ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ - Vistara News

ಕ್ರಿಕೆಟ್

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಜೂನ್​ 10, ಶನಿವಾರ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

VISTARANEWS.COM


on

World Cup schedule
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಭಾರತದ ಆತಿಥ್ಯದಲ್ಲಿ ವರ್ಷಾಂತ್ಯದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಐಸಿಸಿ ಮೂಲಗಳ ಪ್ರಕಾರ ಜೂನ್​ 10 ಶನಿವಾರ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ.

ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯ ಲಂಡನ್​ನಲ್ಲಿ ನಡೆಯುತ್ತಿದ್ದರು. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸುತ್ತಿದೆ. ಈ ಪಂದ್ಯ ವೀಕ್ಷಣೆಗೆ ಬಿಸಿಸಿಐ ಅಧಿಕಾರಿಗಳು ಮತ್ತು ಐಸಿಸಿ ಅಧಿಕಾರಿಗಳು ಲಂಡನ್​ನಲ್ಲಿ ಸೇರಿದ್ದಾರೆ. ಇದೇ ವೇಳೆ ಸಭೆ ನಡೆಸಿ ಏಕದಿನ ಟೂರ್ನಿಯ ವೇಳಾಪಟ್ಟಿ ಮತ್ತು ತಾಣಗಳನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಶನಿವಾರ ಇದು ಅಧಿಕೃತ ಪ್ರಕಟನೆ ಮೂಲಕ ಹೊರಬೀಳಲಿದೆ ಎನ್ನಲಾಗಿದೆ. ಅಕ್ಟೋಬರ್​ 5ರಿಂದ ನವೆಂಬರ್‌ 19ರ ವರೆಗೆ ಈ ಕ್ರೀಡಾಕೂಟ ನಡೆಯುವ ಸಾಧ್ಯತೆ ಇದೆ.

ಟೂರ್ನಿಗಾಗಿ ಕನಿಷ್ಠ 10ಕ್ಕೂ ಹೆಚ್ಚು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈ ಈ ಪಟ್ಟಿಯಲ್ಲಿ ಸೇರಿವೆ ಎನ್ನಲಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಚೆನ್ನೈನಲ್ಲಿ ನಡೆಯುವ ಸಾಧ್ಯತೆಯಿದೆ. ಪಾಕಿಸ್ತಾನದ ಹೆಚ್ಚಿನ ಪಂದ್ಯಗಳು ಬೆಂಗಳೂರು ಮತ್ತು ಚೆನ್ನೈನಲ್ಲಿ ನಡೆಯಲಿದೆ. ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಗುವಾಹಟಿಯಲ್ಲಿ ನಡೆಯುವ ಸಾಧ್ಯತೆ ಇದೆ. ಭಾರತ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ವರದಿಯಾಗಿತ್ತು. ಆದರೆ ಪಾಕಿಸ್ತಾನ ತಂಡ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಪಂದ್ಯ ಆಡುವುದಿಲ್ಲ ಎಂದು ಹೇಳಿದೆ. ಅಂತಿಮ ಪಟ್ಟಿ ಹೇಗೆ ಇರಲಿದೆ ಎಂದು ಶನಿವಾರ ಉತ್ತರ ಸಿಗುವ ಸಾಧ್ಯತೆ ಇದೆ.

ಇದನ್ನೂ ಓದಿ World Cup 2023: ಈ ಸ್ಟೇಡಿಯಂನಲ್ಲಿ ಪಾಕ್​ ತಂಡ ಭಾರತ ವಿರುದ್ಧ ವಿಶ್ವ ಕಪ್​ ಆಡಲ್ಲವಂತೆ!

48 ಪಂದ್ಯಗಳು

ಒಟ್ಟು ಹತ್ತು ತಂಡಗಳನ್ನು ಎರಡು ಗುಂಪುಗಳಾಗಿ ಆಡಿಸಲಾಗುತ್ತದೆ. ಹೀಗಾಗಿ 46 ದಿನಗಳಲ್ಲಿ 48 ಪಂದ್ಯಗಳು ನಡೆಯಲಿವೆ. ಅಕ್ಟೋಬರ್-ನವೆಂಬರ್​ನಲ್ಲಿ ಕೆಲ ಪ್ರದೇಶಗಳಲ್ಲಿ ಹಿಂಗಾರು ಮಳೆ ಸಾಧ್ಯತೆ ಇರುವುದರಿಂದ ಅಭ್ಯಾಸ ನಡೆಸುವ ತಾಣಗಳನ್ನು ಬಿಸಿಸಿಐ ಶಿಘ್ರದಲ್ಲೇ ಪ್ರಕಟಿಸಲಿದೆ ಎಂದು ವರದಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

