ಕ್ರಿಕೆಟ್
INDvsAUS : ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲಿ ಸೃಷ್ಟಿಯಾದ ಕೆಲವು ರೆಕಾರ್ಡ್ಗಳು ಇಲ್ಲಿವೆ
ಭಾರತ ತಂಡ ಈ ಪಂದ್ಯದಲ್ಲಿ ಅನಗತ್ಯ ದಾಖಲೆಗೆ ಒಳಗಾದರೆ, ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಇದು ಅತ್ಯುತ್ತಮ ಪ್ರದರ್ಶನ ಎನಿಸಿಕೊಂಡಿತು.
ವಿಶಾಖಪಟ್ಟಣಂ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕ ದಿನ ಸರಣಿಯ ಎರಡನೇ ಪಂದ್ಯದಲ್ಲಿ ಕೆಲವು ದಾಖಲೆಗಳು ಸೃಷ್ಟಿಯಾಗಿವೆ. ಭಾರತ ತಂಡ 26 ಓವರ್ಗಳಲ್ಲಿ 118 ರನ್ಗಳಿಗೆ ಆಲ್ಔಟ್ ಆಗಿದ್ದಲ್ಲದೆ, ಕೇವಲ 11 ಓವರ್ಗಳಲ್ಲಿ ಎದುರಾಳಿ ತಂಡಕ್ಕೆ 121 ರನ್ ಬಿಟ್ಟುಕೊಟ್ಟ ಕಾರಣ ಹೊಸ ದಾಖಲೆ ಸೃಷ್ಟಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಭಾರತ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿತು. ಶುಭ್ಮನ್ ಗಿಲ್ ಸೊನ್ನೆಗೆ ಔಟಾಗುವುದರೊಂದಿಗೆ ಆರಂಭಗೊಂಡ ಭಾರತದ ಪತನ ಮೊಹಮ್ಮದ್ ಸಿರಾಜ್ ಸೊನ್ನೆಗೆ ಔಟಾಗುವ ತನಕ ಮುಂದುವರಿಯಿತು. ಸೂರ್ಯಕುಮಾರ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ಕೂಡ ಶೂನ್ಯ ಸುತ್ತಿದರು. ಇದರೊಂದಿಗೆ ಭಾರತ ತಂಡ ಪ್ರವಾಸಿ ತಂಡಕ್ಕೆ ಸುಲಭ ತುತ್ತಾಯಿತು.
ಇದನ್ನೂ ಓದಿ : INDvsAUS : ಭಾರತ ತಂಡದ ಪರ ಹೊಸ ದಾಖಲೆ ಬರೆದ ಚೇತೇಶ್ವರ್ ಪೂಜಾರ
ಭಾನುವಾರ ನಡೆದ ಈ ಪಂದ್ಯದಲ್ಲಿ ಎರಡೂ ತಂಡಗಳು ದಾಖಲೆಯ ಪಟ್ಟಿ ಸೇರಿಕೊಂಡವು. ಇಲ್ಲಿ ಭಾರತ ತಂಡ ಕಳಪೆ ದಾಖಲೆ ಸೃಷ್ಟಿಸಿಕೊಂಡರೆ, ಪ್ರವಾಸಿ ತಂಡಕ್ಕೆ ಇದು ಕ್ರಿಕೆಟ್ ಇತಿಹಾಸ ಅತ್ಯುತ್ತಮ ಪಂದ್ಯ ಎನಿಸಿಕೊಂಡಿತು. ಒಟ್ಟಿನಲ್ಲಿ ಈ ಪಂದ್ಯದ ಕೆಲವೊಂದು ರೆಕಾರ್ಡ್ಗಳು ಇಲ್ಲಿವೆ.
