ICC World Cup 2023: ವಿಶ್ವಕಪ್​ ಸೆಮಿಫೈನಲ್​ ತಂಡ ಪ್ರಕಟಿಸಿದ ಇರ್ಫಾನ್​ ಪಠಾಣ್​ - Vistara News

ಕ್ರಿಕೆಟ್

ICC World Cup 2023: ವಿಶ್ವಕಪ್​ ಸೆಮಿಫೈನಲ್​ ತಂಡ ಪ್ರಕಟಿಸಿದ ಇರ್ಫಾನ್​ ಪಠಾಣ್​

ಇರ್ಫಾನ್ ಪಠಾಣ್ ಪ್ರಕಾರ ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

VISTARANEWS.COM


on

former Indian cricketer Irfan Pathan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಏಕದಿನ ವಿಶ್ವಕಪ್​ನಲ್ಲಿ(ICC World Cup 2023) ಯಾವ ತಂಡ ಗೆಲ್ಲಬಹುದೆಂದು ಮತ್ತು ಸೆಮಿಫೈನಲ್​ ಪ್ರವೇಶ ಪಡೆಯಬಹುದು ಎಂದು ಈಗಾಗಲೇ ಹಲವು ಕ್ರಿಕೆಟ್​ ಪಂಡಿತರು ಭವಿಷ್ಯ ನುಡಿದ್ದಾರೆ. ಹೆಚ್ಚಾಗಿ ಎಲ್ಲರು ಭಾರತವೇ ಈ ಬಾರಿ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ. ಭಾರತ ತಂಡ ಮಾಜಿ ಆಟಗಾರ ಇರ್ಫಾನ್​ ಪಠಾಣ್(irfan pathan)​ ಕೂಟ ತಮ್ಮ ಆಯ್ಕೆ ನಾಲ್ಕು ಸೆಮಿಫೈನಲ್ ತಂಡವನ್ನು ಪ್ರಕಟಿಸಿದ್ದಾರೆ.

ವಿಶ್ವಕಪ್​ ಕುರಿತು ನಡೆಸಿದ ಸಂದರ್ಶನದಲ್ಲಿ ಅಭಿಪ್ರಾಯ ಹಂಚಿಕೊಂಡ 2007ರ ವಿಶ್ವಕಪ್‌ ವಿಜೇತ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಗಂಭೀರ್ ಪ್ರಕಾರ ಆಸೀಸ್​ ಚಾಂಪಿಯನ್​

2011ರ ವಿಶ್ವಕಪ್​ನಲ್ಲಿ ಆಡಿದ್ದ ಮಾಜಿ ಆಟಗಾರ ಗೌತಮ್​ ಗಂಭೀರ್(gautam gambhir) ಈ ಬಾರಿ​ ಆಸ್ಟ್ರೇಲಿಯಾ ಆರನೇ ಬಾರಿ ವಿಶ್ವಕಪ್​ ಗೆಲ್ಲಲಿದೆ. ಈ ತಂಡದಲ್ಲಿ ಉತ್ತಮ ಆಲ್​ರೌಂಡರ್​, ಅದ್ಭುತ ವೇಗಿಗಳು ಕಾಣಿಸಿಕೊಂಡಿದ್ದಾರೆ. ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಕೂಡ ಕಪ್​ ಗೆಲ್ಲುವುದು ಕಷ್ಟ ಆದರೆ ಫೈನಲ್​ ಪ್ರವೇಶಿಸಬಹುದು. ಭಾರತ ಮಾತ್ರ ಸೆಮಿಫೈನಲ್​ ಹಂತಕ್ಕೇರಿದರೆ ದೊಡ್ಡ ಸಾಧನೆ. ಒಂದೆರಡು ಆಟಗಾರರನ್ನು ಬಿಟ್ಟರೆ ಇನಿಂಗ್ಸ್​ ಕಟ್ಟಬಲ್ಲ ಆಟಗಾರರು ವಿಶ್ವಕಪ್​ ತಂಡದಲ್ಲಿಲ್ಲ. ಹೀಗಾಗಿ ಭಾರತ ಈ ಬಾರಿ ಕಪ್​ ಗೆಲ್ಲುವುದು ಅಸಾಧ್ಯ ಎಂದು ಹೇಳಿದ್ದಾರೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ವಿರುದ್ಧ ಆಡುವ ಮೂಲಕ ಆಸ್ಟ್ರೇಲಿಯಾ ತನ್ನ ವಿಶ್ವ ಕಪ್​ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ ICC World Cup: ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್​ ವಿಕೆಟ್​ ಪಡೆದ ಟಾಪ್​ 5 ಬೌಲರ್​ಗಳು

ಯುವಿ ಹೇಳಿದ ಭವಿಷ್ಯವೇನು?