Mahesh Babu: ಸದ್ಯ ಹೈದರಾಬಾದ್​ ಆಡಿದ 7 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯವನ್ನು ಏಪ್ರಿಲ್​ 25 ರಂದು ರಾಯಲ್​ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸಿ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ತಂಡವೆಂಬ ದಾಖಲೆ ನಿರ್ಮಿಸಿತ್ತು.

VISTARANEWS.COM


on

Mahesh Babu
Koo

ಹೈದರಾಬಾದ್​: ಈ ಬಾರಿಯ ಐಪಿಎಲ್​ನಲ್ಲಿ(IPL 2024) ಪ್ರಚಂಡ ಬ್ಯಾಟಿಂಗ್​ ಮೂಲಕ ಪಂದ್ಯದಿಂದ ಪಂದ್ಯಕ್ಕೆ ಬೃಹತ್​ ಮೊತ್ತ ಪೇರಿಸಿ ದಾಖಲೆ ಬರೆಯುತ್ತಿರುವ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡದ ಆಟಗಾರರು ಸದ್ಯ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ. ಇದೇ ವೇಳೆ ​ತೆಲುಗಿನ ಖ್ಯಾತ ನಟ ಮಹೇಶ್‌ ಬಾಬು(Mahesh Babu) ಅವರು ಆಟಗಾರರನ್ನು ಭೇಟಿಯಾಗಿದ್ದಾರೆ. ಈ ಫೋಟೊವನ್ನು ಫ್ರಾಂಚೈಸಿ ತನ್ನ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ.

ಹೈದರಾಬಾದ್​ ತಂಡದ ನಾಯಕ ಪ್ಯಾಟ್​ ಕಮಿನ್ಸ್​, ಕನ್ನಡಿಗ ಮಯಾಂಕ್​ ಅಗರ್ವಾಲ್​, ರಾಹುಲ್​ ತ್ರಿಪಾಠಿ, ಅಭಿಷೇಕ್​ ಶರ್ಮ ಸೇರಿ ಕೆಲ ಆಟಗಾರರು ನೆಚ್ಚಿನ ನಟನೊಂದಿಗೆ ಫೋಟೊ ತೆಗೆಸಿಕೊಂಡಿದ್ದಾರೆ. ಜತೆಗೆ ಕೆಲ ಕಾಲ ಕುಶಲೋಪರಿ ನಡೆಸಿದ್ದಾರೆ.


ಸದ್ಯ ಹೈದರಾಬಾದ್​ ಆಡಿದ 7 ಪಂದ್ಯಗಳಲ್ಲಿ 5 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮುಂದಿನ ಪಂದ್ಯವನ್ನು ಏಪ್ರಿಲ್​ 25 ರಂದು ರಾಯಲ್​ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆಡಲಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ವಿರುದ್ಧ 287 ರನ್​ ಬಾರಿಸಿ ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ರನ್ ಬಾರಿಸಿದ ತಂಡವೆಂಬ ದಾಖಲೆ ನಿರ್ಮಿಸಿತ್ತು. ಇದಕ್ಕೂ ಮುನ್ನ ಮುಂಬೈ ವಿರುದ್ಧ 277 ರನ್​ ಬಾರಿಸಿತ್ತು. ಒಟ್ಟು ಈ ಬಾರಿಯ ಐಪಿಎಲ್​ನಲ್ಲಿ ಮೂರು ಬಾರಿ 200 ಪ್ಲಸ್​ ಮೊತ್ತ ಪೇರಿಸಿದ ಸಾಧನೆ ಹೈದರಾಬಾದ್​ ತಂಡದ್ದು.

ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್

ಜೈಪುರ: ರಾಜಸ್ಥಾನ್​ ರಾಯಲ್ಸ್​(Rajasthan Royals) ತಂಡದ ಗೆಲುವಿನ ನಾಗಲೋಟ ಮತ್ತೆ ಮುಂದುವರಿದಿದೆ. ಸೋಮವಾರ ರಾತ್ರಿ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians)​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿ ಅಂಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಜತೆಗೆ 14 ಅಂಕದೊಂದಿಗೆ ಬಹುತೇಕ ಪ್ಲೇ ಆಫ್​ ಟಿಕೆಟ್​ ಖಚಿತ ಪಡಿಸಿಕೊಂಡಿದೆ. ಇನ್ನೊಂದು ಗೆಲುವು ಸಾಧಿಸಿದರೆ ಇದು ಅಧಿಕೃತಗೊಳ್ಳಲಿದೆ. ಸೋಲು ಕಂಡ ಮುಂಬೈ ತಂಡದ ಪ್ಲೇ ಆಫ್​ ಹಾದಿ ಕಠಿಣಗೊಂಡಿದೆ.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​87114 (+0.698)
ಕೆಕೆಆರ್​​75210 (+1.206)
ಹೈದರಾಬಾದ್​​75210 (+0.914)
ಚೆನ್ನೈ ಸೂಪರ್​ ಕಿಂಗ್ಸ್​​​​7428 (+0.726)
ಲಕ್ನೋ7438 (+0.123)
ಗುಜರಾತ್8448 (-1.055)
ಮುಂಬೈ8356 (-0.227)
ಡೆಲ್ಲಿ8356 (-0.477)
ಪಂಜಾಬ್​8264 (-0.292)
ಆರ್​ಸಿಬಿ8172 (-1.046)
Continue Reading

ಕ್ರೀಡೆ

Viral Video: ಐಪಿಎಲ್​​ ಪಂದ್ಯದ ವೇಳೆ ಪಾಕಿಸ್ತಾನ ಟಿ20 ವೀಕ್ಷಿಸಿದ ಅಭಿಮಾನಿ

Viral Video: ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

VISTARANEWS.COM


on

Viral Video
Koo

ಜೈಪುರ: ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ಸನ್​ರೈಸರ್ಸ್ ಹೈದರಾಬಾದ್(SRH vs DC)​ ತಂಡಗಳು ಏಪ್ರಿಲ್​ 20ರಂದು ಐಪಿಎಲ್​ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದ ವೇಳೆ ಕ್ರಿಕೆಟ್​ ಅಭಿಮಾನಿಯೊಬ್ಬ ಗ್ಯಾಲರಿಯಲ್ಲಿ ಕುಳಿತು ತನ್ನ ಮೊಬೈಲ್​ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್(PAK vs NZ)​ ನಡುವಣ 2ನೇ ಟಿ20 ಪಂದ್ಯವನ್ನು ವೀಕ್ಷಿಸಿದ್ದಾನೆ. ಈ ವಿಡಿಯೊ 3 ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಅಭಿಮಾನಿಯೊಬ್ಬ ಐಪಿಎಲ್​ ಪಂದ್ಯವನ್ನು ವೀಕ್ಷಿಸುವ ಮಧ್ಯೆಯೂ ಪಾಕ್​ ಮತ್ತು ಕಿವೀಸ್​ ನಡುವಣ ಟಿ20 ಪಂದ್ಯವನ್ನು ವೀಕ್ಷಿಸಿ ಕ್ರಿಕೆಟ್​ ಮೇಲಿರುವ ಪ್ರೀತಿಯನ್ನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೊವನ್ನು ಪಾಕಿಸ್ತಾನ ಮೂಲದ ನವಾಝ್​​ ಎನ್ನುವಾತ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಸಹೋದರ ಕ್ರೀಡಾಂಗಣದಲ್ಲಿ ಕುಳಿತು ಐಪಿಎಲ್​ ಪಂದ್ಯದ ಬದಲು ಪಾಕಿಸ್ತಾನ-ನ್ಯೂಜಿಲ್ಯಾಂಡ್​ ಪಂದ್ಯ ವೀಕ್ಷಿಸುತ್ತಿದ್ದಾನೆ’ ಎಂದು ಬರೆದುಕೊಂಡಿದ್ದಾರೆ. ಈ ಪಂದ್ಯವನ್ನು ಪಾಕಿಸ್ತಾನ 7 ವಿಕೆಟ್​ ಅಂತರದಿಂದ ಗೆದ್ದು ಬೀಗಿತ್ತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಹೈದರಾಬಾದ್​ ತಂಡಕ್ಕೆ ಆರಂಭಿಕರಾದ ಟ್ರಾವಿಸ್​ ಹೆಡ್​(89) ಮತ್ತು ಅಭಿಷೇಕ್​ ಶರ್ಮ(46) ಜಿದ್ದಿಗೆ ಬಿದ್ದವರಂತೆ ಬ್ಯಾಟ್ ಬೀಸಿ ಅಮೋಘ ಆರಂಭ ಒದಗಿಸಿದರು. ಇವರ ಈ ಬ್ಯಾಟಿಂಗ್​ ಪರಾಕ್ರಮದಿಂದ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 266 ರನ್​ ಬಾರಿಸಿತು. ಸವಾಲಿನ ಮೊತ್ತವನ್ನು ದಿಟ್ಟ ರೀತಿಯಲ್ಲಿ ಬೆನ್ನಟ್ಟಿಕೊಂಡು ಹೋದ ಡೆಲ್ಲಿ ಕ್ಯಾಪಿಟಲ್ಸ್​ ಅಂತಿಮವಾಗಿ 19.1 ಓವರ್​ಗಳಲ್ಲಿ 199 ರನ್​ಗೆ ಸರ್ವಪತನ ಕಂಡಿತ್ತು.