- 117 ರನ್ಗಳು ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ದಾಖಲಿಸಿದ ಮೂರನೇ ಕನಿಷ್ಠ ಮೊತ್ತವಾಗಿದೆ. ಈ ಹಿಂದೆ ಏಕ ದಿನ ಮಾದರಿಯಲ್ಲಿ ಎರಡು ಬಾರಿ ಕನಿಷ್ಠ ಮೊತ್ತಕ್ಕೆ ಭಾರತ ಆಲ್ಔಟ್ ಆಗಿತ್ತು. 1981ರಲ್ಲಿ 63 ಹಾಗೂ 2000ರಲ್ಲಿ 100 ರನ್ಗೆ ಭಾರತ ತಂಡದ ಔಟಾಗಿತ್ತು. ಎರಡೂ ಪಂದ್ಯಗಗಳು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದ್ದವು.
- 117 ರನ್ಗಳು ಭಾರತ ತಂಡಕ್ಕೆ ನಾಲ್ಕನೇ ಕನಿಷ್ಠ ಮೊತ್ತವಾಗಿದೆ. 1986ರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ 78 ರನ್ಗಳಿಗೆ, 1993ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 100 ರನ್ಗಳಿಗೆ, 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧ 112 ರನ್ಗಳಿಗೆ ಭಾರತ ತಂಡ ಆಲ್ಔಟ್ ಆಗಿತ್ತು.
- ಆಸ್ಟ್ರೇಲಿಯಾ ತಂಡದ ವೇಗದ ಬೌಲರ್ ಏಕ ದಿನ ಮಾದರಿಯಲ್ಲಿ ಐದು ವಿಕೆಟ್ಗಳ ಗೊಂಚಲು ಪಡೆದವರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇದು ಅವರು 9ನೇ ಐದು ವಿಕೆಟ್ ಸಾಧನೆ. ಪಾಕಿಸ್ತಾನದ ವಕಾರ್ ಯೂನಿಸ್ (13 ಸಲ) ಹಾಗೂ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (10 ಸಲ) ಅವರಿಗಿಂತ ಹಿಂದಿದ್ದಾರೆ ಸ್ಟಾರ್ಕ್.
- ಎಸೆತಗಳ ಉಳಿಕೆ ಲೆಕ್ಕಾಚಾರದಲ್ಲಿ ಹೇಳುವುದಾದರೆ ಭಾರತ ತಂಡಕ್ಕೆ ಇದು ಅತ್ಯಂತ ಹೀನಾಯ ಸೋಲು. 234 ಎಸೆತಗಳು ಬಾಕಿ ಇರುವಂತೆಯೇ ಆಸ್ಟ್ರೇಲಿಯಾ ತಂಡ ಆತಿಥೇಯ ತಂಡ ನೀಡಿದ್ದ 118 ರನ್ಗಳ ಸವಾಲು ಮೀರಿತ್ತು.
- ಆಸ್ಟ್ರೇಲಿಯಾ ತಂಡ 11 ಓವರ್ಗಳಲ್ಲಿ 121 ರನ್ ಬಾರಿಸುವ ಮೂಲಕ ಮೂರನೇ ಅತಿವೇಗದ ಚೇಸ್ ಎಂಬ ದಾಖಲೆ ಸೃಷ್ಟಿಸಿತು. 2004ರಲ್ಲಿ ಯುಎಸ್ಎಸ ತಂಡ ನೀಡಿದ್ದ 66 ರನ್ಗಳ ಟಾರ್ಗೆಟ್ ಅನ್ನು 7.5 ಓವರ್ಗಳಲ್ಲಿ ಮೀರಿತ್ತು ಆಸ್ಟ್ರೇಲಿಯಾ. ಅದೇ ರೀತಿ 2013ರಲ್ಲಿ ವೆಸ್ಟ್ ಇಂಡೀಸ್ ನೀಡಿದ್ದ 71 ರನ್ಗಳ ಸವಾಲನ್ನು 9.2 ಓವರ್ಗಳಲ್ಲಿ ದಾಟಿತ್ತು.
ಕ್ರಿಕೆಟ್
Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್ ಕೊಹ್ಲಿ ಪಡೆದ ಮಾರ್ಕ್ ಎಷ್ಟು ಗೊತ್ತಾ?
ಕೂ ಸಾಮಾಜಿಕ ಜಾಲತಾಣದ ಮೂಲಕ ವಿರಾಟ್ ಕೊಹ್ಲಿ ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಶೇರ್ ಮಾಡಿಕೊಂಡಿದ್ದಾರೆ.
