ICC World Cup 2023 : ಪಂದ್ಯ ಟೈ ಆದರೆ, ಮಳೆ ಬಂದರೆ ಫಲಿತಾಂಶ ಪ್ರಕಟಿಸುವುದು ಹೇಗೆ? - Vistara News

ಕ್ರಿಕೆಟ್

ICC World Cup 2023 : ಪಂದ್ಯ ಟೈ ಆದರೆ, ಮಳೆ ಬಂದರೆ ಫಲಿತಾಂಶ ಪ್ರಕಟಿಸುವುದು ಹೇಗೆ?

ಮೀಸಲು ದಿನ, ಸೂಪರ್​ ಓವರ್​, ಓವರ್​ಗಳ ಕಡಿತ, ಚೆಂಡುಗಳ ಆಯ್ಕೆ ಸೇರಿದಂತೆ ವಿಶ್ವ ಕಪ್​ ಫೈನಲ್ ಪಂದ್ಯಕ್ಕೆ (ICC World Cup 2023) ಅನ್ವಯವಾಗುವ ನಿಯಮಗಳ ವಿವರ ಇಲ್ಲಿದೆ.

VISTARANEWS.COM


on

Final match
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್​​ನಲ್ಲಿ (ICC World Cup 2023 Final) ಭಾರತ ತಂಡ ಆಸ್ಟ್ರೇಲಿಯಾ (india vs Australia Final) ವಿರುದ್ಧ ಸೆಣಸಲಿದೆ. ಫೈನಲ್ ಸಮೀಪಿಸುತ್ತಿದ್ದಂತೆ ಅಬ್ಬರ ಜಾಸ್ತಿಯಾಗುತ್ತಿದೆ. ಅದರೆ, ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿರುವ ಒಂದೇ ಒಂದು ಅನುಮಾನವೆಂದರೆ ಫೈನಲ್ ಪಂದ್ಯ ಮಳೆಗೆ ಕೊಚ್ಚಿ ಹೋದರೆ ಫಲಿತಾಂಶವನ್ನು ಹೇಗೆ ಪ್ರಕಟಿಸಲಾಗುತ್ತದೆ ಎಂಬುದು. ಅದು ಹೇಗೆ ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ಮೀಸಲು ದಿನವಿದೆಯೇ?

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2023 ರ ಕ್ರಿಕೆಟ್ ವಿಶ್ವಕಪ್​ನ ನಾಕೌಟ್ ಸುತ್ತುಗಳಿಗೆ ಮೀಸಲು ದಿನಗಳನ್ನು ನಿಗದಿಪಡಿಸಿದೆ. ಗುಂಪು ಹಂತದ ಪಂದ್ಯಗಳಿಗೆ ಮೀಸಲು ದಿನಕ್ಕೆ ಯಾವುದೇ ಅವಕಾಶವಿರಲಿಲ್ಲ. ಆದರೆ ನಾಕೌಟ್ ಪಂದ್ಯಗಳು ಮೀಸಲು ಪಂದ್ಯದ ದಿನಗಳನ್ನು ಹೊಂದಿವೆ. ಹೀಗಾಗಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ಸೋಮವಾರ ಪಂದ್ಯ ಮರು ನಿಗದಿಯಾಗಲಿದೆ.

ಮೀಸಲು ದಿನದ ನಿಯಮಗಳು ಯಾವುವು?

ಐಸಿಸಿ ವಿಶ್ವಕಪ್ ನಿಯಮ ಪ್ರಕಾರ, ಮೀಸಲು ದಿನವನ್ನು ಈ ಕೆಳಗಿನ ನಿಯಮಗಳಿಂದ ನಿಯಂತ್ರಿಸಲಾಗುತ್ತದೆ.

ಆಟದ ಸಮಯ: ಮೀಸಲು ದಿನವು ಯಾವುದೇ ಹೆಚ್ಚುವರಿ ಸಮಯದ ನಿಯಂತ್ರಣ ಒಳಗೊಂಡಂತೆ ನಿಗದಿತ ದಿನದಂತೆಯೇ ಆಟವನ್ನು ಮುಂದುವರಿಸಲಾಗುತ್ತದೆ.

ಆಟದ ಅಡಚಣೆ: ನಿಗದಿತ ದಿನದಂದು ಆಟಕ್ಕೆ ಅಡ್ಡಿಯಾದರೆ, ಅಂಪೈರ್​ಗಳು ಹೆಚ್ಚುವರಿ ಸಮಯವನ್ನು ಬಳಸಿಕೊಳ್ಳುತ್ತಾರೆ. ಮೀಸಲು ದಿನದಂದು ಫಲಿತಾಂಶವನ್ನು ಪ್ರಕಟಿಸಲು ಓವರ್​ಗಳ ಸಂಖ್ಯೆ ಕಡಿಮೆ ಮಾಡಬಹುದು.