ಇದನ್ನೂ ಓದಿ SRH vs DC: ಬೃಹತ್​ ಮೊತ್ತದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಹೈದರಾಬಾದ್

ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯುತ್ತಿದ್ದು. ಈಗಾಗಲೇ ಮೂರು ಪಂದ್ಯಗಳು ಮುಕ್ತಾಯ ಕಂಡಿದೆ. ಉಭಯ ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿವೆ. ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ನಾಲ್ಕನೇ ಪಂದ್ಯ ಏಪ್ರಿಲ್​ 25ರಂದು ನಡೆಯಲಿದೆ.

3ನೇ ಪಂದ್ಯದಲ್ಲಿ ಕಿವೀಸ್​ಗೆ ಗೆಲುವು


ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ತಂಡ 7 ವಿಕೆಟ್​ಗಳಿಂದ ಪಾಕಿಸ್ತಾನವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಭಾನುವಾರ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಪಾಕಿಸ್ತಾನ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 178 ರನ್​ ಬಾರಿಸಿತು. ಇದನ್ನು ಬೆನ್ನಟ್ಟಿದ ನ್ಯೂಜಿಲ್ಯಾಂಡ್​ 18.2 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 179 ರನ್​ ಬಾರಿಸಿ ಗೆಲುವು ಸಾಧಿಸಿತ್ತು.

Continue Reading

ಕ್ರೀಡೆ

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

Karun Nair: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

VISTARANEWS.COM


on

Karun Nair
Koo

ಲಂಡನ್​: ಇಂಗ್ಲೆಂಡ್​ ವಿರುದ್ಧ 2016ರಲ್ಲಿ ಚೆನ್ನೈನಲ್ಲಿ ನಡೆದ ಟೆಸ್ಟ್​ ಪಂದ್ಯದಲ್ಲಿ ತ್ರಿಶತಕ ಸಿಡಿಸಿ ಭರವಸೆ ಮೂಡಿಸಿದ್ದ ಕರುಣ್​ ನಾಯರ್​ ಬಳಿಕ ರಾಷ್ಟ್ರೀಯ ತಂಡದಲ್ಲಿ ಸರಿಯಾದ ಅವಕಾಶ ಸಿಗದೆ ಸುಮಾರು ಕಾಲ ಕ್ರಿಕೆಟ್​ನಿಂದ ದೂರ ಉಳಿದಿದ್ದರು. ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ ಕೂಡ ಅವರನ್ನು ಟೀಮ್​ ಇಂಡಿಯಾ ಕಡೆಗಣಿಸುತ್ತಲೇ ಬಂದಿತ್ತು. ಇದೀಗ ಕರುಣ್​ ನಾಯರ್(Karun Nair)​ ಕೌಂಟಿ ಕ್ರಿಕೆಟ್​ನಲ್ಲಿ(County Championship) ದ್ವಿಶತಕ ಬಾರಿಸಿ ಮಿಂಚಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಅಜೇಯ ತ್ರಿಶತಕ ಬಾರಿಸಿದ್ದರು. ಈ ಮೂಲಕ ವೀರೆಂದ್ರ ಸೆಹವಾಗ್ ಬಳಿಕ ಟೆಸ್ಟ್ ಕ್ರಿಕೆಟ್ ನಲ್ಲಿ ತ್ರಿಶತಕ ಬಾರಿಸಿದ ಏಕೈಕ ಭಾರತೀಯ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಆದರೆ ಇದಾದ ಬಳಿಕ ಕರುಣ್ ನಾಯರ್ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಕಳೆದ ವರ್ಷ ಪ್ರೀತಿಯ ಕ್ರಿಕೆಟ್, ನನಗೆ ಇನ್ನೂ ಒಂದು ಅವಕಾಶ ನೀಡಿ.” ಎಂದು ಕರುಣ್​ ಟ್ವೀಟ್​ ಮೂಲಕ ಕೇಳಿಕೊಂಡಿದ್ದರು. ಆದರೂ ಕೂಡ ಅವರಿಗೆ ಅವಕಾಶ ಸಿಗಲಿಲ್ಲ. ದೇಶೀಯ ಕ್ರಿಕೆಟ್​ನಲ್ಲಿಯೂ ಕರ್ನಾಟಕ ತಂಡದ ಪರ ಸರಿಯಾದ ಅವಕಾಶ ಸಿಗದೇ ಇದ್ದ ಹಿನ್ನೆಲೆ ಅವರು ರಾಜ್ಯ ತಂಡ ತೊರೆದು ವಿದರ್ಭ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2023-24ನೇ ಸಾಲಿನ ರಣಜಿಯಲ್ಲಿ ವಿದರ್ಭ ಪರ ಉತ್ತಮ ಬ್ಯಾಟಿಂಗ್​ ಪ್ರದರ್ಶನವನ್ನೂ ತೋರಿದ್ದರು.

ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ನಾರ್ಥಾಂಪ್ಟನ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ಕರುಣ್, ಗ್ಲಾಮೋರ್ಗನ್ ತಂಡದ ವಿರುದ್ಧ ಅಜೇಯ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. 253 ಎಸೆತಗಳನ್ನು ಎದುರಿಸಿ ಅಜೇಯ 202 ರನ್ ಗಳಿಸಿದರು. ನಾಯರ್ ಅವರ ಈ ಅಮೋಘ ಆಟದಿಂದಾಗಿ ನಾರ್ಥಾಂಪ್ಟನ್‌ಶೈರ್ ತಂಡ 334 ರನ್‌ಗಳಿಸಿ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 6 ವಿಕೆಟ್‌ಗೆ 605 ರನ್ ಗಳಿಸಿದೆ.

32 ವರ್ಷದ ಕರುಣ್ ತಮ್ಮ ವೃತ್ತಿಜೀವನದಲ್ಲಿ ಇದುವರೆಗೆ 6 ಟೆಸ್ಟ್ ಮತ್ತು 2 ಏಕ ದಿನ ಪಂದ್ಯಗಳನ್ನು ಆಡಿದ್ದಾರೆ. ಟೆಸ್ಟ್ ನಲ್ಲಿ ತ್ರಿಶತಕ ಸೇರಿದಂತೆ ಒಟ್ಟು 374 ರನ್ ಗಳಿಸಿದ್ದಾರೆ. ಇದರ ಜತೆಗೆ ಏಕ ದಿನ ಕ್ರಿಕೆಟ್‌ನಲ್ಲಿ 2 ಪಂದ್ಯಗಳಲ್ಲಿ 46 ರನ್ ಗಳಿಸಿದ್ದಾರೆ. ಜೂನ್ 2016 ರಂದು ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ತಮ್ಮ ಚೊಚ್ಚಲ ಏಕದಿನ ಪಂದ್ಯವನ್ನು ಆಡಿದ್ದರು. ಇದಾಗ ಬಳಿಕ ಅವರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ IPL 2024 Points Table: ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ರಾಜಸ್ಥಾನ್​

ದೇಶೀಯ ಕ್ರಿಕೆಟ್​ನಲ್ಲಿ ಉತ್ತಮ ಸಾಧನೆ

ಕರುಣ್ ನಾಯರ್ ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ 49.75 ಸರಾಸರಿಯಲ್ಲಿ 19 ಶತಕ ಮತ್ತು 32 ಅರ್ಧ ಶತಕಗಳೊಂದಿಗೆ 7164 ರನ್ ಗಳಿಸಿದ್ದಾರೆ. 101 ಲಿಸ್ಟ್ ‘ಎ’ ಪಂದ್ಯಗಳಲ್ಲಿ 3 ಶತಕ ಮತ್ತು 13 ಅರ್ಧಶತಕಗಳೊಂದಿಗೆ 2349 ರನ್ ಗಳಿಸಿದ್ದಾರೆ. 157 ಟಿ20 ಪಂದ್ಯಗಳಲ್ಲಿ ಅವರು 2 ಶತಕ ಮತ್ತು 18 ಅರ್ಧ ಶತಕಗಳ ಜತೆಗೆ 132.41 ಸ್ಟ್ರೈಕ್ ರೇಟ್‌ನಲ್ಲಿ 3207 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

