ICC World Cup Qualifiers: ಏಕದಿನ ಕ್ರಿಕೆಟ್​ನಲ್ಲಿ ದಾಖಲೆಯ ಮೊತ್ತದ ಗೆಲುವು ಕಂಡ ಜಿಂಬಾಬ್ವೆ Vistara News
Connect with us

ಕ್ರಿಕೆಟ್

ICC World Cup Qualifiers: ಏಕದಿನ ಕ್ರಿಕೆಟ್​ನಲ್ಲಿ ದಾಖಲೆಯ ಮೊತ್ತದ ಗೆಲುವು ಕಂಡ ಜಿಂಬಾಬ್ವೆ

ವಿಶ್ವ ಕಪ್​ ಅರ್ಹತಾ ಪಂದ್ಯಾವಳಿಯಲ್ಲಿ(ICC World Cup Qualifiers) ಜಿಂಬಾಬ್ವೆ ತಂಡ ಯುಎಸ್​ಎ(Zimbabwe vs United States) ವಿರುದ್ಧ 304 ರನ್​ ಗಳ ದಾಖಲೆಯ ಗೆಲುವು ದಾಖಲಿಸಿದೆ.

VISTARANEWS.COM


on

ICC Cricket World Cup Qualifiers 2023
Koo

ಹರಾರೆ: ಐಸಿಸಿ ವಿಶ್ವ ಕಪ್​ ಅರ್ಹತಾ ಪಂದ್ಯಾವಳಿಯಲ್ಲಿ(ICC World Cup Qualifiers) ಜಿಂಬಾಬ್ವೆ ತಂಡ ನೂತನ ದಾಖಲೆಯೊಂದನ್ನು ತನ್ನ ಹೆಸರಿಗೆ ಬರೆದಿದೆ. ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ಮೊತ್ತದಿಂದ ಗೆದ್ದ ವಿಶ್ವದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸೋಮವಾರ ಇಲ್ಲಿ ನಡೆದಿದ್ದ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಯುಎಸ್​ಎ(Zimbabwe vs United States) ವಿರುದ್ಧ 304 ರನ್​ ಗಳ ದಾಖಲೆಯ ಗೆಲುವು ದಾಖಲಿಸಿತು. ಅತ್ಯಧಿಕ ಮೊತ್ತದಿಂದ ಗೆದ್ದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರ ಸ್ಥಾನ. ಇದೇ ವರ್ಷ ಶ್ರೀಲಂಕಾ ವಿರುದ್ಧ ತಿರುವನಂತಪುರಂನಲ್ಲಿ ನಡೆದಿದ್ದ ಏಕದಿನ ಪಂದ್ಯದಲ್ಲಿ ಟೀಮ್​ ಇಂಡಿಯಾ 317 ರನ್​ ಅಂತರದಿಂದ ಗೆಲುವು ಸಾಧಿಸಿತ್ತು.

ಟಾಸ್​ ಸೋತು ಮೊದಲು ಬ್ಯಾಟಿಂಗ್ ನಡೆಸಿದ​ ಜಿಂಬಾಬ್ವೆ ತಂಡ ನಾಯಕ ಸೀನ್ ವಿಲಿಯಮ್ಸ್(Sean Williams) ಅವರ ಅಮೋಘ ಆಟದ ನೆರವಿನಿಂದ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 408 ರನ್ ಗಳಿಸಿತು. ಬೃಹತ್ ಗುರಿ ಬೆನ್ನಟ್ಟಿದ ಯುಎಸ್​ಎ ಬಿಗಿ ದಾಳಿಗೆ ನಲುಗಿ 25.1 ಓವರ್ ಗಳಲ್ಲಿ 104 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಭಾರಿ ಅಂತರದ ಸೋಲಿಗೆ ಸುತ್ತಾಯಿತು.

ಜಿಂಬಾಬ್ವೆ ಪರ ಆರಂಭಿಕ ಆಟಗಾರ ಜಾಯ್ಲಾರ್ಡ್ ಗುಂಬಿ 78 ರನ್, ಇನ್ನೋಸೆಂಟ್ ಕೈಯಾ 32 ರನ್ ಗಳಿಸಿದರೆ. ಬಳಿಕ ಬಂದ ನಾಯಕ ಸೀನ್ ವಿಲಿಯಮ್ಸ್ ಸ್ಪೋಟಕ ಆಟವಾಡಿ 101 ಎಸೆತಗಳಲ್ಲಿ ಬರೋಬ್ಬರಿ 174 ರನ್ ಬಾರಿಸಿದರು. ಅವರ ಈ ಮನಮೋಹಕ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ​ 21 ಬೌಂಡರಿ ಮತ್ತು 5 ಆಕರ್ಷಕ ಸಿಕ್ಸರ್​ಗಳು ಒಳಗೊಂಡಿದ್ದವು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ ಬೀಸಿದ ಆಲ್​ರೌಂಡರ್ ಸಿಂಕಂದರ್​ ರಾಜಾ(Sikandar Raza) 48 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ರಿಯಾನ್ ಬರ್ಲ್ 17 ಎಸೆತಗಳಲ್ಲಿ 47 ರನ್ ಗಳಿಸಿ ತಂಡದ ಬೃಹತ್​ ಮೊತ್ತಕ್ಕೆ ಉತ್ತಮ ಕೊಡುಗೆ ನೀಡಿದರು. ಯುಎಸ್​ಎ ಪರ ಅಭಿಷೇಕ್ ಪರಾಡ್ಕರ್ 3 ವಿಕೆಟ್ ಪಡೆದರು. ಜಸ್ದೀಪ್ ಸಿಂಗ್ 2, ನೋಸ್ತುಶ್ ಕೆಂಜಿಗೆ 1 ವಿಕೆಟ್ ಉರುಳಿಸಿದರು.