ಕನಿಷ್ಠ ಓವರ್​ಗಳು: ಫಲಿತಾಂಶವನ್ನು ಪ್ರಕಟಿಸಲು ಪ್ರತಿ ತಂಡವು ಕನಿಷ್ಠ 20 ಓವರ್​ಗಳವರೆಗೆ ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರಬೇಕು.

ಮೀಸಲು ದಿನ: ನಿಗದಿತ ದಿನದಂದು ಕಟ್-ಆಫ್ ಸಮಯದೊಳಗೆ ಆಟವು ಸಾಧ್ಯವಾಗದಿದ್ದರೆ ಮತ್ತು ಪಂದ್ಯವನ್ನು ಪೂರ್ಣಗೊಳಿಸಲು ಮೀಸಲು ದಿನವನ್ನು ಬಳಸಲಾಗುತ್ತದೆ.

ಪುನರಾರಂಭ: ಮೀಸಲು ದಿನದಂದು, ನಿಗದಿತ ದಿನದಂದು ಎಸೆದ ಕೊನೆಯ ಎಸೆತದಿಂದ ಪಂದ್ಯ ಆರಂಭವಾಗುತ್ತದೆ. ಇದರರ್ಥ ಆಟ ನಿಂತು ಹೋದಲ್ಲಿಂದಲೇ ಮುಂದುವರಿಯುತ್ತದೆ.

ಟಾಸ್: ಟಾಸ್ ನಡೆದು ಒಂದೇ ಒಂದು ಎಸೆತ ಕಾಣದಿದ್ದರೂ ಟಾಸ್ ಫಲಿತಾಂಶ ಮತ್ತು ಹೆಸರಿಸಲಾದ ತಂಡಗಳು ಮೀಸಲು ದಿನಕ್ಕೂ ಮುಂದುವರಿಯಬೇಕು.

ಅಂಪೈರ್ ಗಳ ನಿರ್ಧಾರಗಳು: ಮೈದಾನ, ಹವಾಮಾನ ಮತ್ತು ಬೆಳಕಿನ ಪರಿಸ್ಥಿತಿಗಳನ್ನು ಪರಿಗಣಿಸಿ ಮೀಸಲು ದಿನಕ್ಕೆ ಅವಕಾಶ ಕೊಡದಂತೆ ನಿಗದಿತ ದಿನದಂದು ಆಟವನ್ನು ಪೂರ್ಣಗೊಳಿಸುವ ಗುರಿಯನ್ನು ಅಂಪೈರ್ ಗಳು ಹೊಂದಿದ್ದಾರೆ. ಆದ್ದರಿಂದ ನಿಗದಿತ ದಿನದಂದು ಮಳೆ ಬಂದರೆ ಓವರ್ ಗಳು ಕಡಿಮೆಯಾಗುತ್ತವೆ.

ಉದಾಹರಣೆ 1: 50 ಓವರ್​ಗಳ ಆಟ ಪ್ರಾರಂಭವಾಗಿ 19 ಓವರ್ ವೇಳೆಗೆ ಅಡಚಣೆ ಉಂಟಾದರೆ…
ಓವರ್​ಗಳನ್ನು ಪ್ರತಿ ತಂಡಕ್ಕೆ 46ಕ್ಕೆ ಇಳಿಸಲಾಗುತ್ತದೆ. ಮತ್ತೊಂದು ಚೆಂಡನ್ನು ಎಸೆಯುವ ಮೊದಲು ಮಳೆಯಾಗಿ ಪಂದ್ಯ ನಡೆಸಲು ಸಾಧ್ಯವಾಗದೇ ಹೋದರೆ ಮೀಸಲು ದಿನಕ್ಕೆ ಪಂದ್ಯ ಹೋಗುತ್ತದೆ ಹಾಗೂ ಅಲ್ಲಿ ಮತ್ತೆ50 ಓವರ್​ಗಳ ಪಂದ್ಯವನ್ನೇ ಆಡಿಸಲಾಗುತ್ತದೆ.

