Hockey India: ಹಾರ್ದಿಕ್‌, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ - Vistara News

ಕ್ರೀಡೆ

Hockey India: ಹಾರ್ದಿಕ್‌, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ

2022ನೇ ಸಾಲಿನ ಪ್ರತಿಷ್ಠಿತ ಹಾಕಿ ಇಂಡಿಯಾ ಮೇಜರ್‌ ಧ್ಯಾನ್‌ಚಂದ್‌ ಜೀವಮಾನದ ಸಾಧನೆ ಪ್ರಶಸ್ತಿ ಗುರುಬಕ್ಷ್​ ಸಿಂಗ್‌ ಅವರಿಗೆ ಒಲಿದಿದೆ.

VISTARANEWS.COM


on

Hockey India: Hockey Player of the Year Award for Hardik, Savita
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಪುರುಷರ ಹಾಕಿ ತಂಡದ ಮಿಡ್‌ಫೀಲ್ಡರ್‌ ಹಾರ್ದಿಕ್‌ ಸಿಂಗ್‌(Hardik Singh) ಮತ್ತು ಮಹಿಳಾ ಹಾಕಿ ತಂಡದ ಗೋಲ್‌ಕೀಪರ್‌ ಸವಿತಾ ಪುನಿಯಾ(Savita Punia) ಅವರಿಗೆ 2022ನೇ ಸಾಲಿನ “ವರ್ಷದ ಹಾಕಿ ಆಟಗಾರ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಪ್ರಶಸ್ತಿ ರೇಸ್​ನಲ್ಲಿ ಮನ್‌ಪ್ರೀತ್‌ ಸಿಂಗ್‌ ಮತ್ತು ಹರ್ಮನ್‌ಪ್ರೀತ್‌ ಸಿಂಗ್‌ ಕೂಡ ಇದ್ದರು. ಆದರೆ ಅವರನ್ನು ಕಿರಿಯ ಆಟಗಾರ ಹಾರ್ದಿಕ್‌ ಸಿಂಗ್‌ ಹಿಂದಿಕ್ಕುವಲ್ಲಿ ಯಶಸ್ಸು ಸಾಧಿಸಿದರು. ಎಫ್‌ಐಎಚ್‌ ಮಹಿಳಾ ನೇಶನ್ಸ್‌ ಕಪ್‌ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸದ ಆಧಾರದಲ್ಲಿ ಸವಿತಾ ಪುನಿಯಾ ಅವರಿಗೂ ಈ ಪ್ರಶಸ್ತಿ ಲಭಿಸಿದೆ. ಇಬ್ಬರೂ ತಲಾ 25 ಲಕ್ಷ ರೂ. ಹಾಗೂ ಟ್ರೋಫಿ ಗೆದ್ದಿದ್ದಾರೆ.

ಇದನ್ನೂ ಓದಿ Hockey India: ಪುರುಷರ ಹಾಕಿ ತಂಡಕ್ಕೆ ಕ್ರೇಗ್ ಫುಲ್ಟನ್ ನೂತನ ಕೋಚ್​

ಹರ್ಮನ್‌ಪ್ರೀತ್‌ ಸಿಂಗ್‌ ಅವರು ಅತ್ಯುತ್ತಮ ಡಿಫೆಂಡರ್‌ ಪ್ರಶಸ್ತಿ, ಕೃಷ್ಣ ಬಿ. ಪಾಠಕ್‌ ಅತ್ಯುತ್ತಮ ಗೋಲ್‌ಕೀಪರ್‌, ಸುಶೀಲಾ ಚಾನು ಅತ್ಯುತ್ತಮ ಮಿಡ್‌ಫೀಲ್ಡರ್‌, ವಂದನಾ ಕಟಾರಿಯಾ ಅತ್ಯುತ್ತಮ ಫಾರ್ವರ್ಡ್‌ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪ್ರತಿಷ್ಠಿತ ಹಾಕಿ ಇಂಡಿಯಾ ಮೇಜರ್‌ ಧ್ಯಾನ್‌ಚಂದ್‌ ಜೀವಮಾನದ ಸಾಧನೆ ಪ್ರಶಸ್ತಿ ಗುರುಬಕ್ಷ್​ ಸಿಂಗ್‌ ಅವರಿಗೆ ನೀಡಿ ಗೌರವಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