ನವ ದೆಹಲಿ: ಟೀಮ್ ಇಂಡಿಯಾದ ಆಲ್ಟೈಮ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಕ್ರಿಕೆಟ್ಗಾಗಿ ಶಿಕ್ಷಣವನ್ನು ಮೊಟಕುಗೊಳಿಸಿದವರು. 12ನೇ ತರಗತಿ ಮುಕ್ತಾಯಗೊಂಡ ಬಳಿಕ ಅವರು ವಿದ್ಯಾಭ್ಯಾಸ ಮುಂದುವರಿಸದೇ ಕ್ರಿಕೆಟ್ಗಾಗಿ ಬದುಕು ಮುಡಿಪಾಗಿಟ್ಟಿದ್ದರು. ಹೀಗಾಗಿ ಶೈಕ್ಷಣಿಕ ವಿಚಾರಕ್ಕೆ ಹೆಚ್ಚು ಡಿಗ್ರಿಗಳನ್ನೇನೂ ಪಡೆದುಕೊಂಡಿಲ್ಲ. ಇವೆಲ್ಲದರ ನಡುವೆಯೂ ಶಾಲಾ ದಿನಗಳಲ್ಲಿ ವಿರಾಟ್ ಕೊಹ್ಲಿಯ ಕಲಿಕೆ ಮಟ್ಟ ಹೇಗಿದ್ದರಬಹುದು ಎಂಬ ಕುತೂಹಲ ಅಭಿಮಾನಿಗಳಿಗೆ ಇದ್ದೇ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇದುವರೆಗೆ ಇರಲಿಲ್ಲ. ಇದೀಗ ಸ್ವಯಂ ವಿರಾಟ್ ಕೊಹ್ಲಿಯೇ ತಮ್ಮ 10ನೇ ತರಗತಿಯ ಮಾರ್ಕ್ ಕಾರ್ಡ್ ಅನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ವಿರಾಟ್ ಕೊಹ್ಲಿ ಯಾವುದೆಲ್ಲ ವಿಷಯದಲ್ಲಿ ಎಷ್ಟೆಷ್ಟು ಮಾರ್ಕ್ ತೆಗೆದಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
ವಿರಾಟ್ ಕೊಹ್ಲಿ ಹಿಂದೊಮ್ಮೆ ಸಂದರ್ಶನದಲ್ಲಿ ತಮಗೆ ಗಣಿತದ ಅಲರ್ಜಿ ಇರುವುದಾಗಿ ಹೇಳಿಕೊಂಡಿದ್ದರು. ಗಣಿತದಲ್ಲಿ ಪಾಸ್ ಆಗುವುದಕ್ಕೆ ತಾವು ಪಟ್ಟ ಕಷ್ಟವನ್ನು ಹೇಳಿಕೊಂಡಿದ್ದಾರೆ. ಇದೇ ವೇಳೆ ಅವರು ಗಣಿತದ ಅಗತ್ಯವೇನು ಎಂಬುದನ್ನೂ ಪ್ರಶ್ನಿಸಿದ್ದರು. ಇದೀಗ ಅವರು ಯಾಕೆ ಗಣಿತವನ್ನು ದ್ವೇಷ ಮಾಡಿದ್ದರು ಎಂಬುದು ಗೊತ್ತಾಗಿದೆ. ಯಾಕೆಂದರೆ 10ನೇ ತರಗತಿಯಲ್ಲಿ ಕೊಹ್ಲಿ ಗಣಿತದಲ್ಲಿ ಪಡೆದ ಮಾರ್ಕ್ 51. ಹೇಗಾದರೂ ಮಾಡಿ ಪಾಸ್ ಮಾಡಬೇಕು ಎಂಬು ಹಠದಲ್ಲಿ ಅವರು ಅಷ್ಟು ಮಾರ್ಕ್ ಪಡೆದುಕೊಂಡಿದ್ದರು.
