ICC World Cup 2023 : ಟೀಂ ಇಂಡಿಯಾಕ್ಕೆ All the best ಎಂದ ಫ್ಯಾನ್ಸ್‌; ಇಲ್ಲಿದೆ ಅಭಿಮಾನದ ಝಲಕ್ Vistara News

ಉತ್ತರ ಕನ್ನಡ

ICC World Cup 2023 : ಟೀಂ ಇಂಡಿಯಾಕ್ಕೆ All the best ಎಂದ ಫ್ಯಾನ್ಸ್‌; ಇಲ್ಲಿದೆ ಅಭಿಮಾನದ ಝಲಕ್

ICC World Cup 2023 : ಭಾನುವಾರ ಮುಂಜಾನೆಯಿಂದಲೇ ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಕೆಲವರು ದೇವರ ಮೊರೆ ಹೋದರೆ, ಮತ್ತೆ ಕೆಲವರು ಹೋಮ-ಹವನ, ಡ್ಯಾನ್ಸ್‌, ರನ್ನಿಂಗ್‌ ಇತ್ಯಾದಿಗಳ ಮೂಲಕ ಭಾರತ ತಂಡದ ಆಟಗಾರರಿಗೆ ಶುಭ ಕೋರಿದ್ದಾರೆ.

VISTARANEWS.COM


on

ICC World Cup 2023 All the best for Team India says fans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರಿಕೆಟ್‌ ವಿಶ್ವ ಕಪ್‌ ಹಬ್ಬ ಕೊನೇ ಘಟಕ್ಕೆ ಬಂದಿದೆ. ಇಡೀ ವಿಶ್ವವೇ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್‌ ಫೈನಲ್‌ (ICC World Cup 2023) ಪಂದ್ಯದ ಮೇಲೆ ಕಣ್ಣಿಟ್ಟಿದೆ. ದೇಶದ ಕ್ರಿಕೆಟ್‌ ಫ್ಯಾನ್ಸ್‌ ಟೀಂ ಇಂಡಿಯಾ ಗೆಲುವಿಗೆ ಒಕ್ಕೊರಲಿನ ಪ್ರಾರ್ಥನೆಯನ್ನು ಮಾಡುತ್ತಿದ್ದಾರೆ. “ಈ ಬಾರಿ ಕಪ್‌ ನಮ್ದೇ” ಎಂಬ ವಿಶ್ವಾಸದಲ್ಲಿ ಜೈಕಾರಗಳು ಮೊಳಗುತ್ತಿವೆ. ಈ ಎಲ್ಲದರ ಮಧ್ಯೆ ಭಾನುವಾರ (ನ. 19) ಮುಂಜಾನೆಯಿಂದಲೇ ಟೀಂ ಇಂಡಿಯಾ ಗೆಲುವಿಗಾಗಿ ವಿಶೇಷ ಪ್ರಾರ್ಥನೆಗಳನ್ನು ಮಾಡಲಾಗುತ್ತಿದೆ. ಕೆಲವರು ದೇವರ ಮೊರೆ ಹೋದರೆ, ಮತ್ತೆ ಕೆಲವರು ಹೋಮ-ಹವನ, ಡ್ಯಾನ್ಸ್‌, ರನ್ನಿಂಗ್‌ ಇತ್ಯಾದಿಗಳ ಮೂಲಕ ಭಾರತ ತಂಡದ ಆಟಗಾರರಿಗೆ ಶುಭ ಕೋರಿದ್ದಾರೆ. ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಇನ್ನೂ ಹಲವರು ಟೀಂ ಇಂಡಿಯಾಕ್ಕೆ All the best ಹೇಳಿದ್ದಾರೆ.