IPL 2024: ರವೀಂದ್ರ ಜಡೇಜಾ ಅವರು ಈ ಪಂದ್ಯದಲ್ಲಿ 40 ಎಸೆತ ಎದುರಿಸಿ ಅಜೇಯ 57 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 1 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿದರು. ಬೌಲಿಂಗ್​ನಲ್ಲಿ 3 ಓವರ್​ ಎಸೆದು 32 ರನ್​ ಬಿಟ್ಟುಕೊಟ್ಟರು. ರಾಹುಲ್​ 53 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 82 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

VISTARANEWS.COM


on

IPL 2024
Koo

ಲಕ್ನೋ: ರವೀಂದ್ರ ಜಡೇಜಾ(Ravindra Jadeja) ಎಂದರೆ ನೆನಪಾಗುವುದೇ ಚುರುಕಿನ ಫೀಲ್ಡಿಂಗ್. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವಾದದನ್ನು ಸಾಧ್ಯವಾಗಿಸುವ ತಾಕತ್ತು ಅವರಿಗಿದೆ. ಸೋಮವಾರ ನಡೆದ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧದ(IPL 2024) ಪಂದ್ಯದಲ್ಲಿಯೂ ಜಡೇಜಾ ಒನ್ ಹ್ಯಾಂಡೆಡ್​ ಕ್ಯಾಚ್(Jadeja’s One-Handed Catch)​ ಹಿಡಿದು ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಈ ಪಂದ್ಯದಲ್ಲಿ ಅತ್ಯತ್ತಮ ಬ್ಯಾಟಿಂಗ್​ ನಡೆಸುತ್ತಿದ್ದ ಲಕ್ನೋ ತಂಡದ ನಾಯಕ ಕೆ.ಎಲ್​ ರಾಹುಲ್​ ಅವರು ಆಫ್​ ಸೈಡ್​ನಲ್ಲಿ ಬೌಂಡರಿ ಬಾರಿಸುವ ಪ್ರಯತ್ನದಲ್ಲಿ ಜಡೇಜಾಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಜಡೇಜಾ ಅವರು ಹಿಡಿದ ಈ ಕ್ಯಾಚ್​ ಕಂಡು ಒಂದು ಕ್ಷಣ ಸಹ ಆಟಗಾರರೇ ನಿಬ್ಬೆರಗಾದರು. ಅತ್ತ ಕಾಮೆಂಟ್ರಿ ಮಾಡುತ್ತಿದ್ದ ರವಿಶಾಸ್ತ್ರಿ ‘ಕ್ಯಾಚ್​ ಆಫ್​ ದಿ ದಿಸ್​ ಸೀಸನ್​’. ಬುಲೆಟ್​ ವೇಗದಲ್ಲಿ ಸಾಗಿದ ಚೆಂಡನ್ನು ಲೀಲಾಜಾಲವಾಗಿ ಹಿಡಿಯುವಲ್ಲಿ ಯಶಸ್ಸಿಯಾದರು. ನಿಜಕ್ಕೂ ಇದು ಅದ್ಭುತ” ಎಂದು ವರ್ಣಿಸಿದರು.

ರವೀಂದ್ರ ಜಡೇಜಾ ಅವರು ಈ ಪಂದ್ಯದಲ್ಲಿ 40 ಎಸೆತ ಎದುರಿಸಿ ಅಜೇಯ 57 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 1 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿದರು. ಬೌಲಿಂಗ್​ನಲ್ಲಿ 3 ಓವರ್​ ಎಸೆದು 32 ರನ್​ ಬಿಟ್ಟುಕೊಟ್ಟರು. ರಾಹುಲ್​ 53 ಎಸೆತಗಳಿಂದ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 82 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇಲ್ಲಿನ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. 176 ರನ್​ಗಳ ಗುರಿ ಬೆನ್ನತ್ತಿದ ಕೆ. ಎಲ್​ ರಾಹುಲ್ (KL Rahul) 53 ಎಸೆತಗಳಲ್ಲಿ 82 ರನ್ ಸಿಡಿಸಿ ಔಟಾದರು. ಈ ಮೂಲಕ ಐಪಿಎಲ್​ನಲ್ಲಿ ಹೊಸ ದಾಖಲೆ ಮಾಡಿದರು. ಅವರು ಅತಿ ಹೆಚ್ಚು 50+ ರನ್ ಗಳಿಸಿದ ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿಯ (MS Dhoni) ದಾಖಲೆಯನ್ನು ಮುರಿದಿದ್ದಾರೆ.

