Here is the information about the game changer rules of IPL IPL 2023 : ಐಪಿಎಲ್​ನ ಗೇಮ್​ ಚೇಂಜರ್​ ರೂಲ್ಸ್​ಗಳ ಬಗ್ಗೆ ಇಲ್ಲಿದೆ ಮಾಹಿತಿ Vistara News

ಕ್ರಿಕೆಟ್

IPL 2023 : ಐಪಿಎಲ್​ನ ಗೇಮ್​ ಚೇಂಜರ್​ ರೂಲ್ಸ್​ಗಳ ಬಗ್ಗೆ ಇಲ್ಲಿದೆ ಮಾಹಿತಿ

ಈ ಬಾರಿಯ ಐಪಿಎಲ್​ನಲ್ಲಿ (IPL 2023) ಜಾರಿಗೆ ತಂದಿರುವ ಕೆಲವೊಂದು ನಿಯಮಗಳು ಪಂದ್ಯದ ಭವಿಷ್ಯ ನಿರ್ಧರಿಸಲಿದೆ.

VISTARANEWS.COM


on

here-is-the-information-about-the-game-changer-rules-of-ipl
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

ಭಾನುವಾರ ನಡೆದ ಅಂಡರ್​-19 ಪುರುಷರ ಏಷ್ಯಾ ಕಪ್(U19 Asia Cup) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್​ಗಳ ಸೋಲಿಗೆ ತುತ್ತಾಗಿದೆ.

VISTARANEWS.COM


on

India U19 vs Pakistan U19
Koo

ದುಬೈ: ಎಸಿಸಿ ಅಂಡರ್​-19 ಪುರುಷರ ಏಷ್ಯಾ ಕಪ್(U19 Asia Cup) ಕ್ರಿಕೆಟ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಬದ್ದ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ(India U19 vs Pakistan) ತಂಡ 8 ವಿಕೆಟ್​ಗಳ ಸೋಲು ಕಂಡಿದೆ. ಸತತ 2 ಗೆಲುವು ಸಾಧಿಸಿದ ಪಾಕಿಸ್ತಾನ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇಲ್ಲಿನ ಐಸಿಸಿ ಅಕಾಡೆಮಿ ಕ್ರಿಕೆಟ್​ ಮೈದಾನದಲ್ಲಿ ನಡೆದ ‘ಎ’ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್​ನಷ್ಟಕ್ಕೆ 260 ರನ್‌ ಬಾರಿಸಿತು. ದಿಟ್ಟ ರೀತಿಯಲ್ಲಿ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 2 ವಿಕೆಟ್​ ಕಳೆದುಕೊಂಡು 47 ಓವರ್‌ಗಳಲ್ಲಿ 263 ರನ್​ ಬಾರಿಸಿ ಗೆಲುವು ದಾಖಲಿಸಿತು. ಪಾಕಿಸ್ತಾನದ ಪರ ಅಮೋಘ ಶತಕ ಗಳಿಸಿದ ಅಜಾನ್ ಅವೈಸ್ (105*) ಗೆಲುವಿನ ರೂವಾರಿ ಎನಿಸಿದರು. ಶಹಜೇಬ್ ಖಾನ್ (63) ರನ್​ ಬಾರಿಸಿ ಅವೈಸ್​ಗೆ ಉತ್ತಮ ಸಾಥ್​ ನೀಡಿದರು.

ಭಾರತ ತಂಡ ಮೊದಲ ಪಂದ್ಯದಲ್ಲಿ ಅಫಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಸೋಲು ಕಂಡಿದೆ. ಡಿಸೆಂಬರ್ 12ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೇಪಾಳ ತಂಡದ ಸವಾಲನ್ನು ಎದುರಿಸಲಿದೆ. ಇಲ್ಲಿ ಗೆದ್ದರೆ ಮಾತ್ರ ಭಾರತ ತಂಡ ಮುಂದಿನ ಹಂತಕ್ಕೇರಲಿದೆ.

ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಪರ ಆದರ್ಶ್ ಸಿಂಗ್ (62), ನಾಯಕ ಉದಯ್ ಸಹಾರನ್ (60) ಹಾಗೂ ಸಚಿನ್ ಧಾಸ್(58) ಆಕರ್ಷಕ ಅರ್ಧಶತಕಗಳನ್ನು ಗಳಿಸಿದರು. ಅರ್ಷಿನ್ ಕುಲಕರ್ಣಿ 24 ರನ್ ಗಳಿಸಿ ಉತ್ತಮ ರನ್​ ಕಲೆ ಹಾಕಿದರು. ಅದರಲ್ಲೂ 7ನೇ ಕ್ರಮಾಂಕದಲ್ಲಿ ಆಡಿದ ಸಚಿನ್ ಧಾಸ್ ಬಿರುಸಿನ ಬ್ಯಾಟಿಂಗ್​ ನಡೆಸಿ ಅರ್ಧಶತಕ ಬಾರಿಸಿದರು. ಅವರ ಈ ಅರ್ಧಶತಕ ಇನಿಂಗ್ಸ್​ನಲ್ಲಿ 3 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ರುದ್ರ ಪಟೇಲ್ (1), ಮುಶೀರ್ ಖಾನ್ (2) ಬ್ಯಾಟಿಂಗ್ ವೈಫಲ್ಯ ಕಂಡರು. ಪಾಕ್​ ಪರ ಬೌಲಿಂಗ್​ನಲ್ಲಿ ಮೊಹಮ್ಮದ್ ಜೀಶಾನ್ ಕೇವಲ 46 ರನ್​ ನೀಡಿ 4 ವಿಕೆಟ್​ ಕಿತ್ತರು. ಉಳಿದಂತೆ ಆಮೀರ್​ ಹಸನ್​ ಮತ್ತು ಉಬೈದ್ ಶಾ ತಲಾ 2 ವಿಕೆಟ್​ ಉರುಳಿಸಿದರು.

ಶತಕ ಬಾರಿಸಿದ ಅಜಾನ್ ಅವೈಸ್

ಚೇಸಿಂಗ್​ ವೇಳೆ ಅಮೋಘ ಬ್ಯಾಟಿಂಗ್​ ಪ್ರದರ್ಶನ ತೋರಿದ ಅಜಾನ್ ಅವೈಸ್ 130 ಎಸೆತ ಎದುರಿಸಿ 10 ಆಕರ್ಷಕ ಬೌಂಡರಿ ನೆರವಿನಿಂದ ಅಜೇಯ 105 ರನ್​ ಬಾರಿಸಿದರು. ಪಾಕ್​ ಆರಂಭ ಉತ್ತಮವಾಗಿರದಿದ್ದರೂ ದ್ವಿತೀಯ ವಿಕೆಟ್​ಗೆ ಅವೈಸ್ ಮತ್ತು ಶಹಜೇಬ್ ಸೇರಿಕೊಂಡು 110 ರನ್​ಗಳ ಜತೆಯಾಟ ನಡೆಸಿದರು. ಶಹಜೇಬ್ 63 ರನ್​ ಬಾರಿಸಿ ಮುರುಗನ್​ಗೆ ವಿಕೆಟ್​ ಒಪ್ಪಿಸಿದರು.

ಮೂರನೇ ವಿಕೆಟ್​ಗೆ ಆಡಲಿಳಿದ ನಾಯಕ ಸಾದ್ ಬೇಗ್ (68*) ಅವರು ಅವೈಸ್ ಜತೆ ಸೇರಿಕೊಂಡು ಉಪಯುಕ್ತ ಇನಿಂಗ್ಸ್ ಕಟ್ಟಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಈ ಪೈಕಿ ಅಜಾನ್ ಹಾಗೂ ನಾಯಕ ಸಾದ್ ಮುರಿಯದ ಮೂರನೇ ವಿಕೆಟ್‌ಗೆ 125 ರನ್‌ಗಳ ಜೊತೆಯಾಟ ಕಟ್ಟಿದರು.

Continue Reading

ಕ್ರಿಕೆಟ್

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​ ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ.

VISTARANEWS.COM


on

South Africa vs India 1
Koo

ಡರ್ಬಾನ್​: ದಕ್ಷಿಣ ಆಫ್ರಿಕಾ(IND vs SA) ಮತ್ತು ಭಾರತ ನಡುವಣ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು ಟಾಸ್​(Toss delayed due to rain) ಮತ್ತು ಪಂದ್ಯ ಆರಂಭ ವಿಳಂಬಗೊಳ್ಳಲಿದೆ. ಸದ್ಯಕ್ಕೆ ಡರ್ಬಾನ್​ನಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್​ ಹಿನ್ನಲೆ ಇತ್ತಂಡಗಳಿಗೂ ಈ ಸರಣಿ ಪ್ರಮುಖವಾಗಿದೆ.