ಇದನ್ನೂ ಓದಿ ICC World Cup Qualifiers: ಕೈಲ್ ಫಿಲಿಪ್ ಬೌಲಿಂಗ್​ಗೆ ನಿಷೇಧ ವಿಧಿಸಿದ ಐಸಿಸಿ

ಏಕದಿನದಲ್ಲಿ ಅತ್ಯಧಿಕ ರನ್​ ಅಂತರದಿಂದ ಗೆದ್ದ ತಂಡಗಳು

ಭಾರತ vs ಶ್ರೀಲಂಕಾ (ಭಾರತದ ಗೆಲುವಿನ ಅಂತರ 317 ರನ್)​ ತಿರುವನಂತಪುರಂ, 2023

ಜಿಂಬಾಬ್ವೆ vs ಯುಎಸ್​ಎ(ಜಿಂಬಾಬ್ವೆಯ ಗೆಲುವಿನ ಅಂತರ 304 ರನ್​) ಹರಾರೆ, 2023

ನ್ಯೂಜಿಲ್ಯಾಂಡ್ vs ಐರ್ಲೆಂಡ್(ನ್ಯೂಜಿಲ್ಯಾಂಡ್ ಗೆಲುವಿನ ಅಂತರ 290 ರನ್​) ಅಬರ್ಡೀನ್, 2008

ಆಸ್ಟ್ರೇಲಿಯಾ vs ಅಫಘಾನಿಸ್ತಾನ(ಆಸ್ಟ್ರೇಲಿಯಾ ಗೆಲುವಿನ ಅಂತರ 275 ರನ್​) ಪರ್ತ್, 2015

ದಕ್ಷಿಣ ಆಫ್ರಿಕಾ vs ಜಿಂಬಾಬ್ವೆ(ದಕ್ಷಿಣ ಆಫ್ರಿಕಾ ಗೆಲುವಿನ ಅಂತರ 272) ಬೆನೋನಿ, 2010

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

ಐಪಿಎಲ್​ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್​ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಗೌತಮ್​ ಗಂಭೀರ್ ಬರೆದುಕೊಂಡಿದ್ದಾರೆ.

VISTARANEWS.COM


on

Edited by

naveen ul haq and gautam gambhir
Koo

ಮುಂಬಯಿ: ವಿರಾಟ್​ ಕೊಹ್ಲಿಯ(virat kohli) ಬದ್ಧ ಎದುರಾಳಿ ಅಫಘಾನಿಸ್ತಾನ ತಂಡದ ವೇಗಿ ನವೀನ್ ಉಲ್ ಹಕ್ (Naveen-ul-Haq) 24ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅನೇಕರು ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಆದರೆ ಭಾರತ ಕ್ರಿಕೆಟ್​ ತಂಡದ ಮಾಜಿ ಆಟಗಾರ ಗೌತಮ್​ ಗಂಭೀರ್(Gautam Gambhir)​ ಅವರ ಹಾರೈಕೆ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ವಿರಾಟ್​ ಕೊಹ್ಲಿ ಅವರನ್ನು ಒಂದಲ್ಲ ಒಂದು ವಿಚಾರವಾಗಿ ಕೆಣಕುವ ಮತ್ತು ಅಪಹಾಸ್ಯ ಮಾಡುವ ಗಂಭೀರ್​ ಈ ಬಾರಿಯೂ ಇದೇ ಕೀಳುಮಟ್ಟದ ಪ್ರವೃತ್ತಿಯನ್ನು ತೋರಿದ್ದಾರೆ. ಐಪಿಎಲ್​ನ ಲಕ್ನೋ ತಂಡದ ಜೆರ್ಸಿಯಲ್ಲಿ ಜತೆಗಿರುವ ಫೋಟೊವನ್ನು ಹಂಚಿಕೊಂಡು ನವೀನ್ ಉಲ್ ಹಕ್​ಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿ, ನೀನು ಯಾವುದೇ ಕಾರಣಕ್ಕೂ, ಬದಲಾಗಬೇಡ, ನಿನ್ನಂತಹ ವ್ಯಕ್ತಿಗಳು ಸಿಗುವುದು ತುಂಬಾ ಕಡಿಮೆ” ಎಂದು ಹರಸಿ ಕೊಹ್ಲಿಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