ಇಂಗ್ಲಿಷ್ನಲ್ಲಿ 83, ಹಿಂದಿಯಲ್ಲಿ 75, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ 55, ಸಮಾಜ ವಿಜ್ಞಾನದಲ್ಲಿ 81, ಇಂಟ್ರಡಕ್ಟರಿ ಐಟಿಯಲ್ಲಿ 74 ಅಂಕಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಷಯಗಳಲ್ಲಿ ವಿರಾಟ್ಕೊಹ್ಲಿಗೆ ಆಸಕ್ತಿ ಇತ್ತ ಎಂಬುದು ಮಾರ್ಕ್ ಕಾರ್ಡ್ ಮೂಲಕ ಗೊತ್ತಾಗಿದೆ.
ಮೂರು ಪೆಗ್ಗಿನ ಕತೆ ಹೇಳಿದ ವಿರಾಟ್ ಕೊಹ್ಲಿ
ಭಾರತೀಯ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ(anushka sharma) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅನುಷ್ಕಾ ಶರ್ಮಾ ಅವರು ವಿರಾಟ್ ಕೊಹ್ಲಿಯ ಕುಡಿತದ ಚಟದ ಬಗ್ಗೆ ರೋಚಕ ಸಂಗತಿಯೊಂದನ್ನು ತಿಳಿಸಿದ್ದಾರೆ.
ಸಾಮಾನ್ಯವಾಗಿ ನೀವಿಬ್ಬರು ಪಾರ್ಟಿಗಳಿಗೆ ಹೋದಾಗ ಯಾರನ್ನು ಹೆಚ್ಚಾಗಿ ಜನ ಗುರುತಿಸುತ್ತಾರೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶರ್ಮಾ, ಅದು ವಿರಾಟ್ ಕೊಹ್ಲಿ ಎಂದು ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಅವರು ತಿಳಿಸಿದ್ದಾರೆ. ಕೊಹ್ಲಿ ಮೂರು ಪೆಗ್ ಹಾಕಿದ ಬಳಿಕ ಡ್ಯಾನ್ಸ್ ಮಾಡಲು ಆರಂಭಿಸುತ್ತಾರೆ. ಹೀಗಾಗಿ ಅಲ್ಲಿದ್ದವರು ಕೊಹ್ಲಿಯ ಕಡೆ ಹೆಚ್ಚು ಗಮನ ಕೊಡುತ್ತಾರೆ. ಒಮ್ಮೆ ಅವರು ನೃತ್ಯ ಆರಂಭಿಸಿದರೆ ಇದನ್ನು ಯಾರಿಂದಲೂ ತಡೆಯಲು ಅಸಾಧ್ಯ ಎಂದು ಹೇಳಿದರು.
ಪತ್ನಿಯ ಈ ಮಾತನ್ನು ನಗುತ್ತಲೇ ಒಪ್ಪಿಕೊಂಡ ವಿರಾಟ್, ಇದು ನಿಜ. ನಾನು ಎರಡು ಪೆಗ್ಗಳಿಗಿಂತಲೂ ಹೆಚ್ಚು ಕುಡಿದೆನೆಂದರೆ ಡ್ಯಾನ್ಸ್ ಮಾಡಲು ಆರಂಭಿಸುತ್ತೇನೆ. ಆ ಬಳಿಕ ನಾನು ಏನು ಮಾಡುತ್ತೇನೆ ಎಂಬ ಅರಿವೇ ನನಗಿರುವುದಿಲ್ಲ. ಆದರೆ ಈ ವರ್ತನೆಯನ್ನು ಈಗ ನೆನಪಿಸಿಕೊಂಡರೆ ನನಗೆ ನಾಚಿಕೆಯಾಗುತ್ತದೆ. ಈಗ ನಾನು ಕುಡಿತದಿಂದ ಮುಕ್ತವಾಗಿದ್ದೇನೆ. ಇದಕ್ಕೆ ಒಂದು ರೀತಿಯಲ್ಲಿ ಪತ್ನಿ ಅನುಷ್ಕಾ ಕೂಡ ಕಾರಣ. ಅವಳು ನನ್ನ ಬದುಕಿನಲ್ಲಿ ಬಂದ ಬಳಿಕ ಹಲವು ವಿಚಾರದಲ್ಲಿ ನಾನು ಸುಧಾರಿಸಿಕೊಂಡಿದ್ದೇನೆ ಎಂದು ಕೊಹ್ಲಿ ಹೇಳಿದರು.
