Site icon Vistara News

ICC World Cup 2023: ವಿಶ್ವಕಪ್​ ಸೆಮಿಫೈನಲ್​ ತಂಡ ಪ್ರಕಟಿಸಿದ ಇರ್ಫಾನ್​ ಪಠಾಣ್​

former Indian cricketer Irfan Pathan

ಮುಂಬಯಿ: ಏಕದಿನ ವಿಶ್ವಕಪ್​ನಲ್ಲಿ(ICC World Cup 2023) ಯಾವ ತಂಡ ಗೆಲ್ಲಬಹುದೆಂದು ಮತ್ತು ಸೆಮಿಫೈನಲ್​ ಪ್ರವೇಶ ಪಡೆಯಬಹುದು ಎಂದು ಈಗಾಗಲೇ ಹಲವು ಕ್ರಿಕೆಟ್​ ಪಂಡಿತರು ಭವಿಷ್ಯ ನುಡಿದ್ದಾರೆ. ಹೆಚ್ಚಾಗಿ ಎಲ್ಲರು ಭಾರತವೇ ಈ ಬಾರಿ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡ ಎಂದು ಹೇಳಿದ್ದಾರೆ. ಭಾರತ ತಂಡ ಮಾಜಿ ಆಟಗಾರ ಇರ್ಫಾನ್​ ಪಠಾಣ್(irfan pathan)​ ಕೂಟ ತಮ್ಮ ಆಯ್ಕೆ ನಾಲ್ಕು ಸೆಮಿಫೈನಲ್ ತಂಡವನ್ನು ಪ್ರಕಟಿಸಿದ್ದಾರೆ.

ವಿಶ್ವಕಪ್​ ಕುರಿತು ನಡೆಸಿದ ಸಂದರ್ಶನದಲ್ಲಿ ಅಭಿಪ್ರಾಯ ಹಂಚಿಕೊಂಡ 2007ರ ವಿಶ್ವಕಪ್‌ ವಿಜೇತ ತಂಡದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಬಹುದು ಎಂದು ಭವಿಷ್ಯ ನುಡಿದಿದ್ದಾರೆ.

ಗಂಭೀರ್ ಪ್ರಕಾರ ಆಸೀಸ್​ ಚಾಂಪಿಯನ್​

2011ರ ವಿಶ್ವಕಪ್​ನಲ್ಲಿ ಆಡಿದ್ದ ಮಾಜಿ ಆಟಗಾರ ಗೌತಮ್​ ಗಂಭೀರ್(gautam gambhir) ಈ ಬಾರಿ​ ಆಸ್ಟ್ರೇಲಿಯಾ ಆರನೇ ಬಾರಿ ವಿಶ್ವಕಪ್​ ಗೆಲ್ಲಲಿದೆ. ಈ ತಂಡದಲ್ಲಿ ಉತ್ತಮ ಆಲ್​ರೌಂಡರ್​, ಅದ್ಭುತ ವೇಗಿಗಳು ಕಾಣಿಸಿಕೊಂಡಿದ್ದಾರೆ. ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಕೂಡ ಕಪ್​ ಗೆಲ್ಲುವುದು ಕಷ್ಟ ಆದರೆ ಫೈನಲ್​ ಪ್ರವೇಶಿಸಬಹುದು. ಭಾರತ ಮಾತ್ರ ಸೆಮಿಫೈನಲ್​ ಹಂತಕ್ಕೇರಿದರೆ ದೊಡ್ಡ ಸಾಧನೆ. ಒಂದೆರಡು ಆಟಗಾರರನ್ನು ಬಿಟ್ಟರೆ ಇನಿಂಗ್ಸ್​ ಕಟ್ಟಬಲ್ಲ ಆಟಗಾರರು ವಿಶ್ವಕಪ್​ ತಂಡದಲ್ಲಿಲ್ಲ. ಹೀಗಾಗಿ ಭಾರತ ಈ ಬಾರಿ ಕಪ್​ ಗೆಲ್ಲುವುದು ಅಸಾಧ್ಯ ಎಂದು ಹೇಳಿದ್ದಾರೆ. ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ವಿರುದ್ಧ ಆಡುವ ಮೂಲಕ ಆಸ್ಟ್ರೇಲಿಯಾ ತನ್ನ ವಿಶ್ವ ಕಪ್​ ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ ICC World Cup: ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್​ ವಿಕೆಟ್​ ಪಡೆದ ಟಾಪ್​ 5 ಬೌಲರ್​ಗಳು

ಯುವಿ ಹೇಳಿದ ಭವಿಷ್ಯವೇನು?