ಕವರ್​ನಿಂದ ಮುಚ್ಚಿದ ಮೈದಾನ

ಸದ್ಯ ಡರ್ಬಾನ್​ನ ಕಿಂಗ್ಸ್‌ಮೀಡ್ ಮೈದಾನವನ್ನು ಕವರ್​ನಿಂದ ಸಂಪೂರ್ಣವಾಗಿ ಮುಚ್ಚಲಾಗಿದೆ. ಆಟಗಾರರೆಲ್ಲ ಡ್ರೆಸಿಂಗ್​ ರೂಮ್​ನಲ್ಲಿ ಮಳೆ ಯಾವಾಗ ಬಿಡುತ್ತದೆ ಎಂದು ಕಾದು ಕುಳಿತಿದ್ದಾರೆ. ಇದು ಐಸಿಸಿ ಅಡ್ಡಿಯಲ್ಲಿ ನಡೆಯುವ ಟೂರ್ನಿಯಾದ ಕಾರಣ ನಿಗದಿತ ಸಮಯಕ್ಕೆ ಮಳೆ ನಿಂತು ಆಟ ಪ್ರಾರಂಭವಾಗದಿದ್ದರೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಗುತ್ತದೆ.

ಟಿ20 ಮುಖಾಮುಖಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ಇದುವರೆಗೆ 24 ಟಿ20 ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು, ಭಾರತವು 13 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 10 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯವು ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ದಕ್ಷಿಣ ಆಫ್ರಿಕಾದಲ್ಲಿ, ‘ಮೆನ್ ಇನ್ ಬ್ಲೂ’ ಏಳು ಪಂದ್ಯಗಳನ್ನು ಆಡಿ ಐದರಲ್ಲಿ ಗೆದ್ದಿದ್ದರೆ, ಆತಿಥೇಯರು ಎರಡರಲ್ಲಿ ಗೆದ್ದಿದ್ದಾರೆ. ಬಲಾಬಲದ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿದೆ.

ಪಿಚ್​ ರಿಪೋರ್ಟ್

ಡರ್ಬಾನ್​ನ ಕಿಂಗ್ಸ್‌ಮೀಡ್ ಪಿಚ್ ಮೈದಾನದಲ್ಲಿ ಆಡಿದ 18 ಪಂದ್ಯಗಳಲ್ಲಿ, ವೇಗದ ಬೌಲರ್‌ಗಳು 23.84 ಸರಾಸರಿಯಲ್ಲಿ 162 ವಿಕೆಟ್‌ಗಳನ್ನು ಪಡೆದರೆ, ಸ್ಪಿನ್ನರ್‌ಗಳು 18 ಪಂದ್ಯಗಳಲ್ಲಿ 26.80 ಸರಾಸರಿಯಲ್ಲಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಂಬತ್ತು ಗೆಲುವು ಸಾಧಿಸಿದರೆ, ಎರಡನೇ ಬ್ಯಾಟಿಂಗ್ ನಡೆಸಿದ ತಂಡ ಎಂಟು ಗೆಲುವುಗಳನ್ನು ಸಾಧಿಸಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಡರ್ಬನ್‌ನಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 143 ಆಗಿದೆ.

ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಮೊದಲ ಬಾರಿ ಆಡಿದ ತಂಡವೆಂದರೆ ಅದು ಭಾರತ ಮತ್ತು ದಕ್ಷಿಣ ಆಫ್ರಿಕಾ. 2007ರಲ್ಲಿ ನಡೆದ ಚೊಚ್ಚಲ ಅಂತಾರಾಷ್ಟೀಯ ಟಿ20 ಪಂದ್ಯದಲ್ಲಿ ವೀರೇಂದ್ರ ಸೆಹವಾಗ್​ ಸಾರಥ್ಯದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 82 ರನ್​ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ್ದ ಭಾರತ 6 ವಿಕೆಟ್​ಗೆ 169 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೇವಲ 87 ರನ್​ಗೆ ಸರ್ವಪತನ ಕಂಡಿತ್ತು.