12 ವರ್ಷಗಳ ಬಳಿಕ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವ ಭಾರತ ತಂಡವು (Indian Cricket Team) ಮೂರನೇ ಬಾರಿ ಏಕದಿನ ವಿಶ್ವಕಪ್‌ ಎತ್ತಿಹಿಡಿಯುವ ತವಕದಲ್ಲಿದೆ. ಭಾರತ ಗೆದ್ದು ಬೀಗಲಿ, ವಿಶ್ವಕಪ್‌ ರೋಹಿತ್‌ ಪಡೆಯ ಪಾಲಾಗಲಿ ದೇಶಾದ್ಯಂತ ಶತಕೋಟಿ ಭಾರತೀಯರು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಅತ್ತ ಆಸ್ಟ್ರೇಲಿಯಾ ಕೂಡ ಗೆಲುವು ಸಾಧಿಸುವ ಮೂಲಕ ಕ್ರಿಕೆಟ್‌ನಲ್ಲಿ ತಾನೇ ಅಧಿಪತಿ ಎಂಬುದನ್ನು ಸಾಬೀತುಪಡಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದೆಲ್ಲ ಕಾರಣಗಳಿಂದಾಗಿ ವಿಶ್ವಕಪ್‌ ಫೈನಲ್‌ ಪಂದ್ಯವು ಎಲ್ಲರನ್ನೂ ತುದಿ ಕಾಲಿನಲ್ಲಿ ನಿಲ್ಲಿಸಿದೆ.

ಇದನ್ನೂ ಓದಿ: ICC World Cup 2023 : ಕಳೆದ 10 ಪಂದ್ಯಗಳಲ್ಲಿ ಭಾರತದ ಬೌಲರ್​ಗಳ ಪರಾಕ್ರಮ ಈ ರೀತಿ ಇತ್ತು

ಡ್ಯಾನ್ಸ್ ಮೂಲಕ ಶುಭಹಾರೈಸಿದ ವಿದ್ಯಾರ್ಥಿಗಳು

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಸ್ಟಾರ್ ಚಾಯ್ಸ್ ಡ್ಯಾನ್ಸ್ ಅಕಾಡೆಮಿ ವಿದ್ಯಾರ್ಥಿಗಳಿಂದ ಟೀಂ ಇಂಡಿಯಾಕ್ಕೆ ವಿಶೇಷ ರೀತಿಯಲ್ಲಿ ಶುಭ ಹಾರೈಕೆ ವ್ಯಕ್ತವಾಗಿದೆ. ಡ್ಯಾನ್ಸ್ ಮೂಲಕ ಮಕ್ಕಳು ಶುಭ ಹಾರೈಸಿದ್ದಾರೆ. 20ಕ್ಕೂ ಅಧಿಕ ಮಕ್ಕಳು ಕಡಲತೀರದಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಇದಕ್ಕೂ ಮುಂಚೆ ಕಡಲತೀರದಲ್ಲಿ ತ್ರಿವರ್ಣ ಧ್ವಜ‌ ಹಿಡಿದು ಮೆರವಣಿಗೆ ನಡೆಸಿದ್ದಾರೆ. ಭಾರತ ತಂಡದ ಪರ ಘೋಷಣೆ ಕೂಗಿದ್ದಾರೆ.

ICC World Cup 2023 All the best for Team India says fans

ದಾವಣಗೆರೆಯಲ್ಲಿ ಮಕ್ಕಳಿಂದ ಪೂಜೆ ಸಲ್ಲಿಕೆ

ದಾವಣಗೆರೆಯ ಐತಿಹಾಸಿಕ‌ ಶಾಮನೂರು ಆಂಜನೇಯ ದೇವಸ್ಥಾನದಲ್ಲಿ ಶಾಲಾ ಮಕ್ಕಳು, ಪಾಲಕರು, ಶಿಕ್ಷಕರು ವಿಶೇಷ ಪೂಜೆ ಸಲ್ಲಿಸಿ ಟೀಂ ಇಂಡಿಯಾ ಗೆಲುವಿಗೆ ಪ್ರಾರ್ಥಿಸಿದರು. ಈ ಸಲ ವಿಶ್ವಕಪ್ ನಮ್ಮದೇ.. ನಮ್ಮದೇ ಎಂದು ಘೋಷಣೆ ಹಾಕಿದರು.