ನವೀನ್ ಉಲ್ ಹಕ್ ವಿಚಾರದಲ್ಲಿ ಕೊಹ್ಲಿ ಜತೆ ಕಿರಿಕ್​

ಈ ಬಾರಿಯ ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಮೆಂಟರ್​ ಆಗಿ ಕಾರ್ಯನಿರ್ವಹಿಸಿದ್ದ ಗೌತಮ್​ ಗಂಭಿರ್​ ಅವರು ನವೀನ್​ ಉಲ್​ ಹಕ್​ ವಿಚಾರದಲ್ಲಿ ಕೊಹ್ಲಿ(virat kohli and naveen ul haq) ಜತೆ ಮೈದಾನದಲ್ಲೇ ವಾಗ್ವಾದ ನಡೆಸಿ ಕೈ ಕೈ ಮಿಲಾಯಿಸುವ ಹಂತದದ ವರೆಗೂ ಹೋಗಿದ್ದರು. ಅತ್ತ ನವೀನ್​ ಕೂಡ ಕೊಹ್ಲಿಯನ್ನು ಪದೇಪದೆ ಕೆಣಕಿ ಅಗೌರವದಿಂದ ನಡೆದುಕೊಂಡಿದ್ದರು. ಇದಕ್ಕೆ ಕೊಹ್ಲಿ ಅಭಿಮಾನಿಗಳು ಗಂಭೀರ್​ ಮತ್ತು ನವೀನ್​ ಅವರನ್ನು ಕಂಡಾಗಲೆಲ್ಲಾ ಕೊಹ್ಲಿಯ ಹೆಸರನ್ನು ಜೋರಾಗಿ ಕರೆದು ಕೆಣಕುತ್ತಿದ್ದಾರೆ.

ಏಷ್ಯಾಕಪ್​ನಲ್ಲಿಯೂ ಕೊಹ್ಲಿಯನ್ನು ಕೆಣಕಿದ್ದ ಗಂಭೀರ್​

ಕಳೆದ ವಾರ ಮುಕ್ತಾಯ ಕಂಡ ಏಷ್ಯಾಕಪ್​ ಟೂರ್ನಿಯಲ್ಲಿಯೂ ಕೊಹ್ಲಿಯನ್ನು ಗಂಭೀರ್​ ಅಪಹಾಸ್ಯ ಮಾಡಿದ್ದರು. ಪಾಕಿಸ್ತಾನ ವಿರುದ್ಧದ ಮೊದಲ ಮುಖಾಮುಖಿಯಲ್ಲಿ ಕೊಹ್ಲಿ, ಶಾಹೀನ್​ ಅಫ್ರಿದಿ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದ ವೇಳೆ ಲೈವ್​ ಕಾಮೆಂಟ್ರಿಯಲ್ಲೇ ಟೀಕಿಸಿದ್ದರು. ವಿರಾಟ್​ ಕೊಹ್ಲಿ ಔಟಾಗುತ್ತಿದ್ದಂತೆ “ಈ ಎಸೆತಕ್ಕೆ ಬ್ಯಾಟ್​ ಬೀಸುವ ಅಗತ್ಯವೇ ಇರಲಿಲ್ಲ. ವಿಕೆಟ್​ನ ಮುಂದೆ ಕೂಡ ಈ ಚೆಂಡು ಇರಲಿಲ್ಲ. ಸಂಪೂರ್ಣವಾಗಿ ವಿಕೆಟ್​ ನಿಂದ ಚೆಂಡು ಹೊರ ಭಾಗದಲ್ಲಿತ್ತು. ವಿಶ್ವದ ಶ್ರೇಷ್ಠ ಬೌಲರ್​ಗಳಲ್ಲಿ ಒಬ್ಬರಾಗಿರುವ ಶಾಹೀನ್ ಅಫ್ರಿದಿ ಅವರಂತ ಬೌಲರ್​ಗಳ ಮುಂದೆ ಶ್ರೇಷ್ಠ ಬ್ಯಾಟರ್​ ಈ ಎಸೆತಕ್ಕೆ ಮುಂದೆ ಹೋಗಬೇಕೋ ಅಥವಾ ಹಿಂದೆ ಹೋಗಬೇಕೋ ಎಂಬುದನ್ನು ತಿಳಿದಿರಬೇಕು” ಎಂದು ಹೇಳುವ ಮೂಲಕ ಗಂಭೀರ್​ ಅವರು ಕೊಹ್ಲಿಯನ್ನು ಟೀಕಿಸಿ ವ್ಯಂಗ್ಯವಾಡಿದ್ದರು.

ಇದನ್ನೂ ಓದಿ IND vs PAK : ಭಾರತದ ಕ್ರಿಕೆಟಿಗರು ಪಾಕಿಸ್ತಾನದವರ ಕೈ ಕುಲುಕುವುದು ಸರಿಯಲ್ಲ; ಗಂಭೀರ್​ ಹೀಗೆ ಹೇಳಿದ್ಯಾಕೆ?

