ICC World Cup 2023: ವಿಶ್ವಕಪ್​ಗೆ ನೆದರ್ಲ್ಯಾಂಡ್ಸ್​ ತಂಡ ಪ್ರಕಟ; ಆರ್​ಸಿಬಿ ಮಾಜಿ ಸ್ಟಾರ್​ ಆಟಗಾರನಿಗೆ ಅವಕಾಶ Vistara News

ಕ್ರಿಕೆಟ್

ICC World Cup 2023: ವಿಶ್ವಕಪ್​ಗೆ ನೆದರ್ಲ್ಯಾಂಡ್ಸ್​ ತಂಡ ಪ್ರಕಟ; ಆರ್​ಸಿಬಿ ಮಾಜಿ ಸ್ಟಾರ್​ ಆಟಗಾರನಿಗೆ ಅವಕಾಶ

ಐಪಿಎಲ್​ನಲ್ಲಿ ಆರ್​ಸಿಬಿ(RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ ರೋಲೋಫ್ ವ್ಯಾನ್ ಡೆರ್ ಮೆರ್ವೆ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

VISTARANEWS.COM


on

Netherlands 15-members squad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್​ಗೆ(ICC World Cup 2023) ಈಗಾಗಲೇ 5 ದೇಶಗಳು ತಂಡವನ್ನು ಪ್ರಕಟಿಸಿದೆ. ಇದೀಗ ನೆದರ್ಲ್ಯಾಂಡ್ ಸರದಿ. ಗುರುವಾರ 15 ಮಂದಿ ಸದಸ್ಯರ ತಂಡವನ್ನು(Netherlands 15-members squad) ನೆದರ್ಲ್ಯಾಂಡ್ಸ್​ ಕ್ರಿಕೆಟ್​ ಮಂಡಳಿ ಪ್ರಕಟಿಸಿದೆ. ನೆದರ್ಲ್ಯಾಂಡ್ಸ್​ ಅರ್ಹತಾ ಸುತ್ತಿನಲ್ಲಿ ಆಡಿ ಪ್ರಧಾನ ಸುತ್ತಿಗೆ ಅವಕಾಶ ಪಡೆದಿತ್ತು.

ಆರ್​ಸಿಬಿ ಮಾಜಿ ಆಟಗಾರ

ಅಚ್ಚರಿಯ ಆಯ್ಕೆ ಎಂದರೆ ಅನುಭವಿ ರೋಲೋಫ್ ವ್ಯಾನ್ ಡೆರ್ ಮೆರ್ವೆ(Roelof van der Merwe) ಮತ್ತು ಕಾಲಿನ್ ಅಕರ್‌ಮನ್(Colin Ackermann). ಉಭಯ ಆಟಗಾರರು ಅರ್ಹತಾ ಸುತ್ತಿನ ಪಂದ್ಯದಲ್ಲಿ ಆಡಿರಲಿಲ್ಲ. ಇದೀಗ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಕಾಟ್ ಎಡ್ವರ್ಡ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ರೋಲೋಫ್ ವ್ಯಾನ್ ಡೆರ್ ಮೆರ್ವೆ ಐಪಿಎಲ್​ನಲ್ಲಿ ಆರ್​ಸಿಬಿ(RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದಾರೆ. ಒಟ್ಟು 21 ಐಪಿಎಲ್​ ಪಂದ್ಯಗಳನ್ನು ಆಡಿ 159 ರನ್​ ಮತ್ತು 21 ವಿಕೆಟ್​ ಪಡೆದಿದ್ದಾರೆ. 2009ರಲ್ಲಿ ಅವರು ಆರ್​ಸಿಬಿ ಪರ ಚೊಚ್ಚಲ ಐಪಿಎಲ್​ ಪಂದ್ಯ ಆಡಿದ್ದರು. ಕೆಕೆಆರ್​ ಎದುರಾಳಿ ಈ ಪಂದ್ಯದಲ್ಲಿ ಅವರು ಅಜೇಯ 43 ರನ್​ ಗಳಿಸಿ ಆರ್​ಸಿಬಿಗೆ ಗೆಲುವು ತಂದುಕೊಟ್ಟಿದ್ದರು.

ಪಾಕ್​ ಮೊದಲ ಎದುರಾಳಿ

ನೆದರ್ಲ್ಯಾಂಡ್ಸ್​ ತಂಡವು ಭಾರತ ವಿರುದ್ಧ ನವೆಂಬರ್​ 11ರಂದು ವಿಶ್ವಕಪ್​ ಪಂದ್ಯ ಆಡಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಟೂರ್ನಿಯ ಅಂತಿಮ ಲೀಗ್​ ಪಂದ್ಯವೂ ಆಗಿದೆ. ನೆದರ್ಲ್ಯಾಂಡ್ಸ್​ ತನ್ನ ವಿಶ್ವಕಪ್​ ಅಭಿಯಾನವನ್ನು ಪಾಕಿಸ್ತಾನ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ. ಈ ಪಂದ್ಯ ಅಕ್ಟೋಬರ್​ 6ರಂದು ನಡೆಯಲಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್ 30 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ಅಕ್ಟೋಬರ್ 3ರಂದು ಭಾರತದ ವಿರುದ್ಧ ಅಭ್ಯಾಸ ಪಂದ್ಯವಾಡಲಿದೆ.