ಇದನ್ನೂ ಓದಿ: ICC World Cup 2023 : ಫೈನಲ್ ಪಂದ್ಯಕ್ಕಾಗಿ ನಡೆಯಿತು ಭರ್ಜರಿ ಫೊಟೋಶೂಟ್​

ಉದಾಹರಣೆ 2: 50 ಓವರ್ ಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು 19 ಓವರ್ ಗಳಲ್ಲಿ ಅಡಚಣೆ ಉಂಟಾದರೆ, ಪಂದ್ಯವನ್ನು 46 ಓವರ್​ಗಳಿಗೆ ಇಳಿಸಲಾಗುತ್ತದೆ. ಒಂದು ವೇಳೆ ಪಂದ್ಯ ಪುನರಾರಂಭಗೊಂಡ ಬಳಿಕ ಒಂದು ಓವರ್ ಆಟ ನಡೆದ ಬಳಿಕ ಮಳೆ ಬಂದರೆ ಮೀಸಲು ದಿನದಂದೂ 46 ಓವರ್​ಗಳ ಪಂದ್ಯ ನಡೆಯಬೇಕು. ಮೀಸಲು ದಿನದಂದು ಅಗತ್ಯವಿದ್ದರೆ ಓವರ್​ಗಳನ್ನು ಮತ್ತಷ್ಟು ಕಡಿಮೆ ಮಾಡಬಹುದು.

ಪಂದ್ಯ ಟೈ ಆದರೆ ಇರುವ ನಿಯಮಗಳೇನು?

ಐಸಿಸಿ ವಿಶ್ವಕಪ್ ನಿಯಮ ಪುಸ್ತಕದ ಕಲಂ 16ರ ಪ್ರಕಾರ, ಪಂದ್ಯವು ಟೈ ಆಗಿರುವಾಗ ಈ ನಿಯಮಗಳು ಇರುತ್ತವೆ.

16.3.1.1: ಎರಡೂ ಇನ್ನಿಂಗ್ಸ್ ಗಳು ಪೂರ್ಣಗೊಂಡಾಗ ಮತ್ತು ಸ್ಕೋರ್ ಗಳು ಸಮಾನವಾಗಿದ್ದರ ಪಂದ್ಯದ ಫಲಿತಾಂಶವು ಟೈ ಆಗಿರುತ್ತದೆ.
16.3.1.2: ವಿಶ್ವ ಕಪ್​ನಲ್ಲಿ ಆರಂಭದಿಂದ ಕೊನೇ ತನಕ ಪಂದ್ಯ ಸಮಬಲಗೊಂಡರೆ ಸೂಪರ್ ಓವರ್ ಆಡಲಾಗುತ್ತದೆ. ಸೂಪರ್ ಓವರ್ ಟೈ ಆಗಿದ್ದರೆ ವಿಜೇತರು ಯಾರೆಂದು ಪ್ರಕಟವಾಗುವವರೆಗೆ ಸೂಪರ್ ಓವರ್​ಗಳನ್ನು ಆಡಿಸಬೇಕು. ಅಸಾಧಾರಣ ಸಂದರ್ಭಗಳು ಉದ್ಭವಿಸದ ಹೊರತು, ಫಲಿತಾಂಶವನ್ನು ಸಾಧಿಸಲು ಅನಿಯಮಿತ ಸಂಖ್ಯೆಯ ಸೂಪರ್ ಓವರ್​ಗಳನ್ನು ನಿಗದಿ ಮಾಡಬೇಕು.

ಸೂಪರ್ ಓವರ್ ಸಾಧ್ಯವಾಗದೇ ಹೋದರೆ?

ಕಲಂ 16.10.4 ರ ಪ್ರಕಾರ, ಟೈ ನಂತರ, ಹವಾಮಾನ ಪರಿಸ್ಥಿತಿಗಳು ಸೂಪರ್ ಓವರ್ ಪೂರ್ಣಗೊಳ್ಳದಂತೆ ತಡೆದರೆ, ಅಥವಾ ಪಂದ್ಯವನ್ನು ರದ್ದುಗೊಂಡರೆ ಅಥವಾ ಮೀಸಲು ದಿನದ ಕೊನೆಯಲ್ಲಿ ಫಲಿತಾಂಶ ಪ್ರಕಟವಾಗದೇ ಹೋದರೆ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಸೂಪರ್ ಓವರ್ ಆಡಿಸುವ ಪ್ರಮುಖ ನಿಯಮಗಳು

