Harmanpreet : ಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ನಾಯಕಿ ಹರ್ಮನ್​ಪ್ರೀತ್​ ಕೌರ್, ಕೋಚ್ ಅನ್ಮೋಲ್​ - Vistara News

ಕ್ರಿಕೆಟ್

Harmanpreet : ಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ನಾಯಕಿ ಹರ್ಮನ್​ಪ್ರೀತ್​ ಕೌರ್, ಕೋಚ್ ಅನ್ಮೋಲ್​

VISTARANEWS.COM


on

Harmanpreet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲುವಿನ ನಂತರ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್​ ಕೌರ್, ಭಾರತ ಮಹಿಳಾ ತಂಡದ ಹೆಡ್​​ ಕೋಚ್ ಅಮೋಲ್ ಮಜುಂದಾರ್ ಮತ್ತು ಫೀಲ್ಡಿಂಗ್ ಕೋಚ್ ಮುನೀಶ್ ಬಾಲಿ ಮಂಗಳವಾರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಅಮೋಲ್ ಮತ್ತು ಬಾಲಿ ಅವರೊಂದಿಗೆ ಹರ್ಮನ್ಪ್ರೀತ್ ಅವರ ಚಿತ್ರವು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​ನಲ್ಲಿ ವೈರಲ್ ಆಗಿದೆ. ವಿಶೇಷವೆಂದರೆ, ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಕಳೆದ ವಾರ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಿದೆ.

ಇದನ್ನೂ ಓದಿ : Shakib al hasan : ಶಕಿಬ್​ ಲಂಕಾಗೆ ಬಂದರೆ ಕಲ್ಲೇಟು ಗ್ಯಾರಂಟಿ; ಬಾಂಗ್ಲಾ ನಾಯಕನಿಗೆ ಎಚ್ಚರಿಕೆ

2014ರ ಬಳಿಕ ತವರು ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ 347 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ವುಮೆನ್ ಇನ್ ಬ್ಲೂ ಆಸ್ಟ್ರೇಲಿಯಾವನ್ನು 8 ವಿಕೆಟ್ ಗಳಿಂದ ಸೋಲಿಸಿ ಮತ್ತೊಂದು ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಭಾರತೀಯ ಮಹಿಳಾ ತಂಡ ಈಗ ವೈಟ್ ಬಾಲ್ ಸ್ವರೂಪದತ್ತ ಗಮನ ಹರಿಸಲಿದೆ.

ಭಾರತೀಯ ಮಹಿಳೆಯರ ಚಾರಿತ್ರಿಕ ಸಾಧನೆ

ಮುಂಬಯಿ: ಭಾರತದ ಕ್ರಿಕೆಟ್​ ಕ್ಷೇತ್ರದಲ್ಲಿ ಇತಿಹಾಸವೊಂದು ಸೃಷ್ಟಿಯಾಗಿದೆ. ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ (Ind vs Aus ) ಟೆಸ್ಟ್ ಪಂದ್ಯದಲ್ಲಿ ಮೊದಲ ಬಾರಿ ಗೆಲುವು ಸಾಧಿಸಿದೆ. ಭಾರತದ ಪಾಲಿಗೆ ಇದು ಮೊದಲ ಸರಣಿ ಗೆಲವು ಕೂಡ ಹೌದು. ಇದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ದಿನವಾಗಲಿದೆ. ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾವು ಅಲಿಸಾ ಹೀಲಿ ನೇತೃತ್ವದ ತಂಡವನ್ನು 8 ವಿಕೆಟ್​ಗಳಿಂದ ಹೀನಾಯವಾಗಿ ಸೋಲಿಸುವ ಮೂಲಕ ಈ ಕೀರ್ತಿ ತನ್ನದಾಗಿಸಿಕೊಂಡಿದೆ. ಪಂದ್ಯದ ಆರಂಭದಿಂದಲೂ ಮೇಲುಗೈ ಸಾಧಿಸಿಕೊಂಡು ಬಂದಿದ್ದ ಭಾರತೀಯ ಪಡೆ ಪಂದ್ಯದ ನಾಲ್ಕನೇ ದಿನ ಗೆಲುವ ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಈ ಮೊದಲ ಗೆಲುವಿಗೂ ಮುನ್ನ ಭಾರತ ಮಹಿಳಾ ಕ್ರಿಕೆಟ್ ತಂಡ ಆಸೀಸ್ ವಿರುದ್ಧ 10 ಪಂದ್ಯಗಳನ್ನು ಆಡಿತ್ತು. 6ರಲ್ಲಿ ಸೋಲು ಮತ್ತು 4ರಲ್ಲಿ ಡ್ರಾ ಮಾಡಿಕೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

ICC Men’s Test Team Rankings: ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ.

