ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ? - Vistara News

ಕ್ರೀಡೆ

ICC Chairman Election: ಅಮಿತ್​ ಶಾ ಮಗ ಜಯ್​ ಶಾ ಐಸಿಸಿಯ ಮುಂದಿನ ಅಧ್ಯಕ್ಷ?

VISTARANEWS.COM


on

ICC Chairman Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ತಮ್ಮ ಈ ಹುದ್ದೆಯನ್ನು ತೊರೆಯಲಿದ್ದಾರೆ ಎಂದು ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಇದೀಗ ಈ ಸುದ್ದಿ ಕೆಲವೇ ದಿನಗಳಲ್ಲಿ ನಿಜವಾಗುವ ಸಾಧ್ಯತೆ ಕಂಡು ಬಂದಿದೆ. ಹೌದು, ಐಸಿಸಿ ಹಾಲಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ(Greg Barclay) ಮೂರನೇ ಅವಧಿಗೆ ಮುಂದುವರಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಐಸಿಸಿಯ(ICC) ಹೊಸ ಅಧ್ಯಕ್ಷರ ಚುನಾವಣೆಗೆ(ICC Chairman Election) ಜಯ್ ಶಾ ಸ್ಪರ್ಧಿಸುವುದು ಖಚಿತ ಎನ್ನಲಾಗಿದೆ. ಐಸಿಸಿ ಚುನಾವಣೆ ಇದೇ ನವೆಂಬರ್​ನಲ್ಲಿ ನಡೆಯಲಿದೆ.

‘ನವೆಂಬರ್ ಅಂತ್ಯದಲ್ಲಿ ಅಧಿಕಾರಾವಧಿ ಮುಗಿದಾಗ ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ. ಮೂರನೇ ಅವಧಿಗೆ ನಿಲ್ಲುವುದಿಲ್ಲ’ ಎಂದು ಗ್ರೆಗ್ ಬಾರ್ಕ್ಲೇ ಅವರು ಈಗಾಗಲೇ ಮಂಡಳಿಗೆ ದೃಢಪಡಿಸಿದ್ದಾರೆ. ಬಾರ್ಕ್ಲೇ ಅವರು 2020 ರಲ್ಲಿ ಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ನೇಮಕವಾಗಿದ್ದರು. ಇದಾದ ಬಳಿಕ 2022 ರಲ್ಲಿ ಅವರನ್ನು ಮರು ಆಯ್ಕೆ ಮಾಡಲಾಗಿತ್ತು. ನ್ಯೂಜಿಲ್ಯಾಂಡ್ ಮೂಲದ ವಕೀಲ ಗ್ರೆಗ್ ಬಾರ್ಕ್ಲೇ ಕಳೆದ ನಾಲ್ಕು ವರ್ಷಗಳಿಂದ ಐಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಈಗಾಗಲೇ ಜಯ್​ ಶಾ ಬಿಸಿಸಿಐ ಜತೆಗೆ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಮಾತ್ರವಲ್ಲದೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್​ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಈ ಬಾರಿ ಖಚಿತ ಎಂದು ಜಯ್​ ಶಾ ಆಪ್ತ ಮೂಲಗಳು ಮಾಹಿತಿ ನೀಡಿದೆ. ಜಯ್ ಶಾ 2019 ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಯನ್ನು ವಹಿಸಿಕೊಂಡಿದ್ದರು.

ಇದನ್ನೂ ಓದಿ Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

35 ವರ್ಷದ ಜಯ್​ ಶಾ ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಪಾತ್ರರಾಗಲಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅಧಿಕಾರದಲ್ಲಿದ್ದಾರೆ. 2020ರಲ್ಲಿ ಈ ಸ್ಥಾನಕ್ಕೆ ಇವರು ಆಯ್ಕೆ ಆಗಿದ್ದರು. ಈ ವರ್ಷ ಅವರ ಅಧಿಕಾರಾವಧಿ ಕೊನೆಯಾಗಲಿದೆ.