ಸಿಕ್ಕ ಅವಕಾಶ ಬಳಿಸಿಕೊಳ್ಳಿ

ಈಗಾಗಲೇ ಬಿಸಿಸಿಐ ಆಯ್ಕೆ ಸಮಿತಿಯ ಇಬ್ಬರು ಅಧಿಕಾರಿಗಳನ್ನು ದಕ್ಷಿಣ ಆಫ್ರಿಕಾಗೆ ಕಳುಹಿಸಿದ್ದು ಆಟಗಾರರ ಎಲ್ಲ ಪ್ರದರ್ಶನದ ಬಗ್ಗೆ ಮಾಹಿತಿ ಸಂಗ್ರಹಿಸಲು ಸೂಚಿಸಿದೆ. ಹೀಗಾಗಿ ವಿಶ್ವಕಪ್​ನಲ್ಲಿ ಸ್ಥಾನ ಪಡೆಯಬೇಕಿದ್ದರೆ. ಯುವ ಆಟಗಾರರು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ವಿಶ್ವಕಪ್​ಗೂ ಮುನ್ನ ಐಪಿಎಲ್​ ಕೂಡ ನಡೆಯುದರಿಂದ ಇಲ್ಲಿಯೂ ಕೆಲ ಉದಯೋನ್ಮುಖ ಆಟಗಾರು ಬೆಳಕಿಗೆ ಬರುತ್ತಾರೆ. ಆದ್ದರಿಂದ ಈಗ ತಂಡದಲ್ಲಿ ಇದ್ದ ಆಟಗಾರರು ತಮ್ಮ ಶ್ರೇಷ್ಠ ಪ್ರದರ್ಶನ ತೋರಿ ಆಯ್ಕೆ ಸಮಿತಿಯ ಗಮನಸೆಳೆಯಬೇಕಿದೆ.

Continue Reading

ಕ್ರಿಕೆಟ್

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

VISTARANEWS.COM


on

Kate Cross reveals ‘soft spot for RCB’ after bagging deal
Koo

ಬೆಂಗಳೂರು: ಮುಂದಿನ ವರ್ಷ ನಡೆಯುವ ಮಹಿಳಾ ಪ್ರೀಮಿಯರ್ ಲೀಗ್(Women’s Premier League) 2024ರ ಆಟಗಾರ್ತಿಯರ ಹರಾಜು(WPL Auction 2024) ಪ್ರಕ್ರಿಯೆ ಈಗಾಗಲೇ ಮುಕ್ತಾಯ ಕಂಡಿದೆ. ಶನಿವಾರ (ಡಿ.9) ಮುಂಬೈಯಲ್ಲಿ ಹರಾಜು ಪ್ರಕ್ರಿಯೆ ನಡೆದಿತ್ತು. ಎಲ್ಲ 5 ಫ್ರಾಂಚೈಸಿಗಳು ಕೂಡ ತಮಗೆ ಬೇಕಿದ್ದ ಆಟಗಾರ್ತಿಯನ್ನು ಹರಾಜಿನಲ್ಲಿ ಕೊಂಡುಕೊಂಡಿದೆ. ಆದರೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕಟ್ಟರ್‌ ಅಭಿಮಾನಿಯಾಗಿರುವ(CSK fan Kate Cross) ಇಂಗ್ಲೆಂಡ್ ಆಟಗಾರ್ತಿ ಕೇಟ್ ಕ್ರಾಸ್ (Kate Cross) ಅವರನ್ನು ಆರ್​ಸಿಬಿ ತಂಡ ಖರೀದಿ ಮಾಡಿದ್ದು ಆರ್​ಸಿಬಿ ಅಭಿಮಾನಿಗಳಿಗೆ ಬೇಸರ ತಂದಿದೆ.

ಮಿನಿ ಹರಾಜಿನಲ್ಲಿ ಇಂಗ್ಲೆಂಡ್​ ತಂಡದ ಆಲ್​ರೌಂಡರ್​ ಆಗಿರುವ ಕೇಟ್​ ಕ್ರಾಸ್​ ಅವರನ್ನು ಆರ್​ಸಿಬಿ 30 ಲಕ್ಷ ರೂ. ಖರೀದಿ ಮಾಡಿದೆ. ಇದರ ಬೆನ್ನಲ್ಲೇ ಅವರು ತಮ್ಮ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಆರ್​ಸಿಬಿ ಸೇರಿದಕ್ಕೆ ಸಂತಸಗೊಂಡಿದ್ದೇನೆ. ಆದರೂ ನಾನು ಚೆನ್ನೈ ಸೂಪರ್ ಕಿಂಗ್ಸ್​ನ ಅಪ್ಪಟ್ಟ ಅಭಿಮಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ಬರೆದಿದ್ದಾರೆ. ಇದು ಆರ್​ಸಿಬಿ ಅಭಿಮಾನಿಗಳಿಗೆ ಕೆರಳಿಸುವಂತೆ ಮಾಡಿದೆ.