  1. ಎರಡು ವಿಕೆಟ್ ಕಳೆದುಕೊಂಡಾಗ ಬ್ಯಾಟಿಂಗ್ ತಂಡದ ಒಂದು ಓವರ್ ಕಡಿಮೆಯಾಗುತ್ತದೆ.
  2. ಐಸಿಸಿ ಮ್ಯಾಚ್ ರೆಫರಿ ನಿರ್ಧರಿಸುವ ಸಮಯದಲ್ಲಿ ಪಂದ್ಯದ ನಿಗದಿತ ದಿನದಂದು ಸೂಪರ್ ಓವರ್ ನಡೆಯಬೇಕು. ಸಾಮಾನ್ಯ ಸಂದರ್ಭಗಳಲ್ಲಿ ಪಂದ್ಯ ಮುಗಿದ 5 ನಿಮಿಷಗಳ ನಂತರ ಇದು ಪ್ರಾರಂಭವಾಗುತ್ತದೆ.
  3. ಪಂದ್ಯದಲ್ಲಿ ಎರಡನೇ ಬ್ಯಾಟಿಂಗ್ ಮಾಡುವ ತಂಡವು ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಬೇಕು.
  4. ಪ್ರತಿ ಸೂಪರ್ ಓವರ್​ಗೆ ತಲಾ ಒಂದು ಡಿಆರ್​ಎಸ್​ ಆಯ್ಕೆಯಿದೆ.
  5. ಫೀಲ್ಡಿಂಗ್ ತಂಡದ ನಾಯಕ ಅಂಪೈರ್​ಗಳ ಒದಗಿಸಿದ ಚೆಂಡುಗಳ ಪೆಟ್ಟಿಗೆಯಿಂದ ಸೂಪರ್ ಓವರ್​ನಲ್ಲಿ ಎಸೆಯುವ ಚೆಂಡನ್ನು ಆಯ್ಕೆ ಮಾಡಬೇಕು (ಇದರಲ್ಲಿ ಪಂದ್ಯದಲ್ಲಿ ಬಳಸಿದ ಚೆಂಡುಗಳು ಮಾತ್ರ ಇರುತ್ತವೆ. ಹೊಸ ಚೆಂಡುಗಳಿರುವುದಿಲ್ಲ ). ಎರಡನೇ ಫೀಲ್ಡಿಂಗ್ ಮಾಡುವ ತಂಡವು ಮೊದಲು ಬೌಲಿಂಗ್ ಮಾಡುವ ತಂಡವು ಆಯ್ಕೆ ಮಾಡಿದ ಅದೇ ಚೆಂಡನ್ನು ಬಳಸಲು ಆಯ್ಕೆ ಮಾಡಬಹುದು ಅಥವಾ ಅದೇ ಪೆಟ್ಟಿಗೆಯಿಂದ ಮತ್ತೊಂದು ಚೆಂಡನ್ನು ಆಯ್ಕೆ ಮಾಡಬಹುದು. ಚೆಂಡನ್ನು ಬದಲಾಯಿಸಬೇಕಾಗಿ ಬಂದರೆ ಆಟದ ಷರತ್ತುಗಳು ಸೂಪರ್ ಓವರ್​ಗೂ ಅನ್ವಯವಾಗುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Gautam Gambhir : ಗಂಭೀರ್ ಅವರ ಯುಗ ಪ್ರಾರಂಭವಾಗುವ ಮೊದಲು, ರಾಹುಲ್ ದ್ರಾವಿಡ್ ಗೌತಮ್ ಗಂಭೀರ್ ಅವರಿಗೆ ಭಾವನಾತ್ಮಕ ಸಂದೇಶವನ್ನು ಕಳುಹಿಸಿದ್ದಾರೆ. ಅವರ ಹೊಸ ಪಾತ್ರಕ್ಕಾಗಿ ಅವರನ್ನು ಪ್ರೇರೇಪಿಸಿದ್ದಾರೆ. ತಂಡದ ಎಲ್ಲಾ ಆಟಗಾರರೊಂದಿಗೆ ಅದ್ಭುತ ಬಾಂಧವ್ಯ ಹೊಂದಿದ್ದ ದ್ರಾವಿಡ್, ಗಂಭೀರ್ ಕೂಡ ಇದೇ ರೀತಿಯ ಸಂಬಂಧ ಹೊಂದಿರುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಆಟಗಾರರು ಫಿಟ್ ಆಗಿರಬೇಕು ಮತ್ತು ಪ್ರತಿ ಪಂದ್ಯಕ್ಕೂ ಲಭ್ಯವಿರಬೇಕು ಎಂದು ದ್ರಾವಿಡ್ ಹಾರೈಸಿದ್ದಾರೆ.

VISTARANEWS.COM


on

Gautam Gambhir
Koo

ಬೆಂಗಳೂರು: ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಲ್ಲಿ ನಡೆದ 2024ರ ಟಿ 20 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಆಯಿತು. ಇದೇ ವೇಳೆ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಅಭಿಯಾನವೂ ಅಂತ್ಯಗೊಂಡಿತು. ಇದೀಗ ಹೊಸ ಯುಗ ಪ್ರಾರಂಭವಾಗುವ ಸಮಯ ಬಂದಿದೆ. ಕೆಚ್ಚೆದೆಯ ಬ್ಯಾಟರ್​​ ಗೌತಮ್ ಗಂಭೀರ್ (Gautam Gambhir) ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ (IND vs SL) ಭಾರತದ ಹೊಸ ಮುಖ್ಯ ಕೋಚ್ ಆಗಿ ತಮ್ಮ ಕಾರ್ಯವನ್ನು ಪ್ರಾರಂಭಿಸಿದ್ದಾರೆ.