ನೆದರ್ಲ್ಯಾಂಡ್ಸ್​ ತಂಡ

ಸ್ಕಾಟ್ ಎಡ್ವರ್ಡ್ಸ್ (ನಾ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕೀಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

ಇದನ್ನೂ ಓದಿ ICC World Cup 2023: ವಿಶ್ವಕಪ್​ಗೆ ಬಾಲಿವುಡ್​ ಬಾದ್​ ಷಾ ರಾಯಭಾರಿ; ಆ ಒಂದು ‘ದಿನ’ಕ್ಕೆ ಶತಕೋಟಿ ಮಿಡಿತ

10 ತಾಣಗಳಲ್ಲಿ ಪಂದ್ಯವಾಳಿ

ವಿಶ್ವಕಪ್​ನಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿದ್ದು 10 ತಂಡಗಳು ಸೆಣಸಾಟ ನಡೆಸಲಿವೆ. ದೇಶದ ಪ್ರಮುಖ 10 ತಾಣಗಳಲ್ಲಿ ಈ ಪಂದ್ಯ ನಡೆಯಲಿದೆ. ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ನ್ಯೂಜಿಲ್ಯಾಂಡ್​ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡ ತನ್ನ ಮೊದಲ ಲೀಗ್​ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್​ 8 ರಂದು ಆಡಲಿದೆ. ಅಕ್ಟೋಬರ್ 14 ರಂದು ಭಾರತ ತನ್ನ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದೆ ಈ ಪಂದ್ಯ ಕಣ್ತುಬಿಂಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

AB de Villiers : ನನ್ನ ಹೃದಯ ಆರ್​​ಸಿಬಿಯಲ್ಲೇ ಇದೆ ಎಂದ ಮಿಸ್ಟರ್​ 360

14 ಋತುಗಳಲ್ಲಿ ಬೆಂಗಳೂರು ಫ್ರಾಂಚೈಸಿ ಪರ ಆಡಿದ ಡಿವಿಲಿಯರ್ಸ್ (AB de Villiers) 2021 ರಲ್ಲಿ ಎಲ್ಲಾ ರೀತಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಂಡಿದ್ದರು.

VISTARANEWS.COM


on

ABD Villiars
Koo

ಬೆಂಗಳೂರು : ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ (AB de Villiers) ಭವಿಷ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗೆ ಮರಳಲು ಬಯಸುತ್ತೇನೆ ಎಂದು ಶನಿವಾರ ಹೇಳಿದ್ದಾರೆ. 11 ಋತುಗಳಲ್ಲಿ ಬೆಂಗಳೂರು ಫ್ರಾಂಚೈಸಿ ಪರ ಆಡಿದ ಡಿವಿಲಿಯರ್ಸ್ 2021 ರಲ್ಲಿ ಎಲ್ಲಾ ರೀತಿಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದಾರೆ. ಆದರೂ ಅವರಿಗೆ ಆರ್​ಸಿಬಿ ಬಗ್ಗೆ ವಿಶೇಷವಾದ ಅಭಿಮಾನವಿದೆ. ಹೀಗಾಗಿ ಅವರು ಈ ತಂಡವನ್ನು ಅವರು ಪದೇಪದೇ ಉಲ್ಲೇಖಿಸುತ್ತಾರೆ.

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಮತ್ತೆ ಒಂದಾಗುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಅದಕ್ಕೆ ಕಾಲ ಕೂಡಿ ಬಂದಿಲ್ಲ. ಅವರು ಆರ್​ಸಿಬಿಗೆ ಮಾರ್ಗದರ್ಶಕರಾಗಿ ಸೇರುತ್ತಾರೆ ಎಂಬ ವದಂತಿಗಳಿದ್ದವು. ಅದು ಸುಳ್ಳಾಯಿತು. ಎಬಿ ಡಿವಿಲಿಯರ್ಸ್ ಕಳೆದ ಋತುವಿನಲ್ಲಿ ಅಭಿಮಾನಿಗಳಿಗೆ ವಿದಾಯ ಹೇಳಲು ಬೆಂಗಳೂರಿಗೆ ಬಂದಿದ್ದರು. ಆದಾಗ್ಯೂ, ಅವರು ಮುಂದಿನ ದಿನಗಳಲ್ಲಿ ಆರ್​​ಸಿಬಿಗೆ ಸೇರಲು ಎದುರು ನೋಡುತ್ತಿದ್ದಾರೆ. ಆರ್​ಸಿಬಿ ನನ್ನ ಹೃದಯದಲ್ಲಿದೆ ಎಂದು ಹೇಳುವ ಮೂಲಕ ಅವರ ಈ ಮಾತಿಗೆ ಪುಷ್ಟಿ ಕೊಟ್ಟಿದ್ದಾರೆ.

“ನಾನು ಹಾಗೆ ಭಾವಿಸುತ್ತೇನೆ. ನನ್ನ ಹೃದಯವು ಆರ್​ಸಿಬಿಯೊಂದಿಗೆ ಇದೆ. ಅಲ್ಲಿ ಅನೇಕ ವರ್ಷ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ನನಗೆ ಉತ್ತಮ ಸಂಪರ್ಕವಿದೆ. ಅವರು ಅಪಾರ ಪ್ರೀತಿ ತೋರುತ್ತಾರೆ ಎಂದು ಎಬಿ ಡಿವಿಲಿಯರ್ಸ್ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆರ್​​ಸಿಬಿ ಬಣ್ಣ ಇಷ್ಟ

ನಾನು ಸದಾ ಆರ್​ಸಿಬಿಗೆ ಬೆಂಬಲ ನೀಡಿದ್ದೇನೆ. ಎಲ್ಲಾ ಬೆಂಬಲ ಮತ್ತು ಪ್ರೀತಿಯನ್ನು ಪಡೆದುಕೊಂಡಿದ್ದೇನೆ. ಆರ್​ಸಿಬಿ ಸೇರುವ ಬಗ್ಗೆ ನಾನು ಈಗ ಏನನ್ನೂ ಖಾತರಿಪಡಿಸಲಾರೆ. ಆದರೆ ಭವಿಷ್ಯದಲ್ಲಿ ನನ್ನನ್ನು ಆರ್​ಸಿಬಿ ಬಣ್ಣದ ಲ್ಲಿ ನೋಡುವಿರಿ. ಆ ಬಣ್ಣ ನನಗೆ ಇಷ್” ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ : Team India : ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದು ಯಾಕೆ? ದ್ರಾವಿಡ್, ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ

ಆರ್​ಸಿಬಿ ಫ್ರಾಂಚೈಸಿ ಪರ 11 ಋತುಗಳನ್ನು ಆಡಿರುವ ಎಬಿ ಡಿವಿಲಿಯರ್ಸ್ ಅತ್ಯಂತ ಜನಪ್ರಿಯ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದರು. ಮೈದಾನದ ಯಾವುದೇ ಭಾಗಕ್ಕೆ ಚೆಂಡನ್ನು ಹೊಡೆಯುವ ಸಾಮರ್ಥ್ಯಕ್ಕಾಗಿ ಅವರನ್ನು 360 ಡಿಗ್ರಿ ಬ್ಯಾಟ್ಸ್ಮನ್ ಎಂದು ಕರೆಯಲಾಗುತ್ತದೆ. ಅವರು ಬೆಂಗಳೂರು ತಂಡದ ಪರ 184 ಪಂದ್ಯಗಳನ್ನು ಆಡಿದ್ದಾರೆ.

ಐಪಿಎಲ್​​ನ 11 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿರುವ ಡಿವಿಲಿಯರ್ಸ್ 5000 ರನ್ ಗಳಿಸಿದ್ದಾರೆ. ಅವರು 151 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆ ರನ್ ಗಳನ್ನು ಗಳಿಸಿದ್ದಾರೆ. ಅವರು ೪೦ಕ್ಕಿಂತ ಕಡಿಮೆ ಸರಾಸರಿಯನ್ನು ಕಾಯ್ದುಕೊಂಡಿದ್ದಾರೆ. ಅವರು ಮೈದಾನದಲ್ಲಿ ಇರುವಷ್ಟು ಹೊತ್ತು ಕ್ರಿಕೆಟ್ ಅಭಿಮಾನಿಗಳಿಗೆ ಸಂಭ್ರಮವಾಗಿತ್ತು. ಎಂಥದ್ದೇ ಕಠಿಣ ಸಂದರ್ಭವಾದರೂ ಅವರು ಫೋರ್​, ಸಿಕ್ಸರ್​ಗಳನ್ನು ಸುಲಭವಾಗಿ ಬಾರಿಸುವ ಮೂಲಕ ಅಭಿಮಾನಿಗಳಿಗೆ ಖುಷಿ ಕೊಡುತ್ತಿದ್ದರು. ಸೋಲುವ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯ ಅವರಿಗೆ ಇತ್ತು.

ಅವರ ವೀರೋಚಿತ ಪ್ರದರ್ಶನದ ಹೊರತಾಗಿಯೂ ಅವರಿಗೆ ಐಪಿಎಲ್​ನಲ್ಲಿ ಯಾವುದೇ ಪ್ರಶಸ್ತಿ ದೊರಕಿಲ್ಲ. ಬಹುತೇಕ ವಿರಾಟ್​ ಕೊಹ್ಲಿಯ ನಾಯಕತ್ವದಲ್ಲೇ ಆಡಿರುವ ಅವರು ಅತ್ಯುತ್ತಮ ಜತೆಯಾಟ ನೀಡಿ ಪಂದ್ಯವನ್ನು ಗೆಲ್ಲಿಸುತ್ತಿದ್ದರು. ಆದರೆ ಅವರಿಗೆ ಫೈನಲ್​ಗೆ ತಲುಪಿ ಅಲ್ಲಿ ಗೆದ್ದು ಟ್ರೋಫಿ ಎತ್ತಲು ಸಾಧ್ಯವಾಗಲಿಲ್ಲ. ಭವಿಷ್ಯದಲ್ಲಿ ಡಿವಿಲಿಯರ್ಸ್ ನಿಜವಾಗಿಯೂ ಆರ್​ಸಿಬಿ ಜೆರ್ಸಿಯಲ್ಲಿ ಕಾಣಿಸಿಕೊಂಡರೆ, ದಕ್ಷಿಣ ಆಫ್ರಿಕಾದ ಶ್ರೇಷ್ಠ ಆಟಗಾರ ಆ ಮೂಲಕವಾದರೂ ಟ್ರೋಫಿ ಗೆಲ್ಲಬಹುದು ಎಂಬುದು ಅಭಿಮಾನಿಗಳ ನಿರೀಕ್ಷೆ.

Continue Reading

ಕ್ರಿಕೆಟ್

Team India : ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದು ಯಾಕೆ? ದ್ರಾವಿಡ್, ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ

ವಿಶ್ವಕಪ್ ಫೈನಲ್​ನಲ್ಲಿ ಭಾರತದ (Team India) ಸೋಲಿಗೆ ಅಹಮದಾಬಾದ್ ಪಿಚ್ ಕಾರಣ ಎಂದು ದ್ರಾವಿಡ್ ಆರೋಪಿಸಿದ್ದಾರೆ. ಭಾರತ ತಂಡವು ನಿರೀಕ್ಷಿಸಿದಷ್ಟು ಪಿಚ್ ಅನುಕೂಲಕರವಾಗಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

VISTARANEWS.COM


on

Rohit Sharma1
Koo

ಬೆಂಗಳೂರು : ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ (Team India) ತಂಡ ಸೋಲುವುದಕ್ಕೆ ಕಾರಣಗಳು ಏನು ಎಂಬುದರ ಬಗ್ಗೆ ನಿರಂತರ ಚರ್ಚೆಗಳು ನಡೆದಿವೆ. ಇದೀಗ 11 ದಿನಗಳ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕಾರಿಗಳು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗೆ ಕುಳಿತು ಪಂದ್ಯಾವಳಿಯಲ್ಲಿ ಭಾರತದ ಪ್ರದರ್ಶನವನ್ನು ಪರಿಶೀಲನೆಗೆ ಒಳಪಡಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಕೂಡ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಕೋಚ್ ಹಾಗೂ ನಾಯಕನಿಗೆ ಬಿಸಿಸಿಐ ಸತತವಾಗಿ ಪ್ರಶ್ನೆಗಳ ಸುರಿಮಳೆಗೈದಿದೆ.