ಇದಾದ ಬಳಿಕ ಪಾಕ್​ ವಿರುದ್ಧದ ಸೂಪರ್​ 4 ಪಂದ್ಯದಲ್ಲಿ ಕೊಹ್ಲಿ ಶತಕ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದನ್ನು ಗಂಭೀರ್​ ಟೀಕಿಸಿದ್ದರು. 94 ಎಸೆತದಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ ಅಜೇಯ 122 ರನ್​ ಗಳಿಸಿದ್ದರು. ಅಲ್ಲದೆ ಅತಿ ವೇಗವಾಗಿ 13 ಸಾವಿರ ರನ್​ ಪೂರ್ತಿಗೊಳಿಸಿದ ದಾಖಲೆಯನ್ನು ನಿರ್ಮಿಸಿದ್ದರು. ಈ ಎಲ್ಲ ಕಾರಣದಿಂದ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು ಆದರೆ ಗಂಭೀರ್​ ಈ ಪ್ರಶಸ್ತಿಗೆ ಕೊಹ್ಲಿ ಅರ್ಹನಲ್ಲ ಎಂದು ಹೇಳಿದ್ದರು.

Continue Reading

ಕ್ರಿಕೆಟ್

Sara vs Gill: ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್

ಸಾರಾ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ‘ವೆಲ್‌ ಪ್ಲೇ​​ ಶುಭಮನ್​ ಗಿಲ್’ ಎಂದು ಬರೆದು ಚಪ್ಪಾಳೆ ತಟ್ಟುವ ಎಮೊಜಿಯನ್ನು ಹಾಕಿದ್ದಾರೆ. ಇದು ನೆಟ್ಟಿಗರಿಗೆ ಆಹಾರವಾಗಿದೆ.

VISTARANEWS.COM


on

Edited by

Shubman Gill and Sara Tendulkar
Koo

ಮುಂಬಯಿ: ಸಚಿನ್​ ತೆಂಡೂಲ್ಕರ್​(sachin tendulkar) ಅವರ ಪುತ್ರಿ ಸಾರಾ ತೆಂಡೂಲ್ಕರ್ ಮತ್ತು ಟೀಮ್​ ಇಂಡಿಯಾದ ಸ್ಟಾರ್​ ಯುವ ಆಟಗಾರ ಶುಭಮನ್​ ಗಿಲ್​ ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿದೆ. ಇದೇ ಕಾರಣಕ್ಕೆ ಇವರಿಬ್ಬರನ್ನು ನೆಟ್ಟಿಗರು ಹಲವು ಬಾರಿ ಟ್ರೋಲ್​ ಕೂಡ ಮಾಡಿದ್ದಾರೆ. ಆದರೆ ಗಿಲ್​ ಮತ್ತು ಸಾರಾ ತಮ್ಮ ಪ್ರೀತಿ ಮತ್ತು ಡೇಟಿಂಗ್​ ವಿಚಾರವಾಗಿ ಇದುವರೆಗೂ ಎಲ್ಲಯೂ ತುಟಿಬಿಚ್ಚಿಲ್ಲ. ಎಷ್ಟೇ ರೂಮರ್ಸ್​ ಹಬ್ಬಿದರೂ ತಮ್ಮ ಪಾಡಿಗೆ ತಾವು ಸುಮ್ಮನಿದ್ದರು. ಇದೀಗ ಸಾರಾ ಅವರು ಮಾಡಿರುವ ಟ್ವೀಟ್​ ಈ ಜೋಡಿ ನಿಜವಾಗಿಯೂ ಪ್ರೀತಿಸುತ್ತಿರುವುದು ಖಚಿತ ಎಂಬ ಸುಳಿವು ನೀಡಿದಂತಿದೆ.

“ವೆಲ್‌ ಪ್ಲೇ​ ಶುಭಮನ್​ ಗಿಲ್”

ಆಸ್ಟ್ರೇಲಿಯಾ ವಿರುದ್ಧ ಶುಕ್ರವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಶುಭಮನ್​ ಗಿಲ್​ 63 ಎಸೆತ ಎದುರಿಸಿ 6 ಬೌಂಡರಿ ಮತ್ತು 2 ಸಿಕ್ಸರ್​ ನೆರವಿನಿಂದ 74 ರನ್​ ಬಾರಿಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅವರ ಪ್ರದರ್ಶನಕ್ಕೆ ಸಾರಾ ತೆಂಡೂಲ್ಕರ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ‘ವೆಲ್‌ ಪ್ಲೇ​​ ಶುಭಮನ್​ ಗಿಲ್’ ಎಂದು ಬರೆದು ಚಪ್ಪಾಳೆ ತಟ್ಟುವ ಎಮೊಜಿಯನ್ನು ಹಾಕಿದ್ದಾರೆ. ಇದು ನೆಟ್ಟಿಗರಿಗೆ ಆಹಾರವಾಗಿದೆ. ಇಬರಿಬ್ಬರ ಮಧ್ಯೆ ಪ್ರೇಮಾಂಕುರ ಇರುವುದು ಪಕ್ಕಾ ಎಂದಿದ್ದಾರೆ.