ಜಯ್​ ಶಾ ನಾಯಕತ್ವವು ವಿಶ್ವಾದ್ಯಂತ ಕ್ರಿಕೆಟ್‌ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದೆ. ಐಸಿಸಿ ಪುರುಷರ ವಿಶ್ವಕಪನ್ನು ಅವರು ಹೊಸ ಎತ್ತರಕ್ಕೆ ಮುನ್ನಡೆಸಿದ್ದಾರೆ. ಲಿಂಗ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್​ನಲ್ಲಿ ಪುರುಷ ಮತ್ತು ಮಹಿಳಾ ಆಟಗಾರ್ತಿಯರಿಗೆ ಸಮಾನ ವೇತನ ಪದ್ಧತಿಯನ್ನು ಕೂಡ ಇವರ ಕಾರ್ಯವಧಿಯಲ್ಲಿ ಜಾರಿಗೆ ತರಲಾಗಿತ್ತು. ಮತ್ತು ಮಹಿಳಾ ಪ್ರೀಮಿಯರ್ ಲೀಗ್‌ನ ರಚನೆ, ಒಲಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆ, ಹೀಗೆ ಅನೇಕ ಕಾರ್ಯಗಳ ಮೂಲಕ ಕ್ರಿಕೆಟ್​ ಕ್ಷೇತ್ರದಲ್ಲಿ ಬದಲಾವಣೆಯನ್ನು ಮಾಡಿದ್ದಾರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥರಾದ ಅತ್ಯಂತ ಕಿರಿಯ ಎನ್ನುವ ಹೆಗ್ಗಳಿಕೆಯೂ ಜಯ್​ ಶಾ ಅವರದ್ದಾಗಿದೆ. ಭಾರತದ ದೇಶೀಯ ಕ್ರಿಕೆಟ್ ಭವಿಷ್ಯವನ್ನು ಬದಲಾವಣೆ ಮಾಡುವ ನಿಟ್ಟಿನಲ್ಲಿ ಜಯ್​ ಶಾ ಹಲವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

VISTARANEWS.COM


on

ಐಪಿಎಲ್ 2026ರ ಸೋಮವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಟೂರ್ನಿಯ ಇತಿಹಾಸದಲ್ಲಿ ಬರೋಬ್ಬರಿ 9,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕಿಂಗ್ ಕೊಹ್ಲಿಗೆ ಇನ್ನು ಕೇವಲ 11 ರನ್‌ಗಳ ಅಗತ್ಯವಿದೆ. 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿರುವ ಕೊಹ್ಲಿ, ತಮ್ಮ ಅಮೋಘ ಸ್ಥಿರತೆಯ ಮೂಲಕ ಕ್ರಿಕೆಟ್ ಲೋಕದ ‘ರನ್ ಮಷೀನ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲು ಹೊರಟಿದ್ದಾರೆ.

ಪ್ರಸಕ್ತ ಸೀಸನ್‌ನಲ್ಲಿ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದು, ಕೇವಲ ಏಳು ಇನ್ನಿಂಗ್ಸ್‌ಗಳಲ್ಲಿ 328 ರನ್‌ಗಳನ್ನು ಸಿಡಿಸಿ ಅಬ್ಬರಿಸುತ್ತಿದ್ದಾರೆ. ಇದುವರೆಗೆ ಒಟ್ಟು 274 ಐಪಿಎಲ್ ಪಂದ್ಯಗಳನ್ನು ಆಡಿರುವ ಕೊಹ್ಲಿ, 8,989 ರನ್‌ಗಳನ್ನು ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ಅವರು 11 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ 9 ಸಾವಿರದ ಗಡಿ ದಾಟಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ಅವರ ಹೆಸರಿಗೆ ಸೇರಲಿದೆ. ಕೊಹ್ಲಿ ಅವರ ಈ ಸಾಧನೆಯನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯನ್ನು ಗಮನಿಸಿದರೆ ಕೊಹ್ಲಿ ಅವರ ಸಾಧನೆ ಎಷ್ಟು ದೊಡ್ಡದು ಎಂಬುದು ಅರ್ಥವಾಗುತ್ತದೆ. ಅವರ ನಂತರದ ಸ್ಥಾನದಲ್ಲಿರುವ ರೋಹಿತ್ ಶರ್ಮಾ (7,183 ರನ್) ಅವರಿಗಿಂತ ಕೊಹ್ಲಿ ಬಹಳ ಮುಂದಿದ್ದಾರೆ. ಶಿಖರ್ ಧವನ್, ಡೇವಿಡ್ ವಾರ್ನರ್ ಮತ್ತು ಕೆ.ಎಲ್. ರಾಹುಲ್ ಅವರಂತಹ ದಿಗ್ಗಜ ಆಟಗಾರರೂ ಸಹ ಕೊಹ್ಲಿಯ ರನ್ ವೇಗವನ್ನು ತಲುಪಲು ಹೋರಾಡುತ್ತಿದ್ದಾರೆ. ಕಿಂಗ್ ಕೊಹ್ಲಿಯ ಈ ಅಪ್ರತಿಮ ದಾಖಲೆಯು ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುವ ಕ್ಷಣ ಹತ್ತಿರದಲ್ಲಿದೆ.