ರೋಹಿತ್ ಶರ್ಮಾ ರಜಾ ಕಳೆಯಲೆಂದು ಲಂಡನ್​ಗೆ ಹೋಗಿದ್ದಾರೆ. ಅಲ್ಲಿಂದಲೇ ಅವರು ಸಭೆಯಲ್ಲಿ ಪಾಲ್ಗೊಂಡರು. ಸತತ 10 ಗೆಲುವುಗಳೊಂದಿಗೆ ಭಾರತವು ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ತಂಡಗಳಲ್ಲಿ ಒಂದಾಗಿತ್ತು ಆದರೆ ಫೈನಲ್​​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್​ಗಳಿಂದ ಸೋತಿತು. ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತೀಯ ಏಕದಿನ, ಟಿ 20 ಐ ಮತ್ತು ಟೆಸ್ಟ್ ತಂಡಗಳನ್ನು ಆಯ್ಕೆ ಮಾಡುವುದು ಮತ್ತು ಭವಿಷ್ಯದ ಕ್ರಮದ ಬಗ್ಗೆ ಕಲ್ಪನೆ ಪಡೆಯುವುದು ಸಭೆಯ ಮತ್ತೊಂದು ಕಾರ್ಯಸೂಚಿಯಾಗಿತ್ತು. ಈ ಸಭೆಯಲ್ಲಿ ಸೋಲಿಗೆ ಸ್ಪಷ್ಟ ಕಾರಣಗಳನ್ನು ಕೊಡುವಂತೆ ಬಿಸಿಸಿಐ ಅಧಿಕಾರಿಗಳು ಕೋಚ್​ ದ್ರಾವಿಡ್ ಹಾಗೂ ನಾಯಕ ರೋಹಿತ್​ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಖಜಾಂಚಿ ಆಶಿಶ್ ಶೆಲಾರ್ ಸಭೆಯಲ್ಲಿ ಭಾಗವಹಿಸಿದ್ದರು. ವರದಿಗಳ ಪ್ರಕಾರ ನವೆಂಬರ್ 19 ರಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಕಳಪೆ ಪ್ರದರ್ಶನದ ಹಿಂದಿನ ಕಾರಣಗಳ ಬಗ್ಗೆ ಅವರು ಪ್ರಶ್ನಿಸಿದ್ದಾರೆ. ಕೋಚ್​ ದ್ರಾವಿಡ್ ಅವರ ಅವಧಿ ಫೈನಲ್ ಪಂದ್ಯಕ್ಕೆ ಕೊನೆಗೊಂಡಿದ್ದರೂ ಇದೀಗ ಮತ್ತೆ ವಿಸ್ತರಣೆ ಮಾಡಲಾಗಿದೆ. ಅವರು 2024ರ ಟಿ20 ವಿಶ್ವ ಕಪ್​ ಮುಕ್ತಾಯದ ತನಕ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಪಿಚ್​ ಸರಿಯಿರಲಿಲ್ಲ

ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಅನ್ನು ದ್ರಾವಿಡ್ ದೂಷಿಸಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ತಂಡದ ಮ್ಯಾನೇಜ್ಮೆಂಟ್ ನಿರೀಕ್ಷಿಸಿದಷ್ಟು ಪಿಚ್ ಅನುಕೂಲಕರವಾಗಿರಲಿಲ್ಲ ಎಂದು ಭಾರತದ ಮಾಜಿ ನಾಯಕ ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ. ಚೇಸಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡದ ಬ್ಯಾಟರ್​ಗಳನ್ನು ಔಟ್​ ಮಾಡದೇ ಇರಲು ಅದುವೇ ಕಾರಣ ಎನ್ನಲಾಗಿದೆ.

ನಿಧಾನಗತಿಯ ಪಿಚ್

ಫೈನಲ್​ ಪಂದ್ಯವನ್ನು ಬಳಸಿದ ಪಿಚ್ ನಲ್ಲಿ ಆಡಿಸಲಾಗಿತ್ತು. ಪಾಕಿಸ್ತಾನ ವಿರುದ್ಧದ ಲೀಗ್ ಪಂದ್ಯಕ್ಕೆ ಇದೇ ಪಿಚ್ ಬಳಸಲಾಗಿತ್ತು. ಭಾರತವು ಆ ಪಂದ್ಯವನ್ನು ಸಾಕಷ್ಟು ಆರಾಮವಾಗಿ ಗೆದ್ದಿತ್ತು. ಇಲ್ಲಿ ಪ್ರಮುಖ ಅಂಶವಾಗಿದ್ದು ಟಾಸ್. ಫೈನಲ್​​ನಲ್ಲಿ ಭಾರತದಂತೆಯೇ ಪಾಕಿಸ್ತಾನವು ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿತ್ತು. ಫೈನಲ್​ನಲ್ಲಿ ನಾಯಕ ರೋಹಿತ್ ಶರ್ಮಾ ಚುರುಕಿನ ಆರಂಭದ ಹೊರತಾಗಿಯೂ, ಭಾರತದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಮಧ್ಯಮ ಓವರ್​ಗಳಲ್ಲಿ ಹೆಣಗಾಡಿದ್ದರು.