ಗಂಭೀರ್ ಅವರ ಯುಗ ಪ್ರಾರಂಭವಾಗುವ ಮೊದಲು, ರಾಹುಲ್ ದ್ರಾವಿಡ್ ಗೌತಮ್ ಗಂಭೀರ್ ಅವರಿಗೆ ಭಾವನಾತ್ಮಕ ಸಂದೇಶವನ್ನು ಕಳುಹಿಸಿದ್ದಾರೆ. ಅವರ ಹೊಸ ಪಾತ್ರಕ್ಕಾಗಿ ಅವರನ್ನು ಪ್ರೇರೇಪಿಸಿದ್ದಾರೆ. ತಂಡದ ಎಲ್ಲಾ ಆಟಗಾರರೊಂದಿಗೆ ಅದ್ಭುತ ಬಾಂಧವ್ಯ ಹೊಂದಿದ್ದ ದ್ರಾವಿಡ್, ಗಂಭೀರ್ ಕೂಡ ಇದೇ ರೀತಿಯ ಸಂಬಂಧ ಹೊಂದಿರುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಆಟಗಾರರು ಫಿಟ್ ಆಗಿರಬೇಕು ಮತ್ತು ಪ್ರತಿ ಪಂದ್ಯಕ್ಕೂ ಲಭ್ಯವಿರಬೇಕು ಎಂದು ದ್ರಾವಿಡ್ ಹಾರೈಸಿದ್ದಾರೆ.

ಗಂಭೀರ್ ಅವರ ದೃಢ ನಿರ್ಧಾರ ಮತ್ತು ಎಂದಿಗೂ ಬಿಟ್ಟುಕೊಡದ ಮನೋಭಾವವನ್ನು ದ್ರಾವಿಡ್ ಶ್ಲಾಘಿಸಿದ್ದಾರೆ. ಅವರು ಈ ಗುಣವನ್ನು ಭಾರತೀಯ ತಂಡಕ್ಕೆ ತರಬಹುದು ಎಂದು ಆಶಿಸಿದ್ದಾರೆ

ರಾಹುಲ್ ದ್ರಾವಿಡ್ ಭಾವನಾತ್ಮಕ ಸಂದೇಶ ಇಲ್ಲಿದೆ

ಬಿಸಿಸಿಐ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಆಡಿಯೊ ಸಂದೇಶದಲ್ಲಿ, ದ್ರಾವಿಡ್ ಗಂಭೀರ್ ಅವರಿಗೆ ಭಾರತೀಯ ತಂಡದೊಂದಿಗೆ ಯಾವಾಗಲೂ ಇರುವ ನಿರೀಕ್ಷೆಗಳನ್ನು ಹೇಳಿದ್ದಾರೆ. ಅದೇ ರೀತಿ ಆದರೆ ಅವರಿಗೆ ಯಶಸ್ಸನ್ನು ಹಾರೈಸಿದ್ದಾರೆ. ಭಾರತೀಯ ಕ್ರಿಕೆಟ್ ಅನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಆಶಿಸಿದ್ದಾರೆ.

ಹಲೋ ಗೌತಮ್ (ಗಂಭೀರ್). ಮತ್ತು ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರಾಗಿ ನಮ್ಮ ವಿಶ್ವದ ಅತ್ಯಂತ ರೋಮಾಂಚಕಾರಿ ಕೆಲಸಕ್ಕೆ ಸ್ವಾಗತ. ಬಾರ್ಬಡೋಸ್​​ನಲ್ಲಿ ಮತ್ತು ಕೆಲವು ದಿನಗಳ ನಂತರ ಮುಂಬೈನಲ್ಲಿ ಮರೆಯಲಾಗದ ಸಂಜೆ ನನ್ನ ಕನಸುಗಳನ್ನು ಮೀರಿದ ರೀತಿಯಲ್ಲಿ ನಾನು ಭಾರತೀಯ ತಂಡದೊಂದಿಗೆ ನನ್ನ ಅವಧಿಯನ್ನು ಕೊನೆಗೊಳಿಸಿ ಮೂರು ವಾರಗಳಾಗಿವೆ. ಎಲ್ಲಕ್ಕಿಂತ ಹೆಚ್ಚಾಗಿ ತಂಡದೊಂದಿಗಿನ ನನ್ನ ಸಮಯದಲ್ಲಿ ನಾನು ಹೊಂದಿರುವ ನೆನಪುಗಳು ಮತ್ತು ಸ್ನೇಹವನ್ನು ನಾನು ಅಮೂಲ್ಯವೆಂದು ಪರಿಗಣಿಸುತ್ತೇನೆ”ಎಂದು ದ್ರಾವಿಡ್ ಹೇಳಿದ್ದಾರೆ.

