ICC World Cup 2023: ಏಕದಿನ ವಿಶ್ವ ಕಪ್​ ವೇಳಾಪಟ್ಟಿ ಪ್ರಕಟಕ್ಕೆ ಕ್ಷಣಗಣನೆ Vistara News
Connect with us

ಕ್ರಿಕೆಟ್

ICC World Cup 2023: ಏಕದಿನ ವಿಶ್ವ ಕಪ್​ ವೇಳಾಪಟ್ಟಿ ಪ್ರಕಟಕ್ಕೆ ಕ್ಷಣಗಣನೆ

ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ(ICC World Cup 2023) ವೇಳಾಪಟ್ಟಿ(World Cup 2023 Schedule) ಇಂದು(ಮಂಗಳವಾರ) ಮುಂಬೈಯಲ್ಲಿ ಪ್ರಕಟಗೊಳ್ಳಲಿದೆ.

VISTARANEWS.COM


on

icc world cup 2023
Koo

ಮುಂಬಯಿ: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವ ಕಪ್​ ಟೂರ್ನಿಯ(ICC World Cup 2023) ವೇಳಾಪಟ್ಟಿ(World Cup 2023 Schedule) ಪ್ರಕಟಕ್ಕೆ ಕ್ಷಣಗಣನೆ ಆರಂಭವಾಗಿದ್ದು ಇಂದು(ಮಂಗಳವಾರ) ಸಂಜೆ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ವೇಳಾಪಟ್ಟಿ ಪ್ರಕಟಗೊಳ್ಳಿದೆ ಎಂದು ಬಿಸಿಸಿಐ(BCCI) ಮೂಲಕಗಳು ತಿಳಿಸಿವೆ.

ವಿಶ್ವ ಕಪ್​ ಟೂರ್ನಿಗೆ ಇಂದಿನಿಂದ ಭರ್ತಿ 100 ದಿನಗಳು ಬಾಕಿ ಇರುವಂತೆ ಈ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ವೇಳಾಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಸಿಸಿಐ ಅಧಿಕಾರಿಗಳು ಮತ್ತು ಮಾಜಿ ಕ್ರಿಕೆಟಿಗರು ಪಾಲ್ಗೊಳ್ಳಲಿದ್ದು ಅದ್ಧೂರಿ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಹೇಳಿದ್ದಾರೆ. ಈ ಕಾರ್ಯಕ್ರಮದ ಕುರಿತು ಅವರು ಟ್ವಿಟರ್​ನಲ್ಲಿ ವಿಶೇಷ ವಿಡಿಯೊವೊಂದನ್ನು ಕೂಡ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ ICC World Cup 2023: ಏಕದಿನ ವಿಶ್ವ ಕಪ್​ ವೇಳಾಪಟ್ಟಿ ಪ್ರಕಟಕ್ಕೆ ದಿನಾಂಕ ನಿಗದಿ!

ಈ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿ(PCB) ಅಹಮದಾಬಾದ್​ ಸೇರಿ ಕೆಲ ಮೈದಾನದಲ್ಲಿ ಆಡಲು ಹಿಂದೇಟು ಹಾಕಿತ್ತು. ಆದರೆ ಐಸಿಸಿ ಮಾತುಕತೆ ನಡೆಸಿದ ಬಳಿಕ ಈ ಸಮಸ್ಯೆ ಬಗೆಹರಿದಿದ್ದು ಪಾಕ್ ಪೂರ್ವ ನಿರ್ಧರಿತ ವೇಳಾಪಟ್ಟಿ ಪ್ರಕಾರ ಆಡಲು ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಭಾರತ ಮತ್ತು ಪಾಕ್​ ವಿರುದ್ಧದ ಮೊದಲ ಲೀಗ್​ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲೇ ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ಈ ವಿಚಾರವನ್ನು ತಿಳಿಸಿದ್ದಾರೆ.