ICC World Cup 2023 All the best for Team India says fans

ಹಾಸನದಲ್ಲಿ ರನ್ನಿಂಗ್ ಮಾಡಿ ಜಯಘೋಷ

ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ರನ್ನಿಂಗ್ ಮಾಡಿ ಜಯಘೋಷ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಜರ್ಸಿ ಧರಿಸಿ ಹತ್ತಾರು ಅಭಿಮಾನಿಗಳು ಶುಭ ಕೋರಿದ್ದಾರೆ. ಸುಮಾರು 10 ಕಿ.ಮೀ. ಜಾಗಿಂಗ್ ಮಾಡಿ ಭಾರತದ ಪರ ಜಯ ಘೋಷ ಕೂಗಿ ಶುಭಾಶಯವನ್ನು ಸಲ್ಲಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ, ಎನ್.ಆರ್ ವೃತ್ತ, ಡಿ.ಸಿ ಕಚೇರಿ, ಶಂಕರಮಠ ರಸ್ತೆ ಮೂಲಕ ರನ್ನಿಂಗ್ ಮಾಡಲಾಗಿದೆ.

ICC World Cup 2023 All the best for Team India says fans

ಕೇರಳದಲ್ಲಿ ಅಯ್ಯಪ್ಪ ಭಕ್ತರಿಂದ ವಿಶೇಷ ಪೂಜೆ

ಕೇರಳದ ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಅಯ್ಯಪ್ಪ ಭಕ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಟೀಂ ಇಂಡಿಯಾದ ಪೋಸ್ಟರ್ ಹಿಡಿದು ಪೂಜೆ ಸಲ್ಲಿಸಿದ್ದಾರೆ. ಭಾರತ ತಂಡ ಗೆದ್ದು ಮಿಂಚಲಿ ಎಂದು ಶುಭ ಹಾರೈಸಿದ್ದಾರೆ.

ICC World Cup 2023 All the best for Team India says fans

ಕಲಬುರಗಿಯಲ್ಲಿ ರಂಗೋಲಿ ಬಿಡಿಸಿದ ಅಭಿಮಾನಿಗಳು!

ಕಲಬುರಗಿ ನಗರದ ಶೆಟ್ಟಿ ಕಾಂಪ್ಲೆಕ್ಸ್‌ ಬಳಿ‌ ಇರುವ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಹೋಮ ನಡೆಸಲಾಗಿದೆ. ಹಿಂದೂ ಜಾಗೃತಿ ಸೇನೆ‌ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮನೆ ಮುಂದೆಯೂ ರಂಗೋಲಿ ಬಿಡಿಸಿ ಶುಭಕೋರಲಾಗಿದೆ.

ICC World Cup 2023 All the best for Team India says fans

ಯಾದಗಿರಿಯಲ್ಲಿ ಶಾಲಾ ಮಕ್ಕಳಿಂದ ಶುಭ ಹಾರೈಕೆ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಲ್ಲದೇವನಹಳ್ಳಿಯ ಶ್ರೀ ಖಾಸ್ಗತೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಬ್ಯಾಟ್ ಹಿಡಿದು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಗೆದ್ದು ಬಾ ಭಾರತ್ ಎಂದು ಮಕ್ಕಳು ಘೋಷಣೆ ಕೂಗಿದ್ದಾರೆ.

ಬೆಳಗಾವಿಯಲ್ಲಿ ಮುತ್ತೈದೆಯರಿಗೆ ಉಡಿ ತುಂಬಿದ ಮಹಿಳೆಯರು

ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಗಣೇಶ ದೇವಸ್ಥಾನದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯವನ್ನು ಆಯೋಜಿಸಲಾಗಿತ್ತು. ಆ ಮೂಲಕ ಟೀಂ ಇಂಡಿಯಾ ಗೆದ್ದು ಬೀಗಲಿ ಎಂದು ಶುಭ ಹಾರೈಸಲಾಗಿದೆ. ತಂಡದ ಪ್ರಮುಖ ಆಟಗಾರರ ಭಾವಚಿತ್ರಗಳನ್ನು ಪ್ರದರ್ಶಿಸಿ ಮಹಿಳೆಯರು ಸಂಭ್ರಮಪಟ್ಟಿದ್ದಾರೆ.