ಪಿಚ್​ನ ನಿಧಾನಗತಿಯ ಸ್ವಭಾವ ಮತ್ತು ಆಸ್ಟ್ರೇಲಿಯಾದ ಬೌಲರ್​ಗಳ ಕಾರ್ಯಕ್ಷಮತೆಯೂ ಇಲ್ಲಿ ಎದ್ದು ಕಂಡಿದೆ. ಬಳಸಿದ ಪಿಚ್ ಅನ್ನು ಸ್ಥಳೀಯ ಕ್ಯುರೇಟರ್ ಸಲಹೆಯ ಮೇರೆಗೆ ಆಯ್ಕೆ ಮಾಡಲಾಗಿತ್ತು. ವಿಶ್ವಕಪ್​ನ ನಾಕೌಟ್ ಪಂದ್ಯಗಳಿಗೆ ಹೊಸ ಪಿಚ್ ಸಿದ್ಧಪಡಿಸುವುದನ್ನು ಐಸಿಸಿ ನಿಯಮವು ಕಡ್ಡಾಯಗೊಳಿಸಿಲ್ಲ. ಆದಾಗ್ಯೂ ಹೊಸ ಪಿಚ್​ ಸೂಕ್ತ ಎಂದು ಹೇಳಲಾಗುತ್ತದೆ. ಆದರೆ, ಭಾರತದಲ್ಲಿ ಬಹುತೇಕ ಬಳಸಿದ ಪಿಚ್​ನಲ್ಲಿ ಆಡಿಸಲಾಗಿತ್ತು.

ಇದನ್ನೂ ಓದಿ : Rohit Sharma : ಟಿ20 ನಾಯಕತ್ವದ ಗೊಂದಲದ ನಡುವೆಯೇ ವಿದೇಶದಲ್ಲಿ ಪತ್ತೆಯಾದ್ರು ರೋಹಿತ್ ಶರ್ಮಾ

ಸ್ಪಿನ್ನರ್​ಗಳಿಗೆ ನೆರವಾಗುವ ಉದ್ದೇಶದಿಂದ ಪಿಚ್​ಗೆ ಕಡಿಮೆ ನೀರು ಹಾಕಲಾಗಿತ್ತು. ಅದು ಭಾರತಕ್ಕೇ ಮುಳುವಾಯಿತು. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿದ್ದರು. ಮೊದಲ ಇನ್ನಿಂಗ್ಸ್​​ನಲ್ಲಿ 240 ರನ್​ಗಳಿಗೆ ಆಲೌಟ್ ಆಯಿತು. ಟ್ರಾವಿಸ್ ಹೆಡ್ ಅವರ ಅದ್ಭುತ ಶತಕದ ನೆರವಿನಿಂದ ಆಸ್ಟ್ರೇಲಿಯಾ ಗೆದ್ದಿತ್ತು.

Continue Reading

ಕ್ರಿಕೆಟ್

Ind vs Aus : ಭಾರತ – ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆಯ ಅಡಚಣೆ ಇದೆಯೇ?

ind vs aus : ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ.

VISTARANEWS.COM


on

Chinnaswamy Stadium
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಡಿಸೆಂಬರ್ 03) ನಡೆಯಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನವ (Ind vs Aus) 5ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಭಾರತವು ಸರಣಿಯನ್ನು 3-1 ಅಂತರದಿಂದ ಭದ್ರಪಡಿಸಿಕೊಂಡಿದ್ದರೂ, ಹವಾಮಾನ ಪರಿಸ್ಥಿತಿ ಅನುಮತಿಸಿದರೆ ಎರಡೂ ಕಡೆಯವರು ತಮ್ಮ ಬೆಂಚ್ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನ ಮಾಡಬಹುದು. ರಾಯ್ಪುರದಲ್ಲಿ ಭಾರತ ತಂಡ ಬ್ಯಾಟ್ ಮತ್ತು ಬಾಲ್​ನಲ್ಲಿ ಪರಾಕ್ರಮವನ್ನು ಪ್ರದರ್ಶಿಸಿತತ್ತು. ಅಂತೆಯೇ ಬೆಂಗಳೂರಿನಲ್ಲಿ ವರಣದೇವ ಕೃಪೆ ತೋರಿದರ ಸರಣಿಯ ಅಂತಿಮ ಮುಖಾಮುಖಿ ಕುತೂಹಲಕಾರಿಯಾಗಿರುವುದರಲ್ಲಿ ಯಾವುದೇ ಅನುಮಾನ ಇಲ್ಲ.

ರಾಯ್ಪುರದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಮತ್ತು ರಿಂಕು ಸಿಂಗ್ 20 ರನ್ ಗಳ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದ್ದರು ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡದಲ್ಲಿ ತಮ್ಮ ಮೇಲಿನ ವಿಶ್ವಾಸವನ್ನು ಹೆಚ್ಚಿಸಿಕೊಂಡರು. 4-1 ಮುನ್ನಡೆ ಸಾಧಿಸಲು ನಿರ್ಧರಿಸಿರುವ ಭಾರತ ಉತ್ತಮ ಪ್ರದರ್ಶನ ನೀಡುವ ಗುರಿ ಹೊಂದಿದೆ. 2024ರ ಟಿ20 ವಿಶ್ವಕಪ್​​ಗೆ ಮುನ್ನ ಇನ್ನು ಕೇವಲ 6 ಟಿ20 ಪಂದ್ಯಗಳು ಬಾಕಿ ಉಳಿದಿದ್ದು, ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿದೆ . ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಿರ್ಣಾಯಕ ಪಂದ್ಯಕ್ಕೆ ಮಳೆ ಬರುವುದೇ ಎಂಬ ಆತಂಕ ಶುರುವಾಗಿದೆ.