ಬೆಂಗಳೂರಿಗೆ ತಪ್ಪಿದ ಸುವರ್ಣ ಅವಕಾಶ

​ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ ಸೆಮಿಫೈನಲ್ ಪಂದ್ಯವೊಂದು ಕೋಲ್ಕೊತಾಗೆ ಶಿಫ್ಟ್​ ಆಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಕೊನೆಯ ಕ್ಷಣದಲ್ಲಿ ಸ್ಥಳವನ್ನು ಬದಲಾಯಿಸಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಒಂದು ಸೆಮಿಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಿದರೆ, ಮುಂಬಯಿಯ ವಾಂಖೆಡೆ ಸ್ಟೇಡಿಯಂ ಮತ್ತೊಂದು ಸೆಮಿಫೈನಲ್​ಗೆ ಆತಿಥ್ಯ ವಹಿಸಲಿದೆ. ಈ ಹಿಂದೆ ಮುಂಬೈ, ಚೆನ್ನೈ ಅಥವಾ ಬೆಂಗಳೂರಿನಲ್ಲಿ ಸೆಮಿಫೈನಲ್ ನಡೆಯುವ ಯೋಜನೆ ಇತ್ತು. ಆದರೆ, ನವೆಂಬರ್​ನಲ್ಲಿ ಬೆಂಗಳೂರಿನಲ್ಲಿ ಮಳೆ ಬರಬಹುದು ಎಂಬ ನಿರೀಕ್ಷೆಯೊಂದಿಗೆ ಕೋಲ್ಕೊತಾಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ ICC World Cup 2023: ನ್ಯೂಜಿಲ್ಯಾಂಡ್​ ತಂಡಕ್ಕೆ ಆಘಾತ; ಏಕದಿನ ವಿಶ್ವ ಕಪ್​ಗೆ ನಾಯಕ ಕೇನ್ ವಿಲಿಯಮ್ಸನ್ ಅನುಮಾನ

ಕ್ರಿಕ್​ಬಜ್​ ವರದಿಯ ಪ್ರಕಾರ, ಬದಲಾವಣೆ ನಡೆಯುವುದು ಖಚಿತ. ಆದರೆ, ಪಂದ್ಯಾವಳಿ ನಡೆಯುತ್ತಿರುವ ನಡುವೆಯೇ ಅದು ನಿರ್ಧಾರವಾಗಲಿದೆ ಎಂದು ವರದಿ ಮಾಡಿದೆ. ಮುಂಬೈನ ವಾಂಖೆಡೆ ಮತ್ತು ಕೋಲ್ಕತಾದ ಈಡನ್ ಗಾರ್ಡನ್ಸ್ ವಿಶ್ವಕಪ್ ಸೆಮಿಫೈನಲ್​​ಗೆ ಎರಡು ಸಂಭವನೀಯ ಸ್ಥಳಗಳಾಗಿವೆ. ಈ ಹಿಂದೆ ಚೆನ್ನೈ ಕೂಡ ರೇಸ್​ನಲ್ಲಿತ್ತು. ಈ ರೇಸ್​ನಲ್ಲಿ ಬೆಂಗಳೂರು ಕೂಡ ಹಿಂದೆ ಬಿದ್ದಿದೆ ಎಂಬುದಾಗಿ ಎಂದು ಬಿಸಿಸಿಐ ಮೂಲಗಳು ಸೋಮವಾರ ಪಿಟಿಐಗೆ ತಿಳಿಸಿವೆ.

ಭಾರತ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆದರೆ ಮುಂಬಯಿಯ ವಾಂಖೆಡೆ ಸ್ಟೇಡಿಯಮ್​ನಲ್ಲಿ ಈ ಪಂದ್ಯ ನಡೆಯಲಿದೆ. ಚೆನ್ನೈ ಮತ್ತೊಂದು ನೆಚ್ಚಿನ ಸ್ಟೇಡಿಯಮ್​ ಆಗಿತ್ತು. ಸ್ಪಿನ್​ ಪಿಚ್​ನಲ್ಲಿ ಭಾರತ ತಂಡಕ್ಕೆ ನೆರವು ಸಿಗುತ್ತಿತ್ತು ಎಂಬ ಲೆಕ್ಕಾಚಾರವೂ ಇಲ್ಲಿದೆ. ಇನ್ನು ಬೆಂಗಳೂರಿನ ಪಿಚ್​ನಲ್ಲೂ ಪಂದ್ಯವನ್ನು ಆಯೋಜಿಸಿ ಬ್ಯಾಟರ್​ಗಳ ಸ್ವರ್ಗದಲ್ಲಿ ಅಭಿಮಾನಿಗಳಿಗೆ ಖುಷಿ ಕೊಡುವ ಯೋಜನೆಯಿತ್ತು. ಆದರೆ ನವೆಂಬರ್ ಮಳೆ ಎಲ್ಲ ನಿರೀಕ್ಷೆಗಳನ್ನು ಸುಳ್ಳು ಮಾಡಿದೆ. ಫೈನಲ್​ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ವಿಶ್ವಕಪ್ 2023 ಸ್ಥಳಗಳು