​ಐಪಿಎಲ್​ನ ಬದ್ಧ ಎದುರಾಳಿ ತಂಡಗಳೆಂದರೆ ಅದು ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ರಾಯಲ್​ ಚಾಲೆಂಜರ್ಸ್ ಬೆಂಗಳೂರು. ಇತ್ತಂಡಗಳ ಪಂದ್ಯ ಬಂತೆಂದರೆ ಸಾಕು ಇಂಡೋ-ಪಾಕ್​ ಪಂದ್ಯದಂತೆ ಅಭಿಮಾನಿಗಳು ಈ ಪಂದ್ಯವನ್ನು ನೋಡಲು ಕಾತರಗೊಳ್ಳುತ್ತಾರೆ. ಅಲ್ಲದೆ ಪಂದ್ಯದ ಬಳಿಕ ಅಭಿಮಾನಿಗಳು ಹಲವು ಬಾರಿ ಹೊಡೆದಾಟ ಕೂಟ ನಡೆಸಿದ ಹಲವು ನಿದರ್ಶನಗಳಿಗೆ. ಹೀಗಿರುವಾಗ ಆರ್​ಸಿಬಿ ಸೇರಿಯೂ ಚೆನ್ನೈ ತಂಡದ ಅಭಿಮಾನಿ ಎಂದು ಕೇಟ್ ಕ್ರಾಸ್ ಹೇಳಿರುವುದು ಆರ್​ಸಿಬಿ ಫ್ಯಾನ್ಸ್​ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ಬೆಂಚ್​​ ಕಾಯಿಸಿ ಎಂದ ನೆಟ್ಟಿಗರು

ಚೆನ್ನೈ ಅಭಿಮಾನಿಯಾಗಿರುವ ಕೇಟ್ ಕ್ರಾಸ್ ಅವರನ್ನು ಆಡುವ ಬಳಗದಲ್ಲಿ ಅವಕಾಶ ನೀಡದೆ ಅವರನ್ನು ಟೂರ್ನಿಯುದ್ದಕ್ಕೂ ಬೆಂಚ್​ ಕಾಯಿಸಿ ಎಂದು ನೆಟ್ಟಿಗರೊಬ್ಬರು ಆರ್​ಸಿಬಿ ಫ್ರಾಂಚೈಸಿಗೆ ಸಲಹೆ ನೀಡಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಆರ್​ಸಿಬಿ ಫ್ರಾಂಚೈಸಿ ಮೇಲೆಯ ಕಿಡಿಕಾರಿದ್ದಾರೆ. ಈ ಹಿಂದೆಯೇ ಕೇಟ್ ಕ್ರಾಸ್ ಅವರು ಚೆನ್ನೈ ಸೂಪರ್​ ಕಿಂಗ್ಸ್​ ಅಭಿಮಾನಿ ಎನ್ನುವುದನ್ನು ತಿಳಿದಿದ್ದರೂ ಕೂಡ ಅವರನ್ನು ಖರೀದಿ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಟ್ ಕ್ರಾಸ್ ಕಳದ ಕೆಲ ವರ್ಷಗಳಿಂದ ಐಪಿಎಲ್​ ಟೂರ್ನಿ ಆರಂಭವಾಗುವ ಸಂದರ್ಭದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಜರ್ಸಿ ಧರಿಸಿ ತಂಡಕ್ಕೆ ಬೆಂಬಲ ಸೂಚಿಸುತ್ತಲೇ ಬಂದಿದ್ದರು. ಇದರ ಫೋಟೊಗಳು ಕೂಡ ವೈರಲ್​ ಆಗಿತ್ತು.