ಶುಭ​ಮನ್​ ಗಿಲ್ ಅವರು ಆಡುವ ವೇಳೆ​ ಹಲವು ಬಾರಿ ಪ್ರೇಕ್ಷಕರು ಸಾರಾ, ಸಾರಾ… ಎಂದು ಕೂಗಿದ್ದರು. ಈ ಸಾರಾ ಯಾರೆಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ನಡೆಯುತ್ತಿದ್ದರೂ ಇದಕ್ಕೆ ಯಾವುದೇ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಕೆಲವರು ಗಿಲ್ ಸಚಿನ್​ ತೆಂಡೂಲ್ಕರ್​ ಪುತ್ರಿ ಜತೆ ಅಂದುಕೊಂಡಿದ್ದರೆ, ಇನ್ನೂ ಕೆಲವರು ನಟಿ ಸಾರಾ ಅಲಿ ಖಾನ್​ ಎಂದುಕೊಂಡಿದ್ದರು. ಆದರೆ ಈಗ ನೆಟ್ಟಿಗರಿಗೆ ಒಂದು ಹಂತದ ಕ್ಲ್ಯಾರಿಟಿ ಸಿಕ್ಕಿದ್ದು ಸಚಿನ್​ ಪುತ್ರಿ ಸಾರಾ ಅವರರೇ ಗಿಲ್​ ಪ್ರೇಯಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್​ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರ

ಭಾರತಕ್ಕೆ 5 ವಿಕೆಟ್​ ಜಯ

ಇಲ್ಲಿನ ಐಎಸ್​ ಬಿಂದ್ರಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ 276 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಭಾರತ ತಂಡ. 48.4 ಓವರ್​ಗಳಲ್ಲಿ. 5 ವಿಕೆಟ್​ ಕಳೆದುಕೊಂಡು 281 ರನ್ ಬಾರಿಸಿ ಜಯಶಾಲಿಯಾಯಿತು. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು.

Continue Reading

ಕ್ರಿಕೆಟ್

IND vs AUS: ಆಸೀಸ್​ಗೆ ಬೀಳಲಿ ಸರಣಿ ಸೋಲಿನ ಏಟು

ಭಾನುವಾರ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ(India vs Australia, 2nd ODI) ಭಾರತ ತಂಡ ಗೆದ್ದರೆ ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಗೆಲುವು ದಾಖಲಿಸಿದೆ.

VISTARANEWS.COM


on

Edited by

India vs Australia, 2nd ODI
Koo

ಇಂದೋರ್​: ಏಕದಿನ ವಿಶ್ವಕಪ್​ ಟೂರ್ನಿ ಆರಂಭಕ್ಕೂ ಮುನ್ನ ಭಾರತ ತವರಿನಲ್ಲೇ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಈಗಾಗಲೇ ಮೂರು ಪಂದ್ಯಗಳ ಸರಣಿಯಲ್ಲಿ ಒಂದನ್ನು ಗೆದ್ದಿರುವ ಕನ್ನಡಿಗ ಕೆ.ಎಲ್​ ರಾಹುಲ್​ ಪಡೆ ಮತ್ತೊಂದು ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಭಾನುವಾರ ನಡೆಯುವ ಇತ್ತಂಡಗಳ ಮುಖಾಮುಖಿಯಲ್ಲಿ(India vs Australia, 2nd ODI) ಭಾರತ ತಂಡ ಗೆದ್ದರೆ ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಗೆಲುವು ದಾಖಲಿಸಿದೆ.