  • ಅಹ್ಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂ
  • ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣ
  • ಚೆನ್ನೈ: ಎಂಎ ಚಿದಂಬರಂ ಕ್ರೀಡಾಂಗಣ
  • ದೆಹಲಿ: ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ
  • ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ
  • ಗುವಾಹಟಿ: ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ
  • ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಉಪ್ಪಲ್
  • ಇಂದೋರ್: ಹೋಳ್ಕರ್ ಕ್ರೀಡಾಂಗಣ
  • ಕೋಲ್ಕತಾ: ಈಡನ್ ಗಾರ್ಡನ್ಸ್
  • ಮುಂಬೈ: ವಾಂಖೆಡೆ ಸ್ಟೇಡಿಯಂ (ಕನಿಷ್ಠ ಒಂದು ಸೆಮಿಫೈನಲ್)
  • ರಾಯ್ಪುರ: ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
  • ರಾಜ್​ಕೋಟ್: ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Live News

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್​ ಸ್ವೀಪ್​ ಸಾಧನೆ ಮಾಡುವ ಅವಕಾಶವಿದೆ.

VISTARANEWS.COM


on

ODI AUS
Koo

ರಾಜ್​ಕೋಟ್​: ಇಲ್ಲಿನ ಎಸ್​​ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್​ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್​ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್​ಗಾಗಿ ತಂಡದ ಜತೆಗೆ ಇರಲಿದ್ದಾರೆ.

Continue Reading

ಕ್ರಿಕೆಟ್

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ಹಾಲಿ ವಿಶ್ವ ಕಪ್​ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್​ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Team India
Koo

ನವ ದೆಹಲಿ: ಏಕದಿನ ವಿಶ್ವ ಕಪ್​ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್​​ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್​ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್​ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.

ಇಂಗ್ಲೆಂಡ್​​ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್​​ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್​​ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್​​ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್​​ನಲ್ಲಿ ಹೇಳಿದ್ದಾರೆ.

ಉನ್ನತ ದರ್ಜೆಯ ಕ್ರಿಕೆಟ್​​

ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್​​ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್​ ಶ್ಲಾಘಿಸಿದರು.

ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ

“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್​ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.

ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್​​ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.

Continue Reading

ಕ್ರಿಕೆಟ್

Cricket Record : T20ಯಲ್ಲಿ 314 ರನ್‌, 9 ಬಾಲ್‌ನಲ್ಲಿ ಫಿಫ್ಟಿ, 34 ಬಾಲ್‌ಗಳಲ್ಲಿ ಸೆಂಚುರಿ! ಯಾರ ದಾಖಲೆ ಇದು?

ಮಂಗೋಲಿಯಾ ವಿರುದ್ಧದ ಏಷ್ಯನ್ ಗೇಮ್ಸ್ ನ ತನ್ನ ಆರಂಭಿಕ ಪಂದ್ಯದಲ್ಲಿ ನೇಪಾಳವು ಅದ್ಭುತ ಪವರ್ ಹಿಟ್ಟಿಂಗ್ ಪ್ರದರ್ಶನದೊಂದಿಗೆ ಅನೇಕ ಕ್ರಿಕೆಟ್​ ದಾಖಲೆಗಳನ್ನು (Cricket Record) ಮುರಿದಿದೆ.