ಮಳೆ ಭೀತಿ ಬಹುತೇಕ ಇಲ್ಲ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದನೇ ಟಿ 20 ಪಂದ್ಯಕ್ಕೆ ಮಳೆ ಅಡ್ಡಿಯಾಗುವ ನಿರೀಕ್ಷೆಯಿಲ್ಲದ ಕಾರಣ ಪ್ರೇಕ್ಷಕರು ರನ್​ಗಳ ಮಳೆಯನ್ನು ಅನುಭವಿಸಬಹುದು. ಬೆಂಗಳೂರಿನಲ್ಲಿ ಡಿಸೆಂಬರ್ 3ರಂದು ಹವಾಮಾನ ಮುನ್ಸೂಚನೆಯು 26 ಡಿಗ್ರಿ ಸ್ಥಿರ ತಾಪಮಾನ ಇದೆ ಎಂದು ಹೇಳಿದೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಇದು 72% ಆರ್ದ್ರತೆಯ ಸೂಚನೆ ನೀಡಿದೆ. ರಾತ್ರಿ 8-9 ರ ನಡುವೆ ಹನಿ ಮಳೆಯಾಗಬಹುದು. ಇದು ಆದರೂ ಪಂದ್ಯ ಕೊಚ್ಚಿಹೋಗುವ ಅಪಾಯವನ್ನುಂಟು ಮಾಡುವುದಿಲ್ಲ.

ಬೌಲರ್​ಗಳಿಗೆ ಕಷ್ಟಕರ ಪಿಚ್​

ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಅಸಾಧಾರಣ ಬ್ಯಾಟಿಂಗ್ ಪ್ರದರ್ಶನಗಳಿಗೆ ಅನುಕೂಲಕರವಾಗಿದೆ. ಇದು ಬ್ಯಾಟರ್​ಗಳಿಗೆ ಸೂಕ್ತ ಹೊಡೆಗಳಿಗೆ ಅನುಕೂಲಕರವಾಗಿದೆ. ಇದು ವೇಗದ ಬೌಲರ್​ಗಳಿಗೆ ಮತ್ತು ಸ್ಪಿನ್ನರ್​ಗಳಿಗೆ ಎಂದಿಗೂ ನೆರವಾಗುವುದಿಲ್ಲ. ಇದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೆಚ್ಚಿನ ಸ್ಕೋರ್ ಪಂದ್ಯಕ್ಕೆ ವೇದಿಕೆಯನ್ನು ಒದಗಿಸಲಿದೆ. ಟಾಸ್ ಗೆದ್ದ ತಂಡ ಚೇಸ್ ಮಾಡುವುದೇ ಉತ್ತಮ. ಪಿಚ್​ನ ಸಮ ಸ್ವರೂಪ ಮತ್ತು ಸಣ್ಣ ಬೌಂಡರಿಗಳು ಚೇಸಿಂಗ್ ತಂಡಕ್ಕೆ ಅನುಕೂಲಕರವಾಗಿವೆ.

ಇದನ್ನೂ ಓದಿ : Virat kohli : ಸಿಹಿ ಮಾವಿನ ಹಣ್ಣಿನ ಕತೆ ಕೆದಕಿದ ನವಿನ್ ಉಲ್ ಹಕ್​

ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಭಾರತ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಹರ್, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಆರೋನ್ ಹಾರ್ಡಿ, ಬೆನ್ ಮೆಕ್ಡರ್ಮಾಟ್, ಟಿಮ್ ಡೇವಿಡ್, ಮ್ಯಾಟ್ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ/ ವಿಕೆಟ್ ಕೀಪರ್), ಬೆನ್ ಡ್ವಾರ್ಶುಯಿಸ್, ತನ್ವೀರ್ ಸಂಘಾ, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್ಡಾರ್ಫ್.

ಇತ್ತಂಡಗಳ ಮುಖಾಮುಖಿ ವಿವರ

  • ಆಡಿದ ಪಂದ್ಯಗಳು: 30
  • ಭಾರತ ಗೆಲುವು- 18
  • ಆಸ್ಟ್ರೇಲಿಯಾ- 11
  • ಮೊದಲ ಪಂದ್ಯ- 22 ಸೆಪ್ಟೆಂಬರ್, 2007
  • ಕೊನೆಯ ಪಂದ್ಯ: 01 ಡಿಸೆಂಬರ್, 2023

ನೇರ ಪ್ರಸಾರ ವಿವರಗಳು

  • ದಿನಾಂಕ ಭಾನುವಾರ, ಡಿಸೆಂಬರ್ 3
  • ಸಮಯ: ಸಂಜೆ 07:00 (ಭಾರತೀಯ ಕಾಲಮಾನ)
  • ಲೈವ್ ಸ್ಟ್ರೀಮಿಂಗ್ ಜಿಯೋ ಸಿನೆಮಾ
  • ಲೈವ್ ಬ್ರಾಡ್ಕಾಸ್ಟ್ ಸ್ಪೋರ್ಟ್ಸ್18

Continue Reading

ಕ್ರಿಕೆಟ್

Ind vs Aus : ಬ್ಯಾಟರ್​ಗಳ ಸ್ವರ್ಗ ಬೆಂಗಳೂರಿನಲ್ಲಿ ಗೆಲುವು ಯಾರಿಗೆ?

Ind vs Aus : ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಂತರದಿಂದ ವಶಪಡಿಸಿಕೊಂಡಿದೆ.