ಇದನ್ನೂ ಓದಿ RCB WPL 2024: ಬಲಿಷ್ಠ ತಂಡ ಕಟ್ಟಿದ ಮಹಿಳಾ ಆರ್​ಸಿಬಿ; ಆಟಗಾರ್ತಿಯರ ಫುಲ್​ ಲೀಸ್ಟ್​ ಇಲ್ಲಿದೆ 

ಆರ್​ಸಿಬಿ ತಂಡ

ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕೇಟ್ ಕ್ರಾಸ್, ಏಕ್ತಾ ಬಿಶ್ತ್, ಶುಭಾ ಸತೀಶ್, ಎಸ್ ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್.

Continue Reading

ಕ್ರಿಕೆಟ್

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

VISTARANEWS.COM


on

ipl fans
Koo

ಮುಂಬಯಿ: ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024)ರ ಆಟಗಾರರ ಮಿನಿ ಹರಾಜು(IPL Auction 2024) ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಆದರೆ ಟೂರ್ನಿ ಯಾವಾಗ ಆರಂಭವಾಗಲಿದೆ ಎನ್ನುವುದು ಕ್ರಿಕೆಟ್​ ಅಭಿಮಾನಗಳ ಚಿಂತೆಯಾಗಿತ್ತು. ಇದಕ್ಕೆ ಈ ಉತ್ತರ ಸಿಕ್ಕಿದೆ. ಟೂರ್ನಿ ಆರಂಭದ ಸುಳಿವನ್ನು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(jay shah) ಬಿಟ್ಟುಕೊಟ್ಟಿದ್ದಾರೆ.

ಹೌದು, ಶನಿವಾರ ಮುಂಬೈಯಲ್ಲಿ ನಡೆದಿದ್ದ ಮಹಿಳಾ ಪ್ರೀಮಿಯರ್​ ಲೀಗ್​ನ ಮಿನಿ ಹರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಯ್​ ಶಾ ಅವರು ಪುರುಷರ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭದ ಬಗ್ಗೆ ಮಾಹಿತಿ ನೀಡಿದ್ದಾರೆ.​

ಪ್ರತಿ ವರ್ಷ ಐಪಿಎಲ್​ ಆರಂಭವಾಗುವುದು ಮಾರ್ಚ್​ ಅಂತಿಮ ವಾರದಲ್ಲಿ. ಮೇ ತನಕ ಪಂದ್ಯಾವಳಿಗಳು ಸಾಗುತ್ತದೆ. ಆದರೆ ಈ ಬಾರಿ 2024 ಲೋಕಸಭಾ ಚುನಾವಣೆ ಇದೇ ಸಮಯದಲ್ಲಿ ಇರುವುದರಿಂದ ಟೂರ್ನಿಯನ್ನು ಭಾರತದಲ್ಲಿ ನಡೆಸುವುದು ಕಷ್ಟ. ಹೀಗಾಗಿ ಐಪಿಎಲ್​ ಅಭಿಮಾನಿಗಳಿಗೆ ಟೂರ್ನಿ ಆರಂಭದ ಬಗ್ಗೆ ಹಲವು ಗೊಂದಲ ಕಾಡಿತ್ತು. ಇದೀಗ ಜಯ್​ ಶಾ ಅವರು ಮಾರ್ಚ್ ಕೊನೆಯ ವಾರದಲ್ಲಿ ಐಪಿಎಲ್ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆದರೆ ದಿನಾಂಕ ಮತ್ತು ಈ ಟೂರ್ನಿಯನ್ನು ಎಲ್ಲಿ ನಡೆಸಲಾಗುವುದು ಎನ್ನುವ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಈ ಹಿಂದೆಯೂ ವಿದೇಶದಲ್ಲಿ ನಡೆದಿತ್ತು ಟೂರ್ನಿ