ಕಳಪೆ ಫೀಲ್ಡಿಂಗ್​ಗೆ ಬೇಕಿದೆ ತುರ್ತು ಚೇತರಿಕೆ

ಸ್ಟಾರ್​ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಹಾರ್ದಿಕ್​ ಪಾಂಡ್ಯ, ಮೊಹಮ್ಮದ್​ ಸಿರಾಜ್​ ಅನುಪಸ್ಥಿತಿಯಲ್ಲಿಯೂ ಭಾರತ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು ನಿಜಕ್ಕೂ ಮೆಚ್ಚಲೇ ಬೇಕು. ಆದರೆ ಮೊದಲ ಪಂದ್ಯದಂತೇ ಈ ಪಂದ್ಯದಲ್ಲಿ ಕಳಪೆ ಫೀಲ್ಡಿಂಗ್​ ನಡೆಸಿದರೆ ಕೈ ಸುಟ್ಟುಕೊಳ್ಳುವುದು ಖಚಿತ. ನಾಯಕ ರಾಹುಲ್​ ಸೇರಿ ಎಲ್ಲ ಆಟಗಾರರು ಮಿಸ್​ ಪೀಲ್ಡಿಂಗ್​, ರನೌಟ್​, ಕ್ಯಾಚ್​ ಕೈಚೆಲ್ಲಿ ಭಾರಿ ಟೀಕೆಗೆ ಗುರಿಯಾಗಿದ್ದರು. ಇದಲ್ಲದೇ ವಿಶ್ವಕಪ್​ ಆರಂಭಕ್ಕೆ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ಹೀಗಿರುವಾಗ ಕಳಪೆ ಫೀಲ್ಡಿಂಗ್​ ನಡೆಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲೂ ರಾಹುಲ್​ ಅವರನ್ನು ವಿಶ್ವಕಪ್​ ಟೂರ್ನಿಯಲ್ಲಿ ಪ್ರಧಾನ ಕೀಪರ್​ ಆಗಿ ಆಯ್ಕೆ ಮಾಡಲಾಗಿದೆ ಆದರೆ ಅವರ ಕಳಪೆ ಕೇತ್ರರಕ್ಷಣೆ ನೋಡುವಾಗ ಟೀಮ್​ ಮ್ಯಾನೆಜ್​ಮೆಂಟ್​ಗೆ ತಲೆ ನೋವು ತಂದಿದೆ. ದ್ವಿತೀಯ ಪಂದ್ಯದಲ್ಲಿ ಎಲ್ಲ ತಪ್ಪುಗಳನ್ನು ಸರಿಪಡಿಸಲೇ ಬೇಕಾದ ಒತ್ತಡ ರಾಹುಲ್ ಮುಂದಿದೆ.

ಆಸೀಸ್​ಗೆ ಮಾಡು ಇಲ್ಲವೇ ಮಡಿ ಪಂದ್ಯ

ಅನುಭವಿಗಳಿಂದಲೇ ಕೂಡಿದ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಪಂದ್ಯದಲ್ಲಿ ಸೋಲು ಎದುರಾದ ಕಾರಣ ಸರಣಿಯನ್ನು ಜೀವಂತವಿರಿಸಬೇಕಿದ್ದರೆ, ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಸ್ಥಿತಿ ಎದುರಾಗಿದೆ. ಮಿಚೆಲ್​ ಮಾರ್ಷ್​ ಅವರನ್ನು ಹೊರತುಪಡಿಸಿ ಉಳಿದ ಎಲ್ಲ ಬ್ಯಾಟರ್​ಗಳು ಮೊದಲ ಪಂದ್ಯದಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಬೌಲಿಂಗ್​ನಲ್ಲಿ ಮಾತ್ರ ಹೇಳುವಷ್ಟರ ಮಟ್ಟಿಗೆ ಪ್ರದರ್ಶನ ಕಂಡುಬರಲಿಲ್ಲ. ಸರಣಿಯನ್ನು ಸಮಬಲಕ್ಕೆ ತರುವ ನಿಟ್ಟಿನಲ್ಲಿ ಆಸೀಸ್​ ಈ ಪಂದ್ಯಕ್ಕೆ ಕೆಲ ಆಟಗಾರರನ್ನು ಬದಲಾಯಿಸುವ ಸಾಧ್ಯತೆ ಇದೆ. ಮಿಚೆಲ್​ ಸ್ಟಾರ್ಕ್​ ತಂಡ ಸೇರಿದರೂ ಅಚ್ಚರಿಯಿಲ್ಲ.

ಇದನ್ನೂ ಓದಿ IND vs AUS 2nd ODI: ಭಾರತ-ಆಸೀಸ್​ ದ್ವಿತೀಯ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಸಿಡಿಯ ಬೇಕಿದೆ ಅಯ್ಯರ್​

ಬೆನ್ನು ನೋವಿನಿಂದ ಚೇತರಿಕೆ ಕಂಡು ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದ ಶ್ರೇಯಸ್​ ಅಯ್ಯರ್​ಗೆ ಏಷ್ಯಾಕಪ್​ನಲ್ಲಿ ಅವಕಾಶ ನೀಡಲಾಗಿತ್ತು. ಆದರೆ ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲೇ ಅವರು ಗಾಯಗೊಂಡು ಬಳಿಕದ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಆಸೀಸ್​ ವಿರುದ್ಧದ ಸರಣಿಯಲ್ಲಿ ಅವಕಾಶ ಪಡೆದರೂ ಕಳಪೆ ಫೀಲ್ಡಿಂಗ್​ ಮತ್ತು ಬ್ಯಾಟಿಂಗ್​ ನಡೆಸಿ ಸಂಪೂರ್ಣ ವಿಫಲರಾದರು. ಒಂದೊಮ್ಮೆ ದ್ವಿತೀಯ ಪಂದ್ಯದಲ್ಲಿಯೂ ಅವರು ಇದೇ ಪ್ರದರ್ಶನವನ್ನು ತೋರ್ಪಡಿಸಿದರೆ ವಿಶ್ವಕಪ್​ ತಂಡದ ಆಡುವ ಬಳಗದಿಂದ ಹೊರಗುಳಿಯುವುದು ಖಚಿತ. ಈ ನಿಟ್ಟಿನಲ್ಲಿ ಸಿಕ್ಕ ಅವಕಾಶವನ್ನು ಅವರು ಸರಿಯಾಗಿ ಬಳಸಿಕೊಳ್ಳಬೇಕಿದೆ.​ ಜತೆಗೆ ಶಾರ್ದೂಲ್​ ಠಾಕೂರ್​ ಕೂಡ ತಮ್ಮ ಎಸೆತಗಳಿಗೆ ಸಾಣೆ ಹಿಡಿಯಬೇಕಿದೆ.