VISTARANEWS.COM


on

Nepal Team
Koo

ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ (Asian Games 2023) ಕ್ರಿಕೆಟ್​ ಸ್ಪರ್ಧೆಯ ಗ್ರೂಪ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ಪುರುಷರ ತಂಡ ಇತಿಹಾಸ ಸೃಷ್ಟಿಸಿದೆ. ಪುರುಷರ ಟೂರ್ನಮೆಂಟ್ ಆರಂಭವಾಗುತ್ತಿದ್ದಂತೆ ಸರಣಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ದಾಖಲೆಗಳ (Cricket Record) ಮೇಲೆ ದಾಖಲೆಗಳು ಸೃಷ್ಟಿಯಾಗಿವೆ. ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್​ಗಳಲ್ಲಿ 314/3 ರ ನಂಬಲಸಾಧ್ಯವಾದ ಸ್ಕೋರ್ ದಾಖಲಿಸಿತು. ಕೇವಲ 120 ಎಸೆತಗಳಲ್ಲಿ 300 ರನ್​ ದಾಖಲಿಸಿ ಅಚ್ಚರಿ ಮೂಡಿಸಿತು. ಕ್ರಿಕೆಟ್​ ಆಟದ ಕಿರು ಸ್ವರೂಪದಲ್ಲಿ 300 ರನ್​ಗಳ ಗಡಿಯನ್ನು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ನೇಪಾಳ. ಏಷ್ಯನ್​ ಗೇಮ್ಸ್ ನಲ್ಲಿ ನಡೆಯುವ ಪಂದ್ಯಗಳಿಗೆ ಟ್ವೆಂಟಿ-20 ಸ್ಥಾನಮಾನ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ಹಿಂದೆ ದೃಢಪಡಿಸಿತ್ತು. ಹೀಗಾಗಿ ನೇಪಾಳ ಮಾಡಿದ್ದೆಲ್ಲವೂ ಕ್ರಿಕೆಟ್​ ಇತಿಹಾಸದ ದಾಖಲೆ ಪುಸ್ತಕ ಸೇರಿಕೊಂಡವು.

2007ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ ದೀರ್ಘಕಾಲದ ದಾಖಲೆಯನ್ನು ನೇಪಾಳ ಬ್ಯಾಟರ್​ ದೀಪೇಂದ್ರ ಸಿಂಗ್ ಐರಿ ಮುರಿದರು. ಅವರು 9 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿ 10 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿದರು, ಅದರಲ್ಲಿ 48 ರನ್​ಗಳು ಸಿಕ್ಸರ್​ಗಳ ಮೂಲಕೇ ಬಂದಿದ್ದವು.

ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೂ ಮುರಿಯಿತು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್​​ ಡೇವಿಡ್ ಮಿಲ್ಲರ್ ಅವರನ್ನು ಹಿಂದಿಕ್ಕಿದ ನೇಪಾಳ ಬ್ಯಾಟರ್​​ ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐನಲ್ಲಿ ವೇಗವಾಗಿ ಶತಕ ಗಳಿಸಿದರು. ಇಬ್ಬರೂ ಬ್ಯಾಟರ್​ಗಳಲ್ಲಿ 35 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಟಿದ್ದರು. ಮಲ್ಲಾ 8 ಬೌಂಡರಿ ಮತ್ತು 12 ಸಿಕ್ಸರ್​ಗಳನ್ನು ಬಾರಿಸಿ ಕೇವಲ 50 ಎಸೆತಗಳಲ್ಲಿ 137 ರನ್ ಗಳಿಸಿ ಅಜೇಯರಾಗಿ ಉಳಿದರು.