ವಿಶ್ವಕಪ್ ಹೀರೊ, ಸಿಕ್ಸರ್ ಸಿಂಗ್ ಯುವರಾಜ್ ಸಿಂಗ್(Yuvraj Singh) ಕೂಡ ಭಾರತ ಈ ಬಾರಿ ವಿಶ್ವಕಪ್​ ಗೆಲ್ಲುವುದು ಅನುಮಾನ ಎಂದು ಹೇಳಿದ್ದರು. ಯುಟ್ಯೂಬ್ ವಾಹಿನಿಯ ‘ಕ್ರಿಕೆಟ್ ಬಾಸು’ ಚಾನಲ್‌ನಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ಒಬ್ಬ ಅಪ್ಪಟ ದೇಶಪ್ರೇಮಿಯಾಗಿ ನಾನು ಕೂಡ ಭಾರತ ತಂಡ ಕಪ್​ ಗೆಲ್ಲುವುದನ್ನು ನೋಡಲು ಬಯಸುತ್ತೇನೆ. ಆದರೆ ಭಾರತ ತಂಡ ಟ್ರೋಫಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಲು ಕಷ್ಟಕರ. ಏಕೆಂದರೆ ಭಾರತ ತಂಡದಲ್ಲಿ ಹಲವು ಸಮಸ್ಯೆಗಳು ಕಾಣುತ್ತಿದೆ, ಇದು ಪರಿಹಾರ ಕಾಣುವವರೆಗೆ ಕಪ್​ ಗೆಲ್ಲುವುದು ಕಷ್ಟ” ಎಂದು ಹೇಳಿದ್ದರು.

“ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ಸಮಸ್ಯೆ ಎದ್ದು ಕಾಣುತ್ತಿದೆ. 4 ಮತ್ತು 5 ಕ್ರಮಾಂಕದ ಬ್ಯಾಟರ್‌ಗಳ ಪ್ರದರ್ಶನ ತಂಡದ ಗೆಲುವನನ್ನು ನಿರ್ಧರಿಸಿತ್ತದೆ. ಆದರೆ ಸದ್ಯ ಭಾರತ ತಂಡದಲ್ಲಿ ಈ ಸ್ಥಾನಕ್ಕೆ ಸೂಕ್ತ ಆಟಗಾರ ಇಲ್ಲ. ಕಳೆದ ಕೆಲ ವರ್ಷಗಳಿಂದಲೂ ತಂಡಕ್ಕೆ ಇದುವೇ ಹಿನ್ನಡೆಯಾಗಿದೆ. 2011 ವಿಶ್ವ ಕಪ್​ನಲ್ಲಿ ತಂಡ ಮಧ್ಯಮ ಕ್ರಮಾಂಕದಲ್ಲಿ ಬಲಿಷ್ಠವಾಗಿತ್ತು. ಹೀಗಾಗಿ ತಂಡ ಕಪ್​ ಗೆಲ್ಲುವಲ್ಲಿ ಸಹಕಾರಿಯಾಯಿತು. ಇನ್ನು ಗಾಯದ ಸಮಸ್ಯೆಯೂ ಭಾರತಕ್ಕೆ ಹಿನ್ನಡೆಯಾಗಿದೆ” ಹೀಗಾಗಿ ಭಾರತ ಕಪ್​ ಗೆಲ್ಲುವುದು ಅನುಮಾನ ಎಂದು ಯುವರಾಜ್​ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading

ಕ್ರೀಡೆ

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

IND vs ZIM:ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಂಗ್​ ಟೀಮ್​ ಇಂಡಿಯಾ ಆಟಗಾರರ ಎಚ್ಚರಿಕೆಯಿಂದ ಆಡಬೇಕು.

VISTARANEWS.COM


on

IND vs ZIM
Koo

ಹರಾರೆ: ಇದುವರೆಗೂ ಟಿ20 ವಿಶ್ವಕಪ್​ ಗೆಲುವಿನ ಗುಂಗಿನಲ್ಲಿದ್ದ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಇನ್ನು ನಾಳೆಯಿಂದ(ಶನಿವಾರ) ಆರಂಭಗೊಳ್ಳುವ ಜಿಂಬಾಬ್ವೆ ಮತ್ತು ಭಾರತ(IND vs ZIM) ನಡುವಣ ಟಿ20(
Zimbabwe vs India) ಸರಣಿಯತ್ತ ಗಮನ ಹರಿಸಲಿದ್ದಾರೆ. ಹರಾರೆಯಲ್ಲಿ ಇತ್ತಂಡಗಳ ಮೊದಲ ಪಂದ್ಯ ನಡೆಯಲಿದೆ. ಯುವ ಪಡೆಯನ್ನೇ ನೆಚ್ಚಿಕೊಂಡಿರುವ ಶುಭಮನ್​ ಗಿಲ್(shubman gill)​ ಸಾರಥ್ಯದ ಟೀಮ್​ ಇಂಡಿಯಾ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದು ಈ ಸೆರಣಿಯ ಕೌತುಕ.

ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು.

ರೋಹಿತ್​ ನಿವೃತ್ತಿಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಈಗಾಗಲೇ ಹಾರ್ದಿಕ್​ ಹೆಸರು ಕೇಳಿ ಬಂದಿದೆ. ಜಿಂಬಾಬ್ವೆ ಸರಣಿಯಲ್ಲಿ ತಂಡ ಮುನ್ನಡೆಸುತ್ತಿರುವ ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜಿಂಬಾಬ್ವೆ ಕೂಡ ಬಲಿಷ್ಠ


ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

ಮುಖಾಮುಖಿ


ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

Jay Shah: ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು.

VISTARANEWS.COM


on

Jay Shah
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾ(Team India) ಆಟಗಾರರಿಗೆ ನಿನ್ನೆ)ಗುರುವಾರ) ಮುಂಬೈಯಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಮುಂಬೈಯಲ್ಲಿ ಒಂದು ರೀತಿಯ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ಮಧ್ಯೆ ತೆರೆದ ಬಸ್‌ನಲ್ಲಿ ಆಟಗಾರರರನ್ನು ಮೆರವಣಿಗೆ ಮಾಡಿ ವಾಂಖೆಡೆ ಮೈದಾನದಲ್ಲೂ ಸಂಭ್ರಮ ಆಚರಿಸಲಾಯಿತು. ಈ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ವಿರಾಟ್​ ಕೊಹ್ಲಿಗೆ(virat kohli) ಹಸ್ತಲಾಘವ ನೀಡಿದ ಬಳಿಕವೂ ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತು ಮೈಮರೆತ ವಿಡಿಯೊವೊಂದು ವೈರಲ್​ ಆಗಿದೆ.

ಮೋದಿ ಭೇಟಿ ಬಳಿಕ ಟೀಮ್​ ಇಂಡಿಯಾ ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಮಾಡಲಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು. ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಚೆಕ್‌ ವಿತರಣೆಯ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಬಿಸಿಸಿಐ ಅಧಿಕಾರಿಗಳಿಗೆ ಆಟಗಾರರು ಹಸ್ತಲಾಘವ ನೀಡುವ ಮೂಲಕ ಗೌರವ ಸೂಚಿಸಿದರು. ಎಲ್ಲ ಆಟಗಾರರಂತೆ ಕೊಹ್ಲಿ ಕೂಡ ಸರತಿ ಸಾಲಿನಲ್ಲಿ ಅಧಿಕಾರಿಗಳ ಕೈ ಕುಲುಕಿ ಮುಂದೆ ಸಾಗಿದರು. ಈ ವೇಳೆ ಜಯ್​ ಶಾ, ಕೊಹ್ಲಿ ಕೈ ಕುಲುಕಿದ ಬಳಿಕ ಕೊಹ್ಲಿಯನ್ನೇ ನೋಡುವುದರಲ್ಲೇ ಮಗ್ನರಾದರು. ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಈ ವಿಡಿಯೊ ವೈರಲ್​ ಆಗಿದೆ. ಜಯ್​ ಶಾ ಅವರು ಕೊಹ್ಲಿಯನ್ನೇ ನೋಡುತ್ತಾ ನಿಂತಿದ್ದು ಯಾಕೆ ಎಂಬ ಬಗ್ಗೆ ನೆಟ್ಟಿಗರು ಚರ್ಚೆ ನಡೆಸಲಾರಂಭಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟ್ರೋಫಿ ವೇಳೆ ಸರಣಿ ಶ್ರೇಷ್ಠ ಪ್ರಶಸ್ತಿ ಸ್ವಿಕರಿಸುವಾಗ ಕೊಹ್ಲಿ ಜಯ್​ ಶಾ ಮುಖವನ್ನು ಕೂಡ ನೋಡದೆ ನೇರವಾಗಿ ಬಂದಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಯಾರಿಗೆ ಗೌರವ ನೀಡಬೇಕು ಮತ್ತು ನೀಡಬಾರದು ಎಂಬುದು ಕಿಂಗ್​ ಕೊಹ್ಲಿಗೆ ತಿಳಿದಿದೆ ಎಂಬುದಾಗಿ ಕೊಹ್ಲಿ ಅಭಿಮಾನಿಗಳು ಈ ವಿಡಿಯೊಗೆ ಕಮೆಂಟ್​ ಮಾಡಿದ್ದರು.