VISTARANEWS.COM


on

Team India 1
Koo

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿ ಭಾರತ ತಂಡ ಕೈವಶವಾಗಿದೆ. 3-1 ಅಂತರಿಂದ ಭಾರತ ತಂಡ ಸರಣಿಯನ್ನು ವಶಪಡಿಸಿಕೊಂಡಿದೆ. ಇದೀಗ ಐದು ಪಂದ್ಯಗಳ ಸರಣಿಯ ಕೊನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಡಿಸೆಂಬರ್​ 3ರಂದು) ನಡೆಯಲಿದೆ. ಸರಣಿಯ ಇದುವರೆಗಿನ ಎಲ್ಲಾ ನಾಲ್ಕು ಪಂದ್ಯಗಳು ಬಿಗ್​ ಸ್ಕೋರ್​ ಮ್ಯಾಚ್​ಗಳಾಗಿದ್ದವು. ಬೆಂಗಳೂರಿನ ಪಂದ್ಯ ಇನ್ನೂ ದೊಡ್ಡ ಮೊತ್ತದ ಪಂದ್ಯವಾಗುವುದರಲ್ಲಿ ಅನುಮಾನವೇ ಇಲ್ಲ. ಯಾಕೆಂದರೆ ಸಣ್ಣ ಬೌಂಡರಿಗಳು ಇಲ್ಲ ಬ್ಯಾಟರ್​ಗಳಿಗೆ ಸ್ವರ್ಗವನ್ನೇ ಸೃಷ್ಟಿಸಿಕೊಡುತ್ತದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಭಾರತಕ್ಕೆ ಒಂದೆರಡು ಹೆಸರುಗಳು ನಿಜವಾಗಿಯೂ ಪ್ರಭಾವಶಾಲಿಯಾಗಿವೆ. ರಿಂಕು ಸಿಂಗ್ ಅವರಲ್ಲಿ ಮೊದಲಿಗರು, ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್​ ಈ ಪಟ್ಟಿಯಲ್ಲಿದ್ದಾರೆ. ರಾಯ್ಪುರ ಮ್ಯಾಚ್​ನಲ್ಲಿ ಜಿತೇಶ್​ ಶರ್ಮಾ ಕೂಡ ಮಿಂಚಿದ್ದಾರೆ. ಹೀಗಾಗಿ ಜೂನ್​ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​​ಗೆ ಮುಂಚಿತವಾಗಿ ಬಿಸಿಸಿಐ ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಿದೆ. ಯಾಕೆಂದರೆ ವಿಶ್ವ ಕಪ್ ತಂಡ ಪ್ರಕಟಿಸುವಾಗ ಇವರೆಲ್ಲರನ್ನೂ ಪರಿಗಣನೆಗೆ ತೆಗೆದುಕೊಳ್ಳುವುದು ಖಾತರಿ.

ಬೆಂಗಳೂರಿನಲ್ಲಿ ನಡೆಯಲಿರುವ ಅಂತಿಮ ಪಂದ್ಯವು ಇನ್ನೂ ಅನೇಕರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ನೀಡಬಹುದು.

ಆಸ್ಟ್ರೇಲಿಯಾದ ವಿಷಯಕ್ಕೆ ಬಂದಾಗ, ಮ್ಯಾಥ್ಯೂ ವೇಡ್ ನೇತೃತ್ವದ ತಂಡವು ಕಳೆದುಕೊಳ್ಳಲು ಏನೂ ಇಲ್ಲ ಮತ್ತು ನಿರ್ಭೀತ ಬ್ರಾಂಡ್ ಕ್ರಿಕೆಟ್ ಆಡುತ್ತಿದೆ. ಟೆಸ್ಟ್ ಆಡುವ ಎಲ್ಲಾ ಕ್ರಿಕೆಟಿಗರು ಮತ್ತು ಇತರ ಕೆಲವರನ್ನು ದೇಶಕ್ಕೆ ವಾಪಸ್ ಕಳುಹಿಸಲಾಗಿದ್ದು, ಯುವ ಪಡೆ ಸಮರಕ್ಕೆ ಸಜ್ಜಾಗಿದೆ. ಐಪಿಎಲ್ ಫ್ರಾಂಚೈಸಿಗಳನ್ನು ಮೆಚ್ಚಿಸಲು ಐದನೇ ಟಿ 20 ಐ ಇತರರಿಗೆ ಕೊನೆಯ ಅವಕಾಶವಾಗಿದೆ, ಏಕೆಂದರೆ ಹರಾಜಿಗೆ ಕೇವಲ ಎರಡು ವಾರಗಳು ಉಳಿದಿವೆ.

ಸರಣಿ ಈಗಾಗಲೇ ಗೆದ್ದಿರುವುದರೀಮದ ತಿಲಕ್ ವರ್ಮಾಗೆ ಸೂರ್ಯಕುಮಾರ್ ಯಾದವ್ ಅವಕಾಶ ನೀಡುವ ಸಾಧ್ಯತೆ ಇದೆ. ಯುವ ಆಟಗಾರ ಮೂರನೇ ಟಿ 20 ಯಲ್ಲಿ ಉತ್ತಮ ಫಾರ್ಮ್​ನಲ್ಲಿದ್ದರು. ಆದರೆ ಶ್ರೇಯಸ್ ಅಯ್ಯರ್ ಮರಳಿದ ನಂತರ ಬೆಂಚ್ ಕಾಯಿಸಲಾಯಿತು. ಆದರೆ ಐದನೇ ಟಿ 20 ಐ ಆಡಬಹುದು. ಮತ್ತೊಂದೆಡೆ, ಜಿತೇಶ್ ಶರ್ಮಾಗೆ ಮತ್ತೊಂದು ಬಾರಿ ಅವಕಾಶ ಸಿಗಬಹುದು. ಹೀಗಾಗಿ ಇಶಾನ್ ಕಿಶನ್ ಮತ್ತೊಮ್ಮೆ 11ರ ಬಳಗದಲ್ಲಿ ಅವಕಾಶ ಪಡೆಯುವುದು ಕಷ್ಟ.

ಇದನ್ನೂ ಓದಿ : Ind vs Aus : ಟಿ20 ಕ್ರಿಕೆಟ್ ಸಾಧನೆಯ ಹಾದಿಯಲ್ಲಿ ಪಾಕಿಸ್ತಾನ ತಂಡವನ್ನೇ ಹಿಂದಿಕ್ಕಿದ ಭಾರತ