ನೀವು ಭಾರತದ ತರಬೇತುದಾರನ ಪಾತ್ರವನ್ನು ವಹಿಸಿಕೊಂಡಾಗ, ನಾನು ನಿಮಗೂ ಅದೇ ಸಂಭ್ರಮ ಸಿಗಲಿ ಬಯಸುತ್ತೇನೆ. ಪ್ರತಿ ತಂಡದಲ್ಲಿ ಸಂಪೂರ್ಣ ಫಿಟ್ ಆಟಗಾರರ ಲಭ್ಯತೆಯನ್ನು ನೀವು ಹೊಂದಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಶುಭವಾಗಲಿ!” ಎಂದು ದ್ರಾವಿಡ್​ ಹೇಳಿದ್ದಾರೆ.

ನಿಮ್ಮ ತಂಡದ ಸಹ ಆಟಗಾರನಾಗಿ ನೀವು ಮೈದಾನದಲ್ಲಿ ಸರ್ವಸ್ವವನ್ನೂ ನೀಡುವುದನ್ನು ನಾನು ನೋಡಿದ್ದೇನೆ. ನಿಮ್ಮ ಬ್ಯಾಟಿಂಗ್ ಪಾಲುದಾರ ಮತ್ತು ಸಹ ಫೀಲ್ಡರ್ ಆಗಿ ನಿಮ್ಮ ದೃಢತೆ ಮತ್ತು ಶರಣಾಗತಿಗೆ ನಿರಾಕರಿಸುವುದನ್ನು ನಾನು ನೋಡಿದ್ದೇನೆ. ಐಪಿಎಲ್ ಋತುಗಳಲ್ಲಿ ಯುವ ಆಟಗಾರರೊಂದಿಗೆ ಕೆಲಸ ಮಾಡುವ ಮತ್ತು ಮೈದಾನದಲ್ಲಿ ತಂಡದಿಂದ ಅತ್ಯುತ್ತಮವಾದದ್ದನ್ನು ಹೊರತೆಗೆಯುವ ನಿಮ್ಮ ಸಾಮರ್ಥ್ಯವನ್ನು ನಾನು ಗಮನಿಸಿದ್ದೇನೆ ಎಂದು ದ್ರಾವಿಡ್ ಹೇಳಿದ್ದಾರೆ.

ನೀವು ಭಾರತೀಯ ಕ್ರಿಕೆಟ್ ಬಗ್ಗೆ ಎಷ್ಟು ಸಮರ್ಪಿತವಾಗಿದ್ದೀರಿ ಎಂದು ನನಗೆ ತಿಳಿದಿದೆ ಮತ್ತು ಈ ಎಲ್ಲಾ ಗುಣಗಳನ್ನು ನೀವು ಈ ಹೊಸ ಕೆಲಸಕ್ಕೆ ಬಳಸುತ್ತಿರಿ ಎಂದು ನನಗೆ ಖಾತ್ರಿಯಿದೆ. ನಿಮಗೆ ತಿಳಿದಿರುವಂತೆ, ನಿರೀಕ್ಷೆಗಳು ಹೆಚ್ಚಾಗಿರುತ್ತವೆ ಮತ್ತು ಪರೀಕ್ಷೆಗಳು ಆಗಾಗ ಎದುರಾಗುತ್ತವೆ. ಆದರೆ ಕೆಟ್ಟ ಸಮಯಗಳಲ್ಲಿಯೂ ನೀವು ಎಂದಿಗೂ ಏಕಾಂಗಿಯಾಗಿರುವುದಿಲ್ಲ. ನಿಮ್ಮ ಆಟಗಾರರು, ನಿಮ್ಮ ಸಹಾಯಕ ಸಿಬ್ಬಂದಿ, ಹಿಂದಿನ ನಾಯಕರ ಬೆಂಬಲವನ್ನು ನೀವು ಹೊಂದಿರುತ್ತೀರಿ. ನೀವು ಯಾರಿಗಾಗಿ ಆಡುತ್ತೀರಿ ಎಂಬುದನ್ನು ಎಂದಿಗೂ ಮರೆಯಬೇಡಿ. ಅಭಿಮಾನಿಗಳಿಗೆ ತುಂಬಾ ಬೇಡಿಕೆಯಿರುತ್ತಾರೆ. ಯಾವಾಗಲೂ ತಂಡದ ಹಿಂದೆಯೇ ಇರಿ. ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದು ದ್ರಾವಿಡ್ ಹೇಳಿದ್ದಾರೆ.