15 ವರ್ಷಗಳಲ್ಲಿ ರೋಹಿತ್‌ರನ್ನು ಇಷ್ಟು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು. ನಾವು ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಅಳುತ್ತಿದ್ದೆವು. 2011ರಲ್ಲಿ ಇದೇ ಮೈದಾನದಲ್ಲಿ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಅಂದು ಹಿರಿಯ ಆಟಗಾರರು ಭಾವುಕರಾಗಿದ್ದಾಗ ಅವರ ಭಾವನೆಗಳನ್ನು ಅಷ್ಟೊಂದು ಆಳವಾಗಿ ಗ್ರಹಿಸಲು ಸಾಧ್ಯವಾಗಿರಲಿಲ್ಲ. ಆದರೆ ನನಗೀಗ ಎಲ್ಲವೂ ಅರ್ಥವಾಗುತ್ತಿದೆ’ ಎಂದು ಹೇಳಿದರು.

Continue Reading

ಕ್ರಿಕೆಟ್

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

Team India: ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

VISTARANEWS.COM


on

Team India
Koo

ಮುಂಬಯಿ: ಕಳೆದ ವರ್ಷ ಭಾರತದ(Team India) ಆತಿಥ್ಯದಲ್ಲಿ ನಡೆದ 13ನೇ ಆವೃತ್ತಿಯ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಆತಿಥೇಯ ಟೀಮ್ ಇಂಡಿಯಾವನ್ನು 6 ವಿಕೆಟ್​ಗಳಿಂದ ಮಣಿಸಿದ ಆಸ್ಟ್ರೇಲಿಯಾ 6ನೇ ಏಕದಿನ ವಿಶ್ವಕಪ್​ ಗೆದ್ದು ಸಂಭ್ರಮಿಸಿತ್ತು. ಈ ಐತಿಹಾಸಿಕ ಸಾಧನೆ ಬಳಿಕ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌(Mitchell Marsh) ಡ್ರೆಸ್ಸಿಂಗ್​ ರೋಮ್​ನಲ್ಲಿ ಟ್ರೋಫಿ ಮೇಲೆ ಕಾಲಿಟ್ಟು ಸಂಭ್ರಮಿಸಿದ್ದರು. ಮಾರ್ಷ್​ ಅವರ ಈ ದುರ್ವರ್ತನೆಗೆ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಕೆಲವರು ಮಾರ್ಷ್ ವಿರುದ್ಧ ಆರ್‌ಟಿಐ ಕಾರ್ಯಕರ್ತನೊಬ್ಬ ಉತ್ತರ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಇದೀಗ ಭಾರತ ತಂಡ ಟಿ20 ವಿಶ್ವಕಪ್​ ಗೆದ್ದ ತವರಿಗೆ ಮರಳಿದ ವೇಳೆ ಆಟಗಾರರಿಗೆ ಸಿಕ್ಕ ಸ್ವಾಗತ ಮತ್ತು ಆಟಗಾರರು ಟ್ರೋಫಿಗೆ ನೀಡಿದ ಗೌರವವನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೊಂಡಾಡಿದ್ದಾರೆ. ಇದು ನೈಜ ಮತ್ತು ನಮ್ಮ ದೇಶದ ಸಂಸ್ಕೃತಿ ಎಂದು ಮಾರ್ಷ್​ಗೆ ಮತ್ತು ಆಸೀಸ್​ ಆಟಗಾರರಿಗೆ ಟಾಂಗ್​ ಕೊಟ್ಟಿದ್ದಾರೆ.