ಇತಿಹಾಸದಲ್ಲಿ ಅತಿ ಹೆಚ್ಚು ಟಿ 20 ಸ್ಕೋರ್ ಗಳ ಪಟ್ಟಿ ಇಲ್ಲಿದೆ

  1. ನೇಪಾಳ – ಮಂಗೋಲಿಯಾ ವಿರುದ್ಧ 314/4 (2023)
  2. ಅಫ್ಘಾನಿಸ್ತಾನ – ಐರ್ಲೆಂಡ್ ವಿರುದ್ಧ 278/3 (2019)
  3. ಜೆಕ್ ಗಣರಾಜ್ಯ – ಟರ್ಕಿ ವಿರುದ್ಧ 278/4 (2019)
  4. ಆಸ್ಟ್ರೇಲಿಯಾ – ಶ್ರೀಲಂಕಾ ವಿರುದ್ಧ 263/3 (2016)
  5. ಕೀನ್ಯಾ ವಿರುದ್ಧ ಶ್ರೀಲಂಕಾ 260/6 (2007)

ಕುತೂಹಲಕಾರಿ ಸಂಗತಿಯೆಂದರೆ, ಹ್ಯಾಂಗ್ಝೌನ ಝೆಜಿಯಾಂಗ್ ಯುನಿವರ್ಸಿಟಿ ಆಫ್ ಟೆಕ್ನಾಲಜಿ ಕ್ರಿಕೆಟ್ ಫೀಲ್ಡ್​​ನಲ್ಲಿ ನೇಪಾಳವು ತಮ್ಮ ಇನ್ನಿಂಗಗ್ಸ್​ಗೆ ನಿಧಾನಗತಿಯ ಆರಂಭವನ್ನು ನೀಡಿತು, ಇಬ್ಬರೂ ಆರಂಭಿಕರು 100ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್​​ನಲ್ಲಿ ಆಡಿದ್ದರು. ಆದರೆ, ಬಳಿಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು ನೇಪಾಳ ಬ್ಯಾಟರ್​ಗಳು.

ಒಂದೇ ಪಂದ್ಯದಲ್ಲಿ 26 ಸಿಕ್ಸರ್​ಗಳು

ನೇಪಾಳದ ಬ್ಯಾಟರ್​​ಗಳು ಒಂದೇ ಇನ್ನಿಂಗ್ಸ್​​ನಲ್ಲಿ 26 ಸಿಕ್ಸರ್​ಗಳನ್ನು ಬಾರಿಸುವ ಮೂಲಕ ತಮ್ಮ ಹಿಟ್ಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಗಮನಾರ್ಹ ಸಾಧನೆಯು ಈಗ ಟಿ 20 ಐ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್​​ನಲ್ಲಿ ಯಾವುದೇ ತಂಡವು ಅತಿ ಹೆಚ್ಚು ಸಿಕ್ಸರ್​ಗಳ ದಾಖಲೆಯಾಗಿದೆ. ಇದು 2019 ರಲ್ಲಿ ಅಫ್ಘಾನಿಸ್ತಾನವು 278/3 ಸ್ಕೋರ್ ಮಾಡಿದಾಗ 22 ಸಿಕ್ಸರ್​ಗಳ ದಾಖಲೆಯನ್ನೂ ಮುರಿದಿದೆ.

ಇದನ್ನೂ ಓದಿ :Asian Games 2023 : ಶೂಟಿಂಗ್​ನಲ್ಲಿ ಭಾರತಕ್ಕೆ ಚಿನ್ನ, 25 ಮೀಟರ್​ ಪಿಸ್ತೂಲ್​ ಸ್ಪರ್ಧೆಯಲ್ಲಿ ಮಹಿಳೆಯರ ಸಾಧನೆ

ಭಾರತ ನೇರ ಕ್ವಾರ್ಟರ್​ಫೈನಲ್ಸ್​ಗೆ

ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್​​ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ತಲಾ ಮೂರು ತಂಡಗಳನ್ನು ಹೊಂದಿರುವ ಮೂರು ಗುಂಪುಗಳಿವೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್​ಗೆ ಅರ್ಹತೆ ಪಡೆಯುತ್ತವೆ. ಅಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಂತಹ ತಂಡಗಳು ಸೇರಿಕೊಳ್ಳುತ್ತವೆ.

ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದ ಋತುರಾಜ್ ಗಾಯಕ್ವಾಡ್ ಭಾರತವನ್ನು ಮುನ್ನಡೆಸಲಿದ್ದಾರೆ.