ಆಸ್ಟ್ರೇಲಿಯಾ ತನ್ನ ಪ್ಲೇಯಿಂಗ್ ಇಲೆವೆನ್​​ಲಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿಲ್ಲ. ಅವರು ಪರಿಪೂರ್ಣ ಸಂಯೋಜನೆಯನ್ನು ಹೊಂದಿದ್ದಾರೆ. ಆದರೆ ಸ್ವಲ್ಪ ಸ್ಥಿರತೆಯ ಅಗತ್ಯವಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ವರದಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್​ ಬ್ಯಾಟರ್​ಗಳಿಗೆ ಅನುಕೂಲಕರವಾಗಿದೆ. ಬೌಂಡರಿಗಳು ತುಂಬಾ ಚಿಕ್ಕದಾಗಿರುತ್ತವೆ ಮತ್ತು ಆದ್ದರಿಂದ, ಸಾಕಷ್ಟು ರನ್ ಹರಿದು ಬರಲಿದೆ. ಎಷ್ಟೇ ದೊಡ್ಡ ಗುರಿ ಇಲ್ಲಿ ಸುರಕ್ಷಿತವಲ್ಲ. ಇಬ್ಬನಿ ಪರಿಣಾಮ ಬೌಲರ್​ಗಳಿಗೆ ಮಾರಕ. ಮೊದಲು ಬೌಲಿಂಗ್ ಮಾಡುವುದು ಸೂಕ್ತವಾಗಿರುತ್ತದೆ. 210 ಕ್ಕಿಂತ ಹೆಚ್ಚಿನ ಮೊತ್ತವನ್ನು ರಕ್ಷಣಾತ್ಮಕವೆಂದು ಪರಿಗಣಿಸಬಹುದು.

ಸಂಭಾವ್ಯ ಪ್ಲೇಯಿಂಗ್ ಇಲೆವೆನ್

ಭಾರತ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ದೀಪಕ್ ಚಹರ್, ಅವೇಶ್ ಖಾನ್, ಮುಖೇಶ್ ಕುಮಾರ್.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಆರೋನ್ ಹಾರ್ಡಿ, ಬೆನ್ ಮೆಕ್ಡರ್ಮಾಟ್, ಟಿಮ್ ಡೇವಿಡ್, ಮ್ಯಾಟ್ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ/ ವಿಕೆಟ್ ಕೀಪರ್), ಬೆನ್ ಡ್ವಾರ್ಶುಯಿಸ್, ತನ್ವೀರ್ ಸಂಘಾ, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್ಡಾರ್ಫ್.

ಇತ್ತಂಡಗಳ ಮುಖಾಮುಖಿ ವಿವರ

  • ಆಡಿದ ಪಂದ್ಯಗಳು: 30
  • ಭಾರತ ಗೆಲುವು- 18
  • ಆಸ್ಟ್ರೇಲಿಯಾ- 11
  • ಮೊದಲ ಪಂದ್ಯ- 22 ಸೆಪ್ಟೆಂಬರ್, 2007
  • ಕೊನೆಯ ಪಂದ್ಯ: 01 ಡಿಸೆಂಬರ್, 2023

ನೇರ ಪ್ರಸಾರ ವಿವರಗಳು

  • ದಿನಾಂಕ ಭಾನುವಾರ, ಡಿಸೆಂಬರ್ 3
  • ಸಮಯ: ಸಂಜೆ 07:00 (ಭಾರತೀಯ ಕಾಲಮಾನ)
  • ಲೈವ್ ಸ್ಟ್ರೀಮಿಂಗ್ ಜಿಯೋ ಸಿನೆಮಾ
  • ಲೈವ್ ಬ್ರಾಡ್ಕಾಸ್ಟ್ ಸ್ಪೋರ್ಟ್ಸ್18
Continue Reading
Advertisement
JP Nadda And BY Vijayendra
ಕರ್ನಾಟಕ3 mins ago

BY Vijayendra: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ನಡ್ಡಾ ಭೇಟಿಯಾದ ವಿಜಯೇಂದ್ರ; ಏನೇನು ಚರ್ಚೆ?

police protest in Chikkamagaluru
ಪ್ರಮುಖ ಸುದ್ದಿ29 mins ago

ಕಾಫಿನಾಡಲ್ಲಿ ವಕೀಲರ ವಿರುದ್ಧ ಪೊಲೀಸರ ಪ್ರತಿಭಟನೆ; ಸಾಮೂಹಿಕ ರಾಜೀನಾಮೆ ಎಚ್ಚರಿಕೆ

Man Kills Girlfriend
ಕ್ರೈಂ1 hour ago

ಪ್ರೇಯಸಿಯನ್ನು ಕೊಂದು, ಆಕೆಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟ ಯುವಕ

Pro Pak Slogans
ಕರ್ನಾಟಕ2 hours ago

Pro Pak Slogan: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

home
ಧಾರ್ಮಿಕ2 hours ago

Vastu Tips: ಇದು ಬರೀ ಬೆಳಕಲ್ಲ… ಅದೃಷ್ಟಕ್ಕಾಗಿ ವಾಸ್ತು ಪ್ರಕಾರ ಮನೆಯನ್ನು ಈ ರೀತಿ ಬೆಳಗಿ

december
ಮನಿ-ಗೈಡ್2 hours ago

Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

Tsunami
ಪ್ರಮುಖ ಸುದ್ದಿ2 hours ago

Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ABD Villiars
ಕ್ರಿಕೆಟ್2 hours ago

AB de Villiers : ನನ್ನ ಹೃದಯ ಆರ್​​ಸಿಬಿಯಲ್ಲೇ ಇದೆ ಎಂದ ಮಿಸ್ಟರ್​ 360

Dr Sankara Guha Dwarakanath
ಬೆಂಗಳೂರು2 hours ago

ಬ್ಯಾಂಕ್‌ ಹಗರಣಗಳ ಸಿಬಿಐ ತನಿಖೆ; ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದ ಡಾ. ಶಂಕರ್ ಗುಹಾ ದ್ವಾರಕನಾಥ್

Rohit Sharma1
ಕ್ರಿಕೆಟ್3 hours ago

Team India : ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದು ಯಾಕೆ? ದ್ರಾವಿಡ್, ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Cockroaches bite baby born 2 days ago in vanivilas hospital
ಆರೋಗ್ಯ6 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ18 hours ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ1 day ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ1 day ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ2 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ2 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ5 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

ಟ್ರೆಂಡಿಂಗ್‌