VISTARANEWS.COM


on

icc men's test team rankings
Koo

ದುಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ಐಸಿಸಿ(ICC Men’s Test Team Rankings) ವಾರ್ಷಿಕ ಪರಿಷ್ಕರಣೆ ಮಾಡಿದ್ದು, ಈ ಮೊದಲು ಅಗ್ರಸ್ಥಾನದಲ್ಲಿದ್ದ ಭಾರತ ಒಂದು ಸ್ಥಾನಗಳ ಕುಸಿತ ಕಂಡು ಎರಡನೇ ಸ್ಥಾನಕ್ಕೆ ಜಾರಿದೆ. ಎರಡನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಮೊದಲ ಸ್ಥಾನಕ್ಕೇರಿದೆ. ಇಂಗ್ಲೆಂಡ್ (105), ದಕ್ಷಿಣ ಆಫ್ರಿಕಾ (103), ನ್ಯೂಜಿಲ್ಯಾಂಡ್​ (96), ಪಾಕಿಸ್ತಾನ (89), ಶ್ರೀಲಂಕಾ (83), ವೆಸ್ಟ್ ಇಂಡೀಸ್ (82) ಮತ್ತು ಬಾಂಗ್ಲಾದೇಶ (53) ಈ ಹಿಂದಿನ ಸ್ಥಾನದಲ್ಲೇ ಮುಂದುವರಿದೆ.

ನೂತನ ಶ್ರೇಯಾಂಕ ಪಟ್ಟಿ ಪ್ರಕಾರ ಆಸ್ಟ್ರೇಲಿಯಾ 124 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಭಾರತ 120 ಅಂಕದೊಂದಿದೆ 2ನೇ ಸ್ಥಾನಿಯಾಗಿದೆ. ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ. ಈ ನೂತನ ಶ್ರೇಯಾಂಕಗಳ ನವೀಕರಣವು ಮೇ 2021 ರ ನಂತರ ತಂಡಗಳ ಪ್ರದರ್ಶನಗಳನ್ನು ಪರಿಗಣಿಸುತ್ತದೆ.


ಟಾಪ್​ 10 ತಂಡಗಳು


1.ಆಸ್ಟ್ರೇಲಿಯಾ- 30 ಪಂದ್ಯ, 124 ರೇಟಿಂಗ್​ ಅಂಕ

2. ಭಾರತ-26 ಪಂದ್ಯ, 120 ರೇಟಿಂಗ್​ ಅಂಕ

3. ಇಂಗ್ಲೆಂಡ್​- 30 ಪಂದ್ಯ, 105 ರೇಟಿಂಗ್​ ಅಂಕ

4. ದಕ್ಷಿಣ ಆಫ್ರಿಕಾ-18 ಪಂದ್ಯ, 103 ರೇಟಿಂಗ್​ ಅಂಕ

5. ನ್ಯೂಜಿಲ್ಯಾಂಡ್​-22 ಪಂದ್ಯ, 96 ರೇಟಿಂಗ್​ ಅಂಕ

6. ಪಾಕಿಸ್ತಾನ-17 ಪಂದ್ಯ, 89 ರೇಟಿಂಗ್​ ಅಂಕ

7. ಶ್ರೀಲಂಕಾ-18 ಪಂದ್ಯ, 83 ರೇಟಿಂಗ್​ ಅಂಕ

8. ವೆಸ್ಟ್​ ಇಂಡೀಸ್​-19 ಪಂದ್ಯ, 82 ರೇಟಿಂಗ್​ ಅಂಕ

9. ಬಾಂಗ್ಲಾದೇಶ-17 ಪಂದ್ಯ, 53 ರೇಟಿಂಗ್​ ಅಂಕ

10. ಜಿಂಬಾಬ್ವೆ-2 ಪಂದ್ಯ, 23 ರೇಟಿಂಗ್​ ಅಂಕ

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ


ಬುಧವಾರ ಪ್ರಕಟಗೊಂಡಿದ್ದ ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದರು. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

Continue Reading

ಕ್ರೀಡೆ

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Devon Thomas: ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

VISTARANEWS.COM


on

Devon Thomas
Koo

ದುಬೈ: ವೆಸ್ಟ್​ ಇಂಡೀಸ್​(West Indies) ತಂಡದ ಡೆವೊನ್ ಥಾಮಸ್(Devon Thomas) ಅವರನ್ನು ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ನಿಯಮಗಳ ಏಳು ಉಲ್ಲಂಘನೆಗಳನ್ನು ಒಪ್ಪಿಕೊಂಡ ಬಳಿಕ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ICC) ಈ ನಿರ್ಧಾರ ಕೈಗೊಂಡಿದೆ. ಈ ಶಿಕ್ಷೆಯು ಒಂದು ವರ್ಷ ಪೂರ್ವಾನ್ವಯವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

34 ವರ್ಷದ ಥಾಮಸ್, ಕೆರಿಬಿಯನ್ ಪ್ರೀಮಿಯರ್ ಲೀಗ್, ಲಂಕಾ ಪ್ರೀಮಿಯರ್ ಲೀಗ್ ಮತ್ತು ಅಬುಧಾಬಿ ಟಿ10 ಎಂಬ ಮೂರು ಪ್ರತ್ಯೇಕ ಪಂದ್ಯಾವಳಿಗಳಲ್ಲಿ ಅಪರಾಧಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಶ್ರೀಲಂಕಾ ಮೂಲದ ಪಂದ್ಯಾವಳಿಯಲ್ಲಿ ಮ್ಯಾಚ್-ಫಿಕ್ಸಿಂಗ್ ಯತ್ನಗಳಲ್ಲಿ ಭಾಗಿಯಾಗಲು ಸಂಚು ರೂಪಿಸಿದ್ದಕ್ಕಾಗಿ ತಾನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವುದು ತಿಳಿದುಬಂದಿದೆ.