Continue Reading

ಕ್ರಿಕೆಟ್

IND vs AUS 2nd ODI: ಭಾರತ-ಆಸೀಸ್​ ದ್ವಿತೀಯ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಒಟ್ಟು 6 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 4 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಜಯಿಸಿದರೆ, 2 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದು ಬೀಗಿದೆ.

VISTARANEWS.COM


on

Edited by

Holkar Cricket Stadium
Koo

ಇಂದೋರ್​: ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಆಸೀಸ್​ ವಿರುದ್ಧ ದ್ವಿತೀಯ(IND vs AUS 2nd ODI) ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ಈ ಪಂದ್ಯ ಭಾನುವಾರ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ(Holkar Cricket Stadium) ನಡೆಯಲಿದೆ. ರಿಪೋರ್ಟ್(Pitch Report)​ ಮತ್ತು ಸಂಭಾವ್ಯ ತಂಡಗಳ(Probable Playing XIs) ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನ ಪಿಚ್​ ಬ್ಯಾಟರ್‌ಗಳಿಗೆ ಸರ್ಗ. ಇಲ್ಲಿನ ಬಾಂಡರಿ ಗೆರೆಗಳು ಹತ್ತಿರವಾಗಿದ್ದು, ಅಲ್ಲದೆ ಹೆಚ್ಚು ಬೌನ್ಸರ್​ಗಳು ಇರದ ಕಾರಣ ಬ್ಯಾಟರ್​ಗಳಿಗೆ ಹೆಚ್ಚಿನ ರನ್​ಗಳಿಸಲು ಸಾಧ್ಯವಾಗಲಿದೆ. ಹೀಗಾಗಿ ಈ ಮೇಲಾಟ ದೊಡ್ಡ ಮೊತ್ತದಿಂದ ಕೂಡಿರುವ ಸಾಧ್ಯತೆ ಅಧಿಕವಾಗಿದೆ. ಇಲ್ಲಿ ಕೊನೆಯ ಬಾರಿ ಆಡಿದ ಏಕದಿನ ಪಂದ್ಯದಲ್ಲಿ ಗಿಲ್​ ಮತ್ತು ರೋಹಿತ್​ ಶರ್ಮ ಅವರು ಶತಕ ಬಾರಿಸಿ ಮಿಂಚಿದ್ದರು.

ಈ ಮೈದಾನದಲ್ಲಿ ಒಟ್ಟು 6 ಏಕದಿನ ಪಂದ್ಯಗಳು ನಡೆದಿವೆ. ಇದರಲ್ಲಿ 4 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಜಯಿಸಿದರೆ, 2 ಬಾರಿ ಚೇಸಿಂಗ್​ ನಡೆಸಿದ ತಂಡ ಗೆದ್ದು ಬೀಗಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ನಡೆಸುವ ಸಾಧ್ಯತೆ ಅಧಿಕವಾಗಿದೆ. 320 ಇಲ್ಲಿನ ಮೊದಲ ಬ್ಯಾಟಿಂಗ್​ ಸರಾಸರಿ ಮೊತ್ತವಾಗಿದೆ. 267 ದ್ವಿತೀಯ ಬ್ಯಾಟಿಂಗ್​ ಸರಾಸರಿ ಮೊತ್ತವಾಗಿದೆ.

ಇದನ್ನೂ ಓದಿ Varanasi Stadium: ಮೋದಿಗೆ ಟೀಮ್​ ಇಂಡಿಯಾ ಜೆರ್ಸಿ ನೀಡಿ ಗೌರವಿಸಿದ ಸಚಿನ್ ತೆಂಡೂಲ್ಕರ್

ಹವಾಮಾನ ವರದಿ

ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಕ್ಕೆ ಮಳೆ ಸಣ್ಣ ಪ್ರಮಾಣದಲ್ಲಿ ಅಡ್ಡಿಪಡಿಸಿತ್ತು. ಭಾನುವಾರ ಇಂದೋರ್‌ನಲ್ಲಿ ನಡೆಯುವ ದ್ವಿತೀಯ ಪಂದ್ಯಕ್ಕೆ ಮಳೆ ಸಾಧ್ಯತೆ ಕಡಿಮೆ ಇದ್ದರೂ ಮೋಡ ಕವಿದ ವಾತಾವರಣವ ಇದರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾತ್ರಿಯ ವೇಳೆ ಇಬ್ಬನಿ ಸಮಸ್ಯೆ ಇರುವುದರಿಂದ ಬ್ಯಾಟಿಂಗ್​ ನಡೆಸಲು ಕೂಡ ಇಲ್ಲಿ ಕಷ್ಟಕರ.