CSK vs LSG: ಚೆನ್ನೈಯ ಕರಾವಳಿ ಭಾಗದಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿದಂಬರಂ ಸ್ಟೇಡಿಯಂ ಕೂಡ ಸಮುದ್ರ ತಟದಲ್ಲಿರುವ ಕಾರಣ ರಾತ್ರಿ ಮೇಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

CSK vs LSG
Koo

ಚೆನ್ನೈ: ಶುಕ್ರವಾರವಷ್ಟೇ ಚೆನ್ನೈ ಸೂಪರ್​ ಕಿಂಗ್ಸ್(CSK vs LSG)​ ವಿರುದ್ಧ ತವರಿನಲ್ಲಿ ಅಮೋಘ ಗೆಲುವು ಸಾಧಿಸಿದ ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ಮತ್ತೆ ಚೆನ್ನೈ ವಿರುದ್ಧ ಇಂದು ಪಂದ್ಯವನ್ನಾಡಲು ಸಜ್ಜಾಗಿದೆ. ಈ ಬಾರಿ ಚೆನ್ನೈಯಲ್ಲಿ ಪಂದ್ಯ ಸಾಗಲಿದೆ. ಈ ಪಂದ್ಯಕ್ಕೆ ಮಳೆಯ ಭೀತಿ ಕೂಡ ಎದುರಾಗಿದೆ.

ಈವರೆಗೆ ತವರಿನಲ್ಲಿ ಅಜೇಯ ದಾಖಲೆ ಕಾಯ್ದುಕೊಂಡು ಬಂದಿರುವ ಚೆನ್ನೈಗೆ ಲಕ್ನೋ ಮೊದಲ ಸೋಲುಣಿಸಿತೇ ಎನ್ನುವುವುದು ಇಂದಿನ ಪಂದ್ಯದ ಕೌತುಕ. ಕೆ.ಎಲ್​ ರಾಹುಲ್​ ಅವರು ಚೆಪಾಕ್​ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ. ಇಲ್ಲಿ ಹಲವು ಶತಕ ಕೂಡ ಬಾರಿಸಿದ್ದಾರೆ. ಹೀಗಾಗಿ ಅವರಿಗೆ ಇದು ನೆಚ್ಚಿನ ಮೈದಾನವಾಗಿದೆ.

ಮಳೆ ಸಾಧ್ಯತೆ


ಕರ್ನಾಟಕದ ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದ್ದು. ಚೆನ್ನೈಯ ಕರಾವಳಿ ಭಾಗದಲ್ಲಿಯೂ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿದಂಬರಂ ಸ್ಟೇಡಿಯಂ ಕೂಡ ಸಮುದ್ರ ತಟದಲ್ಲಿರುವ ಕಾರಣ ರಾತ್ರಿ ಮೇಳೆ ಮಳೆಯಾಗುವ ಸಾಧ್ಯತೆ ಇದೆ. ಒಂದೊಮ್ಮೆ ಇಂದಿನ ಪಂದ್ಯಕ್ಕೆ ಮಳೆ ಬಂದು ಪಂದ್ಯ ರದ್ದಾದರೆ ಉಭಯ ತಂಡಗಳ ಪ್ಲೇ ಆಫ್​ ಹಾದಿಗೆ ಹಿನ್ನಡೆಯಾಗಲಿದೆ. ಸದ್ಯ ಅಂಕಪಟ್ಟಿಯಲ್ಲಿ ಚೆನ್ನೈ ಮತ್ತು ಲಕ್ನೋ ಕ್ರಮವಾಗಿ 4 ಮತ್ತು 5ನೇ ಸ್ಥಾನಿಯಾಗಿದೆ.