ಕ್ರಿಕೆಟ್
IPL 2023 : ಚೆನ್ನೈ ಸೂಪರ್ ಕಿಂಗ್ಸ್ ಬಳಗ ಸೇರಿದ ರಾಜಸ್ಥಾನ್ ರಾಯಲ್ಸ್ನ ಮಾಜಿ ಬೌಲರ್
ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮುಕೇಶ್ ಚೌಧರಿಗೆ ಬದಲಿಗೆ ಆಕಾಶ್ ಸಿಂಗ್ ಅವಕಾಶ ಪಡೆದುಕೊಂಡಿದ್ದಾರೆ.
ಚೆನ್ನೈ: ಐಪಿಎಲ್ 16ನೇ ಆವೃತ್ತಿಗೆ ವೇಗದ ಬೌಲರ್ ಮುಕೇಶ್ ಚೌಧರಿ ಅಲಭ್ಯರಾಗಿದ್ದಾರೆ. ಎಡಗೈ ಬೌಲರ್ ಗಾಯದ ಸಮಸ್ಯೆಗೆ ಒಳಗಾಗಿದ್ದು, ಇನ್ನೂ ಸುಧಾರಿಸಿಕೊಳ್ಳದ ಕಾರಣ ಅವರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಲು ಸಾಧ್ಯವಾಗುತ್ತಿಲ್ಲ. ರಾಜಸ್ಥಾನ್ ರಾಯಲ್ಸ್ನ ಮಾಜಿ ವೇಗದ ಬೌಲರ್ ಆಕಾಶ್ ಸಿಂಗ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಸಿಎಸ್ಕೆ.
ಆಕಾಶ್ ಸಿಂಗ್ 2020ರಲ್ಲಿ 19ರ ವಯೋಮಿತಿಯ ವಿಶ್ವ ಕಪ್ನಲ್ಲಿ ಭಾರತ ತಂಡದ ಪರವಾಗಿ ಆಡಿದ್ದರು. 9 ಪಂದ್ಯಗಳಲ್ಲಿ ಅವರು 7 ವಿಕೆಟ್ ಉರುಳಿಸಿದ್ದರು. ಮುಕೇಶ್ ಚೌಧರಿ 2021ರ ಐಪಿಎಲ್ನ 13 ಪಂದ್ಯಗಳಲ್ಲಿ 16 ವಿಕೆಟ್ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಕ್ರಿಕೆಟ್ ವಿಶ್ಲೇಷಕರ ಗಮನ ಸೆಳೆದಿದ್ದರು. ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥನ್ ಅವರು ಮಕೇಶ್ ಚೌಧರಿ ಈ ಬಾರಿಯ ಐಪಿಎಲ್ನಲ್ಲಿ ಆಡುವುದಿಲ್ಲ ಎಂದು ಈ ಹಿಂದೆಯೇ ಸೂಚನೆ ಕೊಟ್ಟಿದ್ದರು. ಇದೀಗ ಅವರ ಅಲಭ್ಯತೆಗೆ ಖಾತರಿಯಾಗಿದೆ. ಸಿಎಸ್ಕೆ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಮಾರ್ಚ್ 31ರಂದು ನಡೆಯುವ ಪಂದ್ಯದಲ್ಲಿ ಎದುರಾಗಲಿದೆ.
5000 ರನ್ ಸನಿಹದಲ್ಲಿ ಧೋನಿ
ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಸಿಕ್ಸರ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ವಿಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್ ಕ್ಲಬ್ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.