ICC World Cup 2023 All the best for Team India says fans

ಸಿಎಂ ಸಿದ್ದರಾಮಯ್ಯರಿಂದ ಶುಭಾಶಯ

ಇಂದು ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಣೆ ಮಾಡುತ್ತೇನೆ. ಭಾರತ ಗೆಲ್ಲಬೇಕೆಂದು ಶುಭ ಕೋರುತ್ತೇನೆ. ಟೀಂ ಇಂಡಿಯಾದವರು ಒಳ್ಳೆಯ ಫಾರ್ಮ್‌ನಲ್ಲಿದ್ದಾರೆ. ಅವರು ಗೆದ್ದೇ ಗೆಲ್ಲುತ್ತಾರೆ. ಎಲ್ಲ ಆಟಗಾರರು ನನ್ನ ಫೆವರಿಟ್ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಟೀಮ್ ಇಂಡಿಯಾಗೆ ಶುಭ ಕೋರಿದ ಆರ್ ಅಶೋಕ್

ಪ್ರತಿಯೊಬ್ಬರೂ ಈಗಾಗಲೇ ಪೂಜೆ, ಹೋಮಗಳನ್ನು ಮಾಡುತ್ತಿದ್ದಾರೆ. ಎಲ್ಲರೂ ಭಾರತ ಗೆಲ್ಲಲಿ ಅಂತ ಪ್ರಾರ್ಥನೆ ಮಾಡುತ್ತಿದ್ದಾರೆ. ನಾವು ಕೂಡ ಎಲ್ಲರ ರೀತಿ ಜೈ ಹೋ ಅಂತ ಭಾರತ ಪರವಾಗಿ ಘೋಷಣೆ ಕೂಗುತ್ತೇವೆ. ಟೀಮ್ ವರ್ಕ್ ಮತ್ತಷ್ಟು ಹೆಚ್ಚು ಗೆಲುವನ್ನು ತಂದು ಕೊಡಲಿದೆ. ಹಿಂದೆ ಕಪಿಲ್ ದೇವ್ ಆಟ ನಮಗೆ ನೆನಪಾಗುತ್ತದೆ. ಭಾರತ ಗೆಲ್ಲಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ICC World Cup 2023 : ಫೈನಲ್​ ಪಂದ್ಯದವರೆಗೆ ಭಾರತ ತಂಡದ ಬ್ಯಾಟರ್​ಗಳ ಪ್ರದರ್ಶನ ಹೀಗಿತ್ತು

ಭಾರತ ತಂಡಕ್ಕೆ ಆಲ್ ದಿ‌ ಬೆಸ್ಟ್ ಹೇಳಿದ ಬಿ ವೈ ವಿಜಯೇಂದ್ರ

ಇಡೀ ದೇಶ ಭಾರತ ಗೆಲ್ಲಬೇಕೆಂದು ಪೂಜೆ ಸಲ್ಲಿಸುತ್ತಿದೆ. ಇವತ್ತಿನ ಫೈನಲ್ ಸಹ ಭಾರತಕ್ಕೆ ಉತ್ತಮ ಗೆಲುವು ಸಿಗಲಿ. ಆಲ್ ದ ಬೆಸ್ಟ್ ಅಂತ ಈ ಸಂದರ್ಭದಲ್ಲಿ ಭಾರತ ತಂಡಕ್ಕೆ ಶುಭ ಕೋರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉತ್ತರ ಕನ್ನಡ

Sirsi News: ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Sirsi News: ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ಆದರೆ ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

VISTARANEWS.COM


on

Minister Satish Jarakiholi latest Statement at sirsi
ಶಿರಸಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
Koo

ಶಿರಸಿ: ರಾಜ್ಯದಲ್ಲಿ ದಲಿತ ಸಿಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ. ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವ ಬಗ್ಗೆ ಪಕ್ಷಕ್ಕೆ ನಮ್ಮ ನಿರ್ಧಾರ ಹೇಳಬಹುದು ಅಷ್ಟೇ, ನಿರ್ಧಾರ ಹೈಕಮಾಂಡ್ ಮಾಡಬೇಕು ಎಂದು ತಿಳಿಸಿದರು.

