೆ ಮುರಿಯಲು ಸಾಧ್ಯವಾಗಲಿಲ್ಲ. ಈ ಸಾಧಕರ ಪಟ್ಟಿಯಲ್ಲಿ 2ನೇ ಸ್ಥಾನಿಯಾಗಿದ್ದ ಕೊಹ್ಲಿಯನ್ನು(Virat Kohli) ಹಿಂದಿಕ್ಕಿ ರೋಹಿತ್​ ಮುಂದೆ ಸಾಗಿದ್ದಾರೆ. ಕೊಹ್ಲಿ ಸದ್ಯ 105* ಬೌಂಡರಿಯೊಂದಿಗೆ ಮೂರನೇ ಸ್ಥಾನಿಯಾಗಿದ್ದಾರೆ. ಸದ್ಯ ಜಯವರ್ಧನೆ ದಾಖಲೆ ಮುರಿಯಲು ಕೊಹ್ಲಿ ಮತ್ತು ರೋಹಿತ್​ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಅತ್ಯಧಿಕ ಬೌಂಡರಿ ಬಾರಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ರೋಹಿತ್​ ಶರ್ಮ​ಭಾರತ45107*
ವಿರಾಟ್​​ ಕೊಹ್ಲಿಭಾರತ33105
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ41101
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಜಾಸ್​ ಬಟ್ಲರ್​ಇಂಗ್ಲೆಂಡ್3487*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಶಕೀಬ್​ ಅಲ್​ ಹಸನ್​ಬಾಂಗ್ಲಾದೇಶ​4374*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್2971*
ಬ್ರೆಂಡನ್​ ಮೆಕಲಮ್​ನ್ಯೂಜಿಲ್ಯಾಂಡ್2567

ಗೆದ್ದು ಬಾ ಭಾರತ…


ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

Continue Reading

ಕ್ರೀಡೆ

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

Yusuf Pathan: ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು.

VISTARANEWS.COM


on

Koo

ನವದೆಹಲಿ: ಪಶ್ಚಿಮ ಬಂಗಾಳದ ಬರ್ಹಾಂಪೋರ್‌ ಲೋಕಸಭಾ ಕ್ಷೇತ್ರದ ಟಿಎಂಸಿ ಸಂಸದ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್(Yusuf Pathan) ಅವರು ಬುಧವಾರ 18ನೇ ಲೋಕಸಭೆ(Loksabha)ಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಹಿಂದ್‌, ಜೈ​ ಗುಜರಾತ್​, ಜೈ ಬಂಗಾಳ​ ಎಂದು ಘೋಷಣೆ ಕೂಗಿದರು.

ಯೂಸುಫ್ ಪಠಾಣ್ ಮುಸ್ಲಿಂ ಸಮುದಾಯದವರಾಗಿದ್ದರೂ ಕೂಡ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಅಚ್ಚರಿಗೆ ಕಾರಣವಾಗಿದ್ದು, ಕೆಲ ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

ಇದನ್ನೂ ಓದಿ Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.

ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Continue Reading

ಕ್ರೀಡೆ

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

IND vs ENG Semi Final: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

VISTARANEWS.COM


on

IND vs ENG Semi Final
Koo

ಪ್ರೊವಿಡೆನ್ಸ್‌: ಕ್ರಿಕೆಟ್​ ಅಭಿಮಾನಿಗಳು ಭಾರೀ ನಿರೀಕ್ಷೆಯೊಂದಿಗೆ ಕಾದು ಕುಳಿತಿರುವ ಭಾರತ ಮತ್ತು ಇಂಗ್ಲೆಂಡ್​ ನಡುವಣ ಹೈವೋಲ್ಟೇಜ್ ಸೆಮಿಫೈನಲ್(IND vs ENG Semi Final)​​ ಪಂದ್ಯ ನಾಳೆ (ಗುರುವಾರ) ಗಯಾನದ (Guyana) ಪ್ರೊವಿಡೆನ್ಸ್‌(Providence Stadium) ಸ್ಟೇಡಿಯಂನಲ್ಲಿ ನಡೆಯಲಿದೆ. ಇತ್ತಂಡಗಳ ಇದುವರೆಗಿನ ಟಿ20 ಮುಖಾಮುಖಿ, ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಮಾಹಿತಿ ಹೀಗಿದೆ.