ಇದನ್ನೂ ಓದಿ IPL 2023: ಐಪಿಎಲ್ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್ ಕೊಹ್ಲಿ
250ನೇ ಐಪಿಎಲ್ ಪಂದ್ಯ
ಐಪಿಎಲ್ನ ಇದುವರೆಗಿನ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯವನ್ನಾಡಿದ ದಾಖಲೆ ಧೋನಿ ಹೆಸರಿನಲ್ಲಿದೆ. ಸದ್ಯ ಅವರು 234 ಪಂದ್ಯಗಳನ್ನಾಡಿದ್ದಾರೆ. ಈ ಬಾರಿ ಅವರು 16 ಪಂದ್ಯಗಳಲ್ಲಿ ಆಡಿದರೆ 250 ಪಂದ್ಯಗಳನ್ನು ಪೂರೈಸಿದ ಮೊದಲ ಆಟಗಾರ ಎಂಬ ಮೈಲುಗಲ್ಲು ಸ್ಥಾಪಿಸಲಿದ್ದಾರೆ. ಆರ್ಸಿಬಿ ಆಟಗಾರ ದಿನೇಶ್ ಕಾರ್ತಿಕ್ 229 ಪಂದ್ಯಗಳನ್ನಾಡಿ ಈ ಸಾಧನೆ ಮಾಡಿದವರ ಪಟ್ಟಿಯಲ್ಲಿ ದ್ವಿ
ಕ್ರಿಕೆಟ್
IPL 2022 : ಟ್ರೋಫಿ ಎತ್ತಿ ಹಿಡಿದು ವಿದಾಯ ಹೇಳುತ್ತಾರಾ ಧೋನಿ?
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ತಂಡ ಈ ಬಾರಿ ಟ್ರೋಫಿ ಗೆಲ್ಲಬಹುದು ಎನ್ನುತ್ತಾರೆ ಕಿರಣ್ ಡಿ.ಕೆ.
ಕ್ರಿಕೆಟ್
IPL 2023 : ಫೋಟೊ ಶೂಟ್ಗೆ ಮುಂಬೈ ತಂಡದ ನಾಯಕ ರೋಹಿತ್ ಗೈರು; ಏನಾಯಿತು ಅವರಿಗೆ?
ರೋಹಿತ್ ಶರ್ಮಾ ಅವರಿಗೆ ಅಸೌಖ್ಯ ಕಾಡಿದ್ದು ಹೀಗಾಗಿ ಅಹಮದಾಬಾದ್ಗ ಪ್ರಯಾಣ ಮಾಡಲು ಅವರಿಗೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.
ಅಹಮದಾಬಾದ್: ಐಪಿಎಲ್ ಆರಂಭಕ್ಕೆ ಬಿಸಿಸಿಐ ಕಹಳೆ ಊದಿದೆ. ಮಾರ್ಚ್ 31ರಂದು ಸಿಎಸ್ಕೆ ಹಾಗೂ ಕಳೆದ ಬಾರಿಯ ಚಾಂಪಿಯನ್ ಮುಂಬಯಿ ಇಂಡಿಯನ್ಸ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಆದರೆ, ಐಪಿಎಲ್ ಆರಂಭಿಕ ಚಟವಟಿಕೆಗಳು ಈಗಾಗಲೇ ಆರಂಭಗೊಂಡಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ಪತ್ರಿಕಾಗೋಷ್ಠಿ ಹಾಗೂ ಪೋಟೋ ಶೂಟ್ ನಡೆದಿದೆ. ತಂಡಗಳ ನಾಯಕರೆಲ್ಲರೂ ಅದರಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಕಾರ್ಯಕ್ರಮದಲ್ಲಿ ಮುಂಬಯಿ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಪಾಲ್ಗೊಂಡಿಲ್ಲ. ಹೀಗಾಗಿ ಅವರಿಗೆ ಏನಾಗಿದೆ ಎಂಬ ಗೊಂದಲ ಮೂಡಿದೆ.