Continue Reading

Latest

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

VISTARANEWS.COM


on

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ನಡೆದ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ನಡುವಿನ ಹೈ-ಪ್ರೊಫೈಲ್ ಪಂದ್ಯಕ್ಕೂ ಮುನ್ನ ಭಾರಿ ಭದ್ರತಾ ಲೋಪ ಉಂಟಾಗಿದೆ. ಕ್ರೀಡಾಂಗಣದ ಸುರಕ್ಷತೆಯ ದೃಷ್ಟಿಯಿಂದ ಅಳವಡಿಸಲಾಗಿದ್ದ ಸುಮಾರು 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಇಬ್ಬರು ಸಿಬ್ಬಂದಿಗಳು ಉದ್ದೇಶಪೂರ್ವಕವಾಗಿ ನಿಷ್ಕ್ರಿಯಗೊಳಿಸಿದ್ದಾರೆ. ಪಂದ್ಯದ ವೇಳೆ ಸಾವಿರಾರು ಪ್ರೇಕ್ಷಕರು ಸೇರುವ ಇಷ್ಟು ದೊಡ್ಡ ಕ್ರೀಡಾಂಗಣದಲ್ಲಿ ಏಕಾಏಕಿ ಕ್ಯಾಮೆರಾಗಳು ಸ್ಥಗಿತಗೊಂಡಿದ್ದು ಪೊಲೀಸರು ಮತ್ತು ಕ್ರೀಡಾ ಅಭಿಮಾನಿಗಳಲ್ಲಿ ಭಾರಿ ಆತಂಕ ಮೂಡಿಸಿತ್ತು.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಎಂಬ ಇಬ್ಬರು ಸಿಬ್ಬಂದಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಯ ವೇಳೆ ಇವರು ಹಳೆಯ ಪ್ರವೇಶ ಕಾರ್ಡ್ ಬಳಸಿ ಗುಟ್ಟಾಗಿ ಸರ್ವರ್ ರೂಂಗೆ ನುಗ್ಗಿರುವುದು ಮತ್ತು ಅಲ್ಲಿನ ನೆಟ್‌ವರ್ಕ್ ವೈರ್‌ಗಳನ್ನು ಕತ್ತರಿಸಿ ಸಿಸಿಟಿವಿ ಸಂಪರ್ಕ ಕಟ್ ಮಾಡಿರುವುದು ದೃಶ್ಯಗಳಲ್ಲಿ ಪತ್ತೆಯಾಗಿದೆ. ಈ ಘಟನೆಯಿಂದಾಗಿ ಕ್ರೀಡಾಂಗಣದ ಪ್ರವೇಶ ದ್ವಾರಗಳು ಮತ್ತು ಕಾರ್ಪೊರೇಟ್ ಸ್ಟ್ಯಾಂಡ್‌ಗಳು ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸ್ವಲ್ಪ ಸಮಯದವರೆಗೆ ಯಾವುದೇ ಕಣ್ಗಾವಲು ಇಲ್ಲದಂತಾಗಿತ್ತು.