ಇದನ್ನೂ ಓದಿ IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

ಧೋನಿ ಹಿಂದಿಕ್ಕಿದ ರಾಹುಲ್​

ಕೆಎಲ್ ರಾಹುಲ್ ಐಪಿಎಲ್​​ನಲ್ಲಿ ಹೆಚ್ಚು 50+ ಸ್ಕೋರ್​ಗಳನ್ನು ಗಳಿಸಿದ ವಿಕೆಟ್ ಕೀಪರ್ ಆಗಿ ಸಿಎಸ್​ಕೆ ಮಾಜಿ ನಾಯಕನನ್ನು ಹಿಂದಿಕ್ಕಿದರು. ಇದು ಕೆ.ಎಲ್.ರಾಹುಲ್ ಅವರ 25ನೇ ಅರ್ಧಶತಕ. ಧೋನಿ ಈವರೆಗೆ 24 ಅರ್ಧಶತಕಗಳನ್ನು ಬಾರಿಸಿದ್ದಾರೆ. ಕೆಎಲ್ ರಾಹುಲ್ ಅವರ ಆರಂಭಿಕ ಪಾಲುದಾರ ಕ್ವಿಂಟನ್ ಡಿ ಕಾಕ್ 23 50+ ಸ್ಕೋರ್​​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Continue Reading

ಕ್ರೀಡೆ

PBKS vs GT: ಗುಜರಾತ್​ ವಿರುದ್ಧವಾದರೂ ಪಂಜಾಬ್​ಗೆ ಒಲಿದೀತೇ ಗೆಲುವಿನ ಅದೃಷ್ಟ?

PBKS vs GT: ಗುಜರಾತ್​ ಟೈಟಾನ್ಸ್ ಮತ್ತು ಪಂಜಾಬ್​ ಕಿಂಗ್ಸ್ ಇದುವರೆಗೆ ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಉಭಯ ತಂಡಗಳು ಕೂಡ ತಲಾ 2 ಗೆಲುವು ಮತ್ತು ಸೋಲು ಕಂಡಿದೆ. ಕಳೆದ ಆವೃತ್ತಿಯ ಮುಖಾಮುಖಿಯಲ್ಲಿ ಪಂಜಾಬ್​ ಗೆಲುವು ಸಾಧಿಸಿತ್ತು.

VISTARANEWS.COM


on

PBKS vs GT
Koo

ಮುಲ್ಲಾನ್‌ಪುರ್‌ (ಚಂಡೀಗಢ): ಪ್ರತಿ ಪಂದ್ಯದಲ್ಲಿಯೂ ಗೆಲುವಿನಂಚಿಗೆ ಬಂದು ವಿರೋಚಿತ ಸೋಲು ಕಾಣುತ್ತಿರುವ ಪಂಜಾಬ್​ ಕಿಂಗ್ಸ್(Punjab Kings)​ ತಂಡ ಭಾನುವಾರದ ರಾತ್ರಿಯ ಐಪಿಎಲ್(IPL 2024) ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್(PBKS vs GT)​ ವಿರುದ್ಧ ಆಡಲಿದೆ. ಪಂಜಾಬ್‌ನ ನೂತನ ಹೋಮ್‌ ಗ್ರೌಂಡ್‌ ಆಗಿರುವ ಮುಲ್ಲಾನ್‌ಪುರ್‌ನಲ್ಲಿ ಈ ಮಹತ್ವದ ಮುಖಾಮುಖಿ ಸಾಗಲಿದೆ. ಪ್ಲೇ ಆಫ್​ ಹಾದಿ ಜೀವಂತವಿರಿಸಬೇಕಿದ್ದರೆ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಮುಖ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಇದೆ.

ಪಂಜಾಬ್​ಗೆ ದೊಡ್ಡ ಸಮಸ್ಯೆಯೆಂದರೆ ಓಪನಿಂಗ್‌ನಲ್ಲಿ ಅನುಭವಿಸುತ್ತಿರುವ ಹಿನ್ನಡೆ. ಬ್ಯಾಟಿಂಗ್‌ ಲೈನ್‌ಆಪ್‌ ಉತ್ತಮ ವಾಗಿದ್ದರೂ ಕೂಡ ಯಾರೊಬ್ಬರು ನಿಂತು ಆಡುತ್ತಿಲ್ಲ. ಯುವ ಬ್ಯಾಟರ್‌ಗಳಾದ ಶಶಾಂಕ್‌ ಸಿಂಗ್‌ ಮತ್ತು ಅಶುತೋಷ್‌ ಶರ್ಮ ಜೋಡಿಯಷ್ಟೇ ಭರವಸೆ ಮೂಡಿಸಿದೆ. ಉಭಯ ಆಟಗಾರರೇ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ಆಸರೆಯಾಗಿ ಗೆಲುವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಉಳಿದವರು ಛಾತಿಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