ಟಿ20 ಮುಖಾಮುಖಿ


ಭಾರತ ಮತ್ತು ಇಂಗ್ಲೆಂಡ್​ ಇದುವರೆಗೆ ಟಿ20 ಕ್ರಿಕೆಟ್​ನಲ್ಲಿ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 12 ಪಂದ್ಯ ಗೆದ್ದಿದ್ದರೆ, ಇಂಗ್ಲೆಂಡ್​ 11 ಪಂದ್ಯಗಳನ್ನು ಗೆದ್ದಿದೆ. ಕಳೆದ 2 ವರ್ಷಗಳಿಂದ ಇಂಗ್ಲೆಂಡ್​ ವಿರುದ್ಧ ಭಾರತ ಗೆಲುವು ಕಂಡಿಲ್ಲ. 2022ರ ಟಿ20 ವಿಶ್ವಕಪ್(T20 World Cup 2024)​ ಸೆಮಿಫೈನಲ್​ ಪಂದ್ಯದ ಬಳಿಕ ಉಭಯ ತಂಡಗಳು ಇದುವರೆಗೂ ಟಿ20ಯಲ್ಲಿ ಮುಖಾಮುಖಿಯಾಗಿಲ್ಲ. ಆ ಪಂದ್ಯದಲ್ಲಿ ಭಾರತ 10 ವಿಕೆಟ್​ ಸೋಲು ಕಂಡಿತ್ತು. ಅಂದಿನ ಸೋಲಿಗೆ ಈ ಬಾರಿಯ ಸೆಮಿ ಕಾದಾಟದಲ್ಲಿ ಭಾರತ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇತ್ತಂಡಗಳು 4 ಪಂದ್ಯಗಳನ್ನು ಆಡಿ ತಲಾ 2 ಪಂದ್ಯಗಳಲ್ಲಿ ಗೆಲುವು ಮತ್ತು ಸೋಲು ಕಂಡಿವೆ. ಭಾರತ ಕೊನೆಯ ಬಾರಿಗೆ ಇಂಗ್ಲೆಂಡ್​ ವಿರುದ್ಧ ಟಿ20 ಗೆಲುವು ಕಂಡಿದ್ದು 2012ರಲ್ಲಿ. ಆ ಪಂದ್ಯದಲ್ಲಿ ಧೋನಿ ಪಡೆ 90 ರನ್​ ಗೆಲುವು ಸಾಧಿಸಿತ್ತು.

ಇದನ್ನೂ ಓದಿ IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

ಪಿಚ್​ ರಿಪೋರ್ಟ್​


ಪ್ರಾವಿಡೆನ್ಸ್ ಸ್ಟೇಡಿಯಂನ ಪಿಚ್​ ಬೌಲಿಂಗ್​ಗೆ ಹೆಚ್ಚಿನ ನೆರವು ನೀಡುತ್ತದೆ. ಪಂದ್ಯ ಸಾಗಿದಂತೆ ಇಲ್ಲಿ ಹೆಚ್ಚಾಗಿ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಲಿದ್ದಾರೆ. ದೊಡ್ಡ ಮೊತ್ತ ಬಾರಿಸುವುದು ಇಲ್ಲಿ ಅಷ್ಟು ಸುಲಭವಲ್ಲ. 2010ರಲ್ಲಿ 191 ರನ್ ದಾಖಲಾದದ್ದೆ ಇಲ್ಲಿನ ಗರಿಷ್ಠ ಸ್ಕೋರ್​. ಹೀಗಾಗಿ ನಾಳಿನ ಪಂದ್ಯ ಕೂಡ ಲೋ ಸ್ಕೋರ್​ ಆಗುವ ಸಾಧ್ಯತೆ ಅಧಿಕವಾಗಿದೆ.

ಹವಾಮಾನ ವರದಿ


ಈಗಾಗಲೇ ಹವಾಮಾನ ಇಲಾಖೆ ಈ ಪಂದ್ಯಕ್ಕೆ ಭಾರೀ ಮಳೆ ಎಚ್ಚರಿಕೆ ನೋಡಿದ್ದು, ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ತಿಳಿಸಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಅಚ್ಚರಿ ಎಂದರೆ ಈ ಪಂದ್ಯಕ್ಕೆ ಮೀಸಲು ದಿನ ಕೂಡ ಇಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಸಂಭಾವ್ಯ ತಂಡಗಳು


ಭಾರತ:
ರೋಹಿತ್​ ಶರ್ಮ(ನಾಯಕ), ವಿರಾಟ್ ಕೊಹ್ಲಿ, ರಿಷಭ್​ ಪಂತ್​(ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

ಇಂಗ್ಲೆಂಡ್​: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

Continue Reading
Advertisement
murder case anekal
ಕ್ರೈಂ21 mins ago

Murder Case: ಬಾರ್‌ನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

lk advani
ಪ್ರಮುಖ ಸುದ್ದಿ43 mins ago

LK Advani: ಮಾಜಿ ಉಪ ಪ್ರಧಾನಿ ಎಲ್‌ ಕೆ ಆಡ್ವಾಣಿ ಅಸ್ವಸ್ಥ, ಏಮ್ಸ್‌ಗೆ ದಾಖಲು

Smoking Effects
ಆರೋಗ್ಯ53 mins ago

Smoking Effects: ಮಹಿಳೆಯರೇ, ಧೂಮಪಾನದಿಂದ ನಿಮ್ಮ ಆರೋಗ್ಯದ ಮೇಲಾಗುವ ಪರಿಣಾಮದ ಅರಿವಿದೆಯೇ?

Vastu Tips
ಧಾರ್ಮಿಕ1 hour ago

Vastu Tips: ಬಾತ್ ರೂಮ್‌ನಲ್ಲಿ ಈ ವಸ್ತುಗಳಿದ್ದರೆ ಕುಟುಂಬಕ್ಕೆ ಭಾರಿ ಸಂಕಷ್ಟ!

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಈ ರಾಶಿಯವರು ತಮಗೆ ಸಂಬಂಧಪಡದ ವಿಷಯದಲ್ಲಿ ಮೂಗು ತೂರಿಸುವುದು ಬೇಡ!

ollie robinson
ಪ್ರಮುಖ ಸುದ್ದಿ8 hours ago

Ollie Robinson: 6, 6nb, 4, 6, 4, 6nb, 4, 6nb, 1; ಒಂದೇ ಓವರ್‌ನಲ್ಲಿ 43 ರನ್‌ ಕೊಟ್ಟ ಇಂಗ್ಲೆಂಡ್‌ ಬೌಲರ್; Video ಇದೆ

Serial Bride
ದೇಶ9 hours ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ9 hours ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ10 hours ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