ಸ್ಯಾಮುಯೆಲ್ಸ್​ಗೆ 6 ವರ್ಷ ನಿಷೇಧ

ಭ್ರಷ್ಟಾಚಾರ ನಿಗ್ರಹ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್​ ತಂಡದ ಮಾಜಿ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್(Marlon Samuels) ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಕಳೆದ ವರ್ಷ ನಿಷೇಧಿಸಿತ್ತು.

2016ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ಸ್ಯಾಮುಯೆಲ್ಸ್ ಪ್ರಧಾನ ಪಾತ್ರವಹಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್​ ಸಾಹಸದಿಂದ ವಿಂಡೀಸ್​ ಕಪ್​ ಗೆದ್ದಿತ್ತು. ಇದೀಗ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಅವರನ್ನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಸ್ಯಾಮುಯೆಲ್ಸ್ ವಿರುದ್ಧ ಸೆಪ್ಟೆಂಬರ್ 2021 ರಲ್ಲಿ ಒಟ್ಟು ನಾಲ್ಕು ಆರೋಪಗಳನ್ನು ಹೊರಿಸಲಾಗಿತ್ತು. ಈ ವರ್ಷದ ಆಗಸ್ಟ್​ನಲ್ಲಿ ಅಪರಾಧಗಳಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದಿದೆ. ಹೀಗಾಗಿ ಅವರಿಗೆ 6 ವರ್ಷಗಳ ಕಾಲ ಕ್ರಿಕೆಟ್​ ನಿಷೇಧ ಹೇರಲಾಗಿತ್ತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

2020ರಲ್ಲಿ ಸ್ಯಾಮುಯೆಲ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನಿವೃತ್ತಿ ಘೋಷಿಸಿದ ಬಳಿಕ ಅವರು ಬೇರೆ ದೇಶಗಳಲ್ಲಿ ನಡೆಯುವ ಲೀಗ್​ ಕ್ರಿಕೆಟ್​ಗಳಲ್ಲಿ ಆಟ ಮುಂದುವರಿಸಿದ್ದರು. 43 ವರ್ಷದ ಸ್ಯಾಮುಯೆಲ್ಸ್ ಅವರು 11,000 ಅಂತಾರಾಷ್ಟ್ರೀಯ ರನ್​ಗಳನ್ನು ಗಳಿಸಿದ್ದಾರೆ. ವಿಂಡೀಸ್​ ಪರ 207 ಏಕದಿನ ಪಂದ್ಯಗಳನ್ನು ಆಡಿದ ಅವರು 75.12 ಸ್ಟ್ರೈಕ್​ರೇಟ್​ನಲ್ಲಿ 5606 ರನ್​ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಮತ್ತು 30 ಅಧರ್ಶತಕ ಒಳಗೊಂಡಿದೆ. 133 ರನ್​ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 89 ವಿಕೆಟ್​ ಕೂಡ ಪಡೆದಿದ್ದಾರೆ. ಇನ್ನು 71 ಟೆಸ್ಟ್​ ಪಂದ್ಯಗಳಿಂದ 3917, ರನ್​ 7 ಶತಕ, 1 ದ್ವಿಶತಕ ಮತ್ತು 24 ಅರ್ಧಶತಕ ಬಾರಿಸಿದ್ದಾರೆ. 41 ವಿಕೆಟ್​ ಕಲೆಹಾಕಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 67 ಪಂದ್ಯ ಆಡಿ 1611 ರನ್​ ಮತ್ತು 22 ವಿಕೆಟ್​ ಉರುಳಿಸಿದ್ದಾರೆ.

Continue Reading

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading
Advertisement
English Alphabet
ಬೆಂಗಳೂರು2 mins ago

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

Crime News
ಕ್ರೈಂ4 mins ago

Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

Viral News
ವೈರಲ್ ನ್ಯೂಸ್27 mins ago

Viral News: 17 ವರ್ಷದ ಯುವತಿ ಎರಡು ಬಾರಿ ಗರ್ಭಿಣಿ; ಪೋಷಕರು ಸೇರಿ 16 ಜನರ ವಿರುದ್ಧ ಕೇಸ್‌

Gratuity
ದೇಶ37 mins ago

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Prajwal Revanna Case I was raped at gunpoint JDS women leader files complaint against Prajwal
ಹಾಸನ38 mins ago

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

icc men's test team rankings
ಕ್ರೀಡೆ53 mins ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ56 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest1 hour ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ1 hour ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ2 hours ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ21 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