ಇದನ್ನೂ ಓದಿ Impact Player Rule : ಇಂಪ್ಯಾಕ್ಟ್​ ಪ್ಲೇಯರ್​​ ಸಿಕ್ಕಾಪಟ್ಟೆ ವಿರೋಧ; ಇದೀಗ ಋತುರಾಜ್​ ಸರದಿ

ಖಾಯಂ ನಾಯಕ ಶಿಖರ್​ ಧವನ್​ ಈ ಪಂದ್ಯದಲ್ಲಿಯೂ ಆಡುವುದು ಅನುಮಾನ. ಹೀಗಾಗಿ ಹಂಗಾಮಿ ನಾಯಕ ಸ್ಯಾಮ್​ ಕರನ್​ ಅವರೇ ತಂಡವನ್ನು ಮುನ್ನಡೆಸಬಹುದು. ಪಂಜಾಬ್‌ ಬೌಲಿಂಗ್‌ ಈವರೆಗೆ ಘಾತಕವಾಗಿ ಪರಿಣಮಿ ಸಿಲ್ಲ. ಕಗಿಸೊ ರಬಾಡ, ಅರ್ಷದೀಪ್‌ ಸೀಂಗ್​, ಕರನ್‌, ಬ್ರಾರ್‌ ಮ್ಯಾಜಿಕ್‌ ಮಾಡಿದರಷ್ಟೇ ಗೆಲುವು ಸಾಧ್ಯ.

ಗುಜರಾತ್​​ ತಂಡ ತವರಿನ ಪಂದ್ಯದಲ್ಲಿ ಹೆಚ್ಚು ಪಂದ್ಯ ಗೆದ್ದಿದೆ. ಹೊರಗಡೆ ಆಡಿದ ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ತಂಡದ ಮೇಲೆ ಹೆಚ್ಚಿನ ನಿರೀಕ್ಷೆ ಮಾಡುವಂತಿಲ್ಲ. ಬೌಲಿಂಗ್​ ಮತ್ತು ಬ್ಯಾಟಿಂಗ್​ ಸಾಧಾರಣ ಮಟ್ಟದಲ್ಲಿದೆ. ಕಳೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ 89 ರನ್​ಗೆ ಸರ್ವಪತನ ಕಂಡಿತ್ತು. ಬೌಲಿಂಗ್​ ಕೂಡ ಚೆತರಿಕೆ ಕಾಣದ ಹೊರತು ಗೆಲುವು ದೂರದ ಬೆಟ್ಟವಾಗಿ ಉಳಿಯಲಿದೆ.

ಮುಖಾಮುಖಿ


ಗುಜರಾತ್​ ಟೈಟಾನ್ಸ್ ಮತ್ತು ಪಂಜಾಬ್​ ಕಿಂಗ್ಸ್ ಇದುವರೆಗೆ ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಉಭಯ ತಂಡಗಳು ಕೂಡ ತಲಾ 2 ಗೆಲುವು ಮತ್ತು ಸೋಲು ಕಂಡಿದೆ. ಕಳೆದ ಆವೃತ್ತಿಯ ಮುಖಾಮುಖಿಯಲ್ಲಿ ಪಂಜಾಬ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಗುಜರಾತ್​: ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆ), ಸಾಯಿ ಸುದರ್ಶನ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್.

ಪಂಜಾಬ್​ ಕಿಂಗ್ಸ್​: ರಿಲೀ ರೊಸೊವ್, ಪ್ರಭಾಸಿಮ್ರಾನ್ ಸಿಂಗ್, ಸ್ಯಾಮ್ ಕರ್ರಾನ್ (ನಾಯಕ), ಜಿತೇಶ್ ಶರ್ಮಾ (ವಿಕೆ), ಲಿಯಾಮ್ ಲಿವಿಂಗ್‌ಸ್ಟೋನ್, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್.