ಇಷ್ಟೊಂದು ದೊಡ್ಡ ಮಟ್ಟದ ಅಪಾಯಕಾರಿ ಕೆಲಸ ಮಾಡಲು ಕಾರಣವೇನು ಎಂದು ವಿಚಾರಿಸಿದಾಗ ಶಾಕಿಂಗ್ ಸತ್ಯ ಹೊರಬಿದ್ದಿದೆ. ಈ ಸಿಬ್ಬಂದಿಗಳಿಗೆ ಕೆಲಸ ನೀಡಿದ್ದ ಸಂಸ್ಥೆಯಿಂದ ಬರಬೇಕಿದ್ದ ಸುಮಾರು 10 ಲಕ್ಷ ರೂಪಾಯಿ ಬಾಕಿ ಹಣ ಪಾವತಿಯಲ್ಲಿ ವಿಳಂಬವಾಗಿತ್ತು. ಇದರಿಂದ ಬೇಸರಗೊಂಡು ಕಂಪನಿಗೆ ತೊಂದರೆ ಕೊಡಲು ಈ ರೀತಿ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಭದ್ರತಾ ಅಧಿಕಾರಿಗಳು ತಕ್ಷಣವೇ ಬ್ಯಾಕಪ್ ವ್ಯವಸ್ಥೆಯ ಮೂಲಕ ಕಣ್ಗಾವಲನ್ನು ಪುನಃಸ್ಥಾಪಿಸಿದ್ದರಿಂದ ಪಂದ್ಯಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಸದ್ಯ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

Continue Reading

Latest

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

VISTARANEWS.COM


on

ಇಂದು (ಏಪ್ರಿಲ್ 27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ಮುಖಾಮುಖಿಯಾಗಲಿವೆ. ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಲಿ ಚಾಂಪಿಯನ್ ಆರ್‌ಸಿಬಿ ಸರ್ವಸನ್ನದ್ಧವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ, ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಆದರೆ, ಫಿಲ್ ಸಾಲ್ಟ್ ಅವರ ಗಾಯದ ಸಮಸ್ಯೆ ತಂಡಕ್ಕೆ ಸಣ್ಣ ತಲೆನೋವು ತಂದಿದ್ದು, ಅವರ ಸ್ಥಾನದಲ್ಲಿ ಜಾಕೋಬ್ ಬೆಥೆಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ತೀವ್ರ ಒತ್ತಡದಲ್ಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 264 ರನ್ ಗಳಿಸಿದ್ದರೂ ಸಹ, ಟಿ20 ಇತಿಹಾಸದ ದಾಖಲೆಯ ರನ್ ಚೇಸ್‌ಗೆ ಬಲಿಯಾಗಿ ಸೋಲೊಪ್ಪಿಕೊಂಡಿತ್ತು. ಕೆ.ಎಲ್ ರಾಹುಲ್ ಅವರ ಅಮೋಘ 152 ರನ್‌ಗಳ ಇನಿಂಗ್ಸ್ ಕೂಡ ತಂಡಕ್ಕೆ ಜಯ ತಂದುಕೊಡಲಿಲ್ಲ. ಸದ್ಯ ಏಳು ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ತಂಡಕ್ಕೆ, ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಲುಂಗಿ ಎನ್‌ಗಿಡಿ ಅವರ ಅನುಪಸ್ಥಿತಿ ಡೆಲ್ಲಿಯ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗುವ ಭೀತಿ ಎದುರಾಗಿದೆ.

ಇತಿಹಾಸದ ಅಂಕಿಅಂಶಗಳನ್ನು ಗಮನಿಸಿದರೆ ಆರ್‌ಸಿಬಿ ತಂಡವು ಡೆಲ್ಲಿ ವಿರುದ್ಧ ಸ್ಪಷ್ಟ ಪ್ರಾಬಲ್ಯ ಹೊಂದಿದೆ. ಈವರೆಗೆ ನಡೆದ 34 ಮುಖಾಮುಖಿಗಳಲ್ಲಿ ಆರ್‌ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ 13 ರಲ್ಲಿ ಮಾತ್ರ ಜಯ ಸಾಧಿಸಿದೆ. ದೆಹಲಿಯ ಮೈದಾನದಲ್ಲೂ ಆಡಿದ 11 ಪಂದ್ಯಗಳಲ್ಲಿ 7 ಬಾರಿ ಬೆಂಗಳೂರು ಜಯಭೇರಿ ಬಾರಿಸಿದೆ. ಇಂದಿನ ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದ್ದು, ಗೆಲುವಿನ ಲಯದಲ್ಲಿರುವ ರಜತ್ ಪಾಟಿದಾರ್ ಸೈನ್ಯವು ಹತಾಶ ಸ್ಥಿತಿಯಲ್ಲಿರುವ ಡೆಲ್ಲಿಯನ್ನು ಅವರದ್ದೇ ತವರಿನಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುತ್ತದೆಯೇ ಎಂದು ಕಾದು ನೋಡಬೇಕಿದೆ.