2009ರಲ್ಲಿ ಮಹಾಚುನಾವಣೆಯ ಕಾರಣದಿಂದ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿಯೂ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಆದರೆ ಈ ಬಾರಿ ಬಿಸಿಸಿಐ ಸಂಪೂರ್ಣವಾಗಿ ಟೂರ್ನಿಯನ್ನು ವಿದೇಶದಲ್ಲಿ ನಡೆಸುವುದು ಕಷ್ಟ ಸಾಧ್ಯ. ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿ ಒಂದು ಹಂತದ ಪಂದ್ಯಗಳನ್ನು ವಿದೇಶದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ ಈ ತಾಣ ಯಾವುದೆಂಬುದು ಕುತೂಹಲ. ಸದ್ಯದ ಪ್ರಕಾರ ಬಿಸಿಸಿಐ ಯುಎಇಯಲ್ಲಿ ನಡೆಸುವ ಸಾಧ್ಯತೆ ಅಧಿಕ. ಏಕೆಂದರೆ ಪ್ರಯಾಣದ ದೃಷ್ಟಿಯಲ್ಲಿ ಹತ್ತಿರವಿರುವುದರಿಂದ ಯುಎಇಯನ್ನು ಮೊದಲ ಆಧ್ಯತೆಯಾಗಿ ಆಯ್ಕೆ ಮಾಡಿಕೊಳ್ಳಬಹುದು.

ಇದನ್ನೂ ಓದಿ IPL 2024 : ಹರಾಜಿನಲ್ಲಿ ಬೇಡಿಕೆ ಪಡೆಯಲಿರುವ ಆರ್​ಸಿಬಿಯ ಮೂವರು ಮಾಜಿ ಆಟಗಾರರು ಇವರು

1166 ಆಟಗಾರರು ಹೆಸರು ನೋಂದಣಿ

ಈ ಬಾರಿಯ ಐಪಿಎಲ್​ ಮಿನಿ ಹರಾಜಿಗೆ 1,166 ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪಟ್ಟಿಯಲ್ಲಿ 212 ಅಂತಾರಾಷ್ಟ್ರೀಯ ಪಂದ್ಯವಾಡಿದವರು , 909 ಅಂತಾರಾಷ್ಟ್ರೀಯ ಕ್ರಿಕೆಟ್ ಆಡದವರು ಮತ್ತು 45 ಅಸೋಸಿಯೇಟ್ ಆಟಗಾರರು ಇದ್ದಾರೆ. ಈ ಪೈಕಿ ವಿದೇಶಿ ಆಟಗಾರರ ಸಂಖ್ಯೆ 336 ಎಂದು ತಿಳಿದುಬಂದಿದೆ.

ಫ್ರಾಂಚೈಸಿಗಳಿಗೆ ಸೂಚನೆ

ಹರಾಜು ರಿಜಿಸ್ಟರ್​ನಲ್ಲಿ ಪಟ್ಟಿ ಮಾಡದ ಹೆಚ್ಚುವರಿ ಆಟಗಾರರ ವಿನಂತಿಗಳೊಂದಿಗೆ ಪ್ರತಿಕ್ರಿಯಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಫ್ರಾಂಚೈಸಿಗಳನ್ನು ವಿನಂತಿಸಿದೆ. ವಿನಂತಿಸಿದ ಆಟಗಾರರು ಅರ್ಹರಾಗಿದ್ದರೆ ಮತ್ತು ಆಸಕ್ತಿ ಹೊಂದಿದ್ದರೆ ಸ್ವಯಂಚಾಲಿತವಾಗಿ ಹರಾಜಿನಲ್ಲಿ ಸೇರಿಕೊಳ್ಳಲಿದ್ದಾರೆ. ಹರಾಜಿನಲ್ಲಿ ಸೇರಿಸಲು ಬಯಸುವ ಆಟಗಾರರ ಪಟ್ಟಿಯೊಂದಿಗೆ ಪ್ರತಿಕ್ರಿಯಿಸಲು ಫ್ರಾಂಚೈಸಿಗಳಿಗೆ ಸೂಚನೆ ನೀಡಲಾಗಿದೆ. ಕೇವಲ 77 ಸ್ಲಾಟ್​ಗಳನ್ನು ಮಾತ್ರ ಭರ್ತಿ ಮಾಡಬೇಕಾಗಿದೆ, ಅದರಲ್ಲಿ ಗರಿಷ್ಠ 30 ವಿದೇಶಿ ಆಟಗಾರರು ಇರಬಹುದು. ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 25 ಆಟಗಾರರಿಗೆ ಮಾತ್ರ ಅವಕಾಶ ಇರಲಿದೆ.

Continue Reading
Advertisement
Rambhapuri seer and MB Patil
ಕರ್ನಾಟಕ16 mins ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್16 mins ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ32 mins ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್50 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ55 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ1 hour ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ1 hour ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ1 hour ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ2 hours ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್2 hours ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ7 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