ಭಾವುಕರಾದ ಗೌತಮ್ ಗಂಭೀರ್

ಈ ಸಂದೇಶವನ್ನು ಕೇಳಿದ ನಂತರ ಗೌತಮ್ ಗಂಭೀರ್ ಭಾವುಕರಾದರು. ದ್ರಾವಿಡ್ ಅವರನ್ನು ತಾವು ನೋಡಿದ ಅತ್ಯಂತ ನಿಸ್ವಾರ್ಥ ಕ್ರಿಕೆಟಿಗ ಎಂದು ಕರೆದರು. ತಮ್ಮ ಕೆಲಸವನ್ನು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

ದ್ರಾವಿಡ್ ಸಂದೇಶಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ನನಗೆ ತಿಳಿದಿಲ್ಲ ಏಕೆಂದರೆ ಈ ಸಂದೇಶವು ನನಗೆ ತುಂಬಾ ಮುಖ್ಯ. ಇದಕ್ಕೆ ಕಾರಣ ಈ ಸಂದೇಶ ಯಶಸ್ವಿಯಾದ ವ್ಯಕ್ತಿಯಿಂದ ಬಂದದ್ದಲ್ಲ. ನಾನು ಆಡುವಾಗ ಯಾವಾಗಲೂ ನೋಡುತ್ತಿದ್ದ ವ್ಯಕ್ತಿಯಿಂದ ದೊರಕಿದೆ. ರಾಹುಲ್ ಭಾರತೀಯ ಕ್ರಿಕೆಟ್​ಗೆ ಅಗತ್ಯವಿರುವ ಎಲ್ಲವನ್ನೂ ಕೊಟ್ಟಿದ್ದಾರೆ. ನನಗೆ ಮಾತ್ರವಲ್ಲ, ಮುಂದಿನ ಪೀಳಿಗೆಗೆ ಮತ್ತು ಇಂದಿನ ಪೀಳಿಗೆಗೂ ಅವರಿಂದ ಕಲಿಯಲು ಬಹಳಷ್ಟಿದೆ ಎಂದು ಹೇಳಿದ್ದಾರೆ.

ನಾನು ಸಾಮಾನ್ಯವಾಗಿ ಹೆಚ್ಚು ಭಾವುಕನಾಗುವುದಿಲ್ಲ. ಆದರೆ ಈ ಸಂದೇಶವು ನಿಜವಾಗಿಯೂ ನನ್ನನ್ನು ತುಂಬಾ ಕಾಡಿದೆ. ಇದು ಉತ್ತಮ ಸಂದೇಶ ಮತ್ತು ಇದು ಅವರ ಸ್ಥಾನ ತುಂಬುವ ದೊಡ್ಡ ಜವಾಬ್ದಾರಿಯಿದೆ ನಾನು ಅದನ್ನು ಸಂಪೂರ್ಣ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಮಾಡಬಲ್ಲೆ, ಎಂದು ಅವರು ಹೇಳಿದರು.

Continue Reading

ಕ್ರೀಡೆ

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

Ricky Ponting :

VISTARANEWS.COM


on

Ricky Ponting
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ (Ricky Ponting) ಅವರನ್ನು ಬಿಟ್ಟಾಗ ಫ್ರಾಂಚೈಸಿಯ ಅಭಿಮಾನಿಗಳಿಗೆ ಮತ್ತು ಆಟಗಾರರಿಗೆ ಆಘಾತವನ್ನುಂಟು ಮಾಡಿತ್ತು. ಆದರೆ ಫ್ರಾಂಚೈಸಿಯ ಸಹ ಮಾಲೀಕ ಮತ್ತು ಅಧ್ಯಕ್ಷ ಪಾರ್ಥ್ ಜಿಂದಾಲ್ ಅಂತಿಮವಾಗಿ ಪಾಂಟಿಂಗ್ ಅವರನ್ನು ಆ ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮೂಲಕ ರಿಕಿ ಪಾಂಟಿಂಗ್ ಅವರಿಂದ ಬೇರ್ಪಡುವುದಾಗಿ ಘೋಷಿಸಿತು. ಪಾಂಟಿಂಗ್ ಏಳು ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಅಧಿಕಾರಾವಧಿಯಲ್ಲಿ ತಂಡವು ಒಂದೇ ಒಂದು ಟ್ರೋಫಿಯನ್ನು ಗೆಲ್ಲಲು ವಿಫಲವಾಯಿತು. ಇಷ್ಟು ದೀರ್ಘಾವಧಿಯಲ್ಲಿ ಒಂದೇ ಒಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟ್ರೋಫಿಯನ್ನು ಗೆಲ್ಲಲು ತಂಡದ ಅಸಮರ್ಥತೆಯಿಂದಾಗಿ ಪಾಂಟಿಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಈ ಹಿಂದೆ ಭಾವಿಸಲಾಗಿತ್ತು. ಆದರೆ ಪಾರ್ಥ್ ಜಿಂದಾಲ್ ಅಂತಹ ದೊಡ್ಡ ನಿರ್ಧಾರದ ಹಿಂದಿನ ನಿಜವಾದ ಕಾರಣ ಬಹಿರಂಗಪಡಿಸಿದ್ದಾರೆ.