ವಿಶ್ವಕಪ್ ಹೀರೊ, ಸಿಕ್ಸರ್ ಸಿಂಗ್ ಯುವರಾಜ್ ಸಿಂಗ್(Yuvraj Singh) ಕೂಡ ಭಾರತ ಈ ಬಾರಿ ವಿಶ್ವಕಪ್​ ಗೆಲ್ಲುವುದು ಅನುಮಾನ ಎಂದು ಹೇಳಿದ್ದರು. ಯುಟ್ಯೂಬ್ ವಾಹಿನಿಯ ‘ಕ್ರಿಕೆಟ್ ಬಾಸು’ ಚಾನಲ್‌ನಲ್ಲಿ ಮಾತನಾಡಿದ ಯುವರಾಜ್​ ಸಿಂಗ್​, “ಒಬ್ಬ ಅಪ್ಪಟ ದೇಶಪ್ರೇಮಿಯಾಗಿ ನಾನು ಕೂಡ ಭಾರತ ತಂಡ ಕಪ್​ ಗೆಲ್ಲುವುದನ್ನು ನೋಡಲು ಬಯಸುತ್ತೇನೆ. ಆದರೆ ಭಾರತ ತಂಡ ಟ್ರೋಫಿ ಗೆದ್ದೇ ಗೆಲ್ಲುತ್ತದೆ ಎಂದು ಹೇಳಲು ಕಷ್ಟಕರ. ಏಕೆಂದರೆ ಭಾರತ ತಂಡದಲ್ಲಿ ಹಲವು ಸಮಸ್ಯೆಗಳು ಕಾಣುತ್ತಿದೆ, ಇದು ಪರಿಹಾರ ಕಾಣುವವರೆಗೆ ಕಪ್​ ಗೆಲ್ಲುವುದು ಕಷ್ಟ” ಎಂದು ಹೇಳಿದ್ದರು.

“ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ಸಮಸ್ಯೆ ಎದ್ದು ಕಾಣುತ್ತಿದೆ. 4 ಮತ್ತು 5 ಕ್ರಮಾಂಕದ ಬ್ಯಾಟರ್‌ಗಳ ಪ್ರದರ್ಶನ ತಂಡದ ಗೆಲುವನನ್ನು ನಿರ್ಧರಿಸಿತ್ತದೆ. ಆದರೆ ಸದ್ಯ ಭಾರತ ತಂಡದಲ್ಲಿ ಈ ಸ್ಥಾನಕ್ಕೆ ಸೂಕ್ತ ಆಟಗಾರ ಇಲ್ಲ. ಕಳೆದ ಕೆಲ ವರ್ಷಗಳಿಂದಲೂ ತಂಡಕ್ಕೆ ಇದುವೇ ಹಿನ್ನಡೆಯಾಗಿದೆ. 2011 ವಿಶ್ವ ಕಪ್​ನಲ್ಲಿ ತಂಡ ಮಧ್ಯಮ ಕ್ರಮಾಂಕದಲ್ಲಿ ಬಲಿಷ್ಠವಾಗಿತ್ತು. ಹೀಗಾಗಿ ತಂಡ ಕಪ್​ ಗೆಲ್ಲುವಲ್ಲಿ ಸಹಕಾರಿಯಾಯಿತು. ಇನ್ನು ಗಾಯದ ಸಮಸ್ಯೆಯೂ ಭಾರತಕ್ಕೆ ಹಿನ್ನಡೆಯಾಗಿದೆ” ಹೀಗಾಗಿ ಭಾರತ ಕಪ್​ ಗೆಲ್ಲುವುದು ಅನುಮಾನ ಎಂದು ಯುವರಾಜ್​ ಹೇಳಿದ್ದರು.

Exit mobile version