ಟೈಮ್ಸ್ ಇಂಡಿಯಾದ ವರದಿ ಪ್ರಕಾರ ರೋಹಿತ್ ಶರ್ಮಾ ಅವರಿಗೆ ಸ್ವಲ್ಪ ಮಟ್ಟಿಗೆ ಅನಾರೋಗ್ಯವಿದೆ. ಹೀಗಾಗಿ ಅವರಿಗೆ ಮಾರ್ಚ್ 30ರಂದು ನಡೆದ ಫೋಟೋಶೂಟ್ನಲ್ಲಿ ಪಾಲ್ಗೊಳ್ಳುವುಕ್ಕೆ ಸಾಧ್ಯವಾಗಲಿಲ್ಲ. ಆದರೆ ಮಾರ್ಚ್ 31ರಂದು ನಡೆಯುವ ಪಂದ್ಯದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ರೋಹಿತ್ ಶರ್ಮಾ ಅವರು ಅಸೌಖ್ಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರಿಗೆ ಅಹಮದಾಬಾದ್ಗೆ ಪ್ರಯಾಣ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಅವರು ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯುವ ಮುಂಬಯಿ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಬಲ್ಲ ಮೂಲಗಳ ಪ್ರಕಾರ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಮಂಬಯಿ ಇಂಡಿಯನ್ಸ್ ತಂಡವನ್ನು ಹೊರತುಪಡಿಸಿ ಉಳಿದ ತಂಡಗಳ ನಾಯಕರು ಪ್ರೆಸ್ಮೀಟ್ ಹಾಗೂ ಫೋಟೊ ಶೂಟ್ನಲ್ಲಿ ಭಾಗಿಯಾಗಿದ್ದಾರೆ. ಮಹೇಂದ್ರ ಸಿಂಗ್ ಧೋನಿ (ಚೆನ್ನೈ ಸೂಪರ್ ಕಿಂಗ್ಸ್), ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟನ್ಸ್), ಶಿಖರ್ ಧವನ್ (ಪಂಜಾಬ್ ಕಿಂಗ್ಸ್), ನಿತೀಶ್ ರಾಣಾ (ಕೋಲ್ಕೊತಾ ನೈಟ್ ರೈಡರ್ಸ್), ಕೆಎಲ್ ರಾಹುಲ್ (ಲಖನೌ ಸೂಪರ್ ಜೈಂಟ್ಸ್), ಭುವನೇಶ್ವರ್ ಕುಮಾರ್ (ಸನ್ ರೈಸರ್ಸ್ ಹೈದರಾಬಾದ್), ಫಾಫ್ ಡು ಪ್ಲೆಸಿಸ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ಮತ್ತು ಡೇವಿಡ್ ವಾರ್ನರ್ (ದೆಹಲಿ ಕ್ಯಾಪಿಟಲ್ಸ್) ಫೋಟೋ ಶೂಟ್ನಲ್ಲಿ ಪಾಲ್ಗೊಂಡಿದ್ದರು.
ದಾಖಲೆ ಮಾಡಲು ಸಜ್ಜಾಗಿದ್ದಾರೆ ಧೋನಿ
ಶುಕ್ರವಾರ ಆರಂಭಗೊಳ್ಳಲಿರುವ ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್ನ(IPL 2023) ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಸೆಣಸಾಟ ನಡೆಸಲಿದೆ. ಈ ಬಾರಿಯ ಐಪಿಎಲ್ ಬಳಿಕ ಧೋನಿ(ms dhoni) ಅವರು ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡಲಾರಂಭಿಸಿದೆ. ಆದರೆ ಈ ಬಗ್ಗೆ ಧೋನಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಸದ್ಯಕ್ಕೆ ಧೋನಿ ಅವರು ಹಲವು ದಾಖಲೆಗಳನ್ನು ನಿರ್ಮಿಸುತ್ತ ಚಿತ್ತ ನೆಟ್ಟಿದ್ದಾರೆ.