ಪಾರ್ಥ್ ಜಿಂದಾಲ್ ಏನಂದರು?

ಪಾರ್ಥ್ ಜಿಂದಾಲ್ ಅವರು 2026 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ತಂಡಕ್ಕೆ ಪ್ರಾಯೋಜಕರಾಗಿರುವ ಪ್ರಸಿದ್ಧ ಜೆಎಸ್​ಡಬ್ಲ್ಯೂ ಗ್ರೂಪ್​ನ ಮುಖ್ಯಸ್ಥರಾಗಿದ್ದಾರೆ. ಒಲಿಂಪಿಕ್ಸ್ ಮುನ್ನಾದಿನದಂದು ಸಿಎನ್ಬಿಸಿ-ಟಿವಿ 18 ಜೊತೆಗಿನ ಇತ್ತೀಚಿನ ಚರ್ಚೆಯಲ್ಲಿ ಮಾತನಾಡಿ, ರಿಕಿ ಪಾಂಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿದ್ದಾರೆ.

ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಮುಖೇಶ್ ಕುಮಾರ್ ಅವರಂತಹ ಭಾರತೀಯ ಅಂತಾರಾಷ್ಟ್ರೀಯ ಆಟಗಾರರನ್ನು ಒಳಗೊಂಡಿರುವ ತಮ್ಮ ತಂಡದ ಪ್ರಮುಖ ಗುಂಪಿನಲ್ಲಿ ಯುವ ಸಹ ಮಾಲೀಕ ವಿಶ್ವಾಸವನ್ನು ತೋರಿಸಿದರು.

“ಮೆಗಾ ಹರಾಜಿನ ಉಳಿಸುವ ಮತ್ತು ಬಿಡುಗಡೆ ನಿಯಮಗಳ ಬಗ್ಗೆ ನಾವು ಬಿಸಿಸಿಐಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ. ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಾವು ಉತ್ತಮ ಆಟಗಾರರನ್ನು ಹೊಂದಿದ್ದೇವೆ. ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್ ಅವರಂತಹ ಆಟಗಾರರನ್ನು ನೋಡಿದ್ದೇವೆ ಎಂದು ಜಿಂದಾಲ್ ಹೇಳಿದ್ದಾರೆ.

ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಹುದ್ದೆಯಿಂದ ತೆಗೆದುಹಾಕುವ ಬಗ್ಗೆ ಕೇಳಿದಾಗ, ಜಿಂದಾಲ್, ಅವರು ಸದಾ ಭಾರತದಲ್ಲಿ ಲಭ್ಯ ಇರಬೇಕು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದ ಹೇಳಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಕೋಚ್​ ಸಂಪೂರ್ಣ ಸಮಯ ಮೀಸಲಿಡಬೇಕು. ಅವರು ಭಾರತದ ಯಾವುದೇ ನಗರದಲ್ಲಿ ಯಾವುದೇ ಸಮಯದಲ್ಲಿ ಲಭ್ಯವಿರಬೇಕು. ನಾವು ಈ ಬದಲಾವಣೆಯನ್ನು ಮಾಡಲು ಇದೊಂದೇ ಕಾರಣ ಎಂದು ಜಿಂದಾಲ್ ಹೇಳಿದ್ದಾರೆ. ಇದೇ ವೇಳೆ ಈ ಏಳು ವರ್ಷಗಳಲ್ಲಿ ರಿಕಿ ಪಾಂಟಿಂಗ್ ಅವರ ಅಮೂಲ್ಯ ಸೇವೆಗಳಿಗಾಗಿ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.

ರಿಕಿ ಪಾಂಟಿಂಗ್ ಕೋಚ್ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2020ರಲ್ಲಿ ಫೈನಲ್ ತಲುಪಿತ್ತು. ದುರದೃಷ್ಟವಶಾತ್, ಫೈನಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading
Advertisement
Vaccin for Hiv
ಆರೋಗ್ಯ30 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ39 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ54 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ56 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ57 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