Continue Reading

ಕ್ರಿಕೆಟ್

Shubman Gill : ಅಂತಿಮ ಪಂದ್ಯದಲ್ಲಿ ಗಿಲ್​ಗೆ ವಿಶ್ರಾಂತಿ? ಪಾಕ್​ ನಾಯಕ ಬಾಬರ್ ಅಜಮ್​ಗೆ ನೆಮ್ಮದಿ

ಶುಭ್​ಮನ್​ ಗಿಲ್​ಗೆ ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯದಲ್ಲಿ ವಿಶ್ರಾಂತಿ ನೀಡುತ್ತಿರುವ ಕಾರಣ ಅವರಿಗೆ ಬಾಬರ್ ಅಜಮ್ ನಂಬರ್​ 1 ಸ್ಥಾನವನ್ನ ಅಕ್ರಮಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.

VISTARANEWS.COM


on

Shubhman Gill
Koo

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಕ್ರಿಕೆಟ್​ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಭಾರತದ ಆರಂಭಿಕ ಆಟಗಾರ ಶುಭ್ಮನ್ ಗಿಲ್​​ಗೆ (Shubman Gill) ವಿಶ್ರಾಂತಿ ನೀಡಲಾಗಿದೆ. ಇದರಿಂದಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಶುಬ್ಮನ್​ ಗಿಲ್ 74 ಮತ್ತು 104 ರನ್ ಗಳಿಸಿದ್ದಾರೆ. ಮೂರು ಏಕದಿನ ಪಂದ್ಯಗಳಿಗೆ ಮೊದಲು, ಬಲಗೈ ಬ್ಯಾಟರ್​ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅವರನ್ನು ಹಿಂದಿಕ್ಕಲು ಸುವರ್ಣಾವಕಾಶವಿತ್ತು. ರಾಜ್​ಕೋಟ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಳೆದ ಎರಡು ಹಣಾಹಣಿಗಳಲ್ಲಿ ಶತಕ ಹಾಗೂ ಅರ್ಧಶತಕಗಳನ್ನು ಗಳಿಸಿರುವ ಗಿಲ್​​ಗೆ ಖಂಡಿತವಾಗಿಯೂ ಮತ್ತೊಂದು ದೊಡ್ಡ ಸ್ಕೋರ್ ಗಳಿಸುವ ಅವಕಾಶವಿತ್ತು. ಆದಾಗ್ಯೂ, ಮೂರನೇ ಏಕದಿನ ಪಂದ್ಯಕ್ಕೆ ಯುವ ಆಟಗಾರನಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅಜಮ್​ ದಾಖಲೆ ಮುರಿಯುವ ಅವಕಾಶ ತಪ್ಪಿದೆ.