Continue Reading

ಕ್ರೀಡೆ

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

IPL 2024: ಈ ವಾರದ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಿಬಿಕೆಎಸ್ ನಡುವೆ ನಿಕಟ ಥ್ರಿಲ್ಲರ್ ಮುಖಾಮುಖಿಯಲ್ಲಿ ಯುವ ಆಟಗಾರ ಅಶುತೋಷ್ ಶರ್ಮಾ ಕ್ರೀಸ್​ನಲ್ಲಿ ತಮ್ಮ ಪ್ರತಿಭೆಯಿಂದ ಮುಂಬೈ ಇಂಡಿಯನ್ಸ್ ಅನ್ನು ಮೀರಿಸಿದ್ದರು. ಆದರೆ ಅಂತಿಮವಾಗಿ ಪಂದ್ಯವನ್ನು ಮುಂಬೈ ತಂಡ 9 ರನ್​ಗಳಿಂದ ಗೆದ್ದಿತ್ತು.

VISTARANEWS.COM


on

IPL 2024
Koo

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡದ ಸದಸ್ಯರಾದ ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇತ್ತೀಚೆಗೆ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್​​ ಪಂದ್ಯದ (IPL 2024) ವೇಳೆ ಡಿಆರ್​ಎಸ್​ ಅಕ್ರಮ ಎಸಗಿ ಐಪಿಎಲ್​​ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕೆ ದಂಡ ಪಾವತಿ ಮಾಡುವಂತಾಗಿದೆ. ಅವರಿಬ್ಬರೂ ಡಗ್​ಔಟ್​ನಲ್ಲಿ ಕುಳಿತು ಸೂರ್ಯಕುಮಾರ್ ಯಾದವ್​ಗೆ ಡಿಆರ್​ಎಸ್​​ ರೆಫರ್ ಮಾಡಲು ಸಹಾಯ ಮಾಡಿದ್ದರು. ಇದು ನಿಯಮ ಉಲ್ಲಂಘನೆಯಾಗಿದೆ.

ಈ ವಾರದ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಿಬಿಕೆಎಸ್ ನಡುವೆ ನಿಕಟ ಥ್ರಿಲ್ಲರ್ ಮುಖಾಮುಖಿಯಲ್ಲಿ ಯುವ ಆಟಗಾರ ಅಶುತೋಷ್ ಶರ್ಮಾ ಕ್ರೀಸ್​ನಲ್ಲಿ ತಮ್ಮ ಪ್ರತಿಭೆಯಿಂದ ಮುಂಬೈ ಇಂಡಿಯನ್ಸ್ ಅನ್ನು ಮೀರಿಸಿದ್ದರು. ಆದರೆ ಅಂತಿಮವಾಗಿ ಪಂದ್ಯವನ್ನು ಮುಂಬೈ ತಂಡ 9 ರನ್​ಗಳಿಂದ ಗೆದ್ದಿತ್ತು.

ಪಿಬಿಕೆಎಸ್ ವಿರುದ್ಧ ಮೋಸ ಮಾಡಿದೆಯೇ ಮುಂಬಯಿ?

ಮೊದಲ ಇನ್ನಿಂಗ್ಸ್​​ನ 15 ನೇ ಓವರ್​ನಲ್ಲಿ ಅರ್ಶ್​ದೀಪ್​ ಸಿಂಗ್ ಅವರ ವೈಡ್ ಯಾರ್ಕರ್ ಅನ್ನು ಸರಿಯಾದ ಎಸೆತ ಎಂದು ಅಂಪೈರ್​ ಪರಿಗಣಿಸಿದ್ದರು. ಆದರೆ ಡಗೌಟ್​ನಿಂದ ಪೊಲಾರ್ಡ್ ಹಾಗೂ ಡೇವಿಡ್​ ನೆರವು ನೀಡಿದ ಕಾರಣ ಸೂರ್ಯಕುಮಾರ್​ ಡಿಆರ್​​ಎಸ್ ತೆಗೆದುಕೊಂಡರು.

ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇದು ನಿಜವಾಗಿಯೂ ವೈಡ್ ಎಸೆತ ಮತ್ತು ಸೂರ್ಯ ಡಿಆರ್​​ಎಸ್​ ತೆಗೆದುಕೊಳ್ಳಬೇಕು ಎಂದು ಮಾಡಿದ್ದರು. ಮೂರನೇ ಅಂಪೈರ್​​ ವೀಡಿಯೊ ಪರಿಶೀಲನೆ ಮಾಡಿ ಆನ್​ಫೀಲ್ಡ್ ಅಂಪೈರ್​​​ ನಿರ್ಧಾರವನ್ನು ರದ್ದುಗೊಳಿಸಿದ್ದರು.