ಬಲಾಬಲ

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇದುವರೆಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ 147 ಬಾರಿ ಮುಖಾಮುಖಿಯಾಗಿವೆ. ಆಸ್ಟ್ರೇಲಿಯಾ 82 ಪಂದ್ಯಗಳಲ್ಲಿ ಗೆದ್ದರೆ, ಭಾರತ 55 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದರಲ್ಲಿ ಒಂದು ಗೆಲುವು ಕಳೆದ ಪಂದ್ಯದಲ್ಲಿ ದಾಖಲಾದ ಗೆಲುವಾಗಿದೆ. 10 ಪಂದ್ಯಗಳು ಫಲಿತಾಂಶ ಕಂಡಿಲ್ಲ.

ಸಂಭಾವ್ಯ ತಂಡ

ಭಾರತ: ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್​), ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ

Continue Reading
Advertisement
Chaitra Kundapura
ಉಡುಪಿ20 mins ago

Chaitra Kundapura : ವಂಚಕಿ ಚೈತ್ರಾ ಜತೆಗೆ ಕುಂದಾಪುರದ ಹೆಸರು ಬಳಸಬೇಡಿ; ತಾತ್ಕಾಲಿಕ ನಿರ್ಬಂಧ ವಿಧಿಸಿದ ಕೋರ್ಟ್‌

women arrested
ದೇಶ52 mins ago

Illicit Affair : ಅಕ್ರಮ ಸಂಬಂಧ ನೋಡಿದ ಮಗನನ್ನೇ ಕೊಂದ ಹೆತ್ತಮ್ಮ; 2 ವರ್ಷದ ಬಳಿಕ ಪ್ರಿಯಕರನ ಜತೆ ಅರೆಸ್ಟ್​​

Kumaraswamys three suggestions to Government
ಕರ್ನಾಟಕ57 mins ago

HD Kumaraswamy : ನಾನು ಹೇಳಿದ ಹಾಗೆ ಮಾಡ್ತೀರಾ?; ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕುಮಾರಸ್ವಾಮಿ ನೀಡಿದ 3 ಸಲಹೆಗಳು

CM Siddaramaiah
ಕರ್ನಾಟಕ59 mins ago

Women’s Reservation Bill: ಮೋದಿಯವರ ಮಹಿಳಾ ಮೀಸಲಾತಿ 2024, 2029, 2034ರಲ್ಲೂ ಜಾರಿಯಾಗಲ್ಲ: ಸಿದ್ದರಾಮಯ್ಯ

naveen ul haq and gautam gambhir
ಕ್ರಿಕೆಟ್1 hour ago

‘ಎಂದಿಗೂ ಬದಲಾಗಬೇಡ’ ನವೀನ್ ಉಲ್ ಹಕ್​ಗೆ ಜನ್ಮದಿನದ ಶುಭಾಶಯ ಕೋರಿದ ಗಂಭೀರ್; ಹಾರೈಕೆ ಹಿಂದಿದೆ ನರಿ ಬುದ್ಧಿ

Gautam Adani
ದೇಶ1 hour ago

Gautam Adani : ಅದಾನಿ ಭೇಟಿ ಮಾಡಿದ ಶರದ್​ ಪವಾರ್​; ರಾಹುಲ್​ ಮಾತಿಗೆ ಕಿಮ್ಮತ್ತಿಲ್ಲ ಎಂದ ಬಿಜೆಪಿ!

Cauvry protest in Bangalore
ಕರ್ನಾಟಕ2 hours ago

Cauvery Protest: ಬೆಂಗಳೂರು ಬಂದ್‌ ಮಾಡುವುದು ಬೇಡ ಎಂದ ಡಿಕೆಶಿ, ಪ್ರತಿಭಟನೆ ಹಕ್ಕಿಗೆ ವಿರೋಧವಿಲ್ಲ ಎಂದ ಸಿದ್ದರಾಮಯ್ಯ

karnataka film chamber
ಪ್ರಮುಖ ಸುದ್ದಿ2 hours ago

Sandalwood : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ; ಗೆದ್ದವರ ವಿವರ ಇಲ್ಲಿದೆ

Book release in Ananth Namana Programme
ಕರ್ನಾಟಕ2 hours ago

Ananth Namana: ಅನಂತ ಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ ಎಂದ ಡಿಕೆಶಿ

Shubman Gill and Sara Tendulkar
ಕ್ರಿಕೆಟ್2 hours ago

Sara vs Gill: ಶುಭಮನ್​ ಗಿಲ್​ ಜತೆಗಿನ ಪ್ರೀತಿಗೆ ಕ್ಲ್ಯಾರಿಟಿ ನೀಡಿದ ಸಾರಾ ತೆಂಡೂಲ್ಕರ್

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ7 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