ಅದ್ಭುತ ಫಾರ್ಮ್​ನಲ್ಲಿರುವ ಗಿಲ್​

ಕಳೆದ ಬುಧವಾರ ಐಸಿಸಿ ಶ್ರೇಯಾಂಕ ಅಪ್​ಡೇಟ್ ಆದ ನಂತರ ಭಾರತದ ಆರಂಭಿಕ ಆಟಗಾರ ಪ್ರಸ್ತುತ ಏಕದಿನ ಬ್ಯಾಟರ್​ಗಳ ಐಸಿಸಿ ಶ್ರೇಯಾಂಕದಲ್ಲಿ 814 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್​ ನಾಯಕ ಬಾಬರ್ ಅಜಮ್ ಅವರಿಗಿಂತ ಕೇವಲ 43 ರೇಟಿಂಗ್ ಪಾಯಿಂಟ್​ಗಳಿಂದ (857 ರೇಟಿಂಗ್ ಪಾಯಿಂಟ್ಗಳು) ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 63 ಎಸೆತಗಳಲ್ಲಿ 74 ರನ್ ಗಳಿಸಿದ್ದರು ಮತ್ತು ಭಾನುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 97 ಎಸೆತಗಳಲ್ಲಿ 104 ರನ್ ಗಳಿಸಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲು ಹೆಣಗಾಡಿದ್ದ ಗಿಲ್ ಏಷ್ಯಾ ಕಪ್ 2023 ರ ಸಮಯದಲ್ಲಿ ಸಂಪೂರ್ಣವಾಗಿ ಫಾರ್ಮ್​ಗೆ ಮರಳಿದ್ದರು. ಅಲ್ಲಿ ಅವರು ಪ್ರಮುಖ ಗರಿಷ್ಠ ಸ್ಕೋರರ್ ಆಗಿ ಆಟ ಮುಗಿಸಿದ್ದರು. ಅವರು ಆಸೀಸ್ ವಿರುದ್ಧವೂ ತಮ್ಮ ಫಾರ್ಮ್​​ ಉಳಿಸಿಕೊಂಡರು. ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಮುಂದಿನ ದೊಡ್ಡ ಸ್ಟಾರ್​ ಎಂಬ ಹೆಗ್ಗಳಿಕೆಗೆ ತಕ್ಕ ಹಾಗೆ ಬ್ಯಾಟ್​ ಬೀಸಿದರು. ಇದೇ ವೇಳೆ ಏಕದಿನ ಮಾದರಿಯಲ್ಲಿ ನಂ.1 ಬ್ಯಾಟರ್​​ ಎಂಬ ಟ್ಯಾಗ್ ಪಡೆಯುವ ಅವಕಾಶವೂ ಗಿಲ್​ಗೆ ಸಿಕ್ಕಿತ್ತು. ಆದಾಗ್ಯೂ, ಅವರು ಸ್ಥಾನವನ್ನು ಪಡೆಯಲು ವಿಶ್ವಕಪ್ ವರೆಗೆ ಕಾಯಬೇಕಾಗಿದೆ ಎಂದು ತೋರುತ್ತದೆ.

ಇದನ್ನೂ ಓದಿ : Shubman Gill: ಗಿಲ್​ ಶತಕಕ್ಕೆ ಸಚಿನ್​ ಸೇರಿ ಹಲವು ದಿಗ್ಗಜರ ದಾಖಲೆ ಪತನ

ಬಾಬರ್ ಅಜಮ್ ಕೊನೆಯ ಬಾರಿಗೆ ಶ್ರೀಲಂಕಾ ವಿರುದ್ಧದ ಏಷ್ಯಾ ಕಪ್ ಸೂಪರ್ 4 ಪಂದ್ಯದ ವೇಳೆ ಕಾಣಿಸಿಕೊಂಡಿದ್ದರು. ಸ್ಪರ್ಧೆಯಲ್ಲಿ ಬಾಬರ್ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಪಾಕಿಸ್ತಾನದ ನಾಯಕ ಮುಂಬರುವ ವಿಶ್ವಕಪ್ ನಲ್ಲಿ ಮತ್ತೆಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಭುತ ರನ್​ ಗಳಿಸುವ ಸಾಮರ್ಥ್ಯ ಪ್ರದರ್ಶನ ಮಾಡಲಿದ್ದಾರೆ. ಮೆನ್ ಇನ್ ಗ್ರೀನ್ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ಪ್ರಶಸ್ತಿ ಗೆಲ್ಲುವ ಅವಕಾಶದಲ್ಲಿ ಬಾಬರ್ ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಸಿಕೊಳ್ಳುವ ಭರವಸೆ ಕೂಡ ಹೊಂದಿದ್ದಾರೆ.

Continue Reading
Advertisement
ODI AUS
Live News4 mins ago

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

Madhya Pradesh Rape News
ಕ್ರೈಂ17 mins ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ28 mins ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER29 mins ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ37 mins ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

Nayanthara Vignesh Shivan twin
South Cinema43 mins ago

Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

Murder case in Kolara
ಕರ್ನಾಟಕ45 mins ago

Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!

Team India
ಕ್ರಿಕೆಟ್1 hour ago

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ದೇಶ1 hour ago

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

Nithya Menen
South Cinema1 hour ago

Nithya Menen: ʻಮೈನಾʼ ನಟಿ ನಿತ್ಯಾ ಮೆನನ್‌ಗೆ ತಮಿಳು ಹೀರೊನಿಂದ ಕಿರುಕುಳ; ಸ್ಪಷನೆ ಕೊಟ್ಟ ನಟಿ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