ಈ ಪಂದ್ಯಕ್ಕೂ ಮಾಯಾಂಕ್‌ ಗೈರು


ಈ ಬಾರಿಯ ಐಪಿಎಲ್​ನಲ್ಲಿ ಶರವೇಗದ ಸೆತಗಳನ್ನು ಎಸೆದು ಭಾರೀ ಸಂಚಲನ ಮೂಡಿಸಿದ ಮಾಯಾಂಕ್‌ ಯಾದವ್‌ ಅವರು ಈ ಪಂದ್ಯಕ್ಕು ಗೈರಾಗಲಿದ್ದಾರೆ. ಗಾಯದಿಂದ ಸಂಪೂರ್ಣವಾಗಿ ಚೇತರಿಕೆ ಕಾಣದ ಅವರಿಗೆ ಈ ಪಂದ್ಯಕ್ಕೂ ವಿಶ್ರಾಂತಿ ನೀಡಲಾಗಿದೆ. ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

ಚೆನ್ನೈ ತಂಡದ ಪರ ಆರಂಭಿಕ ಹಂತದಲ್ಲಿ ಮಿಂಚಿದ್ದ ನ್ಯೂಜಿಲ್ಯಾಂಡ್​ನ ಆಟಗಾರರಾದ ರಚಿನ್​ ರವೀಂದ್ರ ಮತ್ತು ಡೇರಿಯಲ್ ಮಿಚೆಲ್​ ಈಗ ಮಂಕಾಗಿದ್ದಾರೆ. ಕಳೆದ 3 ಮೂರುಗಳನ್ನು ಗಮನಿಸುವಾಗ ಅವರ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿ ಕಂಡುಬಂದಿಲ್ಲ. ಇಂಪ್ಯಾಕ್ಟ್​ ಆಟಗಾರನಾಗಿ ಆಡುತ್ತಿರುವ ಶಿವಂ ದುಬೆ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಾಜಿ ನಾಯಕ ಧೋನಿ ಕೂಡ ಕೆಳ ಕ್ರಮಾಂಕದಲ್ಲಿ ಆಡಲಿಳಿದು ದೊಡ್ಡ ಹೊಡೆತಗಳ ಮೂಲಕ ರನ್​ ಗಳಿಸುವಲ್ಲಿ ಯಶಸ್ಸು ಕಾಣುತ್ತಿದ್ದಾರೆ.​

ಸಂಭಾವ್ಯ ತಂಡ


ಲಕ್ನೋ
: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ಚೆನ್ನೈ: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆ), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್, ಮತೀಶ ಪತಿರಾಣ.

Continue Reading
Advertisement
BrahMos Missiles
ಪ್ರಮುಖ ಸುದ್ದಿ2 mins ago

BrahMos Missiles: ಫಿಲಿಪ್ಪೀನ್ಸ್‌ಗೆ ನಾಲ್ಕನೇ ಬ್ರಹ್ಮೋಸ್‌ ಕ್ಷಿಪಣಿ ಬ್ಯಾಟರಿ ಕಳುಹಿಸಲು ಭಾರತ ಸಜ್ಜು

Reliance Jio
ವಾಣಿಜ್ಯ6 mins ago

Reliance Jio: ಡಾಟಾ ಟ್ರಾಫಿಕ್‌; ವಿಶ್ವದ ಅತಿದೊಡ್ಡ ಮೊಬೈಲ್ ಆಪರೇಟರ್ ಆಗಿ ಹೊರ ಹೊಮ್ಮಿದ ರಿಲಯನ್ಸ್ ಜಿಯೊ

CM Siddaramaiah Congress protests against Centre Go back to Modi and Amit Shah announced
ಕರ್ನಾಟಕ22 mins ago

CM Siddaramaiah: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

Mahesh Babu
ಕ್ರಿಕೆಟ್43 mins ago

IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

arvind kejriwal in tihar jail
ದೇಶ56 mins ago

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

jaishankar
Lok Sabha Election 202457 mins ago

S Jaishankar: ವಿದೇಶಾಂಗ ನೀತಿಯಲ್ಲೂ ಕಾಂಗ್ರೆಸ್‌ನಿಂದ ಮುಸ್ಲಿಂ ವೋಟ್‌ಬ್ಯಾಂಕ್‌ ರಾಜಕಾರಣ: ಸಚಿವ ಜೈಶಂಕರ್‌ ಆರೋಪ

Road Accident
ಉಡುಪಿ1 hour ago

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

supreme court baba ramdev IMA
ಪ್ರಮುಖ ಸುದ್ದಿ2 hours ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 20242 hours ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ2 hours ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು22 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ23 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