ಇದನ್ನೂ ಓದಿ :MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲನೆಯ ನಂತರ, ಐಪಿಎಲ್ ಅಧಿಕಾರಿಗಳು ಲೀಗ್​ನ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೇವಿಡ್ ಮತ್ತು ಪೊಲಾರ್ಡ್​ಗೆ ದಂಡ ವಿಧಿಸಿದ್ದಾರೆ. ಇವರಿಬ್ಬರು ಆಟದ ಸ್ಫೂರ್ತಿಯಾಗಿರುವ ಉಲ್ಲಂಘನೆಯನ್ನು ಹೇಳುವ ಆರ್ಟಿಕಲ್ 2.20 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.

ಐಪಿಎಲ್ ಅಧಿಕಾರಿಗಳು ತಮ್ಮ ಹೇಳಿಕೆಯಲ್ಲಿ ಈ ಘಟನೆಯನ್ನು ನಿರ್ದಿಷ್ಟಪಡಿಸದಿದ್ದರೂ, ಇದು ಅಂತರ್ಜಾಲದಲ್ಲಿ ಉಂಟಾದ ಕೋಲಾಹಲವನ್ನು ಗಮನಿಸಿದರೆ ವೈಡ್ ಕಾಲ್ ಘಟನೆಗೆ ಸಂಬಂಧಿಸಿದೆ ಎಂಬುದು ಸ್ಪಷ್ಟವಾಗಿದೆ. ಟಿಮ್ ಡೇವಿಡ್ ಮತ್ತು ಕೀರನ್ ಪೊಲಾರ್ಡ್ ಇಬ್ಬರೂ ಲೆವೆಲ್ 1 ಉಲ್ಲಂಘನೆಯ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 20% ಅನ್ನು ದಂಡವಾಗಿ ಪಾವತಿಸಲು ಆದೇಶಿಸಲಾಗಿದೆ.

Continue Reading

ಕ್ರಿಕೆಟ್

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

KKR vs RCB: 2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

VISTARANEWS.COM


on

KKR vs RCB
Koo

ಕೋಲ್ಕತ್ತಾ: ಭಾನುವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಕೆಕೆಆರ್​(Kolkata Knight Riders) ಮತ್ತು ಆರ್​ಸಿಬಿ(RCB vs KKR) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಆರ್​ಸಿಬಿಗೆ ಸೇಡಿನ ಪಂದ್ಯವಾಗಿದೆ. ಏಕೆಂದರೆ ಚಿನ್ನಸ್ವಾಮಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಕೆಕೆಆರ್​ ಗೆಲುವು ಸಾಧಿಸಿತ್ತು. ಇದೀಗ ಕೆಕೆಆರ್​ಗೆ ತನ್ನ ತವರಿನಲ್ಲೇ ಸೋಲುಣಿಸಿ ಸೇಡು ತೀರಿಸಲು ಆರ್​ಸಿಬಿ(Royal Challengers Bengaluru) ಪಣ ತೊಟ್ಟಿದೆ.

ತವರಿನಲ್ಲೇ ಸತತ ಸೋಲಿನ ಅವಮಾನ ಕಂಡಿರುವ ಆರ್​ಸಿಬಿ ಹೊರಗಡೆ ಆಡಿದ ಪಂದ್ಯದಲ್ಲಿ ಗೆಲ್ಲಬಹುದೇ ಎನ್ನುವ ಪ್ರಶ್ನೆ ಮೂಡುವುದು ಕೂಡ ಸಹಜ. ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ನರೈನ್​ ಭಯ