Continue Reading

Latest

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

VISTARANEWS.COM


on

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 38 ಎಸೆತಗಳಲ್ಲಿ 103 ರನ್ ಚಚ್ಚಿ ಐಪಿಎಲ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಈಗ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಹೈದರಾಬಾದ್ ವಿರುದ್ಧದ ಅಮೋಘ ಶತಕದ ನಂತರ ಫೀಲ್ಡಿಂಗ್‌ಗೆ ಬಂದಿದ್ದ ವೈಭವ್, ಮಂಡಿರಜ್ಜು (Hamstring) ಸಮಸ್ಯೆಯಿಂದಾಗಿ ಮೈದಾನದಿಂದ ಹೊರನಡೆದಿದ್ದರು. ಫಿಸಿಯೋಗಳ ನೆರವಿನೊಂದಿಗೆ ಕುಂಟುತ್ತಾ ಮೈದಾನ ತೊರೆದ ಅವರು ಮತ್ತೆ ಫೀಲ್ಡಿಂಗ್‌ಗೆ ಮರಳದಿದ್ದದ್ದು ಅಭಿಮಾನಿಗಳಲ್ಲಿ ಮುಂದಿನ ಪಂದ್ಯದ ಲಭ್ಯತೆಯ ಬಗ್ಗೆ ಆತಂಕ ಮೂಡಿಸಿತ್ತು.

ಈ ಕುರಿತು ಪಂದ್ಯದ ಬಳಿಕ ಮಾಹಿತಿ ನೀಡಿದ ರಾಜಸ್ಥಾನ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್, ಸೂರ್ಯವಂಶಿ ಅವರ ಗಾಯ ಅಷ್ಟೊಂದು ಗಂಭೀರವಾಗಿಲ್ಲ ಎಂದು ತಿಳಿಸಿದ್ದಾರೆ. “ವೈಭವ್ ಅವರ ಮಂಡಿರಜ್ಜು ಭಾಗದಲ್ಲಿ ಸ್ವಲ್ಪ ಅಸ್ವಸ್ಥತೆ ಇರುವುದು ನಿಜ, ಆದರೆ ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಗುಣಮುಖರಾಗುತ್ತಿದ್ದಾರೆ. ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಅವರ ಫಿಟ್‌ನೆಸ್ ಬಗ್ಗೆ ಸಂಪೂರ್ಣ ಸ್ಪಷ್ಟತೆ ಸಿಗಲಿದೆ” ಎಂದು ಹೇಳುವ ಮೂಲಕ ಸೂರ್ಯವಂಶಿ ಮುಂದಿನ ಪಂದ್ಯಕ್ಕೆ ಮರಳುವ ಆಶಾವಾದ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡವು ಏಪ್ರಿಲ್ 28 ರಂದು ಸತತ ಆರು ಗೆಲುವುಗಳೊಂದಿಗೆ ಅಜೇಯವಾಗಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಪ್ರಸ್ತುತ ಟೂರ್ನಿಯಲ್ಲಿ ಆರ್‌ಆರ್ ತಂಡದ ಪ್ರಮುಖ ರನ್ ಸ್ಕೋರರ್ ಆಗಿರುವ ವೈಭವ್ ಸೂರ್ಯವಂಶಿ ಅಲಭ್ಯರಾದರೆ, ಅದು ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ. ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಸಂಜು ಸ್ಯಾಮ್ಸನ್ ಪಡೆಗೆ ಪ್ಲೇ-ಆಫ್ ಹಾದಿ ಸುಗಮಗೊಳಿಸಲು ಈ ಯಂಗ್ ಸೆನ್ಸೇಷನ್ ಆಟಗಾರನ ಫಿಟ್‌ನೆಸ್ ಅತ್ಯಂತ ನಿರ್ಣಾಯಕವಾಗಿದೆ.

Continue Reading
Advertisement
Latest13 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest13 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest14 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ14 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest15 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest16 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest16 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest18 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ19 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest20 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