ಇನ್ನು ಬಿ.ಕೆ. ಹರಿಪ್ರಸಾದ್ ಅವರನ್ನು ಪಕ್ಷ ಕಡಗಣನೆ ಕುರಿತು ಮಾತನಾಡಿದ ಅವರು, ಪಕ್ಷ ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ,ಅವರನ್ನು ಯಾರೂ ಕೆಳಗಿಳಿಸುವ ಪ್ರಶ್ನೆ ಇಲ್ಲ, ನಾವು ಅವರ ಜತೆ ಚರ್ಚೆ ಮಾಡಿದ್ದೇವೆ. ಬಹಳಷ್ಟು ಹಿರಿಯ ನಾಯಕರಿಗೆ ಸ್ಥಾನ ನೀಡಿಲ್ಲ, ಅವಕಾಶ ಬಂದಾಗ ಅವರಿಗೆ ಸ್ಥಾನಮಾನ ನೀಡುತ್ತಾರೆ. ಇನ್ನು ನಿಗಮ ಮಂಡಳಿಗೆ 25 ಜನ ಶಾಸಕರಿಗೆ ಸ್ಥಾನ ನೀಡುತ್ತಿದ್ದಾರೆ. ಚುನಾವಣೆ ಮುಗಿದ ನಂತರ ಇನ್ನಷ್ಟು ಜನರಿಗೆ ನೀಡುತ್ತಾರೆ, ಎಲ್ಲರಿಗೂ ಸಮಾಧಾನ ಮಾಡಲು ಅವಕಾಶ ಇದೆ, ಅಸಮಾಧಾನ ಆಗುವ ಪ್ರಶ್ನೆ ಇಲ್ಲ ಎಂದರು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಇನ್ನು ಗುತ್ತಿಗೆದಾರರಿಗೆ ಪ್ರಾಮುಖ್ಯತೆ ಮೇಲೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡುತ್ತೇವೆ. ಹಿಂದಿನ ಸರ್ಕಾರ ಅನುದಾನಕ್ಕಿಂತ ಹೆಚ್ಚಿಗೆ ಕಾಮಗಾರಿ ಮಂಜೂರು ಮಾಡಿದ್ದರಿಂದ ಸಮಸ್ಯೆಯಾಗಿದೆ ಎಂದರು.

Continue Reading
Advertisement
karnataka live news kannada today december 4
Live News14 mins ago

Karnataka Live News : ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

snehith sangeetha namratha bbk 10
ಬಿಗ್ ಬಾಸ್16 mins ago

BBK SEASON 10: ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ʻಪನೀರ್‌ʼ ಕಥೆ ಏನಾಗ್ತಿತ್ತು? ಸ್ನೇಹಿತ್‌ಗೆ ಚಿವುಟಿದ ಸುದೀಪ್‌!

Belagavi Winter Session
ಕರ್ನಾಟಕ21 mins ago

Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

Narendra Modi
ದೇಶ32 mins ago

ಜನರಿಂದ ನಕಾರಾತ್ಮಕತೆಯ ತಿರಸ್ಕಾರ, ಸಂಸತ್ತಲ್ಲಿ ಹತಾಶೆ ಪ್ರದರ್ಶಿಸದಿರಿ; ಪ್ರತಿಪಕ್ಷಗಳಿಗೆ ಮೋದಿ ಮನವಿ

Rocking star Yash gave sweet news new cinema Title Announcement date Fix
South Cinema1 hour ago

Actor Yash: ಸಿಹಿ ಸುದ್ದಿ ಕೊಟ್ಟೇ ಬಿಟ್ರು ರಾಕಿಂಗ್‌ ಸ್ಟಾರ್‌ ಯಶ್‌; ಟೈಟಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್!

Ashika Ranganath
ಕರ್ನಾಟಕ1 hour ago

Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

Mani Ratnam-Kamal Haasan film Thug Life
South Cinema1 hour ago

Thug Life Movie: ಕಮಲ್ ಹಾಸನ್ ಸಿನಿಮಾದಲ್ಲಿ ಎಂಟ್ರಿ ಕೊಟ್ಟ ಗೌತಮ್ ಕಾರ್ತಿಕ್!

CP Yogeshwar Brother in law car found
ಕರ್ನಾಟಕ2 hours ago

CP Yogeshwar : ಸಿ.ಪಿ ಯೋಗೇಶ್ವರ್‌ ಬಾವನ ಕಾರಿನ ಡಿಕ್ಕಿಯಲ್ಲಿ ನೆತ್ತರ ಕಲೆ; ನಡೆದಿದ್ಯಾ ಕೊಲೆ?

Masala Tea
ಆರೋಗ್ಯ2 hours ago

Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

Lalduhoma
ದೇಶ2 hours ago

Mizoram Election Result: ಮಿಜೋರಾಂನಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ, ಝೆಡ್‌ಪಿಎಂ ಬಹುಮತದತ್ತ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ7 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