ಇದನ್ನೂ ಓದಿ : IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ
5000 ರನ್ ಸನಿಹದಲ್ಲಿ ಧೋನಿ
ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅವರು ಈ ವರೆಗೆ 234 ಪಂದ್ಯಗಳಿಂದ 4978 ರನ್ ಗಳಿಸಿದ್ದಾರೆ. ಈ ಟೂರ್ನಿಯಲ್ಲಿ ಅವರು 22 ರನ್ ಗಳಿಸಿದರೆ 5 ಸಾವಿರ ರನ್ ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ದಾಖಲೆ ಬರೆಯಲಿದ್ದಾರೆ. ಇದರ ಜತೆಗೆ 185 ರನ್ ಬಾರಿಸಿದರೆ ಆರ್ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ (5162) ಅವರನ್ನು ಹಿಂದಿಕ್ಕಲಿದ್ದಾರೆ. ಆ ಮೂಲಕ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ 6ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಸಿಕ್ಸರ್ ದಾಖಲೆ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಯುನಿವರ್ಸ್ ಬಾಸ್ ಖ್ಯಾತಿಯ ವಿಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ ಅವರು 357 ಸಿಕ್ಸರ್ಗಳನ್ನು ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಸದ್ಯ ಧೋನಿ 229 ಸಿಕ್ಸರ್ ಸಿಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಈ ಬಾರಿ ಅವರು 23 ಸಿಕ್ಸ್ ಸಿಡಿಸಿದರೆ 250 ಸಿಕ್ಸರ್ ಕ್ಲಬ್ಗೆ ಸೇರುವ ಜತೆಗೆ ಎಬಿಡಿ ಅವರ ದಾಖಲೆಯನ್ನು ಮುರಿಯಲಿದ್ದಾರೆ ಎಬಿಡಿ 251 ಸಿಕ್ಸರ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 240 ಸಿಕ್ಸರ್ ಸಿಡಿಸಿ ಮೂರನೇ ಸ್ಥಾನದಲ್ಲಿದ್ದಾರೆ ಅವರಿಗೂ ಎಬಿಡಿ ಅವರ ದಾಖಲೆ ಮುರಿಯುವ ಅವಕಾಶವಿದೆ.
-
ಕರ್ನಾಟಕ14 hours ago
High Court order: ತುಮಕೂರು ಗ್ರಾಮಾಂತರ ಜೆಡಿಸ್ ಶಾಸಕ ಗೌರಿಶಂಕರ್ ಶಾಸಕತ್ವದಿಂದ ಅನರ್ಹ: ಕೋರ್ಟ್ ಆದೇಶ
-
ಕ್ರಿಕೆಟ್15 hours ago
IND VS PAK: ಏಕದಿನ ವಿಶ್ವಕಪ್; ತಟಸ್ಥ ತಾಣದಲ್ಲಿ ನಡೆಯಲಿದೆ ಪಾಕಿಸ್ತಾನದ ಪಂದ್ಯಗಳು!
-
ಕರ್ನಾಟಕ12 hours ago
Karnataka BJP: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಚಿಂತನೆ: ಖಚಿತಪಡಿಸಿದ ಬಿ.ಎಸ್. ಯಡಿಯೂರಪ್ಪ
-
ಕ್ರಿಕೆಟ್12 hours ago
ICC World Cup 2023: ಭಾರತದಲ್ಲೇ ನಡೆಯಲಿದೆ ವಿಶ್ವ ಕಪ್ ಪಂದ್ಯ; ಐಸಿಸಿ ಸ್ಪಷ್ಟನೆ
-
ಕರ್ನಾಟಕ13 hours ago
Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ
-
ಕರ್ನಾಟಕ14 hours ago
Karnataka BJP: ಮುಸ್ಲಿಂ ಬಾಂಧವರಿಗೆ ಬಿಜೆಪಿ ಅನ್ಯಾಯ ಮಾಡಿಲ್ಲ: ಮನವೊಲಿಸುತ್ತೇವೆ ಎಂದ ಬಿ.ಎಸ್. ಯಡಿಯೂರಪ್ಪ
-
ದೇಶ14 hours ago
ಸ್ಮೃತಿ ಇರಾನಿಯನ್ನು ಡಾರ್ಲಿಂಗ್ ಎಂದು ಬಿಜೆಪಿ ನಾಯಕ ಟ್ವೀಟ್, ಮಾನಹಾನಿ ನೋಟಿಸ್ ಕಳುಹಿಸಿದ ಕೈ ನಾಯಕ!
-
ಕ್ರಿಕೆಟ್10 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