ಆರ್​ಸಿಬಿ ತಂಡದ ದೊಡ್ಡ ಶತ್ರುವೆಂದರೆ ಸುನೀಲ್​ ನರೈನ್​ ಅವರ ಪ್ರಚಂಡ ಬ್ಯಾಟಿಂಗ್​. ನರೈನ್​ ಯಾವುದೇ ಪಂದ್ಯದಲ್ಲಿ ಆಡದಿದ್ದರೂ ಕೂಡ ಆರ್​ಸಿಬಿ ವಿರುದ್ಧ ಮಾತ್ರ ಸಿಡಿದು ನಿಲ್ಲುತ್ತಾರೆ. ಆರಂಭಿಕಾಗಿ ಕಣಕ್ಕಿಳಿದು ಕಡಿಮೆ ಎಸೆತಗಳಿಂದ ದೊಡ್ಡ ಮೊತ್ತ ಪೇರಿಸಿ ಆರ್​ಸಿಬಿ ಮೇಲೆ ಒತ್ತಡ ಹೇರುತ್ತಾರೆ. ಈ ಬಾರಿಯಂತು ಅವರು ಭಯಾನಕ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಕಳೆದ ರಾಜಸ್ಥಾನ್​ ವಿರುದ್ಧ ಶತಕ ಕೂಡ ಬಾರಿಸಿದ್ದರು. ಅದು ಕೂಡ ಈಡನ್​ ಗಾರ್ಡನ್ಸ್​ನಲ್ಲೇ. ಹೀಗಾಗಿ ಈ ಪಂದ್ಯದಲ್ಲೂ ತಂಡ ಇವರ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟಿದೆ.

ಇದನ್ನೂ ಓದಿ IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

18 ವರ್ಷದ ಆಂಗ್ಕ್ರಿಶ್ ರಘುವಂಶಿ ಕೂಡ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನಸೆಳೆಯುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಬ್ಯಾಟಿಂಗ್​ ನಡೆಸುವ ಚಾಕಚಕ್ಯತೆ ಇವರಲ್ಲಿದೆ. ಭವಿಷ್ಯದ ಆಟಗಾರನೆಂದೇ ಗುರುತಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಸೆಲ್, ರಿಂಕು ಸಿಂಗ್​ ತಂಡಕ್ಕೆ ಆಸರೆಯಾಗಬಲ್ಲರು.

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ. ವಿರಾಟ್​ ಕೊಹ್ಲಿ 2019ರಲ್ಲಿ ಕೆಕೆಆರ್​ ವಿರುದ್ಧ ಇದೇ ಮೈದಾನದಲ್ಲಿ ಶತಕ ಕೂಡ ಬಾರಿಸಿದ್ದರು. ಈ ಬಾರಿ ಏನು ಮಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 33 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 19 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. 

Continue Reading
Advertisement
Trust Of The Nation 2024
ಪ್ರಮುಖ ಸುದ್ದಿ1 min ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Modi in Karnataka PM Modi to address rally in Bengaluru Here live video
Lok Sabha Election 202422 mins ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ24 mins ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್25 mins ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Mrunal Thakur and Siddhant Chaturvedi to start shoot
ಟಾಲಿವುಡ್25 mins ago

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

IPL 2024
ಕ್ರೀಡೆ26 mins ago

IPL 2024: ‘ಕ್ಯಾಚ್ ಆಫ್ ದಿ ಐಪಿಎಲ್ 2024’; ಜಡೇಜಾ ಫ್ಲೈಯಿಂಗ್ ಕ್ಯಾಚ್​ಗೆ ಶಬ್ಬಾಶ್ ಎಂದ ರವಿಶಾಸ್ತ್ರಿ

Viral Video
ವೈರಲ್ ನ್ಯೂಸ್27 mins ago

Viral Video: ಯುವತಿ ತಲೆಗೆ ಬಲವಂತವಾಗಿ ಹಿಜಾಬ್‌ ಹಾಕಿದ ಪಾಕ್‌ ಯುವಕ; ಮುಂದೇನಾಯ್ತು?

Murder Case
ಬೆಂಗಳೂರು28 mins ago

Murder case : ಬೆಂಗಳೂರಲ್ಲಿ ಮಹಿಳೆಯ ಬರ್ಬರ ಹತ್ಯೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Lok Sabha Election 2024
ಕರ್ನಾಟಕ31 mins ago

Lok Sabha Election 2024: ನಾಚಿಗೆ ಇಲ್ಲದೆ 3 ಸೀಟಿಗಾಗಿ ಬಿಜೆಪಿ ಜತೆ ಹೋಗಿದ್ದಾರೆ: ದೇವೇಗೌಡರ ವಿರುದ್ಧ ಸಿಎಂ ವಾಗ್ದಾಳಿ

Lok Sabha Election 2024
Lok Sabha Election 202442 mins ago

Lok Sabha Election 2024: ಮೊದಲ ಹಂತದ ಮತದಾನ ವೇಳೆ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ49 mins ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 hour ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ5 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ6 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