ಆಟಗಾರರ ತ್ಯಾಗ ಮತ್ತು ಪರಿಶ್ರಮದ ಫಲವಾಗಿ ಭಾರತಕ್ಕೆ ವಿಶ್ವಕಪ್​ ಟ್ರೋಫಿ ದೊರಕಿದೆ. ಭಾರತೀಯ ಆಟಗಾರರು ಸರಿಯಾದ ಕ್ರಮದಲ್ಲೇ ಈ ಟ್ರೋಫಿಗೆ ಗೌರವ ಸೂಚಿಸಿದ್ದಾರೆ. ಕಳೆದ ಬಾರಿ ಟ್ರೋಫಿ ಮೇಲೆ ಕಾಲಿಟ್ಟ ಆಸೀಸ್​ ತಂಡ ತನಗಿಂತ ಕೆಲ ಕ್ರಮಾಂಕದ ತಂಡದ ವಿರುದ್ಧ ಕೂಡ ಸೋಲಿನ ಅವಮಾನ ಎದುರಿಸಿತು. ನಿಮ್ಮ ಈ ಸೋಲಿಗೆ ಅಂದು ತೋರಿದ ದರ್ಪವೇ ಕಾರಣ ಎಂದು ನೆಟ್ಟಿಗರು ಆಸೀಸ್​ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

ಇದನ್ನೂ ಓದಿ Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

ಗುರುವಾರ ವಿಶ್ವಕಪ್​ ವಿಜೇತ ತಂಡದ ಆಟಗಾರರನ್ನು ಅಭಿನಂದಿಸುವ(Team India victory parade) ಸಲುವಾಗಿ ಮುಂಬೈಯ ಮರೀನ್ ಡ್ರೈವ್‌ ಪ್ರದೇಶದಲ್ಲಿ ಸೇರಿದ ಅಭಿಮಾನಿಗಳನ್ನು(Team India fans) ಕಾಣುವಾಗ ಅರಬ್ಬಿ ಸಮುದ್ರವೇ ನಾಚಿ ನೀರಾಗುವಷ್ಟು ಕ್ರಿಕೆಟ್‌ ಪ್ರೀತಿಯ ಸಾಗರ ಉಕ್ಕೇರಿತ್ತು.

ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಎಲ್ಲ ಆಟಗಾರರು ವಿಶ್ವಕಪ್​ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಗೌರವ ಸೂಚಿಸುತ್ತಿರುವ ವಿಡಿಯೊ ಮತ್ತು ಫೋಟೊಗಳನ್ನು ನೆಟ್ಟಿಗರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಾರ್ಷ್​ಗೆ ತಿರುಗೇಟು ನೀಡಿದ್ದಾರೆ.

ಕೆಲ ನೆಟ್ಟಿಗರು, ಆಸೀಸ್​​ಗೆ ಇದೊಂದು ಮುಖ್ಯ ವಿಷಯವಲ್ಲ. , ಅವರು ನಮ್ಮಂತೆ ಭಾವನಾತ್ಮಕ ವಿಷಯಗಳನ್ನು ನೋಡುವುದಿಲ್ಲ. ಈ ಬಗ್ಗೆ ಚರ್ಚಿಸಿ ಪ್ರಯೋಜನವಿಲ್ಲ. ಚಿಂತಿಸಲು ಹಲವಾರು ವಿಷಯಗಳಿವೆ ಎಂದು ಹೇಳಿದ್ದಾರೆ.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಟಿ20 ವಿಶ್ವಕಪ್​ ಫೈನಲ್(​T20 World Cup 2024) ಪಂದ್ಯದಲ್ಲಿ ಭಾರತ ತಂಡ(Team India) ದಕ್ಷಿಣ ಆಫ್ರಿಕಾ(South Africa vs India) ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸುವ ಮೂಲಕ 13 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರವೊಂದನ್ನು ನೀಗಿಸಿತ್ತು.

Continue Reading
Advertisement
Channaptna By Election CP Yogeshwar
ಪ್ರಮುಖ ಸುದ್ದಿ4 mins ago

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Viral Video
Latest5 mins ago

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

SC ST Scholarship
ಪ್ರಮುಖ ಸುದ್ದಿ8 mins ago

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

Retirement Panning
ಮನಿ-ಗೈಡ್21 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

electric bike taxi
ಪ್ರಮುಖ ಸುದ್ದಿ38 mins ago

Electric Bike Taxi: ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ಸಂಪೂರ್ಣ ನಿಷೇಧ

Puri Jagannath Yatra
ಧಾರ್ಮಿಕ40 mins ago

Puri Jagannath Yatra: ಜುಲೈ 7ರಂದು ಪುರಿ ಜಗನ್ನಾಥ ರಥಯಾತ್ರೆ; ಇದಕ್ಕಿದೆ ಪೌರಾಣಿಕ ಹಿನ್ನೆಲೆ

SCSP TSP Scheme
ಕರ್ನಾಟಕ47 mins ago

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

Viral Video
ವೈರಲ್ ನ್ಯೂಸ್1 hour ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ1 hour ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ1 hour ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ1 hour ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ2 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು4 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ22 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ23 